ಭಾಗಮಂಡಲ NEWS DESK ಜ.15 : ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ವಹಿಸುವ ಮೂಲಕ ಕಾನೂನು ಸುವ್ಯವಸ್ಥೆಗೆ ಆದ್ಯತೆ ನೀಡುವಂತೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಭಾಗಮಂಡಲ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಭಾಗಮಂಡಲ ಠಾಣೆಗೆ ಭೇಟಿ ನೀಡಿ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿದ ಅವರು ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರೊಂದಿಗೆ ಸಭೆ ನಡೆಸಿದರು. ಠಾಣಾ ವ್ಯಾಪ್ತಿಯ ಕಾನೂನು ಸುವ್ಯವಸ್ಥೆ, ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ಇಡುವುದು ಮುಂತಾದ ವಿಷಯಗಳ ಬಗ್ಗೆ ನಿರ್ದೇಶನ ನೀಡಿದರು. ಇದೇ ಸಂದರ್ಭ ಪೊಲೀಸ್ ವರಿಷ್ಠಾಧಿಕಾರಿ ತಲಕಾವೇರಿ ಉಪ ಠಾಣೆಗೂ ಭೇಟಿ ನೀಡಿ ಪರಿಶೀಲಿಸಿದರು.
ಲೇಖಕ: admin
ಸಂಪಾಜೆ NEWS DESK ಜ.15 : ಜಿಲ್ಲೆಯ ಗಡಿ ಭಾಗವಾದ ಸಂಪಾಜೆ ಪೊಲೀಸ್ ಉಪ ಠಾಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಭೇಟಿ ನೀಡಿದರು. ಗಡಿ ತಪಾಸಣಾ ಗೇಟ್ ಮತ್ತು ಅಲ್ಲಿನ ಕಾರ್ಯವನ್ನು ಪರಿಶೀಲಿಸಿದರು. ಸಿಬ್ಬಂದಿಗಳಿಗೆ ಕಾನೂನು ಸುವ್ಯವಸ್ಥೆಯ ಕುರಿತು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.
ವಿರಾಜಪೇಟೆ ಜ.15 NEWS DESK : ಬೇಟೋಳಿ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಶ್ರೀ ಅಯ್ಯಪ್ಪ ಮಹೋತ್ಸವ ಹಾಗೂ ಮಕರ ಜ್ಯೋತಿ ಪೂಜಾ ಪೂಜೆ ಶ್ರದ್ಧಾಭಕ್ತಿಯಿಂದ ಜರುಗಿತು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಅರ್ಚಕರಾದ ಪ್ರವೀಣ್ ಭಟ್ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿತು. ಶ್ರೀ ಅಯ್ಯಪ್ಪ ಉತ್ಸವದ ಪ್ರಯುಕ್ತ ದೇವಾಲಯದಲ್ಲಿ ದೇವತಾ ಪ್ರಾರ್ಥನೆ, ಗಣಪತಿ ಹೋಮ ನೆರವೇರಿತು. ಶ್ರೀ ಅಯ್ಯಪ್ಪ ದೇವಸ್ಥಾನದ ಒಳ ಆವರಣದಲ್ಲಿರುವ ಶ್ರೀ ಮಹಾಗಣಪತಿ, ಶ್ರೀ ನಾಗ, ಶ್ರೀ ವನದುರ್ಗೆ ದೇವರುಗಳ ಗುಡಿಯಲ್ಲಿ ಪೂಜೆಯನ್ನು ಸಲ್ಲಿಸಲಾಯಿತು. ನಂತರ ಅರ್ಚಕರು ಶ್ರೀ ಅಯ್ಯಪ್ಪ ಸ್ವಾಮಿಗೆ ಹೂವಿನ ಅಲಂಕಾರ ಪೂಜೆ ಸಲ್ಲಿಸಿದರು. ದೇವಸ್ಥಾನದ ಒಳ ಆವರಣದಲ್ಲಿ ನಿರ್ಮಿಸಲಾಗಿದ್ದ ಹದಿನೆಂಟು ಮೆಟ್ಟಿಲುಗಳುಳ್ಳ ಮಂಟಪದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಅರ್ಚಕರು ಹಾಲಿನ ಅಭಿಷೇಕ, ತುಪ್ಪದ ಅಭಿಷೇಕ, ಸೀಯಾಳದ ಅಭಿಷೇಕ ಹಾಗೂ ಪಂಚಾಮೃತ ಅಭಿಷೇಕ, ಮಹಾ ಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆಯಿತು.…
SM ಫಿಟ್ನೆಸ್, ಜಿಮ್, ಟೋಲ್ ಗೇಟ್, ಮಡಿಕೇರಿ. ಜಿಮ್ ಟ್ರೈನರ್ ಬೇಕಾಗಿದ್ದಾರೆ. Timing 5.30 AM To 11 AM, 4 PM To 10 PM ಸ್ಥಳೀಯರಿಗೆ ಮೊದಲ ಆದ್ಯತೆ Call : 8217872661
ಮಡಿಕೇರಿ ಜ.15 NEWS DESK : ಮಂಜಿನ ನಗರಿ ಮಡಿಕೇರಿಯ ಗಾಂಧಿ ಮೈದಾನವು ಕಳೆದ ಎರಡು ದಿನಗಳ ಕಾಲ ಕ್ರೀಡೆ, ತಂತ್ರಜ್ಞಾನ ಹಾಗೂ ಸ್ನೇಹಸಂಬಂಧಗಳ ಸಂಗಮಕ್ಕೆ ಸಾಕ್ಷಿಯಾಯಿತು. ಶ್ರೀ ರಾಜೇಶ್ವರಿ ವಿದ್ಯಾಲಯದ ಆಶ್ರಯದಲ್ಲಿ ಆಯೋಜಿಸಲಾದ ಎಸ್ಆರ್ವಿ ಫುಟ್ಬಾಲ್ ಚಾಂಪಿಯನ್ ಲೀಗ್ ಸೀಸನ್–3, ಮೋಟೋ ಎಕ್ಸ್ಪೋ ಹಾಗೂ ಹಳೆ ವಿದ್ಯಾರ್ಥಿಗಳ ಸಮಾಗಮ ಕಾರ್ಯಕ್ರಮಗಳು ಅಪಾರ ಜನಸಂದಣಿ, ಉತ್ಸಾಹ ಹಾಗೂ ಸಂಭ್ರಮದ ವಾತಾವರಣದಲ್ಲಿ ಯಶಸ್ವಿಯಾಗಿ ನಡೆಯಿತು. :: ಫುಟ್ಬಾಲ್ ಲೀಗ್ಗೆ ತೆರೆ :: ಹೊನಲು ಬೆಳಕಿನ ವ್ಯವಸ್ಥೆಯೊಂದಿಗೆ ನಡೆದ ಎಸ್ಆರ್ವಿ ಫುಟ್ಬಾಲ್ ಚಾಂಪಿಯನ್ ಲೀಗ್ ಸೀಸನ್–3ರ ಫೈನಲ್ ಪಂದ್ಯದಲ್ಲಿ ಟೀಮ್ ಒನ್ ಟಚ್ ತಂಡವು ಟೀಮ್ ಅಶ್ ರನ್ನರ್ಸ್ ವಿರುದ್ಧ 1–0 ಗೋಲುಗಳ ಅಂತರದಲ್ಲಿ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಟೀಮ್ ಅಶ್ ರನ್ನರ್ಸ್ ರನ್ನರ್ಸ್-ಅಪ್ ಸ್ಥಾನ ಪಡೆದುಕೊಂಡಿತು. ಮೂರನೇ ಸ್ಥಾನವನ್ನು ಸ್ಟ್ರೈಕರ್ಸ್ ಸ್ಕ್ವಾಡ್, ನಾಲ್ಕನೇ ಸ್ಥಾನವನ್ನು ಆರ್ಆರ್ಎಫ್ಸಿ ತಂಡ ಪಡೆದುಕೊಂಡವು. ಒಟ್ಟು 12 ತಂಡಗಳು ಟ್ರೋಫಿಗಾಗಿ ಸೆಣಸಾಡಿದ ಈ ಲೀಗ್ನಲ್ಲಿ ನೇರ…
ಸುಂಟಿಕೊಪ್ಪ ಜ.15 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್ಬೈಲ್ ಕಾರ್ಯಕ್ಷೇತ್ರದ ವಿವಿಧ ಸ್ವಸಹಾಯ ಸಂಘಗಳ ವತಿಯಿಂದ ಕಾನ್ಬೈಲ್ ಶ್ರೀ ರಾಮ ಮಂದಿರದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಕಾನಬೈಲ್ ಒಕ್ಕೂಟ ವ್ಯಾಪ್ತಿಯ ಸ್ವಸಹಾಯ ಸಂಘಗಳಾದ ಜನನಿ, ಮೂಕಾಂಬಿಕಾ ಸಂಘದ ಸದಸ್ಯರು ದೇವಾಲಯದ ಆವರಣ ಹಾಗೂ ಶಾಲಾ ಆವರಣದಲ್ಲಿ ಬೆಳೆದು ನಿಂತ್ತಿದ್ದ ಕಾಡು ಗಿಡಗಂಟಿಗಳನ್ನು ಕಡಿದು ಸ್ವಚ್ಛಗೊಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್ಬೈಲು ಒಕ್ಕೂಟದ ಉಪಾಧ್ಯಕ್ಷೆ ಗೀತಾ, ಕಾರ್ಯದರ್ಶಿ ಪುಷ್ಪಲತಾ, ಮಾಜಿ ಅಧ್ಯಕ್ಷ ಖತಿಜಾ ಹಾಗೂ ಸೇವಾ ಪ್ರತಿನಿಧಿ ಯಶೋಧ ಬಸವರಾಜ್ ಶ್ರಮದಾನಕ್ಕೆ ಚಾಲನೆ ನೀಡಿದರು.
ಮಡಿಕೇರಿ ಜ.15 NEWS DESK : ಕುಶಾಲನಗರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಲ್ಲಿ ವಿರಾಜಪೇಟೆ ಕಾವೇರಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿಯರಾದ ಬೊವ್ವೇರಿಯಂಡ ಹನ್ಸಿಕ ಪೊನ್ನಪ್ಪ ಭರತ ನಾಟ್ಯದಲ್ಲಿ ಪ್ರಥಮ ಸ್ಥಾನ ಮತ್ತು ಹನಿಯ ಎ. ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಥಮಿಕ ವಿಭಾಗದಲ್ಲಿ 7ನೇ ತರಗತಿಯ ವಿದ್ಯಾರ್ಥಿಗಳಾದ ಹೇಮಂತ್ ಆರ್. ಕಾಮತ್ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಕೀರ್ತನ ಜಿ. ಚಿತ್ರಕಲೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನಪಡೆದು ಶಾಲೆಗೆ ಮತ್ತು ಪೋಷಕರಿಗೆ ಕೀರ್ತಿತಂದಿದ್ದಾರೆ. ಈ ಸಂದರ್ಭದಲ್ಲಿ ಶಾಲೆಯ ಸಂಯೋಜಿಕಿ ಅಮೃತ ಅರ್ಜುನ್ ಮತ್ತು ಸಹಶಿಕ್ಷಕಿ ನಿವ್ಯ ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಮುಖ್ಯಶಿಕ್ಷಕಿ ಪಾರ್ವತಿ ಪಿ.ಯು, ಸಂಯೋಜಕಿ ಅಮೃತ ಅರ್ಜುನ್ ಹಾಗೂ ಬೋಧಕ ಬೋದಕೇತರ ವೃಂದದವರು, ವಿದ್ಯಾರ್ಥಿಗಳು ಮತ್ತು ಪೋಷಕರು ಅಭಿನಂದಿಸಿದರು.
ಮಡಿಕೇರಿ ಜ.15 NEWS DESK : ಮಡಿಕೇರಿಯ ಕೊಡಗು ಮಹಿಳಾ ಠಾಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದಮಣಿ ಭೇಟಿ ನೀಡಿ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿದರು. ನಂತರ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರೊಂದಿಗೆ ಸಭೆ ನಡೆಸಿ ಮಕ್ಕಳ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ವಿಳಂಬವಿಲ್ಲದೆ ಕ್ರಮ ಕೈಗೊಳ್ಳುವ ಕುರಿತು ಮುಂತಾದ ವಿಷಯಗಳ ಬಗ್ಗೆ ಸೂಕ್ತ ನಿರ್ದೇಶನಗಳನ್ನು ನೀಡಿದರು.
ಸುಂಟಿಕೊಪ್ಪ ಜ.15 NEWS DESK : ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮಕ್ಕಳು ಶಿಕ್ಷಣಕ್ಕೆ ಮಾತ್ರ ಸಿಮೀತವಾಗಿರದೆ ವ್ಯವಹಾರಿಕ ಜ್ಞಾನವನ್ನು ಬೆಳೆಸುವ ನಿಟ್ಟಿನಲ್ಲಿ ಮಕ್ಕಳ ಸಂತೆ ನಡೆಯಿತು. ಮಕ್ಕಳು ತೋಟಗಳಲ್ಲಿ ಬೆಳೆದ ತರಕಾರಿ, ಸೊಪ್ಪು ಕಾಯಿ ಪಲ್ಯಗಳು, ಆಹಾರ ತಿಂಡಿ ತಿನಿಸುಗಳು, ಕಾಫಿ, ಟೀ ಸೇರಿದಂತೆ ತಂಪು ಪಾನಿಯಗಳ ವ್ಯಾಪಾರ ಬಲು ಜೋರಾಗಿ ನಡೆಸಿದರು. ವ್ಯಾಪಾರಿಗಳ ರೀತಿಯಲ್ಲಿಯೆ ವ್ಯಾಪಾರ ವಹಿವಾಟನ್ನು ನಡೆಸಿ ತಮ್ಮ ವ್ಯವಹಾರಿಕ ಪ್ರತಿಭೆಯನ್ನು ಅನಾವರಣಗೊಳಿಸಿದರು. ಶಾಲಾ ಎಸ್ಡಿಎಂಸಿ ಅಧ್ಯಕ್ಷರು ಹಾಗೂ ಪಂಚಾಯಿತಿ ಸದಸ್ಯರಾದ ರಫೀಕ್ ಖಾನ್ ಮಕ್ಕಳ ಸಂತೆಯನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳು ಕೇವಲ ಶಿಕ್ಷಣಕ್ಕೆ ಸೀಮಿತವಾಗಿರದೆ ಸಾಮಾಜಿಕವಾಗಿ ವ್ಯವಹಾರಿಕ ಜ್ಞಾನವನ್ನು ಬೆಳೆಸುವ ನಿಟ್ಟಿನಲ್ಲಿ ಮಕ್ಕಳ ಸಂತೆಯನ್ನು ಆಯೋಜಿಸಲಾಗಿದೆ. ಮಕ್ಕಳು ಅತ್ಯಂತ ಉತ್ಸಾಹದಿಂದ ವ್ಯಾಪಾರ ವಹಿವಾಟಿಗೆ ಬೇಕಾದ ತರಕಾರಿ, ಸೋಪ್ಪು, ತಿಂಡಿ ತಿನ್ನಿಸುಗಳನ್ನು ಮಾರಾಟ ಮಾಡುವ ಮೂಲಕ ತಮ್ಮ ವ್ಯವಹಾರಿಕ ಪ್ರತಿಭೆಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ರಫೀಕ್ಖಾನ್ ಹೇಳಿದರು. ಸುಂಟಿಕೊಪ್ಪ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಮಾತನಾಡಿ, ಸರಕಾರವು…
ನಾಪೋಕ್ಲು ಜ.15 NEWS DESK : ಮೂರ್ನಾಡು ವಿದ್ಯಾ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಕುಮಾರ ತ್ರೆಯಸ್ ರಾಷ್ಟ್ರಮಟ್ಟದಲ್ಲಿ 9ನೇ ರ್ಯಾಂಕ್ ಅನ್ನು ಪಡೆದುಕೊಳ್ಳುವುದರ ಮೂಲಕ ಸಾಧನೆಯನ್ನು ಮಾಡಿದ್ದಾನೆ. ಕರ್ನಾಟಕ ಅಕಾಡೆಮಿ ಆಫ್ ಮ್ಯಾಥಮೆಟಿಕ್ಸ್ ನಡೆಸಿದ ಟ್ಯಾಲೆಂಟ್ ಸರ್ಚ್ ಎಕ್ಸಾಮನ್ನು ಕಾಲೇಜಿನ ವಿಜ್ಞಾನ ವಿಭಾಗದ ಎಲ್ಲಾ ವಿದ್ಯಾರ್ಥಿಗಳು ಬರೆದಿದ್ದು, ಪ್ರಥಮ ವಿಜ್ಞಾನ ವಿಭಾಗದಲ್ಲಿ ಓದುತ್ತಿರುವ ಕುಮಾರ ತ್ರೆಯಸ್ ರಾಷ್ಟ್ರಮಟ್ಟದಲ್ಲಿ 9ನೇ ರ್ಯಾಂಕ್ ಅನ್ನು ಪಡೆದುಕೊಳ್ಳುವುದರ ಮೂಲಕ ಸಾಧನೆಯನ್ನು ಮಾಡಿದ್ದಾನೆ. ಪ್ರಥಮ ವಿಜ್ಞಾನ ವಿಭಾಗದ ಮಹಮದ್ ಆಶಿಕ್ ರಾಜ್ಯ ಮಟ್ಟದಲ್ಲಿ ಆರನೇ ರ್ಯಾಂಕ್, ದ್ವಿತೀಯ ವಿಜ್ಞಾನ ವಿಭಾಗದಲ್ಲಿ ಮಹಮ್ಮದ್ ಸಿನಾನ್ ರಾಜ್ಯಮಟ್ಟದಲ್ಲಿ 10ನೇ ರ್ಯಾಂಕ್ ಹಾಗೂ ಪ್ರಥಮ ವಿಜ್ಞಾನ ವಿಭಾಗದ ರವಿ ತಾಲ್ಲೂಕು ಮಟ್ಟದಲ್ಲಿ ಆರನೇ ರ್ಯಾಂಕ್ ಅನ್ನು ಪಡೆದುಕೊಂಡು ಕಾಲೇಜಿಗೆ ಕೀರ್ತಿಯನ್ನು ತಂದಿದ್ದಾರೆ. ರ್ಯಾಂಕ್ ಗಳಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಮೆಡಲ್ ಹಾಗೂ ಪರೀಕ್ಷೆಯನ್ನು ಬರೆದ ಎಲ್ಲ ವಿದ್ಯಾರ್ಥಿಗಳಿಗೆ ಬ್ಯಾಡ್ಜ್, ಗಣಿತ ಪುಸ್ತಕ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಯಿತು. ವಿದ್ಯಾರ್ಥಿಗಳಿಗೆ ಮೂರ್ನಾಡು…






