ಮಡಿಕೇರಿ ಜೂ.8 : ಕೊಡಗು ವಿದ್ಯಾಲಯದ ಎನ್ಸಿಸಿ ಕೆಡೆಟ್ಗಳಿಂದ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿದ್ಯಾಲಯದ ಆವರಣದಲ್ಲಿ ಗಿಡನೆಟ್ಟು ಪರಿಸರದ ಕುರಿತು ಜಾಗೃತಿ ಮೂಡಿಸಿದರು. ಈ ಸಂದರ್ಭ ವಿದ್ಯಾಲಯದ ಪ್ರಾಂಶುಪಾಲೆ ಕೆ.ಎಸ್.ಸುಮಿತ್ರ ದಿನದ ಮಹತ್ವದ ಕುರಿತು ಕೆಡೆಟ್ಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಮ್ಯಾನೆಜರ್ ಪಿ.ರವಿ ಹಾಜರಿದ್ದರು.
ಲೇಖಕ: admin
ಮಡಿಕೇರಿ ಜೂ.7 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿಹಬ್ಬ ಪ್ರಯುಕ್ತ ಕೊಡವಾಮೆ ಸಂಘಟನೆ ಆಶ್ರಯದಲ್ಲಿ ಜೂ.10 ರಂದು ಮಡಿಕೇರಿಯಲ್ಲಿರುವ ಪತ್ರಿಕಾ ಭವನದಲ್ಲಿ ಕೊಡವ ಸಂಸ್ಕೃತಿ ವಿಚಾರಗೋಷ್ಠಿ ಆಯೋಜಿಸಲಾಗಿದೆ. ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ, ಕೊಡವಾಮೆ ಸಂಘಟನೆ, ಬುಡಕಟ್ಟು ಸಂಸ್ಕೃತಿ ಅಧ್ಯಯನ ಕೇಂದ್ರದ ಸಂಯುಕ್ತಾಶಯದಲ್ಲಿ ವಿಚಾರಗೋಷ್ಠಿ ಆಯೋಜಿಸಲಾಗಿದೆ ಎಂದು ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಕೆ. ರೆಜಿತ್ಕುಮಾರ್ ಗುಹ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಡ ಎಂ. ಪೂವಯ್ಯ ಅಧ್ಯಕ್ಷತೆಯಲ್ಲಿ ಅಂದು ಬೆಳಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಮರ್ಂದ್ ಮರೆಯಾನ ಕೊಡವ ನಡ್ಪ್ ತೊಡ್ಪ್ ವಿಚಾರದ ಕುರಿತು ಹಿರಿಯ ಸಾಹಿತಿ ಬಾಚರಣಿಯಂಡ ರಾಣಿ ಅಪ್ಪಣ್ಣ ವಿಷಯ ಮಂಡಿಸಲಿದ್ದಾರೆ. ಮಾಳೇಟಿರ ಸೀತಮ್ಮ ವಿವೇಕ್ ಬರೆದಿರುವ ಭಾವ ಕುಸುಮ ಕವನ ಸಂಕಲನ ಲೋಕಾರ್ಪಣೆ ಮಾಡಲಾಗುತ್ತದೆ. ಮಧ್ಯಾಹ್ನ ಮೇಲೆ ನಡೆಯುವ ವಿಚಾರಗೋಷ್ಠಿಯಲ್ಲಿ ಲೋಕ ಮೆಚ್ಚ್ನ ಕೊಡವ ಸಂಸ್ಕೃತಿ ವಿಷಯದ…
ಮಡಿಕೇರಿ ಜೂ.8 : ಕೊಡಗು ಜಿಲ್ಲಾ ಕಿವುಡರ ಸಂಘದ ಆಡಳಿತ ಮಂಡಳಿಯ ವಾರ್ಷಿಕ ಮಹಾಸಭೆಯು ಜೂ.26 ರಂದು ನಡೆಯಲಿದೆ. ವಿರಾಜಪೇಟೆಯ ಪುರಸಭೆಯ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಸಭೆ ನಡೆಯಲಿದ್ದು, ಕರ್ನಾಟಕ ರಾಜ್ಯ ಕಿವುಡರ ಸಂಘದ ಅಧ್ಯಕ್ಷ ಗಣೇಶ್ ರಾವ್ ಮಾತನಾಡಲಿದ್ದಾರೆ. ಸರ್ವ ಸದಸ್ಯರು ಸಭೆಗೆ ಹಾಜರಾಗುವಂತೆ ಸಮಿತಿ ಉಪಾಧ್ಯಕ್ಷ ಶಂಕರನಾರಾಯಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9632759874 ಸಂಪರ್ಕಿಸಬಹುದಾಗಿದೆ.
ಮಡಿಕೇರಿ ಜೂ.8 : ಎಸ್.ಕೆ.ಎಸ್.ಎಸ್.ಎಫ್ ಕಂಡಕರೆ ಯೂನಿಟ್ ವತಿಯಿಂದ ಕಂಡಕರೆಯ ಹಯಾತುಲ್ ಇಸ್ಲಾಂ ಮದರಸದ ಆವರಣದಲ್ಲಿ ಮಜ್ಲಿಸುನ್ನೂರ್ ಮೊದಲನೇ ವಾರ್ಷಿಕೋತ್ಸವ ಸಂಭ್ರಮದಿಂದ ನಡೆಯಿತು. ಮಜ್ಲಿಸುನ್ನೂರ್ ನೇತೃತ್ವ ವಹಿಸಿ ಮಾತನಾಡಿದ, ಹಾಫಿಳ್ ಸಯ್ಯಿದ್ ಅಬ್ದುಲ್ ಖಾದಿರಿ ಪಟ್ಟಾಂಬಿ, ಮನಸ್ಸು ಶುದ್ಧೀಕರಣಗೊಳಿಸಿದರೆ ಮಾತ್ರ, ನಾವು ಮಾಡುವ ಆರಾಧನಾ ಕರ್ಮಗಳು ಸ್ವೀಕಾರಾರ್ಹವಾಗುವುದು. ಮನುಷ್ಯರು ಮನಸ್ಸಿನಲ್ಲಿ, ದ್ವೇಷ,ಅಸೂಯೆಯನ್ನು ತ್ಯಜಿಸಿ ದೇವರಿಗೆ ಹತ್ತಿರವಾಗಿ ಬಡವರಿಗೆ ಸಹಾಯ ಹಸ್ತ ನೀಡಬೇಕಾಗಿದೆ ಎಂದು ಕರೆ ನೀಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೊಡಗು ಜಿಲ್ಲಾ ನಾಯಿಬ್ ಖಾಝಿ ಅಬ್ದುಲ್ಲ ಫೈಜಿ ಎಡಪಲಾ ಹಾಗೂ ಕಂಡಕರೆ ಮಹಲ್ ಖತೀಬ್ ಮುಸ್ತಫಾ ಸಖಾಫಿ ಶುಭಕೋರಿದರು. ಎಸ್.ಕೆ.ಎಸ್.ಎಸ್.ಎಫ್ ಕಂಡಕರೆ ಯೂನಿಟ್ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಕಂಡಕರೆಯ ವಿದ್ಯಾರ್ಥಿ ಸಿ.ಎಂ.ಮುಜಮ್ಮಿಲ್ ಅವರಿಗೆ ಪ್ರೋತ್ಸಾಹ ಧನ ನೀಡಿ ಸನ್ಮಾನಿಸಲಾಯಿತು. ಅದೇ ರೀತಿಯಲ್ಲಿ ಹಾಫಿಳ್ ಸಯ್ಯಿದ್ ಅಬ್ದುಲ್ ಖಾದಿರಿ ಫೈಜಿ ಪಟ್ಟಾಂಬಿ, ಅಬ್ದುಲ್ಲಾ ಫೈಜಿ ಹಾಗೂ ಮುಸ್ತಫಾ ಸಖಾಫಿ ಅವರನ್ನು ಎಸ್.ಕೆ.ಎಸ್.ಎಸ್.ಎಫ್ ಕಂಡಕರೆ ಯೂನಿಟ್ ವತಿಯಿಂದ ಶಾಲು…
ಮಡಿಕೇರಿ ಜೂ.8 : ಮುಂಗಾರು ಅವಧಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮವಾಗಿ ಎನ್ಡಿಆರ್ಎಫ್ ತಂಡವು ಮಡಿಕೇರಿಗೆ ಆಗಮಿಸಿದೆ. ಇನ್ಸ್ಪೆಕ್ಟರ್ ಶಾಂತಿಲಾಲ್ ಜಾಟಿಯಾ ನೇತೃತ್ವದಲ್ಲಿ 23 ಸಿಬ್ಬಂದಿಯ ತಂಡ ಆಗಮಿಸಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
ಮಡಿಕೇರಿ ಜೂ.8 : ಚೆಟ್ಟಳ್ಳಿ ಗ್ರಾ.ಪಂ ವತಿಯಿಂದ ಪಂಚಾಯಿತಿ ಸಭಾಂಗಣದಲ್ಲಿ ಆಕ್ಯುಾಪ್ರೆಶರ್ ಮತ್ತು ಫಿಜಿಯೋ ತೆರಪಿ ಚಿಕಿತ್ಸಾ ಶಿಬಿರ ನಡೆಯಿತು. ಚೆಟ್ಟಳ್ಳಿ ಗ್ರಾ.ಪಂ ಅಧ್ಯಕ್ಷ ಪಿ.ಟಿ.ಮುತ್ತಪ್ಪ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೆಚ್.ಈ. ರಾಕೇಶ್ ಉದ್ಘಾಟಿಸಿದರು. ಈ ಸಂದರ್ಭ ಮೈಸೂರು ಜಿಲ್ಲಾ ಪ್ರಕೃತಿ ಸಂಸ್ಥೆಯ ಚಿಕಿತ್ಸಕ ಆರ್ .ಸತ್ಯೆಶ್ ಹಾಗೂ ಗ್ರಾ.ಪಂ ಸದಸ್ಯೆ ಪೊರಿಮಂಡ ತಂಗಮ್ಮ ಕಾರ್ಯಕ್ರಮದಲ್ಲಿ ಹಾಜರಿದ್ದರು. ಶಿಬಿರದಲ್ಲಿ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಲಾಯಿತು. ಜೂ.7 ರಿಂದ ಒಂದು ತಿಂಗಳ ಕಾಲ ಚೆಟ್ಟಳ್ಳಿ ಗ್ರಾ.ಪಂ ಸಭಾಂಗಣದಲ್ಲಿ ನಡೆಯುವ ಆಕ್ಯುಾ ಪ್ರೆಶರ್ ಮತ್ತು ಫಿಜಿಯೋತೆರಪಿ ಚಿಕಿತ್ಸಾ ಶಿಬಿರ ನಡೆಯಲಿದ್ದು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳ ಬೇಕೆಂದು ಆಯೋಜಕರು ತಿಳಿಸಿದರು. ಹೆಚ್ಚಿನ ಮಾಹಿತಿಗಾಗಿ- 9916224330 ಸಂಪರ್ಕಿಸಬಹುದಾಗಿದೆ.
ವಿರಾಜಪೇಟೆ ಜೂ.8 : ಪ್ರತಿಯೊಬ್ಬರೂ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಮೂಲಕ ಉತ್ತಮ ಜೀವನವನ್ನು ಪಡೆದುಕೊಳ್ಳಬೇಕು ಎಂದು ಸೌಭಾಗ್ಯ ವಿಕಲಚೇತನರ ಸೇವಾ ಟ್ರಸ್ಟಿನ ಅಧ್ಯಕ್ಷ ಸಾಯಿನಾಥ್ ನಾಯಕ್ ಅಭಿಪ್ರಾಯಪಟ್ಟರು. ಕೊಡಗು ಆಯುರ್ವೇದ ಕೇಂದ್ರ ಹಾಗೂ ಸೌಭಾಗ್ಯ ವಿಕಲಚೇತನರ ಸೇವಾ ಟ್ರಸ್ಟ್(ರಿ) ವತಿಯಿಂದ ವಿರಾಜಪೇಟೆ ಪುರಭವನದಲ್ಲಿ ನಡೆದ ಹಿರಿಯ ನಾಗರೀಕರು ಹಾಗೂ ವಿಶೇಷ ಚೇತನರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಈ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳುವಂತಾಗಬೇಕು ಎಂದು ಹೇಳಿದರು. ವಿರಾಜಪೇಟೆ ಗ್ರಾಮಾಂತರ ಠಾಣಾಧಿಕಾರಿ ರವಿಕುಮಾರ್ ಮಾತನಾಡಿ, ಮನುಷ್ಯನ ಜೀವನದಲ್ಲಿ ಆರೋಗ್ಯ ಚೆನ್ನಾಗಿದ್ದರೇ ಮಿಕ್ಕ ಎಲ್ಲವೂ ಚೆನ್ನಾಗಿರುತ್ತವೆ. ಪ್ರತಿ ಎರಡು ತಿಂಗಳಿಗೊಮ್ಮೆ ಹಿರಿಯ ನಾಗರೀಕರು ಹಾಗೂ ವಿಶೇಷ ಚೇತನರಿಗೋಸ್ಕರ ಶಿಬಿರ ನಡೆಯಲಿದ್ದು, ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ಪ್ರತಿಯೊಬ್ಬರು ಅವರ ದೇಹದ ಅಂಗಾಂಗಗಳ ಸ್ಥಿತಿಗತಿ ತಿಳಿದುಕೊಂಡು ಅದಕ್ಕೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆದುಕೊಳ್ಳುವುದು ಉತ್ತಮ ಎಂದು ಸಲಹೆ…
ನಾಪೋಕ್ಲು ಜೂ.8 : ಅಖಿಲ ಕೊಡವ ಸಮಾಜದ ವತಿಯಿಂದ ಜೂ.10 ರಂದು ಸಾಧಕರಿಗೆ ಸನ್ಮಾನ ಸಮಾರಂಭ ನಡೆಯಲಿದೆ. ಅಂದು ಅಖಿಲ ಕೊಡವ ಸಮಾಜದ ಸಭಾಂಗಣದಲ್ಲಿ ವಿರಾಜಪೇಟೆ ವಿಧಾನ ಸಭಾ ಸದಸ್ಯರು ಮತ್ತು ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ, ವಿರಾಜಪೇಟೆಯ ಕಾವೇರಿ ಆಶ್ರಮದ ಆಧ್ಯಾತ್ಮಿಕ ಸಾಧಕ ಶ್ರೀ ವಿವೇಕಾನಂದ ಶರಣ ಸ್ವಾಮಿ, ಜಾನಪದ ಕಲಾವಿದ ಪದ್ಮಶ್ರೀ ಐಮುಡಿಯಂಡ ರಾಣಿ ಮಾಚಯ್ಯ, ಹೆಸರಾಂತ ಹಿರಿಯ ಅಂತರರಾಷ್ಟ್ರೀಯ ಅಥ್ಲೀಟ್ ಸಹೋದರರಾದ ಪಾಲೆಕಂಡ ಬೋಪಯ್ಯ ಮತ್ತು ಪಾಲೇಕಂಡ ಬೆಳ್ಳಿಯಪ್ಪ, ಅಂತರರಾಷ್ಟ್ರೀಯ ಮಾಸ್ಟರ್ಸ್ ಅಥ್ಲೀಟ್ ಮಾರಮಾಡ ಮಾಚಮ್ಮ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದೆಂದು ಅಖಿಲ ಕೊಡವ ಸಮಾಜ ಪ್ರಕಟಣೆಯಲ್ಲಿ ತಿಳಿಸಿದೆ. ವರದಿ : ದುಗ್ಗಳ ಸದಾನಂದ
ಮಡಿಕೇರಿ ಜೂ.8 : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಆನಂದಪುರ ಟಾಟಾ ಕಾಫಿ ಎಸ್ಟೇಟ್ ಸಿಬ್ಬಂದಿಗಳಿಂದ ಸ್ವಚ್ಛತಾ ಶ್ರಮದಾನ ನಡೆಯಿತು. ತೋಟದ ಹಿರಿಯ ವ್ಯವಸ್ಥಾಪಕ ಎಲ್. ವಿನಯ್ ಅವರ ನೇತೃತ್ವದಲ್ಲಿ ದುಬಾರೆ ಸಮೀಪ ಇರುವ ಕಾವೇರಿ ನದಿಯ ದಡದಲ್ಲಿದ್ದ ಪ್ಲಾಸ್ಟಿಕ್, ಗಾಜಿನ ಬ್ಯಾಟಲ್ ಹಾಗೂ ಕಾಗದ ಚೂರುಗಳನ್ನು ಸ್ವಚ್ಛಗೊಳಿಸಿ ಬೇರೆಡೆ ಕಸವನ್ನು ವಿಲೇವಾರಿ ಮಾಡಲಾಯಿತು. ನಂತರ ಆನಂದಪುರ ವಿಭಾಗದಿಂದ ಇಂಜಿಲಗೆರೆಯ ವರೆಗೂ ಒರ ರಾಜ್ಯದಿಂದ ಹಾಗೂ ಇತರೆ ಪ್ರವಾಸಿಗರು ರಸ್ತೆ ಬದಿಯಲ್ಲಿ ಎಸೆದಿರುವ ಪ್ಲಾಸ್ಟಿಕ್, ಗಾಜಿನ ಬಾಟಲಿಗಳನ್ನು ಹಾಗೂ ತ್ಯಾಜ್ಯ ವಸ್ತುಗಳನ್ನು ಬೆರ್ಪಡಿಸಿ ಸಂಗ್ರಯಿಸಿ ಅಮ್ಮತಿಯ ಗ್ರಾಮ ಪಂಚಾಯತಿಗೆ ಒಪ್ಪಿಸಲಾಯಿತು.
ಮಡಿಕೇರಿ ಜೂ.8 : ಬಜೆಗುಂಡಿ ಕುಸುಬೂರ್ ಮೊಗೇರ ಸೇವಾ ಸಮಾಜದ ಗ್ರಾಮ ಸಮಿತಿ ವತಿಯಿಂದ ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಪಿಯುಸಿ ಹಾಗೂ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಿಸಲಾಯಿತು. ಕಾರ್ಯಕ್ರಮವನ್ನು ಮೊಗೇರ ಸಮಾಜದ ಜಿಲ್ಲಾಧ್ಯಕ್ಷ ಗೌತಮ್ ಶಿವಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಮಾಜದ ಮಕ್ಕಳು ಉನ್ನತ ವಿದ್ಯಾಭ್ಯಾಸ ಪಡೆಯುವತ್ತ ಗಮನ ಹರಿಸಬೇಕು ಜೊತೆಗೆ ಪೋಷಕರು ಕೂಡ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಪಡೆಯಲು ಪ್ರೋತ್ಸಾಹಿಸಬೇಕೆಂದರು. ವಿದ್ಯೆಯಿಂದ ಮಾತ್ರ ನಾವು ಕಳೆದುಕೊಂಡಿದನ್ನು ಮರಳಿ ಪಡೆಯಬಹುದು, ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಹಾಗೂ ಇತರೆ ಯಾವುದೇ ರೀತಿಯ ಅನಾನುಕೂಲ ಇದ್ದಲ್ಲಿ ಸಂಘದ ಗಮನಕ್ಕೆ ತರಬೇಕು ಅಲ್ಲದೆ ಯಾವುದೇ ಕಾರಣಕ್ಕೂ ಸಮುದಾಯದ ಮಕ್ಕಳು ವಿದ್ಯೆಯಿಂದ ವಂಚಿತವಾಗಬಾರದೆಂದರು, ಸೋಮವಾರಪೇಟೆ ತಾಲೂಕಿನ ಮಾಜಿ ಅಧ್ಯಕ್ಷ ಬಿ.ಎಂ.ದಾಮೋದರ ಮಾತನಾಡಿ, ಗ್ರಾಮ ಸಮಿತಿಯು ಪ್ರತೀ ವರ್ಷವೂ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಕರಿಸುತ್ತಿರುವುದನ್ನು ಶ್ಲಾಗಿಸಿದರು. ಸಭೆಯಲ್ಲಿ ಗ್ರಾಮ ಸಮಿತಿ ಅಧ್ಯಕ್ಷ ನಾರಾಯಣ, ತಾಲೂಕು ಸಮಿತಿ ಸದಸ್ಯರಾದ ಶಿವಾನಂದ, ಶಿವಕುಮಾರ್, ಗ್ರಾ.ಪಂ …






