ಲೇಖಕ: admin

ಮಡಿಕೇರಿ NEWS DESK ಫೆ.7 : ಗ್ರಾ.ಪಂ ಪ್ರತಿನಿಧಿಗಳು ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಬೇಕು ಮತ್ತು ರಾಜಕೀಯ ರಹಿತವಾಗಿ ಸಾರ್ವಜನಿಕರಿಗೆ ಸೌಲಭ್ಯಗಳನ್ನು ಒದಗಿಸಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಕರೆ ನೀಡಿದ್ದಾರೆ. ಕುಂದಚೇರಿ ಗ್ರಾ.ಪಂ ಚೆಟ್ಟಿಮಾನಿ ವತಿಯಿಂದ ನೂತನವಾಗಿ ನಿರ್ಮಾಣಗೊಂಡಿರುವ ಡಿಜಿಟಲ್ ಗ್ರಂಥಾಲಯ, ಅರಿವು ಕೇಂದ್ರ, ಅಂಚೆ ಕಚೇರಿ ಮತ್ತು ಸಂಜೀವಿನಿ ಒಕ್ಕೂಟದ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು ಗ್ರಾ.ಪಂ ಪ್ರತಿನಿಧಿಗಳು ಅತ್ಯಂತ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದರು. ಕ್ಷೇತ್ರದಾದ್ಯAತ ನೂತನ ಕಟ್ಟಡಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ, ಎಲ್ಲಾ ಗ್ರಾ.ಪಂ ವ್ಯಾಪ್ತಿಯಲ್ಲು ಸರಕಾರಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಒದಗಿಸಲಾಗುತ್ತಿದೆ. ಇದನ್ನು ಪಂಚಾಯಿತಿ ಪ್ರತಿನಿಧಿಗಳು ಸದುಪಯೋಗಪಡಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು. ತಾವು ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಗುರಿ ಹೊಂದಿದ್ದು, ಸರ್ವರೂ ಕೈಜೋಡಿಸಬೇಕೆಂದು ಎ.ಎಸ್.ಪೊನ್ನಣ್ಣ ಮನವಿ ಮಾಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕುಂದಚೇರಿ ಗ್ರಾ.ಪಂ ಯ ಹಿರಿಯ ಸದಸ್ಯ ಹ್ಯಾರಿಸ್ ಅವರು 1982 ರಲ್ಲಿ ಪಂಚಾಯ್ತಿಯ ಹಳೆಯ…

Read More

ಮಡಿಕೇರಿ NEWS DESK  ಫೆ.7 : ಏಕಬಳಕೆ ಪ್ಲಾಸ್ಟಿಕ್ ಮತ್ತು ಒಂದು ಲೀಟರ್ ವರೆಗಿನ ಕುಡಿಯುವ ನೀರಿನ ಬಾಟಲಿಗಳನ್ನು ಜಿಲ್ಲೆಯಾದ್ಯಂತ ಸಂಪೂರ್ಣವಾಗಿ ನಿಷೇಧ ಮಾಡುವ ಕುರಿತು ಕೊಡಗು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ನಿರ್ಧಾರ ಕೈಗೊಂಡಿದೆ. ಗೋಣಿಕೊಪ್ಪ ಚೇಂಬರ್ ಆಫ್ ಕಾಮರ್ಸ್ ಭವನದಲ್ಲಿ ಜಿಲ್ಲಾ ಚೇಂಬರ್ ನ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕೊಡಗು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ತ್ರೈಮಾಸಿಕ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಏಕಬಳಕೆ ಪ್ಲಾಸ್ಟಿಕ್ ಮತ್ತು ಒಂದು ಲೀಟರ್ ವರೆಗಿನ ಕುಡಿಯುವ ನೀರಿನ ಬಾಟಲಿಗಳಿಂದ ಪರಿಸರದ ಮೇಲಾಗುತ್ತಿರುವ ಹಾನಿಯ ಕುರಿತು ಚರ್ಚಿಸಲಾಯಿತು. ಮಡಿಕೇರಿ ನಗರದಲ್ಲಿ ಮಾತ್ರ ಒಂದು ಲೀಟರ್ ವರೆಗಿನ ಕುಡಿಯುವ ನೀರಿನ ಬಾಟಲಿ ಬಳಕೆ ನಿಷೇಧ ಮಾಡಲಾಗಿದೆ. ಇದನ್ನು ಜಿಲ್ಲಾವ್ಯಾಪಿ ವಿಸ್ತರಿಸಬೇಕು ಮತ್ತು ಏಕಬಳಕೆ ಪ್ಲಾಸ್ಟಿಕ್ ಕಡ್ಡಾಯವಾಗಿ ನಿಷೇಧಿಸಬೇಕೆಂದು ನಿರ್ಧರಿಸಲಾಯಿತು. ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಅವರು ಮಾತನಾಡಿ ಸ್ಥಳೀಯ ಮತ್ತು ಜಿಲ್ಲಾ ಸಂಸ್ಥೆಗಳಲ್ಲಿ ಯುವ ಸದಸ್ಯರಿಗೆ ಹೆಚ್ಚಿನ ಜವಾಬ್ದಾರಿ…

Read More

ಮಡಿಕೇರಿ NEWS DESK ಫೆ.6 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವತಿಯಿಂದ ಜಿಲ್ಲೆಯ ಶನಿವಾರಸಂತೆಯಲ್ಲಿ 0.65 ಎಕರೆ ವಿಸ್ತೀರ್ಣದಲ್ಲಿ ರೂ.105 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಬಸ್ ನಿಲ್ದಾಣದ ಉದ್ಘಾಟನಾ ಸಮಾರಂಭವು ಫೆಬ್ರವರಿ, 07 ರಂದು ಬೆಳಗ್ಗೆ 11.30 ಗಂಟೆಗೆ ಶನಿವಾರಸಂತೆ ಬಸ್ ನಿಲ್ದಾಣದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು ಹಾಗೂ ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಆರ್.ಶ್ರೀನಿವಾಸ್(ವಾಸು), ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‌ಗೌಡ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯ ಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ…

Read More

ಮಡಿಕೇರಿ NEWS DESK ಫೆ.6 : ಖಾಸಗಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಗೋಣಿಕೊಪ್ಪಲಿನ ಮುಖ್ಯ ರಸ್ತೆಯ ಶ್ರೀ ಉಮಾಮಹೇಶ್ವರಿ ದೇವಾಲಯದ ಬಳಿ ನಡೆದಿದೆ. ಗೋಣಿಕೊಪ್ಪಲಿನ ನಿವಾಸಿ ಸುಲೈಮಾನ್ (32) ಹಾಗೂ ಚೆನ್ನಂಗೊಲ್ಲಿ ನಿವಾಸಿ ಪೌಲೋಸ್ (28) ಮೃತ ದುರ್ದೈವಿಗಳು. ಸುಲೈಮಾನ್ ಸ್ಥಳದಲ್ಲೇ ಮೃತಪಟ್ಟರೆ, ಪೌಲೋಸ್ ಅವರನ್ನು ಹೆಚ್ಚಿನ ಚಿಕಿತ್ಸೆಗೆಂದು ಮೈಸೂರಿಗೆ ಕರೆದೊಯ್ಯುವ ಸಂದರ್ಭ ದಾರಿ ಮದ್ಯೆ ಕೊನೆಯುಸಿರೆಳೆದಿದ್ದಾರೆ. ಗುರುವಾರ ರಾತ್ರಿ ಖಾಸಗಿ ಬಸ್ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದೆ.

Read More

ಮಡಿಕೇರಿ NEWS DESK ಫೆ.6 : ಜಿಲ್ಲಾ ಕೇಂದ್ರ ಮಡಿಕೇರಿ ಸಮೀಪದ ಮೇಕೇರಿ ಗ್ರಾಮದ ಶ್ರೀ ಗೌರಿಶಂಕರ ದೇವಾಲಯದಲ್ಲಿ ಮಹಾಶಿವರಾತ್ರಿ ಉತ್ಸವ ಫೆ.7ರಿಂದ 15ರವರೆಗೆ ಸಂಭ್ರಮದಿಂದ ನಡೆಯಲಿದೆಯೆಂದು ದೇವಾಸ್ಥಾನ ಸಮಿತಿ ಅಧ್ಯಕ್ಷ ಕುಯ್ಯಮುಡಿ ಕೆ.ಪೂರ್ಣಯ್ಯ ಅವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಹತ್ತು ದಿನಗಳ ಕಾಲ ಮಹಾಶಿವರಾತ್ರಿ ಉತ್ಸವವನ್ನು ಆಚರಿಸುವ ಏಕೈಕ ದೇವಾಲಯ ಶ್ರೀಗೌರಿಶಂಕರ ದೇವಾಲಯವಾಗಿದೆ. ಉತ್ಸವಕ್ಕೆ ಕಳೆದೊಂದು ತಿಂಗಳಿನಿಂದ ಗ್ರಾಮದ ಯುವ ಕಾರ್ಯಕರ್ತರು ಶ್ರಮಿಸುತ್ತಿರುವುದಾಗಿ ತಿಳಿಸಿದರು. ದೇವಸ್ಥಾನ ಸಮಿತಿಯ ಉಪಾಧ್ಯಕ್ಷರಾದ ಕೆ.ಆರ್.ಬೆಳ್ಳಿಯಪ್ಪ ಅವರು ಮಾತನಾಡಿ, ಆರಂಭಿಕ ದಿನವಾದ ಫೆ.7ರಂದು ಬೆಳಗ್ಗೆ 9.30ಕ್ಕೆ ದೇವಾಲಯದಲ್ಲಿ ಧ್ವಜಾರೋಹಣದ ಮೂಲಕ ಉತ್ಸವಕ್ಕೆ ಚಾಲನೆ ದೊರಕಲಿದೆ. ಮೊದಲ ದಿನದಿಂದ ಫೆ.14ರವರೆಗೆ ಪ್ರತಿನಿತ್ಯ ಸಂಜೆ 6.30ಕ್ಕೆ ಜಿಲ್ಲೆಯ ವಿವಿಧೆಡೆಗಳ ಭಜನಾ ತಂಡಗಳಿAದ ಭಜನಾ ಕಾರ್ಯಕ್ರಮ ಮತ್ತು ಅನ್ನದಾನವನ್ನು ಏರ್ಪಡಿಸಲಾಗಿದೆಯೆಂದು ಹೇಳಿದರು. ಹೊರೆ ಕಾಣಿಕೆಯ ಆಕರ್ಷಣೆ- ಶಿವರಾತ್ರಿಯ ದಿನವಾದ ಫೆ.15 ರಂದು ಬೆಳಗ್ಗೆ 9.30 ಗಂಟೆಗೆ ಮೇಕೇರಿ ಸುತ್ತಮುತ್ತಲ ಶಕ್ತಿನಗರ, ನವಗ್ರಾಮ, ಕಾವೇರಿ ಬಡಾವಣೆ, ಸುಭಾಷ್‌ನಗರ…

Read More

ಮಡಿಕೇರಿ NEWS DESK ಫೆ.6 : ಪರಿಶಿಷ್ಟರು ಹಾಗೂ ಒಬಿಸಿ ವಿದ್ಯಾರ್ಥಿಗಳಲ್ಲಿ ಸಮಾನತೆಯನ್ನು ಪ್ರೋತ್ಸಾಹಿಸಲು ವಿಶ್ವ ವಿದ್ಯಾನಿಲಯ ಅನುದಾನ ಆಯೋಗ ರೂಪಿಸಿರುವ ನಿಯಮಾವಳಿಗಳನ್ನು ಶೀಘ್ರ ಜಾರಿಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದಿಂದ ಫೆ.9ರಂದು ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ಸಂಘಟನೆಯ ಜಿಲ್ಲಾ ಸಂಚಾಲಕ ಎನ್.ಆರ್.ದೇವರಾಜು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವವಿದ್ಯಾನಿಲಯ ಅನುದಾನ ಆಯೋಗ ಎಸ್‌ಸಿ, ಎಸ್‌ಟಿ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಮಾನತೆಯನ್ನು ಪ್ರೋತ್ಸಾಹಿಸಲು ರೂಪಿಸಿರುವ ನಿಯಮಾವಳಿಗೆ ಸುಪ್ರೀಂ ಕೋರ್ಟ್ ನೀಡಿರುವ ತಡೆಯಾಜ್ಞೆ ತೆರವುಗೊಳಿಸಬೇಕು, ರೋಹಿತ್ ವೇಮುಲ ಕಾಯ್ದೆಯನ್ನು ಕರ್ನಾಟಕದಲ್ಲಿ ಜಾರಿಗೊಳಿಸಬೇಕು, ಜಾತಿ, ಧರ್ಮ ತಾರತಮ್ಯ ತಡೆಗಟ್ಟಲು ಯುಜಿಸಿ ನಿಯಮವನ್ನು ಕೇಂದ್ರ ಸರಕಾರ ಅನುಷ್ಠಾನಕ್ಕೆ ತರಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟು ರಾಜ್ಯ ವ್ಯಾಪಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಲಿದೆ ಎಂದರು. ಫೆ.9ರಂದು ಬೆಳಿಗ್ಗೆ 11.30 ಗಂಟೆಗೆ ಮಡಿಕೇರಿಯ ಗಾಂಧಿ ಮೈದಾನದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ…

Read More

ಕುಶಾಲನಗರ NEWS DESK ಫೆ.6 :  ತೊರೆನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸಿರುಗುಪ್ಪೆ ಗ್ರಾಮದಲ್ಲಿ ನೂತನವಾಗಿ  ಭದ್ರಕಾಳಿ, ಭಂಟ, ನಾಗನಕಟ್ಟೆ, ಮಾರಿಯಮ್ಮ ಮತ್ತು ಗುಳಿಗ ದೇವರುಗಳ ಪ್ರತಿಷ್ಠಾಪನಾ ಧಾರ್ಮಿಕ ಮಹೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು.  ದೇವಾಲಯಗಳ ಪ್ರತಿಷ್ಠಾಪನೆ ಹಾಗೂ ಸತ್ಸಂಗಗಳಿಂದ ಗ್ರಾಮಗಳಲ್ಲಿ ಏಕತೆ, ಸಾಮರಸ್ಯ ಮೂಡುತ್ತದೆ ಎಂದು ಮಾಜಿ ಸಚಿವ ಅಪ್ಪಚ್ಚು ರಂಜನ್ ಹೇಳಿದರು. ಗ್ರಾಮಗಳಲ್ಲಿ ಕೃಷಿಕರ ಕೈಗೊಳ್ಳುವ ಕೃಷಿ ಚಟುವಟಿಕೆಗಳು ನಿರ್ವಿಘ್ನವಾಗಿ ಸಾಗಲು ಕಾಲಕಾಲಕ್ಕೆ ಮಳೆ ಬೆಳೆ ಆಗುವ ಮೂಲಕ ದೇವರು ಹರಸುವಂತಾಗಬೇಕು. ಭಾರತೀಯರು ಪ್ರಕೃತಿಯ ಆರಾಧಕರು. ನೀರು,  ಮರ, ಗಿಡ, ನದಿಗಳು  ನಮ್ಮನ್ನು ಪೊರೆಯುತ್ತಿವೆ. ಹಾಗಾಗಿ ಹಾಗೆಯೇ ಭೂಮಿಗೆ ಮಾರಕವಾದ ಪ್ಲಾಸ್ಟಿಕ್ ಬಳಕೆಯನ್ನು  ಗ್ರಾಮಗಳ ಪ್ರತಿ ಮನೆಗಳಿಂದಲೇ ಆರಂಭವಾಗಲಿ ಎಂದು  ಅಪ್ಪಚ್ಚು ರಂಜನ್ ಕರೆಕೊಟ್ಟರು. ಉದ್ಯಮಿ ನಾಪಂಡ ಮುತ್ತಪ್ಪ ಮಾತನಾಡಿ, 1200 ವರ್ಷಗಳ ಹಿಂದಿನ ಗಂಗರಾಜನ ಕಾಲದ ಶಾಸನ ಅರಿಶಿಣಗುಪ್ಪೆಯಲ್ಲಿದ್ದು ಧಾರ್ಮಿಕವಾಗಿ ಬಹಳಷ್ಟು ಪ್ರಾಮುಖ್ಯತೆ ಇರುವ ಗ್ರಾಮವಾಗಿದೆ. ಒಗ್ಗಟ್ಟಿನಲ್ಲಿ ಶ್ರದ್ದೆಯಿಂದ ದೇವತಾ ಕಾರ್ಯಗಳನ್ನು ನೆರವೇರಿಸಿದ ಗ್ರಾಮ ದೇವತಾ ಸಮಿತಿಯ ಸೇವೆಯನ್ನು ಮುತ್ತಪ್ಪ  ಶ್ಲಾಘಿಸಿದರು. ಸಿದ್ದಲಿಂಗಪುರದ ಶ್ರೀ ಮಂಜುನಾಥ ದೇವಾಲಯದ ಮುಖ್ಯಸ್ಥರಾದ…

Read More

ಮಡಿಕೇರಿ NEWS DESK ಫೆ.6 : ದಕ್ಷಿಣ ಕೊಡಗಿನ ಗೋಣಿಕೊಪ್ಪಲಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ ರಾಮ್ ಜಿ ಯೋಜನೆಯನ್ನು ವಿರೋಧಿಸಿ, ಪೊನ್ನಂಪೇಟೆಯವರೆಗೆ ಬೃಹತ್ ಪ್ರತಿಭಟನಾ ಜಾಥ ನಡೆಯಿತು. ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಸೇರಿದಂತೆ ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಪ್ರಮುಖರ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಗೋಣಿಕೊಪ್ಪಲಿನಲ್ಲಿ ಸಮಾವೇಶಗೊಂಡ  ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರದ ಧೋರಣೆಗಳ ವಿರುದ್ಧ ಘೋಷಣೆಗಳನ್ನು ಮೊಳಗಿಸುತ್ತಾ ಸಮಾರು ನಾಲ್ಕು ಕಿ.ಮೀ. ದೂರದ, ತಾಲ್ಲೂಕು ಕೇಂದ್ರ ಪೊನ್ನಪೇಟೆಯವರೆಗೆ  ಕಾಲ್ನಡಿಗೆ ಜಾಥ ನಡೆಸಿದರು. ಜಾಥ ಪೊನ್ನಂಪೇಟೆಯನ್ನು ತಲುಪಿದ ಬಳಿಕ ಪಕ್ಷದ ಪ್ರಮುಖರು ಅಲ್ಲಿನ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿ, ಈ ಹಿಂದಿನ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಗೆ ಬದಲಾಗಿ ಕೇಂದ್ರ ಸರ್ಕಾರ ತಂದಿರುವ ವಿಜಿ ರಾಮ್ ಜಿ ಯೋಜನೆಯ ಬಗ್ಗೆ ತಮ್ಮ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. *ಆರು ಬ್ಲಾಕ್‌ಗಳಲ್ಲಿ ಪ್ರತಿಭಟನೆ* ಪ್ರತಿಭಟನಾಕಾರರನ್ನು ಉದ್ದೇಶಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ…

Read More

*ಮಂಜಿನ ನಗರಿ ಮಡಿಕೇರಿಯ ಹೃದಯ ಭಾಗದಲ್ಲಿ SANEE GRACE : ನಿಮಗಿದು ಸುವರ್ಣಾವಕಾಶ >>> READY TO MOVE LUXURY FLAT FIRST TIME IN MADIKERI >>> BOOK & RENT TO US SCHEME >>> BYE A FLAT & GET ASSURED RENTAL INCOME* FLATS AVAILABLE : 1 BHK : 2 BHK : 3 BHK >>> ABBEY FALLS ROAD, BHAGAVATHI NAGAR, MADIKERI. 571201 >>> MORE INFORMATION CALL US : 9448549141, 9167790888, 9945779353

Read More

ಮಡಿಕೇರಿ NEWS DESK  ಫೆ.5 : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಎಚ್.ಕೃಷ್ಣ ಮತ್ತು ತಂಡದ ಸದಸ್ಯರು ನಗರದ ನ್ಯಾಯಬೆಲೆ ಅಂಗಡಿ, ಆಹಾರ ಧಾನ್ಯ ಸಗಟು ಮಳಿಗೆ, ಅಂಗನವಾಡಿ ಕೇಂದ್ರ, ಮಧ್ಯಾಹ್ನದ ಉಪಾಹಾರ ಯೋಜನೆ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿರುವ ಎನ್‌ಆರ್‌ಸಿ ಘಟಕ ಹಾಗೂ ವಿದ್ಯಾರ್ಥಿ ನಿಲಯಗಳಿಗೆ ಗುರುವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ರಾಜ್ಯ ಆಹಾರ ಆಯೋಗದ ಸದಸ್ಯರಾದ ಲಿಂಗರಾಜ ಕೋಟೆ, ಸುಮಂತ್ ರಾವ್, ಮಾರುತಿ ಎಂ.ದೊಡ್ಡಲಿಂಗನವರ್, ಎ.ರೋಹಿಣಿ ಪ್ರಿಯಾ, ಕೆ.ಎಸ್.ವಿಜಯಲಕ್ಷ್ಮಿ ಹಾಗೂ ಸದಸ್ಯ ಕಾರ್ಯದರ್ಶಿ ಸುಜಾತ ಡಿ ಹೊಸಮನಿ ಅವರು ಪರಿಶೀಲನಾ ಸಂದರ್ಭದಲ್ಲಿ ಇದ್ದು, ಆಹಾರ ಸುರಕ್ಷತೆ, ಪೌಷ್ಠಿಕ ಆಹಾರ ವಿತರಣೆ, ಮತ್ತಿತರ ಬಗ್ಗೆ ಮಾಹಿತಿ ಪಡೆದರು. ಮೊದಲಿಗೆ ನಗರದ ಜನತಾ ಬಜಾರ್ ಸಂಖ್ಯೆ 59 ಕ್ಕೆ ದಿಢೀರ್ ಭೇಟಿ ನೀಡಿ, ಪರಿಶೀಲಿಸಿದ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಮತ್ತು ತಂಡದ ಸದಸ್ಯರು ಆಹಾರ ದಾಸ್ತಾನುವಿನಲ್ಲಿ ವ್ಯತ್ಯಾಸ, ಜಾಗೃತಿ ನಾಮಫಲಕ ಪ್ರದರ್ಶನ ಹಾಗೂ ತೂಕ ನವೀಕರಣ ಪತ್ರ…

Read More