ಮಡಿಕೇರಿ ಜೂ.23 : ಮಡಿಕೇರಿ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಎಂ.ಎ.ನಿರಂಜನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಡಿ.ಎಂ.ಕೇಶವ, ಉಪಾಧ್ಯಕ್ಷರಾಗಿ ಎಂ.ಜಿ.ನಾಗರಾಜ್, ಖಜಾಂಚಿ ಜಿ.ಆರ್.ರವಿಶಂಕರ್, ಜಂಟಿ ಕಾಯದರ್ಶಿಯಾಗಿ ಪವನ್ ಪೆಮ್ಮಯ್ಯ, ನಿರ್ದೇಶಕರುಗಳಾಗಿ ಕೆ.ಎಸ್.ಚಂದ್ರಶೇಖರ್, ಡಾಮೋನಿಕ್, ಜಿತೇಂದ್ರ ಕುಮಾರ್, ಕಪಿಲ್ ಕುಮಾರ್, ಡಿ.ಸಿ.ರಮೇಶ್, ವಿಶಾಲಾಕ್ಷಿ, ಪ್ರಿಯಾಂಕ, ತಾಹಾ ಆಯ್ಕೆಯಾದರು.
ಲೇಖಕ: admin
ಕುಶಾಲನಗರ, ಜೂ.23 : ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡುವುದರಿಂದ ಉತ್ತಮ ರಕ್ತ ಉತ್ಪತ್ತಿಯಾಗುವ ಜತೆಯಲ್ಲಿ ರಕ್ತನಿಧಿ ಕೇಂದ್ರಗಳಲ್ಲಿ ಕೊರತೆ ನಿವಾರಣೆಯಾಗುತ್ತದೆ ಎಂದು ಮಡಿಕೇರಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕೆ.ಪಿ.ಕರುಂಬಯ್ಯ ಅಭಿಪ್ರಾಯಪಟ್ಟರು. ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ನ ಕೊಡಗು ಜಿಲ್ಲಾ ಶಾಖೆ, ಮಡಿಕೇರಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರ ಹಾಗೂ ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ( ಎನ್.ಎಸ್.ಎಸ್.,,) ಯ ಘಟಕದ ಆಶ್ರಯದಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸುಂಟಿಕೊಪ್ಪ ಜೆ.ಸಿ.ಐ., ಕುಶಾಲನಗರ ಕಾವೇರಿ ಜೆ.ಸಿ.ಐ., ಸಂಸ್ಥೆ, ಲಕ್ಷ್ಮಿ ನಾರಾಯಣ ವಾಟರ್ ಪಾರ್ಕ್ ಹಾಗೂ ಸ್ಥಳೀಯ ಕಂದಾಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ವಿಶ್ವ ರಕ್ತದಾನ ದಿನ: 2023 ರ ಅಂಗವಾಗಿ ಏರ್ಪಡಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ರಕ್ತದಾನ ಶಿಬಿರದ ಮಹತ್ವ ಕುರಿತು ವಿವರಿಸಿದರು. ರಕ್ತದಾನ ಮಾಡುವುದರಿಂದ ರಕ್ತದೊತ್ತಡ ಸಮಸ್ಯೆ ಸೇರಿದಂತೆ ಹೃದಯ ಸಂಬಂಧಿ ಕಾಯಿಲೆ ದೂರವಾಗುತ್ತದೆ.…
ಮಡಿಕೇರಿ ಜೂ.23 : ನಗರದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಹಾಗೂ ಹಾವೇರಿ ಹಾಲ್ ನ ರಸ್ತೆ ಬದಿಯಲ್ಲಿ ಮಲಗುತ್ತಿದ್ದ ವಯೋವೃದ್ಧರನ್ನು ಕೊಡಗು ಹಿತರಕ್ಷಣಾ ವೇದಿಕೆ ಕಾರ್ಯಕರ್ತರು ನಗರದ ಶಕ್ತಿ ಆಶ್ರಮಕ್ಕೆ ಬಿಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಸಾರ್ವಜನಿಕ ಕೋರಿಕೆಯ ಮೇರೆಗೆ ಹಿತರಕ್ಷಣಾ ವೇದಿಕೆಯ ಸದಸ್ಯರಾದ ಆಕಾಶ್ ಹಾಗೂ ಕಿರಣ್ ವೇದಿಕೆಯ ಅಧ್ಯಕ್ಷ ರವಿ ಗೌಡ ಅವರಿಗೆ ನೀಡಿದ ಮಾಹಿತಿಯ ಮೇರೆಗೆ ಮಡಿಕೇರಿ ನಗರದ ಶಕ್ತಿ ವೃದ್ಧಾಶ್ರಮದ ಮೇಲ್ವಿಚಾರಕ ಸತೀಶ್ ಅವರ ಗಮನಕ್ಕೆ ತಂದು ವಯೋವೃದ್ಧರನ್ನು ಶಕ್ತಿ ಆಶ್ರಮ ಕ್ಕೆ ಸೇರಿಸಲಾಯಿತು. ಈ ಸಂದರ್ಭ ವೇದಿಕೆಯ ಅಧ್ಯಕ್ಷ ರವಿ ಗೌಡ, ಪ್ರಧಾನ ಕಾರ್ಯದರ್ಶಿ ಮೀನಾಜ್ ಪ್ರವೀಣ್, ಮಡಿಕೇರಿ ತಾಲೂಕು ಅಧ್ಯಕ್ಷ ನಾಗೇಶ್, ಮಹಿಳಾ ಘಟಕದ ತಾಲೂಕು ಅಧ್ಯಕ್ಷ ಕವಿತಾ ಪ್ರಸಾದ್, ನಿರ್ದೇಶಕರಾದ ಲಿಲ್ಲಿ, ನಗರ ಕಾರ್ಯದರ್ಶಿಗಳಾದ ಪೂರ್ಣಿಮಾ, ಸದಸ್ಯರುಗಳಾದ ಆಕಾಶ್, ಕಿರಣ್ ಹಾಗೂ ಶಕ್ತಿ ಆಶ್ರಮದ ಮೇಲ್ವಿಚಾರಕರಾದ ಹೆಚ್.ಆರ್. ಸತೀಶ್ ಹಾಜರಿದ್ದರು.
ಮಡಿಕೇರಿ ಜೂ.23 : ತಾನು ನೀಡಿದ ಗ್ಯಾರಂಟಿಗಳನ್ನು ಈಡೇರಿಸಲು ಸಾಧ್ಯವಾಗದೆ ವಿಚಲಿತಗೊಂಡಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ವಿರುದ್ಧ ಗೂಬೆ ಕೂರಿಸುವ ಮೂಲಕ ಮುಗ್ಧ ಜನರನ್ನು ವಂಚಿಸುತ್ತಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಮಹೇಶ್ ಜೈನಿ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಚುನಾವಣೆ ಸಂದರ್ಭ ನೀಡಿದ ಭರವಸೆಯಂತೆ 10 ಕೆಜಿ ಅಕ್ಕಿಯನ್ನು ವಿತರಿಸಲು ಸಾಧ್ಯವಾಗದ ಕಾಂಗ್ರೆಸ್ ಸರ್ಕಾರ ಕೇಂದ್ರದ ಕಡೆ ಬೆರಳು ತೋರಿಸುತ್ತಿರುವುದು ಹಾಸ್ಯಾಸ್ಪದವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಈ ಹಿಂದಿನಿoದಲೂ 5 ಕೆಜಿ ಅಕ್ಕಿಯನ್ನು ನೀಡುವ ಮೂಲಕ ನುಡಿದಂತೆ ನಡೆದುಕೊಳ್ಳುತ್ತಿದೆ. ಆದರೆ ಸುಳ್ಳು ಗ್ಯಾರಂಟಿಗಳನ್ನು ನೀಡಿರುವ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿ ಹಾಕಲು ಕೇಂದ್ರದ ವಿರುದ್ಧ ಆರೋಪಗಳನ್ನು ಮಾಡುತ್ತಿದೆ. ಇದು ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳುವ ತಂತ್ರವಾಗಿದೆ ಎಂದು ಟೀಕಿಸಿದ್ದಾರೆ. ಕಾಂಗ್ರೆಸ್ ಇತರ ರಾಜ್ಯಗಳಲ್ಲಿ ಕೂಡ ಯಾವುದೇ ಮುಂದಾಲೋಚನೆ ಮತ್ತು ಪೂರ್ವ ತಯಾರಿ ಇಲ್ಲದೆ ನೀಡಿದ ಗ್ಯಾರಂಟಿಗಳನ್ನು ಈಡೇರಿಸಲಾಗದೆ ವರ್ಷವೇ ಕಳೆದಿದೆ.…
ವಿರಾಜಪೇಟೆ ಜೂ.23 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ವಕೀಲ ಕೊಕ್ಕಂಡ ಜಿ.ಅಪ್ಪಣ್ಣ ಹಾಗೂ ಆಟ್ರಂಗಡ ಲೋಹಿತ್ ಶಾಸಕರ ಭವನದಲ್ಲಿ ನೆನಪಿನ ಕಾಣಿಕೆ, ತೂಗು ದೀಪವನ್ನು ನೀಡಿ ಅಭಿನಂದಿಸಿದರು. ಈ ಸಂದರ್ಭ ಮಾತನಾಡಿದ ವಕೀಲ ಕೆ.ಜಿ.ಅಪ್ಪಣ್ಣ, ತಮ್ಮ ಅವಧಿಯಲ್ಲಿ ವಿರಾಜಪೇಟೆ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಾರ್ಯಗಳು ನಡೆಯುವಂತಾಗಲಿ ಎಂದು ಶುಭ ಕೋರಿದರು.
ಸೋಮವಾರಪೇಟೆ ಜೂ.23 : ಮೊಗೇರ ಸೇವಾ ಸಮಾಜದ ಬಜೆಗುಂಡಿ ಮತ್ತು ಕುಸುಬೂರು ಗ್ರಾಮ ಸಮಿತಿಯ ಅಧ್ಯಕ್ಷರಾಗಿ ಎಚ್.ಬಿ.ರಾಮಚಂದ್ರ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಎಂ.ಲೋಕೇಶ್, ಖಜಾಂಚಿಯಾಗಿ ಎ.ಸುರೇಶ್ ನೇಮಕಗೊಂಡರು. ಕುಸುಬೂರು ಎಸ್ಟೇಟ್ನಲ್ಲಿ ನಡೆದ ಮಹಾಸಭೆಯಲ್ಲಿ ಹಿಂದಿನ ಸಾಲಿನ ಅಧ್ಯಕ್ಷ ನಾರಾಯಣ ಅವರು ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.
ಸೋಮವಾರಪೇಟೆ ಜೂ.23 : ಹರಪಳ್ಳಿ ರವೀಂದ್ರ ಅಭಿಮಾನಿಗಳ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ರವೀಂದ್ರ ಮತ್ತು ನಯನ ರವೀಂದ್ರ ಅವರುಗಳು ತಮ್ಮ ಕಚೇರಿಯಲ್ಲಿ ಪುಸಕ್ತಗಳನ್ನು ವಿದ್ಯಾರ್ಥಿಗಳಿಗೆ ನೀಡಿದರು. ಈ ಸಂದರ್ಭ ಸಂಘದ ಅಧ್ಯಕ್ಷ ಎಚ್.ಎ.ನಾಗರಾಜ್, ಕಾರ್ಯದರ್ಶಿ ರಾಜಪ್ಪ, ಜೆಕಬ್ ಸೈಮನ್, ಜಮೀರ್, ಮಹಮ್ಮದ್ ಶಫಿ ಮತ್ತಿತರರು ಇದ್ದರು.
ಸೋಮವಾರಪೇಟೆ ಜೂ.23 : ಹಿಂದೂಸ್ತಾನ್ ಪೆಟ್ರೋಲಯಂ ಲಿಮಿಟೆಡ್ ವತಿಯಿಂದ ವಾರ್ಷಿಕವಾಗಿ ನೀಡುವ ಅಪ್ರಿಸೇಷನ್ ಆಫ್ ಎಕ್ಸಾಲೆನ್ಸ್ ಅವಾರ್ಡ್ನ್ನು ಶ್ರೀ ಗಜಾನನ ಗ್ಯಾಸ್ ಸರ್ವೀಸ್ ನ ಮಾಲೀಕ ಪಿ.ಕೆ.ರವಿ ಪಡೆದುಕೊಂಡಿದ್ದಾರೆ. ಮಂಗಳೂರಿನ ಎಲ್ಪಿಜಿ ಪ್ರಾಂತೀಯ ಕಚೇರಿಯಲ್ಲಿ ನಡೆದ ಎಲ್ಪಿಜಿ ವಿತರಕರ ಸಭೆಯಲ್ಲಿ ಅವಾರ್ಡ್ ಪಡೆದುಕೊಂಡರು. ಹಿಂದುಸ್ತಾನ್ ಪೆಟ್ರೋಲಿಯಂ ಲೀ ನ ಪ್ರಧಾನ ವ್ಯವಸ್ಥಾಪಕ ರಾಕೇಶ್ ಗುಪ್ತಾ, ಸಹಾಯಕ ವ್ಯವಸ್ಥಾಪಕ ಭವ್ಯಂಗಸ, ಮಾರಾಟ ವ್ಯವಸ್ಥಾಪಕ ಸಿ.ಎಸ್.ರಾಹುಲ್ ಹಾಜರಿದ್ದರು.
ಮಡಿಕೇರಿ ಜೂ.23 : ನಗರದ ನೂತನ ಖಾಸಗಿ ಬಸ್ ನಿಲ್ದಾಣದ ವೃತ್ತಕ್ಕೆ ಸ್ವಾತಂತ್ರ್ಯ ಹೋರಾಟಗಾರ ‘ಪಂದ್ಯಂಡ ಬೆಳ್ಯಪ್ಪ’ ಅವರ ಹೆಸರನ್ನು ಇಡಬೇಕೆಂದು ಅಲ್ಲಾರಂಡ ರಂಗ ಚಾವಡಿಯ ಅಧ್ಯಕ್ಷ ಅಲ್ಲಾರಂಡ ವಿಠಲ ನಂಜಪ್ಪ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿ ನಗರಸಭೆ ಖಾಸಗಿ ಬಸ್ ನಿಲ್ದಾಣದ ವೃತ್ತಕ್ಕೆ ಸ್ವಾಮಿ ವಿವೇಕಾನಂದರ ಹೆಸರಿನ್ನಿರಿಸಲು ಮುಂದಾಗಿ, ಜೂನ್ ಅಂತ್ಯದ ಒಳಗಾಗಿ ಆಕ್ಷೇಪಣೆಗಳನ್ನು ಆಹ್ವಾನಿಸಿದೆ. ಈ ಹಿನ್ನೆಲೆ ಸಾರ್ವಜನಿಕರ ಪರವಾಗಿ ವೃತ್ತಕ್ಕೆ ಪಂದ್ಯಂಡ ಬೆಳ್ಯಪ್ಪ ಅವರ ಹೆಸರನ್ನು ಇಡುವಂತೆ ಸೂಚಿಸಿ ಆಕ್ಷೇಪಣೆ ಸಲ್ಲಿಸಲಾಗಿದೆ. ಇದು ಯಾವುದೇ ಕಾರಣಕ್ಕೂ ಸ್ವಾಮಿ ವಿವೇಕಾನಂದರ ಇಡೀ ಜಗತ್ತೆ ಮಾನ್ಯ ಮಾಡಿರುವ ತತ್ತ್ವ ಸಿದ್ಧಾಂತಗಳ ವಿರುದ್ಧವಾಗಿ ಅಲ್ಲವೆಂದು ಸ್ಪಷ್ಟಪಡಿಸಿದರು. ಕೊಡಗಿನಲ್ಲಿ ಕೊಡಗಿಗಾಗಿ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ದುಡಿದ ಮಹನೀಯರನ್ನು ಸ್ಮರಿಸುವುದು, ಅವರ ಚಿಂತನೆಗಳನ್ನು ಜನರಿಗೆ ಮುಟ್ಟಿಸುವುದು ಮತ್ತು ಆ ಮೂಲಕ ಯುವ ಸಮೂಹಕ್ಕೆ ಪ್ರೇರಣೆ ನೀಡುವ ಕಾರ್ಯ ನಡೆಯಬೇಕಾಗಿದೆ. ಈ ಹಿನ್ನೆಲೆ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರಾದ ಪಂದ್ಯಂಡ ಬೆಳ್ಯಪ್ಪ ಅವರ ಹೆಸರನ್ನು ನೂತನ…
ವಿರಾಜಪೇಟೆ ಜೂ.23 : ಕೊಡಗು ಹಾಕಿ ಕ್ಷೇತ್ರಕ್ಕೆ ತನ್ನದೇಯಾದ ಕೊಡುಗೆಗಳನ್ನು ನೀಡಿದೆ. ಹಾಕಿ ಕ್ರೀಡೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರೋತ್ಸಾಹ ಮತ್ತು ಅನುದಾನಗಳನ್ನು ಬಿಡುಗಡೆ ಮಾಡುವಂತೆ ಖೇಲೋ ಮಾಸ್ಟರ್ಸ್ ಗೇಮ್ಸ್ ಹಾಕಿ ಫೆಡರೇಷನ್ ಕರ್ನಾಟಕ ಸಂಸ್ಥೆಯ ಕೊಡಗು ಜಿಲ್ಲಾ ಪದಾಧಿಕಾರಿಗಳು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಿಗೆ ಮನವಿ ಸಲ್ಲಿಸಿದ್ದಾರೆ. ಖೇಲೋ ಮಾಸ್ಟರ್ಸ್ ಗೇಮ್ಸ್ ಹಾಕಿ ಫೆಡರೇಷನ್ ಕರ್ನಾಟಕ ಸಂಸ್ಥೆಯ ಕೊಡಗು ಜಿಲ್ಲಾ ಘಟಕದಿಂದ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನಿವಾಸದಲ್ಲಿ ಸ್ಮರಣಿಕೆಯನ್ನು ನೀಡಿ ಸನ್ಮಾನಿಸಿತು. ಈ ಸಂದರ್ಭ ವಿಶ್ವ ಹಾಕಿ ತೀರ್ಪುಗಾರರು, ಕರ್ನಾಟಕ ಹಾಕಿ ಅಸೋಶಿಯೆಷನ್ ಸಂಸ್ಥೆಯ ಕಾರ್ಯನಿರ್ವಾಹಕ ಸದಸ್ಯರು ಮತ್ತು ಖೇಲೋ ಮಾಸ್ಟರ್ಸ್ ಗೇಮ್ಸ್ ಹಾಕಿ ಫೆಡರೇಷನ್ ಕರ್ನಾಟಕ ಸಂಸ್ಥೆಯ ಉಪಧ್ಯಕ್ಷ ಅಮ್ಮಣಿಚಂಡ ಸಂಜು ಸೋಮಯ್ಯ ಮಾತನಾಡಿ, ಹಾಕಿ ಕ್ರೀಡೆಯಲ್ಲಿ ವಿಪುಲ ಅವಕಾಶಗಳಿದು, ಕಿರಿಯ ಹಿರಿಯ ಆಟಗಾರರಿಗೆ ಪ್ರೋತ್ಸಾಹ ನೀಡುವಂತಾಗಬೇಕು. ಪಂದ್ಯಾವಳಿಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ವಿಶೇಷ ಅನುದಾನ ಮತ್ತು ಸೌಲಭ್ಯಗಳನ್ನು ಸರ್ಕಾರ ಒದಗಿಸುವಂತಾಗಬೇಕು ಎಂದು ಸಂಸ್ಥೆ…






