ಲೇಖಕ: admin

ಮಡಿಕೇರಿ ಮೇ 13 : ಕಳೆದ 25 ವರ್ಷಗಳಿಂದ ಬಿಜೆಪಿ ಶಾಸಕರುಗಳ ಹಿಡಿತದಲ್ಲಿದ್ದ ಕೊಡಗು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು ಕೈವಶವಾಗಿದೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಕಳೆದ 25 ವರ್ಷಗಳ ಬಳಿಕ ಬಿಜೆಪಿಯ ಭದ್ರಕೋಟೆಯನ್ನು ಛಿದ್ರಗೊಳಿಸಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಡಾ.ಮಂಥರ್ ಗೌಡ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಎಂ.ಪಿ.ಅಪ್ಪಚ್ಚುರಂಜನ್ ಅವರನ್ನು 4,402 ಮತಗಳಿಂದ ಪರಾಭವಗೊಳಿಸಿದ್ದಾರೆ. ವೀರಾಜಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಎ.ಎ.ಸ್.ಪೊನ್ನಣ್ಣ ಅವರು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಕೆ.ಜಿ.ಬೋಪಯ್ಯ ಅವರನ್ನು 4,291ಮತಗಳಿಂದ ಸೋಲಿಸಿದ್ದಾರೆ. ಕ್ಷೇತ್ರ ಪುನರ್ ವಿಂಗಡಣೆಯ ಬಳಿಕ ಮಡಿಕೇರಿ ಮತ್ತು ವೀರಾಜಪೇಟೆ ಕ್ಷೇತ್ರಗಳಲ್ಲಿ ಬಿಜೆಪಿ ಸತತ ಗೆಲುವು ಸಾಧಿಸುತ್ತಾ ಬಂದಿದ್ದು, ಇದೀಗ ಬಿಜೆಪಿಯ ಗೆಲುವಿನ ನಾಗಾಲೋಟಕ್ಕೆ ಕಾಂಗ್ರೆಸ್ ಬ್ರೇಕ್ ಹಾಕಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಡಾ.ಮಂಥರ್ ಗೌಡ ಅವರು 84,879 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದು, ಪ್ರತಿಸ್ಪರ್ಧಿ ಅಪ್ಪಚ್ಚುರಂಜನ್ ಅವರು 80,477 ಮತಗಳನ್ನು ಪಡೆದರು. ಜೆಡಿಎಸ್ ನ ನಾಪಂಡ ಮುತ್ತಪ್ಪ ಕೇವಲ…

Read More

ಮಡಿಕೇರಿ ಮೇ 13 :  ಅರಕಲಗೂಡು ವಿಧಾನಸಭಾ ಕ್ಷೇತದಲ್ಲಿ ಜೆಡಿಎಸ್​ನಿಂದ ಸ್ಪರ್ಧಿಸಿ ಮಾಜಿ ಸಚಿವ ಎ. ಮಂಜು ಕಾಂಗ್ರೆಸ್​ ಹಾಗೂ ಬಿಜೆಪಿ ಅಭ್ಯರ್ಥಿಗಳ ವಿರುದ್ಧ 19,605 ಸಾವಿರ ಮತಗಳ ಅಂತರದಲ್ಲಿ ಭರ್ಜರಿ ಜಯ ಗಳಿಸಿದ್ದಾರೆ. 2021ರಲ್ಲಿ ಮಡಿಕೇರಿ ಕ್ಷೇತ್ರಕ್ಕೆ ನಡೆದ ವಿಧಾನಪರಿಷತ್​ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ಎ.ಮಂಜು ಪುತ್ರ ಮಂಥರ್​ ಗೌಡ ಬಿಜೆಪಿಯ ಅಪ್ಪಚ್ಚು ರಂಜನ್​​ಗೆ ವಿರುದ್ಧ 4,402 ಸಾವಿರ ಮತಗಳ ಅಂತರದಲ್ಲಿ ಜಯದ ನಗೆ ಬೀರಿದ್ದಾರೆ.

Read More

ಬೆಂಗಳೂರು ಮೇ 13 :  ತೀವ್ರ ಕುತೂಹಲ ಸೃಷ್ಟಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ  ಪ್ರಕಟವಾಗಿದ್ದು,  ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿದೆ. ಬಿಜೆಪಿ 65  ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 136 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಜೆಡಿಎಸ್ 19 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಇತರರು 4 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

Read More

ಮಡಿಕೇರಿ ಮೇ 13 : ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಎ.ಎಸ್.ಪೊನ್ನಣ್ಣ ಅವರು ಜಯಗಳಿಸಿದ್ದಾರೆ. ಗೆಲುವು ಸಾಧಿಸಿದ ಡಾ.ಮಂತರ್ ಗೌಡ ಅವರಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರು ಚುನಾವಣಾ ಪ್ರಮಾಣ ಪತ್ರ ನೀಡಿದರು. ಹಾಗೆಯೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಶಬನಾ ಎಂ.ಶೇಕ್ ಅವರು ಎ.ಎಸ್.ಪೊನ್ನಣ್ಣ ಅವರಿಗೆ ಚುನಾವಣಾ ಪ್ರಮಾಣ ಪತ್ರ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ತಹಶೀಲ್ದಾರರು ಮತ್ತು ಸಹಾಯಕ ಚುನಾವಣಾಧಿಕಾರಿಗಳಾದ ಎಸ್.ಎನ್.ನರಗುಂದ, ಕಿರಣ್ ಗೌರಯ್ಯ, ಪ್ರಮೋದ್, ರಾಮಚಂದ್ರ, ಚುನಾವಣಾ ತಹಶೀಲ್ದಾರ್ ರವಿಶಂಕರ್ ಇತರರು ಇದ್ದರು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುಂಡೇಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಅವರು ಮಾಧ್ಯಮ ಕೇಂದ್ರಕ್ಕೆ ಭೇಟಿ ನೀಡಿ ವಿಕ್ಷೀಸಿದರು.

Read More

ಮಡಿಕೇರಿ ಮೇ 13 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಎ.ಎಸ್.ಪೊನ್ನಣ್ಣ ಗೆಲುವು ಸಾಧಿಸಿದ್ದಾರೆ. ಕೊನೆಯ ಸುತ್ತಿನ ಮತ ಎಣಿಕೆಯಲ್ಲಿ ಪೊನ್ನಣ್ಣ ಅವರು 83128 ಮತಗಳನ್ನು ಗಳಿಸಿದ್ದಾರೆ. ಪ್ರತಿಸ್ಪರ್ಧಿ ಬಿಜೆಪಿಯ ಕೆ.ಜಿ.ಬೋಪಯ್ಯ ಅವರು 78397 ಮತಗಳನ್ನು ಗಳಿಸಿ ಸೋಲು ಅನುಭವಿಸಿದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ಅವರು ಕೊನೆಯ ಸುತ್ತಿನ ಎಣಿಕೆಯಲ್ಲಿ 83,949 ಮತಗಳನ್ನು ಗಳಿಸಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಎಂ.ಪಿ.ಅಪ್ಪಚ್ಚುರAಜನ್ ಅವರು 79,249 ಮತಗಳನ್ನು ಪಡೆದು ಸೋಲು ಅನುಭವಿಸಿದ್ದಾರೆ. ಬಿಜೆಪಿಯ ಭದ್ರಕೋಟೆಯನ್ನು ಚಿದ್ರ ಮಾಡುವ ಮೂಲಕ ಈ ಜೋಡಿ ಕೊಡಗಿನಲ್ಲಿ ದೊಡ್ಡ ಮೋಡಿ ಮಾಡಿದೆ. ಸೋಲಿಲ್ಲದ ಸರದಾರರಿಗೆ ಸೋಲಿನ ರುಚಿ ತೋರಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಜಿಲ್ಲೆಯಲ್ಲಿ ಮರು ಜೀವ ನೀಡಿದ್ದಾರೆ. ಬದಲಾವಣೆಯನ್ನು ಬಯಸಿದ್ದ ಕೊಡಗಿನ ಜನ ಇಬ್ಬರು ಉತ್ಸಾಹಿ ಯುವಕರ ಕೈಹಿಡಿದು ನಿಮ್ಮೊಂದಿಗೆ ನಾವಿದ್ದೇವೆ ಎಂದು ಅಭಯ ನೀಡಿದ್ದಾರೆ. ಇನ್ನು ಏನಿದ್ದರೂ ನೂತನ ಶಾಸಕರುಗಳಾದ ಮಡಿಕೇರಿಯ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆಯ…

Read More

ಮಡಿಕೇರಿ ಮೇ 13 : ಬಿಜೆಪಿಯ ಭದ್ರಕೋಟೆಯನ್ನು ಚಿದ್ರ ಮಾಡುವ ಮೂಲಕ ಈ ಜೋಡಿ  ಕೊಡಗಿನಲ್ಲಿ ದೊಡ್ಡ ಮೋಡಿ ಮಾಡಿದೆ. ಸೋಲಿಲ್ಲದ ಸರದಾರರಿಗೆ ಸೋಲಿನ ರುಚಿ ತೋರಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಜಿಲ್ಲೆಯಲ್ಲಿ ಮರು ಜೀವ ನೀಡಿದ್ದಾರೆ. ಬದಲಾವಣೆಯನ್ನು ಬಯಸಿದ್ದ ಕೊಡಗಿನ ಜನ ಇಬ್ಬರು ಉತ್ಸಾಹಿ ಯುವಕರ ಕೈಹಿಡಿದು ನಿಮ್ಮೊಂದಿಗೆ ನಾವಿದ್ದೇವೆ ಎಂದು ಅಭಯ ನೀಡಿದ್ದಾರೆ. ಇನ್ನು ಏನಿದ್ದರೂ ನೂತನ ಶಾಸಕರುಗಳಾದ ಮಡಿಕೇರಿಯ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆಯ ಎ.ಎಸ್.ಪೊನ್ನಣ್ಣ ಅವರುಗಳು ಜನರ ನಿರೀಕ್ಷೆಯನ್ನು ತಲುಪಬೇಕಷ್ಟೆ.

Read More

ಮಡಿಕೇರಿ ಮೇ 13 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಎ.ಎಸ್.ಪೊನ್ನಣ್ಣ ಗೆಲುವು ಸಾಧಿಸಿದ್ದಾರೆ. 20 ನೇ ಸುತ್ತಿನ ಮತ ಎಣಿಕೆಯಲ್ಲಿ ಪೊನ್ನಣ್ಣ ಅವರು 83128 ಮತಗಳನ್ನು ಗಳಿಸಿದ್ದಾರೆ. ಪ್ರತಿಸ್ಪರ್ಧಿ ಬಿಜೆಪಿಯ ಕೆ.ಜಿ.ಬೋಪಯ್ಯ ಅವರು 78397 ಮತಗಳನ್ನು ಗಳಿಸಿ ಸೋಲು ಅನುಭವಿಸಿದ್ದಾರೆ.

Read More

ವಿರಾಜಪೇಟೆ ಕ್ಷೇತ್ರದಲ್ಲಿ 15 ನೇ ಸುತ್ತಿನಲ್ಲಿ ಕೂಡ ಕಾಂಗ್ರೆಸ್ ನ ಎ.ಎಸ್.ಪೊನ್ನಣ್ಣ ಮುನ್ನಡೆ ಸಾಧಿಸಿದ್ದು, 60,951 ಮತ ಗಳಿಸಿದ್ದಾರೆ. ಕೆ.ಜಿ.ಬೋಪಯ್ಯ 56,713 (ಬಿಜೆಪಿ)

Read More