ಮಡಿಕೇರಿ ಜೂ.1 : ಕಡಂಗ ವಿಜಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2023-24ನೇ ಶೈಕ್ಷಣಿಕ ವರ್ಷದ ಶಾಲಾ ಪುನರಾರಂಭ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಆಡಳಿತ ಮಂಡಳಿಯವರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳಿಗೆ ಹೂಗುಚ್ಚ, ಸಿಹಿ ನೀಡಿ ಬರಮಾಡಿಕೊಂಡರು. ಈ ಸಂದರ್ಭ ಶಾಲೆಯ ಅಧ್ಯಕ್ಷರು ಮಾತನಾಡಿ ವಿದ್ಯಾರ್ಥಿಗಳ ಶಾಲೆಯಿಂದ ಪ್ರಮಾಣಿಕತೆ, ಸಮಗ್ರತೆ, ಉತ್ತಮ ನಡವಳಿಕೆಗಳನ್ನು ಕಲಿತು ಉತ್ತಮ ಪ್ರಜೆಯಾಗಿ ಹೊರಹೊಮ್ಮಲು ಸಲಹೆ ನೀಡಿದರು.
ಲೇಖಕ: admin
ಚೆಯ್ಯಂಡಾಣೆ ಜೂ.1 : ಕರಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಿಕ್ಷಕರು ಮಕ್ಕಳಿಗೆ ಹೂ ನೀಡಿ, ಆರತಿ ಬೆಳಗಿ ಸಿಹಿ ಹಂಚುವುದರ ಮೂಲಕ ಬರಮಾಡಿಕೊಂಡರು. ಗ್ರಾ.ಪಂ, ಸದಸ್ಯರಾದ ಎಂ.ಬಿ. ನೇತ್ರವತಿ, ಬೇಪುಡಿಯಂಡ ವೀಲಿನ್ ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಈ ಸಂದರ್ಭ ಸರಕಾರದಿಂದ ನೀಡಲಾದ ಪಠ್ಯ ಪುಸ್ತಕ ಹಾಗೂ ಸಮವಸ್ತ್ರವನ್ನು ವಿತರಿಸಲಾಯಿತು. ಎಸ್ ಡಿ ಎಂ ಸಿ ಅಧ್ಯಕ್ಷ ಎಚ್.ಎಂ.ಲೋಕೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಹಾಜರಿದ್ದರು. ಮುಖ್ಯ ಶಿಕ್ಷಕಿ ಡಿ.ಕೆ.ಲೀಲಾವತಿ ಸ್ವಾಗತಿಸಿ,ಸಹ ಶಿಕ್ಷಕಿ ಬಿ.ಎ.ದಮಯಂತಿ ವಂದಿಸಿದರು. ವರದಿ : ಅಶ್ರಫ್
ಮಡಿಕೇರಿ ಜೂ.1 : ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಶಾಲಾ ಆರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾಸಂಸ್ಥೆಯ ಅಧ್ಯಕ್ಷ ಅಳಮೆಂಗಡ ಬೋಸ್ ಮಂದಣ್ಣ ಮತ್ತು ಅಧ್ಯಪಕರು ವಿದ್ಯಾರ್ಥಿಗಳಿಗೆ ಸಿಹಿಹಂಚಿ ಬರಮಾಡಿಕೊಂಡರು. ಶಾಲಾ ಮುಖ್ಯ ಶಿಕ್ಷಕರಾದ ಚಂದ್ರಶೇಖರ್, ಅಧ್ಯಾಪಕರಾದ ಬೆಂಡಿಕ್ಟಪರ್ನಾಡಿಸ್, ರಾಘವೇಂದ್ರ ಪ್ರಭು ಕುಮಾರ್, ಜಯಪ್ಪ, ಸುಬ್ಬಯ್ಯ ಮತ್ತು ಪೋಷಕರು ಹಾಜರಿದ್ದರು.
ಮಡಿಕೇರಿ ಜೂ. 1 : ಉಡೋತ್ ಮೊಟ್ಟೆಯ ಶ್ರೀ ಆಧಿಶಕ್ತಿ ದೇವಿಯ ಪುನರ್ ಪ್ರತಿಷ್ಠಾಪನೆ ಹಾಗೂ ಬ್ರಹ್ಮಕಲಶೋತ್ಸವವು ಜೂ.7 ರಿಂದ 9ರ ನಡೆಯಲಿದೆ. ಶ್ರೀ ವೇದಮೂರ್ತಿ ವೇದವ್ಯಾಸ ತಂತ್ರಿಗಳ ಮಾರ್ಗದರ್ಶನದಲ್ಲಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ಜೂ.7 ರಂದು ಬೆಳಿಗ್ಗೆ 9 ಗಂಟೆಗೆ ಮಹಾಪ್ರಾರ್ಥನೆ ಸ್ವಸ್ತಿ ಪುಣ್ಯಾಹ ವಾಚನ, ಗಣಪತಿ ಹೋಮ, ಕಂಕಣ ಬಂಧನ, ಉಗ್ರಾಣ ಪೂಜೆ ನಡೆಯಲಿದ್ದು, ಮಧ್ಯಾಹ್ನ ಅನ್ನದಾನ ನೆರವೇರಲಿದೆ. ಸಂಜೆ 4.30 ರಿಂದ ಕಳಶ ಮೆರವಣಿಗೆ ಹಾಗೂ ಹೊರೆಕಾಣಿಕೆ, 5.30ಕ್ಕೆ ಬಿಂಬ ಶುದ್ಧಿ, ಬಿಂಬಿ ಶುದ್ಧಿ ಹೋಮ, ಆಧಿವಾಸ ಹೋಮ, ಆಧಿವಾಸ ಪೂಜೆ, ಪ್ರಸಾದ ಶುದ್ಧಿ ಹಾಗೂ ಮಹಾಪೂಜೆ ನಡೆಯಲಿದೆ. ಜೂ.8 ರಂದು ಬಿಂಬದಲ್ಲಿ ತತ್ವನ್ಯಾಸ ಮತ್ತು ತತ್ವನ್ಯಾಸ ಹೋಮ, ಬಿಂಬ ಆಧಿವಾಸ ಪೂಜೆ, ಧಾನ್ಯಾದಿವಾಸ ನೆರವೇರಲಿದ್ದು, ಮಧ್ಯಾಹ್ನ 12.30ಕ್ಕೆ ಮಹಾಪೂಜೆ ಹಾಗೂ ಅನ್ನದಾನ ಜರುಗಲಿದೆ. ಸಂಜೆ 5.30 ರಿಂದ ಕಳಸ ಪ್ರತಿಷ್ಠೆ, ಕಳಶಾಧಿವಾಸ ಹೋಮ, ವಾಸ್ತು ರಾಕ್ಷೋಘ್ನ ಹೋಮ, ಬಿಂಬ…
ಪಾರಾಣೆ ಜೂ.1 : ಗ್ರಾಮೀಣಾ ಮಹಿಳೆಯರ ಆರ್ಥಿಕ ಮಟ್ಟ ಸುಧಾರಣೆಗಾಗಿ ರಾಜ್ಯ ಸರ್ಕಾರಗಳು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಮಹಿಳೆಯರು ಯೋಜನೆ ಸದುಪಯೋಗಪಡಿಸಿಕೊಂಡು ಮುನ್ನಡೆಯಬೇಕು ಎಂದು ಪದ್ಮಶ್ರೀ ಪುರಸ್ಕೃತ ಎಂ.ರಾಣಿ ಮಾಚಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೊಡಗು ಜಿ.ಪಂ, ಮಡಿಕೇರಿ ತಾ.ಪಂ ಮತ್ತು ಕೊಣಂಜಗೇರಿ ಪಾರಾಣೆ ಗ್ರಾ.ಪಂ ಹಾಗೂ ಸಂಜೀವಿನಿ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಪಾರಾಣೆ ಪ್ರೌಢಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಿಳಾ ಹಬ್ಬದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣೆ, ಕರಕುಶಲ ಉತ್ಪಾದನೆಗಳ ಪ್ರದರ್ಶನ ಮೇಳ ಮತ್ತು ಮಹಿಳಾ ಸಂಘಗಳ ವಿವಿಧ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಣಿ ಮಾಚಯ್ಯ, ಪಟ್ಟಣ ನಗರ ಭಾಗಗಳಲ್ಲಿ ನೆಲೆಸಿರುವ ಮಹಿಳೆಯರು ಮಾತ್ರ ಅಭಿವೃದ್ಧಿ ಹೊಂದುತ್ತಿರುವುದು ಎನ್ನುವುದು ದೂರದ ಮಾತಾಗಿದೆ. ಗ್ರಾಮೀಣಾ ಭಾಗದ ಮಹಿಳೆಯರು ತಮ್ಮ ಪ್ರತಿಭೆಯನ್ನು ಇಂತಹ ಕಾರ್ಯಕ್ರಮದಲ್ಲಿ ಪ್ರದರ್ಶನ ಮಾಡಬೇಕು. ಸರ್ಕಾರವು ಗ್ರಾಮೀಣಾ ಭಾಗದ ಮಹಿಳೆಯರಿಗೆ ಆರ್ಥಿಕ ಮಟ್ಟ ಸುಧಾರಿಸಲು ಹಲವಾರು ಯೋಜನೆಗಳಿಗೆ ಅನುದಾನಗಳನ್ನು ಬಿಡುಗಡೆ ಮಾಡುತ್ತದೆ.…
ಮಡಿಕೇರಿ ಜೂ.1 : ಪಕ್ಷದ ಪರವಾಗಿ ದುಡಿದವರಿಗೆ ಅಕಾಡಮಿ, ನಿಗಮ ಮಂಡಳಿಯಲ್ಲಿ ಸ್ಥಾನ ನೀಡಬೇಕೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 20 ವರ್ಷಗಳಿಂದ ಬಿಜೆಪಿಯ ಭದ್ರಕೋಟೆಯಾಗಿದ್ದ ಕೊಡಗಿನಲ್ಲಿ ಇದೀಗ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದಾರೆ. ಇಬ್ಬರು ಶಾಸಕರೂ ಪರಿಣತರಾಗಿದ್ದು, ಒಬ್ಬರಿಗಾದರೂ ಸಚಿವ ಸ್ಥಾನ ಸಿಗಬೇಕಿತ್ತು. ಆದರೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ವಿಫಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಬಿಜೆಪಿಗೆ ಹೆಚ್ಚು ಮತ ಬರುತ್ತಿದ್ದ ಕಡೆಗಳಲ್ಲಿ ಕಾಂಗ್ರೆಸ್ ಗೆ ಹೆಚ್ಚು ಮತ ಬಂದಿದೆ. ಸಂಪಾಜೆ ಪೆರಾಜೆ ಭಾಗದಲ್ಲಿ ಒಂದಂಕಿ ಇಂದ ಎರಡಂಕಿಗೆ ಮತ ಏರಿಕೆಯಾಗಿದೆ ಆದ್ದರಿಂದ ಮುಂದಿನ ಅಕಾಡೆಮಿ, ನಿಗಮ ಮಂಡಳಿಗಳಿಗೆ ಪಕ್ಷದಲ್ಲಿ ನಿರಂತರವಾಗಿ ತೊಡಗಿಕೊಂಡಿರುವ, ಪಕ್ಷಪರ ದುಡಿದವರಿಗೆ ಸ್ಥಾನ ನೀಡುವಂತೆ ಮನವಿ ಮಾಡಿದರು. ಕಾಂಗ್ರೆಸ್ ವಕ್ತಾರ ಪಿ.ಎಲ್.ಸುರೇಶ್ ಮಾತನಾಡಿ, ಕಾಂಗ್ರೆಸ್ ಗೆಲುವಿನಲ್ಲಿ ಸಂಪಾಜೆ, ಚೆಂಬು, ಬೆಟ್ಟಗೇರಿ ಭಾಗಗಳಲ್ಲಿ ಬಹುಸಂಖ್ಯತರಾದ ಅರೆಭಾಷಿಕ ಸಮುದಾಯದವರು ಮಹತ್ತರ ಪಾತ್ರವಹಿಸಿದ್ದಾರೆ. ಬದಲಾವಣೆ ದೃಷ್ಠಿಯಿಂದ ಪ್ರಬುದ್ಧ ಅಭ್ಯರ್ಥಿಗೆ…
ನಾಪೋಕ್ಲು ಜೂ.1 : ಹೊದವಾಡ ಗ್ರಾಮದ ಶ್ರೀ ಭಗವತಿ ಅಮ್ಮೆರಪ್ಪ ದೇವಾಲಯದ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾಪನ ಅಷ್ಟಮಂಗಲ ಮಹೋತ್ಸವವು ಆರಂಭಗೊಂಡಿತು. ಪ್ರತಿಷ್ಠಾಪನ ಮಹೋತ್ಸವದ ಅಂಗವಾಗಿ ಸಂಜೆ ದೇವಾಲಯದಲ್ಲಿ ವಾಸ್ತು ಹೋಮ, ವಾಸ್ತು ಬಲಿ ಹಾಗೂ ವಾಸ್ತು ಕಲಶಾ ಪೂಜೆಗಳು ಜರುಗಿತು. ಬೆಳಿಗ್ಗೆ ಗಣ ಹೋಮ, ಅನುಜ್ಞಾ ಕಲಶ ಪೂಜೆ, ಅನುಜ್ಞಾ ಕಳಸಾಭಿಷೇಕ, ಜೀವ ಕಲಶ ಹಾಗೂ ಬಿಂಬಶುದ್ಧಿ ಕಳಶ ಪೂಜೆಗಳು ಜರುಗಿ ಸಂಜೆ ಆದಿವಾಸ ಹೋಮ ಹಾಗೂ ಮಂಡಲ ಪೂಜೆಗಳು ನೆರವೇರಿಸಲಾಯಿತು. ದೇವಾಲಯವು ಸುಮಾರು 600 ವರ್ಷಗಳ ಇತಿಹಾಸವನ್ನು ಹೊಂದಿದ್ದು, ರಾಜರ ಕಾಲದಲ್ಲಿ ಕಟ್ಟಲ್ಪಟ್ಟದ್ದಾಗಿರುತ್ತದೆ. ದೇವಾಲಯದ ಜೀರ್ಣೋದ್ಧಾರಕ್ಕಾಗಿ ಗ್ರಾಮಸ್ಥರು ಹಾಗೂ ದಾನಿಗಳು ಧನಸಹಾಯವನ್ನು ನೀಡಿದ್ದಾರೆ. ದೇವಾಲಯದ ಜೀರ್ಣೋದ್ಧಾರದ ಜೊತೆಗೆ ಗಣಪತಿ ಗುಡಿ ಹಾಗೂ ಸುಬ್ರಮಣ್ಯ ಗುಡಿಗಳನ್ನು ನಿರ್ಮಿಸಲಾಗಿದೆ. ದೇವಸ್ಥಾನದ ಪ್ರತಿಷ್ಠಾಪನ ಅಷ್ಟಬಂಧ ಬ್ರಹ್ಮಕಲಶ ಮೂರು ದಿನಗಳ ಕಾಲ ನಡೆಯಲಿದ್ದು, ಪೂಜಾ ಕೈಂಕರ್ಯಗಳನ್ನು ಕೇರಳದ ಪಾಲೆಘಾಟ್ನ ಶ್ರೀ ನಾರಾಯಣ ತಂತ್ರಿ ನೆರವೇರಿಸಲಿರುವರು. ಕಾರ್ಯಕ್ರಮದಲ್ಲಿ ದೇವಾಲಯದ ತಕ್ಕ ಮುಖ್ಯಸ್ಥರು ಜೀರ್ಣೋದ್ಧಾರ ಸಮಿತಿ ಪ್ರಮುಖರು ಹಾಗೂ…
ನಾಪೋಕ್ಲು ಜೂ.1 : ಮೂರ್ನಾಡಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಕಾಲೇಜು ವಾಣಿಜ್ಯ ಫೆಸ್ಟ್ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಈ ಸಂದರ್ಭ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು ನಡೆಯಿತು. ನಂತರ ನಡೆದ ಸಭಾಕಾರ್ಯಕ್ರಮದಲ್ಲಿ ಫೀಲ್ಡ್ ಮಾರ್ಷಲ್ ಕೆಎಂ ಕಾರ್ಯಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಚೌರಿರ ಡಾ. ಜಗತ್ ತಿಮ್ಮಯ್ಯ ಮಾತನಾಡಿ, ಇಂತಹ ಕಾರ್ಯಕ್ರಮ ಪ್ರತಿ ವಿದ್ಯಾರ್ಥಿಗಳಲ್ಲಿ ಉತ್ಸಾಹವನ್ನು ತುಂಬುತ್ತದೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ವಿದ್ಯಾಸಂಸ್ಥೆಯ ಅಧ್ಯಕ್ಷ ಬಾಚಟ್ಟಿರ ಜಿ ಮಾದಪ್ಪ ವಿದ್ಯಾರ್ಥಿಗಳ ಪ್ರತಿಭೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ರೇಖಾ ಚಿಣ್ಣಪ್ಪ ಮಾತನಾಡಿ, ಪ್ರತಿ ವಿದ್ಯಾರ್ಥಿಯಲ್ಲೂ ಪ್ರತಿಭೆ ಇದ್ದೇ ಇರುತ್ತದೆ ಅದನ್ನು ಹೊರ ಸೂಸಲು ಇಂತಹ ವೇದಿಕೆಗಳ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷರುಗಳಾದ ಪುದಿಯೋಕ್ಕಡ ಸುಬ್ರಮಣಿ, ಕಾರ್ಯದರ್ಶಿ ಪೆಮ್ಮಡಿಯಂಡ ವೇಣು ಅಪ್ಪಣ್ಣ, ಖಜಾಂಚಿ ಬಡುವಂಡ ಸುಬ್ರಮಣಿ ಹಾಗೂ ಕಾರ್ಯಕ್ರಮ ಸಂಯೋಜಕ ಉಪನ್ಯಾಸಕ ಸೋಮಯ್ಯ, ಮೂರ್ನಾಡು ವಿದ್ಯಾ ಸಂಸ್ಥೆಯ ಎಲ್ಲಾ ವಿಭಾಗದ ಮುಖ್ಯಸ್ಥರು, ವಿವಿಧ…
ಸುಂಟಿಕೊಪ್ಪ ಜೂ.1 : ಹುಲಿ ಚಾಮುಂಡೇಶ್ವರಿ ದೇವಾಲಯದ 8ನೇ ವರ್ಷದ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಶ್ರೀಚಾಮುಂಡಿ ಹೋಮ ಹಾಗೂ ಅಭಿಷೇಕ ಪೂಜೆ, ಅಲಂಕಾರ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳ ಬಳಿಕ ಮಹಾಮಂಗಳಾರತಿ ನೆರವೇರಿತು. ನಂತರ ನೆರೆದಿದ್ದ ಭಕ್ತಾಧಿಗಳಿಗೆ ತೀರ್ಥ ಪ್ರಸಾದ ಹಾಗೂ ಅನ್ನ ಸಂತರ್ಪಣೆನಡೆಯಿತು. ಈ ಸಂದರ್ಭ ಸುಂಟಿಕೊಪ್ಪ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರುಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವಾರ್ಷಿಕೋತ್ಸವದ ಅಂಗವಾಗಿ ವಿಶೇಷ ಪೂಜಾ ವಿಧಿವಿಧಾನಗಳನ್ನು ಅಂದಗೋವೆ ಗ್ರಾಮದ ಅರ್ಚಕ ಗಣೇಶ ಭಟ್ ಹಾಗೂ ಮಂಜುನಾಥ್ ಭಟ್ ನೆರವೇರಿಸಿದರು.
ಸುಂಟಿಕೊಪ್ಪ ಜೂ.1 : ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯಲ್ಲಿ ಶಾಲೆ ಪ್ರಾರಂಭೋತ್ಸವವನ್ನು ಆಚರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಹಾಗೂ ಶಿಕ್ಷಕರು ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿ ಸ್ವಾಗತಿಸಿದರು. ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ಹಾಗೂ ಸಮವಸ್ತ್ರವನ್ನು ವಿತರಿಸಿಸಲಾಯಿತು. ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಯ ಶಿಕ್ಷಕರು ಹಾಗೂ ಮಕ್ಕಳು ವಾದ್ಯಗೋಷ್ಠಿಯೊಂದಿಗೆ ಜಾಥದ ಮೂಲಕ ಶಿಕ್ಷಕಣದ ಕುರಿತು ಅರಿವು ಮೂಡಿಸಲಾಯಿತು. ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ರಫೀಕ್ ಖಾನ್, ಪಂಚಾಯಿತಿ ಸದಸ್ಯೆ ವಸಂತಿ, ಎಸ್ಡಿಎಂಸಿ ಸದಸ್ಯ ಶಿವಪ್ಪ, ಮುಖ್ಯೋಪಾದ್ಯಾಯನಿ ಗೀತಾ, ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಬಾಲಕೃಷ್ಣ, ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಸಿ.ಟಿಸೋಮಶೇಖರ್, ಲಿಯೋನ, ಪ್ರಕಾಶ್, ಸುನಂದ, ಚಿತ್ರ, ಶಾಂತಹೆಗ್ಡೆ, ಜಯಶ್ರೀ, ಪ್ರಾಥಮಿಕ ಶಾಲೆಯ ಶಿಕ್ಷಕರುಗಳಾದ ದೈಹಿಕ ಶಿಕ್ಷಣ ಶಿಕ್ಷಕ ಪಿ.ಇ.ನಂದ, ಸಹಶಿಕ್ಷಕರುಗಳಾದ ಸೌಭಾಗ್ಯ, ಚಂದ್ರವತಿ, ಉಷಾ, ಇಂದಿರಾ ಹಾಗೂ ಪೋಷಕರು ಹಾಜರಿದ್ದರು.






