ಲೇಖಕ: admin

ಮಡಿಕೇರಿ ಮೇ 23 :  ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಭದ್ರಕಾಳಿ ಹಾಗೂ ಗುಂಡಿಯತ್‌ ಅಯ್ಯಪ್ಪ ದೇವರ ವಾರ್ಷಿಕ ಬೇಡು ಹಬ್ಬ ಎರಡು ದಿನ ಶ್ರದ್ಧಾಭಕ್ತಿಯಿಂದ ನಡೆಯಿತು. ಊರು ತಕ್ಕರಾದ ಚಮ್ಮಟೀರ ಕುಟುಂಬದ ಮನೆಯಿಂದ ಮೂಲ ನಿವಾಸಿಗಳಲ್ಲಿ ಒಬ್ಬರಾದ ಪಣಿಕ ಜನಾಂಗದಿಂದ ಪೊಲವಂದೆರೆ ಹೊರಡುವ ಮೂಲಕ ಎರಡು ದಿನಗಳ ಹಬ್ಬಕ್ಕೆ ಚಾಲನೆ ದೊರೆಯಿತು. ನಂತರ ಊರಿನ ನಿಗದಿತ ಅಂಬಲಗಳಲ್ಲಿ ವಿವಿಧ ಕಟ್ಟುಪಾಡಿನೊಂದಿಗೆ ಸಾಂಪ್ರದಾಯಿಕ ಆಚರಣೆಗಳು ನಡೆದು ಅಪರಾಹ್ನ  ಊರಿನ ಪ್ರಮುಖ ದೇವಾಲಯಗಳಲ್ಲೊಂದಾದ “ಪೊಲವಪ್ಪಂಡ ಕೋಟ”ದಲ್ಲಿ ಜಿಲ್ಲೆಯ ಮೂಲನಿವಾಸಿಗಳಲ್ಲೊಬ್ಬರಾದ ಪಣಿಕ ಜನಾಂಗದ ವ್ಯಕ್ತಿಯೊಬ್ಬರಿಗೆ ಪೊಲಂದೆರೆ ಆವೇಶ ಬರುವ ಮೂಲಕ ಹಬ್ಬವನ್ನು ವಿಭಿನ್ನವಾಗಿ  ಆಚರಿಸಲಾಯಿತು. ಮರುದಿನ  ಚಮ್ಮಟೀರ ಬಲ್ಯಮನೆಯಲ್ಲಿ ಹಬ್ಬದ ಸಂಭ್ರಮದ ನಂತರ  ಕೃತಕವಾಗಿ ಶೃಂಗರಿಸಲಾದ  ಕುದುರೆ ಹಾಗೂ ಮೊಗ(ಪೂಮೊಗ) ಹೊರಡುವುದು , ಅಪರಾಹ್ನ 3-30 ಗಂಟೆಗೆ ಮೂಕಳೇರ ಬಲ್ಯಮನೆಯಿಂದ ಕುದುರೆ ಹಾಗೂ ಮೊಗ ಹೊತ್ತವರು ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಸ್ಥಾನದ ಅಂಬಲದಲ್ಲಿ ಸೇರಿ  ಶ್ರದ್ಧಾಭಕ್ತಿಯಿಂದ ಹಬ್ಬವನ್ನು ಆಚರಿಸಿದರು. ನಂತರ ಊರಿನವರಿಂದ ಪರಸ್ಪರ ಕೆಸರು ಎರಚಾಟದ…

Read More

ಸಿದ್ದಾಪುರ ಮೇ 23 :   ಸುನ್ನಿ ಯುವಜನ ಸಂಘ (ಎಸ್.ವೈ.ಎಸ್) ಕೊಡಗು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ  ಸಿದ್ದಾಪುರದಲ್ಲಿ ನಿರ್ಮಾಣಗೊಂಡಿರುವ  ವರ್ಕಲ ಮುಲ್ಲಕೋಯ ತಙಳ್ ಸಮತಾ ಭವನ ಹಾಗೂ ಖಾಝಿ ಭವನವನ್ನು  ಸೈಯದ್ ಉಲಾಮ ಮೊಹಮ್ಮದ್ ಜಫ್ರೀ  ಉದ್ಘಾಟಿಸಿದರು. ಎಸ್.ವೈ.ಎಸ್. ಸಂಘಟನೆಯು ದಾನಿಗಳ ಸಹಾಯದಿಂದ ಭವ್ಯ ಭವನವನ್ನು ನಿರ್ಮಾಣ ಮಾಡಿದ್ದು, ಸಂಘಟನೆಯ ಕಾರ್ಯಕ್ಕೆ ಗಣ್ಯರು ಶ್ಲಾಘನೆ ವ್ಯಕ್ತಪಡಿಸಿದರು. ನಂತರ  ಜಾತ್ಯತೀತ, ಸೌಹಾರ್ದ ಸಮಾಜ ನಿರ್ಮಾಣದ ಸಂದೇಶದ ಜಾಗೃತಿ ಜಾಥಕ್ಕೆ ಚಾಲನೆ ನೀಡಲಾಯಿತು.  ಜಾಥವು  ಕೊಡಗು ಜಿಲ್ಲೆಯಿಂದ ತಮಿಳುನಾಡು ಪ್ರವೇಶಿಸಿ ನಂತರ ಕೇರಳದ ಕೆಲವು ಜಿಲ್ಲೆಗಳಲ್ಲಿ ಸಂಚರಿಸಿ ತಿರುವನಂತಪುರಂ ನಲ್ಲಿ ಸಮಾಪ್ತಿಗೊಳ್ಳಲಿದೆ ಎಂದು ಸಂಘಟನೆಯ ಸಂಚಾಲಕ ತಿಳಿಸಿದರು. ಈ ಸಂದರ್ಭ ಪ್ರಮುಖರಾದ ಉಸ್ಮಾನ್ ಫೈಝಿ, ಉಮ್ಮರ್ ಫೈಜಝಿ, ಎಂ ಅಬ್ದುಲ್ ರೆಹಮಾನ್, ಸಿಪಿಎಂ ಬಶೀರಾ ಹಾಜೀ, ಅಬ್ದುಲ್ಲಾ ಫೈಝಿ, ಅಶ್ರಫ್ ಫೈಝೀ  ಹಾಗೂ ಮತ್ತಿತರ ಗಣ್ಯರು  ಹಾಜರಿದ್ದರು.

Read More

ಮಡಿಕೇರಿ ಮೇ 23 : ಅರಂತೋಡು ಗ್ರಾ.ಪಂ ವತಿಯಿಂದ ಗ್ರಾಮೀಣ ಮಕ್ಕಳಿಗೆ ಬೇಸಿಗೆ ಶಿಬಿರ ನಡೆಸಲಾಯಿತು. ಅರಂತೋಡು ಗ್ರಾ.ಪಂ ಅಮೃತ ಸಭಾಭವನದಲ್ಲಿ  ನಡೆಸಲಾದ ಶಿಬಿರವನ್ನು  ಗ್ರಾ.ಪಂ ಅಧ್ಯಕ್ಷೆ ಹರಿಣಿ ದೇರಾಜೆ ಉದ್ಘಾಟಿಸಿದರು. ಈ ಸಂದರ್ಭ ಗ್ರಾ.ಪಂ  ಉಪಾಧ್ಯಕ್ಷರಾದ ಶ್ವೇತ , ಪಂಚಾಯತ್ ಅಭಿವೃದ್ಧಿ ಆಧಿಕಾರಿ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು.  ವೇದಿಕೆಯಲ್ಲಿ ಸದಸ್ಯರಾದ ಕೇಶವ ಅಡ್ತಲೆ, ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿ ನಿವೃತ್ತಿ ಶಿಕ್ಷಕಿ ಗಂಗಮ್ಮ ಜಾನಪದ ಕಥೆ, ಪದ್ಯ ಮುಂತಾದ ಚಟುವಟಿಕೆಗಳನ್ನು ಮಾಡಿಸಿದರು. ಸುಮಾರು ಹದಿನೈದು ಶಿಬಿರಾರ್ಧಿಗಳು ಭಾಗವಹಿಸಿದರು.

Read More

ಮಡಿಕೇರಿ ಮೇ 23 :  ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ‌ ಸಾಲಿನ‌‌ ಮುಂಗಾರಿನ ಸಮಯದಲ್ಲಿ‌ ಸಂಭವಿಸಬಹುದಾದ‌ ವಿಪತ್ತುಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತಯಾರಾಗಿದೆ. ಈ‌‌ ನಿಟ್ಟಿನಲ್ಲಿ, ಭೂಕುಸಿತ, ಪ್ರವಾಹ, ಮಳೆ ಹಾನಿ, ಭೂಮಿಯಲ್ಲಿ ನೀರು ಹರಿಯುವ ಸದ್ದು, ಭೂಮಿಯಲ್ಲಿ ಹೊಸದಾಗಿ‌ ಮೂಡಿರುವ ಬಿರುಕುಗಳು ಇದ್ದಲ್ಲಿ ಅಥವಾ ಪ್ರಾಕೃತಿಕ ವಿಕೋಪಕ್ಕೆ‌ ಸಂಬಂಧಿಸಿದಂತೆ ಯಾವುದಾದರೂ ದೂರುಗಳಿದ್ದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 08272-221077,  08272-221099 ಗೆ ಕರೆ ಮಾಡಿ ಮಾಹಿತಿ‌ ನೀಡಬಹುದು. ಹಾಗೆಯೇ 8550001077 ಈ‌ ಸಂಖ್ಯೆಗೆ ವಾಟ್ಸಾಪ್ ಮಾಡಬಹುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಮಡಿಕೇರಿ ಮೇ 23 :  ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ಮಳೆಗಾಲ ಪ್ರಾರಂಭವಾಗುವ ಪೂರ್ವ ನಿವೇಚಿತ ಕೆಲಸ ಕಾರ್ಯಗಳಲ್ಲಿ ಒಂದಾದ ರಾಜ ಕಾಲುವೆ ಮತ್ತು ತೋಡುಗಳ ಹೂಳೆತ್ತುವ ಮತ್ತು ಸ್ವಚ್ಛಗೊಳಿಸುವ ಕೆಲಸ ಕಾರ್ಯಗಳ ಕಾಮಗಾರಿ ಕೈಗೊಂಡಿದ್ದು, ಈ ಸಂಬಂಧ ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ  ಬಸಪ್ಪ, ಪೌರಾಯುಕ್ತ  ವಿಜಯ್ ಹಾಗೂ ಎಇಇ ಹೇಮಂತ್ ಕುಮಾರ್   ಪರಿಶೀಲಿಸಿದರು.

Read More

ಮಡಿಕೇರಿ, ಮೇ 23: ರಾಜ್ಯದಾದ್ಯಂತ ಗ್ರಾಮೀಣ ಪ್ರತಿಭೆಗಳ ಅನಾವರಣಕ್ಕೆ ವೀರಲೋಕ ಪ್ರಕಾಶನ ಮುಂದಾಗಿದ್ದು, ಎಲ್ಲ ಜಿಲ್ಲೆಗಳಲ್ಲೂ ಸಂಚಾಲಕರುಗಳನ್ನು ನೇಮಿಸಲಾಗಿದೆ. ಕೊಡಗಿನಿಂದ ಸಂಚಾಲಕರನ್ನಾಗಿ ಬಿ.ಜಿ. ಅನಂತ ಶಯನ ಅವರನ್ನು ನೇಮಿಸಲಾಗಿದೆ. ನಿನ್ನೆ ದಿನ ಬೆಂಗಳೂರಿನಲ್ಲಿ ನಡೆದ ಸಂಚಾಲಕರುಗಳ ಪ್ರಥಮ ಸಭೆಯಲ್ಲಿ ಪ್ರಕಾಶನದ ವ್ಯವಸ್ಥಾಪಕ ನಿರ್ದೇಶಕ ವೀರಕಪುತ್ರ ಶ್ರೀನಿವಾಸ್ ಈ ಕುರಿತು ಮಾಹಿತಿ ನೀಡಿದರು. ಪ್ರಕಾಶನವು ತರಬೇತಿ ಕಮ್ಮಟದ ಮೂಲಕ ಕಥಾಸಂಕಲನ ಹೊರತರಲು ಉದ್ದೇಶಿಸಿದ್ದು, 2024 ರಲ್ಲಿ ನಡೆಸಲು ಉದ್ದೇಶಿಸಿರುವ ‘ಲಿಟ್ ಫೆಸ್ಟ್’ನಲ್ಲಿ ವಿಶೇಷವಾಗಿ ಆಯ್ದ ಕಥೆಗಾರರನ್ನು ಗುರುತಿಸಲಾಗುವುದು ಎಂದಿದ್ದಾರೆ. ಸಮಾಲೋಚನಾ ಸಭೆಯಲ್ಲಿ ಸಾಹಿತಿ ಕಾ.ತಾ. ಚಿಕ್ಕಣ್ಣ ಹಾಗೂ ಲಕ್ಷ್ಮಣ ಕೊಡಸೆ ಹಾಜರಿದ್ದು ಇದೊಂದು ‘ದೇಸಿ ಜಗಲಿ’ ಕಥಾ ಕಮ್ಮಟ ಯೋಜನೆ ಆಗಿದ್ದು, ಗ್ರಾಮೀಣ ವಿಭಾಗಗಳಲ್ಲಿ ಅವಕಾಶ ವಂಚಿತರಾಗಿ ಉಳಿವ, ನಲವತ್ತು ವರುಷದೊಳಗಿನ ಯುವ ಪ್ರತಿಭೆಗಳಿಗೆ ಉಪಯುಕ್ತ ಕಾರ್ಯಕ್ರಮವಾಗಲಿದೆ ಎಂದರು. ಈ ಸಂದರ್ಭ ಮಾತನಾಡಿದ ಶ್ರೀನಿವಾಸ್ ಅವರು, ಇಂದು ಫ್ಲಿಪ್‍ಕಾರ್ಟ್ ಮೂಲಕ ಸೆಗಣಿ ತರಿಸುವಷ್ಟೂ ಸಮಾಜ ಮುಂದುವರಿದಿದ್ದು, ಕನ್ನಡ ಪುಸ್ತಕಗಳು ಮಾತ್ರ ಲಭ್ಯವಿಲ್ಲ ಎಂದು…

Read More

ಸುಂಟಿಕೊಪ್ಪ ಮೇ 22: ಹರದೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಆಯೋಜಿಸಲಾಗಿರುವ ಗ್ರಾಮೀಣ ಬೇಸಿಗೆ ಶಿಬಿರಕ್ಕೆ ಗ್ರಾ.ಪಂ ಅಧ್ಯಕ್ಷ ಬಿ.ಡಿ.ಪದ್ಮನಾಭ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿ.ಬಿ.ಪೂರ್ಣಿಮ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ವೈಯಕ್ತಿಕ ಪ್ರತಿಭೆ ಬೆಳಸಿ ಪ್ರೋತ್ಸಾಹಿಸುವ ಹಾಗೂ ಅವರ ಜ್ಞಾನ ಆರೋಗ್ಯದ ಬಗ್ಗೆ ಆರಿವು ನೀಡುವ ದಿಸೆಯಲ್ಲಿ ಬೇಸಿಗೆ ಶಿಬಿರವನ್ನು ಗ್ರಾಮೀಣ ಮಟ್ಟದಲ್ಲಿ ಆಯೋಜಿಸಲಾಗಿದೆ ಇದರ ಪ್ರಯೋಜನವನ್ನು ಮಕ್ಕಳು ಪಡೆದುಕೊಳ್ಳುವಂತೆ ಸಲಹೆ ನೀಡಿದರು. ಈ ಸಂದರ್ಭ ಗ್ರಂಥಾಲಯ ಮೇಲ್ವಿಚಾರಕಿ ಸಂದ್ಯಾ, ಗ್ರಾ.ಪಂ ಸಿಬ್ಬಂದಿಗಳು, ಮಕ್ಕಳು ಇದ್ದರು.

Read More

ಸುಂಟಿಕೊಪ್ಪ ಮೇ 22: ಸುಂಟಿಕೊಪ್ಪ ಪಟ್ಟಣ ವ್ಯಾಪ್ತಿಯಲ್ಲಿ 7 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಎಲ್ಲಾರೂ ಸೂಕ್ತ ಚಿಕಿತ್ಸೆಯ ಹಿನ್ನಲೆಯಲ್ಲಿ ಅಪಾಯದಿಂದ ಪಾರಾಗಿದ್ದು, ಜನತೆ ಯಾವುದೇ ಅಂತಕ ಪಡುವ ಅವಶ್ಯಕತೆ ಇಲ್ಲವೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸತೀಶ್ ಕುಮಾರ್ ತಿಳಿಸಿದರು. ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು ಆರೋಗ್ಯ ಇಲಾಖೆ ಸಿಬ್ಬಂದಿಗಳು ಮತ್ತು ಆಶಾ ಕಾರ್ಯಕರ್ತರೊಂದಿಗೆ ಚರ್ಚಿಸಿದರು. ನಂತರ ಮಾತನಾಡಿದ ಅವರು ಕಳೆದ 15 ದಿನಗಳಿಂದ ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಸುಂಟಿಕೊಪ್ಪ ಪಟ್ಟಣ ವ್ಯಾಪ್ತಿಯಲ್ಲಿ ಜ್ವರ ಪ್ರಮಾಣ ಹೆಚ್ಚಾಗಿ ಕಾಣಿಸಿಕೊಂಡಿದೆ. ನಿವಾಸಿಗಳಲ್ಲಿ ಅತಿಯಾಗಿ ಜ್ವರ, ಶೀತ, ಕೆಮ್ಮು ಸಾಮಾನ್ಯವಾಗಿ ಕಂಡುಬರುತ್ತಿದೆ. ಈ ಬಗ್ಗೆ ಆರೋಗ್ಯ ಇಲಾಖೆಯ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಮನೆಯ ಸುತ್ತ ಮುತ್ತ ಸ್ವಚ್ಚ ಪರಿಸರವನ್ನು ಕಾಪಾಡಿಕೊಳ್ಳುವಂತೆ ನಿಂತ ನೀರು ಸೊಳ್ಳೆ ಕಾಟ ನಿರ್ಮೂಲನೆ ಮಾಡಲು ಆರೋಗ್ಯ ಇಲಾಖೆಯೊಂದಿಗೆ ಸಾರ್ವಜನಿಕರು ಕೈ ಜೋಡಿಸಬೇಕೆಂದು ಮನವಿ ಮಾಡಿದರು. ಪ್ರಾಥಮಿಕ ಆರೋಗ್ಯದ ವತಿಯಿಂದ ಆಯೋಜಿಸಲಾದ…

Read More

ಮಡಿಕೇರಿ ಮೇ 22 : ಕೊಡಗು ಜಿಲ್ಲೆಗೆ ಬರುವ ಪ್ರವಾಸಿಗರಿಗೆ ಸೂಕ್ತ ರಕ್ಷಣೆ ನೀಡಿ ಪ್ರವಾಸಿಗರ ಸುರಕ್ಷತೆ ಹಾಗೂ ಅವರ ಪ್ರವಾಸ ಸುಗಮವಾಗಿ ನಡೆಯುವ ನಿಟ್ಟಿನಲ್ಲಿ ಕೊಡಗು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕ್ರಮಕೈಗೊಳ್ಳುವಂತೆ ಕೊಡಗು ಜಿಲ್ಲಾ ಹೋಟೆಲ್ ರೆಸಾರ್ಟ್ ಮತ್ತು ರೆಸ್ಟೋರೆಂಟ್ ಸಂಘದ ಪ್ರಮುಖರು ಜಿ ಚೇಂಬರ್ ಆಫ್ ಕಾಮಸ್೯, ಹೋಂಸ್ಟೇ ಅಸೋಸಿಯೇಷನ್ ಪದಾಧಿಕಾರಿಗಳೊಂದಿಗೆ ಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಟಾಧಿಕಾರಿಗಳಿಗೆ ಮನವಿ ಸಲ್ಸಿಸಿದ್ದಾರೆ. ಕೊಡಗು ಜಿಲ್ಲಾ ಹೋಟೆಲ್ ರೆಸಾರ್ಟ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್ ಪ್ರಮುಖರು ಜಿಲ್ಲಾ ಚೇಂಬರ್ ಆಫ್ ಕಾಮಸ್೯, ಕೊಡಗು ಹೋಂಸ್ಟೇ ಅಸೋಸಿಯೇಷನ್ ನ ಪ್ರಮುಖರು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಪೊಲೀಸ್ ವರಿಷ್ಟಾಧಿಕಾರಿ ಕೆ ರಾಮರಾಜನ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಮಡಿಕೇರಿ ವ್ಯಾಪ್ತಿಯ ಪ್ರವಾಸೀ ತಾಣ ಅಬ್ಬಿ ಫಾಲ್ಸ್ ನಲ್ಲಿ ಕೆಲವರು  ಪ್ರವಾಸಿಗರ ಮೇಲೆ ಹಲ್ಲೆ ನಡೆಸಿರುವ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಸಂಘಸಂಸ್ಥೆಗಳ ಪ್ರಮುಖರು, ಪ್ರವಾಸಿಗರಿಗೆ ರಕ್ಷಣೆ ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ…

Read More

ಮಡಿಕೇರಿ ಮೇ 22 : ಎರಡೂ ನೇತ್ರಗಳ ದೃಷ್ಟಿಯನ್ನು ಕಳೆದುಕೊಂಡಿದ್ದ ತರುಣೇಶ್ ಎಂಬುವವರಿಗೆ ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯಿಂದ ವೈದ್ಯಕೀಯ ಚಿಕಿತ್ಸೆಗಾಗಿ ಆಥಿ೯ಕ ನೆರವು ನೀಡಲಾಯಿತು. ನಗರದ ಶಿಶುಕಲ್ಯಾಣ ಸಂಸ್ಥೆಯ ಸಭಾಂಗಣದಲ್ಲಿ ತರುಣೇಶ್ ಅವರಿಗೆ ಇನ್ನರ್ ವೀಲ್ ಸಂಸ್ಥೆಯಿಂದ ಆಥಿ೯ಕ ನೆರವು ನೀಡಲಾಯಿತು. ಇನ್ನರ್ ವೀಲ್ ಸಂಸ್ಥೆ ಅಧ್ಯಕ್ಷೆ ಡಾ.ರೇಣುಕಾ ಸುಧಾಕರ್, ಕಾಯ೯ದಶಿ೯ ಲಲಿತಾ ರಾಘವನ್, ಸದಸ್ಯೆಯರಾದ ಶಫಾಲಿ ರೈ, ಉಮಾಗೌರಿ, ಮಲ್ಲಿಗೆ ಪೈ,ರಾಧಿಕಾ ವಿಶ್ವನಾಥ್, ತೆಕ್ಕಡೆ ಗುಲಾಬಿ ಜನಾಧ೯ನ್ ಹಾಜರಿದ್ದರು.

Read More