ಚೆಯ್ಯಂಡಾಣೆ ಜೂ.23 : ತಝ್ಕಿಯತ್ತು ತ್ವಲಬಾ ದರ್ಸ್ ಇದರ 2023-24 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಸುಂಟಿಕೊಪ್ಪ ದರ್ಸ್ ನಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯ ನೇತೃತ್ವವನ್ನು ಶೈಖುನಾ ಉಸ್ಮಾನ್ ಫೈಝಿ ವಹಿಸಿದರು. ಗೌರವ ಅದ್ಯಕ್ಷರಾಗಿ ಶೈಖುನಾ ಉಸ್ಮಾನ್ ಫೈಝಿ ಉಸ್ತಾದ್, ಅದ್ಯಕ್ಷರಾಗಿ ಸುಹೈಬ್ ಎಡಪಾಲ, ಉಪಾಧ್ಯಕ್ಷರುಗಳಾಗಿ ಸಾಬಿತ್ ಸುಂಡಕ್ಕೆರೆ, ರಝಾಕ್ ಗೋಣಿಕೊಪ್ಪ, ಪ್ರಧಾನ ಕಾರ್ಯ ದರ್ಶಿ ಖಾಲಿದ್ ಗೋಣಿಕೊಪ್ಪ, ವ.ಕಾರ್ಯದರ್ಶಿ ಸುಹೈಲ್ ಕಿಕ್ಕರೆ, ಸಹ ಕಾರ್ಯ ದರ್ಶಿ ಶಿಹಾಬುದ್ದೀನ್ ಶನಿವಾರಸಂತೆ, ಕೋಶಾಧಿಕಾರಿ ಆಶಿಕ್ ಸಿದ್ದಾಪುರ ಆಯ್ಕೆಯಾದರು. ವರದಿ : ಅಶ್ರಫ್
ಲೇಖಕ: admin
ಸುಂಟಿಕೊಪ್ಪಜೂ.23 : ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಪರಿಹಾರ ಕಾಣದ ಡೆಂಗ್ಯೂ ಜ್ವರ ನಿವಾರಣೆಗಾಗಿ ಟೊಂಕ ಕಟ್ಟಿ ನಿಂತಿರುವ ಆರೋಗ್ಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ಸುಂಟಿಕೊಪ್ಪ ವ್ಯಾಪ್ತಿಯಲ್ಲಿನ ಸೊಳ್ಳೆಗಳನ್ನು ಹಿಡಿದು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿ ಫಲಿತಾಂಶ ತಿಳಿಯಲು ಮುಂದಾಗಿದ್ದಾರೆ. ಹಾಸನ ಮತ್ತು ಮೈಸೂರಿನಿಂದ ಕೀಟಾಣು ಶಸ್ತ್ರಜ್ಞನರ ತಂಡ ಡಾ.ರಾಜೇಶ್ ಕುಲಕರ್ಣಿಯವರ ನೇತೃತ್ವದದಲ್ಲಿ ಬಂದಿದ್ದು, ಸುಂಟಿಕೊಪ್ಪದ ಮೊದಲನೇ 1ನೇ ವಿಭಾಗ, 2ನೇ ವಿಭಾಗದ ಅಪ್ಪಾರಂಡ ಬಡಾವಣೆ ಮತ್ತಿತರ ಭಾಗಗಳಲ್ಲಿ ಮುಂದಿನ ನಾಲ್ಕೈದು ದಿನಗಳಕಾಲ ಸೊಳ್ಳೆಗಳನ್ನು ಹಿಡಿದು ಪ್ರಯೋಗಾಲಯಕ್ಕೆ ಕಳುಹಿಸುವ ಮೂಲಕ ಯಾವ ರೀತಿಯ ಸೊಳ್ಳೆ ಮತ್ತು ಇದು ಹರಡುವ ಖಾಯಿಲೆ ಯಾವುದು ಈ ಸೊಳ್ಳೆಗಳ ಕಡಿತದಿಂದಲೇ ಜ್ವರ ಬಾಧಿಸುತ್ತಿರುವುದು ನಿಜವೇ ಎಂಬ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಸುಂಟಿಕೊಪ್ಪ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಆರೋಗ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಿನಂಪ್ರತಿ ಭೇಟಿ ನೀಡುತ್ತಿದ್ದು, ಪ್ರತಿನಿತ್ಯದ ರೋಗಿಗಳ ವಿವರವನ್ನು ಸೂಕ್ತ ಚಿಕಿತ್ಸೆಯ ವ್ಯವಸ್ಥೆಯನ್ನು ಪರಿಶೀಲಿಸುತ್ತಿದ್ದಾರೆ.…
ಮಡಿಕೇರಿ ಜೂ.23 : ಮಂಗಳೂರಿನ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಅಪರಾಧ ಪ್ರಕರಣವೊಂದರ ಆರೋಪಿಯಾಗಿರುವ ಜಿಲ್ಲೆಯ ವ್ಯಕ್ತಿಯೋರ್ವರ ಪತ್ತೆಗೆ ಸಹಕರಿಸಲು ಪೊಲೀಸ್ ಪ್ರಕಟಣೆ ಕೋರಿದೆ. ಕಳೆದ 2017ನೇ ಇಸವಿಯಲ್ಲಿ ಮಹಿಳಾ ಸಂಬಂಧಿತ ವಿಚಾರವಾಗಿ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ವಿರಾಜಪೇಟೆ ನಿವಾಸಿ ರಾಜೇಶ್ ಪೂಜಾರಿ ಎಂಬವರ ಮೇಲೆ ಪ್ರಕರಣ ದಾಖಲಾಗಿತ್ತು. ಇದಾದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದು, ನ್ಯಾಯಾಲಯದಿಂದ ಹಲವು ಬಾರಿ ದಸ್ತಗಿರಿ ವಾರಂಟ್ ಜಾರಿಯಾಗಿತ್ತು. ಆದರೆ, ಈತನವೂ ಆರೋಪಿ ರಾಜೇಶ್ ಪೂಜಾರಿ ಪತ್ತೆಯಾಗಿಲ್ಲ. ಸದ್ರಿ ಪ್ರಕರಣದ ಬಗ್ಗೆ ನ್ಯಾಯಾಲಯದಿಂದ ಉದ್ಘೋಷಣೆ ಹೊರಡಿಸಲಾಗಿದ್ದು, ಈತನ ಬಗ್ಗೆ ಸುಳಿವು ದೊರೆತಲ್ಲಿ ಕಾವೂರು ಪೊಲೀಸ್ ಠಾಣೆ/ 0824-220533, ಪೊಲೀಸ್ ನಿರೀಕ್ಷಕರು 9480802346 ಅಥವಾ ಉಪ ನಿರೀಕ್ಷಕರು 9480805358 ಸಂಖ್ಯೆಗೆ ಮಾಹಿತಿ ನೀಡಲು ಪೊಲೀಸ್ ಪ್ರಕಟಣೆ ಕೋರಿದೆ.
ಕುಶಾಲನಗರ ಜೂ.22: ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದ ಬಗ್ಗೆ ಜನರಲ್ಲಿ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆ ಡೆಂಗ್ಯೂ ಜ್ವರ ಹರಡದಂತೆ ಅಗತ್ಯ ಕ್ರಮಗಳನ್ನು ವಹಿಸುವ ಬಗ್ಗೆ ಕೂಡುಮಂಗಳೂರು ಗ್ರಾ.ಪಂ ನ ಸಾಮಾನ್ಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಕೂಡುಮಂಗಳೂರು ಗ್ರಾ.ಪಂ ಅಧ್ಯಕ್ಷರಾದ ಇಂದಿರಾ ರಮೇಶ್ ಅಧ್ಯಕ್ಷತೆಯಲ್ಲಿ ನಡೆದ ಸಮಾನ್ಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಈಗಾಗಲೇ ಶುಂಠಿಕೊಪ್ಪ ಹಾಗೂ ಇನ್ನಿತರ ಕಡೆಗಳಲ್ಲಿ ಡೆಂಗ್ಯೂ ಹಾವಳಿ ಹೆಚ್ಚಾಗುತ್ತಿದೆ. ಆದ್ದರಿಂದ ಡೆಂಗ್ಯೂ ಬಗ್ಗೆ ಸಾರ್ವಜನಿಕರಿಗೆ ಅರವು ಮೂಡಿಸುವುದರ ಜೊತೆಗೆ ಗ್ರಾ.ಪಂ ನ ಎಲ್ಲಾ ವಾರ್ಡ್ ನಲ್ಲಿಯೂ ರಾಸಾಯನಿಕ ಹೊಗೆಯನ್ನು ಸಿಂಪಡಿಸುವ ಬಗ್ಗೆ ನಿರ್ಧರಿಸಲಾಯಿತು. ಅಲ್ಲದೇ ಚರಂಡಿಗಳಲ್ಲಿ ಬ್ಲೀಚಿಂಗ್ ಹಾಕುವುದರ ಜೊತೆಗೆ ಸ್ಬಚ್ಚತೆಗೆ ಹೆಚ್ಚಿನ ಆದ್ಯತೆ ನೀಡುವ ಬಗ್ಗೆ ಒತ್ತಾಯಿಸಲಾಯಿತು. ಚರಂಡಿ ಸ್ವಚ್ಚತೆಗೊಳಿಸಿ ತ್ಯಾಜ್ಯವನ್ನು ರಸ್ತೆ ಬದಿಯಲ್ಲಿ ಹಾಕಲಾಗುತ್ತಿದೆ. ತ್ಯಾಜ್ಯವನ್ನು ದಿನಗಟ್ಟಲೇ ರಸ್ತೆಯಲ್ಲಿಯೇ ಬಿಡದೇ ಆದಷ್ಟು ಬೇಗನೇ ಅದನ್ನು ವಿಲೇವಾರಿ ಮಾಡಬೇಕಾಗಿದೆ. ಇಲ್ಲದಿದ್ದಲ್ಲಿ ಕೋಳಿ, ನಾಯಿಗಳು ತ್ಯಾಜ್ಯವನ್ನು ಕೆರೆದು ಚರಂಡಿ ಹಾಕುತ್ತವೆ. ಇದರಿಂದ ಚರಂಡಿ ಸ್ವಚ್ಚಗೊಳಿಸಿದ ಕೆಲಸ ವ್ಯರ್ಥವಾಗಲಿದೆ. ಆದ್ದರಿಂದ ಈ…
ಮಡಿಕೇರಿ ಜೂ.22 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ ಅವರನ್ನು ಬಾಳುಗೋಡು ಕೊಡವ ಸಮಾಜಗಳ ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು. ಬಾಳುಗೋಡು ಕೊಡವ ಸಮಾಜದಲ್ಲಿ ಒಕ್ಕೂಟದ ಪ್ರಮುಖರು ಹಾಗೂ ಪದಾಧಿಕಾರಿಗಳು ಹೂಗುಚ್ಛ ನೀಡಿ ಸನ್ಮಾನಿಸಿ ಗೌರವಿಸಿದರು. ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಪ್ರಾಸ್ತಾವಿಕ ಮಾತನಾಡಿ, ಕೊಡಗಿನ ಪ್ರತಿಭಾವಂತ ಯುವ ಮುಖಂಡ ಕ್ಷೇತ್ರದಿಂದ ಆಯ್ಕೆಯಾಗಿ ಇದೀಗ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ಆಯ್ಕೆಯಾಗಿರುವುದು ಕೊಡಗಿಗೆ ಹೆಮ್ಮೆಯ ವಿಷಯ ಎಂದರು. ಇದೇ ಸಂದರ್ಭ ಬಾಳುಗೋಡಿನ ಕೊಡವ ಸಮಾಜಗಳ ಒಕ್ಕೂಟದ ಮೈದಾನದ ಅಭಿವೃದ್ಧಿ ಹಾಗೂ ಕ್ರೀಡಾಪಟುಗಳಿಗೆ ಹಾಸ್ಟೆಲ್ ವ್ಯವಸ್ಥೆ ಸೇರಿದಂತೆ ಒಕ್ಕೂಟದ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಮಾಡಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಪೊನ್ನಣ್ಣ, ಕೊಡಗಿನ ಅಭಿವೃದ್ಧಿಗೆ ಕಾರ್ಯನಿರ್ವಹಿಸುವುದಾಗಿ ಹಾಗೂ ಭ್ರಷ್ಟಾಚಾರದ ರಹಿತ ಆಡಳಿತವನ್ನು ನೀಡುವುದಾಗಿ ಹೇಳಿದರು. ಅಲ್ಲದೆ ಸಮಾಜ ಬಾಂಧವರ ಬೇಡಿಕೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು. ವಿಧಾನ ಪರಿಷತ್ ಸದಸ್ಯ ಸುಜಾಕುಶಾಲಪ್ಪ, ಒಕ್ಕೂಟದ ಉಪಾಧ್ಯಕ್ಷರುಗಳಾದ…
ಮಡಿಕೇರಿ ಜೂ.22 : ಮಂಗಳೂರು ವಿಶ್ವವಿದ್ಯಾನಿಲಯ, ಕೊಡಗು ವಿಶ್ವವಿದ್ಯಾನಿಲಯ, ಫೀಲ್ಡ್ ಮಾಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸ್ನಾತಕೋತ್ತರ ವಿವಿಧ ವಿಭಾಗಗಳ ಯುಜಿ ಮತ್ತು ಪಿಜಿ ಯ ರಾಜ್ಯ ಮಟ್ಟದ ಉತ್ಸವ “ಸಮನ್ವಯ-2023” ಉದ್ಘಾಟನಾ ಕಾರ್ಯಕ್ರಮವು ಜೂ.24 ರಂದು ನಡೆಯಲಿದೆ. ಕಾಲೇಜು ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಗೌರವ ಅತಿಥಿಗಳಾಗಿ ರೇಡಿಯಾಲಜಿಸ್ಟ್ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಪಾಲ್ಗೊಳ್ಳಲಿದ್ದು, ಮುಖ್ಯ ಅತಿಥಿಗಳಾಗಿ ಉದ್ಯಮಿ ಭಜನ್ ಬೋಪಣ್ಣ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೇಶವ ಕಾಮತ್, ವಿಶೇಷ ಆಹ್ವಾನಿತರಾಗಿ ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಡಾ.ಸೀನಪ್ಪ ಭಾಗವಹಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ. ಬಿ.ರಾಘವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 4.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ಮೌಲ್ಯಾಧಾರಿತ ಕಾರ್ಯಕ್ರಮಗಳು ನಡೆಯಲಿದೆ.
ಮಡಿಕೇರಿ ಜೂ.22 : ಮಳೆಗಾಲ ಆರಂಭಗೊಂಡು ಮೂರು ವಾರಗಳು ಕಳೆದ ನಂತರ ಕಾವೇರಿನಾಡು ಕೊಡಗು ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಗುರುವಾರ ಸಾಧಾರಣ ಮಳೆಯಾಗಿದೆ. ಮಳೆಯ ಕೊರತೆಯಿಂದ ಹತಾಶರಾಗಿದ್ದ ಜಿಲ್ಲೆಯ ಜನರಲ್ಲಿ ಕೊಂಚ ನೆಮ್ಮದಿ ಮೂಡಿದೆ. ಜಿಲ್ಲೆಯಲ್ಲಿ ಜೂನ್ ಆರಂಭದೊಂದಿಗೆ ಮುಂಗಾರು ಪ್ರವೇಶ ಸಾಮಾನ್ಯವಾಗಿದ್ದರು, ಇತ್ತೀಚಿನ ವರ್ಷಗಳಲ್ಲಿ ಮುಂಗಾರು ಮಳೆಯ ಚಿತ್ರಣ ನಿಧಾನವಾಗಿ ಬದಲಾಗುತ್ತಿದೆ. ಮಳೆಯ ಪ್ರಮಾಣ ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಜೂನ್ ತಿಂಗಳ ನಾಲ್ಕನೇ ವಾರವಾದರು ಕಾಣಿಸದಿದ್ದ ಮಳೆ, ಗುರುವಾರ ಕಾಣಿಸಿಕೊಂಡಿದೆ. ದಟ್ಟವಾಗಿ ಕವಿದ ಮೋಡಗಳು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಮಳೆಯನ್ನು ಸುರಿಸುತ್ತಿದ್ದು, ಹಠಾತ್ತನೆ ಆರಂಭಗೊಂಡ ಮಳೆಯಿಂದ ನಗರದ ಜನ ಸಂಚಾರಕ್ಕೆ ಕೊಂಚ ಅಡಚಣೆ ಉಂಟಾಯಿತು. ಬೆಟ್ಟಗುಡ್ಡಗಳಲ್ಲಿ ಮಂಜು ಮುಸುಕ್ಕಿದ್ದು, ಚಳಿಯ ವಾತಾವರಣವಿದೆ. ಬೆಳಗ್ಗಿನ ಅವಧಿಯಲ್ಲಿ ಕಾಣಿಸಿಕೊಂಡ ನೀಲ ಆಕಾಶ, ಬಿಸಿಲ ವಾತಾವರಣ ಮಧ್ಯಾಹ್ನದ ಬಳಿಕ ಬದಲಾಗಿ, ಕಾರ್ಮೋಡಗಳು ಕವಿದು ಸಾಧಾರಣ ಮಳೆ ಮುಂದುವರೆದಿದೆ. ಜಿಲ್ಲೆಯ ಸಿದ್ದಾಪುರ, ಸುಂಟಿಕೊಪ್ಪ, ಕುಶಾಲನಗರ ಹೀಗೆ ಬಹುತೇಕ ಭಾಗಗಳಲ್ಲಿ ಮಳೆಯಾಗಿರುವ ಬಗ್ಗೆ…
ಮಡಿಕೇರಿ ಜೂ.22 : ನಗರದ ಸಂತ ಮೈಕಲರ ಶಾಲೆಯಲ್ಲಿ ಯೋಗ ಗುರು ಸಂಕೇತ ಅವರ ಮಾರ್ಗದರ್ಶನದಲ್ಲಿ ಯೋಗ ದಿನಾಚರಣೆ ನಡೆಯಿತು. ಸಂಸ್ಥೆಯ ವ್ಯವಸ್ಥಾಪಕ ವಂದನೀಯ ಗುರು ನವೀನ್ ಕುಮಾರ್ ಮಾತನಾಡಿ, ಯೋಗ ಅಭ್ಯಾಸವನ್ನು ಪ್ರತಿ ನಿತ್ಯ ಮಾಡುವುದರಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಸಹಕಾರಿಯಾಗಲಿದೆ ಎಂದರು. ಸಂಸ್ಥೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಇತರರು ಇದ್ದರು.
ಮಡಿಕೇರಿ ಜೂ.22 : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಪೂರ್ಣಗೊಂಡ ಅಮೃತ್ ಸರೋವರ ಕೆರೆಗಳ ದಡದಲ್ಲಿ “ವಿಶ್ವ ಯೋಗ ದಿನಾಚರಣೆ’ಯ ಮಹತ್ವ ತಿಳಿಸಲಾಯಿತು. ಈಗಾಗಲೇ ಮನರೇಗಾ ಯೋಜನೆ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗಿರುವ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿನ ಅಮೃತ ಸರೋವರ ದಡದಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಕೂಲಿಕಾರರು ಹಾಗೂ ಶಾಲಾ ಮಕ್ಕಳನ್ನು ಒಗ್ಗೂಡಿಸಿ ವಿಶ್ವ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲೆಯ ಪೊನ್ನಂಪೇಟೆ, ಮೂರ್ನಾಡು, ನಾಪೋಕ್ಲು, ಬಲ್ಯಮಂಡೂರು, ಕಿರುಗೂರು, ಕಡಗದಾಳು ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಅಮೃತ್ ಸರೋವರ ದಡದಲ್ಲಿ ಆಚರಿಸಲಾಯಿತು. ಅಮೃತ ಸರೋವರ ತಾಣವು ಪ್ರಶಾಂತ ವಾತಾವರಣದಿಂದ ಕೂಡಿರುವ ಕಾರಣ ಈ ಬಾರಿಯ ವಿಶ್ವ ಯೋಗ ದಿನಾಚರಣೆಯನ್ನು ಅಮೃತ್ ಸರೋವರ ದಡದಲ್ಲಿ ಆಚರಿಸಿ, ಜಲಸಂರಕ್ಷಣೆಯ ಮಹತ್ವ ಹಾಗೂ ಪರಿಸರದ ಕುರಿತು ಜಾಗೃತಿ ಮೂಡಿಸಲಾಯಿತು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರು,…
ಮಡಿಕೇರಿ ಜೂ.22 : ಮಡಿಕೇರಿ ತಾಲೂಕಿನ ಸಂಪಾಜೆ ಹೋಬಳಿ ವ್ಯಾಪ್ತಿಯಲ್ಲಿ ಚೆಂಬು, ಪೆರಾಜೆ ಹಾಗೂ ಸಂಪಾಜೆ ಗ್ರಾಮಗಳಿಗೆ ಸಂಬಂದಿಸಿದ ಪೌತಿ/ ವಾರಸುದಾರಿಕೆ ಖಾತೆ ಆಂದೋಲನ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಜೂ.27 ರಂದು ಬೆಳಗ್ಗೆ 11 ಗಂಟೆಗೆ ಸಂಪಾಜೆ ನಾಡ ಕಚೇರಿಯಲ್ಲಿ ನಡೆಯಲಿದೆ. ಪೌತಿ /ವಾರಿಸುದಾರಿಕೆ ಖಾತೆ ಸಂಬಂಧ ಖಾತೆದಾರರ ಮರಣ ದೃಢೀಕರಣ ಪತ್ರ, ಆರ್ಡಿ ಸಂಖ್ಯೆಯ ವಂಶವೃಕ್ಷ ದೃಢೀಕರಣ ಪತ್ರ, ಚಾಲ್ತಿ ಸಾಲಿನ ಪಹಣಿ ಜೊತೆಗೆ ಕಲಂ 10 ರಲ್ಲಿ ದಾಖಲಾಗಿರುವ ಮ್ಯೂಟೇಷನ್ ಪ್ರತಿ/ ಜಮಾಬಂಧಿ ಹಾಗೂ ಆಧಾರ್ ಪ್ರತಿ ಮತ್ತು ದೂರವಾಣಿ ಸಂಖ್ಯೆ ಹಾಜರು ಪಡಿಸಲು ಕಿರಣ್ ಗೌರಯ್ಯ ಅವರು ತಿಳಿಸಿದ್ದಾರೆ. ಚೆಂಬು ಪೆರಾಜೆ ಹಾಗೂ ಸಂಪಾಜೆ ವ್ಯಾಪ್ತಿಯ ಎಲ್ಲ ರೈತಭಾಂದವರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕಂದಾಯ ಪರಿವೀಕ್ಷಕ ವೆಂಕಟೇಶ್ ಕೋರಿದ್ದಾರೆ.






