ಮಡಿಕೇರಿ ಮೇ 26 : ನಾಡಿನ ವಿವಿಧೆಡೆಗಳಲ್ಲಿ ಬೆಳೆಯುವ ಅಪರೂಪದ ಮತ್ತು ಸ್ವಾದಿಷ್ಟವಾದ ಮಾವು ಮತ್ತು ಹಲಸಿನ ಮೇಳಕ್ಕೆ ನಗರದ ಹಾಪ್ ಕಾಮ್ಸ್ ನಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಚಾಲನೆ ನಿಡಿದರು. ಜಿಲ್ಲಾಡಳಿತ, ತೋಟಗಾರಿಕಾ ಇಲಾಖೆ, ಜಿಲ್ಲಾ ಪಂಚಾಯತ್ ಮತ್ತು ಹಾಪ್ ಕಾಮ್ಸ್ ವತಿಯಿಮದ ಆಯೋಜಿತ ದ್ವಿತೀಯ ವರ್ಷದ ಮೇಳ ಉದ್ಘಾಟಿಸಿದ ಶಾಸಕರು, ಮಧ್ಯವರ್ತಿಗಳನ್ನು ಹೊರಗಿಟ್ಟು ಬೆಳೆೆಗಾರರು ಮತ್ತು ಗ್ರಾಹಕರಿಗೆ ನೇರ ಸಂಪರ್ಕ ಕಲ್ಪಿಸುವ ಮೇಳ ನಿಜಕ್ಕೂ ಅಪರೂಪದ್ದೆಂದು ಮೆಚ್ಚುಗೆ ವ್ಯಕಪಡಿಸಿದರು. ಬೆಳೆಗಾರ ತಾನು ಬೆಳೆಯುವ ಹಣ್ಣು, ಹಂಪಲನ್ನು ಮಧ್ಯವರ್ತಿಗಳ ಮೂಲಕ ಮಾರಾಟಮಾಡಬೇಕಾದ ಪರಿಸ್ಥಿತಿ ಇದೆ. ಇದನ್ನು ತಪ್ಪಿಸಿ, ಬೆಳೆಗಾರನ ಉತ್ಪನ್ನಕ್ಕೆ ಯೋಗ್ಯ ಮಾರುಕಟ್ಟೆಯೊಂದಿಗೆ ಉತ್ತಮ ಧಾರಣೆ ಒದಗಿಸುವಲ್ಲಿ ಇಂತಹ ಮೇಳ ಸಹಕಾರಿಯಾಗಿದೆ. ಇಂತಹ ಮೇಳಗಳ ಮೂಲಕ ವಿವಿಧ ತಳಿಯ ಮಾವಿನ ಹಣ್ಣುಗಳನ್ನು ಸವಿಯುವ ಅವಕಾಶವೂ ಸಾರ್ವಜನಿಕರಿಗೆ ದೊರಕಲಿದೆ. ಜಿಲ್ಲೆಗೆ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಇವರುಗಳು ಮೇಳದ ಪ್ರಯೋಜನವನ್ನು ಪಡೆದುಕೊಳ್ಳಬಹುದೆಂದು ಅನಿಸಿಕೆ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು…
ಲೇಖಕ: admin
ಮಡಿಕೇರಿ ಮೇ 26 : ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಲ್ಲಿ ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು. ಇದರಿಂದ ಜನಪ್ರತಿನಿಧಿಗಳು ಜನರ ನಿರೀಕ್ಷೆಗೆ ತಕ್ಕಂತೆ ಹೆಚ್ಚು ಕೆಲಸ ಮಾಡಲು ಸಾಧ್ಯ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಹೇಳಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬoಧಿಸಿದoತೆ ಅಭಿವೃದ್ಧಿ ಕಾರ್ಯಗಳು ಹಾಗೂ ಸಾರ್ವಜನಿಕರಿಗೆ ಸ್ಪಂದಿಸಬೇಕಾದ ಕೆಲಸಗಳ ಬಗ್ಗೆ ಶುಕ್ರವಾರ ನಡೆದ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು. ಚುನಾವಣೆ ಸಂದರ್ಭದಲ್ಲಿ ನೀಡಲಾಗಿದ್ದ ಭರವಸೆಯ ಪ್ರಣಾಳಿಕೆಯನ್ನು ಈಡೇರಿಸಲು ಸಂಬoಧಪಟ್ಟ ಇಲಾಖೆ ಅಧಿಕಾರಿಗಳು ಮುಂದಾಗಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಪ್ರಣಾಳಿಕೆಯಲ್ಲಿ ಜನಪರ ಕಾರ್ಯಕ್ರಮಗಳು ಇದ್ದು, ಅವುಗಳನ್ನು ಅನುಷ್ಠಾನಗೊಳಿಸಲು ಅಧಿಕಾರಿಗಳು ಮುಂದಾಗಬೇಕು. ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಹಾಗೂ ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಎಲ್ಲಾ ಹಂತದ ಅಧಿಕಾರಿಗಳು ಕೈಜೋಡಿಸಬೇಕು ಎಂದು ನೂತನ ಶಾಸಕರು ತಿಳಿಸಿದರು. ಸರ್ಕಾರದ ವಿವಿಧ ಕಾಮಗಾರಿಗಳಿಗೆ ಸಂಬoಧಿಸಿದoತೆ ಇತ್ತೀಚೆಗೆ ಹೊಸ ಆದೇಶ ಹೊರಡಿಸಿದ್ದು,…
ಮಡಿಕೇರಿ ಮೇ 25 : ಅಭಿವೃದ್ಧಿಯ ಹೆಸರಿನಲ್ಲಿ ಹಣ ಕೊಳ್ಳೆ ಹೊಡೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲವೆಂದು ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ವತಿಯಿಂದ ನಗರದ ಪತ್ರಿಕಾಭವನದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಸರಕಾರಿ ಇಲಾಖೆಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಲಾಗುವುದು ಮತ್ತು ಸಾರ್ವಜನಿಕರ ಕೆಲಸಗಳು ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಲಾಗುವುದು ಎಂದರು. ಜನಪರವಾದ ಅಭಿವೃದ್ಧಿ ಕಾರ್ಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅಭಿವೃದ್ಧಿಯ ಹೆಸರಿನಲ್ಲಿ ಹಣ ದುರುಪಯೋಗ ಮಾಡುವುದಕ್ಕೆ ಅವಕಾಶ ನೀಡುವುದಿಲ್ಲ. ಜನರ ಕಷ್ಟಗಳಿಗೆ ಸಕಾಲದಲ್ಲಿ ಸ್ಪಂದಿಸಲಾಗುವುದು ಎಂದು ಭರವಸೆ ನೀಡಿದರು. ಜಿಲ್ಲೆಯಲ್ಲಿ ಮುಂಗಾರು ಆರಂಭಗೊಳ್ಳಲಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಸಭೆ ಕರೆಯುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಡ್ರಗ್ಸ್ ದಂಧೆ ವಿರುದ್ಧ ಕಠಿಣ ಕ್ರಮ ಮತ್ತು ಕಾನೂನು ಬಾಹಿರ ಕೃತ್ಯಗಳಿಗೆ ಕಡಿವಾಣ ಹಾಕಲು ಈಗಾಗಲೇ ಮುಖ್ಯಮಂತ್ರಿಗಳು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಕೊಡಗು ಜಿಲ್ಲೆಯಲ್ಲಿಯೂ ಸೂಕ್ತ ಕ್ರಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ…
ಮಡಿಕೇರಿ ಮೇ 25 : ಕೊಡವ ಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ನೀಡಬೇಕು ಮತ್ತು ಕೊಡವರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ಧರಣಿ ಸತ್ಯಾಗ್ರಹ ನಡೆಸಿದ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ, ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ನೂತನ ಸರ್ಕಾರಕ್ಕೆ ಸಲ್ಲಿಸಿದೆ. ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದ ಪ್ರಮುಖರು ಕೊಡವ ಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ಪರ ಘೋಷಣೆಗಳನ್ನು ಕೂಗಿದರು. ಕೊಡವರ ನ್ಯಾಯ ಸಮ್ಮತ ಬೇಡಿಕೆಗಳನ್ನು ಈಡೇರಿಸುವಂತೆ ಕಳೆದ 33 ವರ್ಷಗಳಿಂದ ಸಿಎನ್ಸಿ ಸಂಘಟನೆ ಶಾಂತಿಯುತ ಹೋರಾಟಗಳನ್ನು ನಡೆಸಿಕೊಂಡು ಬಂದಿದೆ. ಆದರೆ ನಮ್ಮ ನೋವಿಗೆ ಸೂಕ್ತ ಸ್ಪಂದನೆ ನೀಡುವ ಕಾರ್ಯವನ್ನು ಯಾವ ಆಡಳಿತ ವ್ಯವಸ್ಥೆಯೂ ಮಾಡಿಲ್ಲ. ಇದೀಗ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ನೂತನ ಸರ್ಕಾರ ಹಾಗೂ ಜಿಲ್ಲೆಯ ಇಬ್ಬರು ಶಾಸಕರು ಬೇಡಿಕೆಗಳಿಗೆ ಸ್ಪಂದಿಸಲಿದ್ದಾರೆ ಎನ್ನುವ ವಿಶ್ವಾಸವಿದೆ ಎಂದು ನಾಚಪ್ಪ ತಿಳಿಸಿದರು. ಒಟ್ಟು 9 ಬೇಡಿಕೆಗಳ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುoಡೇ…
ಮಡಿಕೇರಿ ಮೇ.25 : ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪಲು ಗ್ರಾಮ ಪಂಚಾಯಿತಿಯಲ್ಲಿ “ಆರೋಗ್ಯ ಅಮೃತ ಅಭಿಯಾನದಡಿ” ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಗೋಣಿಕೊಪ್ಪಲು ಗ್ರಾ.ಪಂ ಅಧ್ಯಕ್ಷರಾದ ಸೌಮ್ಯ ಬಾಲು ಚಾಲನೆ ನೀಡಿದರು. ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಯನಿರ್ವಹಿಸುವ ಕೂಲಿ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ನರೇಗಾ ಕೂಲಿ ಕಾರ್ಮಿಕರಿಗೆ ಉಚಿತವಾಗಿ ಆರೋಗ್ಯ ತಪಾಸಣೆಯನ್ನು ಕೈಗೊಂಡಿದ್ದು, ಇಂದಿನ ಆರೋಗ್ಯ ಶಿಬಿರದಲ್ಲಿ ಪ್ರಮುಖವಾಗಿ, ರಕ್ತ ಪರೀಕ್ಷೆ ಕೈಗೊಂಡು ಮಧುಮೇಹ, ರಕ್ತದೊತ್ತಡ, ಟಿಬಿ, ಕಣ್ಣಿನ ಪರೀಕ್ಷೆ, ಹೃದಯ ಸಂಬಂಧಿಸಿದಂತೆ ಆರೋಗ್ಯ ಶಿಬಿರದಲ್ಲಿ ತಪಾಸಣೆ ಕೈಗೊಳ್ಳಲಾಯಿತು. ಇದೇ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರಾದ ಶ್ರೀನಿವಾಸ್, ತಾಲ್ಲೂಕು ಐಇಸಿ ಸಂಯೋಜಕರಾದ ನರೇಂದ್ರ, ತಾಲ್ಲೂಕು ಆರೋಗ್ಯ ಸಂಯೋಜಕರಾದ ಅನಿತಾ, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಗೂ ಇತರರು ಉಪಸ್ಥಿತರಿದ್ದರು.
ಮಡಿಕೇರಿ ಮೇ 25 : ಅಮೂಲ್ಯ ಹರಳುಗಳನ್ನು ಒಳಗೊಂಡ ಆನೆ ದಂತದಿಂದ ಮಾಡಿರುವ 2 ಕಡಗ(ಕೈಗೆ ಧರಿಸುವ ಆಭರಣ)ಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಬಂಧಿಸಿದ್ದಾರೆ. ಕೊಳ್ಳೇಗಾಲ ಮೂಲದ ಪಿ.ಪ್ರದೀಪ್ ಕುಮಾರ್(42) ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ನಗರದ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಸಿದ್ದಾಪುರ ಕಡೆಗೆ ತೆರಳುವ ಮಾರ್ಗದ ಬಸ್ ತಂಗುದಾಣದ ಬಳಿ ಆನೆ ದಂತದಿಂದ ಮಾಡಿರುವ ಕೈ ಬಳೆ ಮಾದರಿಯ ನೀಲಿ ಮತ್ತು ಹಸಿರು ಬಣ್ಣದ ಅಮೂಲ್ಯ ಹರಳುಗಳನ್ನು ಒಳಗೊಂಡಿದ್ದ 2 ಕಡಗಗಳನ್ನು ಮಾರಾಟ ಮಾಡಲು ಈತ ಯತ್ನಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಖಚಿತ ಮಾಹಿತಿಯ ಹಿನ್ನೆಲೆ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ಸಂದರ್ಭ ಆರೋಪಿ ಮಾಲು ಸಹಿತ ಸೆರೆ ಸಿಕ್ಕಿದ್ದಾನೆ. ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ಕುರಿತು ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ…
ಮಡಿಕೇರಿ ಮೇ 25 : ಗ್ರಾಹಕರ ವ್ಯಾಜ್ಯಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಜುಲೈ, 8 ರಂದು ಲೋಕ್ ಅದಾಲತ್ ನಡೆಯಲಿದೆ. ಆ ದಿನದಂದು ಸಂಬಂಧಪಟ್ಟವರು ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ಗುರುತಿಸಿಕೊಂಡು ಇತ್ಯರ್ಥಪಡಿಸಿಕೊಳ್ಳುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ಆಡಳಿತಾಧಿಕಾರಿ ಹಾಗೂ ಸಹಾಯಕ ರಿಜಿಸ್ಟ್ರಾರ್ ಶಾರದ ತಿಳಿಸಿದ್ದಾರೆ.
ಮಡಿಕೇರಿ ಮೇ.25 : ಕರ್ನಾಟಕ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ‘ಗ್ರಾಹಕ ಸಂರಕ್ಷಣಾ ಕಾಯ್ದೆ 2019’ ರ ಕುರಿತು ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜೂನ್, 1 ರಂದು ರಾತ್ರಿ 8 ರಿಂದ 8.30 ಗಂಟೆ ವರೆಗೆ ಆಕಾಶವಾಣಿಯಲ್ಲಿ ಫೋನ್-ಇನ್ ನೇರ ಪ್ರಸಾರ ಕಾರ್ಯಕ್ರಮ ನಡೆಯಲಿದೆ. ಗ್ರಾಹಕರು ಯಾವುದೇ ಪ್ರಶ್ನೆಗಳಿದ್ದಲ್ಲಿ ದೂರವಾಣಿ ಸಂಖ್ಯೆ 080-22370477 / 22370488 /22370499 ಕರೆ ಮಾಡಿ ಮಾಹಿತಿಯನ್ನು ಪಡೆದುಕೊಳ್ಳಬಹುದು. ಹಾಗೆಯೇ ಗ್ರಾಹಕರು ತಮ್ಮ ಪ್ರಶ್ನೆಗಳನ್ನು ಮಿಂಚಂಚೆ consumergrievances.queries@gmail.com ಮೂಲಕ ಮೇ 31 ರೊಳಗೆ ಕಳುಹಿಸಿಕೊಡಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ರಿಜಿಸ್ಟ್ರಾರ್ ಮತ್ತು ಆಡಳಿತಾಧಿಕಾರಿ ವಿಜಯಕುಮಾರ್ ತಿಳಿಸಿದ್ದಾರೆ.
ಮಡಿಕೇರಿ ಮೇ.25 : ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ತರಗತಿಯು ಇದೇ ಮೇ, 29 ರಿಂದ ಆರಂಭವಾಗಲಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ ತಿಳಿಸಿದ್ದಾರೆ. ಪ್ರಸಕ್ತ 2023-24 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಮೇ, 29 ರಿಂದ ಆರಂಭವಾಗಲಿದ್ದು, ರಾಜ್ಯಾದ್ಯಂತ ಏಕರೂಪ ಯಶಸ್ವಿ ಅನುಷ್ಠಾನಕ್ಕಾಗಿ ವಾರ್ಷಿಕ ಶೈಕ್ಷಣಿಕ ಮಾರ್ಗಸೂಚಿಯನ್ನು ಸರ್ಕಾರ ಸಿದ್ಧಪಡಿಸಿದೆ ಎಂದು ತಿಳಿಸಿದರು. ಪಾಠ ಹಂಚಿಕೆ, ಪಠ್ಯೇತರ ಚಟುವಟಿಕೆಗಳು, ಪರೀಕ್ಷೆ ಮತ್ತು ಮೌಲ್ಯಾಂಕನ ವಿಶ್ಲೇಷಣೆ, ಗುಣಮಟ್ಟದ ಶಿಕ್ಷಣಕ್ಕಾಗಿ ಫಲಿತಾಂಶ ಮುಖಿ ಚಟುವಟಿಕೆಗಳ ನಿರ್ವಹಣೆ ಹಾಗೂ ವಿವಿಧ ಶಾಲಾ ಹಂತದಲ್ಲಿನ ಚಟುವಟಿಕೆಗಳನ್ನು ನಿರ್ವಹಿಸಲು ಸಹಾಯಕವಾಗುವಂತೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ. ರಾಜ್ಯ/ ಜಿಲ್ಲಾ ಕಚೇರಿಗಳಿಂದ ನಿಯೋಜಿಸಿದ ಜಿಲ್ಲಾ ಮತ್ತು ತಾಲ್ಲೂಕು ನೋಡಲ್ ಅಧಿಕಾರಿಗಳು, ಕ್ಲಸ್ಟರ್ ಹಂತದ ಸಿಆರ್ಪಿಗಳು ಬ್ಲಾಕ್ ಹಂತದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾ ಹಂತದಲ್ಲಿ ಉಪ ನಿರ್ದೇಶಕರು…
ನಾಪೋಕ್ಲು ಮೇ 25 : ನಾಪೋಕ್ಲು ವ್ಯಾಪ್ತಿಯ ಸುತ್ತಮುತ್ತಲ ಗ್ರಾಮಗಳಲ್ಲಿ ಬಿರುಸಿನ ಮಳೆಯಾಗಿದ್ದು ಅಲ್ಲಲ್ಲಿ ಮರದ ರೆಂಬೆಗಳು ಮುರಿದುಬಿದ್ದು ಮನೆಗಳಿಗೆ ಹಾನಿಯಾಗಿದೆ. ಸಮೀಪದ ಎಮ್ಮೆಮಾಡು ಗ್ರಾಮದ ಪಿ.ಎ.ಅಬ್ದುಲ್ ಗಫೂರ್ ಅವರ ಮನೆಯ ಮೇಲೆ ನಂದಿ ಮರದ ಕೊಂಬೆ ಬಿದ್ದುದರ ಪರಿಣಾಮವಾಗಿ ಅಡುಗೆಮನೆಯ ಮೇಲ್ಛಾವಣಿಯ 4 ಶೀಟುಗಳು ಹಾನಿಗೊಂಡಿದೆ. ಮನೆಯೊಳಗೆ ಮಳೆ ನೀರು ಹರಿಯುತ್ತಿದ್ದು ಸಮಸ್ಯೆ ಎದುರಾಗಿದೆ. ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ದಾನೇಶ್ವರಿ ಮತ್ತು ಸಿಬ್ಬಂದಿ ಸೋಮಯ್ಯ ಭೇಟಿ ನೀಡಿ ಪರಿಶೀಲಿಸಿದರು. ವರದಿ : ದುಗ್ಗಳ ಸದಾನಂದ






