ಲೇಖಕ: admin

ಸೋಮವಾರಪೇಟೆ ಮೇ 27 : ವಾಹನ ಚಾಲಕರು ಮತ್ತು ಮೋಟರು ಕೆಲಸಗಾರರ ಸಂಘದ ವತಿಯಿಂದ ನಿರ್ಮಾಣವಾಗಿರುವ ನೂತನ ಕಟ್ಟಡವನ್ನು ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಉದ್ಘಾಟಿಸಿದರು. ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ನಿರುದ್ಯೋಗದ ಬಗ್ಗೆ ಯೋಚನೆ ಮಾಡದೆ, ಸ್ವಯಂ ಉದ್ಯೋಗ ಕಂಡುಕೊಂಡು ಕುಟುಂಬದ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವ ವಾಹನ ಚಾಲಕರನ್ನು ನಾವೆಲ್ಲರೂ ಅಭಿನಂಧಿಸಬೇಕಾಗಿದೆ. ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳು ವಾಹನ ಚಾಲಕರಿಗೆ ತಲುಪಬೇಕು. ಈ ನಿಟ್ಟಿನಲ್ಲಿ ಸಂಘದ ಪದಾಧಿಕಾರಿಗಳು ಗಮನಹರಿಸಬೇಕು ಎಂದರು. ನೂತನ ಕಟ್ಟಡ ನಿರ್ಮಾಣಕ್ಕೆ ತಮ್ಮ ಅನುದಾನದಲ್ಲಿ 5ಲಕ್ಷ ರೂ.ಗಳನ್ನು ಕಲ್ಪಿಸಲಾಗುವುದು ಎಂದು ಹೇಳಿದರು. ವಾಹನ ಚಾಲಕರು ಮತ್ತು ಮೋಟರು ಕೆಲಸಗಾರರ ಸಂಘದವರು ಕಳೆದ 30 ವರ್ಷಗಳಿಂದ ಪಟ್ಟಣದಲ್ಲಿ ಅದ್ದೂರಿ ಆಯುಧ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾರೆ. ಗ್ರಾಮೀಣ ಜನರಿಗೆ ಪ್ರತಿವರ್ಷ ಮನರಂಜನಾ ಕಾರ್ಯಕ್ರಮವನ್ನು ಏರ್ಪಡಿಸುತ್ತಾರೆ. ಜೊತೆಗೆ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್ ಹೇಳಿದರು. ಸಂಘದ ಅಧ್ಯಕ್ಷ ಕೆ.ಜಿ.ಸುರೇಶ್ ಮಾತನಾಡಿ, ವಾಹನ ಚಾಲಕರ ಕನಸ್ಸಿನ…

Read More

ಮಡಿಕೇರಿ ಮೇ 27 :  ತಿತಿಮತಿ ಗ್ರಾ.ಪಂ ವ್ಯಾಪ್ತಿಯ ನೊಕ್ಯ ಗ್ರಾಮದ ಶ್ರೀ  ಬಸವೇಶ್ವರ,  ಗಣಪತಿ ಮತ್ತು  ನಾಗದೇವರುಗಳ 13ನೇ  ವಾರ್ಷಿಕೋತ್ಸವವು ಮೇ 28 ರಂದು ನಡೆಯಲಿದೆ. ಮುಂಜಾನೆ 10 ಗಂಟೆಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜಾ ವಿಧಿವಿಧಾನಗಳು ಜರುಗಲಿದ್ದು, ಮಧ್ಯಾಹ್ನ 12.30ಕ್ಕೆ ಅನ್ನದಾನ ಕಾರ್ಯಕ್ರಮ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ  ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು  ದೇವಾಲಯ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಸದಸ್ಯರು ಮನವಿ ಮಾಡಿದ್ದಾರೆ.

Read More

ಮಡಿಕೇರಿ ಮೇ 27 : ಕೊಡಗು ಗೌಡ ಯುವ ವೇದಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅರ್ಪಿಸುವ ಟಿವಿಎಸ್ ಜಿಪಿಎಲ್ ಗೌಡ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸಮಾರೋಪ ಸಮಾರಂಭವು ಮೇ, 28 ರಂದು ಸಂಜೆ 4 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಫೈನಲ್ ಪಂದ್ಯಾವಳಿಯ ಉದ್ಘಾಟನೆಯು ಮೇ, 28 ರಂದು ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ.  ಗಣ್ಯರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಮೇ.27 : ಮೂರ್ನಾಡು 33/11ಕೆವಿ ಎಂಯುಎಸ್‍ಎಸ್ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಮೇ, 29 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ, ಪಾರಾಣೆ, ನಾಪೋಕ್ಲು, ಹೊದ್ದೂರು, ಮರುಗೋಡು, ಮೂರ್ನಾಡು, ಹಾಕತ್ತೂರು, ಕಾಂತೂರು, ಹೊದವಾಡ, ಚೆಯ್ಯಂಡಾಣೆ, ಕಕ್ಕಬೆ, ನೆಲಜಿ, ಪಾಲೂರು, ಯವಕಪಾಡಿ, ಬೇತು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಹಾಗೆಯೇ ಪೊನ್ನಂಪೇಟೆ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್ 1 ನಲ್ಲೂರು, ಎಫ್ 2 ಬಾಳೆಲೆ, ಎಫ್2 ರಾಜಾಪುರ ಫೀಢರ್‍ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಮೇ, 29 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ನಲ್ಲೂರು, ಬೆಸಗೂರು, ಪೊನ್ನಪ್ಪಸಂತೆ, ಬಾಳೆಲೆ, ರಾಜಾಪುರ, ಮಳ್ಳೂರು, ನಿಟ್ಟೂರು, ಕೊಟ್ಟಗೇರಿ, ಬಿಳೂರು, ದೇವನೂರು ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್…

Read More

ಮಡಿಕೇರಿ ಮೇ.27 : ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ, 29 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಕ್ಲಬ್ ಮಹೀಂದ್ರ ರೆಸಾರ್ಟ್, ಮಡಿಕೇರಿ, ಹಿಮತ್ಸಂಗ ಲೈನ್ಸ್, ಹಾಸನ, ಹ್ಯೂಂಡಾಯಿ ಕಾರ್ ಶೋರೂಮ್, ಮಡಿಕೇರಿ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ.8296020826 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Read More

ನಾಪೋಕ್ಲು ಮೇ 29 : ಬಿ. ಶೆಟ್ಟಿಗೇರಿ ಗ್ರಾಮದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಉರಗ ತಜ್ಞ ಪೊನ್ನೀರ ಗಗನ್ ರಕ್ಷಿಸಿದ್ದಾರೆ. ಗ್ರಾಮದ ಚೇರಂಡ ರಕ್ಷಿತ ದೇವಯ್ಯ ಅವರ ಹತ್ತಿರ ಇದ್ದ 12 ಅಡಿ ಉದ್ದದ ಬಾರಿ ಗಾತ್ರದ ಕಾಳಿಂಗ ಸರ್ಪವನ್ನು ಉರಗ ತಜ್ಞ ಪೊನ್ನೀರ ಗಗನ್ ರಕ್ಷಿಸಿ ಕುಟಿಯಲ ಅರಣ್ಯಕ್ಕೆ ಬಿಟ್ಟರು. ಪೊನ್ನೀರ ಸ್ನೇಕ್ ಗಗನ್ ಈಗಾಗಲೇ 67 ಕಾಲಿಂಗ ಸರ್ಪ ಸೇರಿದಂತೆ 8 ಸಾವಿರಕ್ಕೂ ಅಧಿಕ ವಿವಿಧ ಜಾತಿಯ ಹಾವುಗಳನ್ನು ಸೆರೆಹಿಡಿದಿದ್ದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ. ವರದಿ : ದುಗ್ಗಳ ಸದಾನಂದ 

Read More

ನಾಪೋಕ್ಲು ಮೇ 27 : ಕಕ್ಕಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯಕ್ಕೆ ಶಾಸಕ ಎ.ಎಸ್ ಪೊನ್ನಣ್ಣ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭ ತಕ್ಕರಾದ ಪರದಂಡ ಲಾಲಾ ನರೇಂದ್ರ ಪ್ರಾರ್ಥನೆ ಸಲ್ಲಿಸಿ ಶಾಸಕರಾಗಿ ಆಯ್ಕೆಯಾದ ಎ.ಎಸ್.ಪೊನ್ನಣ್ಣ ಅವರಿಗೆ ಮಂತ್ರಿ ಪದವಿಯು ದೊರಕುವಂತಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದರು. ಪ್ರಮುಖರಾದ ಬಾಚಮಂಡ ಲವ ಚಿಣ್ಣಪ್ಪ, ಬಡಕಡ ದೀನಾ ಪೂವಯ್ಯ, ಕಲಿಯಂಡ ಸಂಪನ್ ಅಯ್ಯಪ್ಪ ಸೇರಿದಂತೆ ಇನ್ನಿತರ ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ  

Read More

ನಾಪೋಕ್ಲು ಮೇ 27 : ಪಾಲೂರು ಗ್ರಾಮದ ಶ್ರೀ ಕಾಳಿಕಾಂಬ ದೇವಿಯ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ವಾರ್ಷಿಕೋತ್ಸವದ ಅಂಗವಾಗಿ ಬೆಳಿಗ್ಗೆ ವಾದ್ಯಗೋಷ್ಠಿಯೊಂದಿಗೆ ಭಕ್ತರು ಮೆರವಣಿಗೆ ತೆರಳಿ ದೇವರ ಜಳಕ ಕೈಗೊಂಡರು. ಬಳಿಕ ದೇವಾಲಯದಲ್ಲಿ ಮಹಾಪೂಜೆ ನಡೆಯಿತು. ಪ್ರಸಾದ ವಿತರಣೆಯ ಬಲಿಕ ನೆರೆದಿದ್ದ ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಈ ಸಂದರ್ಭ ಭಕ್ತಾದಿಗಳು ತಮ್ಮ ಇಷ್ಟಾರ್ಥ ಸಿದ್ದಿಗೆ ವಿವಿಧ ಹರಕೆ, ಕಾಣಿಕೆ ಒಪ್ಪಿಸಿರು. ಕಾರ್ಯಕ್ರಮದಲ್ಲಿ ದೇವಾಲಯದ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ತಕ್ಕ ಮುಖ್ಯಸ್ಥರು ಊರ ಮತ್ತು ಪರವೂರಿನ ಕಾಲಿಕಾಂಬ ಭಕ್ತಾದಿಗಳು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ   

Read More

ಮಡಿಕೇರಿ ಮೇ 27  : ಕೊಡಗು ಪತ್ರಕತ೯ರ ಸಂಘ (ರಿ)ದ ವತಿಯಿಂದ ವಾರ್ಷಿಕ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನಿಸಲಾಗಿದೆ. ಸಂಘದಿಂದ ಐದು ಪ್ರಶಸ್ತಿಗಳನ್ನು ಸ್ಥಾಪಿಸಲಾಗಿದ್ದು ಮುದ್ರಣ ಮಾಧ್ಯಮಕ್ಕೆ ಅತ್ಯುತ್ತಮ ಕ್ರೀಡೆ, ರಾಜಕೀಯ, ಕೃಷಿ ಹಾಗೂ ಗ್ರಾಮೀಣ ವರದಿಗಳಿಗೆ ಪ್ರಶಸ್ತಿಗಳನ್ನು ನೀಡಲಾಗುತ್ತದೆ.ಇದರೊಂದಿಗೆ ಸಂಘದ ಹಿರಿಯ ಸಲಹೆಗಾರರಾದ ಶಕ್ತಿ ದಿನ ಪತ್ರಿಕೆಯ ಸಲಹಾ ಸಂಪಾದಕರಾದ ಬಿ.ಜಿ.ಅನಂತಶಯನ ಅವರು ತಮ್ಮ ತಾಯಿ ರಾಜಲಕ್ಷ್ಮಿ ಗೋಪಾಲಕೃಷ್ಣ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಮಾನವೀಯ ವರದಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ದೃಶ್ಯ ಮಾಧ್ಯಮಕ್ಕೆ ಅತ್ಯುತ್ತಮ ಮಾನವೀಯ ವರದಿ ಮತ್ತು ಕೊಡಗಿನ ಜ್ವಲಂತ ಸಮಸ್ಯೆಗಳ ಕುರಿತಾದ ವರದಿಗಳಿಗೆ ಪ್ರಶಸ್ತಿ ನೀಡಲಾಗುತ್ತದೆ.ಕೊಡಗು ಪತ್ರಕರ್ತರ ಸಂಘದ ಸದಸ್ಯರುಗಳಿಗೆ ಮಾತ್ರ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು , ವರದಿಗಳು 2022 ರ ಜನವರಿಯಿಂದ 2022ರ ಡಿಸೆಂಬರ್ ಅಂತ್ಯದೊಳಗೆ ಪ್ರಕಟವಾಗಿರಬೇಕು. ವರದಿಯಲ್ಲಿ ವರದಿಗಾರನ ಹೆಸರು ಇಲ್ಲದಿದ್ದರೆ ಸಂಪಾದಕರು ಅಥವಾ ಜಿಲ್ಲಾ ವರದಿಗಾರರ ದೖಢೀಕರಣವಿರಬೇಕು.  ಒಬ್ಬರು ಒಂದು ಪ್ರಶಸ್ತಿಗೆ ತಮ್ಮ ಒಂದು ವರದಿಯನ್ನು ಮಾತ್ರ ಸಲ್ಲಿಸಬೇಕಾಗಿದೆ. ಟಿವಿ ಮಾಧ್ಯಮದವರು…

Read More

ಮಡಿಕೇರಿ ಮೇ 26 : ಯುನೈಟೆಡ್ ಕೊಡವ ಆರ್ಗನೈಸೇಷನ್ (ಯುಕೊ) ಸಂಘಟನೆಯ ನಿಯೋಗ ನೂತನ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಅವರನ್ನು ಭೇಟಿಯಾಗಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮನವಿ ಸಲ್ಲಿಸಿದರು. ವಿರಾಜಪೇಟೆಯ ಪೊನ್ನಣ್ಣ ಅವರ ನಿವಾಸದಲ್ಲಿ ಯುಕೋ ಸಂಘಟನೆಯ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಅವರ ನೇತೃತ್ವದ ನಿಯೋಗ ಭೇಟಿ ಮಾಡಿ ಸನ್ಮಾನಿಸಿ ಗೌರವಿಸಿತು. ಈಗಾಗಲೆ ಸರ್ಕಾರಿ ಆದೇಶದ ಮೂಲಕ ಘೋಷಣೆಯಾಗಿರುವ ‘ಕರ್ನಾಟಕ ರಾಜ್ಯ ಕೊಡವ ಅಭಿವೃದ್ಧಿ ನಿಗಮ’ವನ್ನು ಸ್ಥಾಪಿಸಿ ನೂರು ಕೋಟಿ ರೂಪಾಯಿಗಳ ಅನುದಾನವನ್ನು ನೀಡಬೇಕೆಂದು ನಿಯೋಗ ಮನವಿ ಮಾಡಿತು. ಹಿಂದುಳಿದ ವರ್ಗಗಳ ಮೀಸಲಾತಿಯ ರಾಜ್ಯ ಪಟ್ಟಿಯಲ್ಲಿ ಕೊಡವರನ್ನು ಪ್ರವರ್ಗ 3ಎ ಯಲ್ಲಿ ಹಾಗೂ ಪ್ರವರ್ಗ 3ಎ ಯ ಕೇಂದ್ರ ಪಟ್ಟಿಯಲ್ಲಿ ಸೇರಿಸಲು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ನಿಯೋಗದ ಸದಸ್ಯರು ಕೋರಿದರು. ಕೊಡವರ ಪಾರಂಪರಿಕ ತಾಣಗಳಾದ ಮಂದ್ ಮಾನಿ, ಕ್ಯಾಕೊಳ, ಚೂಟ್‌ಂಗಳದoತಹ ಸಾಂಸ್ಕೃತಿಕ ಕೇಂದ್ರಗಳ ಕಂದಾಯ ದಾಖಲಾತಿಗಳನ್ನು ಸರಿ ಪಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ವಿನಂತಿಕೊoಡರು. ಬೇಡಿಕೆಗಳ…

Read More