ನಾಪೋಕ್ಲು ಜೂ.13 : ಅಖಿಲ ಕೊಡವ ಸಮಾಜದ ವತಿಯಿಂದ ವಿರಾಜಪೇಟೆಯ ಕಾವೇರಿ ಆಶ್ರಮದ ಹಿರಿಯ ಸ್ವಾಮೀಜಿ ಶತಾಯುಷಿ ಶ್ರೀ ವಿವೇಕಾನಂದ ಶರಣ ಸ್ವಾಮಿ (ಪೂರ್ವಾಶ್ರಮ ಪಳಂಗಂಡ) ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣರಿಗೆ ಸ್ವಾಮೀಜಿ ಶಾಲುಹೊದಿಸಿ ಆಶೀರ್ವದಿಸಿದರು. ಕಾರ್ಯಕ್ರಮದಲ್ಲಿ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ, ಉಪಾಧ್ಯಕ್ಷ ಅಜ್ಜಿಕುಟ್ಟಿರ ಸುಬ್ರಮಣಿ ಮಾದಯ್ಯ, ಕಾರ್ಯದರ್ಶಿ ಅಮ್ಮಣಿಚಂಡ ರಾಜ ನಂಜಪ್ಪ, ಖಜಾಂಚಿ ಮಂಡೆಪಂಡ ಸುಗುಣ ಮುತ್ತಣ್ಣ, ಯೂತ್ ವಿಂಗ್ ಅಧ್ಯಕ್ಷ ಚಮ್ಮಟ್ಟಿರ ಪ್ರವೀಣ್ ಉತ್ತಪ್ಪ ಹಾಗೂ ಕೀತಿಯಂಡ ವಿಜಯಕುಮಾ (ಶರಿ) ಹಾಜರಿದ್ದರು. ವರದಿ : ದುಗ್ಗಳ ಸದಾನಂದ
ಲೇಖಕ: admin
ಮಡಿಕೇರಿ ಜೂ.13 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ ಅವರನ್ನು ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಸಮಾಜದಿಂದ ಸನ್ಮಾನಿಸಿಸಲಾಯಿತು. ವಿರಾಜಪೇಟೆಯಲ್ಲಿ ಅವರ ನಿವಾಸದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಕೊಡಗು ಜಿಲ್ಲೆಯ ಹಿಂದೂ ಮಲಯಾಳಿ ಸಮಾಜ ಬಾಂಧವರ ಬೇಡಿಕೆಗಳಿಗೆ ಸ್ಪಂದಿಸುವುದಾಗಿ ಎ.ಎಸ್ ಪೊನ್ನಣ್ಣ ಭರವಸೆ ನೀಡಿದರು. ಸನ್ಮಾನ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಸಮಾಜದ ಅಧ್ಯಕ್ಷ ವಿ.ಎಂ ವಿಜಯ, ಪ್ರಧಾನ ಕಾರ್ಯದರ್ಶಿ ಪಿ.ಕೆ ಶಶಿಕುಮಾರ್, ಜಿಲ್ಲಾ ಹಿಂದೂ ಮಲಯಾಳಿ ಸಮಾಜದ ಸಲಹೆಗಾರ, ಟಿ.ಆರ್.ವಾಸುದೇವ್, ಟಿ.ಕೆ ಸುಧೀರ್, ಜಿ.ಪಂ ಮಾಜಿ ಸದಸ್ಯೆ ಸುನಿತಾ ಮಂಜುನಾಥ್, ವಿರಾಜಪೇಟೆ ಮಲಯಾಳಿ ಸಮಾಜದ ಅಧ್ಯಕ್ಷ ವಿನೂಪ್, ಕೆ.ಬಾಬು,ಪಿ.ಡಿ ಪ್ರಕಾಶ್, ಕೆ.ವಿ ಸುಬ್ರಮಣಿ, ಶರಂತ್ ಕಾಂತ್,ಎನ್.ಕೆ ಅಜೀಶ್ ಕುಮಾರ್, ಶಾಜು, ದಿನೇಶ್, ಉಣ್ಣಿ, ರಾಜೇಶ್, ಸುಮೇಶ್, ಸದಾನಂದ, ಅಶೋಕ್ ಕುಮಾರ್, ನಂದಾ ಹಾಗೂ ವಿವಿಧ ಭಾಗಗಳ ಹಿಂದೂ ಮಲಯಾಳಿ ಸಮಾಜದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಮಡಿಕೇರಿ ಜೂ.13 : ಸುಮಾರು 18 ತಿಂಗಳ ಹೆಣ್ಣು ಹುಲಿ ಮರಿಯೊಂದು ಸಾವನ್ನಪ್ಪಿರುವ ಘಟನೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ. ಹುಲಿಗಳ ನಡುವಿನ ಕಾದಾಟದಲ್ಲಿ ಹೆಣ್ಣು ಹುಲಿ ಮರಿ ಮೃತಪಟ್ಟಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಡಿ.ಬಿ.ಕುಪ್ಪೆ ವನ್ಯಜೀವಿ ವಲಯ ವ್ಯಾಪ್ತಿಯ ಕಬಿಸಿ-ತರಿಕಿಹಳ್ಳ ಅರಣ್ಯ ಪ್ರದೇಶದಲ್ಲಿ ಸಿಬ್ಬಂದಿಗಳು ಗಸ್ತು ತಿರುಗುತ್ತಿದ್ದಾಗ ಹುಲಿ ಸತ್ತು ಬಿದ್ದಿರುವುದು ಕಂಡು ಬಂದಿದೆ. ಮೃತದೇಹದಲ್ಲಿ ಗಾಯಗಳ ಗುರುತು ಕಾಣಿಸಿಕೊಂಡಿದೆ. ಪಶು ವೈದ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಅಂತ್ಯ ಸಂಸ್ಕಾರ ನಡೆಸಲಾಯಿತು.
ಮಡಿಕೇರಿ ಜೂ.13 : ಲಕ್ಷ್ಮಣ ತೀರ್ಥ ನದಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಹುಣಸೂರು ನಗರದ ಕರೀಮಾರಮ್ಮ ದೇವಾಲಯದ ಬಳಿಯ ಲಕ್ಷ್ಮಣ ತೀರ್ಥ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಸಿಕ್ಕಿದೆ. ಶವದ ಎಡಗೈಯಲ್ಲಿ ಸಾಯಿಕುಮಾರ್ ಹಾಗೂ ಬಲಗೈಯಲ್ಲಿ ಎಸ್.ಜಿ.ಗೀತಾ ಎಂದು ಹಚ್ಚೆ ಹಾಕಲಾಗಿದೆ. ನೀಲಿ ಬಣ್ಣದ ಪ್ಯಾಂಟ್ ಹಾಗೂ ಕಪ್ಪು ಬಣ್ಣದ ಬಿಳಿಗೆರೆಯುಳ್ಳ ಶಟ್ ಧರಿಸಿದ್ದಾರೆ. ವಾರಸುದಾರರು ಇದ್ದಲ್ಲಿ 94808 05034ಗೆ ಸಂಪರ್ಕಿಸುವಂತೆ ನಗರ ಪೊಲೀಸ್ ಠಾಣೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಕುಶಾಲನಗರ, ಜೂ.13 : ವಿದ್ಯಾರ್ಥಿಗಳು ತಮ್ಮನ್ನು ಪರಿಸರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಭವಿಷ್ಯದಲ್ಲಿ ಪರಿಸರ ರಾಯಭಾರಿಗಳಾಗಿ ರೂಪುಗೊಳ್ಳಬೇಕು ಎಂದು ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್ ಕರೆ ನೀಡಿದರು. ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಡಿ.ಎಂ.ಸಿ., ಜೆ.ಸಿ.ಬೋಸ್ ಇಕೋ ಕ್ಲಬ್, ರಾಷ್ಟ್ರೀಯ ಸೇವಾ ಯೋಜನಾ ( ಎನ್.ಎಸ್.ಎಸ್.) ಹಾಗೂ ಸುಂಟಿಕೊಪ್ಪ ಜೆ.ಸಿ.ಐ.ಘಟಕದ ವತಿಯಿಂದ ‘ಪ್ಲಾಸ್ಟಿಕ್ ತ್ಯಾಜ್ಯದ ಸಮರ್ಪಕವಾದ ನಿರ್ವಹಣೆ ಪರಿಸರ ಮತ್ತು ಜೀವ- ಸಂಕುಲದ ಸಂರಕ್ಷಣೆ ‘ ಎಂಬ ಕೇಂದ್ರ ವಿಷಯದಡಿ ‘ವಿಶ್ವ ಪರಿಸರ ದಿನ’ದ ಅಂಗವಾಗಿ ಪ್ರೌಢಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ “ನಮ್ಮನಡೆ ಪರಿಸರದೆಡೆಗೆ” – “ಗೋ ಗ್ರೀನ್ ಅಭಿಯಾನ”ಕ್ಕೆ ಚಾಲನೆ ನೀಡಿ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಪರಿಸರದಲ್ಲಿ ಹೆಚ್ಚೆಚ್ಚು ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಗೆ ಪಣ ತೊಡಬೇಕು ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ , ಪರಿಸರದ…
ಕೊಚ್ಚಿ ಜೂ.13 : ಹಬ್ಬ, ನಾಗದೇವತೆ ಸೇರಿದಂತೆ ಅನೇಕ ಕನ್ನಡ ಚಿತ್ರಗಳಲ್ಲಿ ಖಳನಟನಾಗಿ ಮಿಂಚಿದ್ದ ಕಜಾನ್ ಖಾನ್ ಅವರು ಹೃದಯಾಘಾತದಿಂದ ಕೊಳೆಯುಸಿರೆಳೆದಿದ್ದಾರೆ. ಕಜಾನ್ ಖಾನ್, ನಿಧನದ ಸುದ್ದಿಯನ್ನು ಮಲಯಾಳಂ ಚಿತ್ರರಂಗದ ಖ್ಯಾತ ಪ್ರೊಡಕ್ಷನ್ ಕಂಟ್ರೋಲರ್ ಮತ್ತು ನಿರ್ಮಾಪಕ ಎನ್. ಎಂ ಬಾದುಷಾ ಅವರು ಅಧಿಕೃತವಾಗಿ ಖಚಿತಪಡಿಸಿದ್ದಾರೆ. ಕಜಾನ್ ಖಾನ್ ಅವರು ಪ್ರಧಾನವಾಗಿ ಖಳನಟನ ಪಾತ್ರಗಳಲ್ಲೇ ನಟಿಸುತ್ತಿದ್ದರು. 1993 ರಲ್ಲಿ ಮೋಹನ್ ಲಾಲ್ ಅವರ ‘ಗಂಧರ್ವಂ’ ಚಿತ್ರದ ಮೂಲಕ ಮಲಯಾಳಂ ಚಿತ್ರರಂಗವನ್ನು ಪ್ರವೇಶಿಸಿದರು. ಮಲಯಾಳಂ ನಟ ದಿಲೀಪ್ ಅಭಿನಯದ ‘ಸಿಐಡಿ ಮೂಸಾ’ ಚಿತ್ರದಲ್ಲಿನ ವಿಲನ್ ಪಾತ್ರಕ್ಕಾಗಿ ಕಜನ್ ಖಾನ್ ಬಹಳ ಮೆಚ್ಚುಗೆಯನ್ನು ಪಡೆದರು.
ಮಡಿಕೇರಿ ಜೂ.13 : ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಾಲ್ಕು ವರ್ಷಗಳ ಕಾಲ ಕುಲಪತಿಯಾಗಿ ಸಮರ್ಥ ಆಡಳಿತ ನೀಡಿ ನಿವೃತ್ತರಾದ ಪ್ರೊ. ಯಡಪಡಿತ್ತಾಯ ಅವರಿಗೆ ನಗರದ ಫೀಲ್ಡ್ ಮಾರ್ಪಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭ ಕಾಲೇಜಿನ ನಿವೃತ್ತ ಪ್ರಾಂಶುಪಾಲರ, ಮಾಜಿ ಸಿಂಡಿಕೇಟ್ ಸದಸ್ಯೆ ಡಾ. ಪಾರ್ವತಿ ಅಪ್ಪಯ್ಯ ಮಾತನಾಡಿ, ಪ್ರೊ. ಯಡಪಡಿತ್ತಾಯ ಅವರು ಅಧ್ಯಾಪಕರಾಗಿ, ಸಂಶೋಧಕರಾಗಿ, ಆಡಳಿತ ಅಧಿಕಾರಿಯಾಗಿ ಯಶಸ್ಸು ಸಾಧಿಸಿದರು. ಸಿಂಡಿಕೇಟ್ ಸಭೆಗಳನ್ನು ಅತ್ಯುತ್ತಮವಾಗಿ ನಿರ್ವಹಿಸುವ ಮೂಲಕ ಪ್ರತಿಯೊಂದು ಕಾರ್ಯಚಟುವಟಿಕೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಆ ಮೂಲಕ ಅದನ್ನು ಜಾರಿಗೆ ತರುತ್ತಿದ್ದರು. ನ್ಯಾಕ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರತಿಯೊಂದು ಪುಟಗಳನ್ನು ಓದಿ ಅದರಲ್ಲಿ ಇರುವ ತಪ್ಪು ಒಪ್ಪುಗಳನ್ನು ಗುರುತಿಸಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿಗೆ a+ ಶ್ರೇಣಿ ಬರುವಂತೆ ಮಾಡಿದ್ದರು. ಸರ್ವರನ್ನೂ ಸಮಾನವಾಗಿ ಕಾಣುತ್ತಿದ್ದರು ಇವರು ಕಾಲೇಜು ಅಧ್ಯಾಪಕರಿಗೂ ಅವರ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರೊಫೆಸರ್ ಗೆ ಪದೋನ್ನತಿಯನ್ನು ನೀಡಿದರು. ಕೊಡವ ಭಾಷೆಗೆ ಮಹತ್ವವನ್ನು ನೀಡುವ ಉದ್ದೇಶದಿಂದ ಕೊಡವ ಸ್ನಾತಕೋತ್ತರ ಪದವಿ, ಕೊಡವ ಭಾಷೆಯನ್ನು…
ಪೊನ್ನಂಪೇಟೆ ಜೂ.13 : ಕೊಡಗು ವಿಶ್ವ ವಿದ್ಯಾನಿಲಯದ ಸಮಾಜ ಕಾರ್ಯ ಅಧ್ಯಯನ ವಿಭಾಗದ ವತಿಯಿಂದ ಪೊನ್ನಂಪೇಟೆ ತಾಲೂಕಿನ ಕೋತೂರಿನ ವಾಲ್ಮೀಕಿ ಗಿರಿಜನ ಆಶ್ರಮ ಶಾಲೆಯಲ್ಲಿ ಕಳೆದ ಏಳು ದಿನಗಳಿಂದ ನಡೆದ ಗ್ರಾಮೀಣ ಅಧ್ಯಯನ ಶಿಬಿರ ಭಾನುವಾರ ಸಮಾರೋಪಗೊಂಡಿತು. ಕಾರ್ಯಕ್ರಮದಲ್ಲಿ ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಮಾತನಾಡಿ, ಜನರ ಸಾಮಾಜಿಕ ಸಮಸ್ಯೆಗಳನ್ನು ಬಗೆಯರಿಸುವ ಕೆಲಸ ಮಾಡುವುದೇ ಸಮಾಜ ಕಾರ್ಯ ಆಗಿದ್ದು, ವಿದ್ಯಾರ್ಥಿಗಳು ಗ್ರಾಮೀಣ ಶಿಬಿರದ ಅಧ್ಯಯನದ ಮೂಲಕ ಇಲ್ಲಿನ ಜನರ ಸಮಸ್ಯೆಗಳ ಬಗ್ಗೆ ಬೆಳಕುಚೆಲ್ಲಿ ಸರ್ಕಾರದ ಗಮನ ಸೆಳೆಯಬೇಕೆಂದು ಸಲಹೆ ನೀಡಿದರು. ಕೊಡಗು ಗುಡ್ಡಗಾಡು ಪ್ರದೇಶವಾಗಿದ್ದು, ಜಿಲ್ಲೆಯಲ್ಲಿ ಸಾಕಷ್ಟು ಸಮಸ್ಯೆಗಳಿದೆ. ಜಿಲ್ಲೆಯಲ್ಲಿ ಎಲ್ಲ ಜಾತಿ, ಜನಾಂಗದವರು ವಾಸಿಸುತ್ತಿದ್ದಾರೆ. ಹಾಡಿಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಜನಾಂಗದವರಿಗೆ ಮೂಲ ಸೌಲಭ್ಯ ಸೇರಿದಂತೆ ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಆದ್ದರಿಂದ ಈ ಬಗ್ಗೆ ವಿದ್ಯಾರ್ಥಿಗಳು ಅಧ್ಯಯನ ನಡೆಸಿ ಅದರ ಪರಿಹಾರ ಕಂಡುಕೊಳ್ಳುವಲ್ಲಿ ಮುಂದಾಗಬೇಕೆಂದು ಹೇಳಿದರು. ಸುಂಟಿಕೊಪ್ಪ ಸ್ವಸ್ಥ ವಿಶೇಷ ಶಾಲೆಯ ಮುರುಗೇಶ್ ಮಾತನಾಡಿ ಸಮಾಜ ಕಾರ್ಯ…
ಮಡಿಕೇರಿ ಜೂ.12 : ಮಡಿಕೇರಿ ಹೊರವಲಯದ ಉಡೋತ್ ಮೊಟ್ಟೆಯ ಪಪ್ಪೀಸ್ ಪ್ಲಾಂಟೇಷನ್ನಲ್ಲಿ ಸುಮಾರು 32 ಮೀಟರ್ ಉದ್ದದ 2 ಮೀಟರ್ ಅಗಲದ 78 ಅಡಿ ಎತ್ತರದಲ್ಲಿರುವ ಗ್ಲಾಸ್ ಸ್ಕೈ ವಾಕ್ ಬ್ರಿಡ್ಜ್ ಪ್ರವಾಸಿಗರ ಗಮನ ಸೆಳೆಯುತ್ತಿದೆ. ಸುಮಾರು 5 ಟನ್ ಭಾರ ಹೊರುವ ಸಾಮರ್ಥ್ಯ ಹೊಂದಿರುವ ಈ ಬ್ರಿಡ್ಜ್ನಲ್ಲಿ ಒಮ್ಮೆಗೆ 40-50 ಮಂದಿ ನಿಂತು ಪ್ರಕೃತಿಯ ಸೌಂದರ್ಯ ಸವಿಯಬಹುದು. ಇದು ಕರ್ನಾಟಕದ ಮೊದಲ ಉದ್ದದ ಗಾಜಿನ ಸೇತುವೆಯಾಗಿದೆ. ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಇಂದು ಆಕರ್ಷಕ ಸೇತುವೆಯನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಪೊನ್ನಣ್ಣ, ಕೊಡಗು ಪ್ರಕೃತಿ ದತ್ತವಾದ ಜಿಲ್ಲೆಯಾಗಿದೆ. ನಿಸರ್ಗಕ್ಕೆ ಧಕ್ಕೆಯಾಗದ ರೀತಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯಾಗಬೇಕು ಎಂದರು. ಈ ಅಪರೂಪದ ಯೋಜನೆಯಿಂದ ಜಿಲ್ಲೆಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಲಿದೆ. ಜೊತೆಗೆ ಅವಲಂಬಿತರಿಗೆ ಉದ್ಯೋಗವಕಾಶ ದೊರೆಯಲಿದೆ ಎಂದು ತಿಳಿಸಿದರು. ಗ್ರೀನ್ ಸಿಟಿ ಫೋರಂ ನ ಅಧ್ಯಕ್ಷ ಚೆಯ್ಯಂಡ ಸತ್ಯ, ಉದ್ಯಮಿ ಹೆಚ್.ಎಂ.ನಂದಕುಮಾರ್ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.
ಮಡಿಕೇರಿ ಜೂ.12 : ಮಡಿಕೇರಿ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು (Consumer’s interaction Meeting) ಸಭೆಯು ಜೂ.13 ರಂದು ಮಧ್ಯಾಹ್ನ 3 ರಿಂದ 04 ಗಂಟೆ ವರೆಗೆ ಮಡಿಕೇರಿ ಉಪ ವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಎಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮಡಿಕೇರಿ ಉಪ ವಿಭಾಗ (ಮಡಿಕೇರಿ ತಾಲ್ಲೂಕು) ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.






