ಲೇಖಕ: admin

ಕುಶಾಲನಗರ ಡಿ.12 NEWS DESK : ನಂಜರಾಯಪಟ್ಟಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಟ್ಟೆಹಾಡಿಯ ಅರಣ್ಯ ಪ್ರದೇಶದಲ್ಲಿ ಪ್ಲಾಸ್ಟಿಕ್ ಹೊದಿಕೆಯೊಂದಿಗೆ ಗುಡಿಸಲಿನಲ್ಲಿ ಶೋಚನೀಯ ಜೀವನ ನಡೆಸುತ್ತಿರುವ ಸುಮಾರು 10 ಆದಿವಾಸಿ ಕುಟುಂಬಗಳಿಗೆ ದೆಹಲಿಯ ಭವಾನಿಪುರ್ ಬಾಬಾ ಬದ್ರುದ್ದೀನ್ ಶಾ ವೆಲ್ವೇರ್ ಸೊಸೈಟಿ ವತಿಯಿಂದ ಉಚಿತವಾಗಿ ನೂತನ ಮನೆ ನಿರ್ಮಿಸಿಕೊಡಲು ಉದ್ದೇಶಿಸಿದ್ದು, ತಲಾ ರೂ.5 ಲಕ್ಷ ದ ಚೆಕ್ ಅನ್ನು   ಭವಾನಿಪುರ್ ಬಾಬಾ ಬದ್ರುದ್ದೀನ್ ಶಾ ವೆಲ್ವೇರ್ ಸೊಸೈಟಿಯ (ಎನ್.ಜಿ.ಒ) ರಾಷ್ಟ್ರೀಯ ಅಧ್ಯಕ್ಷ ಶಶಿಕುಮಾರ್ ವಿತರಣೆ ಮಾಡಿದರು. ಕಟ್ಟೆಹಾಡಿಯ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಚೆಕ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಆದಿವಾಸಿಗಳು ವಾಸಿಸುತ್ತಿರುವ ಗುಡಿಸಲುಗಳಿಗೆ ಭೇಟಿ ನೀಡಿ ನೂತನ ಮನೆ ನಿರ್ಮಿಸಲು ಚೆಕ್ ಗಳನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭ ಮಾತನಾಡಿದ, ಎನ್.ಜಿ.ಒ.ರಾಷ್ಟ್ರೀಯ ಅಧ್ಯಕ್ಷ ವೈ.ಕೆ.ಶಶಿಕುಮಾರ್ , ಬಡತನ ಮುಕ್ತ ಭಾರತ ಮಾಡಬೇಕು ಎಂಬ ಉದ್ದೇಶವನ್ನು ನಮ್ಮ ಸಂಸ್ಥೆ ಹೊಂದಿದೆ. ಪ್ರತಿ ಮನೆಗೆ ಆರೋಗ್ಯ ಹಾಗೂ ಆರ್ಥಿಕ ನೆರವಿನಿಂದ ಬಡತನ ನಿರ್ಮೂಲನೆ ಗುರಿ…

Read More

ಮಡಿಕೇರಿ ಡಿ.12 NEWS DESK : ದೇವಟ್ ಪರಂಬುವಿನಲ್ಲಿ ಕೊಡವರ ಹತ್ಯಾಕಾಂಡ ನಡೆದು 240 ವರ್ಷಗಳಾದ ಹಿನ್ನೆಲೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಸ್ಮಾರಕ ಸಮಾಧಿಯಲ್ಲಿ ಹಿರಿಯರಿಗೆ ಶ್ರದ್ಧಾಂಜಲಿ ಅರ್ಪಿಸಿತು. ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡವ ಸ್ವಯಂ ಸೇವಕರು 1785 ಡಿ.12 ರಂದು ನಡೆದ ದುರಂತ ಘಟನೆಯನ್ನು ಸ್ಮರಿಸಿದರು. ಹಿರಿಯರಿಗೆ ಪುಷ್ಪನಮನ ಮತ್ತು ಗೌರವ ಅರ್ಪಿಸಿ ಮಾತನಾಡಿದ ಎನ್.ಯು.ನಾಚಪ್ಪ ಅವರು 240 ವರ್ಷಗಳ ಹಿಂದೆ ಕೊಡವರ ಹತ್ಯಾಕಾಂಡ ಸಂಭವಿಸಿತು. ಒಂದು ಕಾಲದಲ್ಲಿ ಕೆಳದಿ/ಪಾಲೇರಿ ರಾಜ ಪರಿವಾರದ ಮಿತ್ರರಾಗಿದ್ದ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್ ಪಾಲೇರಿ ರಾಜನ ವಿಶ್ವಾಸಘಾತುಕತನದಿಂದ ವಿರೋಧಿಗಳಾದರು. ಆರಂಭದಲ್ಲಿ, ಕೊಡವ ಜನಾಂಗವನ್ನು ಅವರ ಮೈತ್ರಿಯ ಸಮಯದಲ್ಲಿ ನಿಷ್ಠಾವಂತ ಆಪತ್ಪಾಂಧವ ಸೈನಿಕರಾಗಿ ಬಳಸಲಾಗುತ್ತಿತ್ತು. ಆದಾಗ್ಯೂ, ಅವರ ಸಂಬಂಧವು ಹದಗೆಟ್ಟ ನಂತರ, ಬ್ರಿಟಿಷರು, ಟಿಪ್ಪು ಸುಲ್ತಾನ್ ಮತ್ತು ಫ್ರೆಂಚರಿಂದ ಕೆಳದಿ ಸಿಂಹಾಸನವನ್ನು ರಕ್ಷಿಸಲು ಕೊಡವರನ್ನು ಕೂಲಿ ಸೈನಿಕರಾಗಿ ಬಳಸಿಕೊಳ್ಳಲಾಯಿತು. ಕೊಡವ ಬುಡಕಟ್ಟು ಯೋಧರು ಟಿಪ್ಪು ಮತ್ತು…

Read More

ಮಡಿಕೇರಿ ಡಿ.12 NEWS DESK : ಶ್ರೀ ರಾಮಾಂಜನೇಯ ಭಜನಾ ಮಂಡಳಿ ವತಿಯಿಂದ 35 ನೇ ವಾಷಿ೯ಕೋತ್ಸವದ ಪ್ರಯುಕ್ತ ಡಿ.14 ರಂದು ಅಖಂಡ ಏಕಾಹ ಭಜನಾ ಕಾಯ೯ಕ್ರಮ ಆಯೋಜಿಸಲಾಗಿದೆ. ನಗರದ ಶ್ರೀ ಆಂಜನೇಯ ದೇವಾಲಯದಲ್ಲಿ ಡಿ.14 ರಂದು ಸೂಯೋ೯ದಯದಿಂದ ಸೂಯಾ೯ಸ್ತಮಾನದವರೆಗೆ 15 ತಂಡಗಳಿಂದ ನಿರಂತರ ಭಜನೆ ನಡೆಯಲಿದೆ. ಸಂಜೆ 3 ತಂಡಗಳಿಂದ ಕುಣಿತ ಭಜನೆ ನಡೆಯಲಿದೆ. ಅಂದು ಬೆಳಗ್ಗೆ 6.10 ಗಂಟೆಗೆ ನಗರಸಭೆಯ ಅಧ್ಯಕ್ಷೆ ಕಲಾವತಿಯವರು ಭದ್ರದೀಪ ಜ್ವಲನ ಮಾಡಲಿದ್ದು, ಸಂಜೆ 7 ಗಂಟೆಗೆ ಮಂಗಳಾಚರಣೆ, ಮಹಾಮಂಗಳಾರತಿ ಹಾಗೂ ಸಮಾರೋಪ ನಡೆಯಲಿದ್ದು ವಿಜಯವಿನಾಯಕ ದೇವಾಲಯದ ಟ್ರಸ್ಟಿ ಜಿ.ಚಿದ್ವಿಲಾಸ್ ಹಿತವಚನ ನೀಡಲಿದ್ದಾರೆ. ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಸಿ.ದೇವಯ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಶ್ರೀ ರಾಮಾಂಜನೇಯ ಮಹಿಳಾ ಭಜನಾ ಮಂಡಳಿ, ಶ್ರೀ ಸತ್ಯಸಾಯಿ ಭಜನಾ ಸಮಿತಿ ಮಡಿಕೇರಿ, ಭಕ್ತಿಲಹರಿ ತಂಡ ಮಡಿಕೇರಿ, ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ಮಂಗಳಾದೇವಿ ನಗರ, ಮದೆಮಹೇಶ್ವರ ಭಜನಾ ಮಂಡಳಿ, ಮದೆ, ಶ್ರೀ ಸನಾತನ ಭಜನಾ ಮಂಡಳಿ…

Read More

ಮಡಿಕೇರಿ ಡಿ.12 NEWS DESK : ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಅವಹೇಳನ ಮಾಡಿ ವಿಡಿಯೋವನ್ನು ವೈರಲ್ ಮಾಡಿದ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೊಡಗು ಜಿಲ್ಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ಪ್ರಧಾನ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಅವರು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪಕ್ಷಾತೀತ, ನಿಷ್ಪಕ್ಷಪಾತ ಮತ್ತು ಸೌಹಾರ್ದತೆಯ ಆದರ್ಶದೊಂದಿಗೆ ಸಂವಿಧಾನಬದ್ಧವಾಗಿ ದೇಶವನ್ನು ಮುನ್ನಡೆಸುತ್ತಿರುವ ಪ್ರಧಾನಿ ಮೋದಿ ಅವರನ್ನು ಅಪಮಾನಿಸಿರುವ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ. ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ನೇತೃತ್ವದ ಸರಕಾರ ಬಂದ ನಂತರ ದೇಶದ ಅಲ್ಪಸಂಖ್ಯಾತರು ಶೈಕ್ಷಣಿಕ, ಸಾಮಾಜಿಕ, ವ್ಯವಹಾರಿಕ ಮತ್ತು ಆರ್ಥಿಕವಾಗಿ ಸಬಲರಾಗಿದ್ದಾರೆ. ಯಾವುದೇ ತಾರತಮ್ಯವಿಲ್ಲದೆ ಪ್ರತಿ ಕ್ಷೇತ್ರದಲ್ಲೂ ಅಲ್ಪಸಂಖ್ಯಾತರಿಗೆ ನ್ಯಾಯ ಒದಗಿಸುವ ಯೋಜನೆಗಳನ್ನು ಜಾರಿಗೆ ತಂದು ಯಶಸ್ವಿಯಾಗಿದ್ದಾರೆ. ಇದರ ಲಾಭವನ್ನು ಪಡೆದ ಅಲ್ಪಸಂಖ್ಯಾತರು ಮೋದಿ ಅವರ ಸರಕಾರದ ಬಗ್ಗೆ ಒಳ್ಳೆಯ ಅಭಿಪ್ರಾಯವನ್ನೇ ಹೊಂದಿದ್ದಾರೆ. ಆದರೆ ಕೆಲವು ದೇಶದ್ರೋಹಿ ಕಿಡಿಗೇಡಿಗಳು…

Read More

ಮಡಿಕೇರಿ ಡಿ.12 NEWS DESK : ‘ಶಿಸ್ತು’ನ್ನು ಕ್ರೀಡಾ ಮೈದಾನದ ಒಳ ಮತ್ತು ಹೊರಗೂ ವಿದ್ಯಾರ್ಥಿಗಳು ಪಾಲಿಸಬೇಕೆಂದು ಕೊಡಗು ಸೈನಿಕ ಶಾಲೆಯ ನಿವೃತ್ತ ಪ್ರಾಂಶುಪಾಲರಾದ ನಿವೃತ್ತ ಕಮೋಡೋರ್ ಎಂ.ಟಿ.ರಮೇಶ್ ಕರೆ ನೀಡಿದರು. ಕೊಡಗು ಸೈನಿಕ ಶಾಲೆಯ 2025-26ನೇ ವಾರ್ಷಿಕ ಕ್ರೀಡಾಕೂಟವನ್ನು ಶಾಲೆಯ ಮರಿಯಪ್ಪ ಕೆಂಪಯ್ಯ ಫುಟ್ಬಾಲ್ ಕ್ರೀಡಾಂಗಣದಲ್ಲಿ ಉದ್ಘಾಟಿಸಿ, ಕ್ರೀಡಾಕೂಟದ ಸಂಕೇತವಾಗಿ ಪಾರಿವಾಳಗಳನ್ನು ಹಾರಿಬಿಟ್ಟು ಅವರು ಮಾತನಾಡಿದರು. ವಿದ್ಯಾರ್ಥಿಗಳು ಶಾಲೆಯ ಧ್ಯೇಯ ವಾಕ್ಯವಾದ ವೀರತೆ, ದೃಢತೆ ಹಾಗೂ ಪ್ರಾಮಾಣಿಕತೆಯನ್ನು ಸದಾ ಪಾಲಿಸಬೇಕೆಂದು ತಿಳಿಸಿ, ನ್ಯಾಯಯುತ ಆಟ, ಶಿಸ್ತು ಮತ್ತು ಪರಿಶ್ರಮದ ಗುಣಗಳು ಭವಿಷ್ಯದಲ್ಲಿ ಉತ್ತಮ ನಾಯಕರನ್ನು ರೂಪಿಸುವಲ್ಲಿ ನೆರವಾಗುತ್ತವೆಂದರು. ಶಾಲೆಯು ಶೈಕ್ಷಣಿಕ ಸಾಧನೆ ಹಾಗೂ ಮೂಲಭೂತ ಸೌಕರ್ಯಗಳ ಬೆಳವಣಿಗೆಯಲ್ಲಿ ಕಂಡುಬಂದ ಗಣನೀಯ ಪ್ರಗತಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ಅವರು, ವಿದ್ಯಾರ್ಥಿಗಳು ಮತ್ತಷ್ಟು ಸಾಧನೆಯ ಶಿಖರವನ್ನೇರಲು ನಿರಂತರ ಪ್ರಯತ್ನಿಸಬೇಕೆಂದು ತಿಳಿಸಿದರು. ಆರಂಭದಲ್ಲಿ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನವನ್ನು ನಡೆಸಿಕೊಟ್ಟರು. ಕ್ರೀಡಾ ಉಪ ನಾಯಕನಾದ ಕೆಡೆಟ್ ಸೋಹಮ್, ನಿಷ್ಪಕ್ಷಪಾತವಾಗಿ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವಿಕೆಯೊಂದಿಗೆ, ಶಾಲಾ ಧ್ಯೇಯ ವಾಕ್ಯವಾದ ವೀರತೆ,…

Read More

ಮಡಿಕೇರಿ ಡಿ.12 NEWS DESK : ಗ್ರಾಮೀಣ ಅಭಿವೃದ್ಧಿಯಲ್ಲಿ ಸಹಕಾರ ಸಂಘಗಳ ಪಾತ್ರ ಹೆಚ್ಚಿನದ್ದಾಗಿದ್ದು, ಆ ನಿಟ್ಟಿನಲ್ಲಿ ಸಹಕಾರ ಸಂಘಗಳ ಬಲವರ್ಧನೆಗೆ ಮತ್ತಷ್ಟು ಪ್ರಯತ್ನಗಳು ನಡೆಯಬೇಕು ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಅಧ್ಯಕ್ಷರಾದ ಕೊಡಂದೇರ ಬಾಂಡ್ ಗಣಪತಿ ಅವರು ತಿಳಿಸಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ನೂತನವಾಗಿ ಆಯ್ಕೆಯಾಗಿರುವ ನಿರ್ದೇಶಕರಿಗೆ ನಗರದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ‘ಉನ್ನತಿ’ ಭವನದ ಸಭಾಂಗಣದಲ್ಲಿ ‘ಸಹಕಾರ ಸಂಘಗಳ ಆಡಳಿತ ಪರಿಣಾಮಕಾರಿ ನಿರ್ವಹಣೆ’ ಸಂಬಂಧ ಒಂದು ವಾರಗಳ ಕಾಲ ನಡೆದ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಗುಣಾತ್ಮಕ ಆಡಳಿತ ನಿರ್ವಹಣೆ ಅಗತ್ಯ. ಆ ನಿಟ್ಟಿನಲ್ಲಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು. ಸಹಕಾರ ವ್ಯವಸ್ಥೆಯಲ್ಲಿ ಕಲಿಕೆಯು ನಿರಂತರವಾಗಿದ್ದು, ಸಾಲದ ಪ್ರಕ್ರಿಯೆ ಮತ್ತು ಮಾರ್ಗಸೂಚಿಗಳು ಕಾಲ ಕಾಲಕ್ಕೆ ಬದಲಾಗುತ್ತಾ ಹೋಗುತ್ತವೆ. ಆದ್ದರಿಂದ ಸಹಕಾರ ಕಾಯ್ದೆ ಮತ್ತು ತಿದ್ದುಪಡಿ ಬಗ್ಗೆ ಮನನ ಮಾಡಿಕೊಳ್ಳಬೇಕು ಎಂದು ಬಾಂಡ್…

Read More

ಸೋಮವಾರಪೇಟೆ ಡಿ.12 NEWS DESK : ಮಕ್ಕಳಿಗೆ ವಿಜ್ಞಾನದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ಕಲಿಕೆ ಬಹಳ ಮುಖ್ಯವಾಗಿದ್ದು, ಶಿಕ್ಷಕರು ವಿಜ್ಞಾನದ ಬಗ್ಗೆ ಮಕ್ಕಳಿಗೆ ಹೆಚ್ಚಿನ ತಿಳುವಳಿಕೆ ನೀಡುವ ಮೂಲಕ ಅವರಲ್ಲಿ ವೈಜ್ಞಾನಿಕ‌ ಮನೋಭಾವ ಹಾಗೂ ಸಂಶೋಧನಾ ಪ್ರವೃತ್ತಿ ಬೆಳೆಸಲು ವಿಶೇಷ ಗಮನ ಹರಿಸಬೇಕು. ಇದಕ್ಕಾಗಿ ಶಾಲೆಗಳಲ್ಲಿ ಶಿಕ್ಷಕರು ತಮ್ಮ ಬೋಧನೆಯಲ್ಲಿ ಪ್ರಾಯೋಗಿಕ ಸಲಕರಣೆ ಬಳಸುವ ಮೂಲಕ ಅವರಲ್ಲಿ ವಿಜ್ಞಾನ ಕಲಿಕೆಯಲ್ಲಿ ಹೆಚ್ಚಿನ‌ಆಸಕ್ತಿ ಬೆಳೆಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಸಲಹೆ ನೀಡಿದರು. ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2025-26 ನೇ ಸಾಲಿನ ರಾಷ್ಟ್ರೀಯ‌ ಆವಿಷ್ಕಾರ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ತಾಲ್ಲೂಕಿನ ಐಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ಸಂಘದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ವಿಜ್ಞಾನಿಗಳ ಆವಿಷ್ಕಾರದ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಂಡು ತಮ್ಮನ್ನು ಸಂಶೋಧನಾ ಪ್ರವೃತ್ತಿಯಲ್ಲಿ ತೊಡಗಿಸಿಕೊಳ್ಳಬೇಕು. ಶಾಲೆಗಳಲ್ಲಿ ವಿಜ್ಞಾನ ವಸ್ತು ಪ್ರದರ್ಶನಗಳು ವಿದ್ಯಾರ್ಥಿಗಳಲ್ಲಿ…

Read More

ಮಡಿಕೇರಿ ಡಿ.12 NEWS DESK : ಇತ್ತೀಚಿನ ವರ್ಷಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಬಂದೂಕಿನಿಂದ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬಂದೂಕಿಗೆ ಸಂಬಂಧಿಸಿದ ಕಾನೂನು ಬದಲಾಗಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಅವರು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಲಹ ನಡೆಯುವ ಸಂದರ್ಭ ಮಹಿಳೆಯರು, ವಯೋವೃದ್ಧರು ಹಾಗೂ ಮಕ್ಕಳ ಮೇಲೆ ಕೂಡ ಬಂದೂಕಿನಿಂದ ದಾಳಿಯಾಗುತ್ತಿದೆ. ಇದು ಆತಂಕಕಾರಿ ಬೆಳವಣಿಗೆಯಾಗಿದ್ದು, ಉತ್ತಮ ನಾಗರೀಕ ಸಮಾಜ ನಿರ್ಮಾಣಕ್ಕೆ ಅಡ್ಡಿಯಾಗಿದೆ. ಪ್ರಸ್ತುತ ಇರುವ ಬಂದೂಕು ಕಾನೂನು ಅಪರಾಧ ತಡೆಗಟ್ಟಲು ವಿಫಲವಾಗಿದ್ದು, ಜನಸಾಮಾನ್ಯರ ರಕ್ಷಣೆ ಅಸಾಧ್ಯವಾಗಿದೆ. ಕೊಡಗಿನ ಸಂಸ್ಕೃತಿಗೆ ವಿರುದ್ಧವಾದ ಪ್ರಕ್ರಿಯೆ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಜಿಲ್ಲೆಯ ಜನಪ್ರತಿನಿಧಿಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಬೇಕು. ನಾಗರೀಕರ ರಕ್ಷಣೆಗಾಗಿ ಬಂದೂಕು ಕಾನೂನು ಬದಲಾವಣೆಗೆ ಒತ್ತಡ ಹೇರಬೇಕು ಎಂದು ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ.

Read More

ನಾಪೋಕ್ಲು ಡಿ.12 NEWS DESK : ಬಲ್ಲಮಾವಟಿ ಶ್ರೀ ಭಗವತಿ ದೇವಾಲಯದ ಗರ್ಭಗುಡಿ ಹಾಗೂ ಮುಖ ಮಂಟಪ ಪುನರ್ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಶಡಾಧಾರ ಪೂಜೆ ಶಡಾಧಾರ ಪೂಜಾ ವಿಧಿ ವಿಧಾನಗಳು ಶ್ರದ್ಧಾ ಭಕ್ತಿಯಿಂದ ಜರುಗಿತು. ದೇವಾಲಯದ ಹೃದಯ ಭಾಗದ ಗರ್ಭಗುಡಿಯ ನಿರ್ಮಾಣಕ್ಕೆ ನೆಲ ಮಟ್ಟದಿಂದ 7.25 ಅಡಿ ಭೂಮಿಯ ಒಳಗಿನಿಂದ ಅಡಿಪಾಯ ಹಾಕಿದ್ದು, ಗರ್ಭಗುಡಿ ಹಾಗೂ ಮುಖ ಮಂಟಪ ಅಡಿಪಾಯಕ್ಕೆ ಉಪ್ಪು ಮಿಶ್ರಿತ ಮರಳು ತುಂಬಿಸುವ ಕಾರ್ಯವನ್ನು ಊರಿನವರು ನೆರವೇರಿಸಿದರು. ಪೂಜೆ ಅಂಗವಾಗಿ ಭಕ್ತರಿಗೆ ಅನ್ನ ಸಂತರ್ಪಣೆ ನೆರವೇರಿತು. ಈ ಸಂದರ್ಭ ದೇವಸ್ಥಾನದ ತಕ್ಕ ಮುಖ್ಯಸ್ಥರಾದ ಕೋಟೆರ ಸುಬ್ಬಯ್ಯ, ನೆರವಂಡ ಭೀಮಯ್ಯ, ಅಧ್ಯಕ್ಷರು ಕೋಟೆರ ಸುಬ್ಬಯ್ಯ, ಉಪಾಧ್ಯಕ್ಷರಾದ ಬೈರುಡ ಮಾಚಯ್ಯ, ಕಾರ್ಯಾಧ್ಯಕ್ಷರು ಮತ್ತು ಖಜಾಂಚಿ ಬೊಟ್ಟೋಳಂಡ ತಿಮ್ಮಯ್ಯ, ಚಂಗೇಟಿರ ಅಪ್ಪಯ್ಯ, ಕಾರ್ಯದರ್ಶಿ ಕೋಟೆರ ಧನುಷ್ ಬೋಪಣ್ಣ, ಮಾಜಿ ಕಾರ್ಯದರ್ಶಿ ಅಪ್ಪಚೆಟ್ಟೊಳಂಡ ರಾಜಭೀಮಯ್ಯ, ತಕ್ಕ ಮುಖ್ಯಸ್ಥರು, ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು. ತಂತ್ರಿ ದಿವಾಕರ್ ಭಟ್, ಮುಖ್ಯ ಅರ್ಚಕ…

Read More

ನಾಪೋಕ್ಲು ಡಿ.12 NEWS DESK  : ಮೂರ್ನಾಡು ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಏಡ್ಸ್ ನಿಯಂತ್ರಣ ಹಾಗೂ ಹದಿಹರೆಯದವರ ಸಮಸ್ಯೆಗಳ ಕುರಿತು ಅರಿವು ಕಾರ್ಯಕ್ರಮ ನಡೆಯಿತು. ಮಡಿಕೇರಿಯ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಸೂಪರ್ವೈಸರ್ ಸುನಿತಾ ಮುತ್ತಣ್ಣ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಏಡ್ಸ್ ಕಾಯಿಲೆ ಹರಡುವ ಮತ್ತು ತಡೆಗಟ್ಟುವ ವಿಧಾನ, ಚಿಕಿತ್ಸೆ, ಸುರಕ್ಷತೆ ಹಾಗೂ ಅನುಸರಿಸಬೇಕಾದ ಕ್ರಮಗಳ ಬಗ್ಗೆ, ಆರೋಗ್ಯಕರ ಜೀವನ ನಡೆಸುವ ಬಗ್ಗೆ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಲೈಡ್ ಶೋ ಮುಖಾಂತರ ಅರಿವು ಮೂಡಿಸಿದರು. ಏಡ್ಸ್‍ಅನ್ನು ಜಾಗೃತಿಯಿಂದ ಮತ್ತು ಜ್ಞಾನದಿಂದ ನಿಯಂತ್ರಿಸಬಹುದು. ಯುವ ಪೀಳಿಗೆ ಏಡ್ಸ್ ಮುಕ್ತ ಸಮಾಜ ನಿರ್ಮಿಸಲು ಪ್ರಮುಖ ಪಾತ್ರವನ್ನು ವಹಿಸಬೇಕು ಎಂದು ಹೇಳಿದರು. ಹದಿಹರೆಯದಲ್ಲಿ ವಿದ್ಯಾರ್ಥಿಗಳಿಗೆ ಹಲವಾರು ಸಮಸ್ಯೆಗಳು ಬರುತ್ತಿದ್ದು ಯಾವುದೇ ಸಮಸ್ಯೆಗಳಿಗೆ ವಿದ್ಯಾರ್ಥಿಗಳು ಕುಗ್ಗದೆ ತಮ್ಮ ಆರೋಗ್ಯದ ಬಗ್ಗೆ ತಿಳಿದುಕೊಂಡರೆ ಅವರು ಸುರಕ್ಷಿತ ಮತ್ತು ಬಲಿಷ್ಠರಾಗುತ್ತಾರೆ ಎಂದು ಹೇಳಿದರು. ವಿದ್ಯಾರ್ಥಿಗಳಿಗೆ ಲೈಂಗಿಕ ಶಿಕ್ಷಣದ ಬಗ್ಗೆ ಮಾಹಿತಿಯನ್ನು ನೀಡಿ ಆರೋಗ್ಯಕರ ಸಂಬಂಧಗಳ ಬಗ್ಗೆ ಅರಿವು…

Read More