ಲೇಖಕ: admin

ಮಡಿಕೇರಿ ಮೇ 15 : ನಾಪೋಕ್ಲು ಗ್ರಾ.ಪಂ ವ್ಯಾಪ್ತಿಯ ಕಲ್ಲುಮೊಟ್ಟೆ ಗ್ರಾಮದಲ್ಲಿ ನೀರಿನ ಸಮಸ್ಯೆ ಉಂಟಾಗಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆ ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಶೇಖರ್ ಅವರು ಸೋಮವಾರ ಖುದ್ದು ಭೇಟಿ ನೀಡಿ ಪರಿಶೀಲಿಸಿದರು. ಈ ಕಾಲೋನಿಗೆ ನೀರು ಪೂರೈಕೆ ಮಾಡಲಾಗುತ್ತಿದ್ದ 7.5 ಹೆಚ್.ಪಿ ಸಾಮರ್ಥ್ಯದ ಮೋಟಾರ್ ಪಂಪು ದುರಸ್ತಿಯಾಗಿರುವ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆ ಉಂಟಾಗಿತ್ತು. ಪ್ರಸ್ತುತ ಈ ಮೋಟಾರ್ ಪಂಪು ದುರಸ್ತಿಯಾಗುವವರೆಗೆ ತಾತ್ಕಾಲಿಕವಾಗಿ 5 ಹೆಚ್.ಪಿ ಮೋಟಾರು ಪಂಪನ್ನು ಅಳವಡಿಸಿ ನೀರು ಪೂರೈಕೆ ಮಾಡಲಾಗಿದೆ ಎಂದು ಶೇಖರ್ ತಿಳಿಸಿದರು. ಕಿರಿಯ ಎಂಜಿನಿಯರ್ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮತ್ತಿತರರು ಹಾಜರಿದ್ದರು.

Read More

ಮಡಿಕೇರಿ ಮೇ 15 : ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಉಜಿರೆ ಟೆಲಿಫೋನ್ ಎಕ್ಸ್ ಚೇಂಜ್ ಟವರ್ ಬಳಿ ವಾರಸುದಾರರಿಲ್ಲದ ಶವವೊಂದು ಪತ್ತೆಯಾಗಿದೆ. ಮೃತ ವ್ಯಕ್ತಿ ಕೊಡಗು ಜಿಲ್ಲೆಯ ಕುಶಾಲನಗರದವರು ಎಂದು ತಿಳಿದು ಬಂದಿದೆ. ತಮ್ಮಯ್ಯ (55) ಎಂಬುವವರೇ ಸಾವಿಗೀಡಾದವರಾಗಿದ್ದು, ಮೃತದೇಹದ ಬಳಿ 6.65 ಲಕ್ಷ ರೂ. ಪತ್ತೆಯಾಗಿದೆ. ಇವರು ಸೌದೆ ಒಡೆದು ಜೀವನ ಸಾಗಿಸುತ್ತಿದ್ದು, ದುಡಿದ ಹಣವನ್ನು ಉಳಿತಾಯ ಮಾಡಿರಬಹುದೆಂದು ಹೇಳಲಾಗಿದೆ. ಬಸ್ ಟಿಕೆಟ್ ಮತ್ತಿತರ ಚೀಟಿಗಳನ್ನು ಪರಿಶೀಲಿಸಿದಾಗ ತಮ್ಮಯ್ಯ ಕುಶಾಲನಗರ ಭಾಗದವರೆಂದು ತಿಳಿದು ಬಂದಿದೆ. ಬೆಳ್ತಂಗಡಿ ಪೊಲೀಸರು ಕುಶಾಲನಗರ ಮತ್ತು ಬೈಲುಕೊಪ್ಪಕ್ಕೆ ಭೇಟಿ ನೀಡಿ ಮೃತ ವ್ಯಕ್ತಿಯ ಸಂಬAಧಿಕರ ಪತ್ತೆಗೆ ಪ್ರಯತ್ನಿಸಿದರು. ಆದರೆ ಯಾರೂ ಪತ್ತೆಯಾಗದೆ ಇರುವುದರಿಂದ ತಮ್ಮಯ್ಯ ಅವರ ವಾರಸುದಾರರ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯನ್ನು (08256-232093, 9480805370) ಸಂಪರ್ಕಿಸುವAತೆ ಮನವಿ ಮಾಡಿದ್ದಾರೆ.

Read More

ನಾಪೋಕ್ಲು  ಮೇ 15 :  ನಾಪೋಕ್ಲು  ಮೂರ್ನಾಡು ಸಂಪರ್ಕಿಸುವ ಮುಖ್ಯರಸ್ತೆ ಹೊದ್ದೂರು ರಸ್ತೆಯಲ್ಲಿ ಬಿದ್ದಿರುವ ಮರದ ತುಂಡುಗಳನ್ನು ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ವಾಹನ ಚಾಲಕರು ಮತ್ತು ಸಾರ್ವಜನಿಕರು ಆಗ್ರಹಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಹೊದ್ದೂರು ಗ್ರಾಮದಲ್ಲಿ ಸುರಿದ ಭಾರೀ ಗಾಳಿ ಮಳೆಯಿಂದ ನಾಪೋಕ್ಲು -ಮೂರ್ನಾಡು ಸಂಪರ್ಕ ಕಲ್ಪಿಸುವ ಹೊದ್ದೂರು ಗ್ರಾಮದ ಬಳಿ ಮುಖ್ಯ ರಸ್ತೆಯ ಬದಿಯಲ್ಲಿದ್ದ ಭಾರಿ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಅಲ್ಲದೆ ಹಲವು ವಿದ್ಯುತ್ ಕಂಬಗಳಿಗೆ ಹಾನಿಯಾಗಿ ನಾಪೋಕ್ಲು ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಕೂಡ ಉಂಟಾಗಿತ್ತು. ಬಳಿಕ ಮರವನ್ನು ಸೆಸ್ಕ್ ಇಲಾಖೆಯ ಸಿಬ್ಬಂದಿಗಳು, ಗ್ರಾಮಸ್ಥರು ಸೇರಿ ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದ್ದರು. ಆದರೆ ರಸ್ತೆಯಲ್ಲಿರುವ ಮರವನ್ನು ಪೂರ್ಣ ಪ್ರಮಾಣದಲ್ಲಿ ತೆರೆವುಗೊಳಿಸದೆ ಅರ್ಧದಷ್ಟು ಅಲ್ಲೇ ಬಿಟ್ಟು ಹೋಗಿದ್ದಾರೆ. ಇದರಿಂದ ಈ ರಸ್ತೆಯಲ್ಲಿ ಹಗಲಿರುಳು ನೂರಾರು ಸಂಖ್ಯೆಯಲ್ಲಿ ವಾಹನಗಳು ಸಂಚರಿಸುತ್ತಿದ್ದು, ಬಿದ್ದಿರುವ ಮರದ ತುಂಡುಗಳಿಂದ ಅಪಘಾತವಾಗುವ ಸಂಭವ ಹೆಚ್ಚಿದೆ ಎಂದು…

Read More

ಮಡಿಕೇರಿ ಮೇ 15 :  ಕೊಡಗಿನ ಶಕ್ತಿ ಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ.ಅನಂತ ಶಯನ ಅವರು ಬರೆದಿರುವ ಪ್ರತಿಕೋದ್ಯಮ ಅನುಭವ ಆಧಾರಿತ ‘ಸೊಡರು’ ಗಣ್ಯರ ಸಮ್ಮುಖದಲ್ಲಿ ಅನಾವರಣಗೊಂಡಿತು. ನಗರದ ರೆಡ್ ಬ್ರಿಕ್ಸ್ ಸಭಾಂಗಣದಲ್ಲಿ ಆಯೋಜಿತ ಸಮಾರಂಭದಲ್ಲಿ ರಾಜ್ಯ ಪ್ರೆಸ್‍ಕ್ಲಬ್ ಹಾಗೂ ಮಾದ್ಯಮ ಅಕಾಡೆಮಿ ಮಾಜೀ ಅಧ್ಯಕ್ಷ ಎಂ.ಎ. ಪೊನ್ನಪ್ಪ ಅವರು ಸೊಡರು ಪುಸ್ತಕವನ್ನು ಅನಾವರಣಗೊಳಿಸಿ ಮಾತನಾಡಿ, ಪತ್ರ್ರಿಕಾ ಕ್ಷೇತ್ರಕ್ಕೆ ಕಾಲಿಡುವವರಿಗೆ ಮಾರ್ಗದರ್ಶಕವಾಗಿ ‘ಸೊಡರು’ ಪುಸ್ತಕ ರುಪುಗೊಂಡಿರುವುದಾಗಿ ಮೆಚ್ಚುಗೆಯ ನುಡಿಗಳನ್ನಾಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಪತ್ರಿಕಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವವರು ತಮ್ಮ ಕಾರ್ಯವೈಖರಿಗಳ ಮೂಲಕ ಸಮಾಜದ ವಿಶ್ವಾಸಾರ್ಹತೆಯನ್ನು ಪಡೆದುಕೊಳ್ಳುವುದು ಅವಶ್ಯಕ. ‘ಬ್ರೇಕಿಂಗ್’ ನ್ಯೂಸ್‍ಗಳ ಧಾವಂತದ ಪತ್ರಿಕೋದ್ಯಮದ ನಡುವೆ ಸಾತ್ವಿಕವಾದ , ಸೃಜನಾತ್ಮಕವಾದ ಪತ್ರಿಕೋದ್ಯಮದ ಅಗತ್ಯವಿದೆಯೆಂದು ಅಭಿಪ್ರಾಯಿಸಿದರು. ಗಡಿನಾಡು ಸಂಚಾರಿ ಪತ್ರಿಕೆಯ ಸಂಪಾದಕ ಟಿ.ಪಿ. ರಮೇಶ್, ಮಾತನಾಡಿ, ಪತ್ರಿಕಾ ಕ್ಷೇತ್ರದಲ್ಲಿ ಇರುವವರು ಓದುವ ಹವ್ಯಾಸವನ್ನು ಮೊದಲನೆಯದಾಗಿ ರೂಢಿಸಿಕೊಳ್ಳುವುದು ಅವಶ್ಯವೆಂದು ತಿಳಿಸಿ, ಈಗಿನಷ್ಟು ಸೌಲಭ್ಯಗಳು ಇಲ್ಲದಿದ್ದ ಕಾಲಘಟ್ಟದ ಪತ್ರಿಕೋದ್ಯಮದ ವಿಚಾರಗಳನ್ನು…

Read More

ಕುಶಾಲನಗರ ಮೇ 15 :   ಕೊಡಗು ಜಿಲ್ಲೆಯ ಬಿಜೆಪಿ‌ ಕೋಟೆಯನ್ನು ಕಾಂಗ್ರೆಸ್ ಬೇಧಿಸಿದ್ದು ಈ ಮೂಲಕ, ಜಿಲ್ಲೆ ಹೊಸ ಪರ್ವಕ್ಕೆ‌ ಕಾಲಿಟ್ಟಿದೆ. ಬಿಜೆಪಿ ಮುಕ್ತ ಆಡಳಿತಕ್ಕೆ ಅಂಕುರಾರ್ಪಣೆಯಾಗಿದೆ ಎಂದು ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಹೇಳಿದರು. ಕುಶಾಲನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆ ಹಾಗೂ ರಾಜ್ಯದಲ್ಲಿ‌ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಮುಂಬರುವ ಜಿಪಂ, ತಾಪಂ, ಪುರಸಭೆ ಸೇರಿದಂತೆ ಸಹಕಾರ ಸಂಘಗಳ ಚುನಾವಣೆಯನ್ನು ಅತ್ಯಂತ ಉತ್ಸಾಹದಿಂದ ಎದುರಿಸಲಿದ್ದೇವೆ ಎಂದು ತಿಳಿಸಿದರು. ದೂರದೃಷ್ಠಿಯ ಕೊರತೆಯಿಂದ ಹಿಂದಿನ ಶಾಸಕರು ಸರ್ವಾಧಿಕಾರ ಧೋರಣೆ ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿದ ಅವರು, ಶಾಸಕರ ಕಾರ್ಯವೈಖರಿಗಳ ಬಗ್ಗೆ ಆಕ್ರೋಷ ವ್ಯಕ್ತಪಡಿಸಿದರು. ನೂತನವಾಗಿ ಆಯ್ಕೆಯಾದ ಶಾಸಕ ಮಂಥರ್ ಗೌಡ ಅವರ ಅವಧಿಯಲ್ಲಿ ಕೊಡಗಿನಲ್ಲಿ ಅಗತ್ಯವಾಗಿ ಬೇಕಿರುವ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸುವುದಾಗಿ ತಿಳಿಸಿದರು. ಈ ನಿಟ್ಟಿನಲ್ಲಿ ಕ್ಷೇತ್ರದ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ಶೀಘ್ರದಲ್ಲಿ ನಡೆಯಲಿದೆ. ಜನಪೀಡಕ, ಭ್ರಷ್ಟ ಅಧಿಕಾರಿಗಳಿಗೆ ಇಲ್ಲಿ ಜಾಗವಿಲ್ಲ. ಹಿಂದಿನ ಶಾಸಕರ ಕೈಗೊಂಬೆಯಂತೆ ವರ್ತಿಸಿದ…

Read More

ಕುಶಾಲನಗರ ಮೇ 15 :   ವಿವೇಕಾನಂದ ಪಿಯು ಕಾಲೇಜಿನಲ್ಲಿ ವಿಶ್ವ ತಾಯಿಯಂದಿರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾಲೇಜಿನಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಹಾಗೂ ಭೋದಕ ವರ್ಗದವರೆಲ್ಲರು ತಮ್ಮ ತಮ್ಮ ತಾಯಂದಿರನ್ನು  ಕರೆತಂದು ಅವರನ್ನೆಲ್ಲಾ ಮನದುಂಬಿ ಗೌರವಿಸಿ ನಮಿಸಿದ್ದು ವಿಶೇಷವಾಗಿತ್ತು. ಈ ಸಂದರ್ಭ ಮಾತನಾಡಿದ ಮಂಗಳೂರಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಕೇಶವ ಬಂಗೇರ, ಅಮ್ಮನ ಪ್ರೀತಿಗೆ ಗೌರವ ತೋರುವ ಈ ಸುದಿನದಲ್ಲಿ ಅಮ್ಮನ ಮಮತೆಯನ್ನು ಸ್ಮರಿಸಿ ಸದಾ ಕಾಲ ಆ ತಾಯಿಗೆ ಪ್ರೀತಿಯ ಗೌರವಗಳನ್ನು ತೋರುವ ಸಂಸ್ಕಾರ ಅತ್ಯಂತ ಅಗತ್ಯವಿದೆ.  ಶಾಲಾ ಕಾಲೇಜುಗಳಲ್ಲಿ ವ್ಯಾಸoಗ ಮಾಡುವ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಉತ್ತಮ ಸಂಸ್ಕಾರಗಳನ್ನು ಕಲಿಯುವ ಮೂಲಕ ಭಾರತೀಯ ಸನಾತನ ಪರಂಪರೆಯನ್ನು ಸಂರಕ್ಷಿಸಬೇಕಿದೆ ಎಂದರು. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎಂ.ನಾಗೇಶ್ ಮಾತನಾಡಿ, ಭಾರತೀಯ ಸನಾತನ ಪರಂಪರೆಯಲ್ಲಿ ಮಹಿಳೆಗೆ ವಿಶೇಷ ಸ್ಥಾನ ಮಾನವಿದೆ. ಪಾಶ್ಚಿಮಾತ್ಯ ಸಂಸ್ಕೃತಿ ಮೇಳೈಸುತ್ತಿರುವ ಇಂದಿನ ದಿನಮಾನಗಳಲ್ಲಿ ಹೆಣ್ಣು ಮಕ್ಕಳಿಗೆ ಉತ್ತಮ ಸಂಸ್ಕಾರಗಳು ಅತಿ ಮುಖ್ಯ. ಆದರೆ ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ…

Read More

ಮಡಿಕೇರಿ ಮೇ 15 : ಬದಲಾಗುತ್ತಿರುವ ಹವಾಮಾನ, ಜಾಗತಿಕ ತಾಪಮಾನ ಏರಿಕೆ ಪ್ರಪಂಚದಾದ್ಯಂತ ಎಲ್ಲ ರಾಷ್ಟ್ರಗಳು ಎದುರಿಸುತ್ತಿರುವ ಸವಾಲಾಗಿದೆ. ಈ ಜಾಗತಿಕ ಗಂಡಾಂತರ ತಡೆಗಟ್ಟಲು ಹಸಿರು ಪ್ರೀತಿಯನ್ನು ಜಾಗೃತಗೊಳಿಸಿ, ಜನರ ಬೇಡಿಕೆಗೆ ಅನುಸಾರವಾಗಿ ಸಸಿಗಳನ್ನು ಪೂರೈಸುವ ಜವಾಬ್ದಾರಿಯಿಂದ ವಿವಿಧ ಯೋಜನೆಗಳಡಿಯಲ್ಲಿ ‘ಸೋಮವಾರಪೇಟೆ ಸಾಮಾಜಿಕ ಅರಣ್ಯ ವಲಯದಿಂದ’ ಸೋಮವಾರಪೇಟೆ-ಕುಶಾಲನಗರ ರಸ್ತೆಯಲ್ಲಿ ಹುದುಗೂರು ಗ್ರಾಮದಲ್ಲಿರುವ ಸಾಮಾಜಿಕ ಅರಣ್ಯ ವಲಯದ ಸಸ್ಯಕ್ಷೇತ್ರದಲ್ಲಿ 50 ವಿವಿಧ ಸಸಿಗಳನ್ನು ಬೆಳೆಸಲಾಗಿದೆ. ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಉದ್ಯೋಗ ಚೀಟಿ ಹೊಂದಿರುವ ಬಿಪಿಎಲ್ ಕಾರ್ಡುದಾರರು ಈ ಯೋಜನೆಯಲ್ಲಿ ಉಚಿತವಾಗಿ ಸಸಿಗಳನ್ನು ಪಡೆಯಬಹುದು ಹಾಗೂ ಇತರೆ ಯೋಜನೆಗಳಲ್ಲಿ ಸರ್ಕಾರ ನಿಗಧಿಪಡಿಸಿರುವ 6*9 ಅಳತೆಯ ಚೀಲದ ಸಸಿ ಒಂದಕ್ಕೆ ರೂ.7 ಹಾಗೂ 8*12 ಅಳತೆಯ ಚೀಲದ ಸಸಿ ಒಂದಕ್ಕೆ ರೂ.23.60 ಗಳನ್ನು ಪಾವತಿಸಿ ಪಡೆದುಕೊಳ್ಳಬಹುದು. ಹುದುಗೂರು ಸಸ್ಯಕ್ಷೇತ್ರದಲ್ಲಿ ನೇರಳೆ, ಮಹಾಗನಿ, ನೆಲ್ಲಿ, ಸೀತಾಫಲ, ಜಂಬು ನೇರಳೆ, ಮರಸೇಬು, ಆಮೆಹಣ್ಣು, ಬಿಳಿ ಧೂಪ, ಸಂಪಿಗೆ, ಹಿಪ್ಪೆ, ರುದ್ರಾಕ್ಷಿ, ಬಿದಿರು, ಮೊಟ್ಟೆ ಹಣ್ಣು, ಕಾಚಂಪುಳಿ,…

Read More

ಮಡಿಕೇರಿ ಮೇ 15 : ಹೊದ್ದೂರು ವಾಟೆಕಾಡು ಸಾಮಾಜಿಕ ಅರಣ್ಯ ಇಲಾಖೆಯ ಸಸ್ಯಕ್ಷೇತ್ರದಲ್ಲಿ 2023-24ನೇ ಸಾಲಿನ ಮಳೆಗಾಲದಲ್ಲಿ ನೆಡಲು ವಿವಿಧ ಹಣ್ಣಿನ, ಔಷಧೀಯ ಹಾಗೂ ಕಾಡು ಜಾತಿಯ ಸಸಿಗಳನ್ನು ಬೆಳೆಸಲಾಗಿದೆ. ಮಹಾಗನಿ, ಶಿವನೆ, ಸಿಲ್ವರ್, ತೇಗ, ಬೀಟೆ, ಮಳೆಮರ, ನೇರಳೆ, ಸುಬಾಬುಲ್, ಹಲಸು, ಧೂಪ, ನೆಲ್ಲಿ, ನಿಂಬೆ, ಪುನರ್‍ಪುಳಿ, ಅಗಸೆ, ಬೆಟ್ಟದನೆಲ್ಲಿ, ಸೀಬೆ ಮತ್ತಿತರ ಸಸಿಗಳು ಲಭ್ಯವಿದ್ದು, ರೈತ ಫಲಾನುಭವಿಗಳಿಗೆ ರೂ.7 ಹಾಗೂ ರೂ.23.60 ಪ್ರತಿ ಸಸಿಗೆ ರಿಯಾಯಿತಿ ದರದಲ್ಲಿ ಪಡೆದುಕೊಳ್ಳಬಹುದು. ರೈತರು ತಮ್ಮ ಆಧಾರ್ ಪ್ರತಿ, ರಾಷ್ಟ್ರೀಕೃತ ಬ್ಯಾಂಕ್ ಪಾಸ್‍ಬುಕ್ ಪ್ರತಿ, ತಮ್ಮ ಜಮೀನಿನ ಆರ್‍ಟಿಸಿ ಪ್ರತಿಯನ್ನು ನೀಡಿ ಸಸಿಗಳನ್ನು ಪಡೆಯಬಹುದು. ಬಿಪಿಎಲ್ ಕಾರ್ಡ್ ಮತ್ತು ನರೇಗಾ ಉದ್ಯೋಗ ಚೀಟಿ ಹೊಂದಿರುವ ರೈತರಿಗೆ ನೆಟ್ಟ 100 ಸಸಿಗಳಿಗೆ ಸರಿಸುಮಾರು 10 ಸಾವಿರ ರೂ.ಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಉಪ ವಲಯ ಅರಣ್ಯಾಧಿಕಾರಿಗಳು-9743722646, ಗಸ್ತು ಅರಣ್ಯ ಪಾಲಕರು-7975952388 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಸಾಮಾಜಿಕ ಅರಣ್ಯ ವಲಯದ ವಲಯ…

Read More

ಮಡಿಕೇರಿ ಮೇ 15 : ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ-ಗಾಳಿ ಪ್ರಾರಂಭವಾಗಿದ್ದು, ವಿದ್ಯುತ್ ಸರಬರಾಜಿನಲ್ಲಿ ಹೆಚ್ಚಿನ ಪ್ರಮಾಣದ ವಿದ್ಯುತ್ ಅಡಚಣೆಗಳು, ವಿದ್ಯುತ್ ಅವಘಡಗಳು ಉಂಟಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಸಾರ್ವಜನಿಕರು ಯಾವುದೇ ರೀತಿಯ ವಿದ್ಯುತ್ ಜಾಲದ ವ್ಯತ್ಯಯಗಳನ್ನು ಗಮನಿಸಿದಲ್ಲಿ, ಸ್ವತಃ ಕ್ರಮಕೈಗೊಳ್ಳದೇ (ವಿದ್ಯುತ್ ತಂತಿಗಳನ್ನು ಸ್ಪರ್ಶಿಸದೇ) ತಕ್ಷಣ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ (ಚ.ವಿ.ಸ.ನಿನಿ) ದೂರವಾಣಿ ಸಂಖ್ಯೆಗಳಲ್ಲಿ ತಮ್ಮ ದೂರುಗಳನ್ನು ದಾಖಲಿಸುವಂತೆ ಕೋರಿದೆ. ಕೊಡಗು ಜಿಲ್ಲೆಯ (24*7) ಸರ್ವೀಸ್ ಸೆಂಟರ್‍ನ ದೂರವಾಣಿ ಸಂಖ್ಯೆ “1912” ಹಾಗೂ ಗ್ರಾಹಕರ ಸೇವಾ ಕೇಂದ್ರ ಸಂಖ್ಯೆ(9449598665), ಮಡಿಕೇರಿ ತಾಲ್ಲೂಕಿಗೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿನಯಕುಮಾರ್ (9449598602), ಸಹಾಯಕ/ ಜೂನಿಯರ್ ಎಂಜಿನಿಯರ್‍ಗಳು ಮಡಿಕೇರಿ ಸಂಪತ್‍ಕುಮಾರ್ (9449598603), ತಾಳತ್‍ಮನೆ ಹೇಮಂತ್ ರಾಜ್ (9449598604), ಮೂರ್ನಾಡು ಪ್ರಕಾಶ್ (9449598605), ಸಂಪಾಜೆ ಅನಿಲ್ ಕುಮಾರ್ (9448994851), ಭಾಗಮಂಡಲ ತೇಜ (9480810344), ನಾಪೋಕ್ಲು ಹರೀಶ್ (9449598606), ಗ್ರಾಹಕರ ಸೇವಾ ಕೇಂದ್ರ (08272-248454) ಮತ್ತು (9449598665). ಕುಶಾಲನಗರ ತಾಲ್ಲೂಕಿಗೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ್(9449598538),…

Read More

ಮಡಿಕೇರಿ ಮೇ 15 : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯ ಸಹಯೋಗದೊಂದಿಗೆ ಮೇ, 29 ರವರೆಗೆ ಹಮ್ಮಿಕೊಂಡಿರುವ ಜಿಲ್ಲಾ ಮಟ್ಟದ ಬೇಸಿಗೆ ಶಿಬಿರಕ್ಕೆ ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮಕ್ಕಳು ಇಂತಹ ಬೇಸಿಗೆ ಶಿಬಿರದಲ್ಲಿ ಭಾಗವಹಿಸಿ ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ನುಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಥಮ ದರ್ಜೆ ಸಹಾಯಕರಾದ ಜಯಂತಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪತ್ರಾಂಕಿತ ವ್ಯವಸ್ಥಾಪಕರಾದ ಕವಿತಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕರಾದ ಕೆ.ಆರ್.ಬಿಂದು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಎಂ.ಎಂ.ವಸಂತಿ ಹಾಜರಿದ್ದರು.…

Read More