ಲೇಖಕ: admin

ಮಡಿಕೇರಿ ಮೇ 16 : ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಜಿಲ್ಲೆಯ ಶಾಸಕರಿಗೆ ಅವಕಾಶ ಒದಗಿಸುವುದರೊಂದಿಗೆ, ಸ್ಥಳೀಯರನ್ನೆ ಜಿಲ್ಲಾ ಉಸ್ತುವಾರಿಯನ್ನಾಗಿ ನಿಯುಕ್ತಿಗೊಳಿಸಬೇಕೆಂದು ಮಾಜಿ ಎಂಎಲ್‍ಸಿ ಶಾಂತೆಯಂಡ ವೀಣಾ ಅಚ್ಚಯ್ಯ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಮಡಿಕೇರಿ ಕ್ಷೇತ್ರದಿಂದ ಡಾ.ಮಂಥರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದಿಂದ ಅಜ್ಜಿಕುಟ್ಟೀರ ಪೊನ್ನಣ್ಣ ಅವರು ಆಯ್ಕೆಯಾಗಿದ್ದು, ಇವರಿಬ್ಬರು ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಕಾಳಜಿಯನ್ನು ಹೊಂದಿದ್ದು, ಇವರಿಗೆ ಸಚಿವ ಸ್ಥಾನವನ್ನು ನೀಡಬೇಕು. ಈ ಬಗ್ಗೆ ಜಿಲ್ಲಾ ಕಾಂಗ್ರೆಸ್ ಪ್ರಮುಖರು ಸಭೆ ನಡೆಸಿ ಕಾಂಗ್ರೆಸ್ ವರಿಷ್ಠರ ಬಳಿಗೆ ನಿಯೋಗ ತೆರಳಿ ಆಗ್ರಹಿಸಲಾಗುವುದೆಂದು ಸ್ಪಷ್ಟಪಡಿಸಿದರು. ಕೊಡಗಿಗೆ ಆದ್ಯತೆ ನೀಡಿ- ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತವನ್ನು ಪಡೆದುಕೊಂಡಿದ್ದು, ನೂತನ ಸರ್ಕಾರದಲ್ಲಿ ಮುಖ್ಯ ಮಂತ್ರಿಗಳಾಗಿ ಯಾರೇ ಅಧಿಕಾರಕ್ಕೆ ಬರಲಿ, ಅವರು ಕೊಡಗಿನ ಪ್ರಗತಿಗೆ ಹೆಚ್ಚಿನ ಆದ್ಯತೆಯನ್ನು ನೀಡುವಂತಾಗಬೇಕು. ಜಿಲ್ಲೆಯ ಸರ್ವಾಂಗಿಣ ಪ್ರಗತಿಗೆ ಒತ್ತು ನೀಡುವಂತೆ ಸರ್ಕಾರವನ್ನು ಆಗ್ರಹಿಸಲು ಎಲ್ಲಾ ಸಂಘ ಸಂಸ್ಥೆಗಳು, ಪಕ್ಷದ ಮುಖಂಡರೊಂದಿಗೆ…

Read More

ಮಡಿಕೇರಿ ಮೇ 16 : ಕೊಡಗು ಜಿಲ್ಲೆಯ ಸಮಗ್ರ ಅಭಿವೃದ್ಧಿ ಮತ್ತು ಜಟಿಲ ಸಮಸ್ಯೆಗಳ ಪರಿಹಾರಕ್ಕಾಗಿ ನೂತನ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿ ಸದಸ್ಯ ಹಾಗೂ ಕರಿಕೆ ಗ್ರಾ.ಪಂ ಉಪಾಧ್ಯಕ್ಷ ಎನ್.ಬಾಲಚಂದ್ರನ್ ನಾಯರ್ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಕೊಡಗಿಗೆ ಸಚಿವ ಸ್ಥಾನ ದೊರೆತ್ತಿದೆ, ಈ ಬಾರಿಯೂ ಸಚಿವ ಸ್ಥಾನ ನೀಡುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಕಳೆದ 20-25 ವರ್ಷಗಳಿಂದ ಜಿಲ್ಲೆಯ ಗಡಿ ಗ್ರಾಮಗಳು ಸೇರಿದಂತೆ ವಿವಿಧ ಪ್ರದೇಶಗಳು ಅಭಿವೃದ್ಧಿ ಶೂನ್ಯವಾಗಿದೆ. ಮೂಲಭೂತ ಸಮಸ್ಯೆಗಳಿಗೆ ಪರಿಹಾರವೇ ಇಲ್ಲದೆ ಜನಸಾಮಾನ್ಯರು ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಇಲ್ಲಿಯವರೆಗೆ ಯಾವುದೇ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸೂಚಿಸಲು ಸಾಧ್ಯವಾಗಿಲ್ಲ. ಇದೀಗ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಯ ಭದ್ರಕೋಟೆಯನ್ನು ಬೇಧಿಸಿರುವ ಕಾಂಗ್ರೆಸ್ ನ ಉತ್ಸಾಹಿ ಯುವ ಅಭ್ಯರ್ಥಿಗಳು ಶಾಸಕರಾಗಿ ಆಯ್ಕೆಯಾಗಿದ್ದು, ಮುಂದಿನ ಐದು ವರ್ಷಗಳ ಕಾಲ ಜಿಲ್ಲೆಯಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯಗಳು ನಡೆಯಲಿದೆ ಎಂದು…

Read More

ವಿರಾಜಪೇಟೆ ಮೇ 16 : ರೈತರ ಹೆಸರಿನಲ್ಲಿ ಸ್ಥಾಪನೆಯಾದ ಸರ್ವೋದಯ ಕರ್ನಾಟಕ ಪಕ್ಷದ ಏಕೈಕ ಶಾಸಕ ದರ್ಶನ್ ಪುಟ್ಟಣಯ್ಯ ಅವರನ್ನು ಕರ್ನಾಟಕ ರಾಜ್ಯ ರೈತ ಸಂಘ ಕೊಡಗು ಜಿಲ್ಲಾ ಘಟಕವು ಭೇಟಿ ನೀಡಿ ರೈತರ ಸಮಸ್ಯೆಗಳ ಬಗ್ಗೆ ಮಾತನಾಡಿದರು. ಕರ್ನಾಟಕ ರಾಜ್ಯ ರೈತ ಸಂಘ ಕೊಡಗು ಜಿಲ್ಲಾ ಘಟಕದ ವತಿಯಿಂದ ಕೊಡಗು ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಅವರ ನೇತೃತ್ವದ ನಿಯೋಗವು ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಕರ್ನಾಟಕ ರಾಜ್ಯ ರೈತ ಸಂಘ ಬೆಂಬಲಿತ ಮಂಡ್ಯ ಜಿಲ್ಲೆ ಮೆಲುಕೋಟೆಯ ಶಾಸಕ ದರ್ಶನ್ ಪುಟ್ಟಣಯ್ಯ ಅವರನ್ನು ಮಂಡ್ಯ ನಗರದ ಪ್ರವಾಸಿ ಮಂದಿರಲ್ಲಿ ಭೇಟಿ ಮಾಡಿ ಜಿಲ್ಲೆಯಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಕೊಡಗು ಜಿಲ್ಲೆಯು ಪುಟ್ಟದಾದರು ರಾಜ್ಯ ಮತ್ತು ಕೇಂದ್ರಕ್ಕೆ ಅಪಾರ ಪ್ರಮಾಣದಲ್ಲಿ ತೆರಿಗೆಯನ್ನು ನೀಡುತ್ತಿದೆ. ಇಲ್ಲಿ ಕಾಡಾನೆ ಮಾನವ ಸಂಘರ್ಷ, ವನ್ಯಜೀವಿಗಳಿಂದ ಕಾಫಿ ಸೇರಿದಂತೆ ಇತರ ಬೆಳೆಗಳಿಗೆ ಹಾನಿ, ಅಡಿಕೆ ಮತ್ತು ಭತ್ತ ಇತರ ವಾಣಿಜ್ಯ ಬೆಳೆಗಳಿಗೆ ಬೆಂಬಲ…

Read More

ಮಡಿಕೇರಿ ಮೇ 16 : ಕಾಂಗ್ರೆಸ್ ಪಕ್ಷದ ಇಬ್ಬರು ಅಭ್ಯರ್ಥಿಗಳ ಗೆಲುವಿನಲ್ಲಿ ಜಿಲ್ಲೆಯ ಮಹಿಳಾ ಮತದಾರರ ಪಾತ್ರ ಅತ್ಯಂತ ಪ್ರಮುಖವಾಗಿದ್ದು, ಎರಡೂ ಕ್ಷೇತ್ರಗಳಲ್ಲಿ ಮಹಿಳೆಯರು ಕಾಂಗ್ರೆಸ್ ಗೆ ಉತ್ತಮ ಸ್ಪಂದನೆ ನೀಡಿದ್ದಾರೆ ಎಂದು ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಕರ್ತರ ಶ್ರಮ ಮತ್ತು ಎಐಸಿಸಿಯಿಂದ ಆಗಮಿಸಿದ್ದ ಮಹಿಳಾ ವೀಕ್ಷಕರ ಮಾರ್ಗದರ್ಶನ ಇಬ್ಬರು ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಿದೆ. ಕಾಂಗ್ರೆಸ್ ಪಕ್ಷ ಪ್ರತಿ ಮಹಿಳೆಯರಿಗೆ ಮಾಸಿಕ 2 ಸಾವಿರ ರೂ. ಸಹಾಯಧನ ಸೇರಿದಂತೆ ಗ್ಯಾರಂಟಿ ಕಾರ್ಡ್ ಮೂಲಕ ನೀಡಲಾದ ಭರವಸೆಗಳನ್ನು ಈಡೇರಿಸಲಾಗುವುದು ಎಂದರು. ಇಬ್ಬರು ನೂತನ ಶಾಸಕರು ಕೊಡಗಿನ ಅಭಿವೃದ್ಧಿಗಾಗಿ ಶ್ರಮಿಸಲಿದ್ದಾರೆ. ಮಹಿಳಾ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯಲಿದ್ದು, ಜಿಲ್ಲಾ ಉಸ್ತುವಾರಿಯಾಗಿ ಬರುವುದು ಖಚಿತವೆಂದು ಸುರಯ್ಯ ಅಬ್ರಾರ್ ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ಪ್ರಮುಖ ನೆರವಂಡ ಉಮೇಶ್ ಮಾತನಾಡಿ, ಪ್ರತಿಸ್ಪರ್ಧಿಗಳ ಉರುಳಿಲ್ಲದ ಆರೋಪ ಮತ್ತು…

Read More

ಮಡಿಕೇರಿ ಮೇ 16 : ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ನೂತನ ಶಾಸಕರುಗಳಾಗಿ ಆಯ್ಕೆಯಾಗಿರುವ ಡಾ.ಮಂತರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರುಗಳು ಪರಿಶಿಷ್ಟ ಜಾತಿ ಮೊಗೇರ ಕುಟುಂಬಗಳಿಗೆ ಶೀಘ್ರ ನಿವೇಶನ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮುದ್ದ ಕಳಲ ಯುವಕ ಸಂಘ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಜಿಲ್ಲಾಧ್ಯಕ್ಷ ಜ್ಯೋತಿಕುಮಾರ್ ಸ್ವತಂತ್ರ್ಯ ಪೂರ್ವದಿಂದಲೇ ಕೊಡಗಿನ ವಿವಿಧೆಡೆ ಕಾಫಿ ತೋಟಗಳ ಲೈನ್ ಮನೆಯಲ್ಲಿ ಜೀವನ ಸಾಗಿಸುತ್ತಿರುವ ಪರಿಶಿಷ್ಟ ಜಾತಿ ಮೊಗೇರ ಕುಟುಂಬಗಳು ಸ್ವಂತ ಸೂರು ಮತ್ತು ವಿವಿಧ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಆದ್ದರಿಂದ ನಿವೇಶನ ಮಂಜೂರು ಮಾಡುವ ಮೂಲಕ ಬಡ ಕುಟುಂಬಗಳನ್ನು ಲೈನ್ ಮನೆಯಿಂದ ಮುಕ್ತಗೊಳಿಸಬೇಕೆಂದು ಕೋರಿದ್ದಾರೆ. ಕಳೆದ 2 ವರ್ಷಗಳಿಂದ ಬೀದಿಗಿಳಿದು ಹೋರಾಟ ಮಾಡಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು ಇಲ್ಲಿಯವರೆಗೆ ಯಾವುದೇ ಸ್ಪಂದನೆ ದೊರೆತ್ತಿಲ್ಲ ಎಂದು ಟೀಕಿಸಿರುವ ಅವರು, ನೂತನ ಶಾಸಕರುಗಳ ಅವಧಿಯಲ್ಲಾದರು ಲೈನ್ ಮನೆಗಳಲ್ಲಿ ಜೀವನ ಸಾಗಿಸುತ್ತಿರುವ ಪರಿಶಿಷ್ಟ ಜಾತಿ ಮೊಗೇರ…

Read More

ಮಡಿಕೇರಿ ಮೇ 16 : ಜೆಸಿಐ ಪೊನ್ನಂಪೇಟೆ ನಿಸರ್ಗ ಸಂಸ್ಥೆ ವತಿಯಿಂದ ಮೇ 21 ರಂದು 2 ನೇ ವರ್ಷದ ಜೆಸಿ ನಿಸರ್ಗ ಶೂಟಿಂಗ್ ಸ್ಪರ್ಧೆ ನಡೆಯಲಿದೆ ಎಂದು ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ ಅಧ್ಯಕ್ಷ ಜೆಸಿ ಮುಕ್ಕಾಟಿರ ನೀತ್ ಅಯ್ಯಪ್ಪ ತಿಳಿಸಿದ್ದಾರೆ. ಪೊನ್ನಂಪೇಟೆಯಲ್ಲಿ ಮಾತನಾಡಿದ ಅವರು ಬಾಳುಗೋಡು ಕೊಡವ ಸಮಾಜದ ಮೈದಾನದಲ್ಲಿ 0.22 ಸ್ಪರ್ಧೆ, 12 ಬೋರ್‍ನಲ್ಲಿ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ಹಾಗೂ ಏರ್ ಗನ್ ನಲ್ಲಿ ಕೋಳಿಮೊಟ್ಟೆಗೆ ಗುರಿ ಇಡುವ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿದೆ ಎಂದು ಹೇಳಿದರು. 0.22 ಹಾಗೂ 12 ಬೋರ್ ಸ್ಪರ್ಧೆಯ ಪ್ರಥಮ ಬಹುಮಾನ 20 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ 15 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ, ತೃತೀಯ 10 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು ಎಂದು ಮಾಹಿತಿ ನೀಡಿದರು. ಈ ಸಂದರ್ಭ ಸಂಸ್ಥೆಯ ಪೂರ್ವಾಧ್ಯಕ್ಷ ಅಪ್ಪಡೇರಡ ದಿನು, ಆಪಟ್ಟೀರ ಟಾಟು ಮೊಣ್ಣಪ್ಪ, ಚಟ್ಟೋಳಿರ ಶರತ್…

Read More

ಮಡಿಕೇರಿ ಮೇ 16 : ಅಂಗಡಿ ಮಳಿಗೆಯೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾದ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ನಗರದ ಕೆಎಸ್‍ಆರ್‍ಟಿಸಿ ಬಸ್ಸು ನಿಲ್ದಾಣದ ಸಮೀಪ ಟಿ.ವಿ.ಎಸ್. ಶೋ ರೂಂ ಮುಂಭಾಗದ ಹಾಬೀಬ್ ಉಲ್ಲಾಖಾನ್ ಎಂಬವರ ಕಟ್ಟಡದಲ್ಲಿ ಮಳಿಗೆ ಹೊಂದಿರುವ ನಂದಿ ಪೈಂಟ್ಸ್ ಮತ್ತು ಹಾರ್ಡ್‍ವೇರ್ ಮಳಿಗೆಗೂ ಆಕಸ್ಮಿಕ ಬೆಂಕಿ ತಗುಲಿ ಅನಾಹುತ ಸಂಭವಿಸಿದೆ. ದಿನೇಶ್ ಎಂಬವರಿಗೆ ಸೇರಿದ ಪೈಂಟ್ಸ್ ಮತ್ತು ಹಾರ್ಡವೇರ್ ಅಂಗಡಿಯಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡಿತ್ತು. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸತತ ನಾಲ್ಕು ಗಂಟೆಗಳ ಕಾರ್ಯಾಚರಣೆ ಮೂಲಕ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಳಿಗೆಯಲ್ಲಿದ್ದ ಪೈಂಟ್ಸ್, ನಗದು ಸೇರಿದಂತೆ ಮೂರು ಕಂಪ್ಯೂಟರ್, ಪ್ರಿಂಟಿಂಗ್ ಮಿಷನ್, ಕಲರ್ ಮಿಕ್ಸಿಂಗ್ ಮಿಷನ್ ಮತ್ತು ಬೆಲೆಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು, ಸಂಪೂರ್ಣ ಸುಟ್ಟು ಕರಕಲಾಗಿವೆ. ಅಂಗಡಿ ಮಾಲೀಕ ದಿನೇಶ್ ಅವರು ವಿರಾಜಪೇಟೆ ನಗರ ಠಾಣೆಗೆ ದೂರು ನೀಡಿದ್ದಾರೆ.

Read More

ಸೋಮವಾರಪೇಟೆ ಮೇ 11 : ಜಾಲ್ಸೂರು ಬೆಂಗಳೂರು ಎಸ್‍ಎಚ್-85 ಮಾರ್ಗದ ಕೂತಿ ಗ್ರಾಮದಲ್ಲಿ ರಸ್ತೆ ಕಿರಿದಾಗಿದ್ದು ನಿರ್ವಹಣೆಯಿಲ್ಲದೆ ದಿನಂಪ್ರತಿ ಅಪಘಾತಗಳು ಸಂಭವಿಸುತ್ತಿವೆ ಎಂದು ಗ್ರಾಮಸ್ಥರು ದೂರಿದ್ದಾರೆ. ಸಕಲೇಶಪುರ ತಾಲ್ಲೂಕಿನ ರಸ್ತೆಯಾಗಿದ್ದು, ಕೊಡಗು ಭಾಗದಲ್ಲಿ ರಸ್ತೆ ಕಾಮಗಾರಿ ನಡೆಯದ ಹಿನ್ನಲೆ, ಎಡದಂಟೆ, ಕೂತಿ, ಇನಕನಹಳ್ಳಿ ತೋಳೂರುಶೆಟ್ಟಳ್ಳಿ, ದೊಡ್ಡತೋಳೂರು, ಹೊಸಬೀಡು, ಕಲ್ಲಂದೂರು ಗ್ರಾಮಸ್ಥರು ಸಮಸ್ಯೆ ಅನುಭವಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಕೂತಿ ಗ್ರಾಮದ ದೀಣೆಕೆರೆ ಜಂಕ್ಷನ್‍ನಲ್ಲಿ ಕಿರಿದಾದ ರಸ್ತೆಯ ಮೇಲೆ ಮಣ್ಣು ಸಂಗ್ರಹವಾಗಿರುವ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನ ಅಯಾತಪ್ಪಿ ಬಿದ್ದ ಪರಿಣಾಮ ಸವಾರ ಹಾಗೂ ಹಿಂಬದಿ ಸವಾರರು ಗಾಯಗೊಂಡಿದ್ದಾರೆ. ಪಟ್ಟಣದ ರೆಂಜರ್‍ಬ್ಲಾಕ್ ನಿವಾಸಿಗಳಾದ ಸುನಿಲ್ ಆಚಾರಿ, ಖುಷಿ ಎಂಬವರು ಸಕಲೇಶಪುರದಿಂದ ವಾಪಾಸ್ಸು ಸೋಮವಾರಪೇಟೆಗೆ ಸ್ಕೂಟಿಯಲ್ಲಿ ಬರುವಾಗ ಅಪಘಾತ ಸಂಭವಿಸಿದೆ. ಗ್ರಾಮಸ್ಥರು ಅಂಬುಲೆನ್ಸ್ ಮೂಲಕ ಪಟ್ಟಣದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ಸುನಿಲ್ ಕೈಮೂಳೆ ಮುರಿದ್ದಿದ್ದು ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣವೇ ರಸ್ತೆ ಮೇಲೆ ಸಂಗ್ರಹವಾಗಿರುವ ಮಣ್ಣು ತೆರವುಗೊಳಸಬೇಕು. ಚರಂಡಿ ವ್ಯವಸ್ಥೆ ಮಾಡಬೇಕು…

Read More

ಮಡಿಕೇರಿ ಮೇ 15 : ದೇವಟ್‌ಪರಂಬ್ ಕೊಡವ ನರಮೇಧ ದುರಂತ ಸ್ಮಾರಕ ಸಮಾಧಿಯಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಹಿರಿಯರಿಗೆ ಪುಷ್ಪ ನಮನ ಸಲ್ಲಿಸಿತು.  ಸಿಎನ್ ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ಅಧ್ಯಕ್ಷತೆಯಲ್ಲಿ ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯನ್ನು ರಚಿಸುವ ಮೂಲಕ ಕೊಡವ ಸ್ವಯಂ ಶಾಸನದ ಹಕ್ಕುಗಳನ್ನು ಮಾನ್ಯ ಮಾಡುವ ಮೂಲಕ “ಕೊಡವ ಕುಲ”/ಜನಾಂಗೀಯ ಸಮಸ್ಯೆಗಳನ್ನು ಪರಿಹರಿಸಲು ಕರ್ನಾಟಕದ ಹೊಸ ಆಡಳಿತ ವ್ಯವಸ್ಥೆ ಮತ್ತು ಕೊಡವ ಹೃದಯಭಾಗದಿಂದ ಹೊಸದಾಗಿ ಚುನಾಯಿತರಾದ ಶಾಸಕರಿಗೆ ಹಕ್ಕೊತ್ತಾಯ ಮಂಡಿಸಲಾಯಿತು. ::: ಕೊಡವ ನ್ಯಾಷನಲ್ ಕೌನ್ಸಿಲ್‌ನ ಪ್ರಮುಖ ಆಶಯಗಳು ::: 1. ಕರ್ನಾಟಕದಡಿಯಲ್ಲಿ ಸಂವಿಧಾನದ ಅಡಿಯಲ್ಲಿ ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ಆಂತರಿಕ ರಾಜಕೀಯ ಸ್ವಯಂ ನಿರ್ಣಯ ಹಕ್ಕು ಪ್ರತಿಪಾದನೆ. 2. ಕೊಡಗಿನ ಆದಿಮಸಂಜಾತ ಮೂಲನಿವಾಸಿ ಕೊಡವ ಜನಾಂಗವನ್ನು ನಮ್ಮ ಸಂವಿಧಾನದ ಶೆಡ್ಯೂಲ್ ಪಟ್ಟಿಯಲ್ಲಿ ಸೇರಿಸಬೇಕು. (ಸಂವಿಧಾನದಲ್ಲಿ ರೇಸ್‌ಗೆ ಪ್ರತ್ಯೇಕವಾದ ಯಾವುದೇ ವಿಧಿವಿಧಾನಗಳು ಇಲ್ಲದೇ ಇಲ್ಲದಿರುವುದರಿಂದ ಎಸ್‌ಟಿ ಪಟ್ಟಿಗೆ ಕೊಡವರನ್ನು ಸೇರಿಸಿ ರಕ್ಷಿಸಬೇಕು.) 3. ಕೊಡವ ಸಂಪ್ರದಾಯಿಕ…

Read More

ಮಡಿಕೇರಿ ಮೇ 15 : ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಸ್ವಾಮಿ ಬಡಾವಣೆಯ ಆಟೋ ಚಾಲಕ ಹೆಚ್.ಜಿ.ಹರ್ಷ(37) ಮೃತ ವ್ಯಕ್ತಿ. ಮೃತರು ಪತ್ನಿ ಹಾಗೂ ಒಂದು ವರ್ಷದ ಹೆಣ್ಣು ಮಗುವನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More