ಲೇಖಕ: admin

ಮಡಿಕೇರಿ ಜು.10 : ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿರುವ ವಿದ್ಯುತ್ ಸಮಸ್ಯೆಯನ್ನು ಪರಿಹರಿಸುವಂತೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕ ಮಡಿಕೇರಿಯ ಚೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು. ನಗರದಲ್ಲಿ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಾಕಾರರು ಚೆಸ್ಕಾಂ ನಿಗಮದ ವಿರುದ್ಧ ಘೋಷಣೆಯನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಏಕಾಏಕಿ ವಿದ್ಯುತ್ ಬಿಲ್ ಏರಿಕೆ ಮಾಡುವ ಮೂಲಕ ನಷ್ಟದಲ್ಲಿರುವ ರೈತರು ಮತ್ತು ಬೆಳೆಗಾರರ ನೋವಿನ ಮೇಲೆ ಬರೆ ಎಳೆಯಲಾಗುತ್ತಿದೆ. ತಕ್ಷಣವೇ ವಿದ್ಯುತ್ ಬಿಲ್ ಅನ್ನು ಇಳಿಕೆ ಮಾಡಬೇಕು. ಈ ಸಮಸ್ಯೆ ನಿವಾರಣೆಗೆ ರಾಜ್ಯ ಸರಕಾರ ಮಧ್ಯ ಪ್ರವೇಶ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ, ಜಿಲ್ಲೆಯಲ್ಲಿ ನಿರಂತರವಾಗಿ ವಿದ್ಯುಚ್ಚಕ್ತಿ ಸಮಸ್ಯೆ ತಲೆದೋರಿದೆ. ಕಳೆದ 20 ವರ್ಷಗಳಿಂದ ಎದುರಾಗಿರುವ ಸಮಸ್ಯೆಗೆ ಇಂದಿಗೂ ಪರಿಹಾರ ದೊರೆತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ತೋಟಗಳಲ್ಲಿ ಜಂಗಲ್ ಕ್ಲಿಯರಿಂಗ್ ಮಾಡದೇ ಇರುವುದರಿಂದ…

Read More

ಮಡಿಕೇರಿ ಜು.10 : ಶಾಲೆಗಳಿಗೆ ಮಕ್ಕಳನ್ನು ಕರೆದೊಯ್ಯುವ ವಾಹನಗಳು ನಿಯಮಾನುಸಾರ ಹಾಗೂ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶಾನುಸಾರ ಮೋಟಾರು ವಾಹನ ಕಾಯ್ದೆ ಹಾಗೂ ನಿಯಮಗಳಡಿಯಲ್ಲಿ ನಿಗದಿಪಡಿಸಿರುವ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕಾಗುತ್ತದೆ. ಶಾಲಾ ವಾಹನಗಳಲ್ಲಿ ಚಾಲ್ತಿಯಲ್ಲಿರುವ ಜಿಪಿಎಸ್ ಅಳವಡಿಕೆ ಕಡ್ಡಾಯವಾಗಿದ್ದು, ವಾಹನದ ನಾಲ್ಕು ಕಡೆಗಳಲ್ಲಿ ಶಾಲೆಯ ಹೆಸರು ಮತ್ತು ದೂರವಾಣಿ ಸಂಖ್ಯೆ ನಮೂದಿಸಿರಬೇಕು. ಚಾಲ್ತಿಯಲ್ಲಿರುವ ಸ್ಪೀಡ್ ಗವರ್ನರ್, ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಅಗ್ನಿನಂದಕ ಮತ್ತು ಹ್ಯಾಮರ್ ಹೊಂದಿರಬೇಕು. ರಿಫ್ಲೆಕ್ಟಿವ್ ಟೇಪ್ ಅಳವಡಿಸಿರಬೇಕು. ನಿಗದಿತ ಸಾಮಥ್ರ್ಯಕ್ಕೆ ಮೀರಿ ಮಕ್ಕಳನ್ನು ಕರೆದೊಯ್ಯಬಾರದು. ವಾಹನದಲ್ಲಿ ಒಬ್ಬರು ಸಹಾಯಕರು ಇರಬೇಕು. ಹಾಗೂ ಕಡ್ಡಾಯವಾಗಿ ಚಾಲ್ತಿಯಲ್ಲಿರುವ ವಾಹನದ ದಾಖಲೆಗಳಾದ ಅರ್ಹತಾ ಪ್ರಮಾಣ ಪತ್ರ, ವಿಮಾ ಪ್ರಮಾಣ ಪತ್ರ, ವಾಯು ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರ ಮತ್ತು ತೆರಿಗೆ ಚೀಟಿಗಳನ್ನು ಶಾಲಾ ವಾಹನಗಳಲ್ಲಿ ಇಟ್ಟುಕೊಂಡಿರಬೇಕಾಗಿರುತ್ತದೆ. ಹಾಗೂ ಚಾಲಕರು ಮತ್ತು ಸಹಾಯಕರು ಪೂರ್ಣ ಸಮವಸ್ತ್ರದಲ್ಲಿದ್ದು, ಚಾಲಕರು ಚಾಲ್ತಿಯಲ್ಲಿರುವ ಡಿಎಲ್ ಹೊಂದಿರಬೇಕಾಗುತ್ತದೆ. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸದ ಶಾಲಾ ಬಸ್‍ಗಳ ತೀವ್ರವಾದ…

Read More

ಮಡಿಕೇರಿ ಜು.10 : 2022-23ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದದ ಕೋರಿಕೆ ವರ್ಗಾವಣೆ/ಪರಸ್ಪರ ವರ್ಗಾವಣೆ/ಕನಿಷ್ಠ ಅವಧಿ ಮುಗಿದ ನಿರ್ದಿಷ್ಟಪಡಿಸಿದ ಮತ್ತು ತಾಂತ್ರಿಕ ಸಹಾಯಕರ ಆನ್‍ಲೈನ್ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಳಿಸಬೇಕಿರುತ್ತದೆ. ಅದರಂತೆ ಕೊಡಗು ಜಿಲ್ಲೆಯಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದದ ಕೋರಿಕೆ ವರ್ಗಾವಣೆ /ಪರಸ್ಪರ ವರ್ಗಾವಣೆ/ಕನಿಷ್ಠ ಅವಧಿ ಮುಗಿದ ನಿರ್ದಿಷ್ಟಪಡಿಸಿದ ಮತ್ತು ತಾಂತ್ರಿಕ ಸಹಾಯಕರುಗಳಿಗೆ ಆನ್‍ಲೈನ್ ಕೌನ್ಸಿಲಿಂಗ್ ಜು.11 ರ ಬೆಳಗ್ಗೆ 10 ಗಂಟೆಯಿಂದ ಜುಲೈ, 17 ರವರೆಗೆ ನಡೆಯಲಿದೆ. ವೇಳಾಪಟ್ಟಿಯನುಸಾರ ಸಂಬಂಧಿಸಿದ ಶಿಕ್ಷಕರು ನಿಗಧಿತ ದಿನಾಂಕದಂದು ಕೌನ್ಸಿಲಿಂಗ್‍ಗೆ ಹಾಜರಾಗುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸಿ.ರಂಗಧಾಮಯ್ಯ  ತಿಳಿಸಿದ್ದಾರೆ.

Read More

ಮಡಿಕೇರಿ ಜು.10 : ಕೊಡಗು ಜಿಲ್ಲಾ ಮೊಗೇರ ಸೇವಾ ಸಮಾಜದ ಜಿಲ್ಲಾ ಸಮಿತಿಯ ವಾರ್ಷಿಕ ಮಹಾಸಭೆ ಸುಂಟಿಕೊಪ್ಪದ ಮಂಜುನಾಥಯ್ಯ ಮೀನಾಕ್ಷಮ್ಮ ಮಂಟಪ ಸಭಾಂಗಣದಲ್ಲಿ ನಡೆಯಿತು. ಮೊಗೇರ ಸೇವಾ ಸಮಾಜದ ಜಿಲ್ಲಾಧ್ಯಕ್ಷ ಗೌತಮ್ ಶಿವಪ್ಪ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯ ವರದಿ ಮತ್ತು ಲೆಕ್ಕಪತ್ರವನ್ನು ಸಭೆಯಲ್ಲಿ ಮಂಡಿಸಲಾಯಿತು. ಮುಂದಿನ ದಿನಗಳಲ್ಲಿ ಮೊಗೇರ ಸಮಾಜವನ್ನು ಬಲಿಷ್ಠಗೊಳಿಸಲು ಎಲ್ಲಾ ಗ್ರಾಮದಲ್ಲೂ ಸಮಿತಿ ರಚಿಸುವಂತೆ ಮತ್ತು ಮೊಗೇರ ಜನಾಂಗಕ್ಕೆ ವಸತಿ ಸೌಲಭ್ಯ ಕಲ್ಪಿಸಲು ಕೈಗೊಳ್ಳಬೇಕಾದ ವಿಚಾರದ ಬಗ್ಗೆ ಗಂಭೀರವಾದ ಚರ್ಚೆ ನಡೆಸಲಾಯಿತು. ಜಿಲ್ಲಾ ಸಮಿತಿ ಮತ್ತು ಎಲ್ಲಾ ತಾಲೂಕು ಸಮಿತಿಯನ್ನು ಪುನರ್ ರಚಿಸುವಂತೆ ತೀರ್ಮಾನ ಕೈಗೊಳ್ಳಲಾಯಿತು. ವೇದಿಕೆಯಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಬಿ.ಶಿವಪ್ಪ, ಗೌರವ ಅಧ್ಯಕ್ಷ ಪಿ.ಎಂ.ರವಿ, ಜಿಲ್ಲಾ ಉಪಾಧ್ಯಕ್ಷ ದೇವಪ್ಪ, ಕುಶಾಲನಗರ ತಾಲೂಕು ಅಧ್ಯಕ್ಷ ಗಣೇಶ್, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಉಮೇಶ್, ಪ್ರಧಾನ ಕಾರ್ಯದರ್ಶಿ ಸುರೇಶ್, ಖಜಾಂಚಿ ಮಂಜು ಬರಡಿ, ಉಪಾಧ್ಯಕ್ಷ ಕೃಷ್ಣ ಹಾಜರಿದ್ದರು. ನೂತನ ಆಡಳಿತ ಮಂಡಳಿ ರಚನೆ : ಮೊಗೇರ ಸೇವಾ ಸಮಾಜದ…

Read More

ಮಡಿಕೇರಿ ಜು.10 : ಜಿಲ್ಲೆಯಲ್ಲಿ ಸುಮಾರು 2075 ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳವನ್ನು ಬಿತ್ತನೆ ಮಾಡಿರುತ್ತಾರೆ. ಆದರೆ ಇದೀಗ ಮುಸುಕಿನ ಜೋಳಕ್ಕೆ ಹೆಬ್ಬಾಲೆ, ಕೂಡಿಗೆ ಮತ್ತು ಮರೂರು ಗ್ರಾಮಗಳ ಸುತ್ತಮುತ್ತ ಬಿತ್ತನೆ ಮಾಡಿದ ಮುಸುಕಿನ ಜೋಳದಲ್ಲಿ ಸೈನಿಕ ಹುಳು ಈ ವರ್ಷ ಈಗಾಗಲೇ ಕಾಣಿಸಿಕೊಂಡಿದ್ದು, ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರಾದ ಶಭಾನಾ ಎಂ ಶೇಖ್, ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣಾ ತಜ್ಞ ಡಾ.ವೀರೇಂದ್ರ ಕುಮಾರ್‍ಕೆ.ವಿ ಮತ್ತು ಕೃಷಿ ಇಲಾಖೆಯ ಕೃಷಿ ಅಧಿಕಾರಿ ನವ್ಯ ನಾಣಯ್ಯ ಇವರನ್ನು ಒಳಗೊಂಡ ತಂಡ ಕುಶಾಲನಗರ ತಾಲ್ಲೂಕಿನ ಮರೂರು ಗ್ರಾಮದ ಮಹೇಶ್ ಮತ್ತು ಕಪನಪ್ಪನವರ ಮುಸುಕಿನ ಜೋಳದ ಗದ್ದೆಗಳಿಗೆ ಭೇಟಿ ಕೊಟ್ಟು, ಸೈನಿಕ ಹುಳುವಿನ ಭಾದೆಯನ್ನು ಪರೀಶೀಲಿಸಿದರು. ನಂತರ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಭಾನಾ ಎಂ ಶೇಖ್ ಅವರು ರೈತರಿಗೆ ಈ ಕೀಟದ ಹತೋಟಿಯ ಬಗ್ಗೆ ಮುಂಜಾಗರೂಕತೆಯನ್ನು ತೆಗೆದುಕೊಳ್ಳಬೇಕೆಂದು ತಿಳಿಸಿದರು. ಗೋಣಿಕೊಪ್ಪಲು ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರ ಮತ್ತು ಕೃಷಿ ಇಲಾಖೆ, ಕೊಡಗು…

Read More

ಮಡಿಕೇರಿ ಜು.10 : ನಗರಸಭಾ ಸದಸ್ಯ ಹಾಗೂ ಮಕ್ಕಂದೂರು ಕೊಡವ ಸಮಾಜದ ಸದಸ್ಯ ಕಾಳಚಂಡ ಅಪ್ಪಣ್ಣ ಅವರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಮಕ್ಕಂದೂರು ಕೊಡವ ಸಮಾಜ ತೀವ್ರವಾಗಿ ಖಂಡಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಕೊಡವ ಸಮಾಜದ ಅಧ್ಯಕ್ಷ ತಂಬುಕುತ್ತೀರ ಮಧು ಮಂದಣ್ಣ ಹಲ್ಲೆ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಕ್ಷುಲಕ ಕಾರಣಕ್ಕೆ ಜನಪ್ರತಿನಿಧಿಯೊಬ್ಬರನ್ನು ಹಾಡಹಗಲೇ ರಸ್ತೆಯಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿರುವುದು ಅಪರಾಧವಾಗಿದೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಈ ಪ್ರಕರಣವನ್ನು ಲಘುವಾಗಿ ಪರಿಗಣಿಸದೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷಯಾಗುವಂತೆ ನೋಡಿಕೊಳ್ಳಬೇಕು. ಆ ಮೂಲಕ ಅಪ್ಪಣ್ಣ ಅವರಿಗೆ ನ್ಯಾಯ ಒದಗಿಸಬೇಕು. ತಪ್ಪಿದಲ್ಲಿ ಮೂಲನಿವಾಸಿಗಳು ಒಗ್ಗೂಡಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಕೊಡಗಿನಲ್ಲಿ ಮೂಲ ನಿವಾಸಿಗಳಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದ್ದು, ಈ ಬಗ್ಗೆ ಜನಾಂಗ ಬಾಂಧವರು ಗಂಭೀರ ಚಿಂತನೆ…

Read More

ಮಡಿಕೇರಿ ಜು.10 : ವಿರಾಜಪೇಟೆ ವಿಧಾನಸಭಾಕ್ಷೇತದ ಶಾಸಕ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಅವರನ್ನು ಕೊಡವ ಹಾಕಿ ಅಕಾಡೆಮಿ ವತಿಯಿಂದ ಅಭಿನಂದಿಸಿ ಶುಭ ಕೋರಲಾಯಿತು. ವಿರಾಜಪೇಟೆಯಲ್ಲಿನ ಶಾಸಕರ ಕಚೇರಿಯಲ್ಲಿ ಭೇಟಿಯಾದ ಅಕಾಡೆಮಿ ಪದಾಧಿಕಾರಿಗಳು ಹಾಗೂ ಸದಸ್ಯರು, ಅಕಾಡೆಮಿಯ ಲಾಂಛನವುಳ್ಳ ಸ್ಮರಣಿಕೆ ನೀಡಿ ಗೌರವಿಸಿದರು. ಹಾಕಿ ಕ್ರೀಡೆಗೆ ಸಂಬಂಧಿಸಿದಂತೆ ಶಾಸಕರಾಗುವುದಕ್ಕೂ ಮುನ್ನ ಹಲವು ರೀತಿಯ ಸಹಕಾರ ನೀಡಿದ್ದಾರೆ. ಮುಂದೆಯೂ ಸಹಕಾರ ನೀಡುವಂತೆ ಪದಾಧಿಕಾರಿಗಳು ಕೋರಿದರು. ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ, ಕಾರ್ಯಾಧ್ಯಕ್ಷ ಮೇಕೇರಿರ ರವಿ ಪೆಮ್ಮಯ್ಯ, ಉಪಾಧ್ಯಕ್ಷ ಬಡಕಡ ದೀನಾ ಪೂವಯ್ಯ, ಕುಕ್ಕೇರ ಜಯಚಿಣ್ಣಪ್ಪ, ಮಾದಂಡ ಎಸ್.ಪೂವಯ್ಯ, ಗೌರವ ಕಾರ್ಯದರ್ಶಿ ಮಾಳೇಟಿರ ಶ್ರೀನಿವಾಸ್, ಜಂಟಿ ಕಾರ್ಯದರ್ಶಿ ಚೈಯ್ಯಂಡ ಸತ್ಯ ಗಣಪತಿ, ಸಮಿತಿ ಸದಸ್ಯರಾದ ಕಂಬೀರಂಡ ರಾಕಿ ಪೂವಣ್ಣ, ಚೇನಂದ ಸುರೇಶ್ ನಾಣಯ್ಯ, ಕಲಿಯಂಡ ಸಂಪತ್ ಅಯ್ಯಪ್ಪ, ಕುಲ್ಲೇಟಿರ ಅರುಣ್ ಬೇಬ, ಮಾರ್ಚಂಡ ಗಣೇಶ್ ಪೊನ್ನಪ್ಪ, ನೆರ್ಪಂಡ ಹರ್ಷ ಮಂದಣ್ಣ ಈ ಸಂದರ್ಭ ಹಾಜರಿದ್ದರು. 

Read More

ವಿರಾಜಪೇಟೆ ಜು.10 : ವಿರಾಜಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪ್ರಕಾಶ್ ಅವರು ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಭೇಟಿ ಮಾಡಿ ಎಸ್‍ಎಸ್‍ಎಲ್‍ಸಿಯಲ್ಲಿ ಶೇ.100ರಷ್ಟು ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ವಿಷಯ ಶಿಕ್ಷಕರಿಗೆ ವಿಧಾನ ಪರಿಷತ್ ಸದಸ್ಯರ ಉಪಸ್ಥಿತಿಯಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲು ಅನುಮತಿ ಪಡೆಯಲಾಯಿತು. ಈ ಸಂದರ್ಭದಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರು ಹಾಗೂ ಸಹಶಿಕ್ಷಕರ ಸಂಘದ ರಾಜ್ಯ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.

Read More

ಮಡಿಕೇರಿ ಜು.10 :  ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವದ ಅಂಗವಾಗಿ, ಬೆಳ್ಳಿಮಹೋತ್ಸವ ಆಚರಣಾ ಸಮಿತಿ, ಬೆಳ್ಳಿ ಮಹೋತ್ಸವ ಕ್ರೀಡಾ ಸಮಿತಿ ಹಾಗೂ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ   ಏರ್ಪಡಿಸಲಾಗಿದ್ದ ಪತ್ರಕರ್ತರ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಆದರ್ಶ್ ಅದ್ಕಲೇಗಾರ್, ನವೀನ್ ಡಿಸೋಜ ಚಾಂಪಿಯನ್ನಾಗಿ ಹೊರಹೊಮ್ಮಿದರು. ಸಿಂಗಲ್ಸ್ ವಿಭಾಗದಲ್ಲಿ 16 ತಂಡಗಳು ಭಾಗವಹಿಸಿದ್ದರೆ, ಡಬಲ್ಸ್‍ನಲ್ಲಿ 10 ತಂಡಗಳು ಪಾಲ್ಗೊಂಡಿತ್ತು. ಲೀಗ್ ಮಾದರಿಯಲ್ಲಿ ನಡೆದ ಪಂದ್ಯದಲ್ಲಿ ಸೆಮಿಫೈನಲ್ಸ್ ಹಂತಕ್ಕೆ ಸಿಂಗಲ್ಸ್ ವಿಭಾಗದಲ್ಲಿ ಆದರ್ಶ್ ಅದ್ಕಲೇಗಾರ್, ನವೀನ್ ಡಿಸೋಜಾ, ಲೋಕೇಶ್ ಕಾಟಕೇರಿ, ವಿನು ಕುಶಾಲಪ್ಪ ಅರ್ಹತೆ ಪಡೆದುಕೊಂಡರು. ಡಬಲ್ಸ್ ವಿಭಾಗದಲ್ಲಿ ಆದರ್ಶ್ ಅದ್ಕಲೇಗಾರ್-ನವೀನ್ ಡಿಸೋಜ, ಲೋಕೇಶ್ ಕಾಟಕೇರಿ-ವಿನು ಕುಶಾಲಪ್ಪ, ವಿನೋದ್-ಸುಬ್ರಮಣಿ, ಪ್ರಜ್ವಲ್-ಇಸ್ಮಾಯಿಲ್ ಕಂಡಕೆರೆ ತಂಡ ಪ್ರವೇಶ ಪಡೆಯಿತು. ಸಿಂಗಲ್ಸ್ ವಿಭಾಗದಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ವಿನುಕುಶಾಲಪ್ಪರನ್ನು ಲೋಕೇಶ್ ಕಾಟಕೇರಿ ಮಣಿಸಿ ಫೈನಲ್ ಪ್ರವೇಶಿಸಿದರೆ, ನವೀನ್ ಡಿಸೋಜರನ್ನು ಆದರ್ಶ್ ಅದ್ಕಲೇಗಾರ್ ಮಣಿಸಿ ಫೈನಲ್ ಪ್ರವೇಶಿಸಿದರು. ಫೈನಲ್ ಪಂದ್ಯದಲ್ಲಿ…

Read More

ಮಡಿಕೇರಿ ಜು.10 : ಯುವ ಬಂಟ್ಸ್ ಅಸೋಸಿಯೇಷನ್ ವತಿಯಿಂದ, ಮಡಿಕೇರಿ ನಗರ ಬಂಟರ ಮಹಿಳಾ ಘಟಕ ಮತ್ತು ಗಾಳಿಬೀಡು ಹೋಬಳಿ ಬಂಟರ ಸಂಘದ ಸಹಕಾರದೊಂದಿ ಜು.30 ರಂದು ಗಾಳಿಬೀಡಿನಲ್ಲಿ ಮುಂಗಾರಿನ ಸಂಸ್ಕೃತಿಯನ್ನು ಪ್ರತಿಬಂಬಿಸುವ ‘ಆಟಿಡೊಂಜಿ ದಿನ ಕೆ¸ರ್‍ದ ಗೊಬ್ಬು’ ವಿಶಿಷ್ಟ ಕಾರ್ಯಕ್ರಮ ನಡೆಯಲಿದೆ. ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ ಅಸೋಸಿಯೇಷನ್ ಅಧ್ಯಕ್ಷ ಬಿ.ಜೆ. ವಸಚಿತ್ ರೈ ಈ ಬಗ್ಗೆ ಮಾಹಿತಿ ನೀಡಿ, ಇಂದಿನ ಪೀಳಿಗೆಗೆ ನಮ್ಮ ಸಾಂಪ್ರದಾಯಿಕ ಬದುಕಿನ ಪರಿಚಯ ಮಾಡಿಕೊಡುವ ಸಲುವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲು ಮುಂದಾಗಿದ್ದೇವೆ. ಕಾರ್ಯಕ್ರಮ ಗಾಳಿಬೀಡಿನ ಹೊರಮಲೆ ಶಿವಪ್ರಸಾದ್‍ರವರ ಭತ್ತದ ಗದ್ದೆಯಲ್ಲಿ ನಡೆಯಲಿದೆಯೆಂದು ತಿಳಿಸಿದರು. ಅಸೋಸಿಯೇಷನ್ ಉಪಾಧ್ಯಕ್ಷ ಶರತ್ ಶೆಟ್ಟಿ ಕಾರ್ಯಕ್ರಮದ ವಿವರ ನೀಡಿ, ಕೆಸರು ಗದ್ದೆಯಲ್ಲಿ ಪುರುಷರಿಗೆ ಹ್ಯಾಂಡ್ ಬಾಲ್(7+2), 100 ಮೀಟರ್ ಓಟ(ವಿವಿಧ ವಿಭಾಗದಲ್ಲಿ), ಹಗ್ಗಜಗ್ಗಾಟ, ದಂಪತಿ ಓಟಗಳನ್ನು ಆಯೋಜಿಸಲಾಗಿದೆ. ಮಹಿಳೆಯರಿಗೆ 100 ಮೀಟರ್ ಓಟ, ಹಗ್ಗಜಗ್ಗಾಟ, ನಿಂಬೆ ಚಮಚ, ಪಾಸಿಂಗ್ ಬಾಲ್, ಮಕ್ಕಳಿಗೆ 100 ಮೀ. ಓಟ ಹಾಗೂ ಕೆಸರುಗದ್ದೆಯಲ್ಲಿ ವಿವಿಧ…

Read More