ಲೇಖಕ: admin

ಮಡಿಕೇರಿ ಮೇ 17 :  ಕೊಡಗು ಜಿಲ್ಲೆಯಲ್ಲಿ  ಕಾಡಾನೆಗಳ ದಾಂಧಲೆ ಮುಂದುವರಿದಿದ್ದು,   ಮನೆಯ ಗೇಟ್, ಕಾಫಿ, ಅಡಿಕೆ ಬೆಳೆಗಳನ್ನು ನಾಶಪಡಿಸಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಪುಲಿಯೇರಿ ಗ್ರಾಮದಲ್ಲಿ  ನಡೆದಿದೆ. ಬೆಳೆಗಾರ ಚೋವಂಡ ವಾಸು ಪೊನ್ನಪ್ಪ ಅವರ  ಮನೆಯಂಗಳಕ್ಕೆ ಲಗ್ಗೆ ಇಟ್ಟ ಕಾಡಾನೆಗಳು  ಮನೆಯ ಗೇಟ್ ಗೆ ಹಾನಿಗೊಳಿಸಿವೆ. ರಾತ್ರಿ ತೋಟಕ್ಕೆ ನುಗ್ಗಿ ಕಾಫಿ, ಅಡಿಕೆ ಬೆಳೆಗಳನ್ನು  ನಾಶಪಡಿಸಿವೆ.   ಕಳೆದೆರಡು ದಿನಗಳಿಂದ ಇದೆ ಭಾಗದಲ್ಲಿ ಕಾಡಾನೆಗಳು‌ ಬೀಡು ಬಿಟ್ಟಿದ್ದು, ಆತಂಕವನ್ನು ಸೃಷ್ಟಿಸಿವೆ. ಗ್ರಾಮಸ್ಥರು ಜೀವವನ್ನು ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು,  ತಕ್ಷಣ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಆನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Read More

ಮಡಿಕೇರಿ ಮೇ 17 : ಚುನಾವಣೆಗು ಮೊದಲು ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಕೊಡಗು ಜಿಲ್ಲೆಯ ಇಬ್ಬರು ನೂತನ ಶಾಸಕರು ಈಡೇರಿಸಲಿದ್ದು, ಸರ್ವಜನಾಂಗ ಅಭಿವೃದ್ಧಿಯಾಗಲಿದೆ ಎಂದು ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಚುನಾವಣೆಗೂ ಮೊದಲು ಕ್ಷೇತ್ರದಲ್ಲಿ ಸಂಚರಿಸಿ ಜನಸಾಮಾನ್ಯರ ಕಷ್ಟಗಳನ್ನು ಅರಿತು ಸ್ಪಂದಿಸುತ್ತಿದ್ದ ರೀತಿಗೆ ಉತ್ತರವಾಗಿ ಇಂದು ಮತದಾರರು ಗೆಲುವು ತಂದುಕೊಟ್ಟಿದ್ದಾರೆ. ಪೊನ್ನಣ್ಣ ಅವರು ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದರೊಂದಿಗೆ ಜನರ ಕನಸು ನನಸು ಮಾಡಲಿದ್ದಾರೆ. ಜಾತ್ಯತೀತ ಮತ್ತು ಪಕ್ಷಾತೀತವಾಗಿ ಅಭಿವೃದ್ಧಿಪರ ಚಿಂತನೆಯೊಂದಿಗೆ ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕು. ಆ ಮೂಲಕ ಸರ್ಕಾರ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಪೂರಕ ವಾತಾವರಣವನ್ನು ಸೃಷ್ಟಿಸಬೇಕೆಂದು ಮನವಿ ಮಾಡಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಪೋಕ್ಲು ಬ್ಲಾಕ್ ವ್ಯಾಪ್ತಿಯಲ್ಲಿ 11,500 ಮತಗಳನ್ನು ಗಳಿಸಿದ್ದ ಕೆ.ಜಿ.ಬೋಪಯ್ಯ ಅವರು ಈ ಬಾರಿ ಮೂರೂವರೆ ಸಾವಿರ ಮತಗಳಿಗೆ ಕುಸಿತ ಕಂಡಿದ್ದಾರೆ. ಇದು…

Read More

ಮಡಿಕೇರಿ ಮೇ 17 : ಅಭಿವೃದ್ಧಿ ಶೂನ್ಯ ವ್ಯವಸ್ಥೆ ಮತ್ತು ಭ್ರಷ್ಟಾಚಾರವನ್ನು ಮುಚ್ಚಿ ಹಾಕಲು ಜನರ ಹಾದಿ ತಪ್ಪಿಸುವುದಕ್ಕಾಗಿ ಬಿಜೆಪಿ ಮಾಡಿದ ಪ್ರಯತ್ನಗಳು ವಿಫಲವಾಗಿದ್ದು, ಜನರು ಪರಿವರ್ತನೆ ಬಯಸಿದ ಪರಿಣಾಮ ಕಾಂಗ್ರೆಸ್ ಭರ್ಜರಿ ಗೆಲುವನ್ನು ಸಾಧಿಸಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 20 ವರ್ಷಗಳಿಂದ ಗೆಲ್ಲಲು ಸಾಧ್ಯವಾಗದಿದ್ದ ಕೊಡಗು ಜಿಲ್ಲೆಯ ಎರಡೂ ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ಮಡಿಕೇರಿ ಕ್ಷೇತ್ರದ ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಎ.ಎಸ್.ಪೊನ್ನಣ್ಣ ಅವರು ಉತ್ಸಾಹಿ ಶಾಸಕರುಗಳಾಗಿದ್ದಾರೆ. ಈ ಗೆಲುವು ನನ್ನ ಒಬ್ಬನಿಂದ ಸಾಧ್ಯವಾಗಿಲ್ಲ, ತಳಮಟ್ಟದ ಕಾರ್ಯಕರ್ತರಿಂದ ಹಿಡಿದು ಪ್ರತಿಯೊಬ್ಬ ಪದಾಧಿಕಾರಿ ಹಾಗೂ ಮೇಲ್ಮಟ್ಟದ ನಾಯಕರಿಗೂ ಯಶಸ್ಸಿನ ಕೀರ್ತಿ ಸಲ್ಲಬೇಕು ಎಂದರು. ಬಿಜೆಪಿ ಸ್ಟಾರ್ ಪ್ರಚಾರಕನ್ನು ಕರೆತಂದರೂ ಎರಡು ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ಜಿಲ್ಲೆಯ ಇಬ್ಬರು ನೂತನ ಶಾಸಕರು ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಲಿದ್ದಾರೆ. ಚುನಾವಣೆ ಪೂರ್ವದಲ್ಲೇ ಮಂತರ್ ಗೌಡ ಹಾಗೂ ಪೊನ್ನಣ್ಣ…

Read More

ಮಡಿಕೇರಿ ಮೇ.17 : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಕಲಾ ವೈಭವ ಉತ್ಸವದ ಲೋಗೋವನ್ನು  ಬಿಡುಗಡೆ ಮಾಡಲಾಯಿತು. ಪ್ರಾಂಶುಪಾಲರಾದ ಮೇಜರ್ ಡಾ. ರಾಘವ.ಬಿ ಅವರು ಜೂನ್, 3 ರಂದು ನಡೆಯುವ ಕಲಾ ಉತ್ಸವ ‘ಕಲಾ ವೈಭವ’ ಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭ ಮಾತನಾಡಿದ ಪ್ರಾಂಶುಪಾಲರಾದ ಮೇಜರ್ ಡಾ.ಬಿ.ರಾಘವ ಅವರು, ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದರೆ, ಸೃಜನಶೀಲತೆ ಹೆಚ್ಚಿಸಲು ಅನುಕೂಲ ಆಗುತ್ತದೆ. ಜೊತೆಗೆ ಸ್ಪರ್ಧಾತ್ಮಕ ಯುಗದಲ್ಲಿಯೂ ಯಶಸ್ಸಿನ ಗುರಿಯತ್ತ ಸಾಗಲು ಸಹಕಾರಿಯಾಗುತ್ತದೆ ಎಂದು ಕಿವಿಮಾತು ಹೇಳಿದರು. ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಸಂಭ್ರಮದಿಂದ ಭಾಗವಹಿಸಿದರು. 

Read More

ಮಡಿಕೇರಿ ಮೇ 17 : ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕು ಮಡಿಕೇರಿ-ಕುಟ್ಟ ರಸ್ತೆಯ 8.30 ಕಿ.ಮೀ.ನಿಂದ 10 ಕಿ.ಮೀ ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಂಡು ಕಾಂಕ್ರೀಟ್ ರಸ್ತೆ ನಿರ್ಮಿಸುವ ನಿಟ್ಟಿನಲ್ಲಿ ಪ್ರಯಾಣಿಕರ ಮತ್ತು ಸಾರ್ವಜನಿಕರ ಸಂಚಾರದ ಹಿತದೃಷ್ಟಿಯಿಂದ ಸೋಮವಾರಪೇಟೆ ತಾಲ್ಲೂಕು ಮಡಿಕೇರಿ-ಕುಟ್ಟ ರಸ್ತೆಯ 8.30 ಕಿ.ಮೀ.ನಿಂದ 10 ಕಿ.ಮೀ.ವರೆಗಿನ ರಸ್ತೆಯಲ್ಲಿ ಮೇ, 22 ರಿಂದ ಜುಲೈ, 10 ರವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರು ಬದಲಿ ರಸ್ತೆಯಾದ ಮಡಿಕೇರಿ-ಸುಂಟಿಕೊಪ್ಪ-ಚೆಟ್ಟಳ್ಳಿ ಮಾರ್ಗವನ್ನು ಬಳಸುವುದು. ಈ ಬಗ್ಗೆ ಮೋಟಾರು ವಾಹನ ಕಾಯ್ದೆ 1988 ರ ಸೆಕ್ಷನ್ 116 ಹಾಗೂ ಕರ್ನಾಟಕ ಮೋಟಾರ್ ವಾಹನ ನಿಯಮಗಳು 1989 ರ (ತಿದ್ದುಪಡಿ ನಿಯಮಗಳು 1990) ನಿಯಮ 221 ಎ (2) ರಂತೆ ಅವಶ್ಯವಿರುವ ಸಂಜ್ಞೆ/ ಸೂಚನಾ ಫಲಕವನ್ನು ಅಳವಡಿಸಲು ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ಹಾಗೂ…

Read More

ಮಡಿಕೇರಿ ಮೇ 17 : ಇದೇ ಮೇ, 20 ಮತ್ತು 21 ರಂದು ನಡೆಯುವ ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಿಇಟಿ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಮೇ, 20 ಮತ್ತು 21 ರಂದು ಬೆಳಗ್ಗೆ 10.30 ಯಿಂದ 11.50 ಗಂಟೆವರೆಗೆ ಮತ್ತು ಮಧ್ಯಾಹ್ನ 2.30 ರಿಂದ 3.50 ಗಂಟೆ ವರೆಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು. ಸಿಇಟಿ ಪರೀಕ್ಷೆಯು ನಗರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ 722 ವಿದ್ಯಾರ್ಥಿಗಳು, ಸಂತ ಮೈಕಲರ ಶಾಲೆ 240 ವಿದ್ಯಾರ್ಥಿಗಳು, ಸಂತ ಜೋಸೆಫರ ಶಾಲೆ 312 ವಿದ್ಯಾರ್ಥಿಗಳು ಒಟ್ಟು 1274 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿಗಳಲ್ಲಿ ಸಿಸಿಟಿವಿ ಇರಬೇಕು ಎಂದು ಅವರು ಹೇಳಿದರು.

Read More

ಮಡಿಕೇರಿ ಮೇ 17 : ಇದೇ ಮೇ, 20 ಮತ್ತು 21 ರಂದು ನಡೆಯುವ ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಿಇಟಿ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಮೇ, 20 ಮತ್ತು 21 ರಂದು ಬೆಳಗ್ಗೆ 10.30 ಯಿಂದ 11.50 ಗಂಟೆವರೆಗೆ ಮತ್ತು ಮಧ್ಯಾಹ್ನ 2.30 ರಿಂದ 3.50 ಗಂಟೆ ವರೆಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು. ಸಿಇಟಿ ಪರೀಕ್ಷೆಯು ನಗರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ 722 ವಿದ್ಯಾರ್ಥಿಗಳು, ಸಂತ ಮೈಕಲರ ಶಾಲೆ 240 ವಿದ್ಯಾರ್ಥಿಗಳು, ಸಂತ ಜೋಸೆಫರ ಶಾಲೆ 312 ವಿದ್ಯಾರ್ಥಿಗಳು ಒಟ್ಟು 1274 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿಗಳಲ್ಲಿ ಸಿಸಿಟಿವಿ ಇರಬೇಕು ಎಂದು ಅವರು ಹೇಳಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು ಅವರು ಮಾಹಿತಿ ನೀಡಿ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗೆ…

Read More

ಮಡಿಕೇರಿ ಮೇ 17 :  ವಿರಾಜಪೇಟೆ ಕ್ಷೇತ್ರದ ನೂತನ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ವ್ಯಾಲಿ ಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಅಧ್ಯಕ್ಷ ಹಂಚೆಟ್ಟಿರ ಮನು ಮುದ್ದಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗು ಜಿಲ್ಲೆಗೆ ಸಚಿವ ಸ್ಥಾನ ದೊರೆಯದೆ ಹಲವು ವರ್ಷಗಳೇ ಕಳೆದಿದೆ. ಸುಮಾರು 20 ವರ್ಷಗಳ ನಂತರ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಆದ್ದರಿಂದ ಸಚಿವ ಸಂಪುಟದಲ್ಲಿ ಕೊಡವರೊಬ್ಬರಿಗೆ ಪ್ರಾತಿನಿಧ್ಯ ನೀಡಬೇಕೆಂದು ಮನವಿ ಮಾಡಿದ್ದಾರೆ. ಕೊಡಗು ಪುಟ್ಟ ಜಿಲ್ಲೆಯಾದರು ಇಲ್ಲಿಯವರೆಗೆ ನಿರೀಕ್ಷಿತ ಅಭಿವೃದ್ಧಿಯನ್ನು ಕಂಡಿಲ್ಲ. ಜಿಲ್ಲೆಯನ್ನು ಪ್ರತಿನಿಧಿಸಲು ಸಚಿವರು ಕೂಡ ಇರಲಿಲ್ಲ. ಕೊಡಗಿನಲ್ಲಿ ಕೊಡವರ ಪರವಾಗಿ ಪ್ರಭಾವ ಬೀರಲು ಯಾವುದೇ ಮಠ, ಮಂದಿರಗಳಿಲ್ಲ. ಕೊಡವರು ಸೂಕ್ಷ್ಮ ಬುಡಕಟ್ಟು ಜನಾಂಗವಾಗಿದ್ದು, ಕೊಡವರೊಬ್ಬರಿಗೆ ಸಚಿವ ಸ್ಥಾನ ನೀಡುವುದು ಸೂಕ್ತವಾಗಿದೆ. ಜಿಲ್ಲೆಯವರೇ ಸಚಿವರು ಹಾಗೂ ಉಸ್ತುವಾರಿ ಸಚಿವರಾದರೆ ಸ್ಥಳೀಯ ಸಮಸ್ಯೆಗಳನ್ನು ಶೀಘ್ರ ಅರಿತು ಸೂಕ್ತ ಪರಿಹಾರವನ್ನು ತಕ್ಷಣ ಕೈಗೊಳ್ಳಬಹುದಾಗಿದೆ. ಕೊಡವರ ಕುಲ ಶಾಸ್ತ್ರ ಅಧ್ಯಯನ, ಕೊಡವರನ್ನು…

Read More

ನಾಪೋಕ್ಲು  ಮೇ 17 :  ಬಲ್ಲಮಾವಟಿಯ ಭಜರಂಗಿ ಯೂತ್ ಕ್ಲಬ್ ವತಿಯಿಂದ ನೇತಾಜಿ ಪ್ರೌಢಶಾಲೆಯ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದ ದ್ವಿತೀಯ ವರ್ಷದ ಮುಕ್ತ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಶರತ್ ಫ್ರೆಂಡ್ಸ್ ತಂಡ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಫೈನಲ್ ಪಂದ್ಯದಲ್ಲಿ ಕೆ.ಎ.12 ವಾರಿಯರ್ಸ್ ಕೊಡಗು ತಂಡದ ವಿರುದ್ಧ ಗೆಲುವು ಸಾಧಿಸಿತು. ಮೊದಲು ಬ್ಯಾಟ್ ಮಾಡಿದ ಕೆಎ 12 ತಂಡ ಏಳು ವಿಕೆಟ್ ನಷ್ಟಕ್ಕೆ 26 ರನ್ ಗಳಿಸಿತು. ಇದನ್ನು ಸುಲಭವಾಗಿ ಬೆನ್ನತ್ತಿದ ಶರತ್ ಫ್ರೆಂಡ್ಸ್ ತಂಡ 2.3 ಓವರ್ ನಲ್ಲಿ ಒಂದು ವಿಕೆಟ್ ನಷ್ಟಕ್ಕೆ 29 ರನ್ ಗಳಿಸಿ ಗೆಲುವು ಸಾಧಿಸಿತು. ವಿಜೇತ ಶರತ್ ಫ್ರೆಂಡ್ಸ್ ತಂಡಕ್ಕೆ ರೂ. 25555 ನಗದು ಹಾಗೂ ಟ್ರೋಫಿಯನ್ನು ವಿತರಿಸಲಾಯಿತು ದ್ವಿತೀಯ ಸ್ಥಾನ ಪಡೆದ ಕೆಎ 12 ಕೊಡಗು ವಾರಿಯರ್ಸ್ ತಂಡಕ್ಕೆ ರೂ.13,333 ನಗದು ಹಾಗೂ ಟ್ರೋಫಿಯನ್ನು ವಿತರಿಸಲಾಯಿತು. ಮುಖ್ಯ ಅತಿಥಿಗಳಾಗಿ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್, ನೇತಾಜಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸಿಎಸ್ ಸುರೇಶ್,ಟ್ರೋಫಿ ದಾನಿ ಎಂ.ಎಂ.ಅಪ್ಪಣ್ಣ,ಎಡಿಕೇರಿ…

Read More

ಮಡಿಕೇರಿ ಮೇ 17 :  ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದ ಮೂಲಕ ಅಧಿಕಾರಕ್ಕೆ ಬಂದಿದೆ ಎನ್ನುವ ಕಾರಣಕ್ಕೆ ಮುಸ್ಲಿಂ ಯುವ ಸಮೂಹ ಯಾವುದೇ ಕಾರಣಕ್ಕೂ ಉದ್ವೇಗ ಮತ್ತು ಪ್ರಚೋದನೆಗೆ ಒಳಗಾಗಬಾರದು. ಈ ನಾಡಿನ ಕಾನೂನನ್ನು ಗೌರವಿಸುವ ಮೂಲಕ ಶಾಂತಿಯನ್ನು ಕಾಪಾಡಬೇಕು,ಅಪಪ್ರಚಾರ ಮಾಡುವವರಿಗೆ ಆಹಾರವಾಗಬಾರದು ಎಂದು ಟಿ.ಎಂ.ಶಾಹಿದ್ ಮನವಿ ಮಾಡಿದರು. ಮುಸ್ಲಿಂ ಧ್ವಜವನ್ನು ಹಾರಿಸಿದರೆ ಪಾಕಿಸ್ತಾನದ ಧ್ವಜವೆಂದು ಅಪಪ್ರಚಾರ ಮಾಡುತ್ತಿದ್ದಾರೆ. ಜನರ ಹಾದಿ ತಪ್ಪಿಸಲು ಮತ್ತು ಅಶಾಂತಿಯನ್ನು ಮೂಡಿಸಲು ಈ ರೀತಿಯ ಅಪಪ್ರಚಾರಗಳು ಆರಂಭಗೊಂಡಿದೆ. ಆದ್ದರಿಂದ ರಾಜ್ಯದ ಮುಸಲ್ಮಾನರು ಹಾಗೂ ಕ್ರೈಸ್ತರು ಜಾಗೃತಗೊಳ್ಳಬೇಕು. ಪ್ರಚೋದನೆ ಮತ್ತು ಆಮಿಷಗಳಿಗೆ ಒಳಗಾಗಬಾರದು, ಯಾವುದೇ ಅನ್ಯಾಯ ಅಥವಾ ಗೊಂದಲಗಳಾದಲ್ಲಿ ಶಾಸಕರುಗಳ ಗಮನಕ್ಕೆ ತರುವ ಪ್ರಯತ್ನ ಮಾಡಿ. ಕಾನೂನನ್ನು ಕೈಗೆತ್ತಿಕೊಳ್ಳುವ ಪ್ರಯತ್ನಕ್ಕೆ ಮುಂದಾಗಬೇಡಿ ಎಂದು ಮನವಿ ಮಾಡಿದರು. ಎಲ್ಲಾ ಸಮುದಾಯದಲ್ಲೂ ಕೆಲವರು ಕೋಮುವಾದಿಗಳಿದ್ದಾರೆ, ಯಾವುದೇ ಸಮುದಾಯ ಅಥವಾ ಸಂಘಟನೆ ಇರಲಿ. ಕಾನೂನು ಮೀರಿ ವರ್ತಿಸಿದರೆ ನೂತನ ಕಾಂಗ್ರೆಸ್ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಮುಂಬರುವ ಜಿ.ಪಂ, ತಾ.ಪಂ ಮತ್ತು ಲೋಕಸಭಾ…

Read More