ಮಡಿಕೇರಿ ಮೇ 29 : ನಿಟ್ಟೂರು ಕಾರ್ಮಾಡು ಕರ್ನಾಟಕ ಗ್ರಾಮೀಣ ಬ್ಯಾಂಕ್ ಕಾರ್ಯನಿರ್ವಹಿಸಿ ಇದೀಗ ವರ್ಗಾವಣೆಗೊಂಡ ವ್ಯವಸ್ಥಾಪಕ ಸಂದೀಪ್ ಅವರನ್ನು ಗ್ರಾಮಸ್ಥರು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಕೊಟ್ಟರು. ಕಾರ್ಮಾಡು ಶಾಖೆಯಲ್ಲಿ ಶಾಖೆಗೆ ಆಗಮಿಸಿದ 60ಕ್ಕಿಂತಲೂ ಹೆಚ್ಚಿನ ಗ್ರಾಮಸ್ಥರು, ಬ್ಯಾಂಕ್ ವ್ಯವಸ್ಥಾಪಕ ಸಂದೀಪ್ ಕೊನೆಯ ದಿನದ ಕರ್ತವ್ಯವನ್ನು ಗಮನಿಸಿ ಶ್ಲಾಘಿಸಿದರು. ಇದೇ ಸಂದರ್ಭ ನೂತನ ವ್ಯವಸ್ಥಾಪಕ ಟೋನಿ ಅವರನ್ನು ಸ್ವಾಗತಿಸಿ ಅಭಿನಂದಿಸಿದರು. ಈ ಸಂದರ್ಭ ಗ್ರಾಮಸ್ಥರು ಮಾತನಾಡಿ, ಈ ಪುಟ್ಟ ಗ್ರಾಮಕ್ಕೆ ಗ್ರಾಮೀಣ ಬ್ಯಾಂಕ್ ಅಗತ್ಯವಿಲ್ಲ ವಹಿವಾಟು ಕಡಿಮೆ ಎಂಬ ಅನಿಸಿಕೆಯನ್ನು ಈ ಹಿಂದಿನ ವ್ಯವಸ್ಥಪಕರು ವ್ಯಕ್ತಪಡಿಸಿದರು. ಆದರೆ 2019 ರಲ್ಲಿ ಈ ಬ್ಯಾಂಕ್ ಗೆ ವ್ಯವಸ್ಥಾಪಕ ಬಂದ ಸಂದೀಪ್, ಮೊದಲು ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು. ಆದಾಯ ಮತ್ತು ವ್ಯವಹಾರಗಳ ದೃಷ್ಠಿಯಿಂದ ಎಲ್ಲಾ ಪ್ಯರಾಮೀಟರ್ ಗಳಲ್ಲೂ ಈ ಬ್ಯಾಂಕ್ ಇಂದು ಕೊಡಗಿನ ಗ್ರಾಮಾಂತರ ಪ್ರದೇಶದಲ್ಲಿ ಪ್ರಥಮ ಸ್ಥಾನ ಪಡೆದು. ಗ್ರಾಮಕ್ಕೆ ಹಾಗೂ ಬ್ಯಾಂಕ್ ಗೆ ಉತ್ತಮ ಹೆಸರು ತಂದುಕೊಟ್ಟಿದ್ದು 2022-23ನೇ ಸಾಲಿನಲ್ಲಿ ಬ್ಯಾಂಕ್ ವೈವಾಟು ದಾಖಲೆಯ…
ಲೇಖಕ: admin
ಸುಂಟಿಕೊಪ್ಪ ಮೇ 24 : ಡಿ.ಶಿವಪ್ಪ ಸ್ಮಾರಕ 25ನೇ ವರ್ಷದ ರಾಜ್ಯ ಮಟ್ಟದ ಗೋಲ್ಡ್ ಕಪ್ ಫುಟ್ಬಾಲ್ ಪಂದ್ಯದಲ್ಲಿ ಹರಿಜನ್ ಎಫ್.ಸಿ ಬೆಂಗಳೂರು, ಮೊಗ್ರಲ್ ಎಫ್.ಸಿ ಕುಂಬ್ಳೆ, ತಂಡಗಳು ಮುಂದಿನ ಸುತ್ತಿಗೆ ಪ್ರವೇಶ ಪಡೆಯಿತು. ಬ್ಲೂ ಬಾಯ್ಸ್ ಯೂತ್ ಕ್ಲಬ್ ವತಿಯಿಂದ ಜಿಯಂಪಿ ಶಾಲಾ ಮೈದಾನದಲ್ಲಿ ನಡೆಯುತ್ತಿರುವ ಡಿ.ಶಿವಪ್ಪ ಸ್ಮಾರಕ 25ನೇ ವರ್ಷದ ರಾಜ್ಯ ಮಟ್ಟದ ಗೋಲ್ಡ್ ಕಪ್ ಫುಟ್ಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು, ಪುಟ್ಬಾಲ್ ಪಂದ್ಯಾವಳಿಯಲ್ಲಿ ಹರಿಜನ್ ಎಫ್.ಸಿ ಬೆಂಗಳೂರು ಹಾಗೂ ಕೂತುಪರಂಬು ಎಫ್.ಸಿ.ತಂಡಗಳ ನಡುವೆ ನಡೆದ ಮೊದಲ ಪಂದ್ಯದಲ್ಲಿ ಬೆಂಗಳೂರು ತಂಡವು ಎದುರಾಳಿ ತಂಡದ ವಿರುದ್ಧ ಆಕ್ರಮಣ ಆಟಕ್ಕೆ ಇಳಿದ ಬೆಂಗಳೂರು ತಂಡದ ಸುಮನ್ ಮೊದಲಾರ್ಧದ 28ನೇ ನಿಮೀಷದಲ್ಲಿ ಒಂದು ಗೋಲುಗಳಿಸುವ ಮೂಲಕ ತಂಡಕ್ಕೆ ಮುನ್ನಡೆ ಒದಗಿಸಿಕೊಟ್ಟರು. ದ್ವಿತೀಯಾರ್ಧದಲ್ಲಿ ಹರಿಜನ್ ತಂಡದ ಆಟಗಾರ ಬಿರುಸಿನ ಆಟಕ್ಕೆ ಇಳಿಯುವುದರೊಂದಿಗೆ 12ನೇ ನಿಮಿಷದಲ್ಲಿ ಸುಮನ್ಗೆ ಸಿಕ್ಕಿದ ಉತ್ತಮ ಅವಕಾಶವನ್ನು ಮತ್ತೊಂದು ಗೋಲುಗಳಿಸುವ ಮೂಲಕ ಎದುರಾಳಿ ತಂಡಕ್ಕೆ ಒತ್ತಡಕ್ಕೆ ಸಿಲಿಕಿಸಿದರು. 21 ಮತ್ತು 23ನೇ…
ಸೋಮವಾರಪೇಟೆ ಮೇ 25 : ಚೌಡ್ಲು-ಗಾಂಧಿನಗರದ ಶ್ರೀ ದೊಡ್ಡ ಮಾರಿಯಮ್ಮ ದೇವಾಲಯದ ವಾರ್ಷಿಕ ಪೂಜಾ ಕಾರ್ಯವು ಶ್ರದ್ಧಾಭಕ್ತಿಯಿಂದ ನೆರವೇರಿತು. ಶ್ರೀ ಆದಿಶಕ್ತಿ ಅಮ್ಮನವರ ಸನ್ನಿದಿಯಲ್ಲಿ ಮುಂಜಾನೆಯಿಂದಲೇ ಶೈವ ಪುಣ್ಯಹ, ಹೋಮ, ದುರ್ಗಾ ಪೂಜೆ, ಗಂಗಾಪೂಜೆ, ಫಲ ಪೂಜಾಮೃತ ಅಭಿಷೇಕ ಹಾಗೂ ಮಹಾ ಮಂಗಳಾರತಿ ನಡೆಯಿತು. ಸಂಜೆ ಊರಿನ ಪ್ರಮುಖ ರಸ್ತೆಗಳಲ್ಲಿ ಉತ್ಸವ ಮೂರ್ತಿಯ ಮೆರವಣಿಗೆ ವಿವಿಧ ವಾದ್ಯ ವೃಂದದೊಂದಿಗೆ ಗಮನ ಸೆಳೆಯಿತು. ನಂತರ ಅಮ್ಮನವರಿಗೆ ಹಣ್ಣುಕಾಯಿ ಸಮರ್ಪಣೆ ಮತ್ತು ಹರಕೆ ಸೇವೆ ಹಾಗೂ ಅನ್ನದಾನ ಸೇವೆ ನಡೆಯಿತು. ಈ ಸಂದರ್ಭ ದೇವಾಲಯ ಸಮಿತಿ ಅಧ್ಯಕ್ಷ ಎಚ್.ಎಸ್. ರಾಮದಾಸ್, ಉಪಾಧ್ಯಕ್ಷ ಎಚ್.ಪಿ. ಅಯ್ಯಪ್ಪ, ಕಾರ್ಯದರ್ಶಿ ಎಚ್.ಜಿ. ಭರತ್, ಖಜಾಂಚಿ ಎಚ್.ಜೆ. ಶೇಖರ್, ಸಹಕಾರ್ಯದರ್ಶಿ ಎಸ್.ಆರ್. ದೀಪಕ್, ಸಹ ಖಜಾಂಚಿ ಎಚ್.ಎಂ. ಮನೋಜ್ಕುಮಾರ್ ಸೇರಿದಂತೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಮೇ 24 : ನಗರದ ದೇಚೂರು ಬಡಾವಣೆ ನಿವಾಸಿ ಹೆಚ್.ಪಿ.ಸುಶೀಲಮ್ಮ (86) ಅವರು ಇಂದು ನಿಧನ ಹೊಂದಿದರು. ಮೃತರು ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಮೇ 25 ರಂದು ಚೈನ್ ಗೇಟ್ ಬಳಿಯ ಹಿಂದೂ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಕೊಡ್ಲಿಪೇಟೆ ಮೇ 24 : ಸಮೀಪದ ನೀರಗುಂದ ಗ್ರಾಮದೇವತೆ ಶ್ರೀ ಕನ್ನಂಬಾಡಿ ಅಮ್ಮನವರ ನೂತನ ವಿಗ್ರಹ ಉತ್ಸವ ಮೆರವಣಿಗೆ ನಡೆಯಿತು. ಹೇಮಾವತಿ ನದಿಯಿಂದ ದೇವರ ವಿಗ್ರಹಕ್ಕೆ ಗಂಗಾಸ್ನಾನ ಜಲಾಧಿವಾಸ, ಕ್ಷೀರಾಧಿವಾಸದ ನಂತರ ಸುಮಾರು 3 ಕಿಲೋ ಮೀಟರ್ ದೂರದಿಂದ ಕಳಸ ಹೊತ್ತ ಸುಮಂಗಲಿಯರು, ಮಂಗಳ ವಾದ್ಯ, ಅಡ್ಡೆಸಮೇತ ಉತ್ಸವ ಮೂರ್ತಿಯ ಮೆರವಣಿಗೆ ಸಾಗಿಬಂದು ಕೆಂಡೋತ್ಸವದೊಂದಿಗೆ ಸಂಪನ್ನಗೊಂಡಿತು. ಅಬ್ಬರದ ಮಳೆಸುರಿದರೂ ಮಳೆಯನ್ನೂ ಲೆಕ್ಕಿಸದೆ ಶ್ರೀ ಕನ್ನಂಬಾಡಿ ಅಮ್ಮನವರ ನೂತನ ವಿಗ್ರಹ ಉತ್ಸವ ಮೆರವಣಿಗೆ ಹಾಗು ಕೆಂಡೋತ್ಸವ ನಡೆಯಿತು. ದಾರ್ಮಿಕ ಸಭೆಯಲ್ಲಿ ಮಾತನಾಡಿದ ಶ್ರೀ ಕ್ಷೇತ್ರ ಕಿರಿಕೊಡ್ಲಿ ಮಠಾಧ್ಯಕ್ಷರಾದ ಶ್ರೀ ಶ್ರೀ ಸದಾಶಿವಸ್ವಾಮಿಗಳು ಭಾರತೀಯ ಸಂಸ್ಕೃತಿಯಲ್ಲಿ ದೇವಾಲಯ ಸಂಸ್ಕೃತಿಯನ್ನು ಮೂಲವಾಗಿರಿಸಿಕೊಂಡು ದರ್ಮದ ತಳಹದಿಯಲ್ಲಿ ಬದುಕನ್ನು ಕಟ್ಟಿಕೊಂಡವರು ನಾವು. ಪ್ರಪಂಚದಲ್ಲೇ ನಮ್ಮ ಭಾರತ ದೇಶ ಒಂದು ದೇವಾಲಯವಿದ್ದಂತೆ ಅಂತಹ ಪವಿತ್ರ ದೇಶದಲ್ಲಿ ನಾವಿದ್ದೇವೆ. ಪರಿಸರವನ್ನು ಮೈಗೂಡಿಕೊಂಡು ಕಷ್ಟ ನಷ್ಟಗಳೊಂದಿಗೆ ಧರ್ಮದ ಹಾದಿಯಲ್ಲಿ ನೆಮ್ಮದಿಯ ಬದುಕನ್ನು ಕಾಣುತ್ತಿದ್ದೇವೆ. ನೀರಗುಂದ ಗ್ರಾಮದಲ್ಲಿ ನಿರಂತರ ದಾರ್ಮಿಕ ಪೂಜಾ ಚಟುವಟಿಕೆಗಳನ್ನು ಇತ್ತೀಚಿನ ದಿಗಳಲ್ಲಿ ಹೆಚ್ಚಾಗಿ ಗ್ರಾಮಸ್ಥರು…
ಮಡಿಕೇರಿ ಮೇ 24 : ಕೊಡಗಿನ ಎರಡು ವಿಧಾನ ಸಭಾ ಕ್ಷೇತ್ರಗಳಲ್ಲಿನ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ಪಾತ್ರ ಮಹತ್ತರವಾದುದೆಂದು ಸಂಘಟನೆಯ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ತಿಳಿಸಿದ್ದಾರೆ. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರದ ದಲಿತ ವಿರೋಧಿ ಧೋರಣೆಗಳ ಹಿನ್ನೆಲೆಯಲ್ಲಿ ರಾಜಕೀಯ ರಹಿತವಾದ ದಸಂಸ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ತನ್ನ ಸಂಪೂರ್ಣ ಬೆಂಬಲವನ್ನು ನೀಡಿ, ತಮ್ಮ ಗ್ರಾಮ ಸಮಿತಿಗಳ ಮೂಲಕ ಜಿಲ್ಲೆಯ ಎರಡು ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳೆನ್ನದೆ ಶ್ರಮಿಸಿದೆ. ಈ ಹಿನ್ನೆಲೆ ಕಾಂಗ್ರೆಸ್ ಗೆಲುವಿನಲ್ಲಿ ದಸಂಸ ಪ್ರಮುಖ ಪಾತ್ರ ವಹಿಸಿದೆಯೆಂದು ವಿಶ್ವಾಸದಿಂದ ನುಡಿದರು. ನಿಗಮ- ಅಕ್ರಮ ಸಕ್ರಮದಲ್ಲಿ ಅವಕಾಶ ನೀಡಿ- ನೂತನ ಕಾಂಗ್ರೆಸ್ ಸರ್ಕಾರದಲ್ಲಿ ದಲಿತ ಸಂಘರ್ಷ ಸಮಿತಿಯ ಪ್ರಮುಖರಿಗೆ ಯಾವುದೇ ನಿಗಮಗಳಲ್ಲಿ ಅಧ್ಯಕ್ಷ ಸ್ಥಾನ, ಅಕ್ರಮ ಸಕ್ರಮ ಸಮಿತಿಗಳಲ್ಲಿ ಸದಸ್ಯ ಸ್ಥಾನಗಳನ್ನು ನೀಡುವಂತೆ ಹೆಚ್.ಎಲ್. ದಿವಾಕರ್ ಇದೇ ಸಂದರ್ಭ ಮನವಿ ಮಾಡಿದರು. ಹಿಂದಿನ ಬಿಜೆಪಿ…
ಸುಂಟಿಕೊಪ್ಪ ಮೇ 24 : ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಹೆಚ್ಚುತ್ತಿರುವ ಹಿನ್ನೆಲೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭ ಗ್ರಾ.ಪಂ. ಮಾಜಿ ಅಧ್ಯಕ್ಷ ಎಂ.ಎ.ಉಸ್ಮಾನ್ ಮಾತನಾಡಿ, ಈ ಭಾಗದ ಮಂದಿ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಎದುರಾದರೂ ಈ ಆರೋಗ್ಯ ಕೇಂದ್ರವನ್ನೆ ಅವಲಂಭಿಸಿದ್ದಾರೆ. ಪ್ರತಿ ನಿತ್ಯ 100ಕ್ಕೂ ಅಧಿಕ ಮಂದಿ ಚಿಕಿತ್ಸೆಗೆ ಬರುತ್ತಾರೆ. ಇಲ್ಲಿನ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ. ರಾತ್ರಿ ಪಾಳಯದ ವೈದ್ಯರು ಲಭ್ಯವಿಲ್ಲ, ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವುದರಿಂದ ನಿತ್ಯ ನೂರಾರು ವಾಹನಗಳಲ್ಲಿ ಪ್ರವಾಸಿಗಾರು ತೆರಳುವ ಸಂದರ್ಭ ಅಪಘಾತಗಳು ಸಂಭವಿಸಿದಾಗ ಗಾಯಗೊಂಡವರು ಮೃತಪಟ್ಟವರು ಆಗಮಿಸುತ್ತಾರೆ. ಈ ಸಂದರ್ಭ ಮರಣೋತ್ತರ ಪರೀಕ್ಷೆ ನಡೆಸಲು ವೈದ್ಯರು ‘ಡಿ’ಗ್ರೂಫ್ ನೌಕರರ ಕೊರತೆ ಇದೆ. ರಾತ್ರಿ ವೇಳೆ ಹೆರಿಗೆಗೆ ದಾಖಲಾಗುವವರು ಬರುತ್ತಾರೆ. ಶುಶ್ರೂಷಿಕರ ಕೊರತೆ ಇದೆ ಅದನ್ನು ಭರ್ತಿ ಮಾಡಬೇಕು. ಆಸ್ಪತ್ರೆಯ ಆಂಬ್ಯುಲೆನ್ಸ್ ವಾಹನವು ಸಾರ್ವಜನಿಕರ ಸೇವೆಗೆ ಲಭ್ಯವಾಗುತ್ತಿಲ್ಲ ಎಂದು ಸಮಸ್ಯೆಗಳನ್ನು…
ಮಡಿಕೇರಿ ಮೇ 24 : ಇದೇ ಮೊದಲ ಬಾರಿಗೆ ಕರ್ನಾಟಕ ವಿಧಾನಸಭೆಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಮುಸ್ಲಿಂ ಬ್ಯಾರಿ ಸಮುದಾಯದ ಯು.ಟಿ.ಖಾದರ್ ಅವರನ್ನು ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್ ಟ್ರಸ್ಟ್ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಗುವುದು ಎಂದು ಟ್ರಸ್ಟ್ ನ ಅಧ್ಯಕ್ಷ ಎಸ್.ಐ.ಮುನೀರ್ ಅಹಮ್ಮದ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಯು.ಟಿ.ಖಾದರ್ ಅವರ ಆಯ್ಕೆ ಹರ್ಷದಾಯಕವಾಗಿದೆ ಮತ್ತು ಬ್ಯಾರಿ ಸಮುದಾಯಕ್ಕೆ ಹೆಮ್ಮೆ ಎನಿಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಜೂನ್ ತಿಂಗಳ ಕೊನೆಯ ವಾರದಲ್ಲಿ ಸ್ಪೀಕರ್ ಸೇರಿದಂತೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಹೇಳಿದ್ದಾರೆ.
ಮಡಿಕೇರಿ ಮೇ 24 : ಮಡಿಕೇರಿ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್1 ಕೋಟೆ ಫೀಡರ್ನಲ್ಲಿ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸಬೇಕಿರುವುದರಿಂದ ಮೇ, 25 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ, ಇಂಡಸ್ಟ್ರಿಯಲ್ ಏರಿಯಾ, ಕೆ.ಎಸ್ಆರ್ಟಿಸಿ ಪ್ರಕೃತಿ ಬಡಾವಣೆ, ಗೌಳಿಬೀದಿ, ಚೌಕಿ, ನಗರಸಭೆ, ಪೆಸ್ಪನ್ಲೈನ್ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಕೋರಿದ್ದಾರೆ.
ಮಡಿಕೇರಿ ಮೇ 24 : ಪ್ರಸಕ್ತ(2023-24) ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮೊ(ಡಿಎಚ್ಟಿಟಿ) ಕೋರ್ಸ್ ಕಲಿಕೆಗೆ 44 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೇಟಗೇರಿ(ಕರ್ನಾಟಕ) (22 ಅಭ್ಯರ್ಥಿಗಳು), ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ(ತಮಿಳುನಾಡು) (17 ಅಭ್ಯರ್ಥಿಗಳು), ಎಸ್ಪಿಕೆಎಂ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ-(03 ಅಭ್ಯರ್ಥಿಗಳು), ಕೇರಳ ರಾಜ್ಯದ ಕಣ್ಣೂರಿನ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ ಇಬ್ಬರು ಅಭ್ಯರ್ಥಿ ಅರ್ಜಿ ಆಹ್ವಾನಿಸಲಾಗಿದೆ. ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ರೂ.2,500 ರವರೆಗೆ ಶಿಷ್ಯ ವೇತನ ನೀಡಲಾಗುವುದು ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು. ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2023 ರ ಜುಲೈ, 01 ಕ್ಕೆ ಅನ್ವಯಿಸುವಂತೆ ಸಾಮಾನ್ಯ…






