ಕುಶಾಲನಗರ, ಜೂ.15 : ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದಾಗಿ ವಾತಾವರಣ ಕಲುಷಿತಗೊಳ್ಳುತ್ತಿದೆ. ಪ್ರತಿಯೊಬ್ಬರೂ ಈ ವಿಷಕಾರಿ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಕಡಿವಾಣ ಹಾಕಬೇಕು. ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನಿರ್ಮಿಸುವತ್ತ ಎಲ್ಲರೂ ಕೈಜೋಡಿಸಬೇಕು ಎಂದು ಕೂಡುಮಂಗಳೂರು ಗ್ರಾ.ಪಂ ಅಧ್ಯಕ್ಷೆ ಇಂದಿರಾ ರಮೇಶ್ ಮನವಿ ಮಾಡಿದರು. ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಕೂಡುಮಂಗಳೂರು ಮತ್ತು ಕೂಡಿಗೆ ಗ್ರಾ.ಪಂ ಗಳ ಸಹಯೋಗದೊಂದಿಗೆ ಎಸ್.ಡಿ.ಎಂ.ಸಿ. ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ಘಟಕ, ಇಕೋ ಕ್ಲಬ್, ಎನ್ನೆಸ್ಸೆಸ್ ಹಾಗೂ ಸುಂಟಿಕೊಪ್ಪ ಜೆ.ಸಿ.ಐ.ಸಂಸ್ಥೆ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಮಾಸಾಚರಣೆ ಅಂಗವಾಗಿ “ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಸ್ನೇಹಿ ಬಟ್ಟೆ ಚೀಲ ಬಳಸಿ” ಎಂಬ ಘೋಷವಾಕ್ಯದೊಂದಿಗೆ “ಪ್ಲಾಸ್ಟಿಕ್ ಮಾಲಿನ್ಯದಿಂದ ಪರಿಸರಕ್ಕೆ ಉಂಟಾಗುವ ದುಷ್ಪರಿಣಾಮಗಳು” ಕುರಿತು ಏರ್ಪಡಿಸಿದ್ದ ಪರಿಸರ ಜಾಗೃತಿ ಆಂದೋಲನದಲ್ಲಿ ಬಟ್ಟೆ ಕೈ ಚೀಲ ಬಿಡುಗಡೆಗೊಳಿಸಿ ಮಾತನಾಡಿದ ಅವರು, ತಮ್ಮ ದೈನಂದಿನ ಬದುಕಿನಲ್ಲಿ ಪರಿಸರದ ಕಡೆಗೆ ಕಾಳಜಿ ವಹಿಸುವುದರೊಂದಿಗೆ ಪ್ಲಾಸ್ಟಿಕ್ ನಿರ್ಮೂಲನೆಗೆ ಕೈ ಜೋಡಿಸಬೇಕು ಎಂದರು. ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟುವ ಕುರಿತು…
ಲೇಖಕ: admin
ಸೋಮವಾರಪೇಟೆ. ತಾಲ್ಲೂಕಿನ ಗಡಿಭಾಗದ ಬಾಣಾವರ ಗ್ರಾಮದಲ್ಲಿನ ಮೀಸಲು ಅರಣ್ಯಕ್ಕೆ ಒಳಪಡುವ ಕಲ್ಲು ಕೋರೆ ಕೆರೆಯೊಂದರಲ್ಲಿ ಅಪರಿಚಿತ ಶವ ಒಂದು ಮಂಗಳವಾರ ರಾತ್ರಿ ಪತ್ತೆಯಾಗಿದೆ. ಸುಮಾರು 45 ವರ್ಷದ ವಯಸ್ಸಿನವನಾಗಿದ್ದು. ಮೃತನ ಸುಳಿವು ಪತ್ತೆಯಾಗಿಲ್ಲ. ಸ್ಥಳಕ್ಕೆ ಪಿಎಸ್ಐ ರಮೇಶ್ ಭೇಟಿ ನೀಡಿ ಮಾಹಿತಿ ಪಡೆದರು. ಶವವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಕ್ಷಿಪ್ರ ಕಾರ್ಯಪಡೆ ಸಂಯೋಜಕ ರಾಮದಾಸ್, ಸ್ವಯಂ ಸೇವಕರಾದ ಆನಂದ, ಶೇಖರ್, ಶಶಿ, ರಾಜ, ನಾಗರಾಜ್, ಗಣೇಶ್ ಹಾಗೂ ಶ್ರೀನಿವಾಸ್ ರಾತ್ರಿಯೇ ಕೆರೆಯಲ್ಲಿ ಶವವನ್ನು ಹುಡುಕಿ ಮೇಲಕ್ಕೆ ತಂದರು. ಈ ಸಂಬಂಧ ಸೋಮವಾರಪೇಟೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
*ನಮ್ಮ ಡಾಕ್ಟರ್ ನಮ್ಮ ಹೆಮ್ಮೆ, ನಮ್ಮ ಜಿಲ್ಲಾಸ್ಪತ್ರೆ ನಮ್ಮ ಜಿಲ್ಲೆಯ ಹೆಮ್ಮೆ ಅಂತ ಸುತ್ತಲ ಹತ್ತೂರಿನ ಎದುರು ಹೆಮ್ಮೆಯಿಂದ ಎದೆತಟ್ಟಿ ಹೇಳಿಕೊಳ್ಳಬಲ್ಲೆ. ಸಾಕಷ್ಟು ಜನರಲ್ಲಿ ಸರ್ಕಾರಿ ವೈದ್ಯರ ಮೇಲೆ ಒಂದಷ್ಟು ಕೀಳರಿಮೆಗಳಿವೆ. ಇವರೇನೂ ಪುಕ್ಸಟೆ ನೋಡಿಕೊಳ್ತಾರಾ ಸರ್ಕಾರದಿಂದ ಲಕ್ಷಲಕ್ಷ ಸಂಬಳ ತಗೋಳೋದಿಲ್ವಾ ಅಂತ …? ನಿಜ ಇವರಿಗೆ ತಿಂಗಳಿಗೆ ಲಕ್ಷ ಲಕ್ಷ ಸಂಬಳಗಳಿರಬಹುದು ! ಆದರೂ ಒಂದು ಸಲ ಯೋಚನೆ ಮಾಡಿ ಲಕ್ಷ ಲಕ್ಷ ಸಂಬಳ ಪಡೆಯುವ ವೈದ್ಯ ಒಂದೇ ಒಂದುನಿಮಿಷ ಅಲಸ್ಯ ತೋರಿಸಿದರೆ ನಮ್ಮಲ್ಲಿರುವ ಎಷ್ಟು ಹಣದಿಂದ ನಮ್ಮನ್ನು ಉಳಿಸಿಕೊಳ್ಳಲು ಸಾಧ್ಯವಿದೆ ವೈದ್ಯರ ಹೊರತಾಗಿ . ವೈದ್ಯರನ್ನು ನಂಬಿದ್ರೆ ಹರೋ ಹರ ಎನ್ನುವವರ ನಡುವೆ ನಮ್ಮೂರಿನ ವೈದ್ಯರಿಗೆ ವೈದ್ಯೋ ನಾರಾಯಣ ಹರಿ ಅಂತ ಚೀರಿ ಹೇಳಬೇಕು ಅನ್ನಿಸಿತು. ಕೋವಿಡ್ ಆರಂಭದ ದಿನಗಳಿಂದ ಜಿಲ್ಲಾಸ್ಪತ್ರೆಯ ಲೋಪಗಳನ್ನು ಎಷ್ಟು ತೀಕ್ಷ್ಣವಾಗಿ ಖಂಡಿಸಿದ್ದೇನೋ ಹಾಗೆಯೇ ಆಸ್ಪತ್ರೆಯಲ್ಲಿ ರೋಗಿಗಳಿಗೆ ಡಾಕ್ಟರ್ ಗಳು ನೀಡುತ್ತಿರುವ ಅತ್ಯಮೂಲ್ಯ ಸೇವೆಯ ಬಗ್ಗೆಯೂ ಬರೆಯಬೇಕು…
ಪಾವಗಡ ಜೂ.14 : ಪಾವಗಡ ತಿರುಮಣಿಯಲ್ಲಿನ ಸೋಲಾರ್ ಪಾರ್ಕ್ ಅನ್ನು 10 ಸಾವಿರ ಎಕರೆಗೆ ವಿಸ್ತರಣೆ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದರು. ಇಂದು ಇಂಧನ ಸಚಿವ ಕೆ ಜೆ ಜಾರ್ಜ್ ಜೊತೆ ಪಾವಗಡ ಸೋಲಾರ್ ಪಾರ್ಕ್ ವೈಮಾನಿಕ ಸಮೀಕ್ಷೆ ನಡೆಸಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಯೋಜನೆಯನ್ನು ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ ಎಂದರು. ಇದು ಏಷ್ಯಾದ ಅತಿ ದೊಡ್ಡ ಸೋಲಾರ್ ಪಾರ್ಕ್ ಆಗಿದ್ದು, ಇದನ್ನು ವಿಸ್ತರಣೆ ಮಾಡಲು ಸರ್ಕಾರ ಸಿದ್ಧವಿದೆ. ಈ ಭಾಗದ ಜನರು ತಮ್ಮ ಭೂಮಿಯನ್ನು ಸ್ವಯಂ ಪ್ರೇರಿತವಾಗಿ ಬಿಟ್ಟುಕೊಟ್ಟರೆ ಕೇಂದ್ರಕ್ಕೆ ಈ ಕುರಿತು ಪ್ರಸ್ತಾವನೆ ಸಲ್ಲಿಸುತ್ತೇವೆ ಎಂದು ತಿಳಿಸಿದರು. ಕಲಬುರ್ಗಿ, ರಾಯಚೂರು ಹಾಗೂ ಬೇರೆ ಜಿಲ್ಲೆಗಳಿಂದಲೂ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಬೇಡಿಕೆ ಬಂದಿದ್ದು, ಆದಷ್ಟು ಬೇಗ ಈ ಭಾಗದ ಜನರೊಂದಿಗೆ ಚರ್ಚೆ ಮಾಡಿ ತೀರ್ಮಾನ ಮಾಡಲಾಗುವುದು. ಕಳೆದ ಬಾರಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಜಮೀನು ನೀಡದವರು ನನ್ನ ಬಳಿ ಬಂದು…
ಮಡಿಕೇರಿ ಜೂ.14 : ಮೇಕೇರಿಯ ರೆಹಮಾನ್ ಎಂಬವರ ಮನೆಯ ಅಡುಗೆ ಕೋಣೆಯೊಳಗೆ ಸೇರಿಕೊಂಡಿದ್ದ 6 ಅಡಿ ಉದ್ದದ ಗೋಧಿ ನಾಗರ ಹಾವನ್ನು ಉರಗ ತಜ್ಞ ಪಿಯೂಸ್ ಪೆರೆರಾ ರಕ್ಷಿಸಿ, ಸಂಪಾಜೆ ಅರಣ್ಯಕ್ಕೆ ಬಿಟ್ಟರು.
ಮಡಿಕೇರಿ ಜೂ.14 : ಆಲೂರು ಸಿದ್ದಾಪುರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ದಾಸ್ತಾನಿರುವ ನಿರುಪಯುಕ್ತ ಸಾಮಾಗ್ರಿಗಳು, ಯಂತ್ರೋಪಕರಣಗಳನ್ನು ಎಲ್ಲಿ, ಹೇಗಿವೆಯೋ, ಅದೇ ಸ್ಥಿತಿಯಲ್ಲಿ ಜುಲೈ, 11 ರಂದು ಬೆಳಗ್ಗೆ 11 ಗಂಟೆಗೆ ಸಂಸ್ಥೆಯ ಆವರಣದಲ್ಲಿ ಬಹಿರಂಗ ಹರಾಜು ಮಾಡಲಾಗುವುದು ಎಂದು ಆಲೂರು ಸಿದ್ದಾಪುರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ತಿಳಿಸಿದ್ದಾರೆ.
ಮಡಿಕೇರಿ ಜೂ.14 : ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಸರ್ವರ್ ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆ ಸರ್ವರ್ ಅನ್ನು ಜೂ.28 ರಿಂದ ಸ್ಥಗಿತಗೊಳಿಸಲಾಗುತ್ತದೆ. ಹೀಗಾಗಿ ಜೂನ್ ತಿಂಗಳ ಕೊನೆಯ ಮೂರು ದಿನ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಜೂ.27 ರಂದು ಪಡಿತರ ಪಡೆಯಲು ಕೊನೆಯ ದಿನ ಆಗಿದೆ. ಜಿಲ್ಲೆಯ ಆದ್ಯತಾ (ಬಿಪಿಎಲ್ ಮತ್ತು ಎಎವೈ) ಪಡಿತರ ಚೀಟಿ ಫಲಾನುಭವಿಗಳು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಜೂನ್ ತಿಂಗಳ ಪಡಿತರವನ್ನು ಜೂ.27 ರೊಳಗೆ ಪಡೆಯುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ ಶರತ್ ತಿಳಿಸಿದ್ದಾರೆ.
ಮಡಿಕೇರಿ ಜೂ.14 : ತಾಲೂಕಿನ ಸಂಪಾಜೆ ಹೋಬಳಿ ಮದೆ ಗ್ರಾಮದ ಸರ್ವೇ ನಂಬರ್ 98/1ಪಿ1ರ 1.50 ಎಕರೆ ಜಾಗವನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ನಿವೇಶನ ಉದ್ದೇಶಕ್ಕೆ ಹಾಗೂ ಕಾಟಕೇರಿ ಗ್ರಾಮದ ಸರ್ವೇ ನಂಬರ್ 115/1ರ 1.50 ಎಕರೆ ಜಾಗವನ್ನು ನಿವೇಶನ ಉದ್ದೇಶಕ್ಕೆ ಮಡಿಕೇರಿ ತಾ.ಪಂ.ಇಒ ಅವರ ಹೆಸರಿಗೆ ಜಾಗ ಕಾಯ್ದಿರಿಸಿ ಆದೇಶಿಸಿ ಮದೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಹಸ್ತಾಂತರಿಸಲಾಗಿದೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮಡಿಕೇರಿ ಜೂ.14 : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಸ್ನಾತಕೋತ್ತರ ಕೇಂದ್ರ, ಕೊಡಗು ವಿಶ್ವವಿದ್ಯಾನಿಲಯ ಚಿಕ್ಕಅಳುವಾರ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಕ್ತ ನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ, ಮಡಿಕೇರಿ, ಸೋಮವಾರಪೇಟೆ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ, ಭಾರತೀಯ ರೆಡ್ಕ್ರಾಸ್ ಸಂಸ್ಥೆ ಕೊಡಗು ಶಾಖೆ, ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಕೊಡಗು ಶಾಖೆ, ಕುಶಾಲನಗರ ರೋಟರಿ ಸಂಸ್ಥೆ, ಲಯನ್ಸ್ ಸಂಸ್ಥೆ ಹಾಗೂ ವಾಣಿಜ್ಯೋದ್ಯಮಿಗಳ ನಿಗಮ ಇವರ ಸಂಯುಕ್ತ ಆಶ್ರಯದಲ್ಲಿ ಚಿಕ್ಕ ಅಳುವಾರದ ಕೊಡಗು ವಿಶ್ವವಿದ್ಯಾನಿಲಯದ ಜ್ಞಾನ ಕಾವೇರಿಯಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ನಡೆಯಿತು. ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಡಾ.ಸೀನಪ್ಪ ಉದ್ಘಾಟಿಸಿ ಮಾತನಾಡಿ, ರಕ್ತದಾನ ಶ್ರೇಷ್ಠದಾನವಾಗಿದ್ದು, ಯುವಜನತೆ ಮುಂದೆ ಬಂದು ರಕ್ತದಾನ ಮಾಡುವ ಮೂಲಕ ಮಾದರಿಯಾಗುವಂತೆ ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಮಾತನಾಡಿ, ಕಾರ್ಲ್ ಲ್ಯಾಂಡ್ಸ್ಟೀನರ್ ರಕ್ತದ ಗುಂಪನ್ನು ಕಂಡುಹಿಡಿದ ವಿಜ್ಞಾನಿ. ಇವರ…
ಮಡಿಕೇರಿ ಜೂ.14 : ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷರು ಮತು ಉಪಾಧ್ಯಕ್ಷರನ್ನು ನಿಗಧಿ ಪಡಿಸುವ ಸಭೆಯು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅಧ್ಯಕ್ಷತೆಯಲ್ಲಿ ಗ್ರಾ.ಪಂ.ಸದಸ್ಯರ ಉಪಸ್ಥಿತಿಯಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಯಿತು. ಮೀಸಲಾತಿ ಸ್ಥಾನ ವಿವರ ಇಂತಿದೆ : ಮಡಿಕೇರಿ ತಾಲ್ಲೂಕಿನ ಗಾಳಿಬೀಡು ಗ್ರಾ.ಪಂ. ಅಧ್ಯಕ್ಷ(ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ(ಸಾಮಾನ್ಯ), ಮಕ್ಕಂದೂರು ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಪ್ರವರ್ಗ-ಎ), ಕಳಕೇರಿ ನಿಡುಗಣೆ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಪ್ರವರ್ಗ-ಎ), ಕಡಗದಾಳು ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಮರಗೋಡು ಅಧ್ಯಕ್ಷ (ಪ್ರವರ್ಗ-ಎ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಹೊಸ್ಕೇರಿ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಕಾಂತೂರು ಮೂರ್ನಾಡು ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಪ್ರವರ್ಗ-ಎ ಮಹಿಳೆ), ಹೊದ್ದೂರು ಅಧ್ಯಕ್ಷ(ಪ್ರವರ್ಗ-ಎ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಹಾಕತ್ತೂರು ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ(ಎಸ್ಸಿ ಮಹಿಳೆ), ಮೇಕೇರಿ ಅಧ್ಯಕ್ಷ (ಪ್ರವರ್ಗ-ಬಿ), ಉಪಾಧ್ಯಕ್ಷ (ಎಸ್ಸಿ), ಬೆಟ್ಟಗೇರಿ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಮದೆ ಅಧ್ಯಕ್ಷ…






