ಮಡಿಕೇರಿ ಜೂ.3 : ವಿರಾಜಪೇಟೆ ಮತ್ತು ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಮಳೆ ನೀರು ಸಾರಾಗವಾಗಿ ಹರಿಯುವಂತಾಗಲು ರಾಜ ಕಾಲುವೆ ಮಾರ್ಗ ಸ್ವಚ್ಚತಾ ಕಾರ್ಯ ಕೈಗೊಳ್ಳಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಜೂ.3 : ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಸಂ.ಆಲೂರ ಅವರು, ನೂತನ ವಿಶ್ವ ವಿದ್ಯಾಲಯಗಳ ಕುಲಪತಿಗಳ ನಿಯೋಗದ ಜತೆಗೂಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಗೃಹ ಕಚೇರಿ ಕೃಷ್ಣದಲ್ಲಿ ಭೇಟಿ ಮಾಡಿ ಶುಭ ಕೋರಿದರು. ಈ ಸಂದರ್ಭ ಮಾತನಾಡಿದ ಮುಖ್ಯ ಮಂತ್ರಿ, ದೇಶದ ಭವಿಷ್ಯವನ್ನು ಹೆಚ್ಚು ವೈಜ್ಞಾನಿಕವಾಗಿ ರೂಪಿಸುವ ಶಕ್ತಿ ವಿಶ್ವವಿದ್ಯಾಲಯಗಳಿಗಿದೆ. ದೇಶದ ಮತ್ತು ವಿದ್ಯಾರ್ಥಿಗಳ ಹಿತಕ್ಕಾಗಿ ಸಾಮಾಜಿಕ ಮೌಲ್ಯಗಳನ್ನು ಅಳವಡಿಸಿಕೊಂಡು, ವೈಜ್ಞಾನಿಕ ತಳಹದಿಯ ಮೇಲೆ ಉನ್ನತ ಶಿಕ್ಷಣವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ವಿಶ್ವ ವಿದ್ಯಾಲಯಗಳಿಗೆ ಸಂಪೂರ್ಣ ಸಹಕಾರ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು. ಇದೇ ಸಂದರ್ಭದಲ್ಲಿ ಎಲ್ಲ ಹೊಸ ವಿಶ್ವವಿದ್ಯಾಲಯಗಳ ಕುಲಪತಿಗಳ ಪರವಾಗಿ ಪ್ರೋ.ಅಶೋಕ ಸಂ. ಆಲೂರ ಮಾತನಾಡಿ, ಈ ವರ್ಷದ ಆಯವ್ಯಯದಲ್ಲಿ ಹೊಸ ವಿಶ್ವವಿದ್ಯಾಲಯಗಳಿಗೆ ಕನಿಷ್ಟ ಒಂದು ಮಹಿಳಾ ವಿದ್ಯಾರ್ಥಿ ನಿಲಯ ಮತ್ತು ಪುರುಷ ವಿದ್ಯಾರ್ಥಿ ನಿಲಯ, ಶೈಕ್ಷಣಿಕ ಕಟ್ಟಡ ಹಾಗೂ ಪ್ರಯೋಗಾಲಯಗಳ ಸುಧಾರಣೆಗೆ ಅನುದಾನವನ್ನು ಒದಗಿಸುವಂತೆ ಕೋರಿದರು. ಹೊಸ ವಿಶ್ವವಿದ್ಯಾಲಯಗಳ ಕುಲಪತಿಗಳ ನಿಯೋಗದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.…
ನವದೆಹಲಿ: ಶುಕ್ರವಾರ ಸಂಜೆ ಒಡಿಶಾದ ಬಾಲಸೋರ್ನಲ್ಲಿ ಹಳಿತಪ್ಪಿದ ರೈಲಿನ ಬೋಗಿಗಳಿಗೆ ಮತ್ತೊಂದು ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದು 200ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಮತ್ತು 900 ಜನರು ಗಾಯಗೊಂಡಿದ್ದಾರೆ. ಮೂರನೇ ಸರಕು ಸಾಗಣೆ ರೈಲು ಕೂಡ ಅಪಘಾತದಲ್ಲಿ ಸಿಲುಕಿದೆ ಎಂದು ಒಡಿಶಾ ಮುಖ್ಯ ಕಾರ್ಯದರ್ಶಿ ಪಿಕೆ ಜೆನಾ ಎನ್ಡಿಟಿವಿಗೆ ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿನ ಅತ್ಯಂತ ಮಾರಣಾಂತಿಕ ಅಪಘಾತಗಳಲ್ಲಿ ಒಂದಾದ ಈ ಅಪಘಾತದಲ್ಲಿ ಬೆಂಗಳೂರು-ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ಸೇರಿವೆ.
ವಿರಾಜಪೇಟೆ ಜೂ.3 : ಕಳೆದ ನಾಲ್ಕು ವರ್ಷಗಳಿಂದ ವಿರಾಜಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿರುವ ಶ್ರೀಶೈಲ ಬೀಳಗಿ ಅವರನ್ನು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶ್ರೀಶೈಲ ಬೀಳಗಿ, ವಿದ್ಯಾರ್ಥಿಗಳ ಮುಂದಿನ ಜೀವನವು ಉತ್ತಮವಾಗಿ ರೂಪುಗೊಳ್ಳುವುದರಲ್ಲಿ ಶಿಕ್ಷಣದ ಪಾತ್ರವು ಬಹುಮುಖ್ಯವಾದುದ್ದು. ಮಕ್ಕಳ ವಿದ್ಯಾಭ್ಯಾಸಕ್ಕೆ ಪೋಷಕರು ಅವಿರತ ಶ್ರಮಪಟ್ಟು ಶಾಲೆಗೆ ಕಳಿಸುತ್ತಾರೆ. ಇದನ್ನರಿತ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಶಿಕ್ಷಣ ಪಡೆದು ಶಾಲೆಗೂ ಪೋಷಕರಿಗೂ ತಮ್ಮ ನಾಡಿಗೂ ಕೀರ್ತಿ ತರುವಂತಾಗಬೇಕು ಎಂದು ಸಲಹೆ ನೀಡಿದರು. ವಿದ್ಯೆ ಇದ್ದರೆ ನಾವು ಏನನ್ನೂ ಬೇಕಾದರೂ ಸಾಧನೆ ಮಾಡಬಹುದು. ವಿದ್ಯೆಯೊಂದಿಗೆ ವಿನಯವೂ ಅತಿ ಮುಖ್ಯ. ವಿದ್ಯಾರ್ಥಿಗಳಿಗೆ ಗುರುವಿನೊಂದಿಗೆ ಗುರಿಯೂ ಇರಬೇಕು ಎಂದರು. ಇತ್ತೀಚಿಗೆ ವಿದ್ಯಾರ್ಥಿಗಳು ಮೊಬೈಲ್ ಗೀಳು ಹಾಗೂ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಅದನ್ನು ಆದಷ್ಟು ಕಡಿಮೆ ಮಾಡಿ ಓದಿನತ್ತ ಗಮನ ಹರಿಸಬೇಕು ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಶೆ.100…
ಸಿದ್ದಾಪುರ ಜೂ.2 : ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಹೊತ್ತು ನೀಡುವುದರ ಮೂಲಕ ಗಂಭೀರ ಸಮಸ್ಯೆಗಳನ್ನ ತಕ್ಷಣವೇ ಬಗೆಹರಿಸಲಾಗುವುದು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಭರವಸೆ ನೀಡಿದರು. ನೆಲ್ಯಹುದಿಕೇರಿಯ ಶಾದಿ ಮಹಲ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕೃತಜ್ಞತಾ ಸಭೆಯಲ್ಲಿ ಮಾತನಾಡಿ, ಕ್ಷೇತ್ರದ ಮತದಾರರು ಬದಲಾವಣೆಯನ್ನು ಬಯಸಿ ಕಾಂಗ್ರೆಸ್ ನತ್ತ ಒಲವು ತೊರುವುದರ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಘೋಷಣೆ ಮಾಡಿದ ಗ್ಯಾರಂಟಿ ಯೋಜನೆಗಳನ್ನ ನುಡಿದಂತೆ ನಡೆದುಕೊಂಡು ತಕ್ಷಣವೇ ಜಾರಿ ಮಾಡಲಿದ್ದು, ಪ್ರತಿ ಗ್ರಾಮದ ಎಲ್ಲಾ ಸಮಸ್ಯೆಗಳನ್ನು ಸದ್ಯದಲ್ಲೇ ಬಗೆಹರಿಸಲಿದೆ. ಭ್ರಷ್ಟಾಚಾರ ಮುಕ್ತ ಆಡಳಿತ ವ್ಯವಸ್ಥೆಗೆ ಮುಂದಾಗಿದ್ದು, ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಯಾವುದೇ ಸಮಸ್ಯೆಗಳಿದ್ದರೂ ತಕ್ಷಣವೇ ಗಮನಕ್ಕೆ ತನ್ನಿ ಎಂದರಲ್ಲದೆ ಸಾರ್ವಜನಿಕರ ಸೇವೆ ಮಾಡಲು ಅಧಿಕಾರಿಗಳು ಪ್ರಾಮಾಣಿಕ ಕರ್ತವ್ಯ ನಿಷ್ಠೆ ತೋರಬೇಕಾಗಿದೆ ಎಂದರು. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಕ್ಷೇತ್ರದ ಮತದಾರರು ಆಶೀರ್ವಾದದಿಂದ ಹೆಚ್ಚಿನ ಬಹುಮತದೊಂದಿಗೆ ಮಂತರ್ ಗೌಡ ಅವರು ಗೆಲುವು…
ಬೆಂಗಳೂರು ಜೂ.2 : ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನಾ ಜನತೆಗೆ ನೀಡಲಾಗಿದ್ದ ಎಲ್ಲಾ ಗ್ಯಾರಂಟಿ ಭರವಸೆಗಳನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಚಿವ ಸಂಪುಟ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಮೊದಲ ಗ್ಯಾರಂಟಿಯಾಗಿ ಗೃಹ ಜ್ಯೋತಿ ಯೋಜನೆಯನ್ನು ಜುಲೈ 1 ರಿಂದ ಜಾರಿ ಮಾಡಲಾಗುವುದು. 12 ತಿಂಗಳ ಸರಾಸರಿ ಆಧರಿಸಿ, ಅದಕ್ಕೆ ಶೇಕಡಾ 10 ರಷ್ಟು ಸೇರಿಸಿ, ಸಂಪೂರ್ಣ ಶುಲ್ಕ ವಿನಾಯಿತಿ ನೀಡಲಾಗುವುದು ಎಂದರು. ಈ ಹಿಂದಿನ ಹಳೇ ವಿದ್ಯುತ್ ಬಾಕಿಯನ್ನು ಗ್ರಾಹಕರೇ ಪಾವತಿಸಬೇಕು.ಜುಲೈ ತಿಂಗಳ ವಿದ್ಯುತ್ ಬಳಕೆಗೆ ಆಗಸ್ಟ್ ನಿಂದ ಅನ್ವಯವಾಗಲಿದೆ. ಬಾಡಿಗೆದಾರರಿಗೂ ಈ ಯೋಜನೆ ಅನ್ವಯವಾಗಲಿದೆ ಎಂದರು. ಯಾವುದೇ ಜಾತಿ, ಧರ್ಮಗಳ ತಾರತಮ್ಯ ಇಲ್ಲದೆ ಗ್ಯಾರಂಟಿ ಯೋಜನೆ ಜಾರಿ ಎಂದ ಸಿದ್ದರಾಮಯ್ಯ, ಈ ಆರ್ಥಿಕ ವರ್ಷದಲ್ಲಿ ಘೋಷಣೆ ಮಾಡಿರುವ ಎಲ್ಲಾ ಗ್ಯಾರಂಟಿಗಳನ್ನು ಮಾಡುತ್ತೇವೆ ಎಂದು ತಿಳಿಸಿದರು. ‘ಗೃಹಲಕ್ಷ್ಮಿ’ ಯೋಜನೆ : ಗೃಹಲಕ್ಷ್ಮಿ’ ಯೋಜನೆಯನ್ನು ಆ.15 ರಂದು ಅನುಷ್ಠಾನಕ್ಕೆ ತರಲಾಗುವುದು, ಈ ಯೋಜನೆಯಡಿ…
ಮಡಿಕೇರಿ ಜೂ.2 : ವಿಶ್ವ ಬೈಸಿಕಲ್ ದಿನ ಪ್ರಯುಕ್ತ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜೂ.3 ರಂದು ಬೆಳಗ್ಗೆ 8 ಗಂಟೆಗೆ ಸೈಕ್ಲೋಥಾನ್ ಜಾಥ ಕಾರ್ಯಕ್ರಮ ನಡೆಯಲಿದೆ. ಸೈಕ್ಲೋಥಾನ್ ಜಾಥವು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಿಂದ ಆರಂಭವಾಗಿ ಜನರಲ್ ತಿಮ್ಮಯ್ಯ ವೃತ್ತ, ಮಂಗೇರಿರ ಮುತ್ತಣ್ಣ ವೃತ್ತ, ಸ್ಕ್ವಾಡರ್ನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತ ಮೂಲಕ ಜಿಲ್ಲಾ ಸರ್ವೇಕ್ಷಣಾ ಘಟಕದ ಮುಂಭಾಗದವರೆಗೆ ಸಾಗಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ತಿಳಿಸಿದ್ದಾರೆ.
ಮಡಿಕೇರಿ ಜೂ.2 : ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಿವಕುಮಾರ ರಂಗಪ್ರಯೋಗ ಶಾಲೆಯ 2023-24ನೇ ಸಾಲಿನ ರಂಗ ಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಕ್ಕೆ ಕನಿಷ್ಠ ವಿದ್ಯಾರ್ಹತೆ ಎಸ್ಎಸ್ಎಲ್ಸಿ ಉತ್ತೀರ್ಣರಾಗಿದ್ದು ಮತ್ತು ಪದವೀಧರರಿಗೆ ಆದ್ಯತೆ ಇರುತ್ತದೆ. ರಂಗಭೂಮಿಯಲ್ಲಿ ಆಸಕ್ತಿ ಇದ್ದು, ಸ್ವಲ್ಪಮಟ್ಟಿನ ಅನುಭವ ಇರಬೇಕು. ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಊಟ-ವಸತಿ ವ್ಯವಸ್ಥೆ ದೊರೆಯುತ್ತದೆ. ಕರ್ನಾಟಕ ಹಾಗೂ ಭಾರತದ ರಂಗ ತಜ್ಞರಿಂದ ಮತ್ತು ಅತಿಥ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ. ಒಳ್ಳೆಯ ಗ್ರಂಥಭಂಡಾರ ಹಾಗೂ ದೃಶ್ಯಶ್ರವ್ಯ ಪರಿಕರಗಳ ಅನುಕೂಲತೆ ಇದೆ. ರಂಗ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಭಾರತೀಯ ರಂಗಭೂಮಿ, ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಅಭಿನಯ, ಆಹಾರ್ಯ, ಶಿಕ್ಷಣದಲ್ಲಿ ರಂಗಭೂಮಿ, ಕುರಿತಾದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯುತ್ತವೆ. ಪ್ರಾಚಾರ್ಯರು, ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆ, ಸಾಣೇಹಳ್ಳಿ 577515, ಹೊಸದುರ್ಗ ತಾಲ್ಲೂಕು, ಚಿತ್ರದುರ್ಗ ಜಿಲ್ಲೆ ಈ ವಿಳಾಸಕ್ಕೆ ಬರೆದು ಪ್ರವೇಶ ಅರ್ಜಿ ತರಿಸಿಕೊಳ್ಳಬಹುದು ಅಥವಾ ರಂಗಶಾಲೆಯ ವೆಬ್ಸೈಟ್ www.theatreschoolsanehalli.org ನಲ್ಲಿ ಪ್ರವೇಶ…
ಮಡಿಕೇರಿ ಜೂ.2 : ಮೂರ್ನಾಡು ವಿದ್ಯಾಸಂಸ್ಥೆಯ ಪ್ರಥಮ ದರ್ಜೆ ಕಾಲೇಜು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆ, ರಕ್ತನಿಧಿ ಕೇಂದ್ರ ಮಡಿಕೇರಿ, ಮೂರ್ನಾಡು ಪದವಿ ಕಾಲೇಜಿನ ರೆಡ್ ರಿಬ್ಬನ್ ಕ್ಲಬ್, ರೋಟರ್ಯಾಕ್ಟ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ಮೂರ್ನಾಡು ಪದವಿ ಕಾಲೇಜಿನಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು. ಸಾರ್ವಜನಿಕರು, ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ಸುಮಾರು 50 ಮಂದಿ ರಕ್ತದಾನ ಮಾಡುವುದರ ಮೂಲಕ ಶಿಬಿರವನ್ನು ಯಶಸ್ವಿಗೊಳಿಸಿದರು. ಈ ಸಂದರ್ಭದಲ್ಲಿ ಮೂರ್ನಾಡು ವಿದ್ಯಾಸಂಸ್ಥೆಯ ಅಧ್ಯಕ್ಷ ಬಾಚೆಟ್ಟಿರ ಜಿ.ಮಾದಪ್ಪ, ಕಾರ್ಯದರ್ಶಿ ಪೆಮ್ಮುಡಿಯಂಡ ವೇಣು ಅಪ್ಪಣ್ಣ, ನಿರ್ದೇಶಕ ನಂದೇಟಿರ ರಾಜಾ ಮಾದಪ್ಪ, ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ. ರೇಖಾ ಚಿಣ್ಣಪ್ಪ, ರೋಟರಿ ಮಡಿಕೇರಿ ವುಡ್ಸ್ನ ಕಾರ್ಯದರ್ಶಿ ವಸಂತ್ ಕುಮಾರ್, ವಿಕ್ರಂ, ಕಿಗ್ಗಾಲು ಹರೀಶ್, ಎನ್.ಸಿ.ನವೀನ್, ಬೋಪಣ್ಣ, ರೋಟರ್ಯಾಕ್ಟ್ ಕ್ಲಬ್ನ ಪದಾಧಿಕಾರಿಗಳು, ಸದಸ್ಯರು ಇದ್ದರು.
ಮಡಿಕೇರಿ ಜೂ.2 : ಕೊಡಗು ಜಿಲ್ಲೆಯಲ್ಲಿರುವ ಪರಿಶಿಷ್ಟ ಪಂಗಡದ ವಾಲ್ಮೀಕಿ ಆಶ್ರಮ ಶಾಲೆಗಳಲ್ಲಿರುವ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಲಿಕೆಗಾಗಿ ಗೌರವಧನದ ಆಧಾರದ ಮೇಲೆ 11 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂ.8 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿರುವಂತೆ ಗೌರವಧನ ಮಾಹೆಯಾನ ರೂ.10 ಸಾವಿರ ನಿಗಧಿಪಡಿಸಿದೆ. ಕಡ್ಡಾಯವಾಗಿ ಇಂಗ್ಲೀಷ್ ಐಚ್ಚಿಕ ವಿಷಯದಲ್ಲಿ ಡಿ.ಎಡ್ ಅಥವಾ ಬಿ.ಎಡ್ ಪೂರ್ಣಗೊಳಿಸಿದ ಅಭ್ಯರ್ಥಿಗಳಾಗಿರಬೇಕು. ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿನ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಮಂಡಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅರ್ಜಿಯನ್ನು ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ ಕಚೇರಿ, ಜಿಲ್ಲಾ ಪಂಚಾಯತ್ ಕಟ್ಟಡ ಇಲ್ಲಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ.08272-200500 ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಹೊನ್ನೇಗೌಡ ಅವರು ತಿಳಿಸಿದ್ದಾರೆ.






