ಮಡಿಕೇರಿ ಮೇ 17 : ಡಿ.ಶಿವಪ್ಪ ಸ್ಮರಣಾರ್ಥ ಸುಂಟಿಕೊಪ್ಪದ ಬ್ಲೂಬಾಯ್ಸ್ ಯುವಕ ಸಂಘದ ವತಿಯಿಂದ ಮೇ 19 ರಿಂದ ಮೇ 28ರ ವರೆಗೆ ರಾಜ್ಯಮಟ್ಟದ 25ನೆ ಬೆಳ್ಳಿ ಮಹೋತ್ಸವದ ಗೋಲ್ಡ್ ಕಪ್ ಫುಟ್ಬಾಲ್ ಪಂದ್ಯಾವಳಿ ನಡೆಯಲಿದೆ ಎಂದು ಸಂಘದ ಪ್ರವರ್ತಕರು ಹಾಗೂ ಗೋಲ್ಡ್ ಕಪ್ ದಾನಿ ಬಿ.ವಿನೋದ್ ಶಿವಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಂಟಿಕೊಪ್ಪದ ಪ್ರಾಥಮಿಕ ಸರ್ಕಾರಿ ಶಾಲಾ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದ್ದು, ಮೇ 19 ರಂದು ಮಧ್ಯಾಹ್ನ 3 ಗಂಟೆಗೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮತ್ತು ಎ.ಎಸ್.ಪಿ. ಸುಂದರ್ ರಾಜ್, ಬ್ಲೂಬಾಯ್ಸ್ ಯುವಕ ಸಂಗದ ಸ್ಥಾಪಕರಾದ ಜೆರ್ಮಿ ಡಿಸೋಜ, ಹಿರಿಯ ಆಟಗಾರ ಪ್ಯಾಟ್ರಿಕ್ ಸೇರಿದಂತೆ ಹಲವಾರು ಗಣ್ಯರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ಈ ಬಾರಿ ಪಂದ್ಯಾವಳಿಯಲ್ಲಿ ಬೆಂಗಳೂರು, ಮಂಡ್ಯ, ಮೈಸೂರು, ಕೇರಳದ ಕ್ಯಾಲಿಕಟ್, ಮಲಪುರಂ, ಕೂತುಪರಂಬು, ಕಂಬ್ಳೆ, ಉಪ್ಪಳ, ನಂಜನಗೂಡು, ಕೆಜಿಎಫ್ನ ವಾರಿಯರ್ಸ್ ಪುಟ್ಬಾಲ್ ಕ್ಲಬ್, ಕೊಡಗಿನ ಪ್ರತಿಷ್ಟಿತ ತಂಡಗಳಾದ…
ಲೇಖಕ: admin
ನಾಪೋಕ್ಲು ಮೇ 17 : ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾದದ್ದು, ತಾಳ್ಮೆ, ಸಂಯಮ, ಶಿಕ್ಷಣ ಸೇರಿದರೆ ಮಾತ್ರ ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆದು ಜೀವನದಲ್ಲಿ ಮುಂದೆ ಬರಲು ಸಾಧ್ಯ ಎಂದು ನಾಪೋಕ್ಲು ಗ್ರಾ.ಪಂ ಸದಸ್ಯ ಹಾಗೂ ಸ್ಥಳದಾನಿ ಕುಲ್ಲೇಟಿರ ಅರುಣ್ ಬೇಬ ಹೇಳಿದರು. ನಾಪೋಕ್ಲು ಬಳಿಯ ಹಳೇ ತಾಲೂಕಿನ ಶ್ರೀ ಭಗವತಿ ಸಮುದಾಯ ಭವನದಲ್ಲಿ ಆಯೋಜಿಸಲಾದ ಹಳೇ ತಾಲೂಕು ಅಂಗನವಾಡಿ ಕೇಂದ್ರದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಂಗನವಾಡಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕಿ ಹಾಗೂ ಕಾರ್ಯಕರ್ತೆಯರ ಉತ್ತಮ ಸೇವೆ ಹಾಗೂ ಕಠಿಣ ಪರಿಶ್ರಮದಿಂದ ಈ ಅಂಗನವಾಡಿ ಕೇಂದ್ರವು ಮಡಿಕೇರಿ ತಾಲೂಕಿನಲ್ಲಿಯೇ ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಮಾದರಿ ಅಂಗನವಾಡಿ ಪ್ರಶಸ್ತಿ ಪಡೆದಿರುವುದು ಶ್ಲಾಘನೀಯ,ಈ ಅಂಗನವಾಡಿಯಲ್ಲಿ ಇನ್ನು ಕೆಲವು ಸಮಸ್ಯೆಗಳಿದ್ದು, ಇದನ್ನು ಸರಿಪಡಿಸಿ ಮುಂದಿನ ದಿನಗಳಲ್ಲಿ ಜಿಲ್ಲಾ ಮತ್ತು ರಾಜ್ಯಮಟ್ಟದ ಪ್ರಶಸ್ತಿಯನ್ನು ಪಡೆಯುವಂತ್ತಾಗಬೇಕು. ಇದಕ್ಕೆ ಎಲ್ಲಾ ರೀತಿಯಲ್ಲಿ ಸಹಕಾರ ನೀಡುತ್ತೇನೆ ಎಂದು ಅರುಣ್ ಬೇಬ ಭರವಸೆ ನೀಡಿದರು.…
ಸುಂಟಿಕೊಪ್ಪ ಮೇ 16: ಗುಡ್ಡಪ್ಪ ರೈ ಬಡಾವಣೆಯ ಶ್ರೀ ಹುಲಿ ಮಸಣಿಕಮ್ಮ ದೇವಸ್ಥಾನದ ವಾರ್ಷಿಕೋತ್ಸವದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಶ್ರದ್ಧಾ ಭಕ್ತಿಯಿಂದ ನೆರವೇರಿತು. ಉತ್ಸವದ ಅಂಗವಾಗಿ ದೇವಿಗೆ ¨ ಬೆಳಗ್ಗೆ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನದ ಮಹಾಪೂಜೆ ಮಂಗಳಾರತಿಯ ಬಳಿಕ ಪ್ರಸಾದ ವಿತರಣೆ ನಡೆಯಿತು. ಸಂಜೆ 5 ಗಂಟೆಯವರೆಗೆ ನೆರೆದಿದ್ದ ಭಕ್ತರಿಗೆ ಅನ್ನ ಸಂತರ್ಪಣೆ ಮಾಡಲಾಯಿತು. ಸುಂಟಿಕೊಪ್ಪ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಗಳಿಂದ ನೂರಾರು ಭಕ್ತಾದಿಗಳು ಉತ್ಸವದಲ್ಲಿ ಪಾಲ್ಗೊಂಡಿದ್ದರು. ಶ್ರೀ ಹುಲಿ ಮಸಣಿಕಮ್ಮ ದೇವಸ್ಥಾನದ ಸಮಿತಿ ಅಧ್ಯಕ್ಷ ಅಯ್ಯಪ್ಪ, ಉಪಾಧ್ಯಕ್ಷ ಬಿ.ಬಿ.ಜಿನ್ನಪ್ಪ, ಪ್ರಧಾನ ಕಾರ್ಯದರ್ಶಿ ಬಿ.ಕೆ.ಮೋಹನ, ಗೌರವ ಅಧ್ಯಕ್ಷ ರಾಜ ಸರ್ವ ಸದಸ್ಯರು ಹಾಜರಿದ್ದರು.
ಸೋಮವಾರಪೇಟೆ ಮೇ 16 : ಸರ್ಕಾರಿ ಕಚೇರಿಯಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದಿಂದ ಬೇಸತ್ತ ಮತದಾರರು ಕಾಂಗ್ರೆಸ್ಗೆ ಮತನೀಡಿದ್ದು, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಕಾರ್ಯಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗನ್ನು ಬಿಜೆಪಿ ಮುಕ್ತ ಜಿಲ್ಲೆಯನ್ನಾಗಿ ಪರಿವರ್ತಿಸಲು ತಳಮಟ್ಟದಿಂದಲೇ ಪಕ್ಷ ಸಂಘಟನೆ ಮಾಡಿದ ಹಿನ್ನೆಲೆಯಲ್ಲಿ ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ದಕ್ಕಿಸಿಕೊಳ್ಳಲಾಗಿದೆ ಎಂದು ಹೇಳಿದರು. ಬ್ಲಾಕ್ನ 107 ಬೂತ್ಗಳಲ್ಲಿ 5 ಬೂತ್ಗಳಲ್ಲಿ ಮಾತ್ರ ಬಿಜೆಪಿ ಹೆಚ್ಚಿನ ಮತಗಳನ್ನು ಪಡೆದಿರುವುದು ಬಿಟ್ಟರೆ, ಉಳಿದ ಎಲ್ಲಾ ಬೂತ್ಗಳಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ ಎಂದರು. ಭ್ರಷ್ಟಾಚಾರಕ್ಕೆ ಬಿಜೆಪಿ ಪರೋಕ್ಷ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಸೋಲು ಕಾಣಬೇಕಾಯಿತು. ತಾಲ್ಲೂಕು ಕಚೇರಿ ಸೇರಿದಂತೆ ಇನ್ನಿತರ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಇಲ್ಲದಂತಾಗಿದೆ. ಅಕ್ರಮ-ಸಕ್ರಮದಲ್ಲಿ ರೈತರ ಶೋಷಣೆ ಮಾಡಲಾಗಿದೆ. ಲಂಚ ನೀಡದ ಹಿನ್ನೆಲೆಯಲ್ಲಿ ದುರಸ್ತಿ ಸೇರಿದಂತೆ ಹೆಚ್ಚಿನ ಕಡತಗಳು ಕಚೇರಿಯಲ್ಲೇ ಕೊಳೆಯುತ್ತಿವೆ. ಪ್ರತಿ ಕಡತಕ್ಕೂ ಲಕ್ಷದ ಲೆಕ್ಕದಲ್ಲಿ ಹಣವನ್ನು ನಿಗದಿ ಮಾಡಿಕೊಂಡಿದ್ದಾರೆ.…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆ ಪರಿಷ್ಕರಣೆ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ 7ನೇ ವೇತನ ಆಯೋಗಕ್ಕೆ ವರದಿ ಸಲ್ಲಿಸುವ ಅವಧಿಯನ್ನು ಆರು ತಿಂಗಳು ವಿಸ್ತರಣೆ ಮಾಡಲಾಗಿದೆ. ರಾಜ್ಯಪಾಲರ ಆದೇಶದಂತೆ, 7ನೇ ವೇತನ ಆಯೋಗದ ವರದಿ ಸಲ್ಲಿಕೆಗೆ ನೀಡಲಾಗಿದ್ದ ಸಮಯಾವಕಾಶವನ್ನು ಮೇ 19, 2023 ರಿಂದ ಆರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ(ಆರ್ಥಿಕ ಇಲಾಖೆ) ಆದೇಶ ಹೊರಡಿಸಿದ್ದಾರೆ. ನವೆಂಬರ್ 19, 2022ರಲ್ಲಿ 7ನೇ ವೇತನ ಆಯೋಗ ರಚಿಸಲಾಗಿತ್ತು ಮತ್ತು ವರದಿ ಸಲ್ಲಿಸಲು ಆರು ತಿಂಗಳ ಸಮಯ ನೀಡಲಾಗಿತ್ತು.
ಮಡಿಕೇರಿ ಮೇ 16 : ಆಲೂರು ಸಿದ್ದಾಪುರ 66 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯ ನಿರ್ವಹಿಸಬೇಕಿದ್ದು, ಈ ಹಿನ್ನೆಲೆ ಮೇ, 17 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಆಲೂರು ಸಿದ್ದಾಪುರ, ಮಾಲಂಬಿ, ಹೊಸಗುತ್ತಿ, ಬಾಣಾವಾರ, ಗೋಣಿಮೂರೂರು, ಗಣಗೂರು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಅವರು ಕೋರಿದ್ದಾರೆ.
ಮಡಿಕೇರಿ ಮೇ 16 : ಪೊನ್ನಂಪೇಟೆ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್10 ಹೈಸೊಡ್ಲೂರು ಫೀಢರ್ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಮೇ, 17 ರಂದು ಬೆಳಗ್ಗೆ 9.30 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಹುದಿಕೇರಿ, ಹೈಸೊಡ್ಲೂರು ಬೆಳ್ಳೂರು, ಕೋಣಂಗೇರಿ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಮೇ 16 : ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ನಗರದ ಸರ್ಕಾರಿ ವಸ್ತುಸಂಗ್ರಹಾಲಯದಲ್ಲಿ ಮೇ, 18 ರಂದು ಅಂತರರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನಾಚರಣೆಯನ್ನು ‘ವಸ್ತುಸಂಗ್ರಹಾಲಯಗಳು, ಸುಸ್ಥಿರತೆ ಮತ್ತು ಯೋಗಕ್ಷೇಮ’ ಎಂಬ ಘೋಷವಾಕ್ಯದಡಿಯಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಅಂಗವಾಗಿ ಮಧು ಸೋಮಣ್ಣ, ಡಾ.ಎಂ.ಜಿ.ಪಾಟ್ಕರ್ ಮತ್ತು ಹುಣಸೂರು ಪಿ.ಕೆ.ಕೇಶವಮೂರ್ತಿ ಅವರು ಸಂಗ್ರಹಿಸಿಟ್ಟು ಕೊಂಡಿರುವ ಕೊಡಗಿನ ಸಾಂಪ್ರದಾಯಿಕ ಪರಿಕರಗಳ ಪ್ರದರ್ಶವನ್ನು ಕೋಟೆ ಆವರಣದಲ್ಲಿ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮವನ್ನು ಮೇ, 18 ರಂದು ಬೆಳಗ್ಗೆ 9.30 ಗಂಟೆಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಉದ್ಘಾಟಿಸಲಿದ್ದಾರೆ ಎಂದು ಸರ್ಕಾರಿ ವಸ್ತು ಸಂಗ್ರಹಾಲಯದ ಕ್ಯೂರೇಟರ್ ರೇಖಾ ಅವರು ತಿಳಿಸಿದ್ದಾರೆ.
ಮಡಿಕೇರಿ ಮೇ 16 : ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣ ರೆಪರ್ಟರಿಯು ಕಳೆದ 14 ವರ್ಷಗಳ ಹಿಂದೆ ಸ್ಥಾಪಿಸಿದ ಭಾರತೀಯ ರಂಗಶಿಕ್ಷಣ ಕೇಂದ್ರ ಪೂರ್ಣ ಪ್ರಮಾಣದ ರಂಗ ಶಿಕ್ಷಣವನ್ನು ನೀಡುವ ಸಂಸ್ಥೆಯಾಗಿದೆ. ಈ ಸಂಸ್ಥೆ ಮೈಸೂರಿನ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ಚವಿದ್ಯಾಲಯದ ಮಾನ್ಯತೆ ಪಡೆದಿದೆ. ಪ್ರತಿವರ್ಷ ರಂಗ ಶಿಕ್ಷಣದಲ್ಲಿ ಹತ್ತು ತಿಂಗಳ ಡಿಪ್ಲೊಮೊ ಕೋರ್ಸ್ನ್ನು ನಡೆಸುವ ಈ ಸಂಸ್ಥೆಗೆ ಪ್ರಸ್ತುತ 2023-24ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2023-24 ನೇ ಸಾಲಿನ ಈ ರಂಗ ತರಬೇತಿ ಕೋರ್ಸ್ಗೆ ಸೇರಬಯಸುವ ವಿದ್ಯಾರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು. ಕನಿಷ್ಠ ದ್ವಿತೀಯ ಪಿಯುಸಿ (10+2) ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು. ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಗೊಳಿಸಿದ ಕಡೆಯ ದಿನಾಂಕಕ್ಕೆ 18 ವರ್ಷಗಳು ತುಂಬಿದ ಮತ್ತು 28 ವರ್ಷಗಳು ತುಂಬಿರದ ಅಭ್ಯರ್ಥಿಗಳಾಗಿರಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ರಂಗಾಯಣದಿಂದಲೇ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು ಮತ್ತು ಮಾಹೆಯಾನ 5 ಸಾವಿರ ರೂ ವಿದ್ಯಾರ್ಥಿ…
ಮಡಿಕೇರಿ ಮೇ 16 : ಕಾಡಾನೆ ದಾಳಿಯಿಂದ ಕಾರ್ಮಿಕ ಗಂಭೀರ ಗಾಯಗೊಂಡಿರುವ ಘಟನೆ ಪಾಲಿಬೆಟ್ಟದಲ್ಲಿ ನಡೆದಿದೆ. ಪಾಲಿಬೆಟ್ಟದ ನಿವಾಸಿ ಬಾಬಿ(58) ಎಂಬವರೆ ಕಾಡಾನೆ ದಾಳಿಗೆ ಸಿಲುಕಿ ಗಾಯಗೊಂಡಿರುವ ವ್ಯಕ್ತಿಯಾಗಿದ್ದು, ಇವರನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾಲಿಬೆಟ್ಟದ ಮಸ್ಕಲ್ ಕಾಫಿ ತೋಟದಲ್ಲಿ ಬಾಬಿ ಮತ್ತು ಇನ್ನಿತರ ಕಾರ್ಮಿಕರು ಕೆಲಸ ಮಾಡುತ್ತಿದ್ದ ಸಂದರ್ಭ ಕಾಡಾನೆ ದಾಳಿ ಮಾಡಿದ್ದು, ಈ ಸಂದರ್ಭ ಕಾಡಾನೆಯ ನೇರ ದಾಳಿಗೆ ಸಿಲುಕಿದ ಬಾಬಿ ಅವರ ಎದೆ ಮತ್ತು ಕೈಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಇವರನ್ನು ತಕ್ಷಣ ಸಮೀಪದ ಆರ್ಐಹೆಚ್ಪಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅರಣ್ಯ ಅಧಿಕಾರಿಗಳ ಭೇಟಿ : ಘಟನಾ ಸ್ಥಳಕ್ಕೆ ಡಿಎಫ್ಒ ಶರಣ ಬಸಪ್ಪ, ಎಸಿಎಫ್ ನೆಹರು, ಉಪ ವಲಯ ಅರಣ್ಯಾಧಿಕಾರಿ ಸಂಜಿತ್ ಸೋಮಯ್ಯ, ಅರಣ್ಯ ಅಧಿಕಾರಿ ಕಳ್ಳಿರ ಎಂ. ದೇವಯ್ಯ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದರು. ಬಾಬಿ ಅವರ ಚಿಕಿತ್ಸಾ ವೆಚ್ಚವನ್ನು ಇಲಾಖೆ ವತಿಯಿಂದಲೆ ಭರಿಸುವುದಾಗಿ…






