ಲೇಖಕ: admin

ಮಡಿಕೇರಿ ಮೇ 18 : ಎಸ್‌ವೈಎಸ್ ಕೊಡಗು ಜಿಲ್ಲಾ ಸಮಿತಿಯಿಂದ ಸುಸಜ್ಜಿತವಾಗಿ ನವೀಕರಿಸಲ್ಪಟ್ಟ ಸಿದ್ದಾಪುರದ ವರಕ್ಕಲ್ ಸಮಸ್ತ ಭವನ, ಖಾಝಿ ಹೌಸ್ ಹಾಗೂ ಸಂಸ್ಥೆಯ ಕೇಂದ್ರ ಸಮಿತಿಯ ಅಮೃತ ಮಹೋತ್ಸವದ ಪ್ರಯುಕ್ತ ಆಯೋಜಿತ ಜಾಗೃತಿ ಯಾತ್ರೆಯ ಉದ್ಘಾಟನಾ ಸಮಾವೇಶ ಮೇ 21 ರಂದು ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಎಸ್‌ವೈಎಸ್ ಕೊಡಗು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ವೈ.ಅಶ್ರಫ್ ಫೈಝಿ ಮಾತನಾಡಿ, ಅಂದು ಸಂಜೆ ಸಿದ್ದಾಪುರದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಸಮಸ್ತ ಕೇಂದ್ರ ಮುಶಾವರ ಸದಸ್ಯ ಎಂ.ಎಂ.ಅಬ್ದುಲ್ಲಾ ಫೈಝಿ ಧಜ್ವಾರೋಹಣದ ಮೂಲಕ ಚಾಲನೆ ನೀಡಲಿದ್ದಾರೆ. ವರಕ್ಕಲ್ ಭವನ ಹಾಗೂ ಖಾಝಿ ಹೌಸ್‌ನ್ನು ಸಮಸ್ತ ಕೇಂದ್ರ ಜಂ-ಇಯ್ಯತುಲ್ ಉಲಮಾ ಅಧ್ಯಕ್ಷ ಸಯ್ಯಿದುಲ್ ಉಲಮಾ ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕ್ಕೋಯ ತಂಙಳ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಎಸ್.ವೈ.ಎಸ್ ಜಿಲ್ಲಾಧ್ಯಕ್ಷ ಜನಾಬ್ ಸಿ.ಪಿ.ಎಂ.ಬಶೀರ್ ಹಾಜಿ ವಹಿಸಲಿದ್ದಾರೆಂದರು. ಕಾರ್ಯಕ್ರಮದಲ್ಲಿ ಹಲವಾರು ಉಲಮಾ ಉಮರಾ ನಾಯಕರು ಪಾಲ್ಗೊಳ್ಳಲಿದ್ದು, ಸಮಸ್ತ ಕೇಂದ್ರ ಮುಶಾವರ ಸದಸ್ಯ ಎಂ.ಎ.ಅಬ್ದುಲ್ಲಾ ಫೈಝಿ ಉಸ್ತಾದ್, ಎಸ್‌ಕೆಜೆಎಂಸಿಸಿ ಕೇಂದ್ರ ಸಮಿತಿ ಕಾರ್ಯದರ್ಶಿ ಅಬ್ದುಲ್…

Read More

ಬೆಂಗಳೂರು: ಕಳೆದ ಕೆಲ ದಿನಗಳಿಂದ ನಡೆಯುತ್ತಿದ್ದ ಸಿಎಂ ಆಯ್ಕೆ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಆಯ್ಕೆಯಾಗಿದ್ದು, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಎ.ಎನ್.ಐ ಮೂಲಗಳು ತಿಳಿಸಿದೆ. ಆ ಮೂಲಕ ಸಿದ್ದರಾಮಯ್ಯ ಅವರಿಗೆ 2ನೇ ಬಾರಿಗೆ ಮುಖ್ಯಮಂತ್ರಿ ಪಟ್ಟ ಲಭಿಸಿದೆ.

Read More

ನಾಪೋಕ್ಲು ಮೇ 17 : ನಾಪೋಕ್ಲು ವಿನಲ್ಲಿ ಬುಧವಾರ ಮಧ್ಯಾಹ್ನ ಭಾರೀ ಗಾಳಿಯೊಂದಿಗೆ ಒಂದು ಇಂಚಿಗೂ ಅಧಿಕ ಮಳೆ ಸುರಿದ ಪರಿಣಾಮ ರಸ್ತೆಯಲ್ಲಿ ಮರಗಳು, ವಿದ್ಯುತ್ ಕಂಬಗಳು ಬಿದ್ದು ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ನಡೆದಿದೆ.  ನಾಪೋಕ್ಲು ಪಟ್ಟಣದ ಮಾರುಕಟ್ಟೆ ಬಳಿಯ ಪೊಲೀಸ್ ಠಾಣೆಯ ಮುಂಭಾಗದ ರಸ್ತೆಯಲ್ಲಿ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಅದರಂತೆ ನಾಪೋಕ್ಲು ಭಾಗಮಂಡಲ ಮುಖ್ಯರಸ್ತೆಯ ಹಳೇತಾಲ್ಲೂಕುವಿನಲ್ಲಿ ತೆಂಗಿನ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಸ್ಥಳೀಯ ನಿವಾಸಿ ಅಜ್ಜೇಟ್ಟಿರ ರಾಜ ಎಂಬುವವರ ಟಯರ್ ಅಂಗಡಿ ಮಳಿಗೆಯ ಮೇಲೆ ಬಿದ್ದುನಷ್ಟ ಸಂಭವಿಸಿದೆ. ಇದೇ ಮಳಿಗೆಯ ಮುಂಭಾಗದಲ್ಲಿ ಮಳೆಯಿಂದ ರಕ್ಷಣೆ ಪಡೆಯಲು ಮಂಗಳೂರಿನಿಂದ ಭಾಗಮಂಡಳಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಕುಟುಂಬವೊಂದು ನಿಂತಿದ್ದ ಸಂದರ್ಭ ಟಯರ್ ಮಳಿಗೆಯ ಮೇಲೆ ತೆಂಗಿನ ಮರ ಬಿದ್ದಿದ್ದು ಕುಟುಂಬವು ಅದೃಷ್ಟವವಶಾತ್ ಅಪಾಯದಿಂದ ಪಾರಾಗಿದೆ. ಗಾಳಿ ಮಳೆಯಿಂದ ವಿವಿಧೆಡೆ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ನಾಪೋಕ್ಲು ವ್ಯಾಪ್ತಿಯಲ್ಲಿ ವಿದ್ಯುತ್ ವ್ಯಥೆಯ ಉಂಟಾಗಿದೆ. ಎರಡು ಕಡೆಗಳಲ್ಲಿ…

Read More

ಸೋಮವಾರಪೇಟೆ ಮೇ 17 : ಸೋಮವಾರಪೇಟೆ ತಾಲ್ಲೂಕು ಕಚೇರಿ ಹಾಗೂ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್‌ಗೌಡ ಅವರು ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಕಚೇರಿಯಲ್ಲಿದ್ದ ಸಾರ್ವಜನಿಕರನ್ನು ಮಾತನಾಡಿಸಿ, ಸಮಸ್ಯೆಗಳ ಬಗ್ಗೆ ವಿಚಾರಿಸಿದರು. ನಂತರ ಸಿಬ್ಬಂದಿಗಳಿಗೆ ಸಲಹೆ ನೀಡಿದರು. ಗ್ರಾಮೀಣ ಭಾಗದಿಂದ ಬಂದ ರೈತರು, ವಯಸ್ಕರು, ಮಹಿಳೆಯರು, ಕೂಲಿಕಾರ್ಮಿಕರ ಕೆಲಸಗಳನ್ನು ವಿಳಂಬ ಮಾಡದೆ ಮಾಡಿಕೊಡಬೇಕು ಎಂದು ಸಲಹೆ ನೀಡಿದರು. ಯುವ ನೌಕರರು ಪ್ರತಿಫಲಾಪೇಕ್ಷೆಯಿಲ್ಲದೆ ಕೆಲಸ ಮಾಡಿದರೆ, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ನಿರೀಕ್ಷಿಸಬಹುದು ಎಂದರು. ಸರ್ಕಾರಿ ಆಸ್ಪತ್ರೆಯ ಪ್ರತಿವಿಭಾಗವನ್ನು ಪರಿಶೀಲಿಸಿದರು. ರೋಗಿಗಳಿಗೆ ಹಣ್ಣುಹಂಪಲು ವಿತರಿಸಿ, ಯೋಗಕ್ಷೇಮ ವಿಚಾರಿಸಿದರು. ವೈದ್ಯರೊಂದಿಗೆ ಸಭೆ ಚರ್ಚಿಸಿದ ಶಾಸಕರು, ಆಸ್ಪತ್ರೆಗೆ ಬೇಕಾದ ಸವಲತ್ತುಗಳ ಪಟ್ಟಿಯನ್ನು ನೀಡಬೇಕೆಂದು ಆಡಳಿತ ವೈದ್ಯಾಧಿಕಾರಿಗೆ ತಿಳಿಸಿದರು. ನೂತನ ಸರ್ಕಾರ ರಚನೆಯಾದ ನಂತರ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆಗಳು ಇಲ್ಲಿಯೇ ಸಿಗುವಂತಾಗಬೇಕು. ಖಾಲಿಯಿರುವ ವೈದ್ಯರ ಹುದ್ದೆಗಳನ್ನು ಭರ್ತಿಗೆ ಅಧ್ಯತೆ ನೀಡಲಾಗುವುದು ಎಂದು ಹೇಳಿದರು. ಈ ಸಂದರ್ಭ ತಾಲ್ಲೂಕು ತಹಸೀಲ್ದಾರ್ ಎಸ್.ಎನ್.ನರಗುಂದ,…

Read More

ಕುಶಾಲನಗರ ಮೇ 17 : ಕೊಡಗು ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನಿವೃತ್ತ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆಯು ಕುಶಾಲನಗರದಲ್ಲಿ  ನಡೆಯಿತು. ಸಂಘದ ಅಧ್ಯಕ್ಷ ಸಿದ್ದಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿ ಉತ್ತೀರ್ಣರಾದ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭ ಮಾತನಾಡಿದ, ಸಿದ್ದಪ್ಪ ನಿವೃತ್ತ ನೌಕರರ ಶ್ರೇಯೋಭಿವೃದ್ಧಿಯೇ ಸಂಘದ ಉದ್ದೇಶವಾಗಿದೆ. ನಿವೃತ್ತ ನೌಕರರ ಸಂಘವು ವರ್ಷಪೂರ್ತಿ ಹಲವಾರು ರಚನಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಂಡು ಕ್ರಿಯಾಶೀಲವಾಗಿ ಕೆಲಸ ಮಾಡುವ ಮೂಲಕ ಜಿಲ್ಲೆಗೆ ಮಾದರಿ ಸಂಘವಾಗಿದೆ.ಸಂಘದ ಎಲ್ಲ ಚಟುವಟಿಕೆಗಳು ಪಾರದರ್ಶಕವಾಗಿದ್ದು, ಪದಾಧಿಕಾರಿಗಳು ಪ್ರಾಮಾಣಿಕವಾಗಿ ಹಾಗೂ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಿ ಸಂಘದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ಆದ್ದರಿಂದ ಎಲ್ಲ ನಿವೃತ್ತ ನೌಕರರು ಸಂಘದ ಸದಸ್ಯತ್ವ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು. ಸಂಘದ ಉಪಾಧ್ಯಕ್ಷ ಬಿ.ಸಿ.ರಾಜು ಮಾತನಾಡಿ, ಸಮಾಜಕ್ಕೆ ಹಾಗೂ ಯುವಜನತೆಗೆ ಸೂಕ್ತ ಮಾರ್ಗದರ್ಶನ ನೀಡುವುದರ ಜತೆಗೆ ತಮ್ಮ ಅನುಭವಗಳನ್ನು ಸಮಾಜದ ಅಭಿವೃದ್ಧಿಗಾಗಿ ಬಳಸಬೇಕಾಗಿದೆ ಎಂದರು. ಸಂಘದ ಕಾರ್ಯದರ್ಶಿ…

Read More

ಮಡಿಕೇರಿ ಮೇ 17 : ಕೊಡಗು ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಮತ್ತು ಸರ್ಕಾರದ ಸಮರ್ಥ ಪ್ರತಿನಿಧಿಯಾಗಿ ಕಾರ್ಯ ನಿರ್ವಹಿಸಲು ನೂತನ ಕಾಂಗ್ರೆಸ್ ಸರ್ಕಾರ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಡಗು ಜಿಲ್ಲಾ ಪಿಗ್ಮಿ ಸಂಗ್ರಹಗಾರರ ಸಂಘ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಜಿಲ್ಲಾಧ್ಯಕ್ಷ ಎಂ.ಡಿ.ನಾಣಯ್ಯ ಅವರು ಜಿಲ್ಲೆಯ ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರದಲ್ಲಿ ಅಭಿವೃದ್ಧಿಪರ ಚಿಂತನೆಯ ಉತ್ಸಾಹಿ ಶಾಸಕರು ಆಯ್ಕೆಯಾಗಿದ್ದಾರೆ, ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಕೊಡಗಿನವರಿಗೆ ಸಚಿವ ಸ್ಥಾನ ನೀಡಬೇಕೆನ್ನುವ ಬೇಡಿಕೆ ದಶಕಗಳಿಂದ ಕೇಳಿ ಬಂದಿದ್ದು, ಜನರ ಮನವಿಗೆ ಈ ಸರ್ಕಾರ ಸ್ಪಂದಿಸಬೇಕು. ಖ್ಯಾತ ವಕೀಲರಾಗಿ ಹಲವು ಜಟಿಲ ಸಮಸ್ಯೆಗಳನ್ನು ಬಗೆ ಹರಿಸಿದ ಹೆಗ್ಗಳಿಕೆಯ ಪೊನ್ನಣ್ಣ ಅವರು ಕ್ಷೇತ್ರದ ಜನ ಸಾಮಾನ್ಯರ ಸಂಕಷ್ಟಗಳಿಗೆ ಚುನಾವಣೆಗೂ ಮೊದಲೇ ಸ್ಪಂದಿಸುತ್ತಾ ಬಂದಿದ್ದಾರೆ. ಇವರು ಸಚಿವರಾಗಿ ಆಯ್ಕೆಯಾದರೆ ಕೊಡಗು ಜಿಲ್ಲೆಗೆ ಮಾತ್ರವಲ್ಲದೆ ಇಡೀ ಕರ್ನಾಟಕ ರಾಜ್ಯಕ್ಕೆ ದೊಡ್ಡ ಕೊಡುಗೆ ನೀಡಿದಂತ್ತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕಾಂಗ್ರೆಸ್…

Read More

ಮಡಿಕೇರಿ ಮೇ 17 : ಕೊಡಗಿನ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಸೋಲಿಗೆ ಬಿಜೆಪಿಯೇತರ ಪಕ್ಷಗಳ ಒಳ ಒಪ್ಪಂದವೇ ಕಾರಣವೆಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸೋಲಿನ ಹೊಣೆಯನ್ನು ಜಿಲ್ಲಾಧ್ಯಕ್ಷನಾಗಿ ನಾನೇ ಹೊರಲಿದ್ದೇನೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡಬೇಕೆನ್ನುವ ಏಕ ಮಾತ್ರ ಉದ್ದೇಶದಿಂದ ಇತರ ಪಕ್ಷಗಳೆಲ್ಲವು ಒಂದಾಗಿ ಕೆಲಸ ಮಾಡಿವೆ ಎಂದು ಟೀಕಿಸಿದರು. ಜಿಲ್ಲೆಯ ಎರಡು ಕ್ಷೇತ್ರಗಳನ್ನು ಬಿಜೆಪಿ ಕಳೆದುಕೊಂಡಿರಬಹುದಾದರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಡೆದುಕೊಂಡ ಮತಗಳನ್ನು ತುಲನೆ ಮಾಡಿದರೆ ಈ ಬಾರಿ ಬಿಜೆಪಿ ಹೆಚ್ಚಿನ ಮತಗಳನ್ನು ಪಡೆದುಕೊಂಡಿದೆ. ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರದಲ್ಲಿ ಒಟ್ಟಾಗಿ ಕಳೆದ ಬಾರಿಗಿಂತ 13,079 ಹೆಚ್ಚಿನ ಮತಗಳನ್ನು ಬಿಜೆಪಿ ಗಳಿಸಿದೆ ಎಂದು ಸಮರ್ಥಿಸಿಕೊಂಡರು. ಜೆಡಿಎಸ್ ಒಳಗೊಂಡಂತೆ ಎಲ್ಲಾ ಪಕ್ಷಗಳು ಒಳ ಒಪ್ಪಂದ ಮಾಡಿಕೊಂಡಿರುವುದೇ ಕಾಂಗ್ರೆಸ್ ಗೆಲುವಿಗೆ ಕಾರಣವೆಂದರು. ಈ ಬಾರಿಯ ಚುನಾವಣೆಯಲ್ಲಿನ ಜನಾಭಿಪ್ರಾಯವನ್ನು ಒಳ್ಳೆಯ ಮನಸ್ಸಿನಿಂದ ಸ್ವೀಕಾರ ಮಾಡಿದ್ದೇವೆ. ಚುನಾವಣೆಯಲ್ಲಿ ಸೋಲು ಎದುರಾಗಿದ್ದರು, ಪಕ್ಷದ…

Read More

ವಿರಾಜಪೇಟೆ ಮೇ 17 : ತುರ್ತು ಕರೆಗೆ ಸ್ಪಂದಿಸಿ ರಾತ್ರಿ ವೇಳೆಯಲ್ಲಿ ರಕ್ತದಾನ ಮಾಡಿದ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ ಸಂಸ್ಥೆಯ ಸದಸ್ಯ  ಯಾಸಿನ್ ಮಾನವೀಯತೆ ಮೆರೆದಿದ್ದಾರೆ. ಬೆಂಗಳೂರಿನ ಸ್ವಾಮಿ ವಿವೇಕಾನಂದ ರಕ್ತ ನಿಧಿ ಘಟಕದಿಂದ ಕರೆ ಬಂದ ತಕ್ಷಣವೇ ರಾತ್ರಿ 1 ಗಂಟೆಯ ಸಮಯದಲ್ಲಿ ಹೋಗಿ ರಕ್ತದಾನ ಮಾಡಿ ಜೀವ ಉಳಿಸಿದ್ದಾರೆ.

Read More

ಮಡಿಕೇರಿ ಮೇ 17 :  ಕೌಶಲ್ಯ ತರಬೇತಿ ಪಡೆಯುತ್ತಿರುವ ವಿದ್ಯಾಥಿ೯ಗೆ ಮಡಿಕೇರಿ ಇನ್ನರ್ ವೀಲ್ ಸಂಸ್ಥೆ ವತಿಯಿಂದ ನೆರವು ನೀಡಲಾಯಿತು. ದೇವರಕೊಲ್ಲಿ ಗ್ರಾಮದ ಕೆ.ಎಂ.ಜೀವನ್ ಅವರ ತಂದೆ ಎರಡು ವಷ೯ಗಳ ಹಿಂದೆ ಸಿಡಿಲು ಬಡಿದು ಹಾಸಿಗೆ ಹಿಡಿದಿದ್ದಾರೆ. ತಾಯಿಯೋವ೯ರೇ ದುಡಿದು ಮಗನ ಶಿಕ್ಷಣಕ್ಕೆ ನೆರವಾಗುತ್ತಿದ್ದು, ಇನ್ನರ್ ವೀಲ್ ಸಂಸ್ಥೆಯ ವತಿಯಿಂದ ವಿದ್ಯಾಥಿ೯ ದಶ೯ನ್ ಗೆ ಅಗತ್ಯವಿದ್ದ ಮೊಬೈಲ್ ಫೋನ್ ನೀಡಿ ತಾಂತ್ರಿಕವಾಗಿ ಸಹಾಯ ಮಾಡಲಾಯಿತು. ಅಂತೆಯೇ ಡಾ.ಎಂ.ಜಿ.ಪಾಟ್ಕರ್ ಕೂಡ ದಶ೯ನ್ ಗೆ ಆಥಿ೯ಕ ನೆರವು ನೀಡಿದರು. ಮಡಿಕೇರಿಯ ಹಿರಿಯ ಲೆಕ್ಕಪರಿಶೋಧಕ ಅನಂತಸುಬ್ಬರಾವ್ ಪುತ್ರಿ ವಿದ್ಯಾ ವಿಷ್ಣುಕಿರಣ್ ಅವರು ಕೊಡುಗೆಯಾಗಿ ನೀಡಿದ ಸ್ಮಾಟ್೯ ಫೋನ್ ನ್ನು ಇನ್ನರ್ ವೀಲ್ ಅಧ್ಯಕ್ಷೆ ಡಾ.ರೇಣುಕಾಸುಧಾಕರ್, ಕಾಯ೯ದಶಿ೯ ಲಲಿತಾ ರಾಘವನ್ , ಸದಸ್ಯರಾದ ಜಯಲಕ್ಷ್ಮೀ ಪಾಟ್ಕರ್, ಸಲೀಲಾ ಪಾಟ್ಕರ್, ಉಮಾಗೌರಿ, ಮಲ್ಲಿಗೆ ಪೈ, ಆಗ್ನೇಸ್ ಮುತ್ತಣ್ಣ, ಲತಾ ಚಂಗಪ್ಪ, ಲಕ್ಷ್ಮೀ ಈಶ್ವರ್ ಭಟ್, ದಾನಿಗಳಾದ ಅನಂತ ಸುಬ್ಬರಾವ್, ಡಾ.ಎಂ.ಜಿ.ಪಾಟ್ಕರ್ ಈ ಸಂದಭ೯ ಹಾಜರಿದ್ದರು.

Read More

ಮಡಿಕೇರಿ ಮೇ 17 : ನಗರದ ಶ್ರೀ ಮುತ್ತಪ್ಪ ದೇವಾಲಯದ ಭಗವತಿ ದೇವಿಯ ವಾರ್ಷಿಕ ಪೊಂಗಾಲ ಉತ್ಸವವು ಮೇ 21 ರಂದು ನಡೆಯಲಿದೆ ಎಂದು ಮಹಿಳಾ ವೇದಿಕೆಯ ಸದಸ್ಯೆ ವಿಶಾಲಾಕ್ಷಿ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗಿನ ಪುರಾತನ ದೇವಾಲಯಗಳಲ್ಲಿ ಒಂದಾದ ಮಡಿಕೇರಿಯ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಪಾರ್ವತಿ, ಶ್ರೀ ಸರಸ್ವತಿ, ಶ್ರೀ ಮಹಾಲಕ್ಷ್ಮಿ ಸಂಕಲ್ಪದಲ್ಲಿರುವ ಶ್ರೀ ಭಗವತಿ ದೇವಿಗೆ ಪೊಂಗಾಲ ಸೇವೆಯನ್ನು ಬೆಳಿಗ್ಗೆ 8.30ಕ್ಕೆ ನಡೆಸಲು ಉದ್ದೇಶಿಸಲಾಗಿದ್ದು, ಈ ಬಾರಿ ವಿಜೃಂಭಣೆಯಿಂದ ಉತ್ಸವ ನಡೆಸಲಾಗುವುದು. ಇದು ಕೇವಲ ಮಹಿಳೆಯರು ಮಾತ್ರ ನಡೆಸುವ ಪುಣ್ಯ ಕಾರ್ಯವಾಗಿದ್ದು, ಪೊಂಗಾಲ ಸಮರ್ಪಣೆಯಿಂದ ಮನೆಯಲ್ಲಿ ಆರೋಗ್ಯ ಶಾಂತಿ, ನೆಮ್ಮದಿ ನೆಲೆಸುವ ನಂಬಿಕೆ ಇದೆ ಎಂದರು. ಇಟ್ಟಿಗೆ ಅಥವಾ ಕಲ್ಲುಗಳನ್ನು ಜೋಡಿಸಿ ಒಲೆಯನ್ನು ಹಾಕಿ ಸೌದೆಯನ್ನು ಜೋಡಿಸಿ ಸಿದ್ದಪಡಿಸಿದ ನಂತರ ಅರ್ಚಕರು ನೀಡಿದ ಕರ್ಪೂರದಾರತಿಯಿಂದ ಒಲೆ ಉರಿಸಿ, ಹೊಸ ಮಡಿಕೆಯಲ್ಲಿ ನೀರು ತುಂಬಿಸಿ ಪೊಂಗಾಲ ತಯಾರಿಕೆ ಮಾಡಲಾಗುತ್ತದೆ. ಪೊಂಗಾಲ  ಸೇವೆ ಮಾಡಲಿಚ್ಚಿಸುವ ಮಹಿಳೆಯರು…

Read More