ಲೇಖಕ: admin

ಮಡಿಕೇರಿ ಡಿ.12 NEWS DESK : ಕೊಡಗು ಜಿಲ್ಲೆಯ ಪ್ರಸಿದ್ಧ ಕೇಂದ್ರವಾದ ಮೇಕೇರಿ ಮಸೀದಿಯ ಮಖಾಂ ಉರೂಸ್ ಸಮಾರಂಭವು 2026 ಏ.24 ರಿಂದ 28ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮೇಕೇರಿಯ ಕಿಜರ್ ಜುಮ್ಮಾ ಮಸೀದಿ ಮತ್ತು ಮನವಿರುಲ್ ಇಸ್ಲಾಂ ಅರಬ್ಬಿ ಮದರಸದ ಪ್ರಧಾನ ಕಾರ್ಯದರ್ಶಿ ಎಂ.ಎಲ್.ರಹೀಮ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.    

Read More

ಮಡಿಕೇರಿ ಡಿ.12 NEWS DESK : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ತಂಬಾಕು ಮುಕ್ತ ಯುವ ಅಭಿಯಾನದ ಸಮಾರೋಪ ಸಮಾರಂಭವು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನಲ್ಲಿ ನಡೆಯಿತು.  ಕಾರ್ಯಕ್ರಮವನ್ನು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಬಿ.ಎಲ್.ಶ್ರೀನಿವಾಸ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಥಮ ದರ್ಜೆ ವಿದ್ಯಾರ್ಥಿಗಳಿಗೆ ತಂಬಾಕು ಮುಕ್ತ ಯುವ ಅಭಿಯಾನ ವಿಷಯದ ಕುರಿತು ಉಪನ್ಯಾಸ ನೀಡಿದರು. ಅಧ್ಯಕ್ಷತೆಯನ್ನು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇ.ಡಾ.ರಾಘವ್ ಬಿ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಎಫ್‍ಎಂಸಿ ಕಾಲೇಜು ಎನ್‍ಎಸ್‍ಎಸ್ ಘಟಕಾಧಿಕಾರಿ ಡಾ.ಶೈಲಾ ಅವರು ಮಾತನಾಡಿದರು.   ಕಾರ್ಯಕ್ರಮದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಪುನೀತ ರಾಣಿ ಎಸ್. ಹಾಗೂ ಎನ್.ಎಸ್.ಎಸ್ ಅಧಿಕಾರಿ ಅಲೋಕ್ ಬಿಜೈ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಸಿಬ್ಬಂದಿಗಳು ಹಾಗೂ ಎಫ್.ಎಂ.ಸಿ. ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ತಾಲ್ಲೂಕು ಹಿರಿಯ…

Read More

ಮಡಿಕೇರಿ ಡಿ.12 NEWS DESK : ನಗರದ ಸ್ಪೈಸಸ್ ಅಂಗಡಿಯೊಂದರಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಅವಹೇಳನ ಮಾಡುವ ವಿಡಿಯೋವನ್ನು ಚಿತ್ರೀಕರಿಸಿ ವೈರಲ್ ಮಾಡಿರುವ ಪ್ರಕರಣ ವ್ಯಾಪಾರಿ ಕ್ಷೇತ್ರದ ಗೌರವಕ್ಕೆ ದಕ್ಕೆ ಉಂಟು ಮಾಡಿದೆ. ಈ ರೀತಿಯ ಪ್ರಕರಣಗಳು ಮುಂದೆ ನಡೆಯದಂತೆ ವರ್ತಕ ಸಮುದಾಯ ಎಚ್ಚರದಿಂದಿರಬೇಕು ಮತ್ತು ಸಿಬ್ಬಂದಿಗಳ ಮೇಲೆ ನಿಗಾ ವಹಿಸಬೇಕು ಎಂದು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ನ ನಿರ್ದೇಶಕ ಎಂ.ಧನಂಜಯ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಧಾನಮಂತ್ರಿಗಳನ್ನು ಅವಹೇಳನ ಮಾಡಿರುವ ಪ್ರಕರಣ ರಾಜ್ಯವ್ಯಾಪಿ ಟೀಕೆಗೆ ಗುರಿಯಾಗಿದ್ದು, ವರ್ತಕ ಸಮುದಾಯ ತಲೆ ತಗ್ಗಿಸುವಂತ್ತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಪ್ರಜ್ಞಾವಂತರ ಜಿಲ್ಲೆ ಕೊಡಗಿನ ವರ್ತಕರು ಪ್ರವಾಸೋದ್ಯಮವನ್ನೇ ನಂಬಿ ಬದುಕು ಸಾಗಿಸುತ್ತಿದ್ದಾರೆ. ಕಾನೂನಿಗೆ ವಿರುದ್ಧವಾದ ಈ ರೀತಿಯ ಚಟುವಟಿಕೆಗಳಿಂದ ವ್ಯಾಪಾರೋದ್ಯಮಕ್ಕೂ ಹೊಡೆತ ಬೀಳಲಿದೆ. ನಗರದ ವರ್ತಕರು ಹಾಗೂ ಅಂಗಡಿ ಮಳಿಗೆಗಳ ಮಾಲೀಕರು ತಮ್ಮ ಬಳಿ ಕಾರ್ಯನಿರ್ವಹಿಸುತ್ತಿರುವವರ ಬಗ್ಗೆ ಗಮನ ಹರಿಸಬೇಕು. ಈ ರೀತಿಯ ನಿಯಮಬಾಹಿರ ವರ್ತನೆಗಳಿಗೆ…

Read More

ವಿರಾಜಪೇಟೆ ಡಿ.12 NEWS DESK  : ವಿರಾಜಪೇಟೆಯ ಕಾವೇರಿ ಕಾಲೇಜಿನಲ್ಲಿ ನಡೆದ ಕಾವೇರಿ ಕಲೋತ್ಸವದ ಕ್ರೀಡಾ ಸ್ಪರ್ಧೆಯಲ್ಲಿ ವಿರಾಜಪೇಟೆ ಕಾವೇರಿ ಶಾಲೆಯ ಪ್ರೌಢಶಾಲಾ ವಿಭಾಗದ ಬಾಲಕಿಯರು, ಥ್ರೋಬಾಲ್ ಪಂದ್ಯಾವಳಿಯಲ್ಲಿ ಸ್ಪರ್ಧಿಸಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಈ ತಂಡದಲ್ಲಿ ಸ್ಪರ್ಧಿಸಿದ ಆಟಗಾರ್ತಿಯರು 10ನೇ ತರಗತಿಯ ಮುಲ್ಲೆಂಗಡ ಪೂರ್ವಿಕ ಪೂವಮ್ಮ, ನೀಲಮಾಡ್,  ತನ್ಯ ರೈ ಬಿ.ಎಸ್ ,ಹನಾಫಲಕ್ ಎಸ್.ಎಂ.ಕುಟ್ಟನ ಯಶ್ಮಿತ, ಪಳೆಯಂಡ ಕಾಜಲ್ ಪಿ.ಎಸ್, 9ನೇ ತರಗತಿಯ ಚೇಂದಿರ ದರಾನಿಯತ ಸ್ಲಿನ್ಟಿ ಜೆ, ನೆಲ್ಲಚಂಡ ಪೊನ್ನಮ್ಮ ಎನ್, ಗುಡ್ಡಂಡ ಮಾನ್ವಿಮುತ್ತಮ್ಮ, ಬೊವ್ವೇರಿಯಂಡ ಹನ್ಸಿಕ ಪೊನ್ನಪ್ಪ ಹಾಗೂ 8ನೇ ತರಗತಿಯ ನಾಯಕಂಡ ಮಾನ್ಯ ಎನ್.ಬಿ,ಹೋಲಿಕ ಪಿ.ಇವರಿಗೆ ಶಾಲಾ ದೈಹಿಕ ಶಿಕ್ಷಕಿಯರುಗಳಾದ ಮೋನಿಕಾ ಹಾಗೂ ಲಾವಣ್ಯ ಮಾರ್ಗದರ್ಶನ ನೀಡಿರುತ್ತಾರೆ. ಇವರ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು ಹಾಗೂ ಬೋಧಕ-ಬೋದಕೇತರ ವೃಂದದವರು, ವಿದ್ಯಾರ್ಥಿಗಳ ಪೋಕಷರು ಅಭಿನಂದಿಸಿದ್ದಾರೆ.

Read More

ನಾಪೋಕ್ಲು ಡಿ.12 NEWS DESK : ರಾಜ್ಯ ಮಟ್ಟದ ರಿಲೆಯಲ್ಲಿ ಡಿ.ಕೆ.ಭವಿಷ್ಯ ಸ್ಪರ್ಧಿಸಿ ಪ್ರಥಮ ಸ್ಥಾನ ಪಡೆಯುವ ಮೂಲಕ ಲಕ್ಕೋದಲ್ಲಿ ನಡೆಯಲಿರುವ 69ನೇ ರಾಷ್ಟ್ರ ಮಟ್ಟದ 4*400 ರಿಲೆ ಆಯ್ಕೆಯಾಗಿದ್ದಾಳೆ. ಡಿ.ಕೆ.ಭವಿಷ್ಯ ದೇರಾಜೆ ಕಿರಣ್ ಹಾಗೂ ಗೀತಾ ದಂಪತಿಗಳ ಪುತ್ರಿ. ವರದಿ : ದುಗ್ಗಳ ಸದಾನಂದ.

Read More

ಮಡಿಕೇರಿ, ಡಿ.12 NEWS DESK : ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ, ಶಾಲಾ ಶಿಕ್ಷಣ ಇಲಾಖೆಯ ಪದವಿ ಪೂರ್ವ ವಿಭಾಗ, ಉಡುಪಿಯ ಪೂರ್ಣಪ್ರಜ್ಞ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ, ಡಿ.9 ರಂದು ಉಡುಪಿಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ, ವಿಜೇತರಾದ ಕೊಡಗು ಜಿಲ್ಲೆಯ ಎಂಟು ಮಂದಿ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗಳಿಗೆ ಆಯ್ಕೆಯಾಗಿದ್ದಾರೆ. ವಿಭಾಗ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಅರ್ವತ್ತೊಕ್ಲಿನ ವಿದ್ಯಾನಿಕೇತನ ಪ.ಪೂ. ಕಾಲೇಜು ಪ್ರಥಮ ಪಿಯುಸಿಯ ಎಂ.ಹರಿಕೃಷ್ಣನ್ ಪ್ರಥಮ ಸ್ಥಾನ ಗಳಿಸಿದ್ದಾನೆ. ಈತ ಚಿಣ್ಣಪ್ಪ- ಶೋಭಾ ದಂಪತಿಯ ಪುತ್ರ. ಇದೇ ಕಾಲೇಜಿನ ಗುಡ್ಡಾಂಡ ಕಾರ್ಯಪ್ಪ ದ್ವಿತೀಯ ಪಿ.ಯು.ಸಿ. ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾನೆ. ಕಾರ್ಯಪ್ಪ, ಮನೋಹರನ್ – ಶ್ರೀದೇವಿ ದಂಪತಿಯ ಪುತ್ರ. ಚರ್ಚಾ ಸ್ಪರ್ಧೆ ಸ್ಪರ್ಧೆಯಲ್ಲಿ ಪೊನ್ನಂಪೇಟೆ ಸಿಐಟಿಯು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪುಗ್ಗೇರ ಕ್ಷಮಾ ಕಾವೇರಮ್ಮ ದ್ವಿತೀಯ ಸ್ಥಾನ ಪಡೆದಿದ್ದಾರೆ. ಈಕೆ ಕಿಶನ್ ಪೂವಣ್ಣ – ದಿವ್ಯ ದಂಪತಿಯ ಪುತ್ರಿ. ಜನಪದ ನೃತ್ಯ ವಿಭಾಗದಲ್ಲಿ ಮಡಿಕೇರಿ…

Read More

ನಾಪೋಕ್ಲು ಡಿ.15 NEWS DESK : ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಡಿ.15 ರಂದು ಅರೆ ಭಾಷೆ ದಿನಾಚರಣೆ ಮೂರ್ನಾಡಿನ ಗೌಡ ಸಮಾಜದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ವಹಿಸಲಿದ್ದು, ಕಾರ್ಯಕ್ರಮವನ್ನು ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೊಲ್ಯದ ಗಿರೀಶ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೂರ್ನಾಡು ಗೌಡ ಸಮಾಜದ ಅಧ್ಯಕ್ಷ ಪಾಣತ್ತಲೆ ಟಿ.ಹರೀಶ್, ಮೂರ್ನಾಡು ಗೌಡ ಸಮಾಜದ ಮಾಜಿ ಅಧ್ಯಕ್ಷ ಚೆಟ್ಟಿಮಾಡ ಟಿ.ಕಾರ್ಯಪ್ಪ, ಕೊಡಗು ಗೌಡ ವಿದ್ಯಾಸಂಘದ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ ಪಾಲ್ಗೊಳ್ಳಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಕೊಡಗು ಗೌಡ ಸಮಾಜಗಳ ಒಕ್ಕೂಟದ ಮಾಜಿ ಅಧ್ಯಕ್ಷ ಸೂರ್ತಲೆ ಸೋಮಣ್ಣ ಪಾಲ್ಗೊಳ್ಳಲಿದ್ದು, ಅರೆ ಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಭಿವೃದ್ಧಿಗೆ ನಮ್ಮ ಹಿರಿಯರ ಕೊಡುಗೆ ಎಂಬ ವಿಷಯದ ಬಗ್ಗೆ ಪ್ರಬಂಧ ಮಂಡಿಸಲಿದ್ದಾರೆ. ಕೊಡಗು ಗೌಡ ನಿವೃತ್ತ ನೌಕರರ ಸಂಘದ…

Read More

ನಾಪೋಕ್ಲು ಡಿ.12 NEWS DESK : ಚೇರಂಬಾಣೆ ಗ್ರಾಮ ಪಂಚಾಯಿತಿಯ ಕೋಪಟ್ಟಿ ಗ್ರಾಮದ ನಿವಾಸಿ ದಾಯನ ಶಿವಾಜಿ (75) ವಯೊಸಹಜವಾಗಿ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗೃಹದಲ್ಲಿ ಜರುಗಲಿದೆ. ಮೃತರು ತಾಯಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ದಾಯನ ಶಿವಾಜಿ ಅವರು ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ.

Read More

ವಿರಾಜಪೇಟೆ ಡಿ.12 NEWS DESK : ವಿರಾಜಪೇಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐ.ಕ್ಯೂ.ಎ.ಸಿ. ಘಟಕ, ಮಾನವ ಹಕ್ಕುಗಳ ಸಮಿತಿ ಹಾಗೂ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಅಂತರಾಷ್ಟ್ರೀಯ ಮಾನವ ಹಕ್ಕುಗಳ ದಿನವನ್ನು ಆಚರಿಸಲಾಯಿತು. ದಿನದ ಅಂಗವಾಗಿ ಪ್ರಾಂಶುಪಾಲರಾದ ಪ್ರೊ.ಸರಸ್ವತಿ ಡಿ.ಕೆ.ಯವರು, ವಿದ್ಯಾರ್ಥಿಗಳಿಗೆ ಮಾನವ ಹಕ್ಕುಗಳ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಕಾಲೇಜಿನ ಐ.ಕ್ಯೂ.ಎ.ಸಿ. ಸಂಚಾಲಕರಾದ ಪ್ರೊ.ಬಸವರಾಜು ಕೆ, ಮಾನವ ಹಕ್ಕುಗಳ ಸಮಿತಿಯ ಸಂಚಾಲಕರು ಮತ್ತು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ದಿವ್ಯ ಎಂ.ಬಿ., ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ಮಧುರಾ ವಿ.ಆರ್, ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರು ಗ್ರಂಥಾಲಯ ವಿಭಾಗದ ಡಾ.ರೂಪಾ, ಇ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ದಮಯಂತಿ ಪಿ.ಟಿ.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Read More

ವಿರಾಜಪೇಟೆ ಡಿ.12 NEWS DESK : ರಕ್ತದಾನ ಮಾಡುವುದು ಜೀವ ಉಳಿಸುವ ಪ್ರಕ್ರಿಯೆಯಾಗಿದೆ. ಅದ್ದರಿಂದ ಅರ್ಹರು ರಕ್ತದಾನ ಮಾಡಿ, ಜೀವ ಉಳಿಸಿ ಎಂದು ನಗರ ವರ್ತಕರ ಸಂಘದ ಅಧ್ಯಕ್ಷ, ಜೆಡಿಎಸ್ ಪಕ್ಷದ ತಾಲ್ಲೂಕು ಅಧ್ಯಕ್ಷ ಪಿ.ಎ.ಮಂಜುನಾಥ್ ಹೇಳಿದರು. ವಿರಾಜಪೇಟೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿ ಬಳಗದ ವತಿಯಿಂದ ಸಾಲುಮರದ ತಿಮ್ಮಕ್ಕ ಅವರ ಸ್ಮರಾಣಾರ್ಥ ವಿರಾಜಪೇಟೆಯ ಪುರಸಭೆ ಸಭಾಂಗಣದಲ್ಲಿ ನಡೆದ ರಕ್ತದಾನ ಶಿಬಿರವನ್ನು ಉದ್ದೇಶಿಸಿ ಮಾತನಾಡಿದ ಮಂಜುನಾಥ್ ಅವರು, ಸಾಲುಮರದ ತಿಮ್ಮಕ್ಕ ಅವರು ಮರಗಿಡಗಳನ್ನು ತನ್ನ ಮಕ್ಕಳಂತೆ ಸಲುಹಿದ ಮಹಾತಾಯಿ. ಅವರ ಸ್ಮರಾಣಾರ್ಥ ರಕ್ತದಾನ ಶಿಬಿರ ಆಯೋಜನೆ ಮಾಡಿ, ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಯೋಗೇಶ್ ನಾಯ್ಡು ಅವರ ಕಾರ್ಯ ಶ್ಲಾಘನೀಯ. ಅಪಘಾತ ಮತ್ತು ಇನ್ನಿತರ ಗಂಭೀರ ಸ್ವರೂಪದ ಕಾಯಿಲೆಗಳಿಗೆ ತುತ್ತಾಗಿ ರೋಗಿಗಳಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಹೆಚ್ಚಿಗೆ ಇರುತ್ತದೆ. ಮಾನವ ರಕ್ತಕ್ಕೆ ಪರ್ಯಾಯವಾಗಿ ಇನ್ನಿತರ ಧ್ರವಗಳು ಇಲ್ಲದಿರುವುದರಿಂದ ರಕ್ತಕ್ಕೆ ರಕ್ತವೇ ಪರ್ಯಾಯವಾಗಿದೆ. ದಾನಿಗಳಿಂದ ಸಂಗ್ರಹಿಸಿದ ರಕ್ತವನ್ನು ಅವಶ್ಯಕ ರೋಗಿಗಳಿಗೆ ನೀಡಲಾಗುತ್ತದೆ.…

Read More