ಮಡಿಕೇರಿ ಮೇ 20 : ನಿವೃತ್ತ ಸಬ್ ಇನ್ಸ್ಪೆಕ್ಟರ್ ಬೊಳ್ಳಜಿರ ಬೋಪಯ್ಯ ಹಾಗೂ ಯಶೋಧ ಬೋಪಯ್ಯ (ತಾಮನೆ : ಅಜ್ಜಮಾಡ) ಇದೀಗ ಬಿಟ್ಟಂಗಾಲದಲ್ಲಿ ವಾಸವಿರುವ ದಂಪತಿಗಳ ಪ್ರಥಮ ಪುತ್ರನಾದ ಬೊಳ್ಳಜಿರ ಬಿ. ಅಯ್ಯಪ್ಪ (40 ವರ್ಷ) ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಬಿ.ಕಾಂ (ಸಿ.ಎ) ಪದವಿ ಪಡೆದಿದ್ದಾರೆ. ಇದೀಗ ಅದೇ ಕಾಲೇಜಿನಲ್ಲಿ ಎಂ.ಎ. (ಕೊಡವ) ವ್ಯಾಸಾಂಗ ಮಾಡುತ್ತಿದ್ದಾರೆ. ನಿವೃತ್ತ ಸಬ್ ಇನ್ಸ್ಪೆಕ್ಟರ್ ಮನ್ನೇರ ನಂಜಪ್ಪ ಹಾಗೂ ರಾಣಿ ನಂಜಪ್ಪ (ತಾಮನೆ: ಅಪ್ಪಾರಂಡ) ದಂಪತಿಗಳ ನಾಲ್ಕನೇ ಮಗಳು ಯಮುನಾಳನ್ನು ವಿವಾಹವಾದ ಇವರಿಗೆ ದೇಚಮ್ಮ ಮತ್ತು ಬೋಪಣ್ಣ ಎಂಬ ಇಬ್ಬರು ಮಕ್ಕಳಿದ್ದಾರೆ. ವಿದ್ಯಾರ್ಥಿ ಜೀವನದಲ್ಲಿಯೇ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಬೊಳ್ಳಜಿರ ಬಿ. ಅಯ್ಯಪ್ಪ ಎನ್. ಸಿ. ಸಿ ಯಲ್ಲಿ ಉತ್ತಮ ಸಾಧನೆ ಮಾಡಿರುತ್ತಾರೆ. ಸೈನ್ಯಕ್ಕೆ ಸೇರುವುದು ಇವರ ಕನಸಾಗಿತ್ತದರೂ ಕಾರಣಾಂತರಗಳಿಂದ ಅದು ಫಲಿಸಲಿಲ್ಲ. ಮುಂದೆ ಪ್ರತಿಷ್ಠಿತ ಹಣಕಾಸು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇವರು ಸಾಮಾಜಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಜನಾನುರಾಗಿದ್ದಾರೆ. ಉತ್ತಮ ನಡವಳಿಕೆ…
ಲೇಖಕ: admin
ಕೊಡ್ಲಿಪೇಟೆ ಮೇ 20 : ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಹಾಗೂ ಮದರಸ ಪಬ್ಲಿಕ್ ಪರೀಕ್ಷೆಯಲ್ಲಿ ಜಮಾಅತ್ ವ್ಯಾಪ್ತಿಯಲ್ಲಿ ಅತ್ಯುತ್ತಮ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಸ್ಕೆಎಸ್ಎಸ್ಎಫ್ ಹಾಗೂ ಎಸ್ವೈಎಸ್ ಕೊಡ್ಲಿಪೇಟೆ ಶಾಖೆಯ ವತಿಯಿಂದ ಬಹುಮಾನ ವಿತರಿಸಲಾಯಿತು. ಕೊಡ್ಲಿಪೇಟೆ ಸಮೀಪದ ನೂರ್ ಮಹಲ್ ನಲ್ಲಿ ಆಯೋಜಿಸಿದ ಮಾಸಿಕ ಮಜ್ಲಿಸುನ್ನೂರ್ ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಫಾತಿಮತ್ ಸಫ್ನಾ ಪ್ರಥಮ ಹಾಗೂ ಸನಾ ದ್ವಿತೀಯ ಮತ್ತು ದ್ವಿತೀಯ ಪಿಯುಸಿ ಯಲ್ಲಿ ವಿಜ್ಞಾನ ವಿಭಾಗದಲ್ಲಿ ಸಫಾ ಹಾಗೂ ಕಲಾ ವಿಭಾಗದಲ್ಲಿ ನಫೀಸತ್ ನಾಫಿಯಾ ಅವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ತಜಲ್ಲಿಯಾತ್ ಮದರಸ ಮುಖ್ಯೋಪಾಧ್ಯಾಯ ರಝಾಕ್ ಫೈಝಿ, ಸಮದ್ ಫೈಝಿ, ಮಸ್ಜಿದುನ್ನೂರ್ ಅಧ್ಯಕ್ಷ ಸುಲೈಮಾನ್, ಪ್ರಧಾನ ಕಾರ್ಯದರ್ಶಿ ಹಾಗೂ ಗ್ರಾ.ಪಂ ಸದಸ್ಯ ಹನೀಫ್, ಎಸ್ಕೆಎಸ್ಎಸ್ಎಫ್ ಕೊಡಗು ಜಿಲ್ಲಾ ಕೋಶಾಧಿಕಾರಿ ಸಿದ್ದೀಕ್ ಹಾಜಿ, ಎಸ್ವೈಎಸ್ ಕೊಡ್ಲಿಪೇಟೆ ಶಾಖಾಧ್ಯಕ್ಷ ಇಬ್ರಾಹಿಂ, ಎಸ್ಕೆಎಸ್ಎಸ್ಎಫ್ ಅಧ್ಯಕ್ಷ ಬಾಸಿತ್ ಹಾಜಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಝಹೀರ್ ನಿಝಾಮಿ ನಿರೂಪಿಸಿದರು.
ಮಡಿಕೇರಿ ಮೇ 20 : ಬೆಂಗಳೂರಿನ ಕೈವಲ್ಯ ಕಲಾ ಕೇಂದ್ರದಿಂದ ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಇಂದು (ಮೇ 20) ರಂದು ಮಾಧವಿ ಕನ್ನಡ ನಾಟಕ ಪ್ರದರ್ಶನ ನಡೆಯಲಿದೆ. ಸಂಜೆ 7 ಗಂಟೆಯಿಂದ 65 ನಿಮಿಷಗಳ ಕಾಲ ನಡೆಯಲಿರುವ ನಾಟಕವನ್ನು ಸುಧಾ ಅಡುಕಳ ಇವರು ರಚಿಸಿದ್ದು ಡಾ ಶ್ರೀಪಾದ ಭಟ್ಟ್ ನಿರ್ದೇಸಿರುತ್ತಾರೆ. ಈ ನಾಟಕದಲ್ಲಿ ಇಬ್ಬರು ಕಲವಿದರಾದ ಮಾಚಂಗಡ ಶರತ್ ಬೋಪಣ್ಣ ಮತ್ತು ದಿವ್ಯಶ್ರೀ ನಾಯಕ್ ಸುಳ್ಯ ಅಭಿನಯಿಸಿದ್ದಾರೆ. ಬೆಳಕು ಮತ್ತು ನಾಟಕದ ಸಹ ನಿರ್ದೇಶನವನ್ನು ಗಣೇಶ್. ಎಮ್. ಭೀಮನಕೋಣೆ ನಿರ್ವಹಿಸಿದ್ದಾರೆ. “ಹಾಡುತ್ತದೆ ಪಂಜರದ ಹಕ್ಕಿ ಭಯ ಕಂಪಿತ ದನಿಯಲ್ಲಿ ತಿಳಿಯದ ಲೋಕದ ಬಗೆಗೆ ಹಂಬಲಿಸುವ ಲೋಕದ ಬಗೆಗೆ, ಕೇಳುತ್ತದೆ ಅದರ ದನಿ ದೂರದ ಬೆಟ್ಟಕ್ಕೆ ಯಾಕೆಂದರೆ ಅದರ ಹಾಡು ಬಿಡುಗಡೆಯ ಪಾಡು” ಜ.ನ.ತೇಜಶ್ರೀ ಅನುವಾದಿಸಿದ ಮಾಯಾ ಏಂಜಲೋ ಅವರ ಕವನದ ಸಾಲುಗಳಿವು. ಬಿಡುಗಡೆಯ ಪಾಡನ್ನು ಹಾಡುವ ಯಾರದೇ ದನಿಯಿರಲಿ ಅದು ದೂರದ ಬೆಟ್ಟಕ್ಕೂ ಕೇಳಿಸಲೇ ಬೇಕು.…
ಕಡಂಗ ಮೇ 20 : ಕಳೆದ ವಾರ ಸುರಿದ ಬಾರಿ ಗಾಳಿ ಮಳೆಯಿಂದ ಕಾಕೋಟು ಪರಂಬು ಗ್ರಾ.ಪಂ ವ್ಯಾಪ್ತಿಯ ಕಲ್ಲು ಮೊಟ್ಟೆ ವಿರಾಜಪೇಟೆ ಕಡಂಗ ಮುಖ್ಯ ರಸ್ತೆಯಲ್ಲಿ ಬಿದ್ದಿದ್ದ ಭಾರೀ ಗಾತ್ರದ ಮರದ ತಂಡುಗಳು ರಸ್ತೆಬದಿಯಲ್ಲಿ ಬಿದ್ದಿದ್ದು, ವಾಹನ ಸವಾರರಿಗೆ ತೊಂದರೆ ಉಂಟಾಗಿತ್ತು. ಇದನ್ನು ಮನಗಂಡ ಕಡಂಗ ಎಸ್ ವೈ ಎಸ್, ಎಸ್ ಕೆ ಎಸ್ ಎಸ್ ಎಫ್ ಸದಸ್ಯರು ಅಲ್ಲಿದ್ದ ಮರಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವುಮಾಡಿಕೊಟ್ಟರು. ಮತಗಳ ತುಂಡುಗಳ ತೆರವಿಗೆ ಸಂಬಂಧಪಟ್ಟ ಅಧಿಕಾರಿಗಳೂ ಮತ್ತು ಕಾಕೊಟು ಗ್ರಾ.ಪಂ ಮಾಹಿತಿ ನೀಡಿದರೂ ಯಾವುದೇ ಸ್ಪಂದನೆ ದೊರೆಯದ ಕಾರಣ ಕಡಂಗ ಎಸ್ ವೈ ಎಸ್, ಎಸ್ ಕೆ ಎಸ್ ಎಸ್ ಎಫ್ ಸದಸ್ಯರೇ ತೆರವುಗೊಳಿಸಿರು. ಇವರ ಈ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಸದಸ್ಯರಾದ ಜಮಾತ್ ಅಧ್ಯಕ್ಷ ಅಬ್ದುಲ್ಲ ಝಕರಿಯ, ಇರ್ಶಾದ್ ಇಸಾಕ್, ಸಿಯಬ್ ,ಸಿದ್ದಿಕ್, ರಜಾಕ್ ಹಾರಿಸ್ ಮುಂತಾದವರು ಹಾಜರಿದ್ದರು. ವರದಿ : ನೌಫಲ್ ಕಡಂಗ
ನಾಪೋಕ್ಲು ಮೇ 20 : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕ್ರೀಡಾ ಅಕಾಡೆಮಿ ವತಿಯಿಂದ ಆಯೋಜಿಸಲಾದ 23ನೇ ವರ್ಷದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲಾ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಭಾರ ಪ್ರಾಂಶುಪಾಲೆ ಡಾ. ಅವನಿಜ ಸೋಮಯ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅಕಾಡೆಮಿಯ ಅಧ್ಯಕ್ಷ ಕಲಿಯಂಡ ಸಾಬು ಅಯ್ಯಣ್ಣ, ಈ ವರ್ಷದ ಬೇಸಿಗೆ ಶಿಬಿರದ ತರಬೇತಿಯಲ್ಲಿ 80 ಮಕ್ಕಳು ಭಾಗವಹಿಸಿದ್ದು, ಸುಮಾರು ಒಂದು ತಿಂಗಳಕಾಲ ಹಾಕಿ ಸೇರಿದಂತೆ ವಿವಿಧ ಕ್ರೀಡೆ ಹಾಗೂ ಇನ್ನಿತರ ಚಟುವಟಿಕೆಗಳ ತರಬೇತಿಯನ್ನು ಶಿಬಿರಾರ್ಥಿಗಳಿಗೆ ನೀಡಲಾಗಿದೆ. ಶಿಬಿರಲ್ಲಿ ಭಾಗವಹಿಸುವುದರಿಂದ ಮಕ್ಕಳ ಮುಂದಿನ ಭವಿಷ್ಯ ಉಜ್ವಲವಾಗಲಿದೆ. ನಮ್ಮಲ್ಲಿ ಈ ಹಿಂದೆ ತರಬೇತಿ ಪಡೆದ ಅನೇಕ ಶಿಬಿರಾರ್ಥಿಗಳು ಉತ್ತಮ ಸ್ಥಾನ ಮಾನವನ್ನು ಅಲಂಕರಿಸಿದ್ದು, ಅಕಾಡೆಮಿಗೆ ಗೌರವ ತಂದಂತಾಗಿದೆ ಎಂದರು. ನಾಪೋಕ್ಲು ಲಯನ್ಸ್ ಕ್ಲಬ್ ಅಧ್ಯಕ್ಷ ಕುಂದ್ಯೋಳಂಡ ಗಣೇಶ್ ಮುತ್ತಪ್ಪ ಮಾತನಾಡಿ, ಮಕ್ಕಳು ಜೀವನದಲ್ಲಿ ಸದ್ಗುಣಗಳನ್ನು ಮೈಗೂಡಿಸಿಕೊಂಡು ಉತ್ತಮ ಪ್ರಜೆಯಾಗಿ…
ಚೆಯ್ಯಂಡಾಣೆ ಮೇ 19 : ವಿರಾಜಪೇಟೆ ವ್ಯಾಪ್ತಿಯ ಗುತ್ತಿಗೆದಾರರ ಸ್ನೇಹ ಸಮ್ಮಿಲನ ಕಾರ್ಯಕ್ರಮ ಕದನೂರು ವೇ ಬ್ರಿಡ್ಜ್ ಸಮೀಪದ ಎಸಿಸಿ ಕಟ್ಟಡದಲ್ಲಿ ನಡೆಯತು. ಕಾರ್ಯಕ್ರಮದಲ್ಲಿ ಎಸಿಸಿ ಸಂಸ್ಥೆಯ ಕೊಡಗು ಹಾಗೂ ಹಾಸನ ತಾಂತ್ರಿಕ ಅಧಿಕಾರಿ ಯೋಗಾನಂದ್ ಮಾತನಾಡಿ, ಇಂಡಿಯಾದಲ್ಲಿ ಪ್ರಥಮ ಸಿಮೆಂಟ್ ಕಂಪನಿ ಎಸಿಸಿ, ಸಿಮೆಂಟ್ ಬಳಕೆ ಬಗ್ಗೆ ಗ್ರಾಹಕರಿಗೆ ಹಾಗೂ ಗುತ್ತಿಗೆದಾರರಿಗೆ ಸಮಗ್ರ ಮಾಹಿತಿ ನೀಡಿ, ಸಿಮೆಂಟ್ ಯಾವ ರೀತಿಯಲ್ಲಿ ಉಪಯೋಗಿಸಬೇಕು, ಸಿಮೆಂಟ್ ನಲ್ಲಿ ಯಾವುದೆಲ್ಲ ಮಿಶ್ರಣ ಉಪಯೋಗಿಸುತ್ತಾರೆಂದು ಮಾಹಿತಿ ನೀಡಿದರು. ಕೊಡಗಿನಲ್ಲಿ ಅತೀ ಹೆಚ್ಚು ಸಿಮೆಂಟ್ ಖರೀದಿಸಿ ಅದನ್ನು ಗ್ರಾಹಕರಿಗೆ ತಲುಪಿಸಿ ನಂಬರ್ ಒನ್ ಡೀಲರ್ ಆಗಿ ಆಯ್ಕೆಯಾದ ಶಹಲಾ ಹಾರ್ಡ್ ವೆರ್ ಮಾಲೀಕ, ಮಾಜಿ ಸೈನಿಕ ಸಲಾಂ ಅವರಿಗೆ ಬುಲ್ಲೆಟ್ ಎನ್ ಫಿಲ್ಡ್ ಮೋಟಾರ್ ಬೈಕ್ ಅನ್ನು ಅದಾನಿ ಎಸಿಸಿ ಸಂಸ್ಥೆಯ ಮೈಸೂರು ವಲಯ ಅಧಿಕಾರಿ ಝಕೀ ಮುಹಮ್ಮದ್ ಅವರು ಕೀ ನೀಡುವುದರ ಮೂಲಕ ಹಸ್ತಾಂತರಿಸಿದರು. ಈ ಸಂದರ್ಭ ಎಸಿಸಿ ಕೊಡಗು ಜಿಲ್ಲಾ ಅಧಿಕಾರಿ ಶೋಭಿತ್, ಕೊಡಗು…
ಮಡಿಕೇರಿ ಮೇ 19 : ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರದಲ್ಲಿ ನೂತನವಾಗಿ ಆಯ್ಕೆಯಾಗಿರುವ ಇಬ್ಬರು ಶಾಸಕರು ಬಡವರಿಗೆ ನಿವೇಶನ ನೀಡಲು ಕ್ರಮ ಕೈಗೊಳ್ಳಬೇಕೆಂದು ಮಡಿಕೇರಿ ನಗರಸಭಾ ಸದಸ್ಯ ಎಂ.ಕೆ.ಮನ್ಸೂರ್ ಆಲಿ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇಬ್ಬರು ಶಾಸಕರಿಗೆ ಅಭಿನಂದನೆ ಸಲ್ಲಿಸುವುದರೊಂದಿಗೆ ಅಭಿವೃದ್ಧಿಪರ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ಕಳೆದ 30 ವರ್ಷಗಳಿಂದ ಜಿಲ್ಲೆಯಾದ್ಯಂತ ನಿವೇಶನ ರಹಿತರಿಗೆ ನಿವೇಶನ ನೀಡುವ ಮತ್ತು ಸ್ವಂತ ಸೂರು ಕಲ್ಪಿಸುವ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿಲ್ಲ. ಬೃಹತ್ ಪ್ರಮಾಣದ ಸರ್ಕಾರಿ ಭೂಮಿಯನ್ನು ಗುರುತಿಸಿ ನಿವೇಶನ ಹಂಚಿಕೆ ಮಾಡುವ ಕಾರ್ಯಕ್ಕೆ ಇಬ್ಬರು ನೂತನ ಶಾಸಕರು ನಾಂದಿ ಹಾಡಬೇಕೆಂದು ಆಗ್ರಹಿಸಿದ್ದಾರೆ. ಮಡಿಕೇರಿ ನಗರಸಭಾ ಕಚೇರಿಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕೊರತೆ ಇದೆ. ಇದರಿಂದ ಸಾರ್ವಜನಿಕರ ಕೆಲಸಗಳು ವಿಳಂಬವಾಗುತ್ತಿದೆ. ತಕ್ಷಣ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಈ ಕ್ಷೇತ್ರದ ಶಾಸಕರು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ…
ಮಡಿಕೇರಿ ಮೇ 19 : ಜನ ವಿರೋಧಿ ಆಡಳಿತವನ್ನು ನೀಡಿ ಭಾವನಾತ್ಮಕ ವಿಚಾರಗಳನ್ನು ಮುನ್ನಲೆಗೆ ತಂದು ಜನರ ಗಮನವನ್ನು ಬೇರೆಡೆ ಸೆಳೆದು ರಾಜಕಾರಣ ಮಾಡುತ್ತಿದ್ದ ಬಿಜೆಪಿ ಪಕ್ಷಕ್ಕೆ ಮತದಾರರು ಈ ಬಾರಿ ಸರಿಯಾದ ಪಾಠವನ್ನು ಕಲಿಸಿದ್ದಾರೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕಲೀಲ್ ಬಾಷಾ ಹಾಗೂ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಬ್ದುಲ್ ರಜಾಕ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಉತ್ತಮ ಸಮಾಜ ನಿರ್ಮಾಣಕ್ಕಾಗಿ ಮತದಾರರು ಈ ಬಾರಿ ವಿದ್ಯಾವಂತ ಅಭ್ಯರ್ಥಿಗಳಾದ ಡಾ.ಮಂತರ್ ಗೌಡ ಹಾಗೂ ಪೊನ್ನಣ್ಣ ಅವರನ್ನು ಆಯ್ಕೆ ಮಾಡಿದ್ದಾರೆ. ನೂತನ ಶಾಸಕ ಮಂತರ್ ಗೌಡ ಅವರು ಅಭಿವೃದ್ಧಿಯ ಕುರಿತು ತಮ್ಮದೇ ಆದ ಯೋಚನೆ ಮತ್ತು ಯೋಜನೆಯನ್ನು ಹೊಂದಿದ್ದಾರೆ. ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತದoತೆ ಸರ್ವರನ್ನು ಒಂದಾಗಿ ಕಾಣುವ ಮನೋಭಾವದೊಂದಿಗೆ ಸಮಾಜವನ್ನು ಒಗ್ಗಟ್ಟಾಗಿ ಮುನ್ನಡೆಸಬಲ್ಲ ಶಕ್ತಿ ಮತ್ತು ಸಾಮರ್ಥ್ಯ ಇವರಿಗೆ ಎಂದು ಹೇಳಿದ್ದಾರೆ. ಈ ಬಾರಿ ಮಡಿಕೇರಿ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯ…
ಮಡಿಕೇರಿ ಮೇ 19 : ರೋಟರಿ ಮಡಿಕೇರಿ ವತಿಯಿಂದ ಜಲಸಿರಿ ಯೋಜನೆಯಡಿ ಪಾರಾಣೆ ಪ್ರೌಢಶಾಲೆಗೆ ರೂ.50 ಸಾವಿರ ಮೌಲ್ಯದ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೊಡುಗೆಯಾಗಿ ನೀಡಲಾಯಿತು. ರೋಟರಿ ಮಡಿಕೇರಿ ಅಧ್ಯಕ್ಷ ಕೆ.ಸಿ.ಕಾರ್ಯಪ್ಪ, ಸಹಾಯಕ ಗವರ್ನರ್ ರತನ್ ತಮ್ಮಯ್ಯ, ರೋಟರಿಯನ್ಗಳಾದ ಎಂ.ಎo.ಕಾರ್ಯಪ್ಪ, ಸುರೇಶ್ ಚೆಂಗಪ್ಪ, ಪ್ರಾಂಶುಪಾಲರಾದ ರಜನಿ ಹಾಗೂ ಸಿಬ್ಬಂದಿಗಳು ಈ ಸಂದರ್ಭ ಉಪಸ್ಥಿತರಿದ್ದರು.
ಮಡಿಕೇರಿ ಮೇ 19 : ಕೊಡಗು ಜಿಲ್ಲಾ ಪಂಚಾಯಿತಿಯ 5 ತಾಲೂಕು ಪಂಚಾಯಿತಿಗಳಲ್ಲಿ ಗ್ರಾಮ ಪಂಚಾಯತ್ಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಮಳಿಗೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪ್ಲಾಸ್ಟಿಕ್ ಬಳಕೆ ಮಾಡುತಿದ್ದ ವಾಣಿಜ್ಯ ಮಳಿಗೆಗಳಿಂದ ಪ್ಲಾಸ್ಟಿಕ್ ವಶಪಡಿಸಿಕೊಂಡು ದಂಡ ವಿಧಿಸಲಾಗಿದೆ. ಪ್ಲಾಸ್ಟಿಕ್ ಅನಾಹುತದ ಕುರಿತು ಮುಂದಿನ ದಿನಗಳಲ್ಲಿ ವಾಣಿಜ್ಯ ಮಳಿಗೆಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ಗಳನ್ನು ಸಂಪೂರ್ಣವಾಗಿ ನಿಷೇಧ ಮಾಡಿ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ಗ್ರಾಹಕರಿಗೆ ಈ ಕುರಿತು ಜಾಗೃತಿ ಮೂಡಿಸಲಾಯಿತು. ಪ್ಲಾಸ್ಟಿಕ್ ಬಳಕೆಯನ್ನು ಮಾಡಿದ್ದಲ್ಲಿ ದಂಡದ ಮೊತ್ತ ದುಪ್ಪಟ್ಟು ಆಗುವ ಬಗ್ಗೆ ತಿಳಿಸಿ, ಈ ಬಗ್ಗೆ ಗ್ರಾ.ಪಂ ಗಳಲ್ಲಿ ವ್ಯಾಪಕ ಜಾಗೃತಿ ನೀಡಲು ಕ್ರಮವಹಿಸಲಾಗಿದೆ ಎಂದು ಸ್ವಚ್ಛ ಭಾರತ ಅಭಿಯಾನದ ಜಿಲ್ಲಾ ನೋಡಲ್ ಅಧಿಕಾರಿ ಜಗದೀಶ್ ತಿಳಿಸಿದ್ದಾರೆ.






