ಮಡಿಕೇರಿ ಡಿ.15 NEWS DESK : ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನ ಆರೋಪಿಸಿ ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಎಐಸಿಸಿ ವತಿಯಿಂದ ಹಮ್ಮಿಕೊಂಡಿದ್ದ ವೋಟ್ ಚೋರ್ ಗದ್ದಿ ಚೋಡ್ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭಾಗವಹಿಸಿದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರು , ಶ್ರೀಮತಿ ಸೋನಿಯಾ ಗಾಂಧಿ ಅವರು, ಶ್ರೀ ರಾಹುಲ್ ಗಾಂಧಿ ಅವರು, ಶ್ರೀಮತಿ ಪ್ರಿಯಾಂಕ ಗಾಂಧಿ ಅವರು , ಕರ್ನಾಟಕ ರಾಜ್ಯ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು , ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ಅವರು, ಸಚಿವರುಗಳಾದ ಡಾಕ್ಟರ್ ಎಂ.ಸಿ ಸುಧಾಕರ್ ಅವರು , ಈಶ್ವರ್ ಖಂಡ್ರೆ ಅವರು , ರಹಿಮ್ ಖಾನ್ ಅವರು ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದರು.
ಲೇಖಕ: admin
ನಾಪೋಕ್ಲು ಡಿ.15 NEWS DESK : ತಮ್ಮ ಇಷ್ಟಾರ್ಥ ಸಿದ್ಧಿಗೆ ಭಕ್ತರು ಹರಕೆ ಒಪ್ಪಿಸುವ ಪದ್ಧತಿ ಅನಾದಿಕಾಲದಿಂದಲೂ ರೂಢಿಗತವಾಗಿ ಬಂದಿದೆ. ತಮ್ಮ ಇಷ್ಟ ದೇವರಿಗೆ ಆಯಾ ಪ್ರದೇಶದ ಆಚರಣೆಗೆ ತಕ್ಕಂತೆ ಪ್ರಾಣಿಗಳನ್ನು, ಹೂವುಹಣ್ಣುಗಳನ್ನು ಹರಕೆರೂಪದಲ್ಲಿ ಭಕ್ತರು ಒಪ್ಪಿಸುವುದು ಅನೂಚಾನವಾಗಿ ನಡೆದುಕೊಂಡು ಬಂದಿದೆ. ಆದರೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಬಳಿಯ ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ದೇವಾಲಯದಲ್ಲಿ ಭಕ್ತರು ಹರಕೆ ರೂಪದಲ್ಲಿ ಮಣ್ಣಿನ ನಾಯಿಗಳ ಪ್ರತಿಕೃತಿಯನ್ನು ಒಪ್ಪಿಸುವಂತಹ ವಿಶಿಷ್ಟ ಆಚರಣೆ ನಡೆದುಕೊಂಡು ಬಂದಿದೆ. ಹರಕೆಯ ಕಾರಣದಿಂದ ದೇವಾಲಯದ ಸುತ್ತಲೂ ಮಣ್ಣಿನ ನಾಯಿಗಳ ಪ್ರತಿಕೃತಿ ಮೆರುಗು ನೀಡುತ್ತವೆ.ದಟ್ಟ ಕಾನನದ ಮದ್ಯೆ ಸುಮಾರು ಐದು ಅಡಿ ಎತ್ತರದ ವೃತ್ತಾಕಾರದ ಕಟ್ಟೆ ಈ ಕಟ್ಟೆಯ ನಡುವೆ ತ್ರಿಶೂಲಧಾರಿ ಶಿಲಾಮೂರ್ತಿ ಶಾಸ್ತಾವು ಸನ್ನಿಧಿ. ದೇವರಿಗೆ ಆಧ್ರಯವಿತ್ತಂತೆ ತೋರುವ ಒಂದು ಹಲಸಿನ ಮರ, ಸುತ್ತಲೂ ಸಹಸ್ರಾರು ಹರಕೆಯ ಮಣ್ಣಿನ ನಾಯಿಗಳು ಇದು ಮಕ್ಕಿ ಶಾಸ್ತಾವು ದೇವಾಲಯದ ಚಿತ್ರಣ. ಈ ದೇವಸ್ಥಾನದಲ್ಲಿ ಹರಕೆಯ ನಾಯಿ ತಯಾರಿಸುವ ಮತ್ತು…
ಮಡಿಕೇರಿ ಡಿ.15 NEWS DESK : ಕ್ರೀಡೆಗಳು ಉತ್ತಮ ವ್ಯಕ್ತಿತ್ವವನ್ನು ರೂಪಿಸುತ್ತವೆ ಮತ್ತು ನಾಯಕತ್ವದ ಗುಣವನ್ನು ಸೃಷ್ಟಿಸುತ್ತವೆ ಎಂದು ಸೈನಿಕ ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್ ತಿಳಿಸಿದ್ದಾರೆ. ಕೊಡಗು ಸೈನಿಕ ಶಾಲೆಯಲ್ಲಿ ನಡೆದ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಕ್ರೀಡೆಯು ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ತೋರಿದ ಉನ್ನತ ಮಟ್ಟದ ಕ್ರೀಡಾಸ್ಫೂರ್ತಿ, ಶಿಸ್ತು ಮತ್ತು ಕನಿಷ್ಠ ಪ್ರಶಂಸನೀಯ. ಕ್ರೀಡಾಕೂಟದ ಆಯೋಜಕರು, ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳ ಶ್ರಮ ಶ್ಲಾಘನೀಯ. ಕ್ರೀಡಾಕೂಟದುದ್ದಕ್ಕೂ ಸುರಕ್ಷತೆ ಮತ್ತು ನ್ಯಾಯಸಮ್ಮತ ಆಟಕ್ಕೆ ಆದ್ಯತೆ ನೀಡಲಾಗಿತ್ತು ಎಂದು ಹೇಳಿದರು. ಬಾಲಕಿಯರ ಹಿರಿಯರ ವಿಭಾಗದಿಂದ ಸುಬ್ರತೋ ನಿಲಯದ ಕೆಡೆಟ್ ದೀಪ್ತಿದೇವಿ ಹಾಗೂ ಕಿರಿಯ ಬಾಲಕಿಯರ ವಿಭಾಗದಿಂದ ಕಟಾರಿ ಕಿರಿಯರ ನಿಲಯದ ಕೆಡೆಟ್ ಕನಿಷ್ಠ ಅತ್ಯುತ್ತಮ ಕ್ರೀಡಾಪಟು ಪ್ರಶಸ್ತಿಗೆ ಭಾಜನರಾದರು. ಕ್ರೀಡಾಕೂಟದ ಎಲ್ಲಾ ವಿಭಾಗಗಳಲ್ಲಿ ಸ್ಮರಣೀಯವಾದ ಸಾಧನೆಗೈದ ಸುಬ್ರತೋವನ್ನು 2025ನೇ ಸಾಲಿನ ಚಾಂಪಿಯನ್ ನಿಲಯವನ್ನಾಗಿ…
ಮಡಿಕೇರಿ ಡಿ.15 NEWS DESK : ಡಾರ್ಜಿಲಿಂಗ್ ಗೂರ್ಖಾಲ್ಯಾಂಡ್ ಮಾದರಿಯಲ್ಲಿ “ಕೊಡವಲ್ಯಾಂಡ್” ಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಡಿ.18ರಂದು ಗನ್ ಕಾರ್ನಿವಲ್ ತೋಕ್ ನಮ್ಮೆ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು 16ನೇ ವಾರ್ಷಿಕ ಸಾರ್ವಜನಿಕ ಗನ್ ಕಾರ್ನಿವಲ್-ತೋಕ್ ನಮ್ಮೆಯನ್ನು ಮೂರ್ನಾಡ್ ನ ಬಲಂಬೇರಿ ರಸ್ತೆಯ ಬಳಿ ಕಡಿಯತ್ನಾಡ್ ಗಡಿರೇಖೆಯ ಸಮೀಪ ಚೇನಂಡ ಪೃಥ್ವಿ ಅವರ ಕಾಫಿ ಕ್ಯಾಸಲ್ ಕೂರ್ಗ್ ರೆಸಾರ್ಟ್ ನಲ್ಲಿ ಜಾನಪದ ಸಂಭ್ರಮ ಮತ್ತು ಉತ್ಸಾಹದೊಂದಿಗೆ ಆಚರಿಸಲಾಗುತ್ತಿದೆ. ಬಂದೂಕುಗಳನ್ನು ಹೂವುಗಳಿಂದ ಅಲಂಕರಿಸಲಾಗುತ್ತದೆ, ಮಕ್ಕಳು, ಮಹಿಳೆಯರು ಮತ್ತು ಪುರುಷರಿಗಾಗಿ ಶೂಟಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ. ಕೊಡವರು, ಕೊಡವತಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ಬಂದೂಕು ಆದಿಮ ಸಂಜಾತ ಕೊಡವರ ಜನಾಂಗದ ಧಾರ್ಮಿಕ-ಜನಾಂಗೀಯ ಸಂಸ್ಕಾರವಾಗಿದೆ. ತೋಕ್ ಕೊಡವರ ಪ್ರಾಚೀನ ಹೆಮ್ಮೆ, ಹಳೆಯ ಸಂಪ್ರದಾಯದ ಆಚರಣೆಗಳು, ಜಾನಪದ ಕಾನೂನು ವ್ಯವಸ್ಥೆಗಳನ್ನು ಪ್ರದರ್ಶಿಸಲು ಮತ್ತು ಸಂರಕ್ಷಿಸಲು ಪ್ರತಿ ವರ್ಷ…
ಮಡಿಕೇರಿ ಡಿ.15 NEWS DESK : ನಗರದ ಕೊಡಗು ವಿದ್ಯಾಲಯದಲ್ಲಿ ವಾಷಿ೯ಕ ಕ್ರೀಡಾಕೂಟ ವಿದ್ಯಾಥಿ೯, ಶಿಕ್ಷಕರ ಸಂಭ್ರಮದೊಂದಿಗೆ ಜರುಗಿತು. ಕ್ರೀಡೋತ್ಸವದ ಒಲಂಪಿಕ್ ಟಾರ್ಚ್ ನ್ನು ಕೊಡಗು ಹೋಟೇಲ್, ರೆಸಾಟ್೯ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ ಬೆಳಗಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೆಂಕಟರಾಜು ಮಾತನಾಡಿ, ಕ್ರೀಡೆಗಳು ಶಾರೀರಿಕ ಆರೋಗ್ಯದ ಜೊತೆಗೆ ಮಾನಸಿಕ ಸ್ಥೈರ್ಯ, ಶಿಸ್ತು ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುತ್ತವೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಸೋಲು–ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಪರಿಶ್ರಮ ಹಾಗೂ ಆತ್ಮವಿಶ್ವಾಸದೊಂದಿಗೆ ಮುಂದುವರಿಯಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು. ವ್ಯಕ್ತಿತ್ವ ನಿರ್ಮಾಣದಲ್ಲಿ ಗೆಳೆಯರ ಪಾತ್ರ ಮಹತ್ವದ್ದಾಗಿದ್ದು, ವಿಫಲತೆಯನ್ನು ಧೈರ್ಯದಿಂದ ಎದುರಿಸುವುದು ನಾಯಕತ್ವದ ಪ್ರಮುಖ ಗುಣವೆಂದು ಅವರು ಅಭಿಪ್ರಾಯಪಟ್ಟರು. ಒತ್ತಡದ ಸಂದರ್ಭಗಳಲ್ಲಿ ಮನಸ್ಸಿನ ಸಮತೋಲನ ಕಾಪಾಡಿಕೊಳ್ಳಬೇಕು ಹಾಗೂ ವಿನಯವೇ ವ್ಯಕ್ತಿಯನ್ನು ಎತ್ತರಕ್ಕೆ ಕೊಂಡೊಯ್ಯುವ ಶಾಶ್ವತ ಗುಣವೆಂದೂ ಜಿಲ್ಲಾಧಿಕಾರಿ ಕಿವಿಮಾತು ಹೇಳಿದರು. ಕುಂಡ್ಲೋಳಂಡ ದಿನೇಶ್ ಕಾರ್ಯಪ್ಪ ಮಾತನಾಡಿ ಸಾಮಾಜಿಕ ಮಾಧ್ಯಮಗಳ ಪರಿಣಾಮದಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ಸವಾಲುಗಳು ಹಾಗೂ ವಿದ್ಯಾರ್ಥಿ–ಗುರುಗಳ ನಡುವಿನ ಪರಸ್ಪರ ಗೌರವದಲ್ಲಿ ಉಂಟಾಗುತ್ತಿರುವ…
ಸುಂಟಿಕೊಪ್ಪ ಡಿ.13 NEWS DESK : ಪ್ರಪಂಚದಲ್ಲಿ ಒಬ್ಬರಿಂದ ಕಿತ್ತುಕೊಳ್ಳಲಾಗದ ಮತ್ತು ಅಪಹರಿಸಲಾಗದ ಸಂಪತ್ತು ಎಂದರೆ ಅದು ವಿದ್ಯೆ ಎಂದು ಸಮಾಜ ಸೇವಕ ಹರಪಳ್ಳಿ ಎನ್.ರವೀಂದ್ರ ಹೇಳಿದರು. ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ 61ನೇ ಶಾಲಾ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಳ್ಳಿಯಲ್ಲಿರುವ ಈ ಶಾಲೆ ಕನ್ನಡ ಮಾಧ್ಯಮದಾಗಿದ್ದು, ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಸಾಧನೆ ಮಾಡಿದೆ ಎಂದು ಪ್ರಶಂಸಿದರು. ಬದುಕಿನಲ್ಲಿ ನಾವು ಕೊಟ್ಟು ಹೋಗಬೇಕು ಇಲ್ಲಾವೇ ಬಿಟ್ಟು ಹೋಗಬೇಕು ಈ ತತ್ವಕ್ಕೆ ಅನುಸಾರವಾಗಿ ಬದುಕಬೇಕೆಂದು ಹೇಳಿದ ಅವರು, ಸ್ವಾಮಿ ವಿವೇಕಾನಂದರು ಹೇಳಿದ ಮನುಷ್ಯನಲ್ಲಿರುವ ಪರಿಪೂರ್ಣತೆಯನ್ನು ಪ್ರಕಾಶಗೊಳಿಸುವುದೇ ವಿದ್ಯೆ. ವಿದ್ಯೆಯಿಂದ ನಮ್ಮ ಬಾಳು ಮಾತ್ರವಲ್ಲ ಸಮಾಜವನ್ನು ಬೆಳಗುವಂತಾಗಬೇಕೆಂದು ಕಿವಿಮಾತು ಹೇಳಿದರು. ನಾವು ಏನೇ ಕಲಿತರು ಎಷ್ಟೇ ದೊಡ್ಡವರಾದರೂ ಸಮಾಜಕ್ಕಾಗಿ ಮತ್ತು ಪರಹಿತಕ್ಕಾಗಿ ನಮ್ಮನ್ನು ಸಮರ್ಪಸಿಕೊಳ್ಳುವುದು ನಮ್ಮ ವ್ಯಕ್ತಿತ್ವದ ಭಾಗವಾಗಬೇಕೆಂದು ಅವರು ಕರೆ ನೀಡಿದರು. ಶಾಲೆಯ ಮಕ್ಕಳಿಗೆ ಟ್ರ್ಯಾಕ್ಶೂಟ್ ಕೊಡುಗೆಯಾಗಿ ನೀಡಿ ಮಾತನಾಡಿದ ಕಾಫಿ ಬೆಳೆಗಾರ ಮತ್ತು ಸಮಾಜ…
ಮಡಿಕೇರಿ ಡಿ.13 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ವಿದ್ಯಾರ್ಥಿಗಳು ಹಾಗೂ ಎನ್ಸಿಸಿ ವಿದ್ಯಾರ್ಥಿಗಳಿಗಾಗಿ ಕಾಲೇಜು ಮತ್ತು ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ಕಾಲೇಜ್ ನ ಮೈದಾನದಲ್ಲಿ ಸುಸಜ್ಜಿತ ಫೈರಿಂಗ್ ರೇಂಜನ್ನು ನಿರ್ಮಾಣ ಮಾಡಲು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಳೇ ವಿದ್ಯಾರ್ಥಿಗಳ ಸಂಘ ನಿರ್ಧರಿಸಿದೆ. ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ಕಾಲೇಜ್ ನ ಸೆಮಿನಾರ್ ಹಾಲ್ ನಲ್ಲಿ ನಡೆದ ಸಂಘದ ಸಭೆಯಲ್ಲಿ ಮುಂಬರುವ ದಿನಗಳಲ್ಲಿ ನಡೆಸಲಾಗುವ ವಿವಿಧ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. ಸಾರ್ವಜನಿಕರು, ಹಳೇ ವಿದ್ಯಾರ್ಥಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳಿಗಾಗಿ ಗುಂಡು ಹೊಡೆಯುವ ಸ್ಪರ್ಧೆಯನ್ನು ಶೀಘ್ರ ಆಯೋಜಿಸಲು ಮತ್ತು ಹಳೇ ವಿದ್ಯಾರ್ಥಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಕ್ರೀಡೆ ಮತ್ತು ಮನೋರಂಜನಾ ಕಾರ್ಯಕ್ರಮಗಳನ್ನು ನಡೆಸಲು ನಿರ್ಧರಿಸಲಾಯಿತು. ಹಳೇ ವಿದ್ಯಾರ್ಥಿ ಸಂಘಕ್ಕೆ ನೂತನ ಕಟ್ಟಡವನ್ನು ನಿರ್ಮಿಸುವ ಕುರಿತು ಚರ್ಚಿಸಿ, ಖಾತೆಯಲ್ಲಿ ಹೆಚ್ಚು ಹಣ ಇಲ್ಲದಿರುವ ಕಾರಣ ಮುಂದಿನ ದಿನಗಳಲ್ಲಿ ದಾನಿಗಳನ್ನು ಸಂಪರ್ಕಿಸಿ, ಸೂಕ್ತ…
ಮಡಿಕೇರಿ ಡಿ.13 NEWS DESK : ಸುಂದರ ಪರಿಸರದ ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳೊಂದಿಗೆ ದಿನದಿನವೂ ಹೆಚ್ಚುತ್ತಿರುವ ವಾಹನ ದಟ್ಟಣೆ, ರಸ್ತೆಗಳ ಅವ್ಯವಸ್ಥೆ, ಸ್ವಚ್ಛತೆಯ ಪರಿಜ್ಞಾನವಿಲ್ಲದೆ ಉಂಟಾಗುತಿರುವ ಅಶುಚಿತ್ವ, ಅನಧಿಕೃತ ಹೋಂ ಸ್ಟೇಗಳಿಂದ ಉದ್ಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಕೊಡಗು ಪತ್ರಕರ್ತರ ಸಂಘದಿಂದ ಆಯೋಜಿತ ವಿಷನ್ ಮಡಿಕೇರಿ- ‘ ನಮ್ಮ ಮಡಿಕೇರಿ ನಮ್ಮ ಹೆಮ್ಮೆ- ಸಂವಾದ’ ಕಾರ್ಯಕ್ರಮದಲ್ಲಿ ವಿಸ್ತೃತವಾಗಿ ಚರ್ಚಿಸಲಾಯಿತು. ನಗರದ ರೆಡ್ ಬ್ರ್ರಿಕ್ಸ್ ಸಭಾಂಗಣದ ಸತ್ಕಾರ ಭವನದಲ್ಲಿ ಆಯೋಜಿತ ಕಾರ್ಯಕ್ರಮದಲ್ಲಿ ಕೊಡಗು ಪತ್ರಕರ್ತರ ಸಂಘಂದ ಅಧ್ಯಕ್ಷ ಅನಿಲ್ ಹೆಚ್.ಟಿ. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, 1691 ರಲ್ಲಿ ಮುದ್ದುರಾಜನಿಂದ ನಿರ್ಮಾಣವಾದ ಮಡಿಕೇರಿ 344 ವರ್ಷಗಳ ಭವ್ಯ ಇತಿಹಾಸವನ್ನು ಹೊಂದಿದೆ. ಈ ಪುಟ್ಟ ನಗರಿ ಬದಲಾವಣೆಗಳಿಗೆ ಮೈಯೊಡ್ಡುತ್ತಲೆ ಬಂದಿದ್ದು, ಭವಿಷ್ಯದಲ್ಲಿ ಮಡಿಕೇರಿಯನ್ನು ಸುಂದರ ನಗರವನ್ನಾಗಿ ರೂಪಿಸುವ ಮತ್ತು ಸಂರಕ್ಷಿಸುವ ಬಗ್ಗೆ ಯಾವುದೇ ಅಭಿಪ್ರಾಯ ಭೇದಗಳಿದ್ದರೂ ಬದಿಗೊತ್ತಿ, ಜಾತಿ ಮತಗಳ ಭೇದವಿಲ್ಲದೆ ನಗರದ ನಾಗರಿಕರೆಲ್ಲರು ಕೈಜೋಡಿಸಬೇಕೆನ್ನುವ ಆಶಯವನ್ನು ವ್ಯಕ್ತಪಡಿಸಿದರು. :: ಶೋಚನೀಯ ಸ್ಥಿತಿಯಲ್ಲಿ ಜಿಲ್ಲಾ…
ಮಡಿಕೇರಿ ಡಿ.13 NEWS DESK : ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಕೊಡಗು ಜಿಲ್ಲಾಮಟ್ಟದ ಪತ್ರಕರ್ತರ ವಾಲಿಬಾಲ್ ಪಂದ್ಯಾವಳಿಯನ್ನು ಡಿ.14 ರಂದು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಕೊಡಗು ಕ್ಲಬ್ ಪ್ರಧಾನ ಕಾರ್ಯದರ್ಶಿ ಆದರ್ಶ್ ಅದ್ಕಲೇಗಾರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಡಿ.14 ರ ಭಾನುವಾರ ಬೆಳಿಗ್ಗೆ 10.30 ಗಂಟೆಗೆ ಪಂದ್ಯಾವಳಿಯನ್ನು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಪ್ರಾಂಶುಪಾಲ ಪ್ರೊ.ಮೇ.ಬಿ.ರಾಘವ ಅವರು ಉದ್ಘಾಟಿಸಲಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕುಶಾಲನಗರ ತಾಲ್ಲೂಕಿನ ಹೆರೂರು ಗ್ರಾಮದ ಉದ್ಯಮಿ ಮೋಹಿನಿ ಪ್ರಕಾಶ್, ಜಿಲ್ಲಾ ಹಿಂದು ಮಲಯಾಳಿ ಸಮಾಜದ ಸಲಹೆಗಾರ ಹಾಗೂ ಎಸ್ಎನ್ಡಿಪಿ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಟಿ.ಆರ್.ವಾಸುದೇವ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ಕುಟ್ಟಪ್ಪ, ರಾಜ್ಯ ಸಮಿತಿ ಸದಸ್ಯೆ ಬಿ.ಆರ್.ಸವಿತಾ ರೈ, ಜಿಲ್ಲಾಧ್ಯಕ್ಷ ಬಾಚರಣಿಯಂಡ ಅನುಕಾರ್ಯಪ್ಪ, ಪಂದ್ಯಾವಳಿಯ ಸಂಚಾಲಕರಾದ ಲೋಕೇಶ್ ಕಾಟಕೇರಿ, ಶಿವ ಕಾಂತರಾಜು,…
ಗದಗ ಡಿ.13 NEWS DESK : ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಚಂದನ ಎಜುಕೇಶನ್ ಸೊಸೈಟಿ ಆಯೋಜಿಸಿದ್ದ ಭಾರತ ರತ್ನ ಪ್ರೊ.ಸಿ.ಎನ್.ಆರ್ ರಾವ್ 10ನೇ ವರ್ಷದ ವಿಜ್ಞಾನ ವಿಸ್ತೃತ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ನಿವೃತ್ತ ಐಎಎಸ್ ಅಧಿಕಾರಿ ಬಿ.ಎಸ್.ಪಾಟೀಲ್ ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ “ಚಂದನ ಶ್ರೀ” ಪ್ರಶಸ್ತಿ ಪ್ರದಾನ ಮಾಡಿ, ಸನ್ಮಾನಿಸಿದರು.






