ಲೇಖಕ: admin

ಸಿದ್ದಾಪುರ ಮೇ 29 :  ಸಹಾರ ಯೂಥ್ ಕ್ಲಬ್ ಆಶ್ರಯದಲ್ಲಿ ಚೆನ್ನಯ್ಯನಕೋಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ 4ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕಾಲ್ಚೆಂಡು ಅಂತಿಮ ಪಂದ್ಯಾವಳಿಯಲ್ಲಿ ಚೆನ್ನಯ್ಯನಕೋಟೆಯ ಸಹಾರ ಯೂಥ್ ಕ್ಲಬ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಆರು ದಿನಗಳ ಕಾಲ ನಡೆದ ಪಂದ್ಯಾವಳಿಯಲ್ಲಿ ಒಟ್ಟು 72 ತಂಡಗಳು ಭಾಗವಹಿಸಿದ್ದು, ಅತ್ಯುತ್ತಮ ಆಟಗಾರ ಪ್ರಶಸ್ತಿಯನ್ನು ಸಹಾರ ತಂಡದ ಜೂನೈದ್, ಉತ್ತಮ ಗೋಲ್ ಕೀಪರ್ ಸಹಾರ ತಂಡದ ಅಮೀರ್, ಅತೀ ಹೆಚ್ಚು ಗೋಲು ಬಾರಿಸಿದ ಪ್ರಶಸ್ತಿಯನ್ನು ಅಮತ್ತಿ ತಂಡದ ರಹೀಸ್, ಪಡೆದುಕೊಂಡರು. ಸಮಾರೋಪ : ಸಮಾರೋಪ ಸಮಾರಂಭದಲ್ಲಿ ಕೊಡಗು ಮುಸ್ಲಿಂ ಕಪ್ ನ ಸಂಸ್ಥಾಪಕ ಆಸೀಫ್ ಆಪು ಮಾತನಾಡಿ, ಪ್ರತಿಭಾವಂತ ಕ್ರೀಡಾಪಟುಗಳನ್ನು ಬೆಳೆಸುವ ಉದ್ದೇಶದಿಂದ ಈ ಕ್ರೀಡಾಕೂಟವನ್ನು ನಾಲ್ಕು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದು, ಈ ಬಾರಿ ಚೆನ್ನಯ್ಯನಕೋಟೆಯಲ್ಲಿ ಸೌಹಾರ್ದತೆಯಿಂದ ಆಯೋಜಿಸಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಮುಸ್ಲಿಂ ಕಪ್ ಕಾಲ್ಚೆಂಡು ನ ಅಧ್ಯಕ್ಷ ಸಲೀಂ ಹಾಗೂ…

Read More

ಸಿದ್ದಾಪುರ, ಮೆ 29: ಸಮಾಜದ ಬಗ್ಗೆ ಸದಾ ಕಾರ್ಯನಿರತರಾಗಿರುವ ಪತ್ರಕರ್ತರು ಕೆಲಸದ ಒತ್ತಡಗಳ ಮಧ್ಯೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಮುಂದಾಗಬೇಕೆಂದು ಹಿಲ್ ಬ್ಲೂಮ್ಸ್ ಹೆಲ್ತ್ ಕೇರ್ ಆಸ್ಪತ್ರೆಯ ಡಾ. ಕಿರಣ್ ಎಸ್. ರಾಜ್ ಕರೆ ನೀಡಿದರು. ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಹಿಲ್ ಬ್ಲೂಮ್ಸ್ ಹೆಲ್ತ್ ಕೇರ್ ಆಸ್ಪತ್ರೆಯ ಸಹಯೋಗದಲ್ಲಿ ವಿರಾಜಪೇಟೆ ತಾಲ್ಲೂಕಿನ ಪತ್ರಕರ್ತರ ಸಂಘದ ಸದಸ್ಯರಿಗಾಗಿ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ಸಮಾಜದ ಬಗ್ಗೆ ಇರುವ ಕಾಳಜಿಯಿಂದ ಸದಾ ಕೆಲಸದ ಒತ್ತಡದಲ್ಲಿರುವ ಪತ್ರಕರ್ತರು ತಮ್ಮ ಆರೋಗ್ಯ ಹಾಗೂ ಮನೆಯವರ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸುವುದರ ಜತೆಗೆ ಸಮಯಕ್ಕೆ ಸರಿಯಾಗಿ ಆಹಾರ ಸೇವಿಸುವುದರ ಮೂಲಕ ತಮ್ಮ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ತಿಳಿಸಿದರು. ಹಿಲ್ ಬ್ಲೂಮ್ಸ್ ಹೆಲ್ತ್ ಕೇರ್ ಆಸ್ಪತ್ರೆಯ ಸಿದ್ದಾಪುರ ಹಾಗೂ ವಿರಾಜಪೇಟೆಯಲ್ಲಿ ಹೃದಯಾ ತಪಾಸಣೆ ಸೇರಿದಂತೆ ಸಂಘದ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಶಿಬಿರದಲ್ಲಿ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ…

Read More

ಮಡಿಕೇರಿ ಮೇ 29 : ಮೈಸೂರು ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್‍ಮೆಂಟ್ (ಮೈಸೆಮ್) ಕಾಲೇಜಿನ ವಾರ್ಷಿಕೋತ್ಸವ ಮತ್ತು ಪದವಿ ಪ್ರದಾನ ಸಮಾರಂಭದ ಪ್ರಯುಕ್ತ ಜೂ.3 ರಂದು ಅಂತರ ಕಾಲೇಜು ಫ್ಯಾಶನ್ ಶೋ ಆಯೋಜಿಸಲಾಗಿದೆಯೆಂದು ಕಾಲೇಜಿನ ಸಂಯೋಜಕ ತಂಬಂಡ ಪವನ್ ತಿಳಿಸಿದ್ದಾರೆ. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್‍ಮೆಂಟ್ ಕಾಲೇಜಿನಲ್ಲಿ ಜೂ.1 ರಂದು ಪದವಿ ಪ್ರದಾನ ಸಮಾರಂಭ ನಡೆಯಲಿದ್ದು, ಅಂದು 122 ಕ್ಕೂ ಹೆಚ್ಚಿನ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಪದವಿ ಸ್ವೀಕರಿಸಲಿದ್ದಾರೆಂದು ಮಾಹಿತಿಯನ್ನಿತ್ತರು. ಜೂ.2 ರಂದು ಕಾಲೇಜು ವಾರ್ಷಿಕೋತ್ಸವ `ಮೈಸಿರಿ-2023′ ನಡೆಯಲಿದ್ದು, ಅಂದು ವಿವಿಧ ಕ್ರಿಡಾ ಚಟುವಟಿಕೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆಯೆಂದು ತಿಳಿಸಿದರು. ಜೂ.3 ರಂದು ಅಂತರ ಕಾಲೇಜು ತಂಡಗಳ ಫ್ಯಾಶನ್ ಶೋ ಮತ್ತು ಡಿಜೆ ನೈಟ್ ಕಾರ್ಯಕ್ರಮ ನಡೆಯಲಿದೆ. ಫ್ಯಾಶನ್ ಶೋದಲ್ಲಿ ಪದವಿ ಮತ್ತು ಇಂಜಿನಿಯರಿಂಗ್ ಕಾಲೇಜು ತಂಡಗಳು ಪಾಲ್ಗೊಲ್ಳಬಹುದಾಗಿದ್ದು, ಫ್ಯಾಶನ್ ಶೋ ಕಾರ್ಯಕ್ರಮ ನಿರ್ವಾಹಕರಾದ ಅಮರ್ ಅವರನ್ನು ಈ ಬಗ್ಗೆ…

Read More

ಮಡಿಕೇರಿ ಮೇ 29 : ಕೊಡಗು ಜಿಲ್ಲೆಯ 56 ಮೊಹಲ್ಲಾಗಳ ಜಮಾಅತ್ ಪದಾಧಿಕಾರಿಗಳು ಕೊಡಗು ಖಾಝಿ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಅವರನ್ನು ಭೇಟಿಯಾದರು. ಕೊಡಗು ಜಿಲ್ಲೆಯ ಸಂಯುಕ್ತ ಖಾಝಿ ಕಾಂತಪುರಂ ಎ.ಪಿ ಉಸ್ತಾದರು ಕೊಡಗಿಗೆ ಆಗಾಗ್ಗೆ ಭೇಟಿ ನೀಡಿ ಸಂಬಂಧವನ್ನು ಹೆಚ್ಚಿಸುತ್ತಿದ್ದರು. ಈ ಸಂಬಂಧವನ್ನು ಗಟ್ಟಿಗೊಳಿಸುವ ಸಲುವಾಗಿ ಸುನ್ನಿ ಸಂಘಟನೆಗಳ ನಾಯಕರು ಹಾಗೂ ಸಮಿತಿ ಪದಾಧಿಕಾರಿಗಳು ಕ್ಯಾಲಿಕಟ್‍ನ ಜಾಮಿಉಲ್ ಫುತೂಹ್‍ನಲ್ಲಿ ಸಭೆ ನಡೆಸಿದರು. ಮೊಹಲ್ಲಾ – ಸಾಂಸ್ಥಿಕ ಸಬಲೀಕರಣ, ಆದರ್ಶ ಪ್ರಚಾರ, ಶಿಕ್ಷಣ ಮತ್ತು ಸಾಮಾಜಿಕ ಸೇವೆ, ಇತ್ಯಾದಿಗಳ ಕುರಿತು ಚರ್ಚೆ ನಡೆಸಿದರು. ಕಾಂತಪುರಂ ಉಸ್ತಾದ್ ಎಲ್ಲಾ ಮೊಹಲ್ಲಾಗಳಲ್ಲಿ ಮಹ್ಲರತುಲ್ ಬದ್ರಿಯ್ಯಃ ಪ್ರಾರಂಭಿಸಲು ಸೂಚಿಸಿದರು. ಈ ಬಾರಿ ಹಜ್ ಯಾತ್ರೆಗೆ ತೆರಳುವವರಿಗಾಗಿ ವಿಶೇಷವಾಗಿ ಪ್ರಾರ್ಥಿಸಿದರು. ಕಾಂತಪುರಂ ಉಸ್ತಾದ್ ಖಾಝಿಯಾಗಿರುವ ವಿವಿಧ ಮಹಲ್ಲುಗಳ ಸಂಗಮ ಮುಂದಿನ ದಿನಗಳಲ್ಲಿ ಜಾಮಿಉಲ್ ಫುತೂಹ್‍ನಲ್ಲಿ ನಡೆಯಲಿದೆ ಎಂದರು. ಸಭೆಯಲ್ಲಿ ಡಾ.ಎ.ಪಿ.ಅಬ್ದುಲ್ ಹಕೀಂ ಅಝ್ಹರಿ ಮೊಹಲ್ಲಾ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಅಗತ್ಯ ಸಲಹೆಗಳನ್ನು ನೀಡಿದರು. ಕೊಡಗು ಜಿಲ್ಲಾ ನಾಇಬ್ ಖಾಝಿ…

Read More

ಮಡಿಕೇರಿ ಮೇ 29 :  ಹತ್ತು ಕುಟುಂಬ ಹದಿನೆಂಟು ಗೋತ್ರದ ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಗೌಡ ಜನಾಂಗದ ನಡುವೆ ನಡೆದ ಗೌಡ ಪ್ರೀಮಿಯರ್ ಲೀಗ್ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿದಲ್ಲಿ ಎಲೈಟ್ ಕ್ರಿಕೆಟ್ ಕ್ಲಬ್ ಚಾಂಪಿಯನ್ ಆಗಿ ಹೊರಹೊಮ್ಮಿತು. ಕಾಫಿ ಕ್ರಿಕೆಟರ್ಸ್ ತಂಡ ರನ್ನರ್ಸ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು. ಕೊಡಗು ಗೌಡ ಯುವ ವೇದಿಕೆ ವತಿಯಿಂದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಫೈನಲ್ ಪಂದ್ಯಾವಳಿಯಲ್ಲಿ ಟಾಸ್‍ಗೆದ್ದ ಕಾಫಿ ಕ್ರಿಕೆಟರ್ಸ್ ತಂಡ ಕ್ಷೇತ್ರ ರಕ್ಷಣೆ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟ್ ಮಾಡಿದ ಎಲೈಟ್ ತಂಡ 10 ಓವರ್‍ಗೆ 7 ವಿಕೆಟ್ ನಷ್ಟಕ್ಕೆ 94 ರನ್ ಬಾರಿಸಿತು. ಎಲೈಟ್ ತಂಡದ ಪರವಾಗಿ ತಳೂರು ವಿಕ್ಕಿ 3 ಸಿಕ್ಸ್, 2 ಬೌಂಡರಿಗಳನ್ನು ಒಳಗೊಂಡು 17 ಎಸೆತಕ್ಕೆ 32 ರನ್ ಬಾರಿಸಿತು. ಕಾಫಿ ಕ್ರಿಕೆಟರ್ಸ್‍ನ ಕುದುಕುಳಿ ಮಿಥುನ್, ಕುಡಿಕಲ್ ಅನಿಲ್ ತಲಾ 2 ವಿಕೆಟ್ ಪಡೆದರು. ರನ್‍ಔಟ್ ಮೂಲಕ 2 ವಿಕೆಟ್ ಉದುರಲ್ಪಟ್ಟಿತು. ಎಲೈಟ್ ತಂಡ…

Read More

ಮಡಿಕೇರಿ ಮೇ 29 : ಬ್ಲೂಬಾಯ್ಸ್ ಯೂತ್ ಕ್ಲಬ್ ವತಿಯಿಂದ ಸುಂಟಿಕೊಪ್ಪದ ಜಿ.ಎಂ.ಪಿ. ಶಾಲಾ ಮೈದಾನದಲ್ಲಿ ಆಯೋಜನೆಗೊಂಡಿದ್ದ 25ನೇ ವರ್ಷದ ಡಿ.ಶಿವಪ್ಪ ಸ್ಮಾರಕ ರಾಜ್ಯಮಟ್ಟದ ಗೋಲ್ಡ್ ಕಪ್‍ನ ಅಂತಿಮ ಪಂದ್ಯಾವಳಿಲ್ಲಿ ಅಮಿಗೋಸ್ ಎಫ್.ಸಿ. ಮಲಪುರಂ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿತು. ಸುಂಟಿಕೊಪ್ಪದ ಮಿಡ್‍ಸಿಟಿ ಎಫ್.ಸಿ ತಂಡ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಫೈನಲ್ ಪಂದ್ಯಾವಳಿಯನ್ನು ಮೈಸೂರು ಮಹಾರಜ ಯದುವೀರ್ ಕೃಷ್ಣದತ್ತ ಒಡೆಯರ್ ಹಾಗೂ ಕ್ರೀಡಾ ಪ್ರಾಯೋಜಕ ಡಿ.ವಿಶಾಲ್ ಶಿವಪ್ಪ ಚೆಂಡು ಒಡೆಯುವ ಮೂಲಕ ಚಾಲನೆ ನೀಡಿದರು. ಅಮಿಗೋಸ್ ತಂಡ ಮತ್ತು ಮಿಡ್‍ಸಿಟಿ ಎಫ್.ಸಿ.ಸುಂಟಿಕೊಪ್ಪ ತಂಡಗಳ ನಡುವೆ ಫೈನಲ್ ಪಂದ್ಯಾವಳಿ ರೋಮಾಂಚನಕಾರಿಯಾಗಿ ನಡೆದು ಉಭಯ ತಂಡಗಳು ಸಮಬಲದ ಪ್ರದರ್ಶನ ನೀಡುವುದರೊಂದಿಗೆ ನೆರೆದಿದ್ದ ಕ್ರೀಡಾಭಿಮಾನಿಗಳಿಗೆ ಕ್ರೀಡೆಯ ರಸದೌಣವನ್ನು ಉಣಬಡಿಸಿತು. ಪ್ರೇಕ್ಷಕರ ಶಿಳ್ಳೆ, ಚಪ್ಪಾಳೆ, ಕೇಕೆ ಕ್ರೀಡಾಪಟುಗಳಿಗೆ ಪ್ರೋತ್ಸಾಹ ತುಂಬಿತು. ಬಿರುಸಿನ ಆಟವನ್ನು ಕ್ರೀಡಾಪಟುಗಳು ಪ್ರದರ್ಶಿಸಿದರು. ಪಂದ್ಯದ ಮೊದಲಾರ್ಧದ 25 ನಿಮಿಷದಲ್ಲಿ ಮಲಪುರಂ ತಂಡದ ಮುನ್ನಡೆ ಆಟಗಾರ ಅಂದಾಸ್ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಮೊದಲ ಗೋಲು…

Read More

ನಾಪೋಕ್ಲು ಮೇ 29 : ಕಕ್ಕಬೆ ರಿವರ್ ಸ್ವಿಮ್ಮಿಂಗ್ ಕ್ಲಬ್ ವತಿಯಿಂದ ಕಕ್ಕಬೆಯಲ್ಲಿ ಆಯೋಜಿಸಿದ ರಾಜ್ಯಮಟ್ಟದ ಈಜು ಸ್ಪರ್ಧೆಯು ಕೃಷಿ ಪತ್ತಿನ ಸಹಕಾರ ಸಂಘದ ಎದುರು ಇರುವ ಹೊಳೆಯಲ್ಲಿ ನಡೆಯಿತು. ವಿವಿಧ ವಯೋಮಾನದವರಿಗೆ ಏರ್ಪಡಿಸಲಾಗಿದ್ದ ಸ್ಪರ್ಧೆಯಲ್ಲಿ ಮೈಸೂರು, ಬೆಂಗಳೂರು, ಮಂಗಳೂರು ಸೇರಿದಂತೆ ರಾಜ್ಯ ವಿವಿಧ ಭಾಗಗಳ ಬಾಲಕ, ಬಾಲಕಿಯರು, ಪುರುಷರು ಹಾಗೂ ಮಹಿಳೆಯರು ಪಾಲ್ಗೊಂಡಿದ್ದರು. ಪ್ರತ್ಯೇಕ ವಿಭಾಗದಲ್ಲಿ ಸ್ಪರ್ಧೆ ನಡೆಯಿತು. ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಮನ್ ಕಾವೇರಪ್ಪ ಮಾತನಾಡಿ, ರಿವರ್ ಸ್ವಿಮಿಂಗ್ ಕ್ಲಬ್ ನ ಅಧ್ಯಕ್ಷ ಬೊಳಿಯಾಡಿರ ಸಂತು ಸುಬ್ರಮಣಿ ನೇತೃತ್ವದಲ್ಲಿ ಕಕ್ಕಬೆ ಹೊಳೆಯಲ್ಲಿ ವಿಶೇಷವಾದ ಈಜು ಸ್ಪರ್ಧೆ ನಡೆಸುತ್ತಿರುವುದು ಶ್ಲಾಘನೀಯ ಎಂದರು. ಗ್ರಾಮೀಣ ಸಂಪನ್ಮೂಲವನ್ನು ಮುಂದಿನ ಪೀಳಿಗೆಗೆ ನೀಡುವಂತಾಗಲು ಯುವ ಜನಾಂಗ ಶ್ರಮಿಸಬೇಕು. ಗ್ರಾಮೀಣ ಭಾಗದಲ್ಲಿ ಬೇಸಿಗೆಯ ರಜೆ ಸದುಪಯೋಗ ಆಗುವಂತಹ ಉತ್ತಮ ಕಾರ್ಯಕ್ರಮಗಳನ್ನು ಮಕ್ಕಳಿಗೆ ಆಯೋಜಿಸಲಾಗಿದೆ ಎಂದರು. ಮಾಚಿಮಾಡ ರವೀಂದ್ರ ಮಾತನಾಡಿ, ಈಜು ಸ್ಪರ್ಧೆ ಕೊಡಗಿಗೆ ಹೊಸ ಅನುಭವ ತಂದಿದೆ. ಜಿಲ್ಲೆಯಲ್ಲಿನ ಪ್ರಕೃತಿಯನ್ನು ಆರಾಧಿಸುವ ಮಾನಸಿಕತೆಯನ್ನು…

Read More

ಮಡಿಕೇರಿ ಮೇ 29 : ರಾಜಕೀಯದಲ್ಲಿ ಖಂಡಿತಾ ಆಸಕ್ತಿ ಇಲ್ಲ, ಮೈಸೂರು ಅರಮನೆ ಪರಂಪರೆ ಮುಂದುವರೆಸಿಕೊಂಡು ಹೋಗಲು ಬದ್ಧ ಎಂದು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣರಾಜ ಒಡೆಯರ್ ಹೇಳಿದ್ದಾರೆ. ಸುಂಟಿಕೊಪ್ಪದಲ್ಲಿ ಡಿ.ಶಿವಪ್ಪ ಸ್ಮಾರಕ 25 ನೇ ವರ್ಷದ ಫುಟ್ ಬಾಲ್ ಪಂದ್ಯಾವಳಿಯ ಅಂತಿಮ ಪಂದ್ಯವನ್ನು ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಿಂದ ದೂರ ಎಂದು ಈಗಾಗಲೇ ಹೇಳಿದ್ದೇನೆ, ಮುಂದೆಯೂ ರಾಜಕೀಯದಿಂದ ದೂರವೇ ಇರುತ್ತೇನೆ ಎಂದರು. ಸಮಾಜದಲ್ಲಿ ಸಾಮರಸ್ಯ ಕಾಪಾಡಲು ಕ್ರೀಡಾಕೂಟಗಳು ಬಹಳ ಮುಖ್ಯ, ಕೊಡಗಿನ ಕೋಲ್ಕೋತ್ತಾ ಎಂದು ಖ್ಯಾತಿ ಪಡೆದು ಫುಟ್ಬಾಲ್ ಕ್ರೀಡೆಗೆ ಹೆಸರಾಗಿರುವ ಸುಂಟಿಕೊಪ್ಪದಲ್ಲಿ 25 ವರ್ಷಗಳಿಂದ ಫುಟ್ಬಾಲ್ ಪಂದ್ಯಾವಳಿ ಆಯೋಜಿಸುತ್ತಿರುವ ಡಿ.ಶಿವಪ್ಪ ಕುಟುಂಬದ ಪ್ರಯತ್ನ ಶ್ಲಾಘನೀಯ, ಕೊಡಗಿನಲ್ಲಿ ಕ್ರೀಡಾ ಚಟುವಟಿಕೆಗೆ ಮುಂದಿನ ದಿನಗಳಲ್ಲಿ ನನ್ನಿಂದಾದ  ಪ್ರೋತ್ಸಾಹ ನೀಡುವೆ ಎಂದು ಭರವಸೆ ನೀಡಿದರು. ಡಿ.ಶಿವಪ್ಪ ಸ್ಮಾರಕ ಫುಟ್ಬಾಲ್ ಪಂದ್ಯಾವಳಿಯ ಪ್ರಾಯೋಜಕರಾದ ಉದ್ಯಮಿ ವಿಶಾಲ್ ಶಿವಪ್ಪ ಮಾತನಾಡಿ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಂಗಣವಾಗಿ ಸುಂಟಿಕೊಪ್ಪ ಶಾಲಾ ಕ್ರೀಡಾಂಗಣ ರೂಪಿಸುವ ಯೋಜನೆ ಇದ್ದು, ಶಾಸಕ…

Read More

ಮಡಿಕೇರಿ ಮೇ 29 :  ಎಸ್.ಕೆ.ಎಸ್.ಎಸ್.ಎಫ್ ಕಂಡಕರೆ ಶಾಖೆ ವತಿಯಿಂದ ಮೊದಲನೆಯ ವರ್ಷದ ಮಜ್ಲಿಸುನ್ನೂರ್ ವಾರ್ಷಿಕೋತ್ಸವ ಕಾರ್ಯಕ್ರಮ ಜೂ.4  ರಂದು ಮಗ್ರಿಬ್‌‌ ನಮಾಜ್ ನಂತರ  ಕಂಡಕರೆ ‌ಮದರಸ ಮೈದಾನದಲ್ಲಿ ‌ ನಡೆಯಲಿದೆ. ಸಂಜೆ 7 ಗಂಟೆಗೆ ಕೊಡಗು ಜಿಲ್ಲಾ ನಾಯಿಬ್ ಖಾಝಿ‌ ಶೈಖುನಾ ಎಂ.ಎಂ ಅಬ್ದುಲ್ಲ ಫೈಝಿ‌ ನೆರವೇರಿಸಲಿದ್ದಾರೆ. ಕಾರ್ಯಮದ‌ ಶುಭನುಡಿಯನ್ನು ಕಂಡಕರೆ ಮಸ್ಜಿದ್ ತಖ್ವಾ ಖತೀಬರಾದ ಮುಸ್ತಫಾ ಸಖಾಫಿ ನೆರವೇರಿಸಲಿದ್ದಾರೆ. ಮಜ್ಲಿಸುನ್ನೂರ್ ನೇತೃತ್ವವನ್ನು ಹಾಫಿಳ್ ಸಯ್ಯಿದ್‌ ಅಬ್ದುಲ್ ಖಾದಿರಿ‌ ಪಟ್ಡಾಂಬಿ ನೆರವೇರಿಸಲಿದ್ದಾರೆ ಎಂದು  ಎಸ್.ಕೆ.ಎಸ್.ಎಸ್.ಎಫ್ ಕಂಡಕರೆ ಶಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಮೇ 27 : ನೂತನ ರಾಜ್ಯ ಸರ್ಕಾರದ ಮಂತ್ರಿಮoಡಲ ರಚನೆಯಾಗಿದೆ, ಜಾತ್ಯತೀತ ರಾಷ್ಟ್ರ ಭಾರತದಲ್ಲಿ ಸಂವಿಧಾನದತ್ತವಾದ ಹುದ್ದೆಗಳು ಅರ್ಹತೆಯ ಆಧಾರದ ಮೇಲೆ ಹಂಚಿಕೆಯಾಗಬೇಕೆ ಹೊರತು ಜಾತಿ, ಧರ್ಮ, ಪಂಗಡಗಳ ಆಧಾರದಿಂದ ಅಲ್ಲವೆಂದು ವಕೀಲ ಕೆ.ಎಂ.ಕುಂಞ ಅಬ್ದುಲ್ಲ ಅಭಿಪ್ರಾಯಪಟ್ಟಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭ ಜಾತೀಯತೆಯ ವಿಚಾರ ಹೆಚ್ಚು ಚರ್ಚೆಗೆ ಬಂತು. ಇದೀಗ ಕೆಲವೊಂದು ಗುಂಪು, ಪಂಗಡ, ಜಾತಿಗಳು ಸಂವಿಧಾನ ದತ್ತವಾದ ಸ್ಥಾನಮಾನಗಳನ್ನು ಅರ್ಹತೆಯನ್ನಾಧರಿಸಿ ಸ್ವೀಕರಿಸದೆ ಜಾತಿ, ಧರ್ಮಗಳ ಆಧಾರದಲ್ಲಿ ಕೇಳಿ ಪಡೆಯುತ್ತಿರುವುದು ಮತ್ತು ಹಂಚಿಕೆಯಾಗುತ್ತಿರುವುದು ಕಂಡು ಬರುತ್ತಿದೆ. ಇದು ಅಕ್ಷಮ್ಯ ಅಪರಾಧವಾಗಿದೆ, ಅಲ್ಲದೆ ಸಂವಿಧಾನ ವಿರೋಧಿಯಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ವ್ಯಕ್ತಿ ತಮ್ಮ ಅರ್ಹತೆ ಮತ್ತು ಪ್ರತಿಭೆಯ ಮೂಲಕ ಸಂವಿಧಾನದತ್ತವಾದ ಹುದ್ದೆಗಳನ್ನು ಪಡೆದಾಗ ಮಾತ್ರ ಭಾರತ ಜಾತ್ಯಾತೀತ ರಾಷ್ಟ್ರವಾಗಿ ಉಳಿದು ಸಂವಿಧಾನದ ಮೂಲ ಉದ್ದೇಶ ಈಡೇರುತ್ತದೆ ಎಂದು ಕುಂಞ ಅಬ್ದುಲ್ಲ ಹೇಳಿದ್ದಾರೆ.

Read More