ಲೇಖಕ: admin

ಮಡಿಕೇರಿ ಮೇ 24 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ನೀಡಲಾಗುವುದು. ಆಸಕ್ತರು ಮೇ 30 ರೊಳಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯಯೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ದೂ.ಸಂ.0821-2515944 ನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೊ.ಕೆ.ಎಲ್.ಎನ್.ಮೂರ್ತಿ ತಿಳಿಸಿದ್ದಾರೆ.

Read More

ಮಡಿಕೇರಿ ಮೇ 24 : ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕು ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೇವರಪುರ ಗ್ರಾ.ಪಂ ಗೆ ಸೇರುವ ದೇವರಪುರ ಗ್ರಾಮದಲ್ಲಿ ಶ್ರೀ ಅಯ್ಯಪ್ಪ ಮತ್ತು ಭದ್ರಕಾಳಿ ದೇವರ ಬೇಡು(ಕುಂಡೆ) ಹಬ್ಬವನ್ನು ಮೇ 25 ರಂದು ಆಚರಿಸುತ್ತಿದ್ದು, ಈ ಹಿನ್ನೆಲೆ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮೇ 24 ರ ಮಧ್ಯರಾತ್ರಿ 12 ಗಂಟೆಯಿಂದ ಮೇ 25 ರ ಮಧ್ಯರಾತ್ರಿ 12 ಗಂಟೆಯವರೆಗೆ ಗೋಣಿಕೊಪ್ಪ ಮತ್ತು ಸುತ್ತಮುತ್ತಲಿನ 10 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್ ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಆದೇಶಿಸಿದ್ದಾರೆ.

Read More

ಮಡಿಕೇರಿ ಮೇ 24 : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಂಗ ಸಂಸ್ಥೆಯಾದ ಮಡಿಕೇರಿಯ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ (ಕೆಐಸಿಎಂ) ನಲ್ಲಿ “ಡಿಪ್ಲೊಮಾ ಇನ್‍ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್”(ಡಿಸಿಎಂ) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು. ತರಬೇತಿ ಅವಧಿ 6 ತಿಂಗಳು. ವಸತಿ ವ್ಯವಸ್ಥೆ ಉಚಿತ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮಾಹೆಯಾನ ರೂ.600 ಹಾಗೂ ಇತರೆ ಎಲ್ಲಾ ಅಭ್ಯರ್ಥಿಗಳಿಗೆ ರೂ.500 ರಂತೆ ಶಿಷ್ಯವೇತನ ನೀಡಲಾಗುವುದು. ಸಹಕಾರ ಸಂಘ, ಸಂಸ್ಥೆಗಳ ಅಧಿಕಾರಿ, ಸಿಬ್ಬಂದಿಗಳಿಗೆ ದೂರಶಿಕ್ಷಣ ಡಿಸಿಎಂ ತರಬೇತಿ ಆನ್‍ಲೈನ್ ಪ್ರವೇಶಾತಿಗೆ ತಿತಿತಿ.ಞsಛಿಜಿಜಛಿm.ಛಿo.iಟಿ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ.9663153922, 7259729104, 9611778399, 9845805186, 8762110952, ಮತ್ತು 8762925862, 8792628437, 9845318364 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್‍ನ ಪ್ರಾಂಶುಪಾಲರಾದ ಆರ್.ಎಸ್.ರೇಣುಕಾ ತಿಳಿಸಿದ್ದಾರೆ.

Read More

ಮಡಿಕೇರಿ ಮೇ 24 : ಚೆನೈನ ಕೇಂದ್ರೀಯ ಪಿಂಚಣಿ ಕಾರ್ಯಾಲಯದ ವತಿಯಿಂದ ನಗರದ ಮೈತ್ರಿ ಪೊಲೀಸ್ ಭವನದಲ್ಲಿ ಮೇ 30 ಮತ್ತು 31 ರಂದು ಬೆಳಗ್ಗೆ 9.30 ರಿಂದ ಸಂಜೆ 4.30 ಗಂಟೆ ವರೆಗೆ `ಸ್ಪರ್ಶ ಔಟ್‍ರೀಚ್’ ಸಮಾರಂಭ (ಸ್ಪರ್ಶ್‍ಗೆ ವರ್ಗಾಯಿಸಲ್ಪಟ್ಟ ಮಿಲಿಟರಿ ಪಿಂಚಣಿ ಪಡೆಯುವ ಮಾಜಿ ಸೈನಿಕರು/ ಕುಟುಂಬ ಪಿಂಚಣಿದಾರರ ಕುಂದುಕೊರತೆ ನಿವಾರಣಾ ಕಾರ್ಯಕ್ರಮ) ನಡೆಯಲಿದೆ. ಸ್ಪರ್ಶ್‍ಗೆ ಸೇರಿಸಲಾದ ಸಶಸ್ತ್ರ ಪಡೆಗಳ ನಿವೃತ್ತ ಪಿಂಚಣಿದಾರರು ಹಾಗೂ ಕುಟುಂಬ ಪಿಂಚಣಿದಾರರು ತಮ್ಮ ವಾರ್ಷಿಕ ಜೀವನ ಪ್ರಮಾಣ ನೀಡುವಲ್ಲಿ ಹಾಗೂ ಇತರೆ ಕುಂದುಕೊರತೆಗಳು ಏನಾದರೂ ಇದ್ದಲ್ಲಿ ಈ ಕಾರ್ಯಕ್ರಮಕ್ಕೆ ತಮ್ಮ ಪಿಂಚಣಿ ದಾಖಲೆಗಳು, ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಪುಸ್ತಕದೊಂದಿಗೆ ಹಾಜರಾಗಿ ತಮ್ಮ ಕುಂದುಕೊರತೆಗಳನ್ನು ನಿವಾರಿಸಿಕೊಳ್ಳುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಾಲಸುಬ್ರಮಣ್ಯಂ ಕೋರಿದ್ದಾರೆ.

Read More

ಮಡಿಕೇರಿ ಮೇ 24 : ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿಯಲ್ಲಿ ಕೊಡಗು ಜಿಲ್ಲೆಯಾದ್ಯಂತ ಆಹಾರ ಪರವಾನಗಿ (ಎಫ್‍ಎಸ್‍ಎಸ್‍ಎಐ ಲೈಸೆನ್ಸ್) ಪಡೆದಿರುವ ತಯಾರಕರು/ ರೀ-ಪ್ಯಾಕರ್/ ರೀ-ಲೇಬರ್ (ಮ್ಯಾನ್ಯುಪ್ಯಾಕ್ಚರರ್/ ರೀ ಪ್ಯಾಕರ್/ ರೀ-ಲೇಬರ್) ಪ್ರತಿ ವರ್ಷ ತಮ್ಮ ವಾರ್ಷಿಕ ವಹಿವಾಟಿನ(ಆನ್ಯುವಲ್ ರಿಟರ್ನ್) ವಿವರವನ್ನು ಆಯಾಯ ಆರ್ಥಿಕ ವರ್ಷದ ಮೇ 31 ರ ಕಾಲಮಿತಿಯೊಳಗೆ https:\\foscos.fssai.gov.in  ವೆಬ್‍ಸೈಟ್‍ನಲ್ಲಿ ತಪ್ಪದೇ ಸಲ್ಲಿಸುವುದು. ತಪ್ಪಿದ್ದಲ್ಲಿ ವಾರ್ಷಿಕವಾಗಿ ಕಾಯ್ದೆಯಡಿ ನಿಗಧಿಯಾಗುವ ದಂಡವನ್ನು ಕಡ್ಡಾಯವಾಗಿ ಪಾವತಿಸಿದ ನಂತರವೇ ಪರವಾನಗಿ ನವೀಕರಿಸಲು (ಲೈಸೆನ್ಸ್ ರಿನೀವಲ್) ಅರ್ಜಿ ಸಲ್ಲಿಸಲು ಅವಕಾಶವಿದೆ. ತಯಾರಕರು/ ರೀ-ಪ್ಯಾಕರ್/ ರೀ-ಲೇಬರ್‍ದಾರರು ತಮ್ಮ ಆಹಾರ ಪದಾರ್ಥಗಳ ವಿಶ್ಲೇಷಣಾ ವರದಿಯನ್ನು ಪ್ರತಿ 6 ತಿಂಗಳಿಗೊಮ್ಮೆ ಎನ್‍ಎಬಿಎಲ್ ಅಕ್ರಿಡಿಯೇಟೆಡ್/ ಎಫ್‍ಎಸ್‍ಎಸ್‍ಎಐ ನೋಂದಾಯಿತ ಪ್ರಯೋಗಾಲಯದಲ್ಲಿ ವಿಶ್ಲೇಷಿಸಿ ವರದಿಯನ್ನು ಅಧಿಕೃತ ಅಂತರ್ಜಾಲ ತಾಣದಲ್ಲಿ ತಮ್ಮ ತಮ್ಮ ಲಾಗಿನ್‍ನಲ್ಲಿ ನಮೂದಿಸುವುದು ಕಡ್ಡಾಯವಾಗಿದೆ. ಈ ರೀತಿಯಲ್ಲಿ ವಾರ್ಷಿಕ ವಹಿವಾಟಿನ (ಆನ್ಯುವಲ್ ರಿಟರ್ನ್) ವಿವರವನ್ನು ಹಾಗೂ ಪ್ರಯೋಗಾಲಯದಲ್ಲಿ ವಿಶ್ಲೇಷಿಸಿ ವರದಿಯನ್ನು ಸಲ್ಲಿಸಲು ವಿಫಲವಾದಲ್ಲಿ ಮುಂದಿನ ಆಗುಹೋಗುಗಳಿಗೆ ಸಂಬಂಧಿಸಿದ ತಯಾರಕರು/ ರೀ-ಪ್ಯಾಕರ್/…

Read More

ಮಡಿಕೇರಿ ಮೇ 24 :  ಭಾರತದ ಧೀಮಂತ ಸೇನಾಧಿಕಾರಿಯಾಗಿದ್ದ ಜನರಲ್ ತಿಮ್ಮಯ್ಯ ಅವರ ಸೇನಾಜೀವನ ಪ್ರತೀಯೋವ೯ ಯುವಕ, ಯುವತಿಯರಿಗೂ ಆದಶ೯ಪ್ರಾಯ. ನಮಗೆ ಎಲ್ಲವನ್ನೂ ನೀಡಿದ ಭಾರತಕ್ಕೆ ನಾವು ಮಹತ್ವದ್ದೇನನ್ನಾದರೂ ನೀಡಬೇಕೆಂಬ ನಿಲುವನ್ನು ತಿಮ್ಮಯ್ಯ ಅವರ ಜೀವನದ ಮಾಹಿತಿ ಪಡೆದ ಎಲ್ಲರೂ ಹೊಂದಬೇಕೆಂದು ತಮಿಳುನಾಡು ಬಿಜೆಪಿ ಅಧ್ಯಕ್ಷ, ಮಾಜಿ ಪೊಲೀಸ್ ಅಧಿಕಾರಿ ಕೆ.ಅಣ್ಣಮಲೈ ಹೇಳಿದ್ದಾರೆ. ಪತ್ನಿ ಅಖಿಲಾ ಸ್ವಾಮಿನಾಥನ್, ಪುತ್ರ ಅಜು೯ನ್, ಪುತ್ರಿ ಆರಾಧನ ಅವರೊಂದಿಗೆ ತಿಮ್ಮಯ್ಯ ಸ್ಮಾರಕ ಭವನಕ್ಕೆ ಭೇಟಿ ನೀಡಿದ ಅಣ್ಣಮಲೈ, ಕೂಲಂಕುಶವಾಗಿ ತಿ್ಮ್ಮಯ್ಯ ಅವರ ಜೀವನದ ಬಗ್ಗೆ ಮಾಹಿತಿಯನ್ನು ಫೀಲ್ಡ್ ಮಾಷ೯ಲ್ ಕೆಎಂ.ಕಾಯ೯ಪ್ಪ, ಜನರಲ್ ತಿಮ್ಮಯ್ಯ ಫೋರಂ ಸಂಚಾಲಕ ನಿವೃತ್ತ ಮೇಜರ್ ಬಿದ್ದಂಡ ನಂದ ಅವರಿಂದ ಪಡೆದುಕೊಂಡರು. ಈ ಸಂದಭ೯ ಪ್ರತಿಕ್ರಿಯಿಸಿದ ಅಣ್ಣಮಲೈ, ಭಾರತದ ಅಪ್ರತಿಮ ಸೇನಾನಿ ಜನರಲ್ ತಿಮ್ಮಯ್ಯ ಕೊಡಗಿನವರು ಎಂಬುದೇ ಕೊಡಗಿಗೆ ಪ್ರತಿಷ್ಟೆಯ ವಿಚಾರವಾಗಿದೆ. ಇಂಥ ಧೀರಸೇನಾನಿಯನ್ನು ಹೊಂದಿದ್ದ ಕೊಡಗಿನ ಪವಿತ್ರ ಭೂಮಿ ಧನ್ಯವಾಗಿದೆ. ತಿಮ್ಮಯ್ಯ ಸ್ಮರಣಾಥ೯ ಸ್ಮಾರಕ ಭವನ ಹೊಂದುವ ಮೂಲಕ ಅವರ ಜೀವನ…

Read More

ಮಡಿಕೇರಿ ಮೇ 24 : ಮಂಗಳೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಮಹಿಳೆಯರ ಫುಟ್‍ಬಾಲ್ ಪಂದ್ಯಾವಳಿಯು ಸಂತ ಅನ್ನಮ್ಮ ಪದವಿ ಕಾಲೇಜಿನ ಮೈದಾನದಲ್ಲಿ ನಡೆಯಿತು. ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಆಶ್ರಯದಲ್ಲಿ ನಡೆದ ಪಂದ್ಯಾವಳಿಯನ್ನು ಸಂತ ಅನ್ನಮ್ಮ ವಿದ್ಯಾ ಸಂಸ್ಥೆಯ ಮುಖ್ಯಸ್ಥ ರೆವರೆಂಡ್ ಫಾದರ್ ಐಸಾಕ್ ರತ್ಕಾಕರ್ ಉದ್ಘಾಟಿಸಿದರು. ಈ ಸಂದರ್ಭ ಸಂತ ಅನ್ನಮ್ಮ ಕಾಲೇಜಿನ ಪ್ರಾಂಶುಪಾಲರಾದ ತೃಪ್ತಿ ಬೋಪಣ್ಣ ಹಾಜರಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ ಪ್ರಕಾಶ್ ಡಿಸೋಜ ವೀಕ್ಷಕರಾಗಿ ಆಗಮಿಸಿದ್ದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಸಿ.ದಯಾನಂದ ಅಧ್ಯಕ್ಷತೆ ವಹಿಸಿದ್ದರು. ಪಂದ್ಯಾವಳಿಯಲ್ಲಿ ವಿವಿಧ ಕಾಲೇಜುಗಳ 8 ತಂಡಗಳು ಭಾಗವಹಿಸಿದ್ದು, ಸೇಕ್ರೇಡ್ ಹಾರ್ಟ್ ಪದವಿ ಕಾಲೇಜು, ಮಧ್ಯಾಂತರ ಪ್ರಥಮ ಬಹುಮಾನವನ್ನು ಪಡೆದರೆ, ಮೂಡಬಿದ್ರೆ ಆಳ್ವಾಸ್ ಪದವಿ ಕಾಲೇಜು ದ್ವಿತೀಯ ಸ್ಥಾನ ಮತ್ತು ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೃತೀಯ ಬಹುಮಾನ ಪಡೆದುಕೊಂಡಿತು. ಮಂಗಳೂರು ವಿಶ್ವವಿದ್ಯಾನಿಲಯದ ಫುಟ್‍ಬಾಲ್ ಪಂದ್ಯದ ಸಂಚಾಲಕರು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ…

Read More

ಬೆಂಗಳೂರು: ವಿಧಾನಸಭೆ ಸ್ಪೀಕರ್ ಆಗಿ ಮಾಜಿ‌ ಸಚಿವ ಯು.ಟಿ‌ ಖಾದರ್‌ ಅವಿರೋಧವಾಗಿ  ಆಯ್ಕೆಯಾದರು. ಸ್ಪೀಕರ್ ಆಗಿ ಆಯ್ಕೆಗೊಂಡ ಯು.ಟಿ ಖಾದರ್ ಅವರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂಬಸವರಾಜ ಬೊಮ್ಮಾಯಿ ಪೀಠಕ್ಕೆ ಕರೆದುಕೊಂಡು ಬಂದು ಶುಭ ಹಾರೈಸಿದರು. ನಂತರ  ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿಧಾನಸಭೆಯಲ್ಲಿ ಆರೋಗ್ಯಪೂರ್ಣ ಹಾಗೂ ರಾಜ್ಯದ ಹಿತದೃಷ್ಟಿಯಿಂದ ಕೂಡಿದ ಚರ್ಚೆಗಳಾಗುವ ಮೇಲ್ಪಂಕ್ತಿಯನ್ನು ಎತ್ತಿಹಿಡಿದುವ ಜವಾಬ್ದಾರಿ ಸಭಾಧ್ಯಕ್ಷರ ಮೇಲಿದೆ. ಸದನದ ಘನತೆ, ಗಾಂಭೀರ್ಯ, ಗೌರವವನ್ನು ಸ್ಪೀಕರ್ ಎತ್ತಿಹಿಡಿಯಬೇಕು. ಖಾದರ್ ಅವರ ಮುಂದಾಳ್ವತ್ವದಲ್ಲಿ ಸದನದ ಚರ್ಚೆ ಮೇಲ್ಮಟ್ಟಕ್ಕೇರಲಿ ಎಂದು  ಹಾರೈಸಿದರು.  ಖಾದರ್ ಅವರು ಸಭಾದ್ಯಕ್ಷರ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸುವ ನಂಬಿಕೆ ವಿಶ್ವಾಸವಿದೆ. ಅವರು ಬಹಳ ತಾಳ್ಮೆ ಇರುವ ವ್ಯಕ್ತಿ. ಅದು ಈ ಹುದ್ದೆಗೆ ಅಗತ್ಯವಾದ ಗುಣ. ಸದನದಲ್ಲಿ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಚರ್ಚೆಗಳಾಗಲಿ. ಹೊಸದಾಗಿ ಆರಿಸಿ ಬಂದ ಸದಸ್ಯರಿಗೆ ಅಭಿನಂದನೆಗಳು. ಸರ್ಕಾರವಾಗಿ ತಮಗೆ ನಾವು ಎಲ್ಲ ರೀತಿಯ ಸಹಕಾರವನ್ನು ನೀಡುತ್ತೇವೆ ಎಂದರು.

Read More

ವಿರಾಜಪೇಟೆ ಮೇ 24 : ಚೆಂಬೆಬೆಳ್ಳೂರು ಗ್ರಾ.ಪಂ ವ್ಯಾಪ್ತಿಯ ಮಗ್ಗುಲ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಪಾಲ್‍ತಿರಿಕೆ ಅಯ್ಯಪ್ಪ ದೇಗುಲದ ಪುನರ್ ಪತ್ರಿಷ್ಠಾಪನಾ ಕಾರ್ಯಕ್ರಮಗಳು ಮೇ 25 ರಿಂದ 27ರ ವರೆಗೆ ನಡೆಯಲಿದೆ. ಸುಮಾರು 365 ವರ್ಷಗಳ ಇತಿಹಾಸ ಹೊಂದಿರುವ, ಗೊಲ್ಲ ಸಮುದಾಯದಿಂದ ಪ್ರತಿಷ್ಠಾಪಿಸಲಾದ ಶ್ರೀ ಪಾಲ್ ತಿರಿಕೆ ಅಯ್ಯಪ್ಪ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮಗಳು ಬಹ್ಮಶ್ರೀ ವೇದಮೂರ್ತಿ ಶ್ರೀ ಗಿರೀಶ್ ತಂತ್ರಿಗಳ ನೇತೃತ್ವದಲ್ಲಿ ಮೂರು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ಜರುಗಲಿದೆ. ಮೇ 25 ರಂದು ಸಂಜೆ ದೇವತಕ್ಕರ ಮನೆಯಿಂದ ಭಂಡಾರ ತರುವುದು, ನಂತರ ಪಂಚಗವ್ಯ ಪುಣ್ಯಾಹ, ಸ್ಥಳಶುದ್ಧಿ, ಆಚಾರ್ಯ ವರ್ಣ, ಪ್ರಾಶಾ ಶುದ್ಧಿ, ಅಂಕುರ ಪೂಜೆ, ವಾಸ್ತು ಹೋಮ, ಸುದರ್ಶನ ಹೋಮ, ವಾಸ್ತು ಬಲಿ, ದಿಕ್ಪಾಲಕ ಬಲಿ ನಡೆಯಲಿದೆ. ಮೇ 26 ರಂದು ಬೆಳಿಗ್ಗೆ ಅಂಕುರ ಪೂಜೆ, ಗಣ ಹೋಮ, ದುರ್ಗಾ ಹೋಮ, ಆಶ್ಲೇಷ ಬಲಿ ಹಾಗೂ ಪ್ರಧಾನ ಹೋಮ ಜರುಗಲಿದ್ದು, ಅಪರಾಹ್ನ 4 ಗಂಟೆಗೆ…

Read More

ಮಡಿಕೇರಿ ಮೇ 24 : ಮಡಿಕೇರಿಯ  ಕಲ್ಯಾಣಿ ಮೋಟಾರ್ಸ್  ವತಿಯಿಂದ  ಮೇ 26 ರಂದು  ಮೆಗಾ ಉದ್ಯೋಗ ಮೇಳ ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಫೋರ್ಟ್ ಮರ್ಕರಾದಲ್ಲಿ  ‘ಉದ್ಯೋಗ ಮೇಳ’  ನಡೆಯಲಿದೆ. ಲೊಕೇಶನ್ ಗಾಗಿ ಕ್ಲಿಕ್ ಮಾಡಿ : https://g.co/kgs/q7K8vq ನೋಂದಣಿಗಾಗಿ ಕ್ಲಿಕ್ ಮಾಡಿ : https://forms.gle/TVFcFYGhkFo5jVSd6 ಹೆಚ್ಚಿನ ಮಾಹಿತಿಗಾಗಿ  ಸೂರ್ಯ (ಎಚ್. ಆರ್.) ಮೊಬೈಲ್: 9845378454  ಸಂಪರ್ಕಿಸಬಹುದಾಗಿದೆ.

Read More