ಲೇಖಕ: admin

ಮಡಿಕೇರಿ ಜೂ.9 : ಮಳೆಗಾಲದ ಅವಧಿಯಲ್ಲಿ ಪ್ರವಾಹ, ಭೂ ಕುಸಿತ ಉಂಟಾದಲ್ಲಿ ಕೂಡಲೇ ಘಟನಾ ಸ್ಥಳಕ್ಕೆ ಹೋಗಬೇಕು. ಗಾಳಿ, ಮಳೆಯಿಂದಾಗಿ ಗಿಡ-ಮರಗಳು ವಿದ್ಯುತ್ ತಂತಿಗಳ ಮೇಲೆ ಉರುಳಿ ವಿದ್ಯುತ್ ಕಡಿತ, ಕುಡಿಯುವ ನೀರಿಗೆ ತೊಂದರೆಯಂತಹ ಸಮಸ್ಯೆಗಳಿಗೆ ಕಂದಾಯ, ಸೆಸ್ಕಾಂ, ಅರಣ್ಯ, ಲೋಕೋಪಯೋಗಿ, ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆಗಳು ಸಮನ್ವಯತೆಯಿಂದ ಕೂಡಲೇ ಸ್ಪಂದಿಸಿ, ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಡಾ.ಮಂತರ್ ಗೌಡ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮುಂಗಾರು ಅವಧಿಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಳಜಿ ಕೇಂದ್ರಗಳಲ್ಲಿ ಸೂಕ್ತ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತಾಗಬೇಕು. ಕಾಳಜಿ ಕೇಂದ್ರಕ್ಕೆ ಬರುವ ಜನರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು. ಕುಡಿಯುವ ನೀರು ಸಮರ್ಪಕವಾಗಿ ಸರಬರಾಜು ಮಾಡಬೇಕು ಎಂದು ಶಾಸಕರು ಹೇಳಿದರು. ಕಾಳಜಿ ಕೇಂದ್ರಕ್ಕೆ ಬರುವ ಜನರಿಗೆ ಮಾನಸಿಕ ಧೈರ್ಯ ತುಂಬಲು ಆರೋಗ್ಯ ಇಲಾಖೆ ವತಿಯಿಂದ ಆಪ್ತ ಸಮಾಲೋಚಕರನ್ನು ನಿಯೋಜಿಸಬೇಕು…

Read More

ಮಡಿಕೇರಿ ಜೂ.9 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಬೇಡಿಕೆಯಂತೆ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗವಾಗಿರುವ ಕೊಡಗು ಜಿಲ್ಲೆಯ ಬುಡಕಟ್ಟು ಜನಾಂಗ ಕೊಡವರಿಗೆ ವಿಶೇಷ ಸ್ಥಾನಮಾನ ಕಲ್ಪಿಸಲು ಸರ್ಕಾರ ಆಯೋಗವೊಂದನ್ನು ರಚಿಸಬೇಕೆಂದು ಒತ್ತಾಯಿಸಿ ಅರ್ಥಶಾಸ್ತ್ರಜ್ಞ ಹಾಗೂ ಕೇಂದ್ರದ ಮಾಜಿ ಸಚಿವ ಡಾ.ಸುಬ್ರಮಣ್ಯನ್ ಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಕೊಡವ ಸ್ವಾಯತ್ತ ನಾಡಿನ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಈಗಾಗಲೇ ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿರುವ ಅವರು ಇದೇ ಜೂ.14 ರಂದು ಅರ್ಜಿ ವಿಚಾರಣೆಯ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಪತ್ರದಲ್ಲಿ ಕೊಡವರ ಬೇಡಿಕೆಗಳ ಕುರಿತು ಉಲ್ಲೇಖಿಸಿರುವ ಡಾ.ಸುಬ್ರಮಣ್ಯನ್ ಸ್ವಾಮಿ ಕೊಡವರಿಗೆ ಕರ್ನಾಟಕ ರಾಜ್ಯದಲ್ಲಿ ವಿಶೇಷ ಸ್ಥಾನಮಾನ ಒದಗಿಸುವ ನಿಟ್ಟಿನಲ್ಲಿ ಸರ್ಕಾರಿ ಆಯೋಗವೊಂದನ್ನು ರಚಿಸುವ ತುರ್ತು ಅಗತ್ಯತೆ ಇದೆ ಎಂದು ತಿಳಿಸಿದ್ದಾರೆ. ಕೂರ್ಗ್ ಪ್ರದೇಶವು 1950 ಮತ್ತು 1956 ರ ನಡುವೆ ವಿಧಾನಸಭೆ, ಮುಖ್ಯಮಂತ್ರಿ, ಚುನಾಯಿತ ಲೋಕಸಭಾ ಸಂಸದ ಹಾಗೂ ರಾಜ್ಯಸಭಾ ಸಂಸದರನ್ನು ಹೊಂದಿರುವ ರಾಜ್ಯವಾಗಿತ್ತು. 1957…

Read More

ಮಡಿಕೇರಿ ಜೂ.9 : ವಿವಿಧ ಇಲಾಖೆಗಳಿಂದ ಪೂರ್ಣಗೊಂಡ ಕಾಮಗಾರಿಗಳ ಗುತ್ತಿಗೆದಾರರಿಗೆ ಹಾಗೂ ಎನ್‍ಡಿಆರ್‍ಎಫ್ ಯೋಜನೆಯ ಪೂರ್ಣಗೊಂಡ ಕಾಮಗಾರಿಗಳಿಗೆ ಹಣ ಪಾವತಿ ಮಾಡುವಂತೆ ಕೊಡಗು ಜಿಲ್ಲಾ ಲೋಕೋಪಯೋಗಿ ಗುತ್ತಿಗೆದಾರರ ಸಂಘ ಮನವಿ ಮಾಡಿದೆ. ಸಂಘದ ಜಿಲ್ಲಾಧ್ಯಕ್ಷ ಕೆ.ಎ.ರವಿ ಚಂಗಪ್ಪ ಅವರ ನೇತೃತ್ವದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಅವರಿಗೆ ಮನವಿ ಸಲ್ಲಿಸಿದ ಸಂಘದ ಪ್ರಮುಖರು ಹಾಗೂ ಗುತ್ತಿಗೆದಾರರು, ಪೂರ್ಣಗೊಂಡ ಕಾಮಗಾರಿಗಳಿಗೆ ಹಣ ಬಿಡುಗಡೆಯಾಗದಿರುವ ಬಗ್ಗೆ ಗಮನ ಸೆಳೆದರು. ವಿವಿಧ ಲೆಕ್ಕ ಶೀರ್ಷಿಕೆಯಡಿ ಪೂರ್ಣಗೊಂಡ ಕಾಮಗಾರಿಗಳಿಗೆ ಪಂಚಾಯತ್ ರಾಜ್ ಇಲಾಖೆಯಲ್ಲಿ ಅಂದಾಜು ರೂ.40 ಕೋಟಿ ಲೋಕೋಪಯೋಗಿ ಇಲಾಖೆಯಲ್ಲಿ ರೂ.93 ಕೋಟಿ ಹಾಗೂ ಸಣ್ಣ ನೀರಾವರಿ ಇಲಾಖೆಯಲ್ಲಿ 30 ಕೋಟಿ ರೂ. ಗುತ್ತಿಗೆದಾರರಿಗೆ ಪಾವತಿ ಮಾಡಲು ಬಾಕಿ ಇದ್ದು, ಗುತ್ತಿಗೆದಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ತುರ್ತು ಕಾಮಗಾರಿ ನಿರ್ವಹಿಸಲು ಗುತ್ತಿಗೆದಾರರು ಅಸಹಾಯಕರಾಗಿದ್ದು, ತಕ್ಷಣ ಹಣ ಪಾವತಿಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು. ಈ ಸಂದರ್ಭ ಸಂಘದ ಜಿಲ್ಲಾ…

Read More

ಮಡಿಕೇರಿ ಜೂ.9 : ಮಡಿಕೇರಿ ಕ್ಷೇತ್ರದ ನೂತನ ಶಾಸಕ ಡಾ.ಮಂತರ್ ಗೌಡ ಅವರನ್ನುಕೊಡಗು ಜಿಲ್ಲಾ ಬಂಟರ ಸಂಘದ ವತಿಯಿಂದ ಸನ್ಮಾನಿಸಿ ಶುಭ ಹಾರೈಸಲಾಯಿತು. ಜಿಲ್ಲಾ ಪಂಚಾಯಿತಿ ಕಟ್ಟಡದಲ್ಲಿನ ಶಾಸಕರ ಕಚೇರಿಯಲ್ಲಿ ಭೇಟಿಯಾದ ಸಂಘದ ಪದಾಧಿಕಾರಿಗಳು ಶಾಸಕರನ್ನು ಅಭಿನಂದಿಸಿದರು. ಈ ಸಂದರ್ಭ ಜಿಲ್ಲಾಧ್ಯಕ್ಷ ಬಿ.ಡಿ.ಜಗದೀಶ್‍ರೈ, ಉಪಾಧ್ಯಕ್ಷ ಬಿ.ಕೆ.ರವೀಂದ್ರರೈ, ಸಹಕಾರ್ಯದರ್ಶಿ ಮನೋಜ್ ಶೆಟ್ಟಿ, ನಿರ್ದೇಶಕರಾದ ಪ್ರಭುರೈ, ಶರತ್‍ಕುಮಾರ್ ಶೆಟ್ಟಿ, ಸತೀಶ್ ರೈ ಹಾಜರಿದ್ದರು.

Read More

ಮಡಿಕೇರಿ ಜೂ.9 : ಉಡೋತ್‍ಮೊಟ್ಟೆಯ ಶ್ರೀ ಆಧಿಶಕ್ತಿ ದೇವಿಯ ಪುನರ್ ಪ್ರತಿಷ್ಠಾಪನೆ ಹಾಗೂ ಬ್ರಹ್ಮಕಲಶೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಶ್ರೀ ವೇದಮೂರ್ತಿ ವೇದವ್ಯಾಸ ತಂತ್ರಿಗಳ ಮಾರ್ಗದರ್ಶನದಲ್ಲಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆಯಿತು. ಜೂ.7ರ ಮುಂಜಾನೆಯಿಂದಲೇ ಆರಂಭಗೊಂಡು ಮಹಾಪ್ರಾರ್ಥನೆ ಸ್ವಸ್ತಿ ಪುಣ್ಯಾಹ ವಾಚನ, ಗಣಪತಿ ಹೋಮ, ಕಂಕಣ ಬಂಧನ, ಉಗ್ರಾಣ ಪೂಜೆ, ಸಂಜೆ ಕಳಶ ಮೆರವಣಿಗೆ ಹಾಗೂ ಹೊರೆಕಾಣಿಕೆ, ಬಿಂಬ ಶುದ್ಧಿ, ಆಧಿವಾಸ ಹೋಮ, ಪ್ರಸಾದ ಶುದ್ಧಿ ಹಾಗೂ ಮಹಾಪೂಜೆ ಜರುಗಿದವು. ನಂತರ ಬಿಂಬದಲ್ಲಿ ತತ್ವನ್ಯಾಸ ಮತ್ತು ತತ್ವನ್ಯಾಸ ಹೋಮ, ಬಿಂಬ ಆಧಿವಾಸ ಪೂಜೆ, ಧಾನ್ಯಾದಿವಾಸ ನೆರವೇರಿತು. ಮಧ್ಯಾಹ್ನ ಮಹಾಪೂಜೆ, ಸಂಜೆ ಕಳಸ ಪ್ರತಿಷ್ಠೆ, ಕಳಶಾಧಿವಾಸ ಹೋಮ, ವಾಸ್ತು ರಾಕ್ಷೋಘ್ನ ಹೋಮ, ಬಿಂಬ ಶಯ್ಯಾದಿವಾಸ ಪೂಜೆ ನೆರವೇರಿತು. ರಾತ್ರಿ ಮಕ್ಕಳಿಂದ ಭಜನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು. ಪ್ರತಿಷ್ಠಾ ಪ್ರಧಾನ ಹೋಮ, ದೇವಿಯ ಪುನರ್ ಪ್ರತಿಷ್ಠೆ, ದುರ್ಗಾಹೋಮ, ದೇವರಿಗೆ ಪ್ರಸನ್ನ ಪೂಜೆ, ಬ್ರಹ್ಮಕಲಶಾಭಿಷೇಕ ಸೇವೆಯ ಪೂಜೆಗಳು ಜರುಗಿತು.…

Read More

ಮಡಿಕೇರಿ ಜೂ.9 : ಪುಷ್ಪಗಿರಿ ಜೇಸಿ ಸಂಸ್ಥೆಯ ವತಿಯಿಂದ ಸೋಮವಾರಪೇಟೆಯ ಅಗ್ನಿಶಾಮಕ ದಳದ ಸಹಾಯಕ ಠಾಣಾಧಿಕಾರಿ ಪಿ.ಎಸ್.ಸುರೇಶ್ ಅವರಿಗೆ ಸಲ್ಯೂಟ್ ದಿ ಸೈಲೆಂಟ್ ವರ್ಕರ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸುರೇಶ್ ಅವರು ಅಗ್ನಿಶಾಮಕ ದಳದಲ್ಲಿ 33 ವರ್ಷಗಳಿಂದ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಜೆಸಿಐ ಅಧ್ಯಕ್ಷೆ ಎಂ.ಎ.ರುಬೀನಾ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಈ ಸಂದರ್ಭ ಜೆಸಿ ಪ್ರಕಾಶ್, ಅಶೋಕ್, ಲಕ್ಷ್ಮೀಕುಮಾರ್, ಸುನೀತ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಜರಿದ್ದರು.

Read More

ಮಡಿಕೇರಿ ಜೂ.9 :  ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಸಮಾಜದ ವತಿಯಿಂದ  ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಅವರನ್ನು ಸನ್ಮಾಸಲಾಯಿತು. ನಗರದ ಜಿ.ಪಂ ನಲ್ಲಿರುವ ಶಾಸಕರ ನೂತನ ಕಚೇರಿಯಲ್ಲಿ ಸಂಘದ ಪ್ರಮುಖರು ಹಾಗೂ ಪದಾಧಿಕಾರಿಗಳು  ಫಲ ತಂಬೂಲ ಹಾಗೂ ಮೈಸೂರು ಪೇಟೆ ನೀಡಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಜಿಲ್ಲಾ ಹಿಂದೂ ಮಲಯಾಳಿ ಸಮಾಜದ ಅಧ್ಯಕ್ಷ ಬಿ.ಎಂ.ವಿಜಯ, ಪ್ರಧಾನ ಕಾರ್ಯದರ್ಶಿ ಪಿ.ಕೆ ಶಶಿಕುಮಾರ್, ಉಪಾಧ್ಯಕ್ಷ ಟಿ.ಕೆ.ಸುಧೀರ್, ಖಜಾಂಜಿ ಕೆ.ಬಾಬು, ಕರ್ನಾಟಕ ರಾಜ್ಯ ಒಬಿಸಿ ಉಪಾಧ್ಯಕ್ಷ ಟಿ.ಕೆ ಸಾಯಿಕುಮಾರ್,  ಪ್ರಮುಖರಾದ ವಿನೂಪ್ ವಿರಾಜಪೇಟೆ, ಅಜೀಶ್ ಕುಮಾರ್, ಶಾಜು, ಉಣ್ಣಿಕೃಷ್ಣ, ಎಂ.ರಥಿ ಕೇಶನ್, ಟಿ.ಆರ್ ವಾಸುದೇವ್, ಸಂತೋಶ್ ಕುಮಾರ್, ಸತೀಶ್, ಸೋಮವಾರಪೇಟೆ ಹಿಂದೂ ಮಲಯಾಳಿ‌ ಸಮಾಜದ ಮಾಜಿ ಅಧ್ಯಕ್ಷ ಲೀಲಾದಾಸ್,ಸಂಘಟನಾ ಕಾರ್ಯದರ್ಶಿ ಸದಾನಂದ, ಗೋಣಿಕೊಪ್ಪಲಿನ‌ ಶರತ್ ಕಾಂತ್, ಜಿ.ಪಂ ಮಾಜಿ ಸದಸ್ಯೆ ಸುನಿತಾ ಮಂಜುನಾಥ್, ಸುಂಟಿಕೊಪ್ಪ ಮಲಯಾಳಿ‌ ಸಮಾಜದ ಸಂತೋಷ್ ಕುಮಾರ್ ಹಾಗೂ ಜಿಲ್ಲಾ ಹಿಂದೂ ಮಲಯಾಳಿ‌ ಸಮಾಜದ ಕಾರ್ಯಾಕಾರಿ ಸಮಿತಿ…

Read More

ಮಡಿಕೇರಿ ಜೂ.9 : ಅಲ್ಲಾರಂಡ ರಂಗಚಾವಡಿ ಹಾಗೂ ಸಿರಿಗನ್ನಡ ವೇದಿಕೆ ಸಹಯೋಗದಲ್ಲಿ ಬಹುಭಾಷಾ ಬೈಗುಳ ಸಾಹಿತ್ಯೋತ್ಸವ ನಡೆಯಲಿದ್ದು, ಲೇಖಕರಿಂದ ಬರಹಗಳನ್ನು ಆಹ್ವಾನಿಸಲಾಗಿದೆ. ನವೆಂಬರ್ ತಿಂಗಳಿನಲ್ಲಿ ರಾಜ್ಯೋತ್ಸವದ ಸಂದರ್ಭ ಕಾರ್ಯಕ್ರಮ ಆಯೋಜನೆ ಮಾಡಲು ನಿರ್ಧರಿಸಿದ್ದು, ವಿಭಿನ್ನ ರೀತಿಯ ಬೈಗುಳಗಳನ್ನು ಪುಸ್ತಕ ರೂಪದಲ್ಲಿ ಹೊರತರುವ ಉದ್ದೇಶ ಹೊಂದಲಾಗಿದೆ. ಆಸಕ್ತರು ಆ.31ರ ಒಳಗೆ kudekalsanthu@gmail.com  ವಿಳಾಸಕ್ಕೆ ಬರಹಗಳನ್ನು ಕಳುಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.9448312310, 9972538584 ಸಂಪರ್ಕಿಸಬಹುದಾಗಿದೆ ಎಂದು ರಂಗಚಾವಡಿ ಹಾಗೂ ಸಿರಿಗನ್ನಡ ವೇದಿಕೆ ಅಧ್ಯಕ್ಷ ಅಲ್ಲರಂಡ ವಿಠಲ ತಿಳಿಸಿದ್ದಾರೆ.

Read More

ಮಡಿಕೇರಿ ಜೂ.9 :  ರಾಜ್ಯ ಸರ್ಕಾರ 28 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರುಗಳನ್ನು ನೇಮಕ ಮಾಡಿದ್ದು, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ  ಎನ್​.ಎಸ್​.ಬೋಸರಾಜು ನೇಮಕಗೊಂಡಿದ್ದಾರೆ. ಈ ಹಿಂದೆ  ಬಿ.ಸಿ.ನಾಗೇಶ್  ಅವರು ಉಸ್ತುವಾರಿ ಸಚಿವರಾಗಿದ್ದರು.

Read More

ಮಡಿಕೇರಿ ಜೂ.9 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ರಿಗೆ ಕೊಡವ ಸಾಹಿತ್ಯ ಕ್ಷೇತ್ರದ ಪ್ರತಿಷ್ಠಿತ ಸ್ವಯಂ ಸೇವಾ ಸಂಸ್ಥೆಯಾದ ‘ಕೊಡವ ತಕ್ಕ್ ಎಳ್ತ್’ಕಾರಡ ಕೂಟ’ದ ಸದಸ್ಯರು ಅಭಿನಂದಿಸಿದರು. ಕೊಡವ ಜನಾಂಗದ ಕೊರವುಕಾರರಿಗೆ ನೀಡುವ ವಿಶೇಷ ಗೌರವದ ಪ್ರತೀಕವಾಗಿರುವ ರೇಷ್ಮೆ ಪಟ್ಟ್ ವಸ್ತ್ರವನ್ನು ಪೊನ್ನಣ್ಣ  ಅವರ ಹೆಗಲಿಗಿರಿಸಿ, ಕೊಡವ ಜನಾಂಗದ ಗುರು ಕಾರೋಣ, ಕುಲಮಾತೆ ಕಾವೇರಿ, ಮಾಗುರು ಇಗ್ಗುತಪ್ಪ ದೇವರ ಆಶೀರ್ವಚನ ನೀಡುವ ವಿಶೇಷ ಫಲಕವನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಗೆ ಅಧ್ಯಕ್ಷ ಹಾಗೂ ಸದಸ್ಯರನ್ನು ಆಯ್ಕೆ ಮಾಡುವಾಗ ಕೊಡವ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ, ಜಾನಪದದ ವಿಶೇಷ ಅರಿವು ಇರುವ ಹಾಗೂ ಆ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಮರ್ಥ ರನ್ನು ಆಯ್ಕೆ ಮಾಡುವಂತೆ ಮನವಿ ಮಾಡಿದರು. ಈ ಸಂದರ್ಭ ಕೊಡವ ತಕ್ಕ್ ಎಳ್ತ್’ಕಾರಡ ಕೂಟದ ಅಧ್ಯಕ್ಷ ಚೆಟ್ಟಂಗಡ ರವಿ ಸುಬ್ಬಯ್ಯ, ಉಪಾಧ್ಯಕ್ಷ ಚೆಂಬಾಂಡ ಶಿವಿ ಭೀಮಯ್ಯ, ಕಾರ್ಯದರ್ಶಿ ಅಮ್ಮಣಿಚಂಡ ಪ್ರವೀಣ್…

Read More