ಲೇಖಕ: admin

ಮಡಿಕೇರಿ ಜೂ.3 : 2023-24 ಸಾಲಿಗೆ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ,2 ಬಿ, 3ಎ ಹಾಗೂ 3ಬಿ, ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿಯು ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ರೂ. 1 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.44,500 ಆಗಿದೆ. ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ SATS ID ಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ: https://shp.karnataka.gov.inನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 15 ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ,…

Read More

ಮಡಿಕೇರಿ ಜೂ.3 : ಪ್ರಸಕ್ತ ವರ್ಷದಲ್ಲಿ ಪ್ರಾಕೃತಿಕ ವಿಕೋಪ ಘಟನೆಗಳು ವರದಿಯಾದಲ್ಲಿ, ಕಾರ್ಯಾಚರಣೆ ನಡೆಸಲು ಅಗತ್ಯವಾದ ವಾಹನಗಳನ್ನು ಇಲಾಖಾ ವ್ಯಾಪ್ತಿಯಲ್ಲಿ ಸನ್ನದ್ದವಾಗಿರಿಸಲು ಹಾಗೂ ಈ ವಾಹನಗಳಿಗೆ ಬಾಡಿಗೆ ದರ ನಿಗದಿಪಡಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಹಾಗೂ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅಧ್ಯಕ್ಷತೆಯಲ್ಲಿ ನಿರ್ಧರಿಸಲಾಗಿದೆ. ಅದರಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಕೊಡಗು ಜಿಲ್ಲೆ, ಮಡಿಕೇರಿ ಅವರು ಅಗತ್ಯ ವಾಹನಗಳ ಮಾಲೀಕರೊಂದಿಗೆ ಚರ್ಚಿಸಿ ಅವುಗಳ ಬಾಡಿಗೆ ದರವನ್ನು ನಿಗದಿಪಡಿಸಿದ್ದಾರೆ. ವರ್ಗ-1 ಜೀಪ್ ಒಂದು ದಿನಕ್ಕೆ ರೂ 3,750, ವರ್ಗ-2 ಜೆ.ಸಿ.ಬಿ ಒಂದು ಗಂಟೆಗೆ ರೂ.950 ಹಾಗೂ ಒಂದು ದಿನಕ್ಕೆ ರೂ.7000, ವರ್ಗ-3 ಹಿಟಾಚಿ (ಶಿಪ್ಟಿಂಗ್ ಒನ್ ಸೈಡ್) ರೂ.7000 ಹಿಟಾಚಿ ಇಘಿ70 ಒಂದು ಗಂಟೆಗೆ ರೂ.1100 ಹಿಟಾಚಿ ಇಘಿ110 ಒಂದು ಗಂಟೆಗೆ ರೂ.1350 ಹಿಟಾಚಿ ಇಘಿ140 ಒಂದು ಗಂಟೆಗೆ ರೂ.1700 ವರ್ಗ-4 ಕ್ರೇನ್ ( 101 ಕೆಪಾಸಿಟಿ) ಒಂದು ಗಂಟೆಗೆ ರೂ. 1000 ಕ್ರೇನ್ (151 ಕೆಪಾಸಿಟಿ) ಒಂದು ಗಂಟೆಗೆ ರೂ.1100 ಕ್ರೇನ್…

Read More

ಮಡಿಕೇರಿ ಜೂ.3 : ಜನರಲ್ ತಿಮ್ಮಯ್ಯ ಸ್ಮಾರಕ ಭವನ ನಿರ್ವಹಣಾ ಸಮಿತಿ ಸಭೆಯು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅಧ್ಯಕ್ಷತೆಯಲ್ಲಿ ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ನಡೆಯಿತು. ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭೇಟಿ ನೀಡುವಂತಾಗಲು ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ “ಬಾರ್‍ಕೋಡ್ ಸ್ಕ್ಯಾನರ್” ಫಲಕವನ್ನು ರಾಜಾಸೀಟು, ರಾಜರ ಗದ್ದುಗೆ, ನಗರದ ಕೋಟೆ, ಓಂಕಾರೇಶ್ವರ ದೇವಾಲಯ, ನಿಸರ್ಗಧಾಮ, ದುಬಾರೆ ಮತ್ತಿತರ ಪ್ರಮುಖ ಸ್ಥಳಗಳಲ್ಲಿ ಅಳವಡಿಸುವಂತೆ ನಿರ್ಮಿತಿ ಕೇಂದ್ರದ ಎಂಜಿನಿಯರಿಗೆ ಸೂಚಿಸಿದರು. “ಬಾರ್‍ಕೋಡ್ ಸ್ಕ್ಯಾನರ್” ಫಲಕ ಅಳವಡಿಸುವುದಕ್ಕೆ ಪ್ರವಾಸೋದ್ಯಮ ಇಲಾಖೆಯಿಂದ ಹಣ ಭರಿಸಲಾಗುವುದು. ಈ ಸಂಬಂಧ ಅಂದಾಜು ಪಟ್ಟಿ ಸಲ್ಲಿಸುವಂತೆ ನಿರ್ಮಿತಿ ಕೇಂದ್ರದ ಎಂಜಿನಿಯರ್‍ಗೆ ತಿಳಿಸಿದರು. ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಆದ್ದರಿಂದ ವಾರದ ಎಲ್ಲಾ ದಿನಗಳಲ್ಲಿ ಜನರಲ್ ತಿಮ್ಮಯ್ಯ ಸ್ಮಾರಕ ಭವನ ತೆರೆಯುವಂತಾಗಬೇಕು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸಲಹೆ ಮಾಡಿದರು. ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣದಲ್ಲಿ ಮತ್ತಷ್ಟು ಆಕರ್ಷಣಿಯಗೊಳಿಸುವ ನಿಟ್ಟಿನಲ್ಲಿ ವಿವಿಧ…

Read More

ಮಡಿಕೇರಿ ಜೂ.3 : ಕೊಡಗು ಜಿಲ್ಲೆಯಲ್ಲಿ ಕನಸಾಗಿಯೇ ಉಳಿದಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಜಿಲ್ಲೆಯ ರೈತರ ಬೆಳೆಗೆ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಕೊಡವ ರೈಡರ್ಸ್ ಕ್ಲಬ್ ಒತ್ತಾಯಿಸಿದೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ನೂತನವಾಗಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ನೇಮಕಗೊಂಡು, ಸಂಪುಟ ದರ್ಜೆಯ ಸಚಿವ ಸ್ಥಾನ ಪಡೆದಿರುವ ಅಜ್ಜಿಕುಟ್ಟೀರ ಎಸ್ ಪೊನ್ನಣ್ಣ  ಅವರನ್ನು ಬೆಂಗಳೂರಿನ ಕಚೇರಿಯಲ್ಲಿ ಭೇಟಿಯಾದ ಕೊಡವ ರೈಡರ್ಸ್ ಕ್ಲಬ್ ಪ್ರಮುಖರು ಸಂಸ್ಥೆಯ ಪರವಾಗಿ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು. ನಂತರ ಜಿಲ್ಲಾಯ ಸಮಸ್ಯೆಗಳ ಬಗ್ಗೆ ಗಮನ ಸೆಳೆದ ಕ್ಲಬ್‍ನ ಪ್ರಮುಖರು ಕೊಡಗು ಜಿಲ್ಲೆಯಲ್ಲಿ ಬಹುದಿನಗಳ ಬೇಡಿಕೆಯಾಗಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ತಕ್ಷಣವೇ ತೆರೆದು ಜಿಲ್ಲೆಯ ಜನರ ಪ್ರಾಣ ರಕ್ಷಣೆ ಮುಂದಾಗಬೇಕೆಂದು ಮನವಿ ಮಾಡಿದರು. ಕೊಡಗಿನ ಪ್ರಮುಖ ಬೆಳೆಗಳಾದ ಭತ್ತ, ಕಾಫಿ ಹಾಗೂ ಕರಿಮೆಣಸಿನ ಬೆಳೆಗೆ ಬೆಂಬಲ ಬೆಲೆ ಘೋಷಿಸಲು ಸರ್ಕಾರಕ್ಕೆ ಒತ್ತಾಯ ಹೇರಬೇಕು ಎಂಬ ಮನವಿ ಸಲ್ಲಿಸಿದರು. ಈ ಸಂದರ್ಭ ಕ್ಲಬ್ ನ…

Read More

ಮಡಿಕೇರಿ ಜೂ.3 : ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗ್ರೀನ್ ಸಿಟಿ ಫೋರಂ ಹಾಗೂ ಮಡಿಕೇರಿ ನಗರಸಭೆಯ ಸಂಯುಕ್ತಶ್ರಯದಲ್ಲಿ ಜೂ.5 ರಂದು ಉಚಿತವಾಗಿ ಗಿಡಗಳನ್ನು ವಿತರಿಸಲಾಗುವುದು. ಅಂದು ಬೆಳಿಗ್ಗೆ 8 ಗಂಟೆಗೆ ನಗರಸಭೆಯ ಆವರಣದಲ್ಲಿ ಗಿಡಗಳನ್ನು ವಿತರಣೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ 8147159011, 7022058953 ಸಂಪರ್ಕಿಸಬಹುದಾಗಿದೆ ಎಂದು ಫೋರಂ ಅಧ್ಯಕ್ಷ ಚೈಯ್ಯಂಡ ಸತ್ಯ ಗಣಪತಿ ತಿಳಿಸಿದ್ದಾರೆ.

Read More

ಮಡಿಕೇರಿ ಜೂ.3 :  ಕಾಫಿ ತೋಟಕ್ಕೆ ಆಹಾರವರಸಿ ದಾಳಿ ಮಾಡಿದ್ದ ಕಾಡಾನೆಯೊಂದು ಕೆರೆಯ ಕೆಸರಿನಲ್ಲಿ ಸಿಲುಕಿಕೊಂಡು ಪರದಾಡಿ, ಅರಣ್ಯ ಇಲಾಖೆಯ ಕಾರ್ಯಾಚರಣೆಯ ಮೂಲಕ ಹೊರಬಂದ ಘಟನೆ ವಿರಾಜಪೇಟೆ ತಾಲ್ಲೂಕಿನ ಕರಡ ಗ್ರಾಮದಲ್ಲಿ ನಡೆದಿದೆ. ನರಿಯಂದಡ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕರಡ ಗ್ರಾಮದ ನಡಿಕೇರಿಯಂಡ ಅಯ್ಯಣ್ಣ ಎಂಬವರ ಕಾಫಿ ತೋಟಕ್ಕೆ ಶುಕ್ರವಾರ ರಾತ್ರಿ ಕಾಡಾನೆಗಳ ಹಿಂಡು ಸಹಿತ ದಾಳಿ ಇಟ್ಟಿದ್ದವು. ನೀರು ಕುಡಿಯುವ ಭರದಲ್ಲಿ ಕೆರೆಯಲ್ಲಿ ಮಾಲ್ಕಕ್ಕೂ ಹೆಚ್ಚಿನ ಕಾಡಾನೆಗಳು ಸಿಲುಕಿ ಕೊಂಡಿದ್ದವು. ಇತರ ಆನೆಗಳು ಹರ ಸಾಹಸ ಪಟ್ಟು ಕೆರೆಯಿಂದ ಹೊರ ಬರುವಲ್ಲಿ ಯಶಸ್ವಿಯಾಗಿದ್ದರೆ, ಒಂದು ಕಾಡಾನೆಗೆ ಮಾತ್ರ ಕೆರೆಯಿಂದ ಹೊರ ಬರಲು ಸಾಧ್ಯವಾಗಿರಲಿಲ್ಲ. ಈ ಬಗ್ಗೆ ತೋಟ ಮಾಲೀಕರು ಮಾಹಿತಿ ನೀಡಿದ ಮೇರೆ ವಿರಾಜಪೇಟೆ ಅರಣ್ಯ ವಲಯದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಕೆರೆಯ ಒಂದು ಭಾಗವನ್ನು ಅಗೆದು, ಮರದ ದಿಮ್ಮಿಗಳನ್ನು ಜೋಡಿಸಿ, ಕಾಡಾನೆ ಕೆರೆಯಿಂದ ಹೊರ ಬರುವುದಕ್ಕೆ ಅನುವು ಮಾಡಿಕೊಟ್ಟರು. ಇಲಾಖಾ ಸಿಬ್ಬಂದಿಗಳ ಮೂರು ಗಂಟೆಗಳ ಸುದೀರ್ಘ ಕಾರ್ಯಾಚರಣೆ ಬಳಿಕ…

Read More

ಮಡಿಕೇರಿ ಜೂ.3 : 2022-23ನೇ ಶೈಕ್ಷಣಿಕ ಸಾಲಿನಲ್ಲಿ ಎಸ್‍ಎಸ್‍ಎಲ್‍ಯಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದ ಕರಿಕೆ ಸರಕಾರಿ ಪ್ರೌಢ ಶಾಲೆ ವಿದ್ಯಾರ್ಥಿಗಳನ್ನು ಶಾಲಾ ಶಿಕ್ಷಕ ಮತ್ತು ಸಾಕ್ಷರತಾ ಇಲಾಖೆ, ಕೊಡಗು ಜಿ.ಪಂ ಹಾಗೂ ಶಾಲಾಭಿವೃದ್ಧಿ ಸಮಿತಿ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಕೆ.ಎಂ.ನಿನ್ನು ಮೋಳ್ (595), ಕೆ.ವಿ.ಜೋತ್ಸ್ನಾ (564), ಕೆ.ಆರ್.ಗೌತಮಿ (558), ಎಂ.ಆರ್.ಗೋಪಿಕಾ (548) ಅಭಿನಂದನೆಗೆ ಭಾಜನರಾದರು. ಈ ಸಂದರ್ಭ ಕರಿಕೆ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಎಸ್.ಡಿ.ಎಂ.ಸಿ ಪೋಷಕರು ಹಾಗೂ ಸಾರ್ವಜನಿಕರು ಹಾಜರಿದ್ದರು.

Read More

ಬೆಂಗಳೂರು :  ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಹಿನ್ನೆಲೆಯಲ್ಲಿ ಕನ್ನಡಿಗರಿಗೆ ಅಗತ್ಯ ನೆರವು ನೀಡಲು ಹಾಗೂ ಸುರಕ್ಷತೆಯ ಮಾಹಿತಿ ಒದಗಿಸಲು ರಾಜ್ಯ ತುರ್ತು ನಿರ್ವಹಣಾ ಕೇಂದ್ರ (SEOC)ದಲ್ಲಿ ನಾಗರೀಕರ ಅನುಕೂಲಕ್ಕಾಗಿ ಸಹಾಯವಾಣಿ ತೆರೆಯಲಾಗಿದೆ. ದೂರವಾಣಿ ಸಂಖ್ಯೆ: 1070, 080-22253707, 080-22340676 ಕ್ಕೆ ಕರೆಮಾಡಿ ಮಾಹಿತಿ ಅಥವಾ ನೆರವು ಪಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Read More

ಬೆಂಗಳೂರು :  ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅವರಿಗೆ ಅಗತ್ಯ ನೆರವನ್ನು ಒದಗಿಸಲು ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಜಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಅಥವಾ ಇತರೆ ಯಾವುದೇ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗರ ರಕ್ಷಣೆಗೆ ಸಂಪೂರ್ಣ ನೆರವು ನೀಡಲಾಗುವುದು. “ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಿದೆ” ವಿದೆ ಎಂದರು.   

Read More

ನಾಪೋಕ್ಲು ಜೂ.3 :    ಅಕ್ರಮವಾಗಿ ಕಾಡುಕೋಣ ಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ನಾಪೋಕ್ಲು ಪೊಲೀಸರು ಯಶಸ್ವಿಯಾಗಿದ್ದಾರೆ. ನಾಪೋಕ್ಲು ಸಮೀಪದ ಕಕ್ಕಬ್ಬೆ ಕುಂಜಿಲ ಗ್ರಾಮದಿಂದ ಮದ್ಯರಾತ್ರಿ ಕೇರಳ ರಾಜ್ಯದ ನೊಂದಣಿ ಹೊಂದಿರುವ  ಕಾರಿನಲ್ಲಿ ಅಕ್ರಮವಾಗಿ ಕಾಡುಕೋಣ ಮಾಂಸ ಸಾಗಾಟ ಮಾಡುತ್ತಿರುವ ಬಗ್ಗೆ ನಾಪೋಕ್ಲು ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದಾಗ ವಾಹನದೊಂದಿಗೆ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಗಳನ್ನು ಸೆರೆ ಹಿಡಿಯಲು  ಬೆನ್ನಟ್ಟಿದ ನಾಪೋಕ್ಲು ಪೊಲೀಸರು ಮಡಿಕೇರಿ ಗ್ರಾಮಾಂತರ ಪೋಲೀಸರ ಸಹಕಾರದೊಂದಿಗೆ ಮಡಿಕೇರಿ ಸಮೀಪದ ಮೇಕೇರಿ ಸುಭಾಷ್ ನಗರ ಗ್ರಾಮದ ರಸ್ತೆಯಲ್ಲಿ ಸಂಚರಿಸುವಾಗ ಆರೋಪಿಗಳ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖನಗೊಂಡಿದ್ದರಿ0ದ ಸಂಚರಿಸಲಾಗದೆ ಆರೋಪಿಗಳು ವಾಹನವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಇದೇ ಸಂದರ್ಭ ಸ್ಥಳಕ್ಕೆ ಧಾವಿಸಿದ ಪೊಲೀಸರು ವಾಹನ ಸಮೇತ ಮಾಂಸವನ್ನು ವಶಕ್ಕೆ ಪಡೆದುಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಬಲೆಬಿಸಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕ…

Read More