ಲೇಖಕ: admin

ಮಡಿಕೇರಿ ಮೇ 30 : ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ 30 ಮಂದಿ ಅಧಿಕಾರಿ ಸಿಬ್ಬಂದಿಯನ್ನೊಳಗೊಂಡ ಜಿಲ್ಲಾ ವಿಪತ್ತು ನಿರ್ವಹಣಾ ತಂಡದಿಂದ ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆ ನಡೆಸುವ ಬಗ್ಗೆ ಅಭ್ಯಾಸ ನಡೆಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ನೇತೃತ್ವದಲ್ಲಿ ನಡೆದ ಅಭ್ಯಾಸ ಕಾರ್ಯಾಚರಣೆಯಲ್ಲಿ ಸೋಮವಾರಪೇಟೆ ಡಿವೈ.ಎಸ್.ಪಿ., ಕುಶಾಲನಗರ ಸಿಪಿಐ, ಮಡಿಕೇರಿ ಆರ್.ಪಿ.ಐ. ಡಿಎಆರ್ ಹಾಗೂ ಇನ್ನಿತರ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

Read More

ಮಡಿಕೇರಿ ಮೇ 30 : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗದ ವತಿಯಿಂದ ನಡೆಯುವ ಸಂಕಲ್ಪ-2023 ಕಲೋತ್ಸವದ ಲೋಗೋ ಅನಾವಣಗೊಳಿಸಲಾಯಿತು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ.ರಾಘವ ಬಿ. ಮತ್ತು ವಿಭಾಗ ಮುಖ್ಯಸ್ಥರಾದ ಡಾ.ಶೈಲಶ್ರೀ ಕೆ.ಲೋಗೋವನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Read More

ಮಡಿಕೇರಿ ಮೇ 30 : ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ಮತ್ತು ಅರಣ್ಯ ಕಾಲೇಜಿನ ಸಹಯೋಗದಲ್ಲಿ ರೈತರು ಮತ್ತು ಕಾಫಿ ಬೆಳೆಗಾರರಿಗೆ ಕೃಷಿ ಮತ್ತು ಕಾಫಿ ಆಧಾರಿತ ವ್ಯವಸ್ಥೆಯಲ್ಲಿ ಕಾರ್ಬನ್ ಕ್ರೆಡಿಟ್‍ಗೆ ಭವಿಷ್ಯ ಮತ್ತು ಅದರಿಂದ ಆರ್ಥಿಕ ಲಾಭ ಗಳಿಸಲು ಇರುವ ಅವಕಾಶಗಳ ಕುರಿತು ಕಾರ್ಯಾಗಾರ ನಡೆಯಿತು. ಪೊನ್ನಂಪೇಟೆಯ ಅರಣ್ಯ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಐಎಸ್‍ಇಸಿಯ ವಿಜ್ಞಾನಿಗಳಾದ ಡಾ.ಎಮ್.ಬಾಲಸುಬ್ರಮಣಿಯನ್, ಡಾ.ಜೇಮ್ಸ್ ಜೇಕಬ್ ಮತ್ತು ಡಾ.ಅಜ್ಜಿಕುಟ್ಟೀರ ಅದೀತ್ ಕಾರ್ಯಪ್ಪ ತಾಂತ್ರಿಕ ಭಾಷಣ ಮಾಡಿದರು. ಕೃಷಿ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಡಾ. ಪಿ.ಜಿ.ಚಂಗಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅರಣ್ಯ ಕಾಲೇಜಿನ ಮುಖ್ಯಸ್ಥ ಡಾ.ಸಿ.ಜಿ.ಕುಶಾಲಪ್ಪ ಕಾರ್ಯಗಾರದ ಮುಖ್ಯ ಉದ್ದೇಶವನ್ನು ವಿವರಿಸಿದರು. ಅರಣ್ಯ ಕಾಲೇಜಿನ ಉಪನ್ಯಾಸಕ ಮತ್ತು ವಿಭಾಗದ ಮುಖ್ಯಸ್ಥ ಡಾ. ಜಿ.ಎಮ್.ದೇವಗಿರಿ ಕಾರ್ಬನ್ ಕ್ರೆಡಿಟ್ ನಿಂದ ಜಿಲ್ಲೆಯ ರೈತರು ಮತ್ತು ಕಾಫಿ ಬೆಳೆಗಾರರು ಆರ್ಥಿಕ ಲಾಭ ಗಳಿಸಲು ಇರುವ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲೆಯ ವಿವಿಧ ಭಾಗಗಳ ರೈತರು ಮತ್ತು ಬೆಳೆಗಾರರು ಅಧಿಕ ಸಂಖ್ಯೆಯಲ್ಲಿ…

Read More

ವಿರಾಜಪೇಟೆ ಮೇ 30 : ತಮಿಳುನಾಡಿನ ತಿರುಚ್ಚಿಯಲ್ಲಿ ನಡೆದ ವಿಶ್ವ ದಾಖಲೆಯ ಕಾರ್ಯಕ್ರಮದಲ್ಲಿ ವಿರಾಜಪೇಟೆ ನಾಟ್ಯ ಮಯೂರಿ ನೃತ್ಯ ಶಾಲೆಯ ಹತ್ತು ವಿದ್ಯಾರ್ಥಿಗಳು ಭಾಗವಹಿಸಿ ವಿಶ್ವ ದಾಖಲೆ ಮಾಡಿದ್ದಾರೆ. ನೃತ್ಯ ಶಾಲೆಯ ವಿದ್ಯಾರ್ಥಿಗಳಾದ ಶಿವಾನಿ, ಶ್ರೀದೇವಿ, ಶ್ರೇಯಾ, ಹರ್ಷಿತ, ಸಾನಿಧ್ಯ, ಮಿಲನ್ಯ, ಭುವನ, ಟಿಯಾನ ಹಾಗೂ ಲಾವಣ್ಯ ನಿಗದಿತ ಸಮಯದಲ್ಲಿ ನೃತ್ಯವನ್ನು ಮಾಡಿ ವಿಶ್ವ ದಾಖಲಾಗಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇವರಿಗೆ ವಿದುಷಿ ಪ್ರೇಮಾಂಜಲಿ ಆಚಾರ್ಯ ಅವರು ತರಬೇತಿ ನೀಡಿದ್ದಾರೆ.

Read More

ಮಡಿಕೇರಿ ಮೇ 30 :  ಇತಿಹಾಸ ಪ್ರಸಿದ್ಧ  ಕುಂಜಿಲ ಕಕ್ಕಬ್ಬೆ ಸಮೀಪದ ವಯಕೋಲಿನಲ್ಲಿ (ಕೇರಳದ ಪುಳಿಙೋಂ ದರ್ಗಾ ಶರೀಫಿನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಔಲಿಯಾಕಳ ಹೆಸರಿನಲ್ಲಿ) ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ  ಉರೂಸ್‍ ಕಾರ್ಯಕ್ರಮವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರದ್ಧಾಭಕ್ತಿಯಿಂದ ನಡೆಯಿತು. ಉರೂಸ್ ಕಾರ್ಯಕ್ರಮದ ಭಾಗವಾಗಿ ವಯಕೋಲ್ ಮಸ್ಜಿದುಲ್ ರಹ್ಮಾನ್ ಅಂಗಳದಲ್ಲಿ  ಸಾರ್ವಜನಿಕ ಸೌಹಾರ್ದ ಸಮಾವೇಶ  ನಡೆಯಿತು ಸಾಮೂಹಿಕ ಝಿಯಾರತ್, ಮೌಲಿದ್ ಪಾರಾಯಣ,  ಧಾರ್ಮಿಕ ಮತ ಪ್ರಭಾಷಣ, ಹಾಗೂ ಅನ್ನದಾನ ಮುಂತಾದ ಕಾರ್ಯಕ್ರಮ ಜರುಗಿತು. ಈ ಸಂದರ್ಭ  ಕುಂಜಿಲ ಪೈನರಿ ಮುಸ್ಲಿಂ ಜಮಾಅತ್ತಿನ ಅಧ್ಯಕ್ಷ  ಶೌಕತ್ ಮಕ್ಕಿ, ಖತೀಬರಾದ ನಿಝಾರ್ ಅಹ್ಸನಿ ಉಸ್ತಾದ್, ಮುಖ್ಯ ಅತಿಥಿಗಳಾಗಿ ಜಬ್ಬಾರ್ ಸಖಾಫಿ ಕೇರಳ, ವಯಕೋಲ್ ಆಡಳಿತ ಮಂಡಳಿ ಅಧ್ಯಕ್ಷ  ಹಂಸ, ಇಮಾಮ್ ರಫೀಕ್ ಸಖಾಫಿ, ಕಲಿಯಂಡ ಸಂಪನ್ ಅಯ್ಯಪ್ಪ, ಸಂತು ಸುಬ್ರಮಣಿ, ಅಬ್ದುಲ್ಲಾ ಸಹದಿ, ಕುಡಿಯರ ಮುತ್ತು, ಫಖ್ರುಮಾಸ್ಟರ್, ಖಲೀಲ್, ಅಬು, ನಿಸಾರ್ ವಯಕೋಲ್ ಆಡಳಿತ ಮಂಡಳಿ ಸದಸ್ಯರು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿದ್ದರು. ಕಾರ್ಯಕ್ರಮದ ಕೂನೆಯಲ್ಲಿ…

Read More

ಮಡಿಕೇರಿ ಮೇ 30 : ಸೋಮವಾರಪೇಟೆ ತಾಲೂಕು ಹೋಂಸ್ಟೇ ಅಸೋಸಿಯೇಷನ್ ಅಧ್ಯಕ್ಷರಾಗಿ ಸಿ.ಕೆ.ರೋಹಿತ್ ಆಯ್ಕೆಯಾಗಿದ್ದಾರೆ. ನಾಗರಹೊಳೆ ಸಮೀಪದ ರೆಸಾರ್ಟ್‍ನಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ನೂತನ ಸಾಲಿಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಉಪಾಧ್ಯಕ್ಷರಾಗಿ ಹೆಚ್.ಎಸ್.ಯೋಗೇಶ್, ಕಾರ್ಯದರ್ಶಿಯಾಗಿ ಎಸ್.ಎಲ್.ಅಭಿನಂದನ್, ಖಜಾಂಚಿಯಾಗಿ ಡಿ.ಪಿ.ಪ್ರೀತಮ್ ಆಯ್ಕೆಯಾದರು. ಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಎ.ಎಸ್.ಮಲ್ಲೇಶ್, ಶ್ರೀಹರಿ ಫರ್ನಾಂಡೀಸ್ ಸೇರಿದಂತೆ ಇತರರು ಇದ್ದರು.

Read More

ವಿರಾಜಪೇಟೆ ಮೇ 30 : ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು ನಾಮೆರ ಕುಟುಂಬದ ವತಿಯಿಂದ ಸನ್ಮಾನಿಸಲಾಯಿತು. ಗೋಣಿಕೊಪ್ಪದ ಪ್ಲಾಂಟರ್ಸ್ ಕ್ಲಬ್‍ನಲ್ಲಿ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಕುಟುಂಬದ ಪ್ರಮುಖರು ಆತ್ಮೀಯವಾಗಿ ಸನ್ಮಾನಿ¸ಸಿ ಗೌರವಿಸಿದರು. ಈ ಸಂದರ್ಭ ಸ್ವೀಕರಿಸಿ ಮಾತನಾಡಿದ ಐಮುಡಿಯಂಡ ರಾಣಿ ಮಾಚಯ್ಯ, ಜಾನಪದ ಕಲಾ ಪ್ರಕಾರವಾದ ಉಮ್ಮತಾಟ್ ಕಲಾ ಪ್ರಕಾರವನ್ನು ವಿಶ್ವದೆಲ್ಲೆಡೆ ಪಸರಿಸುವ ಕೆಲಸ ನಿರಂತರವಾಗಿ ಮಾಡಲಿದ್ದೇನೆ ಎಂದು ನುಡಿದರು. ಉಮ್ಮತ್ತಾಟ್ ಕಲಾ ತಂಡವನ್ನು ಕಟ್ಟಿಕೊಂಡು ಮಕ್ಕಳಿಗೆ ಕಲೆಯನ್ನು ಕಲಿಸಿ ದೇಶದೆಲ್ಲೆಡೆ ಕರೆದುಕೊಂಡು ಹೋಗಿ ಅನೇಕ ಬಾರಿ ನೃತ್ಯ ಪ್ರಕಾರಗಳನ್ನು ಪ್ರಸ್ತುತಪಡಿಸಿದ್ದೇನೆ. ಸರಕಾರ ನನ್ನನ್ನು ಗುರುತಿಸಿ ಪ್ರಶಸ್ತಿ ನೀಡಿರುವುದಕ್ಕೆ ಹೆಮ್ಮೆ ಎನಿಸುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಚಿರಿಯಪಂಡ ರಾಜ ನಂಜಪ್ಪ, ಪೂಮಾಲೆ ಪತ್ರಿಕೆ ಸಂಪಾದಕ ಅಜ್ಜಿನಿಕಂಡ ಮಹೇಶ್ ನಾಚಯ್ಯ, ವಿರಾಜಪೇಟೆಯ ಪೊಮ್ಮಕ್ಕಡ ಒಕ್ಕೂಟದ ಅಧ್ಯಕ್ಷೆ ಮನೆಯಪಂಡ ಕಾಂತಿ ಸತೀಶ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದ…

Read More

ವಿರಾಜಪೇಟೆ ಮೇ 30 : ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್‍ನಲ್ಲಿ ನಡೆದ ಕಾಳಿಕಾ ರಾಮಕೃಷ್ಣ ಆಶ್ರಮದ ವಾರ್ಷಿಕೋತ್ಸವದಲ್ಲಿ ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವಿದ್ಯಾರ್ಥಿಗಳಿಂದ ನೃತ್ಯ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಹರ್ಷಿ ಆನಂದ್ ಗುರೂಜಿ, ಡಿ.ಆರ್ ಬಡಿಗೇರ ಹಾಗೂ ಹಲವಾರು ಗಣ್ಯ ವ್ಯಕ್ತಿಗಳು ಭಾಗವಹಿಸಿದರು.

Read More

ಸೋಮವಾರಪೇಟೆ ಮೇ 30 : ಶಾಲಾ ಆರಂಭೋತ್ಸವದ ಅಂಗವಾಗಿ ಕಿರಗಂದೂರು ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕರು ವಿದ್ಯಾರ್ಥಿಗಳನ್ನು ಸಿಹಿ ಮತ್ತು ಹೂ ನೀಡುವ ಮೂಲಕ ಸ್ವಾಗತಿಸಿದರು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕ ಚಂದ್ರಾಚಾರಿ, ಶಿಕ್ಷಕರಾದ ಡಿ.ಪಿ. ಧರ್ಮಪ್ಪ, ಬಿ. ವಿಜಯಕುಮಾರ್, ಎಸ್.ಎಚ್. ಮಂಜುನಾಥ್, ಪ್ರಾಥಮಿಕ ಶಾಲಾ ಪ್ರಬಾರ ಮುಖ್ಯ ಶಿಕ್ಷಕಿ ವಿ.ಎನ್. ವಿನೋದ, ಶಿಕ್ಷಕ ಕೆಂಪರಾಜು ಹಾಗೂ ಪೋಷಕರು ಇದ್ದರು.

Read More