ಮಡಿಕೇರಿ ಜೂ.6 : ಕರ್ನಾಟಕ ಅರಣ್ಯ ಇಲಾಖೆ ಭಾಗಮಂಡಲ ವಲಯ ಮತ್ತು ಕೆವಿಜಿ ಐಟಿಐ ಸಹಯೋಗದಲ್ಲಿ ಕೆವಿಜಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ವಲಯ ಅರಣ್ಯಾಧಿಕಾರಿ ರವೀಂದ್ರ ಮಾತನಾಡಿ, ಅರಣ್ಯ ಇಲಾಖೆ, ಪರಿಸರ ಮತ್ತು ಮನುಷ್ಯನ ನಡುವಿನ ಸಂಬಂಧ, ಪರಿಸರ ದಿನಾಚರಣೆ ಮಹತ್ವವನ್ನು ಹೇಳಿದರು. ಈ ಸಂದರ್ಭದಲ್ಲಿ ಇಲಾಖೆ ವತಿಯಿಂದ ವಿತರಿಸಲಾದ ಗಿಡಗಳನ್ನು ಸಂಸ್ಥೆ ಆವರಣದಲ್ಲಿ ವಿದ್ಯಾರ್ಥಿಗಳ ನೇತೃತ್ವದಲ್ಲಿ ನೆಡಲಾಯಿತು. ಕಾರ್ಯಕ್ರಮದಲ್ಲಿ ಉಪವಲಯ ಅರಣ್ಯ ಅಧಿಕಾರಿಗಳಾದ ಶ್ರೀಧರ್, ನಂದಿನಿ, ಭಾಗಮಂಡಲ ಅರಣ್ಯ ಇಲಾಖೆ ಸಿಬ್ಬಂದಿಗಳು ಮತ್ತು ಕೈಗಾರಿಕಾ ತರಬೇತಿ ಸಂಸ್ಥೆಯ ಬೋಧಕ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಜರಿದ್ದರು.
ಲೇಖಕ: admin
ನಾಪೋಕ್ಲು ಜೂ.7 : ನಾಪೋಕ್ಲು ವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯಲ್ಲಿ ನಡೆದ ಕಾರ್ಯಕ್ರಮವನ್ನು ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಗಿಡ ನೆಡುವುದರ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಪರಿಸರ ದಿನಾಚರಣೆಯು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಿರಬಾರದು, ಪರಿಸರವನ್ನು ಸಂರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ, ಗಿಡವನ್ನು ನೆಟ್ಟರೆ ಸಾಲದು ಅದು ಬೆಳೆಯುವ ತನಕ ಅದನ್ನು ಪೋಶಿಸುವಂತ್ತಾಗಬೇಕು ಎಂದರು.ಪ್ರತಿಯೊಬ್ಬರು ತಮ್ಮ ಶಾಲೆ ಮತ್ತು ಮನೆಯ ಸುತ್ತಮುತ್ತಲಿನ ವಠಾರದಲ್ಲಿ ಗಿಡಗಳನ್ನು ನೆಟ್ಟು ಪರಿಸರವನ್ನು ಕಾಪಾಡಬೇಕು.ಅದರಂತೆ ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿತ್ವವನ್ನು ಹೊಂದಿಕೊಳ್ಳಬೇಕೆಂದು ಸಲಹೆ ನೀಡಿದರು.ಬಳಿಕ ಶಾಲೆಯ ವಠಾರ ಹಾಗೂ ತರಗತಿಗಳನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಅವರು ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಶುಭ ಹಾರೈಸಿದರು. ಶಾಲೆಯ ಆಡಳಿತ ಮಂಡಳಿ ಉಪಾಧ್ಯಕ್ಷ ಕೆ. ಎ. ಹಾರಿಸ್ ದಿನದ ಮಹತ್ವದ ಕುರಿತು ಮಾತನಾಡಿದರು. ಬಳಿಕ ಶಾಲಾ ವಠಾರದಲ್ಲಿ ವಿವಿಧ ತಳಿಯ ಮರದ ಸಸ್ಯಗಳನ್ನು ನೆಡಲಾಯಿತು.…
ಮಡಿಕೇರಿ ಜೂ.6 : ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ಕೂಟುಹೊಳೆ ಜಾಕ್ವೆಲ್ನಲ್ಲಿರುವ 300 ಎಚ್.ಪಿಯ ಪಂಪು ಮತ್ತು ಮೋಟಾರು ತಾಂತ್ರಿಕ ದೋಷಗಳು ಮತ್ತು ವಿದ್ಯುತ್ ವ್ಯತ್ಯಯದಿಂದ ಅನಿವಾರ್ಯವಾಗಿ ದುರಸ್ತಿಯಾಗಿದೆ. ಈ ಸಂಬಂಧ ಮೋಟಾರನ್ನು ಸರಿಪಡಿಸಲು ಮೈಸೂರಿಗೆ ಕಳುಹಿಸಲಾಗಿದೆ. ಮೋಟಾರನ್ನು ಸರಿಪಡಿಸಿ ಅಳವಡಿಸಲು ಕನಿಷ್ಠ ಎರಡು ದಿನಗಳ ಕಾಲವಕಾಶಬೇಕಿದ್ದು, ಈ ಹಿನ್ನೆಲೆಯಲ್ಲಿ ಎರಡು ದಿನಗಳು ಕುಡಿಯುವ ನೀರು ಸರಬರಾಜು ಇರುವುದಿಲ್ಲ. ಆದರೆ 90 ಎಚ್.ಪಿ.ಪಂಪ್ ಮೋಟಾರ್ನಿಂದ ನೀರು ಸರಬರಾಜು ಆಗುತ್ತಿದ್ದು, ಇದರೊಂದಿಗೆ ಕೈಪಂಪು ಮತ್ತು ಕೊಳವೆ ಬಾವಿಗಳಿಂದ ಬರುವ ನೀರನ್ನು ಮಿತವಾಗಿ ಬಳಸಿಕೊಂಡು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಮತ್ತು ಪೌರಾಯುಕ್ತ ವಿಜಯ ತಿಳಿಸಿದ್ದಾರೆ.
ಮಡಿಕೇರಿ ಜೂ.6 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯು ಜೂ.8 ರಂದು ಆರಂಭವಾಗಲಿದೆ. ಆಸಕ್ತರು ಜೂ.7 ರೊಳಗೆ ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ಮೈಸೂರಿನಲ್ಲಿರುವ ಕೇಂದ್ರ ಕಚೇರಿಗೆ ಆಗಮಿಸಿ ಹೆಸರು ನೋಂದಾಯಿಸಿ ತರಬೇತಿ ಪಡೆಯಬಹುದು. ಹೆಚ್ಚಿನ ವಿವರಗಳಿಗೆ ದೂ.ಸಂ.0821-2515944, 9964760090 ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಕುಲಸಚಿವರು ತಿಳಿಸಿದ್ದಾರೆ.
ಮಡಿಕೇರಿ ಜೂ.6 : ಪ್ರಸಕ್ತ(2023-24) ಸಾಲಿನ ಭಾರತ ಸರ್ಕಾರದ ಪ್ರಧಾನಮಂತ್ರಿ ಉದ್ಯೋಗ ಸೃಜನ (ಪಿಎಂಇಜಿಪಿ) ಕಾರ್ಯಕ್ರಮದಡಿಯಲ್ಲಿ ಉತ್ಪಾದನಾ/ ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಎಲ್ಲಾ ವರ್ಗದ ಹೊಸದಾಗಿ ಸ್ವಂತ ಉದ್ಯೋಗ ಆರಂಭಿಸುವ ನಿರುದ್ಯೋಗಿ ಯುವಕ, ಯುವತಿಯರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸ್ವಉದ್ಯೋಗ ಮಾಡಿಕೊಳ್ಳುವವರಿಗೆ ಪಟ್ಟಣ, ನಗರ, ಗ್ರಾಮೀಣ ಪ್ರದೇಶದಲ್ಲಿ ಹೊಸ ಉದ್ದಿಮೆ ಘಟಕಗಳನ್ನು ಸ್ಥಾಪಿಸುವವರಿಗೆ ಬ್ಯಾಂಕಿನಿಂದ ಗರಿಷ್ಠ 50 ಲಕ್ಷಗಳವರೆಗೆ ಸಾಲವನ್ನು ನೀಡಿ ಗರಿಷ್ಠ ಶೇ.25 ರಿಂದ 35 ರವರೆಗೆ ಸಹಾಯಧನ ನೀಡಲಾಗುವುದು. ಕಾಫಿ ಗ್ರೈಂಡಿಂಗ್, ಪ್ಲೋರ್ ಮಿಲ್, ಸಿಮೆಂಟ್ ಬ್ಲಾಕ್ಸ್, ವರ್ಮಿ ಕಾಂಪೋಸ್ಟ್, ಜೇನು ಕೃಷಿ, ಎಣ್ಣೆ ತಯಾರಿಕೆ, ರಬ್ಬರ್, ಪಶು ಆಹಾರ, ಜ್ಯೂಸ್ ತಯಾರಿಕೆ, ರೆಡಿಮೇಡ್ ಗಾರ್ಮೇಂಟ್ಸ್, ಫ್ಲಕ್ಸ್ ಅಂಡ್ ಪ್ರಿಂಟಿಂಗ್ ಪ್ರೆಸ್, ಬ್ಯೂಟಿ ಪಾರ್ಲರ್, ಸಲೂನ್, ಎಕ್ಸ್-ರೇ ಸ್ಕ್ಯಾನಿಂಗ್, ಮೆಡಿಕಲ್, ಲ್ಯಾಬ್, ಡೆಂಟಲ್ ಲ್ಯಾಬ್, ಅಡಿಕೆ ಮತ್ತು ಪೇಪರ್ ಪ್ಲೇಟ್ಸ್, ಶಾಮಿಯಾನ, ಸೆಂಟ್ರಿಂಗ್ ವಕ್ರ್ಸ್, ಎಂಜಿನಿಯರಿಂಗ್ ವಕ್ರ್ಸ್, ವೆಲ್ಡಿಂಗ್, ವಾಟರ್ ಸರ್ವೀಸ್ ಸ್ಟೇಷನ್, ಹಸು,…
ಮಡಿಕೇರಿ ಜೂ.6 : ವಿರಾಜಪೇಟೆ ತಾಲ್ಲೂಕಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಕ್ಕೆ 2023-24 ನೇ ಸಾಲಿಗೆ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಶೇ.75 ಸ್ಥಾನಗಳು ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ ಮತ್ತು ಉಳಿದ ಶೇ.25 ಸ್ಥಾನಗಳು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಲಭ್ಯವಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ 5 ನೇ ತರಗತಿಯಿಂದ 10 ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿ ನಿಲಯಗಳಲ್ಲಿ ವಾರದ 7 ದಿನಗಳಲ್ಲಿ ಪೌಷ್ಠಿಕಯುಕ್ತ ಊಟ ತಿಂಡಿ ವ್ಯವಸ್ಥೆ, ಉಚಿತವಾಗಿ ವಸತಿ, ಪುಸ್ತಕ, ಲೇಖನ ಸಾಮಗ್ರಿ, ಸಮವಸ್ತ್ರ, ಶೂ ಮತ್ತು ಸಾಕ್ಸ್ ವಿತರಣೆ, ವೈದ್ಯಕೀಯ ತಪಾಸಣೆ, ಅಂಶಕಾಲಿಕ ಬೋಧಕರಿಂದ ವಿಶೇಷ ಬೋಧನೆ ವ್ಯವಸ್ಥೆ, ಡಿಜಿಟಲ್ ಗ್ರಂಥಾಲಯ ವ್ಯವಸ್ಥೆ, ಬಾಲಕಿಯರಿಗೆ ಒನಕೆ ಓಬವ್ವ ಆತ್ಮ ರಕ್ಷಣಾ ಕೌಶಲ್ಯ ತರಬೇತಿಯನ್ನು ನೀಡಲಾಗುವುದು. ನಿಲಯಗಳ ವಿವರ ನೀಡಲಾಗಿದೆ. ಹೊಸದಾಗಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್…
ಮಡಿಕೇರಿ ಜೂ.6 : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಜೂ.14 ರಂದು ವಿರಾಜಪೇಟೆ ತಹಶೀಲ್ದಾರ್ ಕಚೇರಿ ಹಾಗೂ ಜೂ.16 ರಂದು ಮಡಿಕೇರಿ ತಹಶೀಲ್ದಾರ್ ಕಚೇರಿಗಳಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ. 08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಕೋರಿದ್ದಾರೆ.
ಮಡಿಕೇರಿ ಜೂ.6 : ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯ ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ.ರವರ ಕೋರಿಕೆಯಂತೆ ಜೂ.7 ರಂದು ಬೆಳಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೆ 220 ಕೆ.ವಿ ಕುಶಾಲನಗರ, 33/11ಕೆವಿ ಸೋಮವಾರಪೇಟೆ, 66/11 ಕೆವಿ ಆಲೂರು ಸಿದ್ದಾಪುರ, 66/11 ಕೆವಿ ಸುಂಟಿಕೊಪ್ಪ, 66/11 ಕೆವಿ ಮಡಿಕೇರಿ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಕುಶಾಲನಗರ, ಕೂಡಿಗೆ, ನಂಜರಾಯಪಟ್ಟಣ, ಸುಂಟಿಕೊಪ್ಪ, ಚೆಟ್ಟಳ್ಳಿ, ಸೋಮವಾರಪೇಟೆ, ಶಾಂತಳ್ಳಿ, ಕುಮಾರಹಳ್ಳಿ, ಗೌಡಳ್ಳಿ, ಹೆಗ್ಗಡಮನೆ ಅಬ್ಬೂರುಕಟ್ಟೆ, ಐಗೂರು, ಹೊಸಗುತ್ತಿ, ಗಣಗೂರು, ಗೋಣಿಮರೂರು, ಆಲೂರು ಸಿದ್ದಾಪುರ, ಮಾಲಂಬಿ, ಸಿದ್ದಲಿಂಗಪುರ, ಮಡಿಕೇರಿ ಪಟ್ಟಣ, ಬೋಯಿಕೇರಿ ಗಾಳಿಬೀಡು, ಕುಂಡಮೇಸ್ತ್ರಿ, ಮೇಕೇರಿ, ಕಡಗದಾಳು, ಸಂಪಾಜೆ, ಭಾಗಮಂಡಲ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕರ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಜೂ.6 : ಜೂನ್ ಎರಡನೇ ವಾರದಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದ್ದು, ರೈತರ ಬೇಡಿಕೆಗೆ ತಕ್ಕಂತೆ ರಸಗೊಬ್ಬರ ಪೂರೈಸುವಂತೆ ಸಂಬಂಧಪಟ್ಟವರಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ. ರಸಗೊಬ್ಬರ ಪೂರೈಕೆದಾರರು, ವಿತರಕರು ಹಾಗೂ ಇತರರ ಜೊತೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ರಸಗೊಬ್ಬರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಯೂರಿಯಾ, ಡಿಎಪಿ ಮತ್ತು ಎಂಒಪಿ ರಸಗೊಬ್ಬರಕ್ಕೆ ಬೇಡಿಕೆ ಇದೆ. ಆ ನಿಟ್ಟಿನಲ್ಲಿ ಬೇಡಿಕೆಗೆ ತಕ್ಕಂತೆ ದಾಸ್ತಾನು ಮಾಡಿಕೊಳ್ಳಬೇಕು. ಜೊತೆಗೆ ಮಣ್ಣು ಆರೋಗ್ಯ ನೋಡಿಕೊಂಡು ಕಾಂಪ್ಲೆಕ್ಸ್ ರಸಗೊಬ್ಬರವನ್ನು ಬಳಸುವಂತಾಗಲು ರೈತರಿಗೆ ಮನವರಿಕೆ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು. ಕೃಷಿ, ತೋಟಗಾರಿಕೆ, ಕಾಫಿ ಮಂಡಳಿ, ಸಾಂಬಾರ ಮಂಡಳಿ ಇವರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಕೃಷಿಕರು ಯಾವ ಯಾವ ರೀತಿಯ ರಸಗೊಬ್ಬರವನ್ನು ಬಳಸಬೇಕು ಎಂಬ ಬಗ್ಗೆ ಮಣ್ಣು ಆರೋಗ್ಯ ಚೀಟಿಯನ್ನು ನೋಡಿ ರಸಗೊಬ್ಬರ ಬಳಕೆ ಬಗ್ಗೆ ಸಲಹೆ ಮಾಡುವಂತಾಗಬೇಕು ಎಂದು ತಿಳಿಸಿದರು. ಜಿಲ್ಲೆಯಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ…
ಮಡಿಕೇರಿ ಜೂ.6 : ಪರಿಸರ ಅಸಮತೋಲನದಿಂದ ಇತ್ತೀಚಿನ ವರ್ಷಗಳಲ್ಲಿ ಎರಡರಿಂದ ಎರಡೂವರೆ ಡಿಗ್ರಿ ಉಷ್ಟಾಂಶ ಹೆಚ್ಚಾಗುತ್ತಿದೆ ಎಂದು ಕೊಡಗು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ಎನ್.ಮೂರ್ತಿ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ರಾಷ್ಟ್ರೀಯ ಹಸಿರು ಪಡೆ, ಕೊಡಗು ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಇವರ ಸಂಯುಕ್ತ ಆಶ್ರಯದಲ್ಲಿ ನೂತನ ನ್ಯಾಯಾಲಯ ಆವರಣದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಅರಣ್ಯ ಮತ್ತು ವನ್ಯ ಸಂಪತ್ತು ಸಂರಕ್ಷಣೆ ಮಾಡಿದ್ದಲ್ಲಿ, ಪರಿಸರ ಸಮತೋಲನ ಕಾಣಲು ಸಾಧ್ಯ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರತಿಪಾದಿಸಿದರು. ವಿಶ್ವದಲ್ಲಿ 400 ರಿಂದ 500 ಮಿಲಿಯನ್ ಮೆಟ್ರಿಕ್ ಟನ್ ನಷ್ಟು ಪ್ಲಾಸ್ಟಿಕ್ನ್ನು ಬಳಕೆ ಮಾಡಲಾಗುತ್ತಿದ್ದು, ಇದು ಒಳ್ಳೆಯ ಬೆಳವಣಿಗೆಯಲ್ಲ,…






