ಮಡಿಕೇರಿ ಜೂ.12 : ಅಂಚೆ ಅದಾಲತ್ನ ಸಭೆಯು ಜೂ.30 ರಂದು ಬೆಳಗ್ಗೆ 11.30 ಗಂಟೆಗೆ ಕೊಡಗು ಅಂಚೆ ವಿಭಾಗದ ವಿಭಾಗೀಯ ಕಚೇರಿ ಸಿದ್ದಾಪುರ ರಸ್ತೆ ಅಶೋಕಪುರದಲ್ಲಿ ನಡೆಯಲಿದೆ. ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಅಂಚೆ ಸೇವೆಗೆ ಸಂಬಂಧಿಸಿದ ಎಲ್ಲಾ ತರಹದ ದೂರುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ. ದೂರುಗಳಿದ್ದಲ್ಲಿ `ಅಂಚೆ ಅದಾಲತ್’ ಎಂದು ಬರೆದು ಅಂಚೆ ಅಧೀಕ್ಷಕರು, ಕೊಡಗು ಅಂಚೆ ವಿಭಾಗ, ಮಡಿಕೇರಿ ಇವರಿಗೆ ಜೂ.28 ರೊಳಗೆ ತಲುಪುವಂತೆ ಕಳುಹಿಸಲು ಕೋರಿದೆ. ನಂತರ ಜೂ.30 ರಂದು ನಡೆಯುವ ಸಭೆಯಲ್ಲಿ ಭಾಗವಹಿಸಬಹುದು ಎಂದು ಕೊಡಗು ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಜೂ.12 : ಕೊಡಗು ಜಿಲ್ಲೆಯ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷರು ಮತು ಉಪಾಧ್ಯಕ್ಷರನ್ನು ನಿಗಧಿ ಪಡಿಸುವ ಸಭೆಯು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅಧ್ಯಕ್ಷತೆಯಲ್ಲಿ ಆಯಾಯ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಿತು. ಮೀಸಲಾತಿ ಸ್ಥಾನ ವಿವರ ಇಂತಿದೆ :: ವಿರಾಜಪೇಟೆ ತಾಲ್ಲೂಕು ಚೆಂಬೆಬೆಳ್ಳೂರು ಗ್ರಾ.ಪಂ.ಅಧ್ಯಕ್ಷ (ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ (ಪರಿಶಿಷ್ಟ ಪಂಗಡ), ಬಿಟ್ಟಂಗಾಲ ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ(ಎಸ್ಸಿ ಮಹಿಳೆ), ಬೇಟೋಳಿ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಪ್ರವರ್ಗ-ಎ ಮಹಿಳೆ), ಆರ್ಜಿ ಅಧ್ಯಕ್ಷ(ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ(ಎಸ್ಸಿ), ಕೆದಮುಳ್ಳೂರು ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ(ಸಾಮಾನ್ಯ), ಕಾಕೋಟುಪರಂಬು ಅಧ್ಯಕ್ಷ(ಸಾಮಾನ್ಯ ಮಹಿಳೆ), ಉಪಾಧ್ಯಕ್ಷ(ಸಾಮಾನ್ಯ), ಕದನೂರು ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ(ಸಾಮಾನ್ಯ ಮಹಿಳೆ), ಅಮ್ಮತ್ತಿ ಅಧ್ಯಕ್ಷ(ಸಾಮಾನ್ಯ ಮಹಿಳೆ), ಉಪಾಧ್ಯಕ್ಷ(ಎಸ್ಟಿ ಮಹಿಳೆ), ಕಾರ್ಮಾಡು ಅಧ್ಯಕ್ಷ (ಎಸ್ಟಿ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಬಿಳುಗುಂದ ಅಧ್ಯಕ್ಷ(ಸಾಮಾನ್ಯ ಮಹಿಳೆ), ಉಪಾಧ್ಯಕ್ಷ(ಪ್ರವರ್ಗ-ಎ ಮಹಿಳೆ), ಹೊಸೂರು ಅಧ್ಯಕ್ಷ (ಎಸ್ಸಿ), ಉಪಾಧ್ಯಕ್ಷ(ಸಾಮಾನ್ಯ ಮಹಿಳೆ), ಪಾಲಿಬೆಟ್ಟ ಅಧ್ಯಕ್ಷ (ಪ್ರವರ್ಗ-ಎ), ಉಪಾಧ್ಯಕ್ಷ(ಸಾಮಾನ್ಯ ಮಹಿಳೆ), ಕಣ್ಣಂಗಾಲ ಅಧ್ಯಕ್ಷ(ಸಾಮಾನ್ಯ ಮಹಿಳೆ), ಉಪಾಧ್ಯಕ್ಷ(ಪ್ರವರ್ಗ-ಎ), ಹಾಲುಗುಂದ ಅಧ್ಯಕ್ಷ (ಪ್ರವರ್ಗ-ಬಿ), ಉಪಾಧ್ಯಕ್ಷ(ಸಾಮಾನ್ಯ ಮಹಿಳೆ),…
ಮಡಿಕೇರಿ ಜೂ.12 ಜಿಲ್ಲೆಯಲ್ಲಿ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯುತ್ತಿರುವುದು ಕಂಡುಬಂದಲ್ಲಿ ಹತ್ತಿರದ ಶಾಲೆಗೆ ಸೇರಿಸುವಂತಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಡಿ.ಟಿ.ಪುಟ್ಟರಂಗಸ್ವಾಮಿ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪೊಲೀಸ್ ಇಲಾಖೆ, ವಕೀಲರ ಸಂಘ, ಚೈಲ್ಡ್ ಲೈನ್-1098 ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ಸೋಮವಾರ ನಡೆದ `ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಮಕ್ಕಳು ಕುಟುಂಬದ ಬಡತನದಿಂದ ಶಾಲೆಗೆ ಹೋಗದೇ ಜೀವನೋಪಾಯಕ್ಕಾಗಿ ಕೆಲಸ ಮಾಡುತ್ತಾರೆ. ಇದನ್ನು ತಪ್ಪಿಸುವ ಉದ್ದೇಶಕ್ಕಾಗಿ ಸರ್ಕಾರ 14 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುತ್ತಿದೆ. ಜೊತೆಗೆ ವಿದ್ಯಾರ್ಥಿ ನಿಲಯ ಸೌಲಭ್ಯವನ್ನು ಪಡೆದುಕೊಳ್ಳುವಂತಾಗಬೇಕು ಎಂದು…
ಕುಶಾಲನಗರ ಜೂ.12 : ಮಕ್ಕಳಿಗೆ ಅತ್ಯಗತ್ಯವಾದ ಗುಣಮಟ್ಟದ ಶಿಕ್ಷಣ ನೀಡುವುದು ಪೋಷಕರ ಕರ್ತವ್ಯ ಎಂದು ಅಲ್ ಬಿರ್ರ್ ಫ್ಯೂಚರ್ ಮಾಡೆಲ್ ಸ್ಕೂಲ್ ಮುಖ್ಯಸ್ಥ ಸಯ್ಯದ್ ಮುಹಮ್ಮದ್ ಕೋಯಾ ಜಮಲುಲ್ಲಯ್ಲಿ ತಂಜ್ಞಳ್ ಹೇಳಿದರು. ಕುಶಾಲನಗರದಲ್ಲಿ ನೂತನವಾಗಿ ಪ್ರಾರಂಭವಾಗುತ್ತಿರುವ ಅಲ್ ಬಿರ್ರ್ ಫ್ಯೂಚರ್ ಮಾಡೆಲ್ ಸ್ಕೂಲನ್ನು ಉದ್ಘಾಟಿಸಿ ಮಾತನಾಡಿದ ಅವರು, ಒಟ್ಟು 400ಕ್ಕೂ ಹೆಚ್ಚು ಅಲ್ ಬಿರ್ರ್ ಫ್ಯೂಚರ್ ಮಾಡೆಲ್ ಸ್ಕೂಲ್ ನಲ್ಲಿ 16 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ನಡೆಸುತ್ತಿದ್ದಾರೆ. ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುನೈಟೆಡ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಸಿ.ಎಂ.ಹಮೀದ್, ವಿದ್ಯೆಗೆ ಎಂದಿಗೂ ಬೆಲೆ ಕಟ್ಟಲಾಗುವುದಿಲ್ಲ. ವಿದ್ಯೆ ಬಲ್ಲವ ಎಲ್ಲವನ್ನೂ ಸಾಧಿಸಬಲ್ಲ. ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ನೀಡಬೇಕು. ಈ ಉದ್ದೇಶದಿಂದ ಜಿಲ್ಲೆಯಲ್ಲಿಯೇ ಪ್ರಥಮವಾಗಿ ಕುಶಾಲನಗರದಲ್ಲಿ ಅಲ್ ಬಿರ್ರ್ ಫ್ಯೂಚರ್ ಮಾಡೆಲ್ ಸ್ಕೂಲನ್ನು ತೆರೆಯಾಗಿದೆ ಎಂದರು. ಕೆ.ಪಿ.ಸಿ.ಸಿ ಸದಸ್ಯ ಮಂಜುನಾಥ್ ಗುಂಡೂರಾವ್ ಮಾತನಾಡಿ, ಅಲ್ಪಸಂಖ್ಯಾತರಲ್ಲಿ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುಲು ಹಿಂದೇಟು ಹಾಕುತ್ತಾರೆ. ಸಂವಿಧಾನವು ಶಿಕ್ಷಣದ…
ಮಡಿಕೇರಿ ಜೂ.12 : ಚೆಯ್ಯಂಡಾಣೆ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 13 ವರ್ಷಗಳ ಕಾಲ ಸೇವೆ ಸಲ್ಲಿಸಿ ಮಂಡ್ಯ ಜಿಲ್ಲೆಗೆ ಪದೋನ್ನತಿ ಹೊಂದಿ ವರ್ಗಾವಣೆಯಾದ ಪಾರ್ಮಸಿ ಅಧಿಕಾರಿ ಎಂ.ಟಿ.ಪ್ರಸನ್ನ ಕುಮಾರಿ ಅವರನ್ನು ಆರೋಗ್ಯ ಕೇಂದ್ರದ ವತಿಯಿಂದ ಬೀಳ್ಕೊಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಉತ್ತಪ್ಪ ಭರತ್, ಕೇಂದ್ರದಲ್ಲಿ ಉತ್ತಮ ಸೇವೆ ಸಲ್ಲಿಸಿ ಪದೋನ್ನತಿ ಹೊಂದಿ ವರ್ಗಾವಣೆಯಾದ ಪ್ರಸನ್ನ ಕುಮಾರಿ ಅವರ ಕಾರ್ಯ ವೈಖರಿಯನ್ನು ಶ್ಲಾಘೀಸಿ, ಮುಂದಿನ ಭವಿಷ್ಯ ಉಜ್ವಲವಾಗಲೆಂದು ಶುಭಹಾರೈಸಿದರು. ಪ್ರಯೋಗಾಲಯದ ತಂತ್ರಜ್ಞರಾದ ಲೀಲಾವತಿ ಮಾತನಾಡಿ, 13 ವರ್ಷಗಳ ಕಾಲ ಸೇವೆ ಸಲ್ಲಿಸಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿ ಕಿರಿಯ ಪ್ರಾಯದಲ್ಲಿಯೇ ಪದೋನ್ನತಿ ಹೊಂದಿ ವರ್ಗಾವಣೆಯಾಗುತ್ತಿರುವುದು ಸಂಸ ಎಂದರಲ್ಲದೇ ಹಳೆಯ ನೆನಪುಗಳನ್ನು ಮೆಲುಕು ಹಾಕಿದರು. ಆರೋಗ್ಯ ಕೇಂದ್ರದ ಕನಕಾವತಿ, ಮಂಜುಳಾ, ಸಿಎಚ್ಒ ಭವ್ಯ, ಆಶಾ ಕಾರ್ಯಕರ್ತೆ ಜಮುನಾ ಮಾತನಾಡಿ, ಶುಭ ಹಾರೈಸಿದರು. ಈ ಸಂದರ್ಭ ಪ್ರಾಥಮಿಕ ಆರೋಗ್ಯ ಕೇಂದ್ರದ ನಿವೃತ್ತ ಸುರಕ್ಷಣಾಧಿಕಾರಿ ಹೇಮಾವತಿ, ಆಶಾ ಕಾರ್ಯಕರ್ತೆಯರು ಹಾಗೂ…
ಮಡಿಕೇರಿ ಜೂ.12 : ಕರಿಕೆ ವ್ಯಾಪ್ತಿಯ ಪಚ್ಚೆಪಿಲಾವ್ ಅಂಗನವಾಡಿ ಕೇಂದ್ರದ ಮೇಲೆ ರಬ್ಬರ್ ಮರದ ಕೊಂಬೆ ಬಿದ್ದು ಭಾಗಶಹ ಹಾನಿಯಾಗಿದ್ದು, ¨ಭಾರಿ ಅನಾಹುತ ತಪ್ಪಿದೆ. ಗಾಳಿ ಮಳೆಯಿಂದಾಗಿ ಸುಮಾರು ಆರು ಸೀಟುಗಳು ತುಂಡಾಗಿ ಬಿದ್ದಿದೆ. ಸ್ಥಳಕ್ಕೆ ಗ್ರಾ.ಪಂ ಸದಸ್ಯ ಕೆ.ಎ.ನಾರಾಯಣ, ಗ್ರಾಮಸ್ಥರಾದ ಎ.ಎಸ್.ಶಿವನ್ ಮತ್ತು ಅಂಗನವಾಡಿ ಕಾರ್ಯಕರ್ತೆ ಉಷಾಲತಾ, ಸಹಾಯಕಿ ರೇಖಾ ಭೇಟಿ ನೀಡಿ ಮರಗಳ ಕೊಂಬೆಗಳನ್ನು ತೆರವುಗೊಳಿಸಲಾಗಿದೆ. ಮಳೆಗೆ ಮುಂಚಿತವಾಗಿ ಅಧಿಕಾರಿಗಳು ಕರಿಕೆ ಗ್ರಾಮದ ಎಲ್ಲಾ ಅಂಗನವಾಡಿಗಳಿಗೆ ಭೇಟಿ ನೀಡಿ ಕುಂದುಕೊರತೆಗಳ ಪರಿಶೀಲನೆ ನಡೆಸಬೇಕಾಗಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ವಿರಾಜಪೇಟೆ ಜೂ.12 : ನಗರೋತ್ಥಾನ ಯೋಜನೆಯ ವಿಶೇಷ ಅನುದಾನದಲ್ಲಿ ನಗರದ ವಿವಿಧೆಡೆ ನಿರ್ಮಾಣಗೊಂಡಿರುವ ಕಾಂಕ್ರಿಟ್ ರಸ್ತೆಯನ್ನು ಶಾಸಕರು ಲೋಕಾರ್ಪಣೆ ಮಾಡಿದರು. ನಗರೋತ್ಥಾನ ಅನುದಾನದಲ್ಲಿ ಸುಮಾರು 3 ಕೋಟಿ 69 ಲಕ್ಷ ರೂ. ಅನುದಾನದಲ್ಲಿ ವಿರಾಜಪೇಟೆ ನಗರದ ಡಿಸಿಲ್ವ ನಗರ, ವಿದ್ಯಾನಗರ ಮತ್ತು ಸುಭಾಷ್ ನಗರದಲ್ಲಿ ನಿರ್ಮಿಸಲಾಗಿರುವ ಕಾಂಕ್ರಿಟ್ ರಸ್ತೆಯನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಮತ್ತು ರಾಜ್ಯ ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಶಾಸಕ ಪೊನ್ನಣ್ಣ ವಿರಾಜಪೇಟೆ ನಗರವು ದಿನದಿಂದ ದಿನಕ್ಕೆ ಅಭಿವೃದ್ಧಿಹೊಂದುತ್ತಿದೆ. ನಗರದಲ್ಲಿ ರಸ್ತೆ, ಕುಡಿಯುವ ನೀರು, ಬೀದಿದೀಪ ಹೀಗೆ ಹಲವು ಸಮಸ್ಯೆಗಳಿದ್ದು, ಅವುಗಳ ನಿವಾರಣೆಗೆ ಶ್ರಮಿಸಲಾಗುವುದು. ಅಭಿವೃದ್ಧಿ ಕಾರ್ಯಗಳಲ್ಲಿ ಜನರ ಸಹಕಾರ ಅಗತ್ಯ ಎಂದರು. ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಜರನ್ನು ಒಂದಲ್ಲ ಒಂದು ಸಮಸ್ಯೆಯನ್ನು ಎದುರಿಸುತ್ತಿದ್ದು, ಎಲ್ಲಾ ಸೌಕರ್ಯಗಳನ್ನು ಜನರಿಗೆ ಒದಗಿಸುವುದು ಸರ್ಕಾರದ ಕೆಲಸ. ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಅನಿವಾರ್ಯವಾಗಿದೆ. ಮುಂದಿನ…
ಸುಂಟಿಕೊಪ್ಪ,ಜೂ.12: ಕೊಡಗಿಗೆ ಮುಂಗಾರು ಪ್ರವೇಶಿಸಿದ್ದು, ಭಾರೀ ಗಾಳಿ ಮಳೆಯಾಗುವ ಮೂನ್ಸೂಚನೆ ಹವಾಮಾನ ಇಲಾಖೆ ವರದಿ ನೀಡಿದ್ದು, ರಾಷ್ಟ್ರೀಯ ಹೆದ್ದಾರಿ ಬಳಿ ಬೃಹದಾಕಾರದ ಒಣಗಿದ ಮರಗಳು ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಚೆಸ್ಕಾಂ ಹಾಗೂ ಅರಣ್ಯ ಇಲಾಖೆ ಕಾರ್ಯಚರಣೆ ನಡೆಸಿ ತೆರವುಗೊಳಿಸುವಂತೆ ಜಿ.ಪಂ ಮಾಜಿ ಸದಸ್ಯ ಪಿ.ಎಂ.ಲತೀಫ್ ಹಾಗೂ ವಾಹನ ಚಾಲಕರು ಆಗ್ರಹಿಸಿದ್ದಾರೆ. ಸುಂಟಿಕೊಪ್ಪದಿಂದ ಮಡಿಕೇರಿಗೆ ತೆರಳುವ ರಾಷ್ಟ್ರೀಯ ಹೆದ್ದಾರಿ 275ರ ರಸ್ತೆ ಬದಿ ಒಣಗಿದ ಬೃಹದಾಕಾರದ ಮರಗಳು ವಾಹನ ಸವಾರರು ಹಾಗೂ ಪದಾಚಾರಿಗಳಿಗೆ ಸಂಚಕಾರ ಉಂಟು ಮಾಡುವ ಮೊದಲು ಮರಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿದರು. ಬೋಯಿಕೇರಿ, ಸಿಂಕೋನ, ಬಾಳೆಕಾಡು, ಕೆದಕಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆಗಾಲದಲ್ಲಿ ವಾಹನಗಳ ಮೇಲೆ ಮರ ಬಿದ್ದು ಸಾವು ನೋವು ಸಂಭವಿಸಿದ ಪ್ರಕರಣಗಳು ನಡೆದಿವೆ. ಇಂಥಹ ಘಟನೆಗಳು ಮತ್ತೆ ಮರುಕಳಿಸದಂತೆ ರಸ್ತೆ ಬದಿಗೆ ಬಾಗಿ ನಿಂತ ಮರಗಳನ್ನು ಮುಂಗಾರಿನ ವೇಳೆ ಕಡಿದು ತೆರವುಗೊಳಿಸುವಂತೆ ಪಿ.ಎಂ.ಲತೀಫ್ ಮನವಿ ಮಾಡಿದರು.
ವಿರಾಜಪೇಟೆ ಜೂ.12 : ಅವೈಜ್ಞಾನಿಕವಾದ ಆಹಾರ ಪದ್ಧತಿ, ಒತ್ತಡದ ಕೆಲಸ ಕಾರ್ಯಗಳಿಂದ ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾಗಬಹುದು. ಯಾವುದೇ ಕಾಯಿಲೆಯನ್ನು ಅಸಡ್ಡೆ ಮಾಡದೆ ಚಿಕಿತ್ಸಾ ಕ್ರಮಗಳನ್ನು ಅನುಸರಿಸಬೇಕು ಎಂದು ಹಿಲ್ ಬ್ಲೂಮ್ಸ್ ಕ್ಲಿನಿಕ್ನ ವೈದ್ಯರಾದ ಡಾ. ಕಿರಣ್ ತಿಳಿಸಿದರು. ನಗರದ ಶ್ರೀ ಮುತ್ತಪ್ಪನ್ ಓಣಂ ಆಚರಣಾ ಸಮಿತಿ ಮತ್ತು ಹಿಲ್ ಬ್ಲೂಮ್ಸ್ ಕ್ಲಿನಿಕ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ನಗರದ ಶ್ರೀ ಮುತ್ತಪ್ಪ ಕಲಾ ಮಂಟಪದಲ್ಲಿ ಆಯೋಜಿಸಲಾಗಿದ್ದ ಉಚಿತ ಹೃದಯ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದರು. ಹೃದಯ ಸಂಬಂಧಿತ ಕಾಯಿಲೆಗಳನ್ನು ಮೊದಲೆ ಗುರುತಿಸುವುದು ಮುಖ್ಯ. ಯಾವುದೇ ಸಂದರ್ಭದಲ್ಲಿ ಉದಾಸೀನ ಮಾಡದೆ ಚಿಕಿತ್ಸೆಗೆ ಮುಂದಾಗಬೇಕು. ಕಾಲಹರಣ ಮಾಡಿದಲ್ಲಿ ಅನಾಹುತ ಸಂಭವಿಸುವುದು ಶತಃಸಿದ್ಧವೆಂದು ತಿಳಿಸಿ, ಸರ್ವರು ಆರೋಗ್ಯದತ್ತ ಗಮನಹರಿಸಿ ಎಂದು ಹೇಳಿದರು. ಶ್ರೀ ಮುತ್ತಪ್ಪನ್ ಓಣಂ ಆಚರಣಾ ಸಮಿತಿಯ ಅಧ್ಯಕ್ಷ ಸುಮೇಶ್ ಪಿ.ಜಿ. ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಿತಿಯು ಕಲೆ ಮತ್ತು ಸಂಸ್ಕೃತಿಗೆ ಮಾತ್ರ ಸೀಮಿತವಾಗದೆ ಜನಪರ ಕಾಳಜಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ. ಈ…
ವಿರಾಜಪೇಟೆ ಜೂ.12 : ದೇಶದ ಇತಿಹಾಸದಲ್ಲೇ ಸರಕಾರ ರಚನೆಯಾಗಿ 21 ದಿನಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಗೊಳಿಸಿ ಕಾಂಗ್ರೆಸ್ ಸರಕಾರ ನುಡಿದಂತೆ ನಡೆದಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗದ ಮೂಲಕ ವಿರಾಜಪೇಟೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ನಡೆದ ಕರ್ನಾಟಕ ಸರಕಾರದ ಶಕ್ತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಪೊನ್ನಣ್ಣ, ಮಹಿಳೆಯರಿಗೆ ಉಚಿತವಾಗಿ ರಾಜ್ಯದಾದ್ಯಂತ ಪ್ರಯಾಣ ಮಾಡಲು ರಾಜ್ಯದಲ್ಲಿ ಏಕಕಾಲಕ್ಕೆ ಶಕ್ತಿ ಯೋಜನೆಗೆ ಚಾಲನೆ ನೀಡಲಾಗಿದೆ. ಚುನಾವಣೆಗೂ ಮುನ್ನ ಕೊಟ್ಟಂತಹ ಎಲ್ಲಾ ಆಶ್ವಾಸನೆಗಳನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ. ಐದು ಗ್ಯಾರಂಟಿಗಳಲ್ಲಿ ಮೊದಲನೆ ಗ್ಯಾರಂಟಿ ಫಲಿಸಿದೆ ಎಂದರು. ಮಹಿಳೆಯರನ್ನು ಬಲಪಡಿಸುವುದು, ಸದೃಢಗೊಳಿಸುವುದು ಸಂವಿಧಾನದ ಆಶಯ. ಈ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವರು ಈ ಯೋಜನೆ ಜಾರಿಗೆ ತಂದಿದ್ದಾರೆ. ಇದು ಎಲ್ಲಾ ಮಹಿಳೆಯರಿಗೆ ಸದುಪಯೋಗವಾಗಲಿ, ನಾಡಿನ ಜನತೆಗೆ ಒಳಿತಾಗಲಿ ಎಂದು ಹಾರೈಸಿದರು. ವಿರಾಜಪೇಟೆ ಪ.ಪಂ ಆಡಳಿತ ಅಧಿಕಾರಿ, ಸಹಾಯಕ ಆಯುಕ್ತ ಉತೀಶ್…






