ವಿರಾಜಪೇಟೆ ಜೂ.6 : ಕೋಟೆಕೊಪ್ಪ ಗ್ರಾಮದಲ್ಲಿ ಪರಿಸರ ದಿನಾಚರಣೆ ಪ್ರಯುಕ್ತ ಗ್ರಾಮದ ಯುವಕರು ಗಿಡಗಳನ್ನು ನೆಟ್ಟು ಆ ಗಿಡಗಳನ್ನು ದತ್ತು ಪಡೆದು ಪೋಷಣೆ ಮಾಡುವ ಜವಾಬ್ದಾರಿಯನ್ನು ಹೊತ್ತು ಸಮಾಜಕ್ಕೆ ಕೊಡುಗೆಯಾಗಿ ನೀಡುವ ಸಂಕಲ್ಪವನ್ನು ಮಾಡುವುದರ ಮೂಲಕ ವಿನೂತನವಾಗಿ ಪರಿಸರ ದಿನಾಚರಣೆಯನ್ನು ಆಚರಿಸಿದರು. ಈ ಸಂದರ್ಭ ಶಿಕ್ಷಕರಾದ ವಿ.ಆರ್.ಸಂದೀಪ್ ಮಾತನಾಡಿ, ಮಾನವನ ದುರಾಸೆಯಿಂದ ಗಾಳಿ, ನೀರು, ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಅಂಶವೂ ಕಲುಷಿತಗೊಂಡಿದೆ. ಮನುಷ್ಯ ತನ್ನ ಅಭಿವೃದ್ಧಿಗಾಗಿ ತನಗೆ ಅರಿವಿಲ್ಲದಂತೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ. ಆದ್ದರಿಂದ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಯಲ್ಲಿ ಪಾಲ್ಗೊಂಡು ಮುಂದಿನ ಪೀಳಿಗೆಗೆ ಪರಿಸರವನ್ನು ಕೊಡುಗೆಯಾಗಿ ನೀಡಬೇಕೆಂದು ಸಲಹೆ ನೀಡಿದರು. ಗ್ರಾಮದ ಬೈತೂರೇಶ್ವರ ದೇವಸ್ಥಾನದ ಅಧ್ಯಕ್ಷರಾದ ವಿ.ಎಂ.ಶಿವರಾಜ್ ಮಾತನಾಡಿ, ಜನರು ಪರಿಸರಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಿ ಗಿಡಗಳನ್ನು ನೆಟ್ಟು ಪೋಷಿಸಬೇಕು. ಇದಕ್ಕೆ ಜನರ ಸಹಕಾರ ಅತೀ ಮುಖ್ಯ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ದೇವಸ್ಥಾನದ ಸದಸ್ಯರಾದ ವಿ.ಎನ್.ಗೋಪಿ, ವಿ. ಆರ್. ವಿಕಾಸ್, ವಿ.ಎಸ್.ಪ್ರಸನ್ನ, ವಿ.ಎಲ್. ಕಾರ್ತಿಕ್ ಮತ್ತು ಗ್ರಾಮದ ಪ್ರಮುಖರು ಪಾಲ್ಗೊಂಡಿದ್ದರು.
ಲೇಖಕ: admin
ಮಡಿಕೇರಿ ಜೂ.6 : ಕಂಡಕರೆ ಗಾಂಧಿ ಯುವಕ ಸಂಘದ ವತಿಯಿಂದ ಕಂಡಕರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಗಿಡ ನೆಡುವುದರ ಮೂಲಕ ಆಚರಿಸಲಾಯಿತು. ಈ ಸಂದರ್ಭ ಮಾತನಾಡಿದ ಶಾಲೆಯ ದೈಹಿಕ ಶಿಕ್ಷಕ ಎಚ್. ದಿನಕರ್ ಶೆಟ್ಟಿ, ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಿಸುವುದು ಎಲ್ಲರ ಕರ್ತವ್ಯವಾಗಿದೆ. ಪರಿಸರವನ್ನು ಉಳಿಸಿದರೆ ಮಾತ್ರ ನಮಗೆ ಆರೋಗ್ಯವಾದ ಜೀವನ ನಡೆಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಗಾಂಧಿ ಯುವಕ ಸಂಘದ ಅಧ್ಯಕ್ಷ ಪತ್ರಕರ್ತ ಇಸ್ಮಾಯಿಲ್ ಕಂಡಕರೆ ಮಾತನಾಡಿ, ವಿದ್ಯಾರ್ಥಿ ಜೀವನದಿಂದಲೇ ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳು ಕನಿಷ್ಠ ಒಂದು ಗಿಡವನ್ನು ನೆಟ್ಟು ಬೆಳೆಸಬೇಕಾಗಿದೆ. ನಶಿಸಿ ಹೋಗುತ್ತಿರುವ ನಮ್ಮ ಪರಿಸರವನ್ನು ಉಳಿಸಿ, ಬೆಳೆಸಬೇಕಾಗಿರುವುದು ಎಲ್ಲರ ಜವಬ್ದಾರಿಯಾಗಿದೆ. ಶಾಲೆಯ ಪರಿಸರವನ್ನು ಶುಚಿತ್ವದಿಂಡುವುದು ವಿದ್ಯಾರ್ಥಿಗಳು ಕರ್ತವ್ಯವಾಗಿದೆ. ಶಾಲೆಯಲ್ಲಿ ವಿದ್ಯಾರ್ಥಿಗಳು ತಮ್ಮ ನೆನಪಿಗಾಗಿ ಗಿಡವನ್ನು ನೆಟ್ಟು ಬೆಳೆಸಬೇಕು. ನಮ್ಮ ಸುತ್ತಲಿನ ಪರಿಸರವನ್ನು ಸಂರಕ್ಷಿಸಿ, ವಿದ್ಯಾರ್ಥಿ ಜೀವನದಿಂದಲೇ ಪರಿಸರ ಪ್ರೇಮವನ್ನು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಗಾಂಧಿ ಯುವಕ ಸಂಘದಿಂದ ಪರಿಸರದ…
ವಿರಾಜಪೇಟೆ ಜೂ.6 : ನಗರದ ಮದರ್ ತೆರೇಸಾ ಸೇವಾ ಕೇಂದ್ರ ವತಿಯಿಂದ ವಿರಾಜಪೇಟೆಯ ಸಂತ ಅನ್ನಮ್ಮ ಧರ್ಮ ಕೇಂದ್ರದ ಆಯ್ದ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಂದನೀಯ ಗುರು ಐಸಾಕ್ ರತ್ನಾಕರ್, ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚು ಶಿಕ್ಷಣವನ್ನು ಪಡೆದುಕೊಂಡು ಉತ್ತಮ ಅಂಕಗಳನ್ನ ಪಡೆಯುವಂತೆ ನುಡಿದರಲ್ಲದೆ ಮದರ್ ತೆರೇಸಾ ಸೇವಾಕೇಂದ್ರದ ಸೇವಾ ಕಾರ್ಯಗಳನ್ನ ಶ್ಲಾಘೀಸಿದರಲ್ಲದೇ, ರೂ.10,000 ದೇಣಿಗೆಯನ್ನು ನೀಡಿದರು. ವಂದನೀಯ ಗುರು ಯೇಸು ಪ್ರಸಾದ್ ಮಾತನಾಡಿ, ವಿದ್ಯಾರ್ಥಿಗಳಿಗೆ ಸಿಕ್ಕ ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ಹಿತನುಡಿಗಳನ್ನಾಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಿ.ಎಸ್ ಮಚ್ಚಾಡೊ, ಸಂಸ್ಥೆ ವತಿಯಿಂದ ಆಯ್ದ ಕೆಲವು ವಿದ್ಯಾರ್ಥಿಗಳಿಗೆ ಉಚಿತವಾಗಿ ವಿದ್ಯಾರ್ಜನೆಗೆ ಪುಸ್ತಕ ಹಾಗೂ ಇತರ ಸಾಮಾಗ್ರಿಗಳನ್ನು ವಿತರಿಸಲಾಗುತ್ತಿದೆ. ಇದನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ಉತ್ತಮ ರೀತಿಯಲ್ಲಿ ವ್ಯಾಸಂಗ ಮಾಡಿ ಶಾಲೆಗೂ, ಪೋಷಕರಿಗೆ ಕೀರ್ತಿ ತರುವಂತಾಗಬೇಕು. ಮುಂದಿನ ದಿನಗಳಲ್ಲಿ ಸಂಸ್ಥೆ ವತಿಯಿಂದ ಸಾದ್ಯವಾದ ಮಟ್ಟಿಗೆ ಸಾಮಾಜಿಕ ಸೇವೆಯನ್ನು ನಡೆಸಿಕೊಂಡು ಬರಲಾಗುವುದು. ಪ್ರತಿಯೋರ್ವ ವಿದ್ಯಾರ್ಥಿಗಳಿಗೆ ವಿದ್ಯೇಯೊಂದಿಗೆ ವಿನಯವೂ ಮುಖ್ಯ.…
ಮಡಿಕೇರಿ ಜೂ.6 : ಕರಿಕೆ ಅರಣ್ಯಾಧಿಕಾರಿಗಳು ಮತ್ತು ಸಾರ್ವಜನಿಕರು ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು. ಅರಣ್ಯದಲ್ಲಿ ಗಿಡಗಳನ್ನು ನೆಟ್ಟು ಪರಿಸರದ ಕುರಿತು ಜಾಗೃತಿ ಮೂಡಿದರು.
ಮಡಿಕೇರಿ ಜೂ.6 : ಕೊಡಗು ವಿಶ್ವ ವಿದ್ಯಾಲಯದ ಸಮಾಜ ಕಾರ್ಯ ಅಧ್ಯಯನ ವಿಭಾಗದ ವತಿಯಿಂದ ಪೊನ್ನಂಪೇಟೆ ತಾಲ್ಲೂಕಿನ ಕೋತೂರು ಆಶ್ರಮ ಶಾಲೆಯಲ್ಲಿ ಹಮ್ಮಿಕೊಳ್ಳಲಾದ ಗ್ರಾಮೀಣ ಅಧ್ಯಯನ ಶಿಬಿರ ಹಮ್ಮಿಕೊಳ್ಳಲಾಗಿದೆ. ಏಳು ದಿನಗಳವರೆಗೆ ನಡೆಯಲಿರುವ ಶಿಬಿರದ ಅಂಗವಾಗಿ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂ. ಆಲೂರ ಸಮಾಜ ಕಾರ್ಯ ಪ್ರಶಿಕ್ಷಣಾರ್ಥಿಗಳು ಹಾಗೂ ಉಪನ್ಯಾಸಕರುಗಳನ್ನು ವಿಶ್ವವಿದ್ಯಾಲಯದ ಆವರಣದಿಂದ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಡಾ. ಸಿನಪ್ಪ ಹಾಜರಿದ್ದರು.
ಮಡಿಕೇರಿ ಜೂ.6 : ನಗರದ ಹಿಲ್ ರಸ್ತೆಯಲ್ಲಿರುವ ಕಿಂಗ್ಸ್ ಆಫ್ ಕೂರ್ಗ್ ನೃತ್ಯ ಸಂಸ್ಥೆ ವತಿಯಿಂದ ಏರ್ಪಡಿಸಲಾಗಿದ್ದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಹಾಗೂ ಛದ್ಮವೇಶ ಸ್ಪರ್ಧೆ ನಡೆಯಿತು. ಸಂಸ್ಥೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಕ್ತಿ ದಿನಪತ್ರಿಕೆ ಉಪ ಸಂಪಾದಕ ಕುಡೆಕಲ್ ಸಂತೋಷ್ ಮಾತನಾಡಿ ರಜಾ ದಿನಗಳಲ್ಲಿ ಮಕ್ಕಳು ಕಾಲಹರಣ ಮಾಡುವದಕ್ಕಿಂತ ಇಂತಹ ಬೇಸಿಗೆ ಶಿಬಿರದಲ್ಲಿ ಭಾಗವಹಿಸಿ ಪಠ್ಯೇತರ ಚಟುವಟಿಕೆಗಳಲ್ಲೂ ತಲ್ಲೀನರಾಗಬೇಕು. ಇದು ಮುಂದಕ್ಕೆ ಸಮಾಜದಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಿದೆ. ಪೋಷಕರು ಕೂಡ ಮಕ್ಕಳ ಆಸಕ್ತಿಗೆ ತಕ್ಕ ಹಾಗೆ ಪ್ರೋತ್ಸಾಹ ನೀಡಬೇಕೆಂದು ಹೇಳಿದರು. ಇದೇ ಸಂದರ್ಭದಲ್ಲಿ ಛದ್ಮವೇಶ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಭಾಗವಹಿಸಿದವರೆಲ್ಲರಿಗೂ ಪ್ರಶಂಸನಾ ಪತ್ರ, ಪಾರಿತೋಷಕ ನೀಡಲಾಯಿತು. ತಿರ್ಪುಗಾರರಾಗಿ ಕುಡೆಕಲ್ ಸವಿತಾ ಸಂತೋಷ್ ಹಾಗೂ ಕಿಂಗ್ಸ್ ಆಫ್ ಕೂರ್ಗ್ನ ನೃತ್ಯ ತರಬೇತುದಾರ ಕಿರಣ್ ಕಾರ್ಯನಿರ್ವಹಿಸಿದರು. ಕಿಂಗ್ಸ್ ನೃತ್ಯ ಸಂಯೋಜಕ ಮಹೇಶ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಕ್ಕಳು, ಪೋಷಕರು ಪಾಲ್ಗೊಂಡಿದ್ದರು.
ಮಡಿಕೇರಿ ಜೂ.3 : ಕೊಡಗಿನ ಮೂಲಭೂತ ಸಮಸ್ಯೆಗಳ ಬಗೆಹರಿಕೆಗೆ ಅಗತ್ಯವಾದ ‘ಸಚಿವ’ ಸ್ಥಾನ ಜಿಲ್ಲೆಯ ಶಾಸಕ ಅಜ್ಜಿಕುಟ್ಟೀರ ಪೊನ್ನಣ್ಣ ಅವರಿಗೆ ಕೈತಪ್ಪಿರುವುದು ಜಿಲ್ಲೆಯ ಕಾಂಗ್ರೆಸ್ ಪ್ರಮುಖರು ಮತ್ತು ಕಾರ್ಯಕರ್ತರಿಗೆ ಅತೀವ ನೋವನ್ನು ಉಂಟುಮಾಡಿದೆಯೆಂದು ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎರಡು ಕ್ಷೇತ್ರಗಳ ಚುನಾವಣೆಯ ಹಂತದಲ್ಲಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವ ಕುಮಾರ್ ಅವರು, ಕೊಡಗಿನಲ್ಲಿ ಕಾಂಗ್ರೆಸ್ ಎರಡು ಸ್ಥಾನಗಳನ್ನು ಪಡೆದುಕೊಂಡಲ್ಲಿ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು. ಇಂದು ಅವರ ಭರವಸೆ ಈಡೇರಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಪ್ರಸ್ತುತ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಅವರನ್ನು ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರನ್ನಾಗಿ ನಿಯುಕ್ತಿಗೊಳಿಸಿ, ಕ್ಯಾಬಿನೆಟ್ ಸಚಿವ ಸ್ಥಾನದ ಎಲ್ಲಾ ಸೌಲಭ್ಯಗಳನ್ನು ನೀಡಲಾಗಿದೆ. ಇದು ಸಂತಸವನ್ನು ಉಂಟುಮಾಡಿದೆಯಾದರು, ಕೊಡಗಿನ ಮೂಲಭೂತ ಸಮಸ್ಯೆಗಳನ್ನು ಸಚಿವ ಸಂಪುಟದ ಮುಂದಿಟ್ಟು ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಸಚಿವ ಸ್ಥಾನದ ಅಗತ್ಯವಿದೆಯೆಂದು ಒತ್ತಿ ನುಡಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕೊಡಗು ಭೌಗೋಳಿಕವಾಗಿ ಮತ್ತು ಸಾಂಸ್ಕøತಿಕವಾಗಿ ಇತರೆ…
ಮಡಿಕೇರಿ ಜೂ.3 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೊಡಗು ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಕೊಡಗು ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಜೂ.5 ರಂದು ಬೆಳಗ್ಗೆ 10 ಗಂಟೆಗೆ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭವು ನೂತನ ನ್ಯಾಯಾಲಯ ಆವರಣದಲ್ಲಿ ನಡೆಯಲಿದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಡಿ.ಟಿ ಪುಟ್ಟರಂಗಸ್ವಾಮಿ ಅವರು ಚಾಲನೆ ನೀಡಲಿದ್ದಾರೆ. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶರಾದ ಕೆ.ಬಿ.ಪ್ರಸಾದ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ಎನ್.ಮೂರ್ತಿ, ಪೋಲಿಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಮುಖ್ಯ ಅತಿಥಿಗಳಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ…
ಮಡಿಕೇರಿ ಜೂ 3 : ಹತ್ತು ಹೆಚ್ಪಿ ಗಿಂತ ಹೆಚ್ಚುವರಿ ವಿದ್ಯುತ್ ಸಂಪರ್ಕ ಹೊಂದಿರುವ ಕಾಫಿ ಬೆಳೆಗಾರರ ವಿದ್ಯುತ್ ಸ್ಥಾವರಗಳಲ್ಲಿ ಬಾಕಿ ಕಂದಾಯ ಉಳಿಸಿಕೊಂಡಿರುವುದಕ್ಕೆ ಈಗಾಗಲೇ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಸೂಚನೆ ನೀಡಲಾಗಿದೆ. ಬಾಕಿ ಕಂದಾಯ ಮೊತ್ತವನ್ನು ಮುಂದಿನ ಒಂದು ವಾರದ ಅವದಿಯೊಳಗೆ ಪೂರ್ಣ ಪ್ರಮಾಣದಲ್ಲಿ ಹತ್ತಿರದ ಚಾ,ವಿ,ಸ,ನಿ,ನಿ ಕಂದಾಯ ಶಾಖೆಗೆ ಪಾವತಿಸಲು ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ಮುಂದುವರಿದು ನಿಗದಿತ ಅವದಿಯೊಳಗೆ ಬಾಕಿ ಕಂದಾಯವನ್ನು ಪಾವತಿಸದಿದ್ದಲ್ಲಿ ಕ್ಲಬ್ಬಿಂಗ್ ನೋಟಿಸ್ ನೀಡಲಾಗಿರುವ ವಿದ್ಯುತ್ ಸ್ಥಾವರಗಳ ವಿದ್ಯುತ್ ನಿಲುಗಡೆಗೊಳಿಸಲಾಗುವುದರಿಂದ, ಇಂತಹ ಘಟನೆಗಳಿಗೆ ಅವಕಾಶ ನೀಡದೆ ಕೂಡಲೇ ಬಾಕಿ ಮೊತ್ತವನ್ನು ಪಾವತಿಸುವಂತೆ ಸೆಸ್ಕ್ ಎಂಜಿನಿಯರ್ ಅನಿತಾ ಬಾಯಿ ಕೋರಿದ್ದಾರೆ.
ಮಡಿಕೇರಿ ಜೂ. 3 : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯಾಚರಣೆಯಲ್ಲಿರುವ 100 ಸಂಖ್ಯಾಬಲವುಳ್ಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ, ಮಡಿಕೇರಿಯಲ್ಲಿ ವಿದ್ಯಾರ್ಥಿಗಳು ವಾಸಕ್ಕೆ ಸೂಕ್ತ ಮೂಲಭೂತ ಸೌಕರ್ಯವುಳ್ಳ ನೀರಿನ ವ್ಯವಸ್ಥೆ, ವಿದ್ಯುತ್, ಕಾಂಪೌಂಡು, ಶೌಚಾಲಯ, ಸ್ನಾನದ ಗೃಹಗಳ ವ್ಯವಸ್ಥೆ ಹೊಂದಿದ್ದು, ಕಟ್ಟಡಕ್ಕೆ ಸಂಬಂಧಿಸಿದಂತೆ ಮೂಲ ದಾಖಲೆಗಳಿರುವ ಸೂಕ್ತ ಕಟ್ಟಡ ಅಥವಾ ಮನೆ ಕೂಡಲೇ ಬಾಡಿಗೆಗೆ ಬೇಕಿದೆ. ಸಂಪರ್ಕಿಸಬೇಕಾದ ದೂರಾವಾಣಿ ಸಂಖ್ಯೆ: 8105240463/ 9972995632/ 8762476790 ಸಂಖ್ಯೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿ ಮೋಹನ್ ಕುಮಾರ್ ತಿಳಿಸಿದ್ದಾರೆ.






