ಲೇಖಕ: admin

ನಾಪೋಕ್ಲು ಜು.8 : ನಾಪೋಕ್ಲು-ಮಡಿಕೇರಿ ಕಡೆ ತೆರಳುವ ಮುಖ್ಯರಸ್ತೆಯ ಪಾಲೂರು ಗ್ರಾಮ ತೆರಳಿ ಮಡಿಕೇರಿಯ ಮುಖ್ಯ ರಸ್ತೆಯ ಮಧ್ಯ ತಿರುವುವಿನಲ್ಲಿ ಭಾರೀ ಗಾತ್ರದ ಗುಂಡಿ ನಿರ್ಮಾಣವಾಗಿದ್ದು, ಅಪಾಯಕ್ಕೆ ಆಹ್ವಾನ ನೀಡುವಂತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಹಿಂದೆ ಗುಂಡಿ ಮುಚ್ಚುವ ಕಾರ್ಯವನ್ನು ಸಮರ್ಪಕವಾಗಿ ಮಾಡದೆ ಇರುವುದರಿಂದಾಗಿ ಇದು ಹಲವುರು ತಿಂಗಳಿನಿಂದ ಹಾಗೆ ಇದ್ದು ಸಂಬಂಧಪಟ್ಟವರು ಗಮನ ಹರಿಸಿಲ್ಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂಬಂಧಪಟ್ಟ ಇಲಾಖಾಧಿಕಾರಿಗಳು ಇದೆ ರಸ್ತೆಯಲ್ಲಿ ಸಂಚರಿಸುತ್ತಿದ್ದರು ಯಾವುದೇ ಕ್ರಮ ಕೈಗೊಂಡಿಲ್ಲ. ತಕ್ಷಣವೇ ಗಮನ ಹರಿಸಿ ಗುಂಡಿ ಮುಚ್ಚಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಬೇಕಿದೆ. ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ವರದಿ : ದುಗ್ಗಳ ಸದಾನಂದ  

Read More

ನಾಪೋಕ್ಲು ಜೂ.8 : ಜಿಲ್ಲೆಯಾದ್ಯಂತ ಬಿರುಸಿನ ಮಳೆ ಸುರಿಯುತ್ತಿದ್ದು, ಗ್ರಾಮೀಣ ಭಾಗಗಳಲ್ಲಿ ಭತ್ತದ ಗದ್ದೆಗಳಲ್ಲಿ ಕೃಷಿ ಚಟುವಟಿಕೆ ಬಿರುಸುಗೊಂಡಿದೆ ಸಮೀಪದ ಕೊಳಕೇರಿ ಗ್ರಾಮದ ಕೋಟೇರಿ ಮತ್ತು ಹೊದ್ದೂರು ಗ್ರಾಮ ಪಂಚಾಯತಿಯ ಕುಯ್ಯಂಗೇರಿಯಲ್ಲಿ ರೈತರು ಭತ್ತದ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ. ಕೆಲವು ದಿನಗಳಿಂದ ಮಳೆಸುರಿದ ಪರಿಣಾಮ ಗದ್ದೆಗಳಲ್ಲಿ ನೀರಾಗಿದ್ದು ಬಿತ್ತನೆ ಕಾರ್ಯಕ್ಕೆ ರೈತರು ಸಜ್ಜಾಗಿದ್ದಾರೆ. ಸರಕಾರದ ವತಿಯಿಂದ ರೈತರ ಶ್ರೇಯೋಭಿವೃದ್ಧಿಗೆ ಕೃಷಿ ಇಲಾಖೆಯ ಮೂಲಕ ರೈತರಿಗೆ ರಿಯಾಯಿತಿ ದರದಲ್ಲಿ ಬತ್ತದ ಬಿತ್ತನೆ ಬೀಜಗಳನ್ನು ಒದಗಿಸುತ್ತಿದೆ. ಅಭಿಪ್ರಾಯ :: ಮಳೆಯ ಕೊರತೆಯಿಂದ ಹಲವು ರೈತರು ಭತ್ತದ ಕೃಷಿ ಕಾರ್ಯಕ್ಕೆ ಹಿಂದೇಟು ಹಾಕಿದ್ದರು. ಇದೀಗ ಮಳೆ ಆಗುತ್ತಿರುವುದರಿಂದ ಬಿತ್ತನೆ ಕಾರ್ಯ ಆರಂಭಗೊಂಡಿದೆ. ದೊಡ್ಡಿ ತಳಿಯ ಭತ್ತದ ಬಿತ್ತನೆ ಮಾಡುತ್ತಿದ್ದೇನೆ. ಇದರಿಂದ ಉತ್ತಮ ಇಳುವರಿ ದೊರಕುತ್ತಿದೆ ಹಾಗೂ ಉತ್ತಮ ದರವು ಇದೆ. ಕೆಲವು ವರ್ಷಗಳಿಂದ ಇದೆ ತಳಿಯನ್ನು ಬೆಳೆಯುತ್ತಿರುವುದರಿಂದ ಇಳುವರಿ ಲಾಭದಾಯಕವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಮಳೆಯ ಪ್ರಮಾಣ ಕಡಿಮೆ, ಕಳೆದ ವರ್ಷ ಇದೇ…

Read More

ಮಡಿಕೇರಿ ಜು.7 : ನಿರಂತರ ಮಳೆಯಿಂದ ಮಡಿಕೇರಿ ಹೊರವಲಯದ ಜನಪ್ರಿಯ ಪ್ರವಾಸಿತಾಣ ಅಬ್ಬಿ ಜಲಪಾತ ದುಮ್ಮಿಕ್ಕಿ ಹರಿಯುತ್ತಿದ್ದು, ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಪ್ರಕೃತಿಯ ಸೊಬಗನ್ನು ಸವಿಯುತ್ತಿದ್ದಾರೆ.

Read More

ಮಡಿಕೇರಿ ಜು.7 : ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಡಿಕೇರಿ ನಗರದ ವಿವಿಧ ಬಡಾವಣೆಗಳಲ್ಲಿ ಸಾರ್ವಜನಿಕರ ಆಸ್ತಿಗೆ ಹಾನಿಯಾಗಿದೆ. ಹಾನಿ ಪ್ರದೇಶಗಳಿಗೆ ನಗರಸಭಾ ಅಧ್ಯಕ್ಷೆ ಅನಿತಾಪೂವಯ್ಯ ಭೇಟಿ ನೀಡಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮನೆಯ ಗೋಡೆಗೆ ತಡೆಗೋಡೆ ಕುಸಿದ ರಾಣಿಪೇಟೆ, ಜಲಾವೃತಗೊಂಡು ಹಾನಿಗೊಳಗಾದ ಪ್ರದೇಶ ಹಾಗೂ ರಸ್ತೆಗಳನ್ನು ಪರಿಶೀಲಿಸಿದರು. ತೋಡು ಮತ್ತು ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯಲು ಕ್ರಮ ಕೈಗೊಳ್ಳುವ ಮೂಲಕ ಹೆಚ್ಚಿನ ಅಪಾಯವನ್ನು ತಪ್ಪಿಸಲಾಗುವುದು ಎಂದು ತಿಳಿಸಿದರು. ಬೆಟ್ಟಗುಡ್ಡ ಮತ್ತು ತಗ್ಗು ಪ್ರದೇಶದ ನಿವಾಸಿಗಳು ಸುರಕ್ಷತೆಗೆ ಆದ್ಯತೆ ನೀಡಬೇಕೆಂದು ಮನವಿ ಮಾಡಿದರು. ಹಾನಿಗೊಳಗಾದ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಲು ಎನ್‌ಡಿಆರ್‌ಎಫ್ ತಂಡದ ಸಹಕಾರ ಪಡೆದರು. ವಿವಿಧ ವಾರ್ಡ್ಗಳ ಭೇಟಿ ಸಂದರ್ಭ ಉಪಾಧ್ಯಕ್ಷೆ ಸವಿತಾ ರಾಕೇಶ್, ಪೌರಾಯುಕ್ತ ವಿಜಯ, ಸದಸ್ಯರು ಹಾಗೂ ಅಧಿಕಾರಿಗಳು ಹಾಜರಿದ್ದರು.

Read More

ಮಡಿಕೇರಿ ಜು.7 : ಕೊಡಗು ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದ್ದು, ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ 24 ಗಂಟೆಗಳಲ್ಲಿ 14 ಇಂಚು ಮಳೆಯಾಗಿದೆ. ಮಡಿಕೇರಿ ತಾಲ್ಲೂಕು ಭಾಗಮಂಡಲ ಹೋಬಳಿ ಚೇರಂಗಾಲ ಗ್ರಾಮದ ಮತ್ತಾರಿ ಸೇತುವೆ ಮಳೆಯಿಂದ ಮುಳುಗಡೆಯಾಗಿದೆ. ಈ ಭಾಗದಲ್ಲಿ ಒಟ್ಟು 15 ಮನೆಗಳಿದ್ದು, 65 ಮಂದಿ ವಾಸವಾಗಿದ್ದಾರೆ. ಹಾನಿ ಪ್ರದೇಶವನ್ನು ಮಡಿಕೇರಿ ತಹಶೀಲ್ದಾರ್ ಕಿರಣ್ ಗೌರಯ್ಯ ಅವರು ಪರಿಶೀಲಿಸಿದರು. ಹಾಗೆಯೇ ಭಾಗಮಂಡಲ ತ್ರಿವೇಣಿ ಸಂಗಮ, ಭಾಗಮಂಡಲ -ನಾಪೋಕ್ಲು ರಸ್ತೆಗೆ ಬಂದಿರುವ ನೀರಿನ ಮಟ್ಟವನ್ನು ವೀಕ್ಷಿಸಿದರು. ಭಾಗಮಂಡಲ ಗ್ರಾಮದಲ್ಲಿರುವ ಕಾಶಿ ಮಠದಲ್ಲಿ ಕಾಳಜಿ ಕೇಂದ್ರ ನಡೆಸಲು ಸಿದ್ಧತೆ ಯಾಗಿದ್ದು, ಹೆಚ್ಚಿನ ಮಳೆ ಆದಲ್ಲಿ ಸಂತ್ರಸ್ತರನ್ನು ಕಾಳಜಿ/ ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾಗಮಂಡಲ – ನಾಪೋಕ್ಲು ರಸ್ತೆಯ ಮೇಲೆ ಅಂದಾಜು 2 ಅಡಿ ನೀರು ಬಂದಿದೆ. ಗೃಹ ರಕ್ಷಕ ದಳದ ತಂಡವು ಬೋಟ್ ಸೇರಿದಂತೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ತಹಶೀಲ್ದಾರ್ ಹೇಳಿದ್ದಾರೆ. ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿ…

Read More

ಮಡಿಕೇರಿ ಜು.7 : ಮಡಿಕೇರಿ ನಗರಸಭಾ ಸದಸ್ಯ ಹಾಗೂ ಮಡಿಕೇರಿ ಕೊಡವ ಸಮಾಜದ ನಿರ್ದೇಶಕ ಕಾಳಚಂಡ ಅಪ್ಪಣ್ಣ ಅವರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಕೆಲವು ಯುವಕರನ್ನು ನಗರಠಾಣಾ ಪೊಲೀಸರು ಬಂಧಿಸಿದ್ದಾರೆ. ಕಾರಿನಲ್ಲಿ ಹೋಗುತ್ತಿದ್ದ ನನ್ನ ಮೇಲೆ ಯುವಕರ ಗುಂಪು ಹಲ್ಲೆ ಮಾಡಿದೆ ಎಂದು ಅಪ್ಪಣ್ಣ ಅವರು ನೀಡಿದ ದೂರಿನ ಹಿನ್ನೆಲೆ ಮೋನಿಶ್ ಸೇರಿದಂತೆ ಕೆಲವು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ ಸುರಿದ ಧಾರಾಕಾರ ಮಳೆಗೆ ನಮಗೆ ಸೇರಿದ ಐಟಿಐ ಜಂಕ್ಷನ್ ಬಳಿಯ ಕ್ಯಾಂಟೀನ್ ಗೆ ನೀರು ನುಗ್ಗಿತ್ತು. ಈ ಸಂದರ್ಭ ವಾರ್ಡ್ ಸದಸ್ಯ ಅಪ್ಪಣ್ಣ ಅವರಿಗೆ ದೂರು ನೀಡಿದರೂ ಯಾವುದೇ ಸ್ಪಂದನೆ ನೀಡಿಲ್ಲ. ಕೊನೇ ಗಳಿಗೆಯಲ್ಲಿ ಬಂದ ಅಪ್ಪಣ್ಣ ಅವರು ಅವಾಚ್ಯ ಶಬ್ಧ ಬಳಸಿದ ಕಾರಣ ಕಲಹ ಏರ್ಪಟ್ಟಿದೆ ಎಂದು ಮೋನಿಶ್ ಆರೋಪಿಸಿದ್ದಾರೆ. ಉಭಯ ಕಡೆಯಿಂದ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅಪ್ಪಣ್ಣ ಅವರು ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯನ್ನು ಮಡಿಕೇರಿ ಕೊಡವ ಸಮಾಜ ತೀವ್ರವಾಗಿ ಖಂಡಿಸಿದ್ದು,…

Read More

ಮಡಿಕೇರಿ ಜು.7 : ವೈಲ್ಡ್ ಲೈಫ್ ಸೊಸೈಟಿಯ ಹುಣುಸೂರು ಕಚೇರಿಯ ಹಿರಿಯ ಅಧಿಕಾರಿ ಕೆ.ಎಸ್.ಲೋಕೇಶ್(54) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಕೊಡಗು ಜಿಲ್ಲೆಯ ದುಬಾರೆ ಬಳಿಯ ರಂಗಸಮುದ್ರ ಗ್ರಾಮದ ನಿವಾಸಿಯಾಗಿರುವ ಇವರು ಶುಕ್ರವಾರ ಬೆಳಗ್ಗೆ ಮನೆಯಲ್ಲೇ ಕುಸಿದು ಬಿದ್ದರು. ನಂತರ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರು ಮೃತಪಟ್ಟಿರುವುದು ದೃಢಪಟ್ಟಿತು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಸಂಜೆ ರಂಗಸಮುದ್ರದಲ್ಲಿ ನಡೆಯಿತು.

Read More

ಬೆಂಗಳೂರು: ನಾನು ಪೂರ್ಣ ಪ್ರಮಾಣದ 3,27,747 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದೇನೆ. ಇದು ನಮ್ಮ ಗ್ಯಾರಂಟಿ ಬಜೆಟ್. ನಾವು ಕೊಟ್ಟ ಮಾತಿನಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ವಿಧಾನಸಭೆಯಲ್ಲಿ 2023-24ನೇ ಸಾಲಿನ ಬಜೆಟ್ ಮಂಡಿಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಚುನಾವಣಾ ಪೂರ್ವದಲ್ಲಿ ನಾವು ನೀಡಿದ್ದ 5 ಗ್ಯಾರೆಂಟಿಗಳಿಗೆ ಅನುದಾನ ಒದಗಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವ ಸಮತೋಲಿತ ಹಾಗೂ ದೂರದೃಷ್ಟಿಯ ಬಜೆಟ್ ಅನ್ನು ನಾಡಿನ ಜನತೆಗೆ ಅರ್ಪಿಸುತ್ತಿದ್ದೇನೆ ಎಂದರು. ಬಜೆಟ್​ನಲ್ಲೂ 5 ಗ್ಯಾರಂಟಿ ಯೋಜನೆಗಳಿಗೆ ಹಣ ಒದಗಿಸಿದ್ದೇವೆ. ರಾಜ್ಯ ಆರ್ಥಿಕವಾಗಿ ದಿವಾಳಿ ಆಗದಂತೆ ನೋಡಿಕೊಂಡಿದ್ದೇವೆ. 1.30 ಕೋಟಿ ಕುಟುಂಬದ ಯಜಮಾನಿಗೆ ‘ಗೃಹಲಕ್ಷ್ಮೀ’ ಹಣ ನೀಡುತ್ತೇವೆ. ಜುಲೈ 16ರಿಂದ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ. ಆಗಸ್ಟ್​ನಿಂದ ಮನೆ ಯಜಮಾನಿ ಖಾತೆಗೆ 2 ಸಾವಿರ ರೂ. ಹಾಕುತ್ತೇವೆ. ಆಗಸ್ಟ್​​ 15 ಅಥವಾ 16ರಂದು ಮನೆ ಯಜಮಾನಿ ಖಾತೆಗೆ ಹಣ ಹಾಕಲಾಗುವುದು…

Read More

ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ 14ನೇ ಬಜೆಟ್ ಮಂಡಿಸಿದ್ದು, ಈ ಹಿಂದೆಯೂ 13 ಬಾರಿ ಬಜೆಟ್ ಮಂಡಿಸಿ ಭಾಗ್ಯ ರಾಮಯ್ಯ ಎಂದೇ ಖ್ಯಾತಿ ಪಡೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 14ನೇ ಬಜೆಟ್‌ನಲ್ಲಿ ಯಾವ ಕ್ಷೇತ್ರಕ್ಕೆ ಏನು ಕೊಡುಗೆ ನೀಡಿದ್ದಾರೆ. ಈ  ಮುಖಾಂತರ ತಿಳಿಯಿರಿ. ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ ಬೆಂಬಲ: •ಕೃಷಿ ಭಾಗ್ಯ ಯೋಜನೆ 100 ಕೋಟಿ ರೂ. ವೆಚ್ಚದಲ್ಲಿ ಮರುಜಾರಿ. • ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಐದು ಲಕ್ಷ ರೂ. ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ. • ಜಾನುವಾರುಗಳ ಆಕಸ್ಮಿಕ ಸಾವಿನ ಸಂಕಷ್ಟ ನಿವಾರಣೆಗೆ ಅನುಗ್ರಹ ಯೋಜನೆ ಮರುಜಾರಿ. ಮೀನುಗಾರಿಕೆಗೆ ಉತ್ತೇಜನ: • ಮೀನುಗಾರ ಮಹಿಳೆಯರಿಗೆ ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿ 50,000 ರೂ. ಗಳಿಂದ 3 ಲಕ್ಷ ರೂ. ಗಳಿಗೆ ಹೆಚ್ಚಳ. • ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದ ಡೀಸೆಲ್‌ ಮಿತಿ 2 ಲಕ್ಷ ಕಿಲೋ ಲೀಟರ್‌ಗಳವರೆಗೆ ಹೆಚ್ಚಿಸಲು 250 ಕೋಟಿ ರೂ. ನೆರವು. •…

Read More