ಲೇಖಕ: admin

ವಿರಾಜಪೇಟೆ ಜೂ.10 : ವಿರಾಜಪೇಟೆ ಕೊಡವ ಪೊಮ್ಮಕ್ಕಡ ಒಕ್ಕೂಟದ ವತಿಯಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು ಸನ್ಮಾನಿಸಲಾಯಿತು. ವಿರಾಜಪೇಟೆ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕಾರ್ಯದರ್ಶಿ ಬಯವಂಡ ಇಂದಿರಾ ಬೆಳ್ಳಿಯಪ್ಪ ತಪ್ಪಡಕ ಕಟ್ಟುವುದರೊಂದಿಗೆ ಉದ್ಘಾಟಿಸಿದರು. ನಂತರ ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಣಿ ಮಾಚಯ್ಯ, ಎಲ್ಲರೂ ಪರಸ್ಪರ ಒಗ್ಗಟ್ಟು, ಹೊಂದಾಣಿಕೆಯೊಂದಿಗೆ ಜೀವನ ಸಾಗಿಸಬೇಕು ಹಾಗೂ ಜೀವಿತಾವಧಿಯಲ್ಲಿ ಆದಷ್ಟು ಸಮಾಜಮುಖಿ ಕಾರ್ಯದಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವುದರ ಮೂಲಕ ಸಮಾಜಕ್ಕೆ ಮಾದರಿಯಾಗಿ ಬದುಕನ್ನು ಅರ್ಥ ಪೂರ್ಣಗೊಳಿಸಬೇಕೆಂದು ಕಿವಿಮಾತು ಹೇಳಿದರು. ತಾನು ಜಾನಪದ ಕಲಾ ಪ್ರಕಾರವಾದ ಉಮ್ಮತಾಟ್ ಕಲಾ ಪ್ರಕಾರವನ್ನು ವಿಶ್ವದೆಲ್ಲೆಡೆ ಪಸರಿಸುವ ಕೆಲಸ ನಿರಂತರವಾಗಿ ಮಾಡಲಿದ್ದೇನೆ ಎಂದು ನುಡಿದರು. ಉಮ್ಮತ್ತಾಟ್ ಕಲಾ ತಂಡವನ್ನು ಕಟ್ಟಿಕೊಂಡು ಮಕ್ಕಳಿಗೆ ಕಲೆಯನ್ನು ಕಲಿಸಿ ದೇಶದೆಲ್ಲೆಡೆ ಕರೆದುಕೊಂಡು ಹೋಗಿ ಅನೇಕ ಬಾರಿ ನೃತ್ಯ ಪ್ರಕಾರಗಳನ್ನು ಪ್ರಸ್ತುತಪಡಿಸಿದ್ದೇನೆ. ಸರಕಾರ ನನ್ನನ್ನು ಗುರುತಿಸಿ ಪ್ರಶಸ್ತಿ ನೀಡಿರುವುದಕ್ಕೆ ಹೆಮ್ಮೆ ಎನಿಸುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು. ಕೊಡವ ಪೊಮ್ಮಕ್ಕಡ ಒಕ್ಕೂಟದ ಅಧ್ಯಕ್ಷೆ…

Read More

ಮಡಿಕೇರಿ ಜೂ.10 : ಕೊಡಗು ವಿಶ್ವ ವಿದ್ಯಾಲಯದ ಸಮಾಜ ಕಾರ್ಯ ಅಧ್ಯಯನ ವಿಭಾಗದ ವತಿಯಿಂದ ಪೊನ್ನಂಪೇಟೆ ತಾಲೂಕಿನ ಕೋತೂರು ಆಶ್ರಮ ಶಾಲೆಯಲ್ಲಿ ಹಮ್ಮಿಕೊಂಡಿರುವ ಗ್ರಾಮೀಣ ಅಧ್ಯಯನ ಶಿಬಿರದ ನಾಲ್ಕನೇ ದಿನ ವಿರಾಜಪೇಟೆಯ ಕೊಡಗು ದಂತ ಮಹಾ ವಿದ್ಯಾಲಯದ ಸಹಯೋಗದಲ್ಲಿ ದಂತ ಉಚಿತ ತಪಾಸಣೆ ಶಿಬಿರ  ನಡೆಯಿತು. ಬೊಮ್ಮಾಡು ಹಾಡಿಯ ನಿವಾಸಿಗಳಿಗೆ ಹಾಗೂ ಕೋತೂರು ವಾಲ್ಮೀಕಿ ಗಿರಿಜನ ಆಶ್ರಮ ಶಾಲೆಯ ವಿದ್ಯಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡರು. ಕಾರ್ಯಕ್ರಮವನ್ನು ಸಿಗ್ಮಾ ನೆಟ್ ವರ್ಕ್ ನ ಸಂಸ್ಥಾಪಕರು, ಉದ್ಯಮಿ ಹಾಗೂ ಜಿಲ್ಲೆಯ ಯುವ ಮುಖಂಡರೂ ಚರಣ್ ಪೂಣಚ್ಚ ಉದ್ಘಾಟಿಸಿ ಮಾತನಾಡಿ “ಉತ್ತಮ ಆರೋಗ್ಯ ಮತ್ತು ಶಿಕ್ಷಣ ಎರಡೂ ಜೀವನದ ಎರಡು ಪ್ರಮುಖ ಅಗತ್ಯಗಳಾಗಿದೆ. ಶಿಕ್ಷಣ ಇದ್ದರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ಉತ್ತಮ ಆರೋಗ್ಯ ಇದ್ದರೆ ಮಾತ್ರ ಶಿಕ್ಷಣ ಪಡೆಯಬಹುದು. ಹಾಗಾಗಿ ಇವೆರಡೂ ಪರಸ್ಪರ ಅವಲಂಬಿತವಾಗಿದ್ದು, ಈ ಎರಡೂ ಅಂಶಗಳಿಂದ ವಂಚಿತ ಸಮುದಾಯಕ್ಕೆ ಇಂತಹ ಶಿಬಿರಗಳು ಅಗತ್ಯವಿದೆ. ಪ್ರತಿಯೊಬ್ಬ ವ್ಯಕ್ತಿಗೂ ಶಿಕ್ಷಣ ಮತ್ತು ಆರೋಗ್ಯ ನೀಡಿದರೆ ಮಾತ್ರ ದೇಶದ…

Read More

ಮಡಿಕೇರಿ ಜೂ.9 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿಯನ್ನು ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು. ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ನೂತನವಾಗಿ ಆರಂಭವಾಗಿರುವ ಕಚೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಮಾತನಾಡಿದ ಮಂತರ್ ಗೌಡ, ತಮ್ಮ ಕ್ಷೇತ್ರದ ಜನರು ತಮ್ಮ ಯಾವುದೇ ಕೆಲಸ ಕಾರ್ಯ, ಸಮಸ್ಯೆಗಳು ಇದ್ದರೂ ಇಲ್ಲಿಗೆ ಭೇಟಿ ನೀಡಿ ಬಗೆಹರಿಸಿಕೊಳ್ಳಬಹುದಾಗಿದೆ ಎಂದರು. ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ, ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್, ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ.ರಾಜೇಶ್, ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ, ಕೆಪಿಸಿಸಿ ಸದಸ್ಯರಾದ ಮಂಜುನಾಥ್ ಗುಂಡೂರಾವ್, ಪ್ರಮುಖರಾದ ನಂದಕುಮಾರ್, ಯಾಕೂಬ್, ಪಕ್ಷದ ಎಸ್. ಎಂ. ಚಂಗಪ್ಪ, ಪುಲಿಯಂಡ ಜಗದೀಶ್, ಸುಜು ತಿಮ್ಮಯ್ಯ ಸೇರಿದಂತೆ ಮತ್ತಿರರು ಹಾಜರಿದ್ದರು.

Read More

ಮಡಿಕೇರಿ ಜೂ.9 : ಕೊಡಗು ಜಿಲ್ಲೆಯಲ್ಲಿ ಜೂ.12 ರಿಂದ 19 ರವರೆಗೆ ನಡೆಯುವ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ, ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಪ್ರೌಢ ಶಾಲೆ, ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢ ಶಾಲಾ ವಿಭಾಗ ಮತ್ತು ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಈ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಆದೇಶಿಸಿದ್ದಾರೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಉಪಕರಣಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ,…

Read More

ಮಡಿಕೇರಿ ಜೂ.9 : ಮಡಿಕೇರಿ 66/11ಕೆವಿ, ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್6 ಭಾಗಮಂಡಲ ಫೀಡರ್‍ನಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಜೂ.10 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಅಪ್ಪಂಗಳ, ಬೆಟ್ಟಗೇರಿ, ಕಾರುಗುಂದ, ಚೇರಂಬಾಣೆ, ಭಾಗಮಂಡಲ, ತಲಕಾವೇರಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.

Read More

ಮಡಿಕೇರಿ ಜೂ.9 : 2022-23ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢ ಶಿಕ್ಷಕರು/ ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ಹೆಚ್ಚುವರಿ ಕೌನ್ಸಿಲಿಂಗ್ ಪ್ರಕ್ರಿಯೆ ಪ್ರಾರಂಭಿಸಲಾಗಿದ್ದು, ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ 2022-23ನೇ ಸಾಲಿನ ವರ್ಗಾವಣೆ ಸಂಬಂಧ ಪರಿಷ್ಕೃತ ವರ್ಗಾವಣಾ ವೇಳಾ ಪಟ್ಟಿ ಬಿಡುಗಡೆ ಮಾಡಲಾಗಿದೆ. ಪ್ರಥಮ ಹಂತದಲ್ಲಿ ಹೆಚ್ಚುವರಿ ಶಿಕ್ಷಕರ ಪಟ್ಟಿಯನ್ನು ಇಲಾಖಾ ವೆಬ್‍ಸೈಟ್‍ನಲ್ಲಿ ಮತ್ತು ಸಂಬಂಧಿಸಿದ ಬ್ಲಾಕ್‍ಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಸಂಬಂಧಿಸಿದ ಶಿಕ್ಷಕರು ಪ್ರಕಟಿಸಿರುವ ಪಟ್ಟಿ ಪರಿಶೀಲಿಸಿಕೊಂಡು ಆಕ್ಷೇಪಣೆಗಳಿದ್ದಲ್ಲಿ ಜೂ.10 ರೊಳಗೆ ಆನ್‍ಲೈನ್ ಮೂಲಕ ಆಯಾಯ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Read More

ಮಡಿಕೇರಿ ಜೂ.9 : ಕೊಡಗು ಕೇಂದ್ರೀಯ ವಿದ್ಯಾಲಯ ವತಿಯಿಂದ ವರ್ಚುವಲ್ ಮೋಡ್‍ನಲ್ಲಿ `ಸಾಕ್ಷರತೆ ಮತ್ತು ಸಂಖ್ಯಾಶಾಸ್ತ್ರವನ್ನು ಖಚಿತಪಡಿಸಿಕೊಳ್ಳುವ ಸಂಬಂಧ’ ಜಿಲ್ಲಾ ಮಟ್ಟದ ಕಾರ್ಯಾಗಾರವು ಜೂ.13 ರಂದು ಮಧ್ಯಾಹ್ನ 3 ಗಂಟೆಗೆ ಕೇಂದ್ರೀಯ ವಿದ್ಯಾಲಯದಲ್ಲಿ ನಡೆಯಲಿದೆ ಎಂದು ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.

Read More

ಮಡಿಕೇರಿ ಜೂ.9 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪೊಲೀಸ್ ಇಲಾಖೆ, ವಕೀಲರ ಸಂಘ, ಚೈಲ್ಡ್ ಲೈನ್-1098 ಇವರ ಸಂಯುಕ್ತ ಆಶ್ರಯದಲ್ಲಿ ಜೂ.12 ರಂದು ಬೆಳಗ್ಗೆ 10.15 ಗಂಟೆಗೆ ನಗರದ ಸರ್ಕಾರಿ ಪ್ರೌಢ ಶಾಲಾ ಸಭಾಂಗಣದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ ಕಾರ್ಯಕ್ರಮ ನಡೆಯಲಿದೆ. ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಡಿ.ಟಿ.ಪುಟ್ಟರಂಗಸ್ವಾಮಿ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ, ಸಮಾಜ…

Read More

ಮಡಿಕೇರಿ ಜೂ.9 : ನರೇಗಾ ಕಾರ್ಮಿಕರಿಗೆ ಸ್ಥಳದಲ್ಲೇ ಆರೋಗ್ಯ ಖಾತ್ರಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೆಎಚ್‍ಪಿಟಿ ಸಂಸ್ಥೆ ಸಹಯೋಗದೊಂದಿಗೆ ಅನುಷ್ಠಾನಗೊಳಿಸುತ್ತಿರುವ `ಗ್ರಾಮ ಪಂಚಾಯಿತಿ ಆರೋಗ್ಯ ಅಮೃತ ಅಭಿಯಾನವು ಈಗಾಗಲೇ ಆರಂಭವಾಗಿದ್ದು, ಜೂನ್ 22 ರವರೆಗೆ ನಡೆಯಲಿದೆ. ಈಗಾಗಲೇ ಆರೋಗ್ಯ ಶಿಬಿರದ ಮೂಲಕ, ಗ್ರಾಮ ಪಂಚಾಯತಿಯ ನೇತೃತ್ವದಲ್ಲಿ ಯಶಸ್ವಿಯಾಗಿ ಜನರನ್ನು ತಲುಪುತ್ತಿದೆ. ಗ್ರಾಮೀಣ ಮಟ್ಟದ ಜನರ ಆರೋಗ್ಯವನ್ನು ಕಾಪಾಡುವುದು, ಹಾಗೂ ಸುಲಭವಾಗಿ ಆರೋಗ್ಯ ಸೇವೆಯನ್ನು ಪಡೆಯುವ ಉದ್ದೇಶವನ್ನು ಈ ಯೋಜನೆಯು ಹೊಂದಿದೆ. ಅದರ ಸಲುವಾಗಿ ಆಶಾ ಕಾರ್ಯಕರ್ತರಿಗೂ ತರಬೇತಿ ನೀಡಲಾಗಿದೆ. ಗ್ರಾ.ಪಂ ಕಚೇರಿ ಅಥವಾ ಹೆಚ್ಚು ಜನರು ಸೇರುವ ಪ್ರದೇಶದಲ್ಲಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಲಾಗುತ್ತಿದ್ದು, ವಯಸ್ಕರಿಂದ ವೃದ್ಧರವರೆಗೂ ಉಚಿತ ತಪಾಸಣೆಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಇದುವರೆಗೆ 57 ಗ್ರಾ.ಪಂ ಗಳಲ್ಲಿ ಶಿಬಿರ ಆಯೋಜನೆ ಮಾಡಿದ್ದು, ಸುಮಾರು 5495 ರಷ್ಟು ಜನರು ಆರೋಗ್ಯ ತಪಾಸಣೆಯನ್ನು ಮಾಡಿಕೊಂಡಿದ್ದಾರೆ. ಆರೋಗ್ಯ ಕಿಟ್ ವಿತರಣೆ ತಪಾಸಣೆ…

Read More

ಮಡಿಕೇರಿ ಜೂ.9 : ಭಾಷೆಯ ಬದಲಾವಣೆಯು ಸಹಜ ಪ್ರಕ್ರಿಯೆ. ಕನ್ನಡ ಭಾಷೆಯ ಉಳಿವಿಗೆ ಪ್ರಾಚೀನತೆ ಹಾಗೂ ದಾಖಲೆಗಳು ಕಾರಣವಾಗಿದೆ ಎಂದು ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಮುರಿಗೆಪ್ಪ ತಿಳಿಸಿದರು. ಕೊಡಗು ವಿಶ್ವ ವಿದ್ಯಾನಿಲಯ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಆದಿಪುರಾಣವು ಧರ್ಮಕ್ಕೆ ಸಂಬಂಧಿಸಿದಂತೆ ಹಲವಾರು ವಿಷಯಗಳನ್ನು ತಿಳಿಸುತ್ತದೆ. ಪಂಪ, ರನ್ನ, ಪೊನ್ನ ನಮ್ಮ ಪರಂಪರೆಯನ್ನು ಮುಂದುವರೆಸಿಕೊಂಡು ಬರುತ್ತಾರೆ. ಪಂಪನು ತನ್ನ ಕಾವ್ಯಗಳಲ್ಲಿ ಬರುವ ಪುರಾಣ ಇತಿಹಾಸವನ್ನು ತಿಳಿಸಿದ್ದಾರೆ. ರಾಜ್ಯ ಸತ್ಯ, ಧರ್ಮ ಸತ್ಯ, ಕಾಲ ಸತ್ಯ ಮೌಲ್ಯವನ್ನು ತಿಳಿಸುತ್ತದೆ. ದೀರ್ಘಕಾಲದ ಇತಿಹಾಸವಿರುವ ಹಳೆಗನ್ನಡದ ಸೊಬಗನ್ನು ಗದುಗಿನ ವೀರನಾರಾಯಣ ಕೃತಿಯನ್ನು ದೇವಸ್ಥಾನದಲ್ಲಿ ಕುಳಿತು ರಚಿಸಲಾಗಿದೆ. ಇದು ನಮ್ಮ ಕನ್ನಡದ ಹಿರಿಮೆಯನ್ನು ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು. ವಚನ ಪರಂಪರೆಯು ಸೀಮಿತವಾದುದಲ್ಲ ಒಂದು ದೀರ್ಘತೆಯುಳ್ಳ ಕ್ರಿಯೆ ಈ ಕ್ರಿಯೆಗಳಿಂದಲೇ ಮಾನವನ ಏಳಿಗೆ ಸಾಧ್ಯವಾಗುತ್ತದೆ.…

Read More