ಲೇಖಕ: admin

ಕುಶಾಲನಗರ ಡಿ.13 NEWS DESK : ವಿದ್ಯಾರ್ಥಿಗಳು ಶಿಸ್ತು, ಸಂಯಮ, ಸಮಯ ಪ್ರಜ್ಞೆ ಹಾಗೂ ಉತ್ತಮ ಸಂಸ್ಕಾರಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ತಾಲ್ಲೂಕು ತಹಶೀಲ್ದಾರ್ ಕಿರಣ್ ಜಿ.ಗೌರಯ್ಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಪಟ್ಟಣದ ಕನ್ನಡ ಭಾರತಿ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ಕಾಲೇಜು ಜೀವನವನ್ನು ಮೋಜು ಮಾಸ್ತಿಗಾಗಿ ಹಾಳುಮಾಡಿಕೊಳ್ಳಬಾರದು. ಇದೊಂದು ಗೋಲ್ಡನ್ ಲೈಫ್ ಕಠಿಣ ಪರಿಶ್ರಮ, ನಿರ್ದಿಷ್ಟ ಗುರಿಯೊಂದಿಗೆ ಏಕಾಗ್ರತೆ ಹಾಗೂ ಶ್ರದ್ಧೆ ಅಧ್ಯಯನಶೀಲತೆ ಕೈಗೊಂಡು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು. ಪೋಷಕರು ಹಾಗೂ ಗುರುಹಿರಿಯರು ಗೌರವ ನೀಡುವುದರ ಜೊತೆಗೆ ಅವರ ಆಸೆ ಆಕಾಂಕ್ಷೆ ಹಾಗೂ ನಿರೀಕ್ಷೆಯಂತೆ ಉನ್ನತ ಸ್ಥಾನಮಾನಕ್ಕೆ ಹೋದಾಗ ಮಾತ್ರ ಪೋಷಕರು ಕಂಡ ಕನಸು ನನಸಾಗಿಸಲು ಸಾಧ್ಯ ಎಂದರು. ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ. ಪುಟ್ಟರಾಜು ಮಾತನಾಡಿ, ವಿದ್ಯಾರ್ಥಿಗಳ ಉತ್ತಮ ಶಿಕ್ಷಣಕ್ಕೆ…

Read More

ಮಡಿಕೇರಿ ಡಿ.13 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯು ಪ್ರಸಕ್ತ ಸಾಲಿನಲ್ಲಿ ಪ್ರಕಟಿಸಲು ಉದ್ದೇಶಿಸಿರುವ ವಿಷಯಾಧಾರಿತ ಪುಸ್ತಕಗಳ ಪ್ರಕಟಣೆಗೆ ಅರ್ಹ ಆಸಕ್ತ ಯುವ ಬರಹಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.  ಅಕಾಡೆಮಿ ವತಿಯಿಂದ ಕೊಡ ಮಾಡುವ ಅಂದಾಜು 20 ವಿಭಿನ್ನ ರೀತಿಯ ವಿಷಯಗಳ ಮೇಲೆ ಅಧ್ಯಯನ, ಸಂಶೋಧನೆ ನಡೆಸಿ, ನಿಖರವಾದ ಮಾಹಿತಿ ಸಂಗ್ರಹಿಸಿ ಕನಿಷ್ಟ ನೂರು ಪುಟಗಳ ಸಚಿತ್ರ ವಿವರವುಳ್ಳ ಪುಸ್ತಕಗಳನ್ನು ಹೊರತರಲಾಗುವುದು. ಆಯ್ಕೆಯಾಗುವ ಬರಹಗಾರರಿಗೆ ಪುಸ್ತಕದ ವಿಷಯ ಹಾಗೂ ತಲಾ ರೂ.25 ಸಾವಿರ ಪ್ರೋತ್ಸಾಹ ಧನವನ್ನು ಷರತ್ತುಗಳೊಂದಿಗೆ ನೀಡಲಾಗುವುದು. ಆಸಕ್ತ ಬರಹಗಾರರು ಅಧ್ಯಯನ ಕ್ಷೇತ್ರದಲ್ಲಿ ತಮ್ಮ ಅನುಭವ, ಅರ್ಹತೆ ಹಾಗೂ ಆಸಕ್ತಿಯೊಂದಿಗಿನ ಸ್ವ ವಿವರವುಳ್ಳ ಅರ್ಜಿಯನ್ನು ಅಕಾಡೆಮಿ ಕಚೇರಿಗೆ ತಲುಪಿಸಲು ಡಿ.25 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮೊಬೈಲ್ ಸಂಖ್ಯೆ 8762942976 ಯನ್ನು ಸಂಪರ್ಕಿಸಬಹುದು. ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಮಡಿಕೇರಿ-571201 ಈ ವಿಳಾಸಕ್ಕೆ ಕಳುಹಿಸಬಹುದು ಎಂದು ಅಧ್ಯಕ್ಷರಾದ ಅಜ್ಜಿನಿಕಂಡ ಸಿ.…

Read More

ಮಡಿಕೇರಿ ಡಿ.13 NEWS DESK : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಕ್ಕಳು ಮತ್ತು ಯುವಜನರ ಕಲಾಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಮತ್ತು ಅವರು ತಮ್ಮ ಕಲಾನೈಪುಣ್ಯವನ್ನು ವೃದ್ಧಿಗೊಳಿಸುವಂತೆ ಪ್ರೋತ್ಸಾಹಿಸಲು ಕಲಾಪ್ರತಿಭೋತ್ಸವ ಸ್ಪರ್ಧೆಗಳು ಬಾಲಪ್ರತಿಭೆ, ಕಿಶೋರ ಪ್ರತಿಭೆ ಹಾಗೂ ಯುವ ಪ್ರತಿಭೆ, ಸಮೂಹ ಸ್ಪರ್ಧೆಗಳು ಇತ್ತೀಚೆಗೆ ನಗರದ ಗಾಂಧಿ ಭವನದಲ್ಲಿ ನಡೆಸಲಾಗಿತ್ತು. ಜಿಲ್ಲಾ ಮಟ್ಟದ ಕಲಾಪ್ರತಿಭೋತ್ಸವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಡಿ.22 ರಂದು ಮೈಸೂರಿನ ಕಲಾಮಂದಿರದಲ್ಲಿರುವ ರಂಗಾಯಣದ ಆವರಣದಲ್ಲಿ ನಡೆಯುವ ವಿಭಾಗ ಮಟ್ಟಕ್ಕೆ ಆಯ್ಕೆಯಾದ ವಿಜೇತರ ವಿವರ ಇಂತಿದೆ. ಕರ್ನಾಟಕ/ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ಪ್ರಥಮ ಸ್ಥಾನ ಅಪೇಕ್ಷ ಆರ್.ರೈ, ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ, ಮಡಿಕೇರಿ ತಂದೆ ರಾಧಕೃಷ್ಣ ರೈ, ಶ್ರೀ ಗಜಾನನ ಸ್ಟೋರ್ಸ್, ಮಲ್ಲಿಕಾರ್ಜುನ ನಗರ, ಮಡಿಕೇರಿ ಕೊಡಗು ಜಿಲ್ಲೆ. ದೂ.ಸಂ. 9480646175. ಶಾಸ್ತ್ರೀಯ ನೃತ್ಯ (ಭರತನಾಟ್ಯ)ದಲ್ಲಿ ಪ್ರಥಮ ಸ್ಥಾನ ಆವಂತಿಕ ಟಿ.ಯು., ಸಂತ ಅನ್ನಮ್ಮ ಪ್ರೌಢ ಶಾಲೆ, ವಿರಾಜಪೇಟೆ ತಂದೆ ಉಮೇಶ್ ಟಿ.ವಿ.,…

Read More

  ಮಡಿಕೇರಿ ಡಿ.13 NEWS DESK : 2025-26 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ನಿರೋದ್ಯೋಗಿ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ಸ್ವಯಂ ಉದ್ಯೋಗಗಳಲ್ಲಿ ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ ಉದ್ಯೋಗಿನಿ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆಯಡಿ ಆರ್ಥಿಕ ನೆರವು ನೀಡಲು ಆರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಿದ್ದು, ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜ.15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಉದ್ಯೋಗಿನಿ ಯೋಜನೆಯಡಿ ವಯೋಮಿತಿ 18 ರಿಂದ 55 ವರ್ಷದ ಮಿತಿಯೊಳಗಿರುವ ಆರ್ಥಿಕವಾಗಿ ಹಿಂದುಳಿದ ಮತ್ತು ಸಾಮಾನ್ಯ ಮಹಿಳೆಯರು ಯಾವುದಾದರೂ ಲಾಭದಾಯಕ ಚಟುವಟಿಕೆಯಲ್ಲಿ ಸ್ವಂತ ಉದ್ಯೋಗವನ್ನು ಕೈಗೊಳ್ಳಲು ಬ್ಯಾಂಕಿನಿಂದ ಗರಿಷ್ಟ ರೂ.3 ಲಕ್ಷದವರೆಗೂ ಸಾಲ ನೀಡಲಾಗುವುದು. ಸಾಮಾನ್ಯ ವರ್ಗದ ಮಹಿಳೆಯರು, ವಿಧವೆ, ವಿಕಲಚೇತನ ಮಹಿಳೆ, ಸಂಕಷ್ಟದಲ್ಲಿರುವ ಮಹಿಳೆಯರಿಗೆ…

Read More

ಮಡಿಕೇರಿ ಡಿ.13 NEWS DESK : ಮತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಡಿ.15ರಿಂದ ಜ.15ರವರೆಗೆ “ಗ್ಲೋಫೆಸ್ಟ್” ವಜ್ರಾಭರಣಗಳ ವಾರ್ಷಿಕ ಮಹೋತ್ಸವವನ್ನು ಆಯೋಜಿಸಲಾಗಿದೆ. ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ ರೂ.7000 ವರೆಗೆ ವಿಶೇಷ ರಿಯಾಯಿತಿ ನೀಡಲಾಗಿದೆ. ವೈವಿಧ್ಯಮಯ ವಜ್ರಾಭರಣಗಳ ವಿನೂತನ ಸಂಗ್ರಹವಿದ್ದು, ವಜ್ರಾಭರಣಗಳು ದುಬಾರಿ ಎಂದೇ ಭಾವನೆಯಲ್ಲಿರುವ ಜನರಿಗೆ ಕೈಗೆಟಕುವ ದರದಲ್ಲೂ ವಜ್ರಾಭರಣಗಳು ಲಭ್ಯವಿದೆ. ರೂ.3500 ರಿಂದ ವಜ್ರಾಭರಣದ ಬೆಲೆಗಳು ಪ್ರಾರಂಭವಾಗುತ್ತದೆ. ಗ್ಲೋ ವಜ್ರಾಭರಣಗಳು ಅಂತರಾಷ್ಟ್ರೀಯ ಪ್ರಯೋಗಾಲಯದಿಂದ ಪ್ರಮಾಣಿಕರಿಸಲ್ಪಟ್ಟ, ಉತ್ಕೃಷ್ಟ ಶ್ರೇಣಿಯ ಮೂಗುತಿ, ಪೆಂಡೆಂಟ್, ಉಂಗುರ, ಕಿವಿಯೋಲೆ ನೆಕ್ಲೇಸ್, ಬಳೆಗಳ ವಿವಿಧ ವಿನ್ಯಾಸಗಳ ಅಮೋಘ ಸಂಗ್ರಹವಿದೆ. ನುರಿತ ತಜ್ಞರಿಂದ ವಜ್ರಾಭರಣಗಳ ಬಗ್ಗೆ ಸಂಪೂರ್ಣ ಮಾಹಿತಿ, ಪ್ರತಿಷ್ಠಿತ ಪ್ರಮಾಣೀಕೃತ ಏಜೆನ್ಸಿಗಳಿಂದ ಧೃಡೀಕರಣಗೊಂಡ ವಜ್ರಾಭರಣಗಳ ಶ್ರೇಣಿ, ಪ್ರಮಾಣೀಕೃತ EF ಬಣ್ಣದ ಹಳೆಯ ವಜ್ರಾಭರಣಗಳ ವಿನಿಮಯ, ಮರುಖರೀದಿಯ ಗ್ಯಾರಂಟಿ, ಅಚ್ಚರಿಯ ಕೊಡುಗೆ ಹಾಗೂ ಉಡುಗೊರೆಗಳನ್ನು ತಮ್ಮದಾಗಿಸುವ ಸುವರ್ಣಾವಕಾಶವಿದೆ. ವಜ್ರದ ಆಭರಣಗಳು ತಮ್ಮ ಅಸಾಧಾರಣ ಸೌಂದರ್ಯ ಹಾಗೂ ದೀರ್ಘಕಾಲ ಬಾಳಿಕೆಯಿಂದ ಬಹಳ ಅಮೂಲ್ಯ…

Read More

ವಿರಾಜಪೇಟೆ ಡಿ.13 NEWS DESK : ವಿರಾಜಪೇಟೆಯ ಕೊಡವ ಸಮಾಜದಲ್ಲಿ ಕೊಡವ ಪೊಮ್ಮಕ್ಕಡ ಒಕ್ಕೂಟದ ವತಿಯಿಂದ ಪುತ್ತರಿ ನಮ್ಮೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ವಿರಾಜಪೇಟೆ ಕೊಡವ ಸಮಾಜ ಪೊಮ್ಮಕ್ಕಡ ಒಕ್ಕೂಟದ ಅಧ್ಯಕ್ಷೆ ತಾತಂಡ ಜ್ಯೋತಿ ಪ್ರಕಾಶ್ ಮಾತನಾಡಿ  ಕೊಡಗಿನ ಪ್ರಮುಖ ಹಬ್ಬಗಳಲ್ಲಿ ಪುತ್ತರಿ ಹಬ್ಬ ಒಂದಾಗಿದ್ದು, ಕೊಡವ ಪೊಮ್ಮಕ್ಕಡ ಒಕ್ಕೂಟದ ವತಿಯಿಂದ ಸಡಗರದಿಂದ ಪುತ್ತರಿ ನಮ್ಮೆಯನ್ನು ಆಚರಿಸಲಾಗಿದೆ. ಸದಸ್ಯರೆಲ್ಲರೂ ಅತಿ ಉತ್ಸಾಹದಿಂದ ಸಮಾರಂಭದಲ್ಲಿ ಪಾಲ್ಗೊಂಡಿದ್ದು, ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದೆ. ದೇಶಿ ಸಂಸ್ಕೃತಿಯನ್ನು ಮರೆಯದೆ ಅದನ್ನು ಗೌರವಿಸುವುದರ ಮೂಲಕ ಮುಂದುವರಿಸಿಕೊಂಡು ಹೋಗುವುದು ಎಲ್ಲರ ಜವಾಬ್ದಾರಿ ಎಂದರು. ಮುಂದಿನ ದಿನಗಳಲ್ಲಿ ಪೊಮ್ಮಕ್ಕಡ ಒಕ್ಕೂಟದ ವತಿಯಿಂದ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು. ನೀಲಕ್ಕ ತಂಡದ ನಾಯಕಿ ಐಚೆಟ್ಟಿರ ಮೀನ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿರಾಜಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಒಕ್ಕೂಟದ ಸರ್ವ ಸದಸ್ಯರು ಉಪಸ್ಥಿತರಿದ್ದರು. ಕುಂಜಿರ ಚಿತ್ರ ಹಾಗೂ ತಾತಂಡ ಏಸು ಕಬೀರ್ ವರದಿ ವಾಚಿಸಿದರು. ಕುಪ್ಪಚ್ಚಿರ ಕವಿತಾ ಭೀಮಯ್ಯ ಸ್ವಾಗತಿಸಿದರು, ಅಪ್ಪುಮಣಿಯಂಡ ಡೈಜಿ ಸೋಮಣ್ಣ…

Read More

ನಾಪೋಕ್ಲು ಡಿ.13 NEWS DESK : ಚೋನಕೆರೆಯ ಮಲ್ಲಂಗೋಟು ಶ್ರೀ ಅಯ್ಯಪ್ಪ ಶಾಸ್ತ್ರವು ದೇವರ ವಾರ್ಷಿಕ ಉತ್ಸವು ಡಿ.15 ರಂದು ಜರುಗಲಿದೆ. ವಾರ್ಷಿಕ ಮಹಾಸಭೆ 15.ರಂದು ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರಾದ ಚೇಯಕ್‍ಪೂವಂಡ ಸತೀಶ್ ದೇವಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. 11 ಗಂಟೆಗೆ. ವಾರ್ಷಿಕ ಮಹಾಪೂಜೆ ಜರುಗಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಆಡಳಿತ ಮಂಡಳಿಯ ಕಾರ್ಯದರ್ಶಿ ತಮ್ಮಿ ತಿಮ್ಮಯ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ : ದುಗ್ಗಳ ಸದಾನಂದ. 

Read More

ನವದೆಹಲಿ ಡಿ.13 NEWS DESK : ಕೊಡಗು ಲೋಕಸಭಾ ಕ್ಷೇತ್ರದ ಕೊಡಗು ಜಿಲ್ಲೆಯಲ್ಲಿ ದೂರ ಸಂಪರ್ಕ ಕ್ಷೇತ್ರಕ್ಕೆ ಹೆಚ್ಚುವರಿ ಸೌಲಭ್ಯ ಒದಗಿಸಬೇಕಾದ ಅಗತ್ಯವಿರುವುದರಿಂದ ಕೂಡಲೇ ಟವರ್‌ಗಳಿಗೆ ಬ್ಯಾಟರಿ ಸೆಟ್‌ ಅಳವಡಿಕೆ ಹಾಗೂ 15 ಪವರ್‌ ಪ್ಲಾಂಟ್‌ ಹಂಚಿಕೆ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಸಚಿವರಾದ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಭೇಟಿ ಮಾಡಿ ಈ ಸಂಬಂಧ ಭೇಟಿ ಮಾಡಿ ಮತ್ತೊಮ್ಮೆ ಮನವಿ ನೀಡಿದ ನಂತರ ಯದುವೀರ್‌ ಒಡೆಯರ್‌ ಈ ಮಾಹಿತಿ ನೀಡಿದ್ದಾರೆ. ಕಳೆದ ಭಾರಿ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಕಂಬಗಳು ಧರೆಗುರುಳಿದಿದ್ದು, ಇದರಿಂದ ಸಾರ್ವಜನಿಕರಿಗೆ ಸಂಪರ್ಕ ಸಾಧಿಸಲು ಭಾರಿ ತೊಂದರೆ ಎದುರಾಗಿತ್ತು. ಈ ನಿಟ್ಟಿನಲ್ಲಿ ಕೇಂದ್ರ ಸಚಿವರಿಗೆ ಪತ್ರ ಬರೆದು ಮೂಲ ಸೌಕರ್ಯ ಹೆಚ್ಚಿಸಲು ಆಗ್ರಹಿಸಲಾಗಿತ್ತು ಎಂದರು. ಈ ನಿಟ್ಟಿನಲ್ಲಿ ಇಂದು ಕೇಂದ್ರ ಸಚಿವರನ್ನು ಮತ್ತೊಮ್ಮೆ ಭೇಟಿ ಮಾಡಿ ಈ ವಿಷಯವನ್ನು ಮನವರಿಕೆ ಮಾಡಿಕೊಟ್ಟಿದ್ದೇನೆ, ಈ ಪ್ರಕ್ರಿಯೆಯನ್ನು…

Read More

ಮಡಿಕೇರಿ ಡಿ.13 NEWS DESK : ಚೇರಂಬಾಣೆ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಕ್ರೀಡಾ ದಿನಾಚರಣೆ ಸಂಭ್ರಮದಿಂದ ನಡೆಯಿತು.  ಶಾಲಾ ಆಟದ ಮೈದಾನದಲ್ಲಿ ನಡೆದ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ಮಡಿಕೇರಿ ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಪೊನ್ನಚನ ಶ್ರೀನಿವಾಸ್, ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಕುಟ್ಟೆಟ್ಟಿರ ಕುಂಞಪ್ಪ, ಮೊಟ್ಟೆಯಂಡ ಸುಗು ತಮ್ಮಯ್ಯ, ಶಾಲಾ ವ್ಯವಸ್ಥಾಪಕರಾದ ನಾಟೋಳಂಡ ವಿಜು, ಶಾಲಾ ಮುಖ್ಯ ಶಿಕ್ಷಕರಾದ ಕುದುಪಜೆ ಕವನ್ ಕುಮಾರ್, ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ತಾತಪಂಡ ಜ್ಯೋತಿ ಸೋಮಯ್ಯ, ಶಾಲಾ ನಿವೃತ್ತ ಮುಖ್ಯ ಶಿಕ್ಷಕರಾದ ಕೆ.ಎಸ್.ರಾಮಾಮೂರ್ತಿ ಹಾಜರಿದ್ದರು. ವಿದ್ಯಾರ್ಥಿಗಳಿಂದ ನೃತ್ಯ, ಯೋಗ ಕರಾಟೆ, ಹಾಡು ಪ್ರದರ್ಶನ ನಡೆಯಿತು. ವಿದ್ಯಾರ್ಥಿಗಳಿಗೆ ಆಯೋಜಿಸಿದ ವಿವಿಧ ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಮುಖ್ಯ ಅತಿಥಿಗಳಿಂದ ಬಹುಮಾನ ವಿತರಣೆ ನಡೆಯಿತು. ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಕೆ.ಬಿ.ಸ್ವರೂಪ್ ನಿರೂಪಿಸಿದರು.  ಇಂಗ್ಲೀಷ್ ಶಿಕ್ಷಕರಾದ ಪಿ.ಎಲ್.ಲೋಹಿತ್ ಸ್ವಾಗತಿಸಿದರು. ಗಣಿತ ಶಿಕ್ಷಕಿ ರಾಜೇಶ್ವರಿ ಹಾಗೂ…

Read More

ನಾಪೋಕ್ಲು ಡಿ.13 NEWS DESK : ಫೇಸ್ ಎಕ್ಸ್ ಶಾಲಾ ಆಯೋಜಕತ್ವದಲ್ಲಿ ಕೇರಳದ ಕ್ಯಾಲಿಕೆಟ್‍ನಲ್ಲಿ ನಡೆದ ಟಾಕ್ ಶೋನಲ್ಲಿ ಭಾಗವಹಿಸಿ ಕೊಡಗಿನ ಹನ್ನತ್ ಬೀ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ರಾಜ್ಯ ಮಟ್ಟದ ಸ್ಪರ್ಧೆ ಕೇರಳದ ಕೋಝಿಕೋಡ್ ನಲ್ಲಿ ನಡೆಯಲಿದೆ ಇದರ ಅಂತಿಮ ಸುತ್ತು ಯುಎಇ ಯ ದುಬೈನಲ್ಲಿ ನಡೆಯಲಿದ್ದು ಪ್ರಶಸ್ತಿ ಪತ್ರ ಹಾಗೂ ಹತ್ತು ಲಕ್ಷದ ನಗದು ಬಹುಮಾನ ಇರಲಿದೆ. ಹನ್ನತ್ ಬಿ ಕಕ್ಕಬ್ಬೆ ಗ್ರಾಮ ಪಂಚಾಯತಿಯ ಕುಂಜಿಲದ ಆಕ್ಸ್ಫರ್ಡ್ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಆಗಿದ್ದು, ಕುಂಜಿಲದ ಅಜೀಜ್ ಮಾಸ್ಟರ್ ಹಾಗೂ ಸುಮಯ್ಯ ದಂಪತಿಗಳ ಪುತ್ರಿ. ವರದಿ : ದುಗ್ಗಳ ಸದಾನಂದ.

Read More