ಲೇಖಕ: admin

ಮಡಿಕೇರಿ ಜೂ.13 : ಕೊಡಗು ಜಿಲ್ಲೆಯ ಕುಶಾಲನಗರ ಮತ್ತು ಸೋಮವಾರಪೇಟೆ ತಾಲ್ಲೂಕಿನ ಗ್ರಾ.ಪಂ ಗಳ ಎರಡನೇ ಅವಧಿಗೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ನಿಗಧಿ ಪಡಿಸುವ ಸಭೆಯು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅಧ್ಯಕ್ಷತೆಯಲ್ಲಿ ಆಯಾಯ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಿತು. ಮೀಸಲಾತಿ ಸ್ಥಾನ ವಿವರ ಇಂತಿದೆ : ಕುಶಾಲನಗರ ತಾಲ್ಲೂಕಿನ ನೆಲ್ಲಿಹುದಿಕೇರಿ ಗ್ರಾ.ಪಂ. ಅಧ್ಯಕ್ಷ(ಪ್ರವರ್ಗ-ಬಿ ಮಹಿಳೆ), ಉಪಾಧ್ಯಕ್ಷ (ಎಸ್‍ಟಿ ಮಹಿಳೆ), ವಾಲ್ನೂರು ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ(ಸಾಮಾನ್ಯ), ನಂಜರಾಯಪಟ್ಟಣ ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ(ಸಾಮಾನ್ಯ), ಗುಡ್ಡೆಹೊಸೂರು ಅಧ್ಯಕ್ಷ (ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಕೂಡಿಗೆ ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ(ಪ್ರವರ್ಗ-ಎ ಮಹಿಳೆ), ಕೂಡುಮಂಗಳೂರು ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ(ಪ್ರವರ್ಗ-ಎ ಮಹಿಳೆ, ಹೆಬ್ಬಾಲೆ ಅಧ್ಯಕ್ಷ(ಪ್ರವರ್ಗ-ಎ ಮಹಿಳೆ) ಉಪಾಧ್ಯಕ್ಷ(ಎಸ್‍ಸಿ), ತೊರೆನೂರು ಅಧ್ಯಕ್ಷ(ಪ್ರವರ್ಗ-ಎ), ಉಪಾಧ್ಯಕ್ಷ(ಸಾಮಾನ್ಯ ಮಹಿಳೆ), ಶಿರಂಗಾಲ ಅಧ್ಯಕ್ಷ (ಎಸ್‍ಟಿ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಚೆಟ್ಟಳ್ಳಿ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಪ್ರವರ್ಗ-ಬಿ ಮಹಿಳೆ), ಕೆದಕಲ್ ಅಧ್ಯಕ್ಷ(ಎಸ್‍ಸಿ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಕೊಡಗರಹಳ್ಳಿ ಅಧ್ಯಕ್ಷ(ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಪ್ರವರ್ಗ-ಎ), ಕಂಬಿಬಾಣೆ ಅಧ್ಯಕ್ಷ(ಎಸ್‍ಸಿ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), 7ನೇ…

Read More

ಮಡಿಕೇರಿ ಮೇ.13 : ಉದ್ಯೋಗ ಖಾತ್ರಿ ಯೋಜನೆಯಲ್ಲಿ ಒಂದು ಗ್ರಾಮೀಣ ಕುಟುಂಬಕ್ಕೆ 100 ದಿನಗಳ ಕೆಲಸವನ್ನು ನೀಡುತ್ತಿದ್ದು, ಅರ್ಹರೆಲ್ಲರೂ ಬಳಸಿಕೊಳ್ಳುವಂತಾಗಬೇಕು ಎಂದು ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ತಿಳಿಸಿದ್ದಾರೆ. ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮಥ್ರ್ಯ ಸೌಧದಲ್ಲಿ ವಿವಿಧ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗಾಗಲೇ ನರೇಗಾ ಯೋಜನೆಯಡಿ ಹಲವು ಅಭಿವೃದ್ಧಿ ಕೆಲಸಗಳು ಗ್ರಾಮೀಣ ಭಾಗದಲ್ಲಿ ನಡೆಯುತ್ತಿದ್ದು, ಪ್ರಮುಖವಾಗಿ “ಅಮೃತ್ ಸರೋವರ” ಕಾಮಗಾರಿ ಪೂರ್ಣಗೊಳ್ಳುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ವಿವಿಧ ಇಲಾಖೆಗಳ ಅಭಿವೃದ್ಧಿ ಸಂಬಂಧಿಸಿದಂತೆ ಮಾತನಾಡಿ ಜಲ ಜೀವನ್ ಮೀಷನ್ ಯೋಜನೆಯಡಿ ಬಾಕಿ ಇರುವ ಎಲ್ಲಾ ಕಾಮಗಾರಿ ಕೆಲಸಗಳನ್ನು ತುರ್ತಾಗಿ ಪೂರ್ಣಗೊಳಿಸಿ ನೀರಿನ ಸಮಸ್ಯೆಗಳು ಬರದಂತೆ ನೋಡಿಕೊಳ್ಳಲು ತಿಳಿಸಿದರು. ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಯಲ್ಲಿ ವಿಶೇಷ ಗ್ರಾಮ ಸಭೆ ನಡೆಸಿ ಮಾದರಿ ಗ್ರಾಮಗಳನ್ನಾಗಿ ಮಾಡಲು ಶ್ರಮಿಸಬೇಕು ಎಂದರು. ಇದೀಗ ಶಾಲೆಗಳು ಪ್ರಾರಂಭವಾಗಿದ್ದು, ಡಿಜಿಟಲ್ ಗ್ರಂಥಾಲಯಗಳಿಗೆ ಶಾಲಾ ಮಕ್ಕಳು ಶೇ.100 ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಮವಹಿಸಬೇಕು. ಜೊತೆಗೆ…

Read More

ಮಡಿಕೇರಿ ಜೂ.13 : ಕೊಡಗು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನದ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಆಯೋಜಿಸಿದ್ದ `ಸೆಲ್ಫಿ ಕಂಟೆಸ್ಟ್’ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮೇ 10 ರಂದು ನಡೆದ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಂದು ಮತದಾನ ಮಾಡಿದ ಬಳಿಕ ಮತದಾನ ಕೇಂದ್ರದ ಮುಂದೆ ನಿಂತು ಸೆಲ್ಫಿ ತೆಗೆದುಕೊಂಡು ಕಳುಹಿಸುವಂತೆ ತಿಳಿಸಲಾಗಿತ್ತು. ಈ ನಿಟ್ಟಿನಲ್ಲಿ ಸ್ಪರ್ಧೆಯ ನಿಯಮಾನುಸಾರ ಸೆಲ್ಫಿ ಕಳುಹಿಸಿ ವಿಜೇತರಾದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿಜೇತರಿಗೆ ಜಿ.ಪಂ.ಸಿಇಒ ಡಾ. ಎಸ್.ಆಕಾಶ್ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು. ಪ್ರಥಮ ಬಹುಮಾನವನ್ನು ಕಾರ್ಯಪ್ಪ, ದ್ವಿತೀಯ ಬಹುಮಾನವನ್ನು ಬಾನಂಡ ಆಶಾ ಸೂದನ್, ತೃತೀಯ ಬಹುಮಾನವನ್ನು ಗಿರಿಕುಮಾರ್ ಪಡೆದುಕೊಂಡರು. ಜಿ.ಪಂ.ಉಪ ಕಾರ್ಯದರ್ಶಿ ಜಿ.ಧನರಾಜು, ಮುಖ್ಯ ಯೋಜನಾಧಿಕಾರಿ ರಾಜ್‍ಗೋಪಾಲ್, ತಾ.ಪಂ.ಇಒ ಅಪ್ಪಣ್ಣ ಇತರರು ಇದ್ದರು.

Read More

ಮಡಿಕೇರಿ ಜೂ.13 : ಸೋಮವಾರಪೇಟೆ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷರು ಮತು ಉಪಾಧ್ಯಕ್ಷರನ್ನು ನಿಗಧಿ ಪಡಿಸುವ ಸಭೆಯು ಪಟ್ಟಣದ ಜಾನಕಿ ಕನ್ವೆನ್ಷನ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಮೀಸಲಾತಿ ನಿಗಧಿ ಪ್ರಕ್ರಿಯೆ ನಡೆಸಲಾಗಿದ್ದು, ನೂತನ ಮೀಸಲಾತಿಯಂತೆ ಕೊಡ್ಲಿಪೇಟೆ ಗ್ರಾ.ಪಂ. ಅಧ್ಯಕ್ಷ(ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಪ್ರವರ್ಗ-ಬಿ ಮಹಿಳೆ), ಬ್ಯಾಡಗೊಟ್ಟ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಎಸ್‍ಟಿ ಮಹಿಳೆ), ಬೆಸ್ಸೂರು ಅಧ್ಯಕ್ಷ(ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಹಂಡ್ಲಿ ಅಧ್ಯಕ್ಷ (ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಶನಿವಾರಸಂತೆ ಅಧ್ಯಕ್ಷ(ಪ್ರವರ್ಗ-ಬಿ ಮಹಿಳೆ), ಉಪಾಧ್ಯಕ್ಷ (ಪ್ರವರ್ಗ-ಎ), ದುಂಡಳ್ಳಿ ಅಧ್ಯಕ್ಷ(ಎಸ್‍ಸಿ), ಉಪಾಧ್ಯಕ್ಷ (ಪ್ರವರ್ಗ-ಎ ಮಹಿಳೆ), ನಿಡ್ತ ಅಧ್ಯಕ್ಷ(ಪ್ರವರ್ಗ-ಎ), ಉಪಾಧ್ಯಕ್ಷ (ಎಸ್‍ಸಿ ಮಹಿಳೆ), ಆಲೂರು ಸಿದ್ದಾಪುರ ಅಧ್ಯಕ್ಷ(ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ(ಎಸ್‍ಸಿ), ಗೌಡಳ್ಳಿ ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ದೊಡ್ಡಮಳ್ತೆ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಶಾಂತಳ್ಳಿ (ಪ್ರವರ್ಗ-ಎ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ತೋಳೂರು ಶೆಟ್ಟಳ್ಳಿ ಅಧ್ಯಕ್ಷ(ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ…

Read More

ಮಡಿಕೇರಿ ಜೂ.13 : ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಅಂತರ್ ಜಿಲ್ಲಾ ಆರೋಪಿಯನ್ನು ಮಾಲು ಸಹಿತ ಬಂಧಿಸುವಲ್ಲಿ ನಾಪೋಕ್ಲು ಪೊಲೀಸರು ಯಶಸ್ವಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸಂಪ್ಯ ಗ್ರಾಮದ ನಿವಾಸಿ ಸಿ.ಎಚ್ ಸೈಯದ್ ಬಂಧಿತ ಆರೋಪಿ. ನಾಪೋಕ್ಲು ಮೂರ್ನಾಡು ಮುಖ್ಯ ರಸ್ತೆಯಿಂದ ಹೊದವಾಡ ಗ್ರಾಮಕ್ಕೆ ತೆರಳುವ ಕೂಡು ರಸ್ತೆಯಲ್ಲಿರುವ ಬಸ್ ತಂಗುದಾಣದ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಸಂದರ್ಭ ಪೊಲೀಸರು ಕಾರ್ಯಾಚರಣೆ ನಡೆಸಿ, 270 ಗ್ರಾಂ. ಗಾಂಜಾ ಸಹಿತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮತ್ತು ಹೆಚ್ಚುವರಿ ಪೊಲೀಸ್ ಉಪ ಅಧೀಕ್ಷಕ ಸುಂದರ್ ರಾಜ್ ನಿರ್ದೇಶನದಂತೆ ಡಿವೈಎಸ್‍ಪಿ ಜಗದೀಶ್, ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್, ಸಿಬ್ಬಂದಿಗಳಾದ ಸಾಜನ್, ಲವಕುಮಾರ್, ಪಂಚಲಿಂಗಪ್ಪ ಸತ್ತಿಗೇರಿ, ಶರತ್ ಕುಮಾರ್, ಪ್ರಸನ್ನ, ಗಿರೀಶ್ ಚಾಲಕ ಷರೀಫ್ ಪಾಲ್ಗೊಂಡಿದ್ದರು.

Read More

ಮಡಿಕೇರಿ ಜೂ.13 : ತಲಕಾವೇರಿಯನ್ನು ಪ್ರವಾಸೋದ್ಯಮ ಪಟ್ಟಿಯಿಂದ ಕೈಬಿಟ್ಟು ತೀರ್ಥಕ್ಷೇತ್ರವಾಗಿ ಘೋಷಿಸಲು ಕೊಡವಾಮೆರ ಕೊಂಡಾಟ ಸಂಘಟನೆ ಒತ್ತಾಯಿಸಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಪೆÇನ್ನಣ್ಣ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಸಂಘಟನೆಯ ಪ್ರಮುಖರು ಹಾಗೂ ಕಾರ್ಯಕರ್ತರು, ಕೊಡವರ ಕುಲದೇವಿ, ಕೊಡಗಿನ ಬಹುಪಾಲು ಜನರ ಆರಾಧ್ಯ ಮಾತೆ, ದಕ್ಷಿಣ ಕರ್ನಾಟಕದ ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿ ಕ್ಷೇತ್ರವನ್ನು ಪ್ರವಾಸೋದ್ಯಮ ಕ್ಷೇತ್ರಪಟ್ಟಿಯಿಂದ ಕೈ ಬಿಟ್ಟು ಪುಣ್ಯ ತೀರ್ಥಕ್ಷೇತ್ರವೆಂದು ಮುಂಗಡ ಪತ್ರದಲ್ಲಿ ಘೋಷಿಸಬೇಕೆಂದು ಆಗ್ರಹಿಸಿದರು. ಅಲ್ಲದೆ ಸಂಗಮ ಕ್ಷೇತ್ರ ಭಾಗಮಂಡಲವನ್ನು ದೇವಳ ನಗರ (ಟೆಂಪಲ್ ಟೌನ್)ಎಂದು ಸರ್ಕಾರ ಮುಂದಿನ ಮುಂಗಡಪತ್ರದಲ್ಲಿ ಘೋಷಿಸುವುದಲ್ಲದೆ ಪಾರಂಪರಿಕ ಧಾರ್ಮಿಕ ಕ್ಷೇತ್ರವಾಗಿ ಮೂಲತನಕ್ಕೆ ಮತ್ತು ಸ್ಥಳೀಯರ ಬದುಕಿಗೆ ಧಕ್ಕೆ ಬಾರದಂತೆ ವಿಶೇಷ ಅಭಿವೃದ್ಧಿಯ ಪ್ಯಾಕೇಜ್ ಘೋಷಿಸುವಂತೆ ಕ್ರಮವಹಿಸಬೇಕೆಂದು ಒತ್ತಾಯಿಸಿದರು. ಕಳೆದ ಹಲವಾರು ತಿಂಗಳುಗಳಿಂದ ರಚಿಸದೆ ಇರುವ ತಲಕಾವೇರಿ ಭಾಗಮಂಡಲ ವ್ಯವಸ್ಥಾಪನ ಸಮಿತಿಯನ್ನು ಒಳಗೊಂಡಂತೆ ಆದಷ್ಟು ಬೇಗ ರಚಿಸಲು ಸರ್ಕಾರ ಮುಂದಾಗಬೇಕೆಂದು ಸಂಘಟನೆಯ ಪ್ರಮುಖರು…

Read More

ಮಡಿಕೇರಿ ಜೂ.13 : ಕಾವೇರಿ ನದಿಯ ಉಗಮ ಸ್ಥಾನ ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಆರಂಭಗೊಂಡಿದ್ದರೂ ನಿರೀಕ್ಷಿತ ಮಳೆಯಾಗುತ್ತಿಲ್ಲ. ಜೂನ್ 15ಕ್ಕೆ ಬಿಪೊರ್ ಜೋಯ್ ಚಂಡಮಾರುತ ಗುಜರಾತ್ ಪ್ರವೇಶಿಸಲಿದ್ದು, ಅದರ ಪರಿಣಾಮ ದಕ್ಷಿಣ ಕನ್ನಡ ಮತ್ತು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಈಗಾಗಲೇ ಕಂಡು ಬಂದಿರುವುದರಿಂದ ಕೊಡಗಿನಲ್ಲೂ ಶೀತ ಗಾಳಿಯೊಂದಿಗೆ ಸಾಧಾರಣ ಮಳೆಯಾಗುತ್ತಿದೆ. ವಾರ್ಷಿಕ 150 ರಿಂದ 200 ಇಂಚಿಗೂ ಅಧಿಕ ಮಳೆಯಾಗುವ ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಆರಂಭಗೊಂಡು ಎರಡು ವಾರವೇ ಆಗಿದ್ದರೂ ಉತ್ತಮ ಮಳೆಯಾಗಿಲ್ಲ. ಬಿಸಿಲ ನಡುವೆಯೇ ತುಂತುರು ಮಳೆಯಾಗುತ್ತಿದ್ದು, ಕಳೆದ 2 ದಿನಗಳಿಂದ ಚಳಿಯ ವಾತಾವರಣ ಮೂಡಿದೆ. ಚಂಡಮಾರುತದ ಪರಿಣಾಮ ಮೋಡ ಕವಿದ ವಾತಾವರಣದೊಂದಿಗೆ ಚಳಿಯೂ ಇದ್ದು, ಮಳೆ ಆರಂಭಗೊಳ್ಳುವ ಲಕ್ಷಣ ಗೋಚರಿಸಿದೆ. ಚಂಡಮಾರುತದಿಂದ ಉಂಟಾಗಬಹುದಾದ ಅನಾಹುತ ಮತ್ತು ವಾಡಿಕೆ ಮಳೆ ಅತಿಯಾದರೆ ಎದುರಾಗಬಹುದಾದದ ಕಷ್ಟ ನಷ್ಟಗಳನ್ನು ಎದುರಿಸಲು ಜಿಲ್ಲಾಡಳಿತ ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಜಿಲ್ಲೆಯ ಇಬ್ಬರು ಶಾಸಕರು ಕೂಡ ಮುಂಜಾಗೃತಾ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.…

Read More

ದಾಸವಾಳ ಒಂದು ಸುಂದರವಾದ ಹೂವು. ಈ ಅದ್ಭುತವಾದ ಹೂವು ಅನೇಕ ಆರೊಗ್ಯ ಸಮಸ್ಯೆಗಳಿಂದ ದೂರ ಉಳಿಸುತ್ತದೆ. ಇದು ನಿಮ್ಮ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆ ಮಾಡುವುದಲ್ಲದೇ, ಹೃದಯ ರಕ್ತನಾಳದ ಕಾಯಿಲೆಗಳನ್ನು ತಡೆಯುತ್ತದೆ. ದಾಸವಾಳ ಹೂವಿನಲ್ಲಿ ಅತ್ಯಂತ ಪ್ರಯೋಜನಕಾರಿಯಾದ ಆರೋಗ್ಯಕರ ಅಂಶಗಳಿವೆ ಅನ್ನೋದು ಬಹುತೇಕ ಮಂದಿಗೆ ಗೊತ್ತಿಲ್ಲ. ದಾಸವಾಳ ಹೂವು ತನ್ನ ಒಡಲಲ್ಲಿ ಹೃದಯಕ್ಕೆ ಸಂಬಂಧಿಸಿದಂತೆ ಹಲವಾರು ಆರೋಗ್ಯದಾಯಕ ಗುಣಗಳನ್ನು ಹೊಂದಿದೆ. ಈ ಹೂವು ಅನೇಕ ಔಷಧೀಯ ಗುಣಗಳನ್ನು ಒಳಗೊಂಡಿರುವುದಲ್ಲದೆ, ಇತ್ತೀಚಿನ ದಿನಗಳಲ್ಲಿ ಹೃದಯಕ್ಕೆ ರಕ್ಷಣೆ ಕೊಡುವ ಆಹಾರವಾಗಿ ಹೆಚ್ಚು ಜನಪ್ರಿಯತೆಯನ್ನು ಗಳಿಸಿದೆ. ಅದರಲ್ಲೂ ಕೂದಲು ಉದುರುವಿಕೆ ನಿವಾರಣೆಗೆ ದಾಸವಾಳವು ಹೇಳಿ ಮಾಡಿಸಿದ ಔಷಧ. ಕೇವಲ ಆರೋಗ್ಯಕ್ಕೆ ಮಾತ್ರವಲ್ಲ ಬದಲಾಗಿ ತ್ವಚೆಯಲ್ಲಿನ ವಯಸ್ಸಾದ ಚಿಹ್ನೆಗಳನ್ನು ಕೂಡ ತಡೆಯಲು ಸಹಾಯ ಮಾಡುತ್ತದೆ. ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ : ದಾಸವಾಳವು ರಕ್ತದೊತ್ತಡವನ್ನು ಕಡಿಮೆ ಮಾಡುವಲ್ಲಿ ಹೆಚ್ಚಿನ ಪರಿಣಾಮಕಾರಿಯಾಗಿದೆ. ‘ಜರ್ನಲ್​ ಆಫ್​ ನ್ಯೂಟ್ರೀಶನ್​’ನಲ್ಲಿ ಪ್ರಕಟವಾದ ಅಧ್ಯಯನವೊಂದರ ಪ್ರಕಾರ ದಾಸವಾಳದ ಚಹಾವನ್ನು ಕುಡಿಯುವುದರಿಂದ ಸಿಸ್ಟೋಲಿಕ್​ ರಕ್ತದೊತ್ತಡ ಕಡಿಮೆಯಾಗುತ್ತದೆ. ಜತೆಗೆ…

Read More

ಶ್ರೀನಗರ ಜೂ.13 : ದಕ್ಷಿಣ ಕಾಶ್ಮೀರ ಹಿಮಾಲಯದ ಗುಹೆ ದೇಗುಲಕ್ಕೆ ತೀರ್ಥಯಾತ್ರೆ ಮಾಡುವ ಯಾತ್ರಿಗಳಿಗೆ ಆಹಾರದ ಮೆನುವನ್ನು ಎಸ್ಎಎಸ್‌ಬಿ ಬಿಡುಗಡೆ ಮಾಡಿದೆ. 62 ದಿನಗಳ ಯಾತ್ರೆಯು ಜುಲೈ 1 ರಂದು ದಕ್ಷಿಣ ಕಾಶ್ಮೀರದ ಸಾಂಪ್ರದಾಯಿಕ ಪಹಲ್ಗಾಮ್ ಮಾರ್ಗದಿಂದ ಮತ್ತು ಮಧ್ಯ ಕಾಶ್ಮೀರದ ಅತ್ಯಂತ ಚಿಕ್ಕದಾದ ಬಾಲ್ಟಾಲ್ ಟ್ರ್ಯಾಕ್‌ನಿಂದ ಪ್ರಾರಂಭವಾಗುತ್ತದೆ. ಆಗಸ್ಟ್ 31 ರಂದು ರಕ್ಷಾ ಬಂಧನದಂದು ಯಾತ್ರೆ ಮುಕ್ತಾಯಗೊಳ್ಳಲಿದೆ. ವಾರ್ಷಿಕ ಅಮರನಾಥ ಯಾತ್ರೆಯ ಆರಂಭಕ್ಕೂ ಮುನ್ನ, ಶ್ರೀ ಅಮರನಾಥ ದೇಗುಲ ಮಂಡಳಿ (ಎಸ್ಎಎಸ್‌ಬಿ) ಎರಡು ತಿಂಗಳ ಸುದೀರ್ಘ ತೀರ್ಥಯಾತ್ರೆಯ ಸಮಯದಲ್ಲಿ ಯಾತ್ರಿಗಳಿಗೆ ಹಲ್ವಾ, ಪೂರಿ, ಸಮೋಸಾ, ಜಿಲೇಬಿ, ಗುಲಾಬ್ ಜಾಮೂನ್, ಪಿಜ್ಜಾ, ದೋಸೆ, ಕರಿದ ರೊಟ್ಟಿ ಮತ್ತು ‘ಇತರ ಜಂಕ್ ಮತ್ತು ಅನಾರೋಗ್ಯಕರ ಆಹಾರ’ ನೀಡುವುದನ್ನು ನಿಷೇಧಿಸಿದೆ. ಆಹಾರ ಮೆನುವಿನ ಪ್ರಕಾರ, ಭಾರಿ ಪಲಾವ್, ಫ್ರೈಡ್ ರೈಸ್, ಪೂರಿ, ಬಾತುರಾ, ಪಿಜ್ಜಾ, ಬರ್ಗರ್, ಪರೋಠ, ದೋಸೆ, ಫ್ರೈಡ್ ರೋಟಿ, ಬೆಣ್ಣೆಯೊಂದಿಗೆ ಬ್ರೆಡ್, ಕ್ರೀಮ್ ಆಧಾರಿತ ಆಹಾರಗಳು, ಉಪ್ಪಿನಕಾಯಿ, ಚಟ್ನಿ, ಕರಿದ ಹಪ್ಪಳ,…

Read More

ಬೇಕಾಗುವ ಸಾಮಾಗ್ರಿಗಳು :: ಅನ್ನ – 1 ಬಟ್ಟಲು, ಅಣಬೆ – 150 ಗ್ರಾಂ (ತೊಳೆದು ಹೆಚ್ಚಿಟ್ಟುಕೊಂಡದ್ದು), ಬೆಳ್ಳುಳ್ಳಿ – ಸ್ವಲ್ಪ (ಸಣ್ಣಗೆ ಹೆಚ್ಚಿದ್ದು), ಈರುಳ್ಳಿ – ಅರ್ಧ ಬಟ್ಟಲು (ಸಣ್ಣಗೆ ಹೆಚ್ಚಿದ್ದು), ಕೊತ್ತಂಬರಿ ಸೊಪ್ಪು – ಸ್ವಲ್ಪ (ಸಣ್ಣಗೆ ಹೆಚ್ಚಿದ್ದು), ಆಲಿವ್ ಆಯಿಲ್- 2 ಚಮಚ,  ಕಾಳುಮೆಣಸಿನ ಪುಡಿ – ಕಾಲು ಚಮಚ, ಉಪ್ಪು – ಅಗತ್ಯಕ್ಕೆ ತಕ್ಕಷ್ಟು ಮಾಡುವ ವಿಧಾನ :  ಮೊದಲಿಗೆ ಒಂದು ಬಾಣಾಲೆಯಲ್ಲಿ ಆಲಿವ್ ಆಯಿಲ್ ಹಾಕಿಕೊಂಡು ಕಾದ ನಂತರ ಬೆಳ್ಳುಳ್ಳಿ ಮತ್ತು ಈರುಳ್ಳಿಯನ್ನು ಹಾಕಿಕೊಂಡು 2 ನಿಮಿಷಗಳ ಕಾಲ ಚನ್ನಾಗಿ ಫ್ರೈ ಮಾಡಿಕೊಳ್ಳಿ. ಬಳಿಕ ಇದಕ್ಕೆ ಹೆಚ್ಚಿದ ಅಣಬೆಗಳನ್ನು ಹಾಕಿಕೊಂಡು ಕಂದು ಬಣ್ಣ ಬರುವವರೆಗೆ ಚನ್ನಾಗಿ ಹುರಿದುಕೊಳ್ಳಿ. ಇದರ ನೀರಿನಾಂಶ ಸಂಪೂರ್ಣವಾಗಿ ಬಿಡುವುದರಿಂದ ಫ್ರೈಡ್‌ರೈಸ್ ಇನ್ನಷ್ಟು ರುಚಿಯನ್ನು ನೀಡುತ್ತದೆ. ನಂತರ ಹೆಚ್ಚಿದ ಕೊತ್ತಂಬರಿ ಸೊಪ್ಪನ್ನು ಹಾಕಿಕೊಂಡು ಸ್ವಲ್ಪ ಫ್ರೈ ಮಾಡಿಯ ನಂತರ ಅದಕ್ಕೆ ಕಾಳುಮೆಣಸಿನ ಪುಡಿ ಹಾಗೂ ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ. ಬಳಿಕ…

Read More