ನಾಪೋಕ್ಲು ಮೇ 20 : ಮೂರ್ನಾಡು ಪದವಿ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಸ್ಥಾಪನೆ ಮತ್ತು ಮೊದಲ ಪೂರ್ವಭಾವಿ ಸಭೆಯನ್ನು IQAC ಅಡಿಯಲ್ಲಿ ಕಾಲೇಜಿನ ಆವರಣದಲ್ಲಿ ಪ್ರಾಂಶುಪಾಲರಾದ ಡಾ. ರೇಖಾ ಚಿಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿಗಳ ಸಂಘದ ಸಂಯೋಜಕ ನವೀನ್ ವಿದ್ಯಾರ್ಥಿ ಸಂಘದ ಪ್ರಾಮುಖ್ಯತೆಯ ಉದ್ದೇಶಗಳನ್ನು ಸಭೆಗೆ ತಿಳಿಸಿದರು. ಹಳೆ ವಿದ್ಯಾರ್ಥಿ ಸಂಘದ ನೂತನ ಉಪಾಧ್ಯಕ್ಷರಾಗಿ ಉಸ್ಮಾನ್, ಕಾರ್ಯದರ್ಶಿಗಳಾಗಿ ನೌಶಾದ್, ಖಜಾಂಚಿಯಾಗಿ ಕವನ್ ಕರುಂಬಯ್ಯ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಕಾರ್ಯಕ್ರಮದ ನಿರೂಪಣೆಯನ್ನು IQAC ಸಂಚಾಲಕಿ ವಿಲ್ಮಾ ರವರು ನಡೆಸಿದರೆ, ದೈಹಿಕ ಶಿಕ್ಷಕರಾದ ಬೋಪಣ್ಣನವರು ಸ್ವಾಗತಿಸಿದರು, ಉಪನ್ಯಾಸಕ ಹರೀಶ್ ವಂದಿಸಿದರು. ವರದಿ : ದುಗ್ಗಳ ಸದಾನಂದ.
ಲೇಖಕ: admin
ಮಡಿಕೇರಿ ಮೇ 20 : ಕುಶಾಲನಗರ 220/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್13 ಎಸ್ಎಲ್ಎನ್ ಫೀಢರ್ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಮೇ 22 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಚಿಕ್ಕತ್ತೂರು, ದೊಡ್ಡತ್ತೂರು, ಹಾರಂಗಿ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಮೇ 20 : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸೆ,್ಥ ಎಪಿಡಿಮಿಯಲಾಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ ‘ಯುವ ಸ್ಪಂದನ’ ಯೋಜನೆ-ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆ ಒದಗಿಸಲು ಹಾಗೂ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದಡಿಯಲ್ಲಿ ಕಚೇರಿ ಕೆಲಸಕ್ಕೆ ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 21 ರಿಂದ 35 ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟು ವಿದ್ಯಾಭ್ಯಾಸ ಮಾಡಿರುವ, ಕನ್ನಡವನ್ನು ಬರೆಯುವ ಹಾಗೂ ಸ್ಪಷ್ಟವಾಗಿ ಮಾತನಾಡುವ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು, ಉತ್ತಮ ಅಂರ್ತವ್ಯಕ್ತಿತ್ವ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯವನ್ನು ಹೊಂದಿರುವ, ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳು ಮತ್ತು ಅಂಕಪಟ್ಟಿಗಳೊಂದಿಗೆ ಮೇ, 31 ರಂದು ನೇರ ಸಂದರ್ಶನಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್…
ಮಡಿಕೇರಿ ಮೇ 20 : ಮಡಿಕೇರಿ ವಿಭಾಗದ ಸೋಮವಾರಪೇಟೆ ಪ್ರಾದೇಶಿಕ ವಲಯ ವ್ಯಾಪ್ತಿಯ ಐಗೂರು ಗ್ರಾಮದ ಕಾಜೂರು ಸಸ್ಯ ಕ್ಷೇತ್ರ ಮತ್ತು ಹೆಬ್ಬಾಲೆ ಗ್ರಾಮದ ಕಣಿವೆ ಸಸ್ಯ ಕ್ಷೇತ್ರ್ರಗಳಲ್ಲಿ ಪ್ರತಿ ವರ್ಷವೂ ಆರ್ಎಸ್ಪಿಡಿ ಎಂಬ ಯೋಜನೆಯಲ್ಲಿ ವಿವಿಧ ಜಾತಿಯ ಸಸಿಗಳನ್ನು ವಿತರಿಸಲಾಗುತ್ತದೆ. 2023-24 ನೇ ಸಾಲಿನಲ್ಲೂ ಸಹ ಶ್ರೀಗಂಧ, ಹೊನ್ನೆ, ಮಾವು, ಮಹಾಗನಿ, ಬಿದಿರು, ಅತ್ತಿ, ಮತ್ತಿ, ನೇರಳೆ, ನೊಗ, ಹೆಬ್ಬೇವು, ಬಳಂಜಿ, ಗಸಗಸೆ, ಜಂಬೂನೇರಳೆ, ಕರಿಬೇವು, ಪನ್ನೇರಳೆ, ಪುನರ್ಪುಳಿ, ತೇಗ, ಸೀಬೆ, ಕಾಡುನೆಲ್ಲಿ ಮತ್ತಿತರ ಸಸಿಗಳನ್ನು ಮೇ, 22 ರಿಂದ ರೈತರಿಗೆ ರಿಯಾಯಿತಿ ದರದಲ್ಲಿ ವಿತರಿಸಲಾಗುವುದು. ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳುವುದು. ಸಸಿಗಳನ್ನು ಪಡೆಯಲು ಫಲಾನುಭವಿಗಳು ಅರ್ಜಿ, ಸ್ಥಳದ ಆರ್ಟಿಸಿ, ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಖಾತೆಯ ವಿವರದ ಪ್ರತಿ, ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರದೊಂದಿಗೆ ನಿಗದಿತ ಶುಲ್ಕ ಭರಿಸಿ ಸಸಿ ಪಡೆದುಕೊಳ್ಳುವುದು. ಸಸಿಗಳನ್ನು ಪಡೆಯಲು ವೈ.ಕೆ.ಜಗದೀಶ್ ಉಪ ವಲಯ ಅರಣ್ಯಧಿಕಾರಿ ಮಾದಾಪುರ ಶಾಖೆ(ಕಾಜೂರು ಸಸ್ಯ ಕ್ಷೇತ್ರ) ದೂ.ಸಂ.7349117090,…
ಮಡಿಕೇರಿ ಮೇ 20 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆ ಹಾಗೂ ಕೊಡಗು ಜಿಲ್ಲಾ ಹಾಪ್ ಕಾಮ್ಸ್ ಸಹಯೋಗದಲ್ಲಿ ಮೇ 26 ರಿಂದ 28 ರವರೆಗೆ ಕೊಡಗು ಜಿಲ್ಲಾ ಹಾಪ್ ಕಾಮ್ಸ್ ನಲ್ಲಿ ಮಾವು ಮತ್ತು ಹಲಸು ಮೇಳ ನಡೆಯಲಿದೆ. ಮಾವು ಮತ್ತು ಹಲಸು ಮೇಳದ ಉದ್ಘಾಟನಾ ಕಾರ್ಯಕ್ರಮವು ಮೇ 26 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಮಡಿಕೇರಿ ಮೇ 20 : ನಗರಸಭೆ ವತಿಯಿಂದ ಟೌನ್ ಹಾಲ್ ಬಳಿಯಲ್ಲಿ ಆರ್ಆರ್ಆರ್ ಕೇಂದ್ರವನ್ನು ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಪೌರಾಯುಕ್ತ ವಿಜಯ ಹಾಗೂ ಚೇಂಬರ್ ಆಫ್ ಕಾಮರ್ಸ್ ಪದಾಧಿಕಾರಿಗಳು ಸೇರಿ ಕಸ ಸಂಗ್ರಹಣೆ ಹಾಗೂ ತ್ಯಾಜ್ಯವನ್ನು ನೀಡುವ ಮೂಲಕ ‘ನನ್ನ ಜೀವನ, ನನ್ನ ಸ್ವಚ್ಛ ನಗರ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ನಗರಸಭೆ ಪೌರಾಯುಕ್ತ ವಿಜಯ್ ಮಾತನಾಡಿ ತಮ್ಮ ಮನೆಗಳಲ್ಲಿ ಇರುವ ತ್ಯಾಜ್ಯವನ್ನು ಆರ್ಆರ್ಆರ್ ಕೇಂದ್ರಗಳಿಗೆ ನೀಡಿದ್ದಲ್ಲಿ, ಈ ತ್ಯಾಜ್ಯಗಳಲ್ಲಿ ಉಪಯೋಗವಾಗುವ ಅವಶ್ಯವಿರುವವರಿಗೆ ಉಪಯೋಗಕ್ಕಾಗಿ ನೀಡಲಾಗುತ್ತದೆ. ಇನ್ನುಳಿದ ತ್ಯಾಜ್ಯವನ್ನು ಮರು ಬಳಕೆಗೆ ಕಳುಹಿಸಿಕೊಡಲಾಗುವುದು ಎಂದು ಹೇಳಿದರು. ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ 2 ಅಡಿಯಲ್ಲಿ ಜೂ.5 ರವರೆಗೆ ‘ನನ್ನ ಜೀವನ, ನನ್ನ ಸ್ವಚ್ಛ ನಗರ’ ಕಾರ್ಯಕ್ರಮದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಆರ್ಆರ್ಆರ್(ರೆಡ್ಯೂಸ್, ರೆಸ್ಕ್ಯೂ, ರೀ ಸೈಕಲ್) ಕೇಂದ್ರಗಳನ್ನು ನಗರ ವ್ಯಾಪ್ತಿಯಲ್ಲಿ 5 ಸ್ಥಳಗಳಲ್ಲಿ ಮಡಿಕೇರಿ ನಗರಸಭೆ ವತಿಯಿಂದ ತೆರೆಯಲಾಗಿದೆ. ಸಾರ್ವಜನಿಕರು (ಆಟಿಕೆ ಸಾಮಾಗ್ರಿಗಳು, ಬಟ್ಟೆ-ಹಳೆಯ ಜೀನ್ಸ್, ಸಮವಸ್ತ್ರ,…
ಮಡಿಕೇರಿ ಮೇ 20 : ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರ ಮತ್ತು ತೆಲಂಗಾಣ ದಕ್ಷಿಣ ರಾಜ್ಯಗಳ ವಿದ್ಯುತ್ ನಿಯಂತ್ರಣ ಆಯೋಗದ ಸದಸ್ಯರ ತಂಡವು ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಕರ್ನಾಟಕ ರಾಜ್ಯ ವಿದ್ಯುತ್ ನಿಯಂತ್ರಣ ಆಯೋಗದ ಅಧ್ಯಕ್ಷ ರವಿಕುಮಾರ್ ನೇತೃತ್ವದಲ್ಲಿ ದಕ್ಷಿಣ ರಾಜ್ಯಗಳ ವಿದ್ಯುತ್ ನಿಯಂತ್ರಣ ಆಯೋಗದ ಸದಸ್ಯರ ತಂಡವು ಭೇಟಿ ನೀಡಿ, ಮಾಹಿತಿ ಪಡೆದರು. ಭಾರತೀಯ ಸೇನಾ ಕ್ಷೇತ್ರದಲ್ಲಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಕೊಡುಗೆ ಅಪಾರವಾಗಿದೆ. ಭಾರತೀಯ ಸೇನೆಯ ಮಹತ್ವ ಹಾಗೂ ಯುವ ಜನರು ಸೇನಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಜನರಲ್ ತಿಮ್ಮಯ್ಯ ಸ್ಮಾರಕ ಭವನ ಸ್ಫೂರ್ತಿಯಾಗಿದೆ ಎಂದು ಗಣ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಅನಿತಾ ಬಾಯಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿನಯ್ ಕುಮಾರ್, ಸಂಪತ್ ಇತರರು ಇದ್ದರು.
ಮಡಿಕೇರಿ ಮೇ 20 : ಕೊಡಗು ಗೌಡ ಯುವ ವೇದಿಕೆ ಆಶ್ರಯದಲ್ಲಿ ಅರೆಭಾಷಿಕ ಗೌಡ ಜನಾಂಗದವರಿಗೆ ಆಯೋಜಿಸಿರುವ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಲನೆ ದೊರೆಯಿತು. ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹತ್ತು ಕುಟುಂಬ ಹದಿನೆಂಟು ಗೋತ್ರದ ಗೌಡರ ಕ್ರಿಕೆಟ್ ಸಂಭ್ರಮಕ್ಕೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ನ ಅಂಡರ್ 15 ಆಟಗಾರ್ತಿ ಜೈನೀರ ತಾನಿಷ್ಕಾ ಚಾಲನೆ ನೀಡಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಕೊಡಗು ಗೌಡ ಸಮಾಜ ಅಧ್ಯಕ್ಷ ಪೇರಿಯನ ಜಯಾನಂದ್ ಮಾತನಾಡಿ, ಅರಂಭದಲ್ಲಿ ಗೌಡ ಜನಾಂಗ ಬಾಂಧವರಿಗೆ ಟೆನ್ನಿಸ್ ಬಾಲ್ ಪಂದ್ಯ ಆಯೋಜಿಸಲಾಗುತ್ತಿತ್ತು. ಬದಲಾವಣೆಗಾಗಿ ಈ ಬಾರಿ ಯುವ ವೇದಿಕೆ ವತಿಯಿಂದ ಲೆದರ್ ಬಾಲ್ ಪಂದ್ಯಾವಳಿಯನ್ನು ಆಯೋಜಿಸಿರುವುದು ಸಂತೋಷ. ಪ್ರಸ್ತುತ ದಿನಗಳಲ್ಲಿ ಬದಲಾವಣೆಯ ಅಗತ್ಯವಿದ್ದು, ಯುವ ಕ್ರೀಡಾಪಟುಗಳಿಗೆ ಉತ್ತಮ ವೇದಿಕೆಯಾಗಿದೆ ಎಂದ ಅವರು ಕ್ರೀಡಾಪಟುಗಳಿಗೆ ಶುಭಹಾರೈಸಿದರು. ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ಮಾತನಾಡಿ, ಕೊಡಗಿನ ಜನತೆಗೆ ಉತ್ತೇಜನ ನೀಡುವ ಕಾರ್ಯಕ್ರಮ…
ಮಡಿಕೇರಿ ಮೇ 20 : ಕೊಡಗಿನ ವೈಶಿಷ್ಟ್ಯಪರ್ಣ ಭಾಷಾ ಸಂಸ್ಕೃತಿ, ಆಚಾರ ವಿಚಾರಗಳ ಕುರಿತು ಯುವ ಸಮೂಹದಲ್ಲಿ ಜಾಗೃತಿ ಮೂಡಿಸುವ ‘ಕೊಡವ ಯುವ ಮೇಳ’ ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದಲ್ಲಿ, ಅತ್ಯಾಕರ್ಷಕ ಮೆರವಣಿಗೆ, ಕೊಡವ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವೈವಿಧ್ಯಮಯವಾಗಿ ನಡೆಯಿತು. ಕೊಡವ ಸಂಸ್ಕೃತಿಯ ಸಂರಕ್ಷಣೆ ಯುವ ಸಮೂಹದಿಂದ ಮಾತ್ರ ಸಾಧ್ಯವಾಗಬಲ್ಲುದು, ಈ ಹಿನ್ನೆಲೆ ಜಿಲ್ಲೆ ಹಾಗೂ ಕಾರ್ಯ ನಿಮಿತ್ತ ಹೊರ ಜಿಲ್ಲೆಗಳಲ್ಲಿರುವ ಯುವ ಸಮೂಹಕ್ಕೆ ಇಲ್ಲಿನ ಸಂಪದ್ಭರಿತ ಸಂಸ್ಕೃತಿಯ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್ನಿಂದ ದಿನಪೂರ್ತಿ ಕೊಡವ ಭಾಷಾ ಸಂಸ್ಕೃತಿಯ ಚೌಕಟ್ಟಿನಲ್ಲಿ ಅತ್ಯಾಕರ್ಷಕ ಕಾರ್ಯಕ್ರಮಗಳು ನಡೆದವು. ಆಕರ್ಷಕ ಮೆರವಣಿಗೆ- ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್ ಸಂಚಾಲಕ ಚೊಟ್ಟೆಕ್ಮಾಡ ರಾಜೀವ್ ಬೋಪಯ್ಯ, ಟ್ರಸ್ಟ್ನ ಕಾರ್ಯದರ್ಶಿ ಅಣ್ಣೀರ ಹರೀಶ್ ಮಾದಪ್ಪ, ಪದಾಧಿಕಾರಿಗಳಾದ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ, ಸದಸ್ಯರಾದ ಮಲ್ಲಮಾಡ ಪ್ರಭು ಪೂಣಚ್ಚ, ಪಾಲೇಂಗಡ ಅಮಿತ್ ಭೀಮಯ್ಯ, ಅಪ್ಪಂಡೇರಂಡ ಯಶವಂತ್ ಕಾಳಪ್ಪ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರಮುಖರ ಉಪಸ್ಥಿತಿಯಲ್ಲಿ ಶನಿವಾರ ಬೆಳಗ್ಗೆ…
ವಿರಾಜಪೇಟೆ ಮೇ 20 : ನೂತನ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆ ವಿರಾಜಪೇಟೆ ನಗರ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ನಗರದ ಗಡಿಯಾರ ಕಂಬ ಹಾಗೂ ಖಾಸಗಿ ಬಸ್ಸು ನಿಲ್ದಾಣದ ಬಳಿ ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ವಿತರಿಸಿ ಸಂಭ್ರಮಿಸಿದರು. ಈ ಸಂದರ್ಭ ವಿರಾಜಪೇಟೆ ಪುರಸಭೆ ಸದಸ್ಯ ಡಿ.ಪಿ.ರಾಜೇಶ್ ಮಾತನಾಡಿ, ಸಿದ್ದರಾಮಯ್ಯ ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದು ಅಭಿವೃದ್ಧಿಗೆ ಪೂರಕವಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ನಮ್ಮ ನಾಯಕರಾಗಿದ್ದು, ಇಬ್ಬರು ಜೋಡೆತ್ತುಗಳಂತೆ ಸರ್ಕಾರನ್ನು ಮುನ್ನಡೆಸಿ ಕಾಂಗ್ರೆಸ್ ಪಕ್ಷದ 5 ಪ್ರಮುಖ ಗ್ಯಾರಂಟಿಗಳನ್ನು ಈಡೇರಿಸುವ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆಯಲಿದೆ ಎಂದರು. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಆರ್.ಕೆ.ಸಲಾಂ, ವಿರಾಜಪೇಟೆ ಬ್ಲಾಕ್ ಮಹಿಳಾ ಘಟಕದ ಅಧ್ಯಕ್ಷೆ ಪೊನ್ನಕ್ಕಿ ಇದೇ ಸಂದರ್ಭ ಮಾತನಾಡಿದರು. ಪುರಸಭೆ ಸದಸ್ಯ ಸಿ.ಕೆ.ಪೃಥ್ವಿನಾಥ್, ನಗರ ಘಟಕದ ಮಾಜಿ ಅಧ್ಯಕ್ಷ ಜಿ.ಜಿ. ಮೋಹನ್, ಡಿ.ಸಿ.ದ್ರುವ ಕುಮಾರ್, ಮಾಳೇಟಿರ…






