ಮಡಿಕೇರಿ NEWS DESK ಫೆ.11 : 2026-27ರ ಒಟ್ಟು ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ.24.1ರಷ್ಟು ಅನುದಾನ ಮೀಸಲಿರಿಸಬೇಕು, ಮೀಸಲಿರಿಸಿದ ಅನುದಾನ ದುರ್ಬಳಕೆ ತಡೆಯಲು SCSP/TSP ಕಾಯ್ದೆ 2013ರ ಸೆಕ್ಷನ್ 7 (ಡಿ) ರದ್ದುಪಡಿಸಿದಂತೆ ಸೆಕ್ಷನ್ 7 (ಸಿ) ರದ್ದುಪಡಿಸಿ ಆದೇಶ ಹೊರಡಿಸಬೇಕು ಹಾಗೂ SCSP/TSP ಯ ಅನುದಾನ ನಿಯಮ ಬಾಹಿರವಾಗಿ ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿದ 25 ಸಾವಿರ ಕೋಟಿ ಹಣವನ್ನು ಹಿಂತಿರುಗಿಸಬೇಕು ಎಂದು ಒತ್ತಾಯಿಸಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಮಿತಿ ವತಿಯಿಂದ ರಾಜ್ಯ ಸಂಚಾಲಕÀ ಎಂ.ಗುರುಮೂರ್ತಿ ಶಿವಮೊಗ್ಗ ಅವರ ನೇತೃತ್ವದಲ್ಲಿ, ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಅವರ ಮುಂದಾಳತ್ವದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಯಿತು. ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಪ್ರತಿಭಟನಾಕಾರರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಅನ್ಯಾಯವಾಗದಂತೆ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಶೋಷಿತ ಸಮುದಾಯಗಳನ್ನು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಸಬಲೀಕರಣಗೊಳಿಸಲು…
ಲೇಖಕ: admin
ಮಡಿಕೇರಿ ಫೆ.11 NEWS DESK : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನವೆಂಬೆರ್ 4 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ “ಸಾಂತ್ವನ ಮಹಿಳಾ ಸಹಾಯವಾಣಿ” ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆ ನೀಡಿ ನೆರವು ಕಲ್ಪಿಸುತ್ತಾ ಬಂದಿರುತ್ತದೆ. ಸಾಂತ್ವನ ಕೇಂದ್ರದಲ್ಲಿ ಈವರೆಗೆ 5681 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, 5657 ಪ್ರಕರಣಗಳು ಇತ್ಯರ್ಥಗೊಂಡಿದೆ. 2025-26ನೇ ಆರ್ಥಿಕ ಸಾಲಿನಲ್ಲಿ 262 ಪ್ರಕರಣಗಳು ದಾಖಲಾಗಿ, 242 ಪ್ರಕರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ, ಉಳಿದ 24 ಪ್ರಕರಣಗಳು ಇತ್ಯರ್ಥದ ಹಂತದಲ್ಲಿದೆ. ಈವರೆಗೆ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ರೂ.3,75,000 ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ 2025-26ನೇ ಸಾಲಿನಲ್ಲಿ ಕೊಡಿಸಿಕೊಡಲಾಗಿದೆ. ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷ ಬಿ.ಕೆ ರವೀಂದ್ರ ರೈ…
ಮಡಿಕೇರಿ, NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ, ಜಾತಿ ಪದ್ಧತಿ, ಮೌಢ್ಯ ವಿರುದ್ಧ, ಅಜ್ಞಾನ ಹಾಗೂ ಕಂದಾಚಾರಗಳನ್ನು ಹೋಗಲಾಡಿಸಿ ಸರ್ವರಿಗೂ ಸಮಾನತೆ ತರಲು ಶ್ರಮಿಸಿದ್ದಾರೆ ಎಂದು ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಭಾಷಾ ಶಿಕ್ಷಕಿ ಹೇಮಲತಾ ಬಿ.ಬಿ. ಅವರು ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ಮಂಗಳವಾರ ನಡೆದ ‘ಕಾಯಕ ಶರಣರ ಜಯಂತಿ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಡೊಹಾರ್ ಕಕ್ಕಯ್ಯ, ಮಾದರ ಚೆನ್ನಯ್ಯ, ಮಾದರ ಧೂಳಯ್ಯ, ಉರಿಲಿಂಗ ಪೆದ್ದಿ ಹಾಗೂ ಸಮಗಾರ ಹರಳಯ್ಯ ಅವರು ವೃತ್ತಿಯ ಮೂಲಕ ಸಮಾಜದಲ್ಲಿ ಕಾಯಕವೇ ಕೈಲಾಸ ಎಂಬುದನ್ನು ಸಾರಿದ್ದಾರೆ ಎಂದು ಹೇಳಿದರು. ಡೋಹಾರ ಕಕ್ಕಯ್ಯ ಅವರು ಹನ್ನೆರಡನೇ ಶತಮಾನದಲ್ಲಿ ಕಾಯಕ ಯೋಗಿಯಾಗಿ ವೃತ್ತಿ ಧರ್ಮವನ್ನು ಗೌರವಿಸಬೇಕು ಎಂಬುದನ್ನು ಸಾರಿದ್ದಾರೆ. ಡೋರ ಎಂದರೆ ಚರ್ಮಕಾರ ಎಂದರ್ಥ, ಚರ್ಮ ಹದ…
ಮಡಿಕೇರಿ, NEWS DESK ಫೆ.10: ಕೊಡಗು ಜಿಲ್ಲಾ ಬ್ಯುಟೀಷಿಯನ್ ಅಸೋಸಿಯೇಷನ್ ವತಿಯಿಂದ ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಇತರರ ಸೌಂದರ್ಯದ ಬಗ್ಗೆ ಕಾಳಜಿ ವಹಿಸುವ ಸೌಂದರ್ಯ ತಜ್ಞರು ಕಳೆದ ಮೂರು ವರ್ಷಗಳಿಂದ ತಾವುಗಳು ಪಾಲ್ಗೊಂಡು ಕ್ರೀಡಾ ಚಟುವಟಿಕೆಗಳನ್ನು ನಡೆಸುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಮುಂದಿನ ದಿನಗಳಲ್ಲಿ ರಾಜ್ಯಮಟ್ಟದ ಕ್ರೀಡಾಕೂಟಗಳನ್ನು ಆಯೋಜಿಸುವಂತೆ ಸಲಹೆ ನೀಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಜಿಲ್ಲಾ ಬ್ಯುಟಿಶಿಯನ್ ಅಸೋಸಿಯೇಷನ್ ಸಂಸ್ಥಾಪಕರು ಹಾಗೂ ಗೌರವಾಧ್ಯಕ್ಷರಾದ ವನಿತಾ ಚಂದ್ರಮೋಹನ್ ಮಾತನಾಡಿ, ಕ್ರೀಡೆ ಮೂಲಕ ಪರಸ್ಪರ ಬಾಂಧವ್ಯ ಬೆಳೆಯಲು ಸಾಧ್ಯ ಎಂದ ಅವರು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ ಹೊರತು ಗೆಲುವು ಮುಖ್ಯವಲ್ಲ ಎಂದರು. ಒಗ್ಗಟ್ಟಿನ ಮೂಲಕ ಪ್ರತಿಯೊಬ್ಬರು ಸಂಘದಲ್ಲಿ ಚರ್ಚಿಸಿ ತಮ್ಮ ಸಮಸ್ಯೆಗೆ ಪರಿಹಾರ ಹುಡುಕುವ ಕೆಲಸವಾಗಬೇಕು ಎಂದು ಹೇಳಿದರು. ಜಿಲ್ಲಾ ಅಧ್ಯಕ್ಷರಾದ ರತ್ನ ಯತೀಶ್ ಅವರು ಕ್ರೀಡಾಕೂಟಕ್ಕೆ ಶುಭ ಕೋರಿ ಸಂಘಟನೆಯ ಬಲವರ್ಧನೆಗೆ ಪ್ರತಿಯೊಬ್ಬರೂ ಕೈಜೋಡಿಸುವಂತೆ ಕೋರಿದರು. ತಾಲೂಕು ಸಂಘಗಳ ತಂಡಗಳ ನಡುವೆ…
ಮೈಸೂರು, NEWS DESK ಫೆ. 10: ಅನಿವಾರ್ಯ ಕಾರಣಗಳಿಂದ ನನೆಗುದಿಗೆ ಬಿದ್ದಿರುವ ಮೈಸೂರು-ಕುಶಾಲ ನಗರ ಯೋಜನೆಗೆ ಮರು ಚಾಲನೆ ನೀಡಬೇಕು, ಪ್ರಮುಖವಾಗಿ ಭೂ ಸ್ವಾಧೀನ ಪ್ರಕ್ರಿಯೆ ಆರಂಭಿಸಲು ಮಧ್ಯ ಪ್ರವೇಶಿಸಬೇಕು ಎಂದು ಕೇಂದ್ರ ರೈಲ್ವೆ ಸಚಿವರಿಗೆ *ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್* ಮನವಿ ಮಾಡಿದ್ದಾರೆ. ಈ ಸಂಬಂಧ ಪತ್ರ ಬರೆದಿರುವ ಸಂಸದರು, ಕೆಲವು ಪ್ರಕ್ರಿಯೆ ಪೂರ್ಣಗೊಂಡಿದ್ದರೂ, ಯೋಜನೆ ನಿಧಾನಗತಿಯಲ್ಲಿ ಸಾಗಿದೆ ಅಥವಾ ನನೆಗುದಿಗೆ ಬಿದ್ದಿದೆ ಎಂದರು. *ಯೋಜನೆಗೆ ಚಾಲನೆ ನೀಡಬೇಕು* ಮೈಸೂರು (ಬೆಳಗೊಳ) – ಕುಶಾಲನಗರ (89 ಕಿಮೀ) ಯೋಜನೆಯ ಅಂತಿಮ ಸ್ಥಳ ಸಮೀಕ್ಷೆ ಪೂರ್ಣಗೊಂಡಿದ್ದರೂ ಕಾರಣಾಂತರಗಳಿಂದ ಸ್ಥಗಿತಗೊಂಡಿದೆ. ಈ ಯೋಜನೆಗೆ ಪುನರುಜ್ಜೀವನಗೊಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಚಿವರು ಮಧ್ಯಪ್ರವೇಶಿಸಬೇಕು ಎಂದು ಮನವಿ ಮಾಡಲಾಗಿದೆ ಎಂದು ಯದುವೀರ್ ತಿಳಿಸಿದ್ದಾರೆ. ಕೊಡಗು ಜಿಲ್ಲೆಗೆ ಸೂಕ್ತ ರೈಲು ಸಂಪರ್ಕವಿಲ್ಲದೇ ಪ್ರಮುಖ ಪ್ರವಾಸೋದ್ಯಮ ಮತ್ತು ತೋಟಗಾರಿಕೆ ಕ್ಷೇತ್ರಗಳ ಆರ್ಥಿಕತೆಗೆ ಭಾರಿ ತೊಂದರೆಯಾಗುತ್ತಿದೆ. ಸಂಪೂರ್ಣವಾಗಿ ಸ್ಯಾಚುರೇಟೆಡ್ ರಸ್ತೆ ಸಂಪರ್ಕದ ಮೇಲೆ ಬೆಳೆಗಾರರು ಅವಲಂಬಿತಾಗಿದ್ದಾರೆ…
ಮಡಿಕೇರಿ NEWS DESK ಫೆ.10 : ತುಳು ಭಾಷೆಯಂತೆ ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು, ಭಾಷೆ ಉಳಿದರೆ ದೇಶ ಉಳಿಯುತ್ತದೆ, ವೈವಿಧ್ಯಮಯ ರಾಷ್ಟ್ರವನ್ನು ಒಂದಾಗಿಟ್ಟು ಮುಂದುವರಿಯಲು ಕೊಡವ ಭಾಷೆ ಸೇರಿದಂತೆ ಇಲ್ಲಿನ ಹಲವು ಆದಿಮಸಂಜಾತ ಭಾಷೆಗಳನ್ನು ಮುನ್ನಲೆಗೆ ತಂದು ಸಮಾನ ಪ್ರಾತಿನಿಧ್ಯ ನೀಡಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ತುಳುವಿನಂತೆ ಕೊಡವ ಭಾಷೆಯನ್ನು ಸಂವಿಧಾನದ 345 ಪ್ರಕಾರ ರಾಜ್ಯದ ಅಧಿಕೃತ ಭಾಷೆಯಾಗಿ ಪರಿಗಣಿಸಬೇಕು. ಒಂದೇ ಭಾಷೆಗೆ ಜೋತು ಬಿದ್ದು, ಭಾಷಾ ಪ್ರಾಬಲ್ಯದ ಮೂಲಕ ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ದೇಶದ ಏಕತೆಗೆ ದಕ್ಕೆ ಬರುತ್ತದೆ, ಒಗ್ಗಟ್ಟಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಏಕ-ಜನಾಂಗೀಯ ಅನಿಮಿಸ್ಟಿಕ್ ಕೊಡವರ ಮಾತೃಭಾಷೆಯಾದ ಕೊಡವ ಭಾಷೆಯನ್ನು ಸಂವಿಧಾನದ 345 ನೇ ವಿಧಿಯ ಅಡಿಯಲ್ಲಿ ರಾಜ್ಯ ಭಾಷೆಯಾಗಿ ಗುರುತಿಸಬೇಕು, ಇದು ಸಾಂವಿಧಾನಿಕ ಬಾಧ್ಯತೆಯಾಗಿದೆ. ಇದಕ್ಕಾಗಿ ಕಳೆದ 36 ವರ್ಷಗಳಿಂದ ಸಿಎನ್ಸಿ ನಿರಂತರವಾಗಿ ಮತ್ತು ಶಾಂತಿಯುತವಾಗಿ ಹೋರಾಟ…
ಮಡಿಕೇರಿ NEWS DESK ಫೆ.10:-ನಗರದ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಸಭಾಂಗಣ ಜಿಲ್ಲಾ ಮಟ್ಟದ “ರಾಷ್ಟ್ರೀಯ ಜಂತು ಹುಳ ನಿವಾರಣಾ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ||ಸತೀಶ್ ಕುಮಾರ್ ಅವರು ಗಿಡಕ್ಕೆ ನೀರುರೆರೆಯುವ ಮೂಲಕ ಉದ್ಘಾಟಿಸಿದರು. ನಂತರ ಮಕ್ಕಳಿಗೆ ಜಂತು ಹುಳು ನಿವಾರಕ ಮಾತ್ರೆಗಳನ್ನು ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು “ರಾಷ್ಟ್ರೀಯ ಜಂತು ಹುಳ ನಿವಾರಣಾ ಕಾರ್ಯಕ್ರಮ”ವು 1-19 ವರ್ಷ ವಯಸ್ಸಿನ ಮಕ್ಕಳಿಗೆ ಜಂತುಹುಳು ನಿರ್ಮೂಲನೆ ಮಾಡಿ ಅವರನ್ನು ಹುಳು ಮುಕ್ತರನ್ನಾಗಿಸುವುದು, ಇದರಿಂದ ಮಕ್ಕಳಲ್ಲಿ ಬರಬಹುದಾದ ಅಪೌಷ್ಠಿಕತೆ, ರಕ್ತಹೀನತೆ, ಆಯಾಸ, ಹಸಿವಾಗದಿರುವುದು, ಕಲಿಕೆಯಲ್ಲಿ ನಿರಾಸಕ್ತಿ, ದೈಹಿಕ, ಮಾನಸಿಕ ಬೆಳವಣಿಗೆಯ ಕುಂಠಿತವನ್ನು ತಡೆಯುತ್ತದೆ ಎಂದು ತಿಳಿಸಿದರು. ಅಲ್ಲದೇ ದೇಶಾದ್ಯಂತ ಫೆಬ್ರವರಿ, 10 ರಂದು “ರಾಷ್ಟ್ರೀಯ ಜಂತು ಹುಳ ನಿವಾರಣಾ ಕಾರ್ಯಕ್ರಮ” ಹಾಗೂ ಈ ದಿನ ಮಾತ್ರೆ ತೆಗೆದುಕೊಳ್ಳಲಾಗದ ಮಕ್ಕಳಿಗೆ ಫೆಬ್ರವರಿ, 16 ರಂದು ಮಾಪ್ಅಪ್ ಡೇ ಕಾರ್ಯಕ್ರಮ ನಡೆಸುತ್ತಿದ್ದು, ಎಲ್ಲಾ…
ಮಡಿಕೇರಿ NEWS DESK ಫೆ.10 : ಮಡಿಕೇರಿ ತಾಲ್ಲೂಕಿನ ಅರೆಕಾಡ್ ಹೊಸ್ಕೇರಿಯಲ್ಲಿ ಕೊಡವ ವೆಲ್ ಫೇರ್ ಐಂಡ್ ರಿಕ್ರಿಯೇಷನ್ ಅಸೋಸಿಯೇಷನ್ ವತಿಯಿಂದ ನೂತನವಾಗಿ ನಿರ್ಮಾಣಗೊಂಡಿರುವ ‘ಕೊಡವ ಭವನ’ದ ಉದ್ಘಾಟನಾ ಸಮಾರಂಭ ಫೆ.14 ರಂದು ನಡೆಯಲಿದೆ. ಕೊಡವ ವೆಲ್ ಫೇರ್ ಐಂಡ್ ರಿಕ್ರಿಯೇಷನ್ ಅಸೋಸಿಯೇಷನ್ ನ ಅಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ‘ಕೊಡವ ಭವನ’ವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ.ಎಸ್.ಪೊನ್ನಣ್ಣ ಹಾಗೂ ಮೈಸೂರು, ಕೊಡಗು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪಾಲ್ಗೊಳ್ಳಲಿದ್ದಾರೆ. ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಅರುಣ್ ಮಾಚಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ…
ಮಡಿಕೇರಿ NEWS DESK ಫೆ.10 : ಆರೋಗ್ಯ ರಕ್ಷಣೆೆ ಎನ್ನುವುದು ಕೇವಲ ಯೋಜನೆಯಾಗದೆ, ಪ್ರತಿಯೊಬ್ಬರ ಮೂಲಭೂತ ಹಕ್ಕಾಗಬೇಕು ಎನ್ನುವ ಪ್ರಮುಖ ವಿಷಯವನ್ನು ಮುಂದಿಟ್ಟುಕೊಂಡು ಬುಡಕಟ್ಟು ಕಾರ್ಮಿಕರ ಸಂಘ ಮತ್ತು ಚಿಂತಾಮಣಿಯ ಬೇರು ಬೆವರು ಸಾಂಸ್ಕೃತಿಕ ವೇದಿಕೆ ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”ವನ್ನು ನಡೆಸಿತು. ರಾಜ್ಯದಲ್ಲಿ ಆರೋಗ್ಯ ಹಕ್ಕಿನ ಕಾಯ್ದೆಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದ ಪ್ರಮುಖರು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇರು ಬೆವರು ಸಾಂಸ್ಕೃತಿಕ ವೇದಿಕೆಯ ಸಂಚಾಲಕ ಸೌರಭ್ ಪಲ್ಲಿ ಚಂದ್ರಶೇಖರ್ ಆರೋಗ್ಯ ಹಕ್ಕಿನ ಜಾಥಾವನ್ನು ಇದೇ ಫೆ.2ರಂದು ಆರಂಭಿಸಲಾಗಿದ್ದು, ಈಗಾಗಲೆ 12 ಜಿಲ್ಲೆಗಳಲ್ಲಿ ಪೂರ್ಣಗೊಳಿಸಲಾಗಿದೆ. ಇಂದು ಕೊಡಗು ಜಿಲ್ಲಾ ಬುಡಕಟ್ಟು ಕಾರ್ಮಿಕರ ಸಂಘಟನೆಯೊಂದಿಗೆ ನಗರದಲ್ಲಿ ಜಾಥಾ ನಡೆಸಿದ್ದು, ಅಭಿಯಾನದ ಸಮಾರೋಪ ಫೆ.17 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದರು. ಸAವಿಧಾನದ ಮೂಲಭೂತ ಹಕ್ಕುಗಳಲ್ಲಿ ಎಲ್ಲರಿಗೂ ಜೀವಿಸುವ ಹಕ್ಕನ್ನು ಒದಗಿಸಲಾಗಿದೆ. ಜೀವಿಸುವುದು ಎಂದರೆ ಆರೋಗ್ಯಯುತವಾದ…
ಮಡಿಕೇರಿ NEWS DESK ಫೆ.10 : ವಿರಾಜಪೇಟೆ ತಾಲ್ಲೂಕಿನ ಕಂಡಂಗಾಲ ಗ್ರಾಮದಲ್ಲಿ ಇದೇ ಪ್ರಥಮ ಬಾರಿಗೆ ಏ.2ರಿಂದ 4ರವರೆಗೆ ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”ಯನ್ನು ಆಯೋಜಿಸಲಾಗಿದೆ ಎಂದು ನಮ್ಮೆಯ ಸಂಚಾಲಕ ಮುಲ್ಲೇಂಗಡ ಮಧೋಶ್ ಪೂವಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕಂಡಂಗಾಲ ಸರಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ, ಕರ್ನಾಟಕ ಕಬಡ್ಡಿ ಫೆಡರೇಷನ್ ನಿಯಮಾವಳಿಯಂತೆ ಮ್ಯಾಟ್ ಕಬಡ್ಡಿ ಪಂದ್ಯಾವಳಿ ನಡೆಯಲಿದ್ದು, ಸುಮಾರು 50 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು. ಕಂಡಂಗಾಲ ಶಾಲಾ ಮೈದಾನದಲ್ಲಿ ಅಳವಡಿಸುವ ಮೂರು ಮ್ಯಾಟ್ಗಳಲ್ಲಿ ನಾಕ್ ಔಟ್ ಮಾದರಿಯಲ್ಲಿ ಪಂದ್ಯಗಳು ನಡೆಯಲಿವೆ. ಪ್ರತಿನಿತ್ಯ ಸುಮಾರು 15ರಿಂದ 20 ಪಂದ್ಯಗಳು ನಡೆಯಲಿದ್ದು, ಪಂದ್ಯಾವಳಿಯ ತಾಂತ್ರಿಕ ಸಮಿತಿಯಲ್ಲಿ ಕಬಡ್ಡಿ ಫೆಡರೇಷನ್ನ ತೀರ್ಪುಗಾರರು ಇರುತ್ತಾರೆ. ಕಬಡ್ಡಿ ಕ್ರೀಡೆಯನ್ನು ಉತ್ತೇಜಿಸುವ ಉದ್ದೇಶದಿಂದ ಪಂದ್ಯಾವಳಿಗೆ ಹೆಸರು ನೋಂದಾಯಿಸಿಕೊಳ್ಳುವ ಮೊದಲ ಹತ್ತು ತಂಡಗಳಿಗೆ ವಿಶೇಷ ನೆನಪಿನ ಕಾಣಿಕೆಯನ್ನು ನೀಡಲಾಗುತ್ತದೆ. ಪಂದ್ಯಾವಳಿಗೆ ಬಾಳೆಲೆಯ ಮಾಚಂಗಡ ತಂಡ ಪ್ರಥಮ ತಂಡವಾಗಿ ಮತ್ತು ಬಲ್ಯಮಂಡೂರುವಿನ ದೇಯಂಡ…






