ಸೋಮವಾರಪೇಟೆ ಮೇ 30 : ಸರಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಹತೋಟಿಗೆ ಬಂದರೆ, ಸಾರ್ವಜನಿಕರು, ರೈತರು ನೆಮ್ಮದಿಯ ಬದುಕು ಕಂಡುಕೊಳ್ಳಬಹುದು ಎಂದು ಶಾಸಕ ಮಂತರ್ಗೌಡ ಅಭಿಪ್ರಾಯಿಸಿದರು. ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೇಸಿ ವೇದಿಕೆಯಲ್ಲಿ ಕ್ಷೇತ್ರದ ಮತದಾರರಿಗೆ ಆಯೋಜಿಸಲಾಗಿದ್ದ ಕೃತಜ್ಞತಾ ಸಮರ್ಪಣೆ ಸಮಾರಂಭದಲ್ಲಿ ಪಾಲ್ಗೊಂಡು ಸಾರ್ವಜನಿಕರಿಂದ ಅಭಿನಂದನೆಗಳನ್ನು ಸ್ವೀಕರಿಸಿ ಮಾತನಾಡಿದರು. ಕಳೆದ 25 ವರ್ಷಗಳಿಂದ ಮಡಿಕೇರಿ ಕ್ಷೇತ್ರಕ್ಕೆ ಒಳಪಡುವ ಕಂದಾಯ ಇಲಾಖೆ ಸೇರಿದಂತೆ ಸಾರ್ವಜನಿಕರಿಗೆ ತುಂಬಾ ಅವಶ್ಯಕತೆಯ ಕೆಲಸಗಳು ಇರುವ ಕಚೇರಿಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂಬ ದೂರಿದೆ. ಮುಂದೆ ಇವುಗಳಿಗೆ ಅವಕಾಶ ಇರುವುದಿಲ್ಲ. ಪ್ರಾಮಾಣಿಕವಾಗಿ ಸಾರ್ವಜನಿಕರಿಗೆ ಸರ್ಕಾರಿ ಸೇವೆ ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ವಿದ್ಯಾವಂತರೆನಿಸಿಕೊಂಡಿರುವ ಸರ್ಕಾರಿ ನೌಕರರು ಸ್ಪಂದಿಸಬೇಕು ಎಂದರು. ಮುಂದಿನ ಐದು ವರ್ಷದ ಆಡಳಿತ ಹೇಗೆ ನಡೆಸಬೇಕೆಂಬ ಚಿಂತನೆ ಮಾಡಿದ್ದೇನೆ. ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳು ಹಾಗೂ ಜನಪರ ಯೋಜನೆಗಳನ್ನು ಮತದಾರರಿಗೆ ಪ್ರಾಮಾಣಿಕವಾಗಿ ತಲುಪಿಸುವುದೇ ನನ್ನ ಗುರಿ ಎಂದರು. ಮುಂದಿನ ಜಿ.ಪಂ, ತಾ.ಪಂ ಸಹಕಾರ ಸಂಘಗಳ ಚುನಾವಣೆ ಸಮೀಪಿಸುತ್ತಿದ್ದು ಪಕ್ಷದ ಎಲ್ಲಾ…
ಲೇಖಕ: admin
ಮಡಿಕೇರಿ ಮೇ 29 : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮಕ್ಕಳು ಎತ್ತಿನ ಗಾಡಿಯಲ್ಲಿ ಶಾಲೆಗೆ ಆಗಮಿಸುವ ಮೂಲಕ ಗಮನ ಸೆಳೆದರು. ಮಕ್ಕಳು ವಿನೂತನ ರೀತಿಯಲ್ಲಿ ಶಾಲೆಗೆ ಆಗಮಿಸಿದ್ದು, ಗ್ರಾಮಸ್ಥರ ಗಮನ ಸೆಳೆಯಿತು. ಶಾಲಾ ಪ್ರಾರಂಭೋತ್ಸವದ ಮೊದಲ ದಿನ ಶಿಕ್ಷಕರು ಶಾಲೆಗೆ ಮಕ್ಕಳನ್ನು ಭವ್ಯವಾಗಿ ಸ್ವಾಗತಿಸಿ ಸಿಹಿ ವಿತರಿಸಿದರು. ಜಾನಪದ ಸಂಸ್ಕೃತಿಯ ಪ್ರತೀಕವಾದ ಎತ್ತಿನ ಗಾಡಿಯನ್ನು ಏರಿದ ಮಕ್ಕಳು ಸರ್ಕಾರಿ ಶಾಲೆಗೆ ಹೋಗೋಣ ಬನ್ನಿ, ಸರ್ಕಾರಿ ಶಾಲೆ ನಮ್ಮ ಹೆಮ್ಮೆ, ಸರ್ಕಾರಿ ಶಾಲೆ ನಮ್ಮೂರ ಶಾಲೆ, ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸೋಣ ಬನ್ನಿ, ‘ಶಿಕ್ಷಣವೇ ಶಕ್ತಿ’ ಎಂಬಿತ್ಯಾದಿ ಘೋಷಣೆಗಳ ಫಲಕಗಳನ್ನು ಹಿಡಿದು ಎತ್ತಿನ ಗಾಡಿಯ ಮೂಲಕ ಸಂಭ್ರಮದಿಂದ ಶಾಲೆಗೆ ಆಗಮಿಸಿದರು. ಗ್ರಾಮದ ಮುಖ್ಯರಸ್ತೆ ಬಳಿಯಿಂದ ಆರಂಭಗೊಂಡ ಮಕ್ಕಳ ಎತ್ತಿನ ಗಾಡಿಗೆ ಚಾಲನೆ ನೀಡಿದ ಗ್ರಾಮ ಹಿರಿಯರೂ ಆದ ಕೃಷಿಕ ಕೆ.ಎಸ್.ರಾಜಾಚಾರಿ, ಪ್ರತಿಯೊಬ್ಬರೂ ಮಕ್ಕಳ ಶಿಕ್ಷಣಕ್ಕೆ ಸಹಕರಿಸಬೇಕು ಎಂದರು. ಕೃಷಿಕ ಕೆ.ಆರ್.ನಾಗರಾಜ್ ಸಾರಥ್ಯದಲ್ಲಿ ಸಾಗಿದ ಎತ್ತಿನ ಗಾಡಿಯ ಮೂಲಕ ಗ್ರಾಮದ ಬೀದಿಯಲ್ಲಿ…
ಮಡಿಕೇರಿ ಮೇ 29 : ಸಿದ್ದಾಪುರ ಗ್ರಾಮದ ಬೀಟಿಕಾಡು ಎಸ್ಟೇಟ್ ಶರತ್ ಕುಮಾರ್ ಅವರ ಮನೆಯ ಕೋಳಿ ಗೂಡಿನೊಳಗಿದ್ದ ನಾಗರಹಾವನ್ನು ಉರಗ ರಕ್ಷಕ ಸುರೇಶ್ ಪೂಜಾರಿ ರಕ್ಷಿಸಿದ್ದಾರೆ. ಶರತ್ ಕುಮಾರ್ ಅವರು ಹಾವು ಇರುವ ಬಗ್ಗೆ ಮಾಹಿತಿ ನೀಡಿದ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ಉರಗ ರಕ್ಷಕ ಸುರೇಶ್ ಪೂಜಾರಿ ನಾಗರಹಾವನ್ನು ಸುರಕ್ಷಿತವಾಗಿ ಸೆರೆ ಹಿಡಿದು ಮಾಲ್ತಾರೆ ಅರಣ್ಯಕ್ಕೆ ಬಿಟ್ಟರು.
ಮಡಿಕೇರಿ ಮೇ 29 : ಪೊನ್ನಂಪೇಟೆ 66/11 ಕೆವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೋಗುವ ಎಫ್1 ನಲ್ಲೂರು, ಎಫ್2 ಬಾಳೆಲೆ, ಎಫ್2 ರಾಜಾಪುರ ಫೀಡರ್ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಮೇ, 30 ಮತ್ತು 31 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ನಲ್ಲೂರು, ಬೆಸಗೂರು, ಪೊನ್ನಪ್ಪಸಂತೆ, ಬಾಳೆಲೆ, ರಾಜಾಪುರ, ಮಳ್ಳೂರು, ನಿಟ್ಟೂರು, ಕೊಟ್ಟಗೇರಿ, ಬಿಳೂರು, ದೇವನೂರು ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಮೇ 29 : ಕೊಡಗು ಜಿಲ್ಲಾ ವಿದ್ಯುತ್ ಗ್ರಾಹಕರ ಕುಂದು ಕೊರತೆ ನಿವಾರಣಾ ವೇದಿಕೆಗೆ ಸದಸ್ಯರು ಬೇಕಾಗಿರುತ್ತದೆ. ಆದ್ದರಿಂದ ಈ ಸದಸ್ಯತ್ವ ಹೊಂದಲು ಬಯಸುವವರು ವಿದ್ಯುತ್ ಕ್ಷೇತ್ರದ ಬಗ್ಗೆ ಅನುಭವವುಳ್ಳವರು ಅಥವಾ ಸೂಕ್ತ ಜ್ಞಾನ ಹೊಂದಿರುವ ಅಭ್ಯರ್ಥಿಗಳು ತಮ್ಮ ವೈಯಕ್ತಿಕ ಮಾಹಿತಿಯೊಂದಿಗೆ ಜೂ.6 ರೊಳಗೆ ಕಾರ್ಯನಿರ್ವಾಹಕ ಎಂಜಿನಿಯರ್, ಅವರ ಕಚೇರಿ, ಕಾರ್ಯ ಮತ್ತು ಪಾಲನೆ ವಿಭಾಗ, ಮಡಿಕೇರಿ ಇ-ಮೇಲ್ eeemdk@cescmysore.org, cesceemdk@gmail.com ಈ ವಿಳಾಸಕ್ಕೆ ವಿವರವನ್ನು ಅರ್ಜಿ ಸಲ್ಲಿಸುವಂತೆ ಮಡಿಕೇರಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.
ಮಡಿಕೇರಿ ಮೇ 29 : ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯ ಮುನ್ನೆಚ್ಚರ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಸಂಬಂಧ ಮಾಹಿತಿ ಪಡೆದು ಮಾತನಾಡಿದರು. ಡೆಂಗಿ, ಚಿಕನ್ ಗುನ್ಯ, ಮಲೇರಿಯ ಮತ್ತಿತರ ಸಾಂಕ್ರಾಮಿಕ ರೋಗ ತಡೆಯುವಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಶಾಲೆಗಳು, ಕಚೇರಿಗಳು, ಇತರೆ ಎಲ್ಲೆಡೆ ನೀರಿನ ಟ್ಯಾಂಕ್ನ್ನು ಆರು ತಿಂಗಳಿಗೊಮ್ಮೆ ಸ್ವಚ್ಛಗೊಳಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸಲಹೆ ಮಾಡಿದರು. ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಕಳೆದ ಮೂರು ತಿಂಗಳಲ್ಲಿ 25 ಡೆಂಗಿ ಪ್ರಕರಣಗಳು ವರದಿಯಾಗಿದ್ದು, ಎಲ್ಲರೂ ಆರೋಗ್ಯಯುತರಾಗಿದ್ದಾರೆ ಎಂದರು. ಮನೆಯ ಸುತ್ತಮುತ್ತ ಪರಿಸರ ಶುಚಿತ್ವ ಕಾಪಾಡಬೇಕು. ನೀರು ನಿಲ್ಲದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು. ಸಾಂಕ್ರಾಮಿಕ ರೋಗಗಳ ನಿಯಂತ್ರಣ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಡಾ. ಶ್ರೀನಿವಾಸ್ ಮಾಹಿತಿ…
ಮಡಿಕೇರಿ ಮೇ 29 : ಐತಿಹಾಸಿಕ ಹಿನ್ನೆಲೆಯ ಬಿಳಿಗೇರಿ ಗ್ರಾಮದ ಶ್ರೀ ಅರ್ಧನಾರೀಶ್ವರ ಮತ್ತು ಶ್ರೀ ಭಗವತಿ ದೇವಾಲಯಕ್ಕೆ ತೆರಳುವ ಹಾದಿಯ ಮೇಕೇರಿಯಲ್ಲಿ ಶ್ರೀ ಕ್ಷೇತ್ರದ ನಾಮಫಲಕವನ್ನು ಅಳವಡಿಸಲಾಯಿತು. ಮಡಿಕೇರಿಯಿಂದ ವಿರಾಜಪೇಟೆಗೆ ತೆರಳುವ ರಸ್ತೆಯ ಮೇಕೇರಿಯಲ್ಲಿ, ಬಿಳಿಗೇರಿಯ ಶ್ರೀ ಕ್ಷೇತ್ರಕ್ಕೆ ತೆರಳುವ ಹಾದಿಯಲ್ಲಿ ಬೃಹತ್ ನಾಮಫಲಕವನ್ನು ಅಳವಡಿಸಲಾಗಿದೆ. ನಾಮಪಲಕ ಅಳವಡಿಸುವ ಸಂದರ್ಭ ಬಿಳಿಗೇರಿಯ ಶ್ರೀ ಭಗವತಿ ದೇವಾಲಯದ ಅಧ್ಯಕ್ಷರಾದ ಪರ್ಲಕೋಟಿ ಮಾಚಯ್ಯ, ತಕ್ಕರಾದ ಪುರುಷೋತ್ತಮ ರೈ, ಮಂಞೀರ ಉಮೇಶ್ ಅಪ್ಪಣ್ಣ, ದೇವಜನ ಮೋಹನ, ಪರ್ಲಕೋಟಿ ಕಾಂತ, ತುಂತಜೆ ಗಿರೀಶ್, ಕೋಟೇರ ಶರಿ, ಗುತ್ತಿಗೆದಾರರಾದ ಹೀಮೇಶ್ ಮತ್ತಿತರರು ಹಾಜರಿದ್ದರು.
ಮಡಿಕೇರಿ ಮೇ 29 : ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ ವತಿಯಿಂದ ಬಾಳುಗೋಡು ಕೊಡವ ಸಮಾಜದ ಮೈದಾನದಲ್ಲಿ ಜೆಸಿ ನಿಸರ್ಗ ಕಪ್ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ನಡೆಯಿತು. ಜೇಸಿ ವಲಯ 14ರ ಅಧ್ಯಕ್ಷರಾದ ಜೆಸಿ ಯಶಸ್ವಿನಿ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕ್ರೀಡೆಯಿಂದ ಮನಸ್ಸಿಗೆ ನೆಮ್ಮದಿ, ಏಕಾಗ್ರತೆ ಉಂಟಾಗಲಿದೆ. ಎಲೆಮರೆ ಕಾಯಿಯಂತಿರುವ ಪ್ರತಿಭೆಗಳನ್ನು ಗುರುತಿಸಲು ಮತ್ತು ಅವರನ್ನು ರಾಷ್ಟ್ರ ಮಟ್ಟದ ಸ್ಪರ್ಧೆಗೆ ತಯಾರು ಮಾಡಲು ಸ್ಪರ್ಧೆ ಸಹಕಾರಿ ಆಗಲಿದೆ ಎಂದು ಹೇಳಿದರು. ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ ಅಧ್ಯಕ್ಷ ಮುಕ್ಕಾಟಿರ ನೀತ್ ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಲಯ 14ರ ನಿಕಟ ಪೂರ್ವ ಅಧ್ಯಕ್ಷ ಕುನಾಲ್ ಮಾಣಿಕ್ಚಂದ್, ದಾನಿಗಳಾದ ಚೇಂದ್ರಿಮಾಡ ಗಣೇಶ್ ನಂಜಪ್ಪ, ಸವಿತಾ ನಾಣಯ್ಯ, ಪೊನ್ನಿರ ಚೇತನ್ ಚಂಗಪ್ಪ, ಕೋಲತಂಡ ಬೋಪಯ್ಯ, ಕೊಲ್ಲಿರ ಬೋಪಣ್ಣ, ಪೂರ್ವ ಅಧ್ಯಕ್ಷರಾದ ಆಪಟ್ಟೀರ ಟಾಟು ಮೊಣ್ಣಪ್ಪ, ಐಪಿಪಿ ಅಪ್ಪಡೇರಂಡ ದಿನು ದೇವಯ್ಯ, ಕಾರ್ಯದರ್ಶಿ…
ಮೈಸೂರು ಮೇ 29 : ಖಾಸಗಿ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ 10 ಮಂದಿ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಕೊಳ್ಳೇಗಾಲ – ಟಿ.ನರಸೀಪುರ ಮುಖ್ಯ ರಸ್ತೆಯ ಪಿಂಜರ ಪೋಲ್ ಬಳಿ ನಡೆದಿದೆ. ಅಪಘಾತದ ತೀವ್ರತೆಗೆ ಇನ್ನೊವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಸ್ಥಳೀಯರು ರಕ್ಷಣೆ ಮಾಡಿದ್ದು, ಮಗು ಸೇರಿದಂತೆ ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ನಾಲ್ವರು ಪುರುಷರು, ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳು ಮೃತಪಟ್ಟಿದ್ದು, ಈ ಪೈಕಿ ಕೆಲವರು ಬಳ್ಳಾರಿ ಜಿಲ್ಲೆಯ ಸಂಗನಕಲ್ ನಿವಾಸಿಗಳಾಗಿದ್ದು, ಮೈಸೂರಿಗೆ ಪ್ರವಾಸಕ್ಕೆ ತೆರಳಿದ್ದರು. ಅಲ್ಲಿಂದ ಚಾಮರಾಜನಗರಕ್ಕೆ ಹೋಗಿದ್ದರು ಎನ್ನಲಾಗಿದೆ.
ಮಡಿಕೇರಿ ಮೇ 29 : ಕೊಡಗು ಜಿಲ್ಲಾ ಮರಾಠ ಮರಾಟಿ ಸಮಾಜ ಸೇವಾ ಸಂಘ ಅಂಬಾ ಭವಾನಿ ಯುವಕ ಯುವತಿ ಕ್ರೀಡಾ ಮತ್ತು ಮನೋರಂಜನ ಸಂಘ ಹಾಗೂ ಮಹಿಳಾ ವೇದಿಕೆ ತಾಳತ್ತಮನೆ ಇದರ 27ನೇ ವಾರ್ಷಿಕ ಮಹಾಸಭೆಯು ಸಂಘದ ನಿವೇಶನದಲ್ಲಿ ನಡೆಯಿತು. ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಸಹಾಯಕ ಔಷಧಿ ನಿಯಂತ್ರಕ ಶಂಕರ್ ನಾಯ್ಕ, ಸಮಾಜ ಬಾಂಧವರು ತಮ್ಮ ಮಕ್ಕಳಿಗೆ ಕುಟುಂಬ ಸದಸ್ಯರೊಂದಿಗೆ ಸಾಮರಸ್ಯದಿಂದ ಬದುಕುವುದನ್ನು ತಿಳಿ ಹೇಳಿ ಕೊಡಬೇಕೆಂದು ಮನವಿ ಮಾಡಿದರಲ್ಲದೇ, ಸಂಘದ ಕಟ್ಟಡದ ಕೆಲಸ ಸಮಾಜ ಬಾಂಧವರ ಸಹಕಾರದಿಂದ ಸಂಪೂರ್ಣಗೊಳ್ಳಲೆಂದು ಆಶಿಸಿದರು. ಸಿದ್ದಾಪುರ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಬಾಬು ನಾಯ್ಕ ಮಾತನಾಡಿ, ಸಂಘದ ಸಂಘಟನೆಗಾಗಿ ಪ್ರತಿಯೊಬ್ಬರು ಶ್ರಮವಹಿಸಿ ಕಾರ್ಯನಿರ್ವಹಿಸುವ ಮೂಲಕ ಸಂಘದ ಚಟುವಟಿಕೆಗಳ ಬಗ್ಗೆ ಗ್ರಾಮೀಣ ಭಾಗದ ಸಮುದಾಯದ ಮಂದಿಗೆ ತಿಳಿಸಿ ಕೊಡಬೇಕು ಹಾಗೂ ಜನಾಂಗ ಬಾಂಧವರ ಏಳಿಗೆಗಾಗಿ ಶ್ರಮಿಸಬೇಕೆಂದು ಕರೆ ನೀಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಎಂ.ಎಂ.ಪರಮೇಶ್ವರ ಮಹಾಸಭೆಗೆ ಸಮಾಜ ಬಾಂಧವರ ಹಾಜರಾತಿ ಕಡಿಮೆ…






