ವಿರಾಜಪೇಟೆ ಮೇ 27 : ವಿರಾಜಪೇಟೆ ತಾಲೂಕಿನ ಬೆಳ್ಳುಮಾಡು ಗ್ರಾಮದ ಆಡುಕೋಣಿ ಶ್ರೀ ಶಾಸ್ತಾವು (ಈಶ್ವರ) ಮತ್ತು ವಿಷ್ಣುಮೂರ್ತಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ದೃಢಕಲಶಾಭಿಷೇಕ ಜರುಗಿತು. ಪುರಾತನ ದೇವಾಲಯಗಳಲ್ಲೊಂದಾದ ಶ್ರೀ ಶಾಸ್ತಾವು ಸುಮಾರು 50 ಲಕ್ಷ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡು ಲೋಕಾರ್ಪಣೆಗೊಂಡಿತ್ತು. ದೇಗುಲ ನಿರ್ಮಾಣವಾದ ಬಳಿಕ 48 ದಿನಗಳ ಬಳಿಕ ಶ್ರೀ ದೇವರಿಗೆ ನಿತ್ಯ ಪೂಜೆ, ವಾರ್ಷಿಕ ಪೂಜೆ, ವಿಶೇಷ ಪೂಜೆ ಮಾಡುವುದು ದೈವಿಕ ಸೇವೆಯ ವಾಡಿಕೆಯಾಗಿದೆ. ಈ ಹಿನ್ನಲೆಯಲ್ಲಿ ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಪ್ರಜ್ವಲ್ ಕುದ್ದಣಾಯ ಮತ್ತು ಇತರ ಪೊರೋಹಿತ ವೃಂದದ ಸಾನಿಧ್ಯದಲ್ಲಿ ದೃಢಕಲಶಾಭಿಷೇಕ ಸೇರಿದಂತೆ ವಿವಿಧ ವಿಶೇಷ ಪೂಜೆಗಳು ನಡೆಯಿತು. ನಂತರ ದೇವಾಲಯದ ಆಡಳಿತ ಮಂಡಳಿಯ ವತಿಯಿಂದ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿತು. ಈ ಸಂದರ್ಭ ದೇವಾಲಯದ ತಕ್ಕ ಮುಖ್ಯಸ್ಥರು, ಅಧ್ಯಕ್ಷರು ಸೇರಿದಂತೆ ಆಡಳಿತ ಮಂಳಿಯ ಸದಸ್ಯರು ಬೆಳ್ಳುಮಾಡು ಗ್ರಾಮ ಹಾಗೂ ನೆರೆಕೆರೆಯ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವರದಿ : ಕಿಶೋರ್ ಕುಮಾರ್ ಶೆಟ್ಟಿ
ಲೇಖಕ: admin
ಮಡಿಕೇರಿ ಮೇ 27 : ಗೌಡ ಯುವ ವೇದಿಕೆ ವತಿಯಿಂದ ನಗರದ ಜ.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿತ ಗೌಡ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಟೀಂ ಎಲೈಟ್ ತಂಡ ಫೈನಲ್ ಪ್ರವೇಶಿಸಿತು. ಮೊದಲ ಕುತೂಹಲಕಾರಿ ಕ್ವಾಲಿಫೈಯರ್ ಪಮದ್ಯದಲ್ಲಿ ಎಲೈಟ್ ತಂಡ ಎದುರಾಳಿ ಕಾಫಿ ಕ್ರಿಕೆಟಸ್ಟ್ ತಂಡವನ್ನು ಪರಾಭವಗೊಳಿಸಿ, ಮೊದಲ ತಂಡವಾಗಿ ಪ್ರಶಸ್ತಿಯ ಸುತ್ತು ತಲುಪಿತು. ಮೊದಲು ಬ್ಯಾಟ್ ಮಾಡಿದ ಕಾಫಿ ಕ್ರಿಕೆಟರ್ಸ್ ನಿಗದಿತ 10 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 72 ರನ್ ಗಳಿಸಿತು. ಅನಿಲ್ ಕುಡೆಕಲ್ ಅತ್ಯಧಿಕ 34(18) ರನ್ ಗಳಿಸಿದರು. ಎಲೈಟ್ ತಂಡದ ಅವಿನ್ 2 ವಿಕೆಟ್ ಪಡೆದರು. ನಂತರ ಬ್ಯಾಟ್ ಮಾಡಿದ ಎಲೈಟ್ ತಂಡ ಒಂದು ವಿಕೆಟ್ ನಷ್ಟಕ್ಕೆ 5.5 ಓವರ್ ನಲ್ಲಿ 75 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಎಲೈಟ್ ತಂಡದ ಪರವಾಗಿ ತಳೂರು ವಿಕ್ಕಿ 50 ರನ್ ಗಳಿಸಿದರು. ಎಲಿಮಿನೇಟರ್ ಪಂದ್ಯ- ನಂತರ…
ಮಡಿಕೇರಿ ಮೇ 27 : ವಿದ್ಯುತ್ ತಂತಿ ತಗುಲಿ ಕಾಡಾನೆಯೊಂದು ಸಾವಿಗೀಡಾಗಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಕುಟ್ಟದಲ್ಲಿ ನಡೆದಿದೆ. ಕಾಫಿ ತೋಟದ ಮಧ್ಯೆ 11 ಕೆ.ವಿ.ಸಾಮಥ್ರ್ಯದ ವಿದ್ಯುತ್ ತಂತಿ ಹಾದುಹೋಗಿತ್ತು. ಇದು ಸೊಂಡಿಲಿಗೆ ತಗುಲಿ ಆನೆ ಸ್ಥಳದಲ್ಲೇ ಮೃತಪಟ್ಟಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಡಿಕೇರಿ ಮೇ 27 : ಗೊಬ್ಬರ ಚೀಲ ಮುಚ್ಚಿಕೊಂಡು ಬೀಟೆ ಮರದ ನಾಟಾಗಳನ್ನು ಸಾಗಿಸುತ್ತಿದ್ದ ಪ್ರಕರಣವನ್ನು ಅರಣ್ಯ ಇಲಾಖೆಯ ಮಡಿಕೇರಿ ವಿಭಾಗದ ಸಿಬ್ಬಂದಿಗಳು ಪತ್ತೆಹಚ್ಚಿದ್ದಾರೆ. ಮರಗೋಡುವಿನಲ್ಲಿ ಗೊಬ್ಬರ ಚೀಲ ಮುಚ್ಚಿಕೊಂಡು ತೆರಳುತ್ತಿದ್ದ ಲಾರಿಯನ್ನು ಪರಿಶೀಲನೆಗೆ ಒಳಪಡಿಸಿದಾಗ ಬೀಟೆ ಮರಗಳು ಇರುವುದು ಪತ್ತೆಯಾಗಿದೆ. ಸುಮಾರು 2 ಲಕ್ಷ ರೂ. ಮೌಲ್ಯದ ಮರ, ಲಾರಿ ಸೇರಿ ಒಟ್ಟು 22 ಲಕ್ಷದ ರೂ. ಮೌಲ್ಯದ ಮರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂದರ್ಭ ಲಾರಿ ಚಾಲಕ ಮತ್ತು ಆರೋಪಿಗಳು ಪರಾರಿಯಾಗಿದ್ದಾರೆ. ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ. ಪೂವಯ್ಯ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮೊಹಿಷಿನ್ ಭಾಷಾ, ವಲಯ ಅರಣ್ಯಾಧಿಕಾರಿ ಹನುಮಂತ ರಾಜು, ಮೂರ್ನಾಡು ಉಪ ವಲಯದ ಉಪವಲಯ ಅರಣ್ಯಾಧಿಕಾರಿ ಬಿ.ಹೆಚ್.ಸಚಿನ್ ಸೇರಿ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಪದವಿ ಪರೀಕ್ಷೆ ಮುಗಿದ ನಂತರ ಬಹುತೇಕ ವಿದ್ಯಾರ್ಥಿಗಳದ್ದು ಒಂದೇ ಪ್ರಶ್ನೆ ಮುಂದೇನು ? ಎಲ್ಲರ ಚಿತ್ತವೂ ಒಳ್ಳೆಯ ಉದ್ಯೋಗ ಮಾಡುವುದೇ ಆಗಿದ್ದರೂ, ಕಣ್ಣೆದುರು ಬಂದು ನಿಲ್ಲುವುದು ಮಾತ್ರ ಪ್ರಚಲಿತದಲ್ಲಿರುವ ಕೆಲವೇ ಕೆಲವು ಕೋರ್ಸುಗಳು ಆದರೆ ನಮ್ಮ ನಡುವೆಯೇ ಇರುವ, ಡಿಪ್ಲೋಮಾ ಕೊನೆಯ ಸೆಮಿಸ್ಟರ್ ನಲ್ಲೇ ಇಂಟರ್ನ್ ಶಿಪ್ ಮೂಲಕ ಉದ್ಯೋಗ ದೊರಕಿಸುವ ಹಲವು ಕೋರ್ಸುಗಳು ಗಮನಕ್ಕೆ ಬಾರದೆ ಹೋಗುತ್ತಿವೆ. ಅಂಥ ಕೋರ್ಸುಗಳಲ್ಲಿ ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ(ಸಿಪೆಟ್)ನೀಡುತ್ತಿರುವ ಡಿಪ್ಲೋಮ ಕೂಡ ಒಂದು. ಪ್ಲಾಸ್ಟಿಕ್ ಎಂದಾಕ್ಷಣ ನಕಾರಾತ್ಮಕ ಭಾವನೆಯೇ ಮೂಡುತ್ತದೆ ಆದರೆ ಅದರ ಪ್ರಯೋಜನಗಳು ಸಾವಿರಾರು. ನಿತ್ಯೋಪಯೋಗಿ ವಸ್ತುಗಳಾದ ಮೊಬೈಲ್ ಫೋನ್, ಫ್ರಿಡ್ಜ್, ಕಂಪ್ಯೂಟರ್ , ಟಿ.ವಿ. ವೈದ್ಯಕೀಯ ಕ್ಷೇತ್ರದಲ್ಲಿ ಟ್ಯಾಬ್ಲೆಟ್ , ಸಿರಿಂಜ್, ಸೆಂಟ್, ಕ್ರೀಮ್ ಮುಂತಾದವುಗಳ ತಯಾರಿಕೆಗೆ ವಿಜ್ಞಾನ–ತಂತ್ರಜ್ಞಾನ ಕ್ಷೇತ್ರದಲ್ಲಿ ಬಳಸುವ ಯಂತ್ರೋಪಕರಣಗಳಿಗೆ ಆಹಾರ ಪದಾರ್ಥ ಗಳಾದ ಬಿಸ್ಕೆಟ್, ಚಾಕಲೇಟ್, ಹಾಲು, ತುಪ್ಪ ಪ್ಯಾಕಿಂಗ್ ಗಳಿಗೆ… ಎಲ್ಲದರಲ್ಲೂ ಪ್ಲಾಸ್ಟಿಕ್ ಬೇಕೇ ಬೇಕು.ಆದರೆ…
ಬೆಂಗಳೂರು ಮೇ 27 : ಭಾರತದ ಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರ 59ನೇ ಪುಣ್ಯತಿಥಿಯ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದ ಆವರಣದಲ್ಲಿರುವ ನೆಹರೂ ಪ್ರತಿಮೆ ಬಳಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟಕ್ಕೆ ಇಂದು 24 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ನೂತನ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಶಾಸಕರಾದ ಎಚ್.ಕೆ.ಪಾಟೀಲ್, ಕೃಷ್ಣ ಬೈರೇಗೌಡ, ಚೆಲುವರಾಯಸ್ವಾಮಿ, ಎಚ್.ಸಿ.ಮಹದೇವಪ್ಪ ಮತ್ತು ಇತರರು ಪ್ರಮಾಣ ವಚನ ಸ್ವೀಕರಿಸಿದರು. ಹೆಚ್.ಕೆ.ಪಾಟೀಲ್, ಕೃಷ್ಣ ಭೈರೇಗೌಡ, ಎನ್. ಚಲುವರಾಯಸ್ವಾಮಿ, ಕೆ.ವೆಂಕಟೇಶ್, ಡಾ.ಹೆಚ್.ಸಿ.ಮಹದೇವಪ್ಪ, ಈಶ್ವರ ಖಂಡ್ರೆ, ಕೆ.ಎನ್.ರಾಜಣ್ಣ, ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪುರ್, ಶಿವಾನಂದ ಪಾಟೀಲ್, ಆರ್.ಬಿ.ತಿಮ್ಮಾಪುರ, ಎಸ್.ಎಸ್.ಮಲ್ಲಿಕಾರ್ಜುನ, ಶಿವರಾಜ ತಂಗಡಗಿ, ಡಾ.ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್, ಮಂಕಾಳು ವೈದ್ಯ, ಸಂತೋಷ್ ಲಾಡ್, ಎನ್ ಎಸ್ ಬೋಸೆರಾಜು, ಬೈರತಿ ಸುರೇಶ್, ಮಧು ಬಂಗಾರಪ್ಪ, ಎಂ.ಸಿ.ಸುಧಾಕರ್, ಬಿ.ನಾಗೇಂದ್ರ, ಲಕ್ಷ್ಮೀ ಹೆಬ್ಬಾಳ್ಕರ್, ರಹೀಂ ಖಾನ್, ಡಾ. ಸುಧಾಕರ್, ರಹೀಂ ಖಾನ್ ಪ್ರಮಾಣ ವಚನ ಸ್ವೀಕರಿಸಿದರು.
ಮಡಿಕೇರಿ ಮೇ 27 : ಕಟ್ಟೆಮಾಡು ಗ್ರಾಮದ ಚೊಕ್ಕಂಡ ದೇವಿ ಉತ್ತಪ್ಪ ಅವರ ಮನೆಯ ಕೋಳಿಗೂಡಿನಲ್ಲಿ ಸೇರಿಕೊಂಡಿದ್ದ 6 ಅಡಿ ಉದ್ದದ ಗೋಧಿ ನಾಗರ ಹಾವನ್ನು ಉರಗ ತಜ್ಞ ಪಿಯೂಸ್ ಪೆರೆರಾ ರಕ್ಷಿಸಿ, ಸಂಪಾಜೆ ಅರಣ್ಯಕ್ಕೆ ಬಿಟ್ಟರು.
ಮಡಿಕೇರಿ ಮೇ 27 : ಸುಂಟಿಕೊಪ್ಪದ ಬ್ಲೂ ಬಾಯ್ಸ್ ಯೂತ್ ಕ್ಲಬ್ ಆಶ್ರಯದಲ್ಲಿ ಜಿಎಂಪಿ ಶಾಲಾ ಮೈದಾನದಲ್ಲಿ ನಡೆಯುತ್ತಿರುವ 25 ನೇ ವರ್ಷದ ಡಿ. ಶಿವಪ್ಪ ಸ್ಮಾರಕ ರಾಜ್ಯಮಟ್ಟದ ಗೋಲ್ಡ್ ಕಪ್ ಫುಟ್ಬಾಲ್ ಟೂರ್ನಿಯ ಫೈನಲ್ ಹಣಾಹಣಿ ಮೇ 28 ರಂದು ನಡೆಯಲಿದೆ. ಅಪರಾಹ್ನ 3 ಗಂಟೆಗೆ ನಡೆಯಲಿರುವ ಅಂತಿಮ ಪಂದ್ಯವನ್ನು ಬೆಟ್ಟಗೇರಿ ಗ್ರೂಪ್ ಆಫ್ ಎಸ್ಟೇಟ್ಸ್ ನ ಮಾಲೀಕ ಡಿ. ವಿನೋದ್ ಶಿವಪ್ಪ ಉದ್ಘಾಟಿಸಲಿದ್ದಾರೆ. ನಂತರ ಬಹುಮಾನ ವಿತರಣೆಯನ್ನು ಬೆಟ್ಟಗೇರಿ ಗ್ರೂಪ್ ಆಫ್ ಎಸ್ಟೇಟ್ಸ್ ನ ವಿಶಾಲ್ ಶಿವಪ್ಪ ವಿತರಿಸುವರು. ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಮೈಸೂರು ರಾಜ ವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿಶೇಷ ಅತಿಥಿಯಾಗಿ ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಚಲನಚಿತ್ರ ನಟಿ ಶುಭ್ರ ಅಯ್ಯಪ್ಪ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ, ಗ್ರಾ.ಪಂ ಅಧ್ಯಕ್ಷ ಶಿವಮ್ಮ ಮಹೇಶ್, ಉಪಾಧ್ಯಕ್ಷ ಕೆ. ಪ್ರಸಾದ್…
ಸೋಮವಾರಪೇಟೆ ಮೇ 27 : ಸೋಮವಾರಪೇಟೆ ಟೀಚರ್ಸ್ ಕ್ವಾರ್ಟರ್ಸ್ ನಿವಾಸಿ, ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದ ಹಿರಿಯ ಪತ್ರಕರ್ತ ಡಿ.ಎಂ.ಚಿಣ್ಣಪ್ಪ (82) ನಿಧನರಾದರು. ಸೋಮವಾರಪೇಟೆಯಿಂದ ಪ್ರಕಟವಾಗುತ್ತಿದ್ದ ಸಿಡಿಲು ವಾರ ಪತ್ರಿಕೆಯ ಸಂಪಾದಕರಾಗಿ ಚಿಣ್ಣಪ್ಪ ಕರ್ತವ್ಯ ನಿರ್ವಹಿಸಿದ್ದರು. ವಯೋಸಹಜ ಖಾಯಿಲೆಯಿಂದ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಶಕುಂತಲಾ ಸೇರಿದಂತೆ ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.






