ಲೇಖಕ: admin

ಮಡಿಕೇರಿ ಮೇ 25 : ಸೋಮವಾರಪೇಟೆ ಪಟ್ಟಣ ಪಂಚಾಯಿತಿಯ ಮೊದಲ ಅವಧಿಯ ಎರಡೂವರೆ ವರ್ಷಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಧಿಕಾರವಧಿ ಮೆ.8ಕ್ಕೆ ಮುಗಿದಿದ್ದು, ಸರ್ಕಾರ ಆಡಳಿತಾಧಿಕಾರಿಯನ್ನು ನೇಮಿಸಿ ಆದೇಶ ಹೊರಡಿಸಿದೆ. ಸೋಮವಾರಪೇಟೆ ತಾಲ್ಲೂಕು ತಹಶೀಲ್ದಾರ್ ಎಸ್.ವಿ.ನರಗುಂದ ಅಧಿಕಾರ ವಹಿಸಿಕೊಂಡಿದ್ದಾರೆ. ಮುಂದಿನ ಎರಡೂವರೆ ವರ್ಷಕ್ಕೆ ಅಧ್ಯಕ್ಷರ, ಉಪಾಧ್ಯಕ್ಷರ ಮೀಸಲಾತಿಯ ಆದೇಶವನ್ನು ಸರ್ಕಾರ ಹೊರಡಿಸಬೇಕಾಗಿದೆ. ಪಂಚಾಯಿತಿಯ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬಿಸಿಎಂ(ಎ) ಮೀಸಲಾತಿ ಬಂದಿದ್ದು, ಬಿಜೆಪಿಯ ನಳಿನಿಗಣೇಶ್ ಅಧ್ಯಕ್ಷರಾಗಿ, ಕಾಂಗ್ರೆಸ್‍ನ ಬಿ.ಸಂಜೀವ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಕೋವಿಡ್ ಸಂದರ್ಭದಲ್ಲಿ ನಳಿನಿ ಮೃತಪಟ್ಟ ನಂತರ ಪಿ.ಕೆ.ಚಂದ್ರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

Read More

ಮಡಿಕೇರಿ ಮೇ 25 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿರುವ ಕೊಡವ ಜನಾಂಗದ ಏಕೈಕ ಪ್ರತಿನಿಧಿಯಾಗಿರುವ ಎ.ಎಸ್ ಪೊನ್ನಣ್ಣರಿಗೆ ಸಚಿವ ಸ್ಥಾನ ನೀಡಬೇಕು, ತಪ್ಪಿದ್ದಲ್ಲಿ ಜಿಲ್ಲೆಯಲ್ಲಿ ಪಕ್ಷಭೇದ ಮರೆತು ಬೃಹತ್ ಹೋರಾಟ ನಡೆಸುವುದಾಗಿ ಅಖಿಲ ಕೊಡವ ಸಮಾಜಗಳ ಮುಖಂಡರು ಎಚ್ಚರಿಕೆ ನೀಡಿದರು. ಶಾಸಕ ಎ.ಎಸ್ ಪೊನ್ನಣ್ಣರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ವಿರಾಜಪೇಟೆಯ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ನಡೆದ ಜಿಲ್ಲೆಯ ವಿವಿಧ ಕೊಡವ ಸಮಾಜ ಹಾಗೂ ಕೊಡವ ಸಂಘಟನೆಗಳ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಅಖಿಲ ಕೊಡವ ಸಮಾಜ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಸಕ ಪೊನ್ನಣ್ಣನವರಿಗೆ ಸಚಿವ ಸ್ಥಾನ ನೀಡದಿದ್ದರೆ ಒಗ್ಗಟ್ಟಿನ ಹೋರಾಟ ನಡೆಸಲು ಸಭೆ ತಿರ್ಮಾನಿಸಿ ಸದ್ಯದಲ್ಲಿಯೇ ಮುಖ್ಯಮಂತ್ರಿ ಹಾಗೂ ವರಿಷ್ಟರ ಬಳಿ ನಿಯೋಗ ತೆರಳಲು ಸಭೆ ತಿರ್ಮಾನಿಸಿತು. ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಸುದೀರ್ಘ ಅವಧಿಯ ಮೇಲೆ ಕೊಡವ ಜನಾಂಗಕ್ಕೆ…

Read More

ಮಡಿಕೇರಿ ಮೇ 25 : ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಂದರ್ಭ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್, ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಉಪಾಧ್ಯಕ್ಷ ಎಸ್.ಎಂ.ಚಂಗಪ್ಪ, ಪ್ರಧಾನ ಕಾರ್ಯದರ್ಶಿಗಳಾದ ವಿ.ಪಿ.ಸುರೇಶ್, ಮುನೀರ್ ಅಹಮ್ಮದ್, ನಗರಾಧ್ಯಕ್ಷ ಬಿ.ವೈ.ರಾಜೇಶ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಬ್ಲಾಕ್ ಅಧ್ಯಕ್ಷರುಗಳಾದ ಹೆಚ್.ಎ.ಹಂಸ, ಎನ್.ಇಸ್ಮಾಯಿಲ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್, ನಗರಾಧ್ಯಕ್ಷೆ ಫ್ಯಾನ್ಸಿ ಬೆಳ್ಯಪ್ಪ, ಎಸ್.ಸಿ.ಘಟಕದ ನಗರಾಧ್ಯಕ್ಷ ಮುದ್ದುರಾಜ್, ಪ್ರಮುಖರಾದ ಪ್ರಕಾಶ್ ಆಚಾರ್ಯ, ಚುಮ್ಮಿದೇವಯ್ಯ, ಕೊಲ್ಯದ ಗಿರೀಶ್, ಸದಾಮುದ್ದಪ್ಪ, ಕಲೀಲ್ ಬಾಷ, ಕೆ.ಜಿ.ಪೀಠರ್, ಜುಲೇಕಾಬಿ, ಪ್ರೇಮಕೃಷ್ಣಪ್ಪ, ಯೂತ್ ಕಾಂಗ್ರೆಸ್‍ನ ಪ್ರಮೋದ್, ದರ್ಶನ್(ಫೆಮ್) ಸೇರಿದಂತೆ ಮತ್ತಿತರ ಕಾರ್ಯಕರ್ತರು ಹಾಜರಿದ್ದರು.

Read More

ಮಡಿಕೇರಿ ಮೇ 25 : ನಾಪೋಕ್ಲುವಿನಲ್ಲಿ ಸುರಿದ ಭಾರಿ ಮಳೆಗೆ ಇತ್ತೀಚೆಗೆ ನಿರ್ಮಿಸಿದ ರಸ್ತೆಯೊಂದು ಮಳೆ ನೀರಿನಲ್ಲಿ ಕೊಚ್ಚಿಹೋದ ಘಟನೆ ನಡೆದಿದೆ. ನಾಪೋಕ್ಲುವಿನಲ್ಲಿ ಎರಡು ಇಂಚಿಗೂ ಅಧಿಕ ಮಳೆ ಸುರಿದಿದ್ದು, ಇದರಿಂದ ನಾಪೋಕ್ಲು ಪಟ್ಟಣದಿಂದ ಚರಿಯಪರಂಬು ಗ್ರಾಮಕ್ಕೆ ಹೋಗುವ ರಸ್ತೆಯು ಮಳೆ ನೀರಿನಲ್ಲಿ ಕೊಚ್ಚಿ ಹೋಗಿದೆ. ಕಳೆದ ಒಂದು ತಿಂಗಳ ಹಿಂದೆ ಚೆರಿಯ ಪರಂಬುವಿನ ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲ್ಲಿ ಅಪ್ಪಚೆಟ್ಟೋಳಂಡ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಆಗಿನ ಮುಖ್ಯಮಂತ್ರಿಗಳಾಗಿದ್ದ ಬಸವರಾಜ ಬೊಮ್ಮಾಯಿ ಅವರು ಆಗಮಿಸುವ ಹಿನ್ನೆಲೆ ಈ ರಸ್ತೆಯನ್ನು ಡಾಂಬರೀಕರಣ ಮಾಡಲಾಗಿತ್ತು. ಆದರೆ ಧಾರಾಕಾರವಾಗಿ ಸುರಿದ ಮಳೆಯ ನೀರಿನ ರಬಸಕ್ಕೆ ರಸ್ತೆ ಕೊಚ್ಚಿಹೋಗಿದ್ದು ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಕಳಪೆ ಕಾಮಗಾರಿ ಆರೋಪ ಮಾಡಿದ್ದಾರೆ. ಕಳೆದ ಎರಡು ವರ್ಷಗಳಿಂದ ನಾಪೋಕ್ಲು ಕೆಪಿಎಸ್ ಶಾಲಾ ಆವರಣದಲ್ಲಿ ಅಂಬೇಡ್ಕರ್ ವಸತಿ ಶಾಲಾ ಕಟ್ಟಡ ನಿರ್ಮಾಣವಾಗುತ್ತಿದ್ದು ಇಲ್ಲಿಂದ ಬರುವ ಕೆಸರು ಮಿಶ್ರಿತ ಮಳೆನೀರು ಚರಂಡಿ ನಿರ್ಮಿಸದೆ ಇರುವುದರಿಂದ ನೇರವಾಗಿ ಮಡಿಕೇರಿ- ನಾಪೋಕ್ಲು ಮುಖ್ಯರಸ್ತೆಯಲ್ಲಿ ಹರಿಯುತ್ತಿದೆ. ಅಲ್ಲದೆ ರಸ್ತೆ…

Read More

ಮಡಿಕೇರಿ ಮೇ 25 :  ದಕ್ಷಿಣ ಕೊಡಗಿನ ವಾಣಿಜ್ಯಕ ನಗರಿ ಗೋಣಿಕೊಪ್ಪಲಿನಿಂದ ಅನತಿ ದೂರದಲ್ಲಿರುವ ದೇವರಪುರದಲ್ಲಿ ಕಳೆದ ಎರಡು ದಿನಗಳಿಂದ ಆದಿವಾಸಿಗಳ ‘ಬೇಡು ಹಬ್ಬ’ ಮೇಳೈಸಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅಂಚಿನಲ್ಲಿರುವ ಹಾಡಿಗಳಲ್ಲಿ ವಾಸವಿರುವ ಬುಡಕಟ್ಟು ಜನಾಂಗದ ವಿಶೇಷ ಹಬ್ಬವೇ ‘ಬೇಡು ಹಬ್ಬ’. ಆದಿವಾಸಿಗಳು ತಮ್ಮ ಆರಾಧ್ಯ ದೇವರಾದ ಭದ್ರಕಾಳಿ ಅಯ್ಯಪ್ಪ ಸ್ವಾಮಿಯ ಹೆಸರಿನಲ್ಲಿ ನಡೆಸುವ ಈ ಹಬ್ಬಕ್ಕೆ ಪಿರಿಯಾಪಟ್ಟಣ ತಾಲೂಕಿನ ಕಾಡಂಚಿನ ವ್ಯಾಪ್ತಿಯಲ್ಲಿರುವ ಮೂವತ್ತಕ್ಕೂ ಹೆಚ್ಚಿನ ಹಾಡಿಯ ಗಿರಿಜನರು, ನಾಗರಹೊಳೆ ಉದ್ಯಾನವನದ ಅನೇಕ ಹಾಡಿಗಳ ಬುಡಕಟ್ಟು ಜನರು ಪಾಲ್ಗೊಳ್ಳುವುದು ವಿಶೇಷ. ದೇವರಪುರ ಆಸುಪಾಸಿನ ಗ್ರಾಮಗಳ ಆದಿವಾಸಿಗಳು, ಇತರೆ ಜನಾಂಗದವರು ಕೂಡ ಹರಕೆ ಹೊತ್ತು, ಕಾಡಿನಲ್ಲಿ ಸಿಗುವ ಸೊಪ್ಪು, ಹರಿದ ಹಳೆ ಬಟ್ಟೆ, ಗೋಣಿಚೀಲಗಳು, ಹೀಗೆ ಕೈಗೆ ಸಿಕ್ಕುವ ವಿವಿಧ ವಸ್ತುಗಳಿಂದ ವಿವಿಧ ವೇಷಗಳನ್ನು ತೊಟ್ಟು, ಒಣಗಿದ ಸೋರೆಕಾಯಿ ಬುರುಡೆ ಪ್ಲಾಸ್ಟಿಕ್ ಡಬ್ಬ ಹಾಗೂ ಟಿನ್ನುಗಳನ್ನು ತಾಳಮೇಳ ಮಾಡಿಕೊಂಡು ಡೊಳ್ಳಿನ ರೀತಿಯಲ್ಲಿ ಬಡಿದುಕೊಂಡು ಕುಣಿಯುತ್ತ ಸಾಗುವುದು ಹಬ್ಬದ ಸಂದರ್ಭ ಕಾಣುವ ಸಾಮಾನ್ಯ…

Read More

ನಾಪೋಕ್ಲು ಮೇ 25 : ನಾಪೋಕ್ಲು ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಮಧ್ಯಾಹ್ನ ಸುಮಾರು ಒಂದು ಗಂಟೆಗಳ ಕಾಲ ಬಿರುಸಿನ ಮಳೆಯಾಗಿದ್ದು, ಸಾರ್ವಜನಿಕರು ತೊಂದರೆ ಅನುಭವಿಸುವಂತಾಯಿತು. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಬೃಹತ್ ಕಟ್ಟಡ ನಿರ್ಮಾಣವಾಗುತ್ತಿದ್ದು, ಸುತ್ತಲಿನ ಮಣ್ಣು ಕಲ್ಲುಗಳೆಲ್ಲ ರಭಸದ ಮಳೆಗೆ ಕೊಚ್ಚಿಕೊಂಡು ಮುಖ್ಯ ರಸ್ತೆಗೆ ಬಂದ ಪರಿಣಾಮ ಚಾಲಕರು, ಜನಸಾಮಾನ್ಯರು ತೊಂದರೆ ಅನುಭವಿಸಿದರು. ಮುಖ್ಯ ರಸ್ತೆ ಉದ್ದಕ್ಕೂ ಕೆಸರು ನೀರು ಹರಿದ ಪರಿಣಾಮ ವಾಹನ ಸಂಚಾರ ದುಸ್ತರವಾಗಿ ಜನರು ಸಮಸ್ಯೆ ಅನುಭವಿಸಿದರು. ಮುಖ್ಯ ರಸ್ತೆ ಕೆಳಭಾಗದಲ್ಲಿದ್ದ ಮನೆಗಳ ಅಂಗಳಕ್ಕೆ ಕೆಸರು ನೀರು ಹರಿದು ಜನರು ಪರದಾಡವಂತಾಯಿತು. ವರದಿ : ದುಗ್ಗಳ ಸದಾನಂದ 

Read More

ನಾಪೋಕ್ಲು ಮೇ 25 : ನಾಪೋಕ್ಲುವಿನಲ್ಲಿ ಬುಧವಾರ ಸಂಜೆ ಕಂಡು ಬಂದ ಆಕರ್ಷಕ ಕಾಮನ ಬಿಲ್ಲಿನ ಚೆಲುವಿನ ಚಿತ್ತಾರ ನೋಡುಗರ ಗಮನ ಸೆಳೆಯಿತು. ವರದಿ- ದುಗ್ಗಳ ಸದಾನಂದ 

Read More

ಮಡಿಕೇರಿ ಮೇ 25 : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಯುವ ಹೋರಾಟಗಾರ ಬೊಳ್ಳಜಿರ ಅಯ್ಯಪ್ಪ ಅವರನ್ನು ಆಯ್ಕೆ ಮಾಡುವಂತೆ ಕರ್ನಾಟಕ ಭಾಷಾ ಅಲ್ಪಸಂಖ್ಯಾತರ ಒಕ್ಕೂಟದ ರಾಜ್ಯಾಧ್ಯಕ್ಷ ಪ್ರತೀಕ್ ಪೊನ್ನಣ್ಣ ಮನವಿ ಮಾಡಿದ್ದಾರೆ. ಶಾಸಕರಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರಿಗೆ ಮನವಿ ಸಲ್ಲಿಸಿ ಕರ್ನಾಟಕ ಭಾಷಾ ಅಲ್ಪಸಂಖ್ಯಾತರಾದ ಕೊಡವ ಭಾಷೆ ಮತ್ತು ಲಿಪಿ ಹಾಗೂ ಸಾಹಿತ್ಯದ ಬಗ್ಗೆ ಅಪಾರ ಗೌರವ ಮತ್ತು ಇದರ ಪರ ಹೋರಾಟ ಮಾಡುತ್ತಿರುವ ಬೊಳ್ಳಜಿರ ಅಯ್ಯಪ್ಪ ಅವರು, ಕರ್ನಾಟಕ ಸಾಹಿತ್ಯ ಅಕಾಡೆಮಿಗೆ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.

Read More

ಮಡಿಕೇರಿ ಮೇ 25 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ನೂತನವಾಗಿ ಆಯ್ಕೆಯಾಗಿರುವ ಶಾಸಕ ಅಜ್ಜಿಕುಟ್ಟೀರ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಕೂಗು ಎಲ್ಲೆಡೆ ಕೇಳಿ ಬರುತ್ತಿದೆ. ಈ ಬೇಡಿಕೆಗೆ ಕೊಡಗು ಮಾತ್ರವಲ್ಲದೆ ರಾಜ್ಯದೆಲ್ಲೆಡೆ ವ್ಯಾಪಕ ಬೆಂಬಲ ದೊರೆತ್ತಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಸಚಿವ ಸ್ಥಾನ ನೀಡಬೇಕೆಂದು ಕನೆಕ್ಟಿಂಗ್ ಕೊಡವಾಸ್ ಸಂಘಟನೆಯ ಸಂಚಾಲಕ ಶಾಂತೆಯಂಡ ನಿರನ್ ನಾಚಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರತೀ ಸರ್ಕಾರದಲ್ಲು ಕೊಡಗನ್ನು ಕಡೆಗಣಿಸಲಾಗುತ್ತಿದೆ ಎಂಬ ಕೊರಗು ಕೊಡವರಿಗಿದ್ದು, ಕಳೆದೆರಡು ದಶಕಗಳಿಂದ ಗೆಲ್ಲಲು ಸಾಧ್ಯವೇ ಇಲ್ಲ ಎಂಬಂತಿದ್ದ ವಿರಾಜಪೇಟೆ ಕ್ಷೇತ್ರದಲ್ಲಿ ಈ ಬಾರಿ ಬದಲಾವಣೆಯ ಗಾಳಿ ಬೀಸಿದೆ. ವಿದ್ಯಾವಂತ ಯುವ ವಕೀಲರನ್ನ ಶಾಸಕ ಸ್ಥಾನಕ್ಕೆ ಆರಿಸಿ ಪ್ರಬುದ್ಧತೆ ಮೆರೆದಿರುವ ಮತದಾರರ ಭಾವನೆಯನ್ನು ಅರಿತು, ಪೊನ್ನಣ್ಣ ಅವರನ್ನು ಸಚಿವರನ್ನಾಗಿ ಮಾಡಬೇಕೆಂದು ಎಐಸಿಸಿ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಉಸ್ತುವಾರಿಗಳು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಪ್ರಮುಖರನ್ನು ಒತ್ತಾಯಿಸುವುದಾಗಿ ತಿಳಿಸಿದ್ದಾರೆ. ಪೊನ್ನಣ್ಣ ಅವರು ಕೊಡವರು ಹಾಗೂ ಕೊಡವ…

Read More

ಮಡಿಕೇರಿ ಮೇ 25 :  ವಿಧಾನಸಭೆ ಚುನಾವಣೆ ಸೋಲಿನ ನಂತರ ನೊಂದು ಹತಾಶನಾಗಿದ್ದೆ. ನಾನು ತಂದಿರುವ ಒಂದೊಂದು ಯೋಜನೆಗಳನ್ನು ತ್ವರಿತ ಅನುಷ್ಠಾನಗೊಳಿಸಲು ನಮ್ಮದೇ ರಾಜ್ಯ ಸರ್ಕಾರವಿದ್ದರೆ ಖಂಡಿತ ಅನುಕೂಲವಾಗುತ್ತಿತ್ತು. ನಮ್ಮ ಸರ್ಕಾರ ಇದ್ದಿದ್ದರಿಂದಲೇ ಎಲ್ಲ ವಿರೋಧ ಅಡೆತಡೆಗಳನ್ನು ಮೆಟ್ಟಿ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯನ್ನು ಪೂರ್ಣಗೊಳಿಸಲು ಸಾಧ್ಯವಾಯಿತು ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದ್ದಾರೆ. ರಾಜಕೀಯ ಹಿನ್ನಡೆಯ ಹೊರತಾಗಿಯೂ ನಾನು ಹಿಡಿದ ಕೆಲಸ ಬಿಡುವುದಿಲ್ಲ. ಈಗಾಗಲೇ ನಮ್ಮ ಸರ್ಕಾರದಿಂದ ಅನುಮೋದನೆ ಅಥವಾ ಮಂಜೂರಾತಿ ಪಡೆದಿರುವ ಅಂತಿಮಘಟ್ಟಕ್ಕೆ ತಂದಿರುವ ಕೆಲಸಗಳನ್ನು ಮಾಡಲು ನಿಮ್ಮ ಆಶೀರ್ವಾದ ಮತ್ತು ಪೋತ್ಸಾಹ ಸದಾ ನನ್ನ ಮೇಲಿರಲಿ ಎಂದು ಅವರು ಮನವಿ  ಮಾಡಿದರು. ಈಗಾಗಲೇ  ಸರ್ಕಾರದಿಂದ ಅನುಮೋದನೆ ಅಥವಾ ಮಂಜೂರಾತಿ ಪಡೆದುಕೊಂಡಿರುವ  ಅಂತಿಮಘಟ್ಟಕ್ಕೆ ತಂದಿರುವ  ಕೆಲಸಗಳು ಮೈಸೂರು – ಬೆಂಗಳೂರು ದಶಪಥ ರಸ್ತೆಯ ಬಾಕಿ ಉಳಿದಿರುವ ಕಾಮಗಾರಿಯನ್ನು ಪೂರ್ಣಗೊಳಿಸುವುದು. ಮೈಸೂರು – ಕುಶಾಲನಗರ ನಾಲ್ಕು ಪಥ ರಸ್ತೆ ಕಾಮಗಾರಿಯನ್ನು (4,100 crore)ಶೀಘ್ರವಾಗಿ ಪ್ರಾರಂಭಿಸುವುದು. ಮೈಸೂರು ಮಹಾನಗರ ಪಾಲಿಕೆಯು ವಿದ್ಯಾರಣ್ಯಪುರಂ ಸೀವೇಜ್…

Read More