ಲೇಖಕ: admin

ಮಡಿಕೇರಿ ಜೂ.2 : ಪ್ಲಾಸ್ಟಿಕ್ ಅನ್ನು ಪೂರ್ಣ ಪ್ರಮಾಣದಲ್ಲಿ ತ್ಯಜಿಸುವುದರ ಮೂಲಕ ಪರ್ಯಾಯ ವ್ಯವಸ್ಥೆಯನ್ನು ಮಾಡಿಕೊಂಡು ಪರಿಸರ ಸಂರಕ್ಷಿಸುವುದು ಪ್ರತಿಯೊಬ್ಬರ ಹೊಣೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ “ಪ್ಲಾಸ್ಟಿಕ್ ಮಾಲಿನ್ಯಕ್ಕೆ ಪರಿಹಾರಗಳು” ಎಂಬ ವಿಷಯದ ಕುರಿತು ನಗರದ ಸಂತ ಮೈಕಲರ ಶಾಲಾ ಆವರಣದಲ್ಲಿ ಚಿತ್ರಕಲಾ ಹಾಗೂ ಪ್ರಬಂಧ ಸ್ಪರ್ಧೆ ನಡೆಯಿತು. ಮನುಷ್ಯನ ಜೀವನದಲ್ಲಿ ಉತ್ತಮವಾದ ವಾತಾವರಣ ಹಾಗೂ ಗಾಳಿ ಅತಿ ಅವಶ್ಯಕವಾಗಿದೆ. ಉತ್ತಮವಾದ ವಾತಾವರಣ, ಗಾಳಿ ಬೇಕಾದಲ್ಲಿ ಒಳ್ಳೆಯ ಪರಿಸರವನ್ನು ನಿರ್ಮಾಣ ಮಾಡಬೇಕು. ಪರಿಸರ ಶುಚಿತ್ವ ನಮ್ಮೆಲ್ಲರ ಹೊಣೆ. ಆದ್ದರಿಂದ ಪ್ರತಿಯೊಬ್ಬರಲ್ಲಿಯೂ ಪರಿಸರ ಸಂರಕ್ಷಣೆ ಕುರಿತು…

Read More

ನಾಪೋಕ್ಲು  ಜೂ.2 :  ನಾಪೋಕ್ಲು ಪಟ್ಟಣ ಸೇರಿದಂತೆ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಮಳೆಗಾಲ ಆರಂಭಕ್ಕೂ ಮೊದಲೇ  ವಿದ್ಯುತ್ ಸಮಸ್ಯೆ ಉಂಟಾಗುತ್ತಿದ್ದು, ಸಂಬಂಧ ಪಟ್ಟ ಅಧಿಕಾರಿಗಳು ತಕ್ಷಣ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕೆಂದು ನಾಪೋಕ್ಲು ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಪರವಂಡ ಸಿರಾಜ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನಾಪೋಕ್ಲು ವ್ಯಾಪ್ತಿಯಲ್ಲಿ  ಮುಂಗಾರು ಆರಂಭಕ್ಕೂ ಮೊದಲೇ ಸೆಸ್ಕ್ ಇಲಾಖೆಯವರು ವಿದ್ಯುತ್ ರಸ್ತೆಬದಿಗಳಲ್ಲಿ ಮತ್ತು ತೋಟಗಳಲ್ಲಿ ಹಾದು ಹೋಗಿರುವ ವಿದ್ಯುತ್ ತಂತಿಗಳಿಗೆ ಹೊಂದಿಕೊಂಡಿರುವ ಮರಗಳನ್ನು ತೆರವು ಗೊಳಿಸಬೇಕು, ಅದರಂತೆ ಹಳೆಯ ಕಂಬಗಳನ್ನು ಬದಲಿಸಿ ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗದಂತೆ ಪೂರ್ವ ಸಿದ್ಧತೆಗಳನ್ನು ನಡೆಸಬೇಕಾಗಿತ್ತು. ಆದರೆ ನಾಪೋಕ್ಲು ವಿಭಾಗದಲ್ಲಿ ಇದರಬಗ್ಗೆ ಯಾವುದೇ ಕ್ರಮಗಳನ್ನು ಕೈಗೊಳ್ಳದೆರುವುದರಿಂದ ಸಣ್ಣ ಮಳೆಗೆ ವಿದ್ಯುತ್ ಕಡಿತಗೊಂಡು ಜನರು ವಿದ್ಯುತ್ ಸಮಸ್ಯೆಯನ್ನು ಎದುರಿಸಬೇಕಾದಂತ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಆರೋಪಿಸಿದ್ದಾರೆ. ನಾಪೋಕ್ಲು ನಾಲ್ಕುನಾಡು ವ್ಯಾಪ್ತಿಯಲ್ಲಿ ಬರುವ ಬಹುತೇಕ ಎಲ್ಲಾ ಕಡೆ ವಿದ್ಯುತ್ ಸಮಸ್ಯೆಯಿಂದ ಜನ ಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ.ಈ ಸಮಸ್ಯೆ ಮುಂಗಾರು ಪ್ರವೇಶಕ್ಕೂ…

Read More

ಮಡಿಕೇರಿ ಜೂ.2 : ನಗರದ ರಾಜಾಸೀಟು-ಮುನೀಶ್ವರ ದೇವಾಲಯದ ಸಂಪರ್ಕ ರಸ್ತೆಯನ್ನು ಶೀಘ್ರ ದುರಸ್ತಿಪಡಿಸಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ವೀರನಾಡು ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿತು. ನಗರದ ರಾಜಾಸೀಟು-ಮುನೀಶ್ವರ ದೇವಾಲಯದ ಸಂಪರ್ಕ ರಸ್ತೆಯಲ್ಲಿ ಜಮಾಯಿಸಿದ ವೇದಿಕೆಯ ಪ್ರಮುಖರು ಹಾಗೂ ಸ್ಥಳೀಯರು, ನಗರಸಭೆಯ ವಿರುದ್ಧ ಘೋಷಣೆಯನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ವೇದಿಕೆಯ ಜಿಲ್ಲಾಧ್ಯಕ್ಷ ಹರೀಶ್ ಜಿ.ಆಚಾರ್ಯ ಮಾತನಾಡಿ, ಹಾನಿಗೀಡಾದ ನಗರದ ರಸ್ತೆಗಳನ್ನು ಅಭಿವೃದ್ಧಿ ಪಡಿಸದೆ ಮಡಿಕೇರಿ ನಗರಸಭೆ ನಿದ್ರಾವಸ್ಥೆಗೆ ಜಾರಿದೆ ಎಂದು ಆರೋಪಿಸಿದ ಅವರು, ಈ ಹಿಂದೆ ಹಲವು ಭಾರಿ ರಸ್ತೆ ದುರಸ್ತಿಗೆ ಆಗ್ರಹಿಸಿ ಮನವಿ ಮಾಡಲಾಗಿದ್ದರು, ಇಲ್ಲಿಯವೆಗೆ ಯಾವುದೇ ಸ್ಪಂದನೆ ದೊರೆತ್ತಿಲ್ಲ ಎಂದು ದೂರಿದರು. ಈಗಾಗಲೇ ಈ ರಸ್ತೆಯಲ್ಲಿ ವಾಹನ ಸವಾರರು, ಪಾದಚಾರಿಗಳು ಸಂಚರಿಸಲು ಹರಸಾಹಸ ಪಡುವಂತಾಗಿದ್ದು, ತಕ್ಷಣ ದುರಸ್ತಿ ಪಡಿಸುವಂತೆ ಒತ್ತಾಯಿಸಿದರು. ಮುಂಗಾರು ಪ್ರಾರಂಭವಾಗಲಿದ್ದು, ನಗರದ ಸ್ಟೋನ್‍ಹಿಲ್‍ನಲ್ಲಿ ಸುರಿಯಲಾಗುತ್ತಿರುವ ಕಸದಿಂದ ಸಾಂಕ್ರಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆ ನಗರದಲ್ಲಿ ಉತ್ಪತ್ತಿಯಾಗುತ್ತಿರುವ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡುವಂತೆ…

Read More

ಮಡಿಕೇರಿ ಜೂ.2 : ಪರಿಸರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಗಿಡ ನೆಟ್ಟು ಪೋಷಿಸಿ ಬೆಳೆಸುವುದರ ಮೂಲಕ ಪರಿಸರ ಉಳಿಸಲು ಕೊಡಗು ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ್ ಕರೆ ನೀಡಿದ್ದಾರೆ. ಕೊಡಗು ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಹಾಗೂ ಸೋಮವಾರಪೇಟೆ ಸಾಮಾಜಿಕ ಅರಣ್ಯ ವಲಯದ ವತಿಯಿಂದ ಕೂಡುಮಂಗಳೂರು ಸರಕಾರಿ ಪ್ರೌಢಶಾಲೆಯ ಜೆ.ಸಿ.ಬೋಸ್ ಇಕೋ ಕ್ಲಬ್ ಮತ್ತು ಎನ್.ಎಸ್.ಎಸ್.ಘಟಕ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದ ಸಹಯೋಗದಲ್ಲಿ “ಗೋ ಗ್ರೀನ್” ಅಭಿಯಾನದ ಅಂಗವಾಗಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ನಡೆದ ಪರಿಸರ ಜಾಗೃತಿ ಆಂದೋಲನದಲ್ಲಿ ಗಿಡ ನೆಟ್ಟು ಮಾತನಾಡಿದರು. ವಿದ್ಯಾರ್ಥಿಗಳು ತಮ್ಮನ್ನು ಪರಿಸರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ನಾವು ನಮ್ಮ ಸುತ್ತಲಿನ ಪರಿಸರ ಸೇರಿದಂತೆ ಪ್ರತಿ ಶಾಲಾ ಕಾಲೇಜು, ಆಸ್ಪತ್ರೆ, ಹಾಸ್ಟೆಲ್ ಮತ್ತಿತರ ಸರ್ಕಾರಿ ಜಾಗ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗಿಡ ನೆಟ್ಟು ಬೆಳೆಸುವ ಮೂಲಕ ಪರಿಸರವನ್ನು ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.…

Read More

ಮಡಿಕೇರಿ ಜೂ.2 :  ಜಿಲ್ಲೆಯ ಹೊಸ್ಕೇರಿ ಗ್ರಾ.ಪಂ ವ್ಯಾಪ್ತಿಯ ಅರೆಕಾಡು, ನೇತಾಜಿ ನಗರಕ್ಕೆ ಕಳೆದ ಒಂದು ವಾರದಿಂದ ಸೆಸ್ಕ್ ನಿಂದ ಅಳವಡಿಸಲಾದ ಟಿಸಿ ಚಾರ್ಚ್ ಮಾಡಲು ವಿಳಂಭವಾದ ಕಾರಣ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ  ಉಂಟಾಗಿದ್ದು,   ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಗ್ರಾ.ಪಂ.ಪಿಡಿಒತಿಳಿಸಿದ್ದಾರೆ. ಸದ್ಯ ಸ್ಥಳೀಯ ವ್ಯಾಪ್ತಿಯಲ್ಲಿ ಮತ್ತೊಂದು ವಿದ್ಯುತ್ ಪರಿವರ್ತಕ ಅಳವಡಿಸಲಾಗಿದೆ ಎಂದು ಗ್ರಾ.ಪಂ.ಅಧಿಕಾರಿ ಹಾಗೂ ಸೆಸ್ಕ್ ಇಲಾಖೆ ಅಧಿಕಾರಿಗಳು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದಾರೆ.

Read More

ಮಡಿಕೇರಿ ಜೂ.2 :  ಮುಂಗಾರು ಹಿನ್ನೆಲೆ  ಮಡಿಕೇರಿ ನಗರ ಮತ್ತು ಸೋಮವಾರಪೇಟೆ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪೂರ್ವ ನಿವೇಚಿತ ಕೆಲಸ ಕಾರ್ಯಗಳಲ್ಲಿ ಒಂದಾದ  ರಾಜ ಕಾಲುವೆ ಮತ್ತು ತೋಡುಗಳ ಹೂಳೆತ್ತುವ ಮತ್ತು ಸ್ವಚ್ಛಗೊಳಿಸುವ ಕೆಲಸ ಕಾರ್ಯಗಳ ಕಾಮಗಾರಿ ಕೈಗೊಳ್ಳಲಾಗಿದೆ.

Read More

ಮಡಿಕೇರಿ ಜೂ.2 :  ಜಿಲ್ಲೆಯ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಸರ್ಕಾರ ಎಂ.ಎಲ್.ಸಿ ಹಾಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನವನ್ನು ನೀಡಬೇಕೆಂದು ಹಾಲುಗುಂದ ಗ್ರಾ.ಪಂ  ಸದಸ್ಯ ಅಬ್ದುರಹಮಾನ್ (ಅಂದಾಯಿ) ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಈ ಬಾರಿಯ ಚುನಾವಣೆಯಲ್ಲಿ ‌ಶೇಕಡಾ 98 ರಷ್ಟು ಮುಸ್ಲಿಂ ಮತದಾರರು ಕಾಂಗ್ರೆಸ್ ಪಕ್ಷದ ಪರವಾಗಿ ಮತ ಚಲಾಯಿಸಿದ್ದಾರೆ. ಮಡಿಕೇರಿ ಹಾಗೂ ವಿರಾಜಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಪ್ರಮುಖ ಪಾತ್ರವಹಿಸಿದ ದೊಡ್ಡ ‌ಸಮುದಾಯ ಮುಸ್ಲಿಮರಾಗಿದ್ದಾರೆ. ಅಲ್ಪಸಂಖ್ಯಾತರು ಅತೀ ಹೆಚ್ಚಿನ ಸಂಖ್ಯೆಯಲ್ಲಿರುವ ಬೂತ್ ಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಅಂತರದ ಮತಗಳ ಲೀಡ್ ಬಂದಿದೆ. ಜಿಲ್ಲೆಯಲ್ಲಿ ಕಳೆದ ಅನೇಕ ವರ್ಷಗಳಿಂದ ಮುಸ್ಲಿಮರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಆದರೆ ಇದುವರೆಗೆ ಜಿಲ್ಲೆಯ ಅಲ್ಪಸಂಖ್ಯಾತರಿಗೆ ಸೂಕ್ತ ಸ್ಥಾನ ದೊರೆತಿಲ್ಲ. ಜಿಲ್ಲೆಯ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ನಾಯಕರನ್ನು ಗುರುತಿಸಿ ಕಾಂಗ್ರೆಸ್ ಪಕ್ಷ ಎಂ.ಎಲ್.ಸಿ ಹಾಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು. ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಮುಸ್ಲಿಮ್ ಸಮುದಾಯದ ಬೆಳವಣಿಗೆಗೆ ಕಾಂಗ್ರೆಸ್…

Read More

ನಾಪೋಕ್ಲು ಜೂ.2 :   ಲಯನ್ಸ್ ಕ್ಲಬ್ ವತಿಯಿಂದ  ನಾಪೋಕ್ಲು ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ಪ್ರಾಂತೀಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪುರುಷರ ಡಬಲ್ಸ್ ವಿಭಾಗದಲ್ಲಿ  ಕೆ.ಪಿ.ಲಯನ್ ಸುಬ್ರಹ್ಮಣಿ  ಮತ್ತು ಕಿರಣ್ ಚಂಗಪ್ಪ ಪ್ರಥಮ ಸ್ಥಾನ ಗಳಿಸಿದರು. ದ್ವಿತೀಯ ಸ್ಥಾನವನ್ನು ಲಯನ್ ಬಾಚಮಂಡ ಅಪ್ಪಣ್ಣ ಮತ್ತು ಮಾದೆಯಂಡ ಕುಟ್ಟಪ್ಪ ಗಳಿಸಿದರು. ವಿಜೇತರಿಗೆ ಟ್ರೋಫಿದಾನಿಗಳಾದ ಅಪ್ಪಚೆಟ್ಟೋಳಂಡ ಪಿ ವಸಂತ ಮತ್ತು ಕನ್ನಂಬೀರ ಸುಧಿ ತಿಮ್ಮಯ್ಯ ಹಾಗೂ ಶಿವಚಾಳಿಯಂಡ ಕಾಳಪ್ಪ ನೀಡಿದ ಟ್ರೋಫಿಯನ್ನು ವಿತರಿಸಲಾಯಿತು. ಮಿಕ್ಸೆಡ್ ಡಬಲ್ಸ್ ನಲ್ಲಿ ಲಯನ್ ಪೆಮ್ಮುಡಿಯಂಡ ಅಪ್ಪಣ್ಣ ಮತ್ತು ಇಂದಿರಾ ಅಪ್ಪಣ್ಣ ಪ್ರಶಸ್ತಿ ಗಳಿಸಿದರು.ಇವರಿಗೆ ಲಯನ್ ಅಪ್ಪುಮಣಿಯಂಡ ಬನ್ಸಿ ಭೀಮಯ್ಯ ನೀಡಿದ ಟ್ರೋಫಿಯನ್ನು ವಿತರಿಸಲಾಯಿತು. ಮಹಿಳೆಯರ ವಿಭಾಗದಲ್ಲಿ ಲಯನ್ ವಿದ್ಯಾ ವಿಶಾಲ್ ಹಾಗೂ ಮಾನ್ಯ ಕಾಳಪ್ಪ ಪ್ರಥಮ ಸ್ಥಾನ ಗಳಿಸಿದರು. ಇಂದಿರಾ ಅಪ್ಪಣ್ಣ ಮತ್ತು ಶುಭ ದ್ವಿತೀಯ ಸ್ಥಾನ ಗಳಿಸಿದರು ಇವರಿಗೆ ಬಿದ್ದಾಟಂಡ ಮೇರಿ ಚಿಟಿಯಪ್ಪ ಹಾಗೂ ಚಿಟಿಯಪ್ಪ ನೀಡಿದ ಟ್ರೋಫಿಯನ್ನು ವಿತರಿಸಲಾಯಿತು. ನಾಪೋಕ್ಲು  ಲಯನ್ಸ್ ಕ್ಲಬ್ ಗೆ ವಲಯ ಅಧ್ಯಕ್ಷ …

Read More

ಮಡಿಕೇರಿ ಜೂ.2 : ಕೊಡಗಿನ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ನೇಮಕಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊನ್ನಣ್ಣ ಅವರನ್ನು ಈ ಜವಾಬ್ದಾರಿಗೆ ನೇಮಿಸಿ ಆದೇಶ ಹೊರಡಿಸಲು ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ. ಇದು ಸಂಪುಟ ದರ್ಜೆಯ ಸಚಿವರ ಸ್ಥಾನಮಾನವಾಗಿದ್ದು, ಇದೀಗ ಪೊನ್ನಣ್ಣ ಅವರಿಗೆ ಸಂಪುಟ ದರ್ಜೆಯ ಸಚಿವರ ಸ್ಥಾನಮಾನದೊಂದಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳು ದೊರೆಯಲಿವೆ. ಈ ಬಾರಿಯ ಸಚಿವರ ಸಂಪುಟದಲ್ಲಿ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ಸಿಗುವ ಆಶಾಭಾವನೆ ಜಿಲ್ಲೆಯ ಜನರಲ್ಲಿತ್ತು. ಆದರೆ ಇವರು ಸಚಿವ ಸ್ಥಾನದಿಂದ ವಂಚಿತರಾಗಿದ್ದರು. ಇದೀಗ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಸ್ಥಾನಮಾನ ಸಿಕ್ಕಿರುವುದು ಜಿಲ್ಲೆಗೆ ಪ್ರಾತಿನಿಧ್ಯ ದೊರೆತಂತಾಗಿದೆ.

Read More

ಮಡಿಕೇರಿ ಜೂ.1 : ಕೂಡುಮಂಗಳೂರು ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ತಂಬಾಕು ರಹಿತ ದಿನ’ ಅಂಗವಾಗಿ “ನಮಗೆ ಆಹಾರ ಬೇಕು, ತಂಬಾಕು ಅಲ್ಲ”, ಎಂಬ ಘೋಷವಾಕ್ಯದೊಂದಿಗೆ’ ಜನಜಾಗೃತಿ ಕಾರ್ಯಕ್ರಮ ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕೊಡಗು ಜಿಲ್ಲೆ, ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಹಾಗೂ ವತಿಯಿಂದ ಎನ್.ಎಸ್.ಎಸ್.ಘಟಕದ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ್, ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತ ಭಿತ್ತಿಫಲಕಗಳನ್ನು ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ತಂಬಾಕಿನ ಯಾವುದೇ ಉತ್ಪನ್ನಗಳನ್ನು ಬಳಸದೇ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು. ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು. ತಂಬಾಕು ರಹಿತ ದಿನದ ಮಹತ್ವ ಕುರಿತು ಮಾಹಿತಿ ನೀಡಿ ಪ್ರತಿಜ್ಞಾ ವಿಧಿ ಬೋಧಿಸಿದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮಕುಮಾರ್, ಪ್ರತಿ ವರ್ಷ ಮೇ 31 ಅನ್ನು ವಿಶ್ವ ತಂಬಾಕು ರಹಿತ ದಿನಾಚರಣೆ ಸಂದರ್ಭದಲ್ಲಿ ತಂಬಾಕು ಸೇವನೆಯಿಂದ ಆಗುವ…

Read More