ಮಡಿಕೇರಿ NEWS DESK ಫೆ.8 : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರ ಕಾರು ಅಗ್ನಿಗಾಹುತಿಯಾದ ಘಟನೆ ಕುಶಾಲನಗರ ತಾಲ್ಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಅಬ್ದುಲ್ ಮಜೀದ್ ಹಾಗೂ ಕಾರು ಚಾಲಕ ಕಾರಿನಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಶಾಲನಗರ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಯಿತು. ಕಾರು ಸಂಪೂರ್ಣ ಹಾನಿಗೀಡಾಗಿದ್ದು, ಅಗ್ನಿ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ.
ಲೇಖಕ: admin
ಮಡಿಕೇರಿ NEWS DESK ಫೆ.8 : ರಾಜ್ಯ ಸರಕಾರದ ಅಭಿವೃದ್ಧಿ ಕಾರ್ಯಗಳ ಕುರಿತು ಜನರಲ್ಲಿ ಅರಿವು ಮೂಡಿಸಬೇಕು ಮತ್ತು ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಕರೆ ನೀಡಿದ್ದಾರೆ. ಶಾದಿ ಮಹಲ್ ಸಮುದಾಯ ಭವನದಲ್ಲಿ ನಡೆದ ಚೆಟ್ಟಿಮಾನಿ ಕುಂದಚೇರಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ. ಗ್ರಾ.ಪಂ ಚುನಾವಣೆ ಸಮೀಪಿಸುತ್ತಿದ್ದು, ಸರ್ವರು ಒಗ್ಗೂಡಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಬೇಕೆಂದು ತಿಳಿಸಿದರು. ಕೆಪಿಸಿಸಿ ಸದಸ್ಯ ಬೇಕಲ್ ರಮಾನಾಥ್ ಮಾತನಾಡಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಕುರಿತು ಕೇಂದ್ರ ಸರಕಾರ ತೆಗೆದುಕೊಂಡಿರುವ ಧೋರಣೆಯನ್ನು ಖಂಡಿಸಿದರು. ವಲಯ, ಬ್ಲಾಕ್ ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರದ ನಿಲುವನ್ನು ವಿರೋಧಿಸಲಾಗುವುದು, ಅಲ್ಲದೆ ಕಾರ್ಯಾಗಾರ ನಡೆಸಲಾಗುವುದು ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಚೆಟ್ಟಿಮಾನಿ ಕುಂದಚೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕೆ.ಎಂ ಅವರು ಪಕ್ಷ ಸಂಘಟನೆಗೆ ಎಲ್ಲರೂ…
ಮಡಿಕೇರಿ ಫೆ.8 : ಕೊಡವ ಭಾಷಿಕ ಮೂಲನಿವಾಸಿ ಕೆಂಬಟ್ಟಿ ಸಮುದಾಯದ ವತಿಯಿಂದ ಪ್ರಥಮ ಬಾರಿಗೆ ‘ಕೆಂಬಟ್ಟಿ ಜಾನಪದ ನಮ್ಮೆ’ಯನ್ನು ನಡೆಸಲಾಗುತ್ತಿದ್ದು, ಅಗತ್ಯ ಸಹಕಾರ ಕೋರಿ ಕೆಂಬಟ್ಟಿ ಸಮುದಾಯದ ನಿಯೋಗ ವಿರಾಜಪೇಟೆಯಲ್ಲಿ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿತು. ನಿಯೋಗದಲ್ಲಿ ಅಧ್ಯಕ್ಷ ಬಿಲ್ಲರೀಕುಟ್ಟಡ ಪ್ರಭು ಐಯ್ಯಪ್ಪ, ನಿರ್ದೇಶಕರುಗಳಾದ ಬಾಳೆಕುಟ್ಟಡ ಉದಯ್ ಮಾದಪ್ಪ, ಪೆಗ್ಗೋಲಿ ದಿನೇಶ್, ಚವರೆಕುಟ್ಟಡ ಜೀವನ್, ಕೋಪರೆ ಕುಟ್ಟಡ ಸಾಗರ್ ಪೊವಣ್ಣ, ಚಿಮ್ಮಿಕುಟ್ಟಡ ನಿತೇಶ್, ಪ್ರಮುಖರಾದ ಚೋಕುಟ್ಟಡ ಚಿಮ್ಮ ಅಯ್ಯಪ್ಪ, ಬಿದ್ದಣ ಕುಟ್ಟಡ ಕಿರಣ್ ಕಾವೇರಪ್ಪ, ಮೊಟ್ಟ ಕುಟ್ಟಡ ಭೋಜಮ್ಮ, ಜೋ ಕುಟ್ಟಡ ವ್ಯೆಶಾಲಿ ಪ್ರಕಾಶ್, ಬಿದ್ದಣಡ ಕುಟ್ಟ ರೋಹಿಣಿ ಪುಪ್ಪ, ಚಿಮ್ಮಿಡ ಕುಟ್ಟ ಗಿರೀಶ್ ಬೆಳ್ಳಿಪ್ಪ, ಚೋಕುಟ್ಟಡ ಸಂತೋಸ್, ಉತ್ತು ಕುಟ್ಟಡ ಮನು ಬಿದ್ದಪ್ಪ, ಬಿಲ್ಲಿರಿ ಕುಟ್ಟಡ ಮಂಜೇಶ್, ಚವರೆ ಕುಟ್ಟಡ ಸುಬ್ರಮಣಿ, ಚಿಮ್ಮಿಕುಟ್ಟಡ ವಿಲ್ಮ ಅಶೋಕ್, ಚವರೆಡ ಕುಟ್ಟ ಸುಬ್ಬಕ್ಕಿ ಮುತಪ್ಪ ಮತ್ತಿತರರು ಹಾಜರಿದ್ದರು.
ಮಡಿಕೇರಿ NEWS DESK ಫೆ.8 : ಕೊಡಗಿನ ಮೂಲನಿವಾಸಿ 21 ಕೊಡವ ಭಾಷಿಕ ಸಮುದಾಯಗಳ ವತಿಯಿಂದ ಏಪ್ರಿಲ್ ತಿಂಗಳಿನಲ್ಲಿ ಇದೇ ಪ್ರಥಮ ಬಾರಿಗೆ ನಡೆಸುತ್ತಿರುವ ‘ದೇಶೀಯ ಕ್ರೀಡೋತ್ಸವ’ಕ್ಕೆ ಅನುದಾನ ಕೋರಿ ಕೊಡವ ಭಾಷಿಕ ಕೂಟವು ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಅರುಣ್ ಮಾಚಯ್ಯ ಅವರಿಗೆ ಮನವಿ ಸಲ್ಲಿಸಿತು. ಕೊಡವ ಭಾಷಿಕ ಕೂಟದ ಅಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ ಅವರ ನೇತೃತ್ವದಲ್ಲಿ ವಿರಾಜಪೇಟೆಯಲ್ಲಿ ಅರುಣ್ ಮಾಚಯ್ಯ ಅವರನ್ನು ಭೇಟಿಯಾದ ನಿರ್ದೇಶಕರುಗಳು ಹಾಗೂ ಸಮುದಾಯಗಳ ಮುಖಂಡರುಗಳು ಕ್ರೀಡೋತ್ಸವದ ಯಶಸ್ಸಿಗೆ ಅಗತ್ಯ ಸಹಕಾರ ನೀಡುವಂತೆ ಕೋರಿದರು.
ಮಡಿಕೇರಿ NEWS DESK ಫೆ.8 : ಕಾಲೂರು ಗ್ರಾಮದ( ಮುತ್ತ್ ನಾಡ್) ಮಾಜಿ ಸೈನಿಕರ ನಿಯೋಗ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ರವರನ್ನು ಭೇಟಿ ಮಾಡಿ ತಮ್ಮ ಅಹವಾಲನ್ನು ಸಲ್ಲಿಸಿದರು. ಬೇಡಿಕೆ ಸಮಂಜಸವಾಗಿದ್ದು ಈಡೇರಿಸುವುದಾಗಿ ಮಂತರ್ ಗೌಡ ರವರು ಭರವಸೆ ನೀಡಿದರು. ಈ ಸಂಧರ್ಭದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ, ಓಂಕಾರೇಶ್ವರ ದೇವಾಲಯ ಸಮಿತಿಯ ಅಧ್ಯಕ್ಷರಾದ ಚುಮ್ಮಿ ದೇವಯ್ಯ ನವರು ಶಾಸಕರೊಂದಿಗೆ ಉಪಸ್ಥಿತರಿದ್ದರು.
ಮಡಿಕೇರಿ NEWS DESK ಫೆ.7 : ಕೊಡವ ಭಾಷಿಕ ಸಮುದಾಯಗಳ ಕೂಟದ ವತಿಯಿಂದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಅರುಣ್ ಮಾಚಯ್ಯ ಹಾಗೂ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ವಿರಾಜಪೇಟೆಯಲ್ಲಿ ಇಂದು ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ನಡೆದ ‘ಕೊಡವ ಪುಸ್ತಕ ಪತ್ತಾಯ’ ಉದ್ಘಾಟನಾ ಕಾರ್ಯಕ್ರಮದಲ್ಲಿ ಮೂವರನ್ನು ಸನ್ಮಾನಿಸುವ ಸಂದರ್ಭ ಕೊಡವ ಭಾಷಿಕ ಸಮುದಾಯಗಳ ಕೂಟದ ಅಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ, ಉಪಾಧ್ಯಕ್ಷ ಪೊನ್ನಿರ ಗಗನ್ ಉತಯ್ಯ, ಪೊಟ್ಡಂಡ ಗಣೇಶ್, ಕೊಡವ ಸವಿತಾ ಸಮಾಜದ ಮುಖಂಡರುಗಳಾದ ತಪನೇರ ಸಾಬು, ಮಹೇಶ್, ಪೂಣಚ್ಚಿರ ಮನೋಜ್, ತಪಾನೇರ ಮಹೇಶ್, ವೇದಪಂಡ ಬಿದ್ದಪ್ಪ, ಹಲ್ ಚಿರ ದೇವಯ್ಯ ಹಾಗೂ ನಿರ್ದೇಶಕರುಗಳು ಕಕ್ಕಬೆ ಚೋವಂಡ ಜೀಜ, ತೊರೆರ ಪೊನ್ನಕ್ಕಿ, ಕೊಡವ ಕೆಂಬಟ್ಟಿ ಸಮುದಾಯದ ಅಧ್ಯಕ್ಷರಾದ ಬಿಲ್ಲರೀಕುಟ್ಟಡ ಪ್ರಭು ಐಯ್ಯಪ್ಪ, ಬಾಳೆಕುಟ್ಟಡ ಉದಯ್ ಮಾದಪ್ಪ, ಪೆಗ್ಗೋಲಿ ದಿನೇಶ್, ಚಾವರೆ…
ಮಡಿಕೇರಿ NEWS DESK ಫೆ.7 : ಒಂದು ಭಾಷೆ ಉಳಿದರೆ ಮಾತ್ರ ಆಯಾ ಜನಾಂಗ ಹಾಗೂ ಸಂಸ್ಕೃತಿ ಉಳಿಯಲು ಸಾಧ್ಯ. ಕೊಡವ ಸಾಹಿತ್ಯ-ಸಂಸ್ಕೃತಿಯನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವಂತ್ತಾಗಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ವೀರಾಜಪೇಟೆಯಲ್ಲಿರುವ ಶಾಸಕರ ಗೃಹಕಚೇರಿಯಲ್ಲಿ ಇದೇ ಮೊದಲಿಗೆ ಸ್ಥಾಪಿಸಿದ ‘ಕೊಡವ ಪುಸ್ತಕ ಪತ್ತಾಯ’ವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ಅಕಾಡೆಮಿಯ ಇಂತಹ ಯೋಜನೆ ಮುಂದಿನ ಪೀಳಿಗೆಗೆ ಸಹಕಾರಿಯಾಗಲಿದೆ ಎಂದರು. ಕೊಡವ ಸಾಹಿತ್ಯ ಹಾಗೂ ಸಂಸ್ಕೃತಿಯ ಮೇಲೆ ಎಲ್ಲೆಡೆ ಆಸಕ್ತಿ-ಅಭಿಮಾನ ಹುಟ್ಟಿಸುವ ಉದ್ದೇಶದಿಂದ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯು ನೂತನವಾಗಿ ಆರಂಭಿಸಿರುವ ‘ಕೊಡವ ಪುಸ್ತಕ ಪತ್ತಾಯ’ ಯೋಜನೆಯು ಶ್ಲಾಘನಿಯ ಎಂದು ಶಾಸಕರು ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಮೆಚ್ಚುಗೆಯ ನುಡಿಗಳನ್ನಾಡಿದರು. ಹಿಂದಿನ ಕಾಲದಲ್ಲಿ ನಮ್ಮ ಹಿರಿಯರಿಗೆ ಯಾವುದೇ ಅನುಕೂಲತೆಗಳು ಇರಲಿಲ್ಲ. ಇಂತಿದ್ದರೂ ಕೊಡವ ಭಾಷೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿಕೊಂಡು…
ಮಡಿಕೇರಿ NEWS DESK ಫೆ.7 : ಮಾದಕ ವಸ್ತುಗಳು ಕೇವಲ ವ್ಯಕ್ತಿಯನ್ನು ಮಾತ್ರ ಅಲ್ಲ, ಇಡೀ ಸಮಾಜವನ್ನೇ ಹಾಳು ಮಾಡುತ್ತದೆ. ಆದ್ದರಿಂದ ಯುವ ಸಮೂಹ ದುಶ್ಚಟಗಳ ವಿರುದ್ಧ ಜಾಗೃತರಾಗಬೇಕೆಂದು ಮಡಿಕೇರಿ ಶಾಸಕ ಡಾ.ಮಂತರ್ಗೌಡ ಅವರು ಕರೆ ನೀಡಿದ್ದಾರೆ. ಕೊಡಗು ಜಿಲ್ಲಾಡಳಿತ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ, ಕೊಡಗು ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ, ದಿಶಾ ಭೋದ್ ಫೌಂಡೇಶನ್ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿದ್ಯವಿದ್ಯಾಲಯ ಸೇರಿದಂತೆ ಕಾಲೇಜುಗಳ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ನಡೆದ ನಶಾ ಮುಕ್ತ ಭಾರತ ಜಾಗೃತಿ ಜಾಥಾಕ್ಕೆ ಶಾಸಕ ಡಾ.ಮಂತರ್ಗೌಡ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಸಿ.ಭಗವಾನ್ ಅವರು ಹಸಿರು ನಿಶಾನೆ ತೋರಿದರು. ನಂತರ ಮಾತನಾಡಿದ ಶಾಸಕರು ಆಸ್ಪತ್ರೆಗಳಲ್ಲಿ ಉತ್ತಮವಾದ ಮಾನಸಿಕ ಅರೋಗ್ಯ ವಿಭಾಗ ಇದೆ. ಚಟದಿಂದ ಮುಕ್ತರಾಗಲು…
ಮಡಿಕೇರಿ NEWS DESK ಫೆ.7 : ಸರಕಾರ ಜಾರಿಗೊಳಿಸಿರುವ ಶಕ್ತಿ ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ 670 ಕೋಟಿ ಗೂ ಹೆಚ್ಚು ಮಹಿಳೆಯರು ಬಸ್ ಸಂಚಾರ ಮಾಡಿದ್ದು, ಇದು ದಾಖಲೆಯಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಶನಿವಾರಸಂತೆಯಲ್ಲಿ 105 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು. ಸರ್ಕಾರ 10 ಸಾವಿರ ಚಾಲಕರು ಮತ್ತು ನಿರ್ವಾಹಕರನ್ನು ನೇಮಕಾತಿ ಮಾಡಿದ್ದು, ಇದರಲ್ಲಿ 9 ಸಾವಿರ ಮಂದಿ ನಿರ್ವಾಹಕರು ಮತ್ತು ಚಾಲಕರನ್ನು ನೇರ ನೇಮಕಾತಿ ಮಾಡಲಾಗಿದೆ. ಒಂದು ಸಾವಿರ ಚಾಲಕರು ಮತ್ತು ನಿರ್ವಾಹಕರನ್ನು ‘ಅನುಕಂಪದ ಆಧಾರದ ಮೇಲೆ’ ಅರ್ಹರನ್ನು ನೇಮಿಸಲಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಈ ಹಿಂದೆ 5,800 ಬಸ್ಗಳು ಹಾಗೂ ಪ್ರಸಕ್ತ ವರ್ಷ 2 ಸಾವಿರ ಬಸ್ಸುಗಳು ಒಟ್ಟು 7,800 ಕೆಎಸ್ಆರ್ಟಿಸಿ ಬಸ್ಗಳು ಸಂಚರಿಸುತ್ತವೆ. ಪ್ರತೀ ವರ್ಷ ಕಾಲಾನು ಕಾಲಕ್ಕೆ ಹೊಸ ಬಸ್ಗಳನ್ನು ಖರೀದಿಸಿ,…
ಮಡಿಕೇರಿ NEWS DESK ಫೆ.7 : ಗ್ರಾ.ಪಂ ಪ್ರತಿನಿಧಿಗಳು ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಬೇಕು ಮತ್ತು ರಾಜಕೀಯ ರಹಿತವಾಗಿ ಸಾರ್ವಜನಿಕರಿಗೆ ಸೌಲಭ್ಯಗಳನ್ನು ಒದಗಿಸಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಕರೆ ನೀಡಿದ್ದಾರೆ. ಕುಂದಚೇರಿ ಗ್ರಾ.ಪಂ ಚೆಟ್ಟಿಮಾನಿ ವತಿಯಿಂದ ನೂತನವಾಗಿ ನಿರ್ಮಾಣಗೊಂಡಿರುವ ಡಿಜಿಟಲ್ ಗ್ರಂಥಾಲಯ, ಅರಿವು ಕೇಂದ್ರ, ಅಂಚೆ ಕಚೇರಿ ಮತ್ತು ಸಂಜೀವಿನಿ ಒಕ್ಕೂಟದ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು ಗ್ರಾ.ಪಂ ಪ್ರತಿನಿಧಿಗಳು ಅತ್ಯಂತ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದರು. ಕ್ಷೇತ್ರದಾದ್ಯAತ ನೂತನ ಕಟ್ಟಡಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ, ಎಲ್ಲಾ ಗ್ರಾ.ಪಂ ವ್ಯಾಪ್ತಿಯಲ್ಲು ಸರಕಾರಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಒದಗಿಸಲಾಗುತ್ತಿದೆ. ಇದನ್ನು ಪಂಚಾಯಿತಿ ಪ್ರತಿನಿಧಿಗಳು ಸದುಪಯೋಗಪಡಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು. ತಾವು ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಗುರಿ ಹೊಂದಿದ್ದು, ಸರ್ವರೂ ಕೈಜೋಡಿಸಬೇಕೆಂದು ಎ.ಎಸ್.ಪೊನ್ನಣ್ಣ ಮನವಿ ಮಾಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕುಂದಚೇರಿ ಗ್ರಾ.ಪಂ ಯ ಹಿರಿಯ ಸದಸ್ಯ ಹ್ಯಾರಿಸ್ ಅವರು 1982 ರಲ್ಲಿ ಪಂಚಾಯ್ತಿಯ ಹಳೆಯ…






