ಮಡಿಕೇರಿ ಜೂ.22 : ಮಂಗಳೂರು ವಿಶ್ವವಿದ್ಯಾನಿಲಯ, ಕೊಡಗು ವಿಶ್ವವಿದ್ಯಾನಿಲಯ, ಫೀಲ್ಡ್ ಮಾಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸ್ನಾತಕೋತ್ತರ ವಿವಿಧ ವಿಭಾಗಗಳ ಯುಜಿ ಮತ್ತು ಪಿಜಿ ಯ ರಾಜ್ಯ ಮಟ್ಟದ ಉತ್ಸವ “ಸಮನ್ವಯ-2023” ಉದ್ಘಾಟನಾ ಕಾರ್ಯಕ್ರಮವು ಜೂ.24 ರಂದು ನಡೆಯಲಿದೆ. ಕಾಲೇಜು ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಗೌರವ ಅತಿಥಿಗಳಾಗಿ ರೇಡಿಯಾಲಜಿಸ್ಟ್ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಪಾಲ್ಗೊಳ್ಳಲಿದ್ದು, ಮುಖ್ಯ ಅತಿಥಿಗಳಾಗಿ ಉದ್ಯಮಿ ಭಜನ್ ಬೋಪಣ್ಣ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೇಶವ ಕಾಮತ್, ವಿಶೇಷ ಆಹ್ವಾನಿತರಾಗಿ ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಡಾ.ಸೀನಪ್ಪ ಭಾಗವಹಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ. ಬಿ.ರಾಘವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 4.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ಮೌಲ್ಯಾಧಾರಿತ ಕಾರ್ಯಕ್ರಮಗಳು ನಡೆಯಲಿದೆ.
ಲೇಖಕ: admin
ಮಡಿಕೇರಿ ಜೂ.22 : ಮಳೆಗಾಲ ಆರಂಭಗೊಂಡು ಮೂರು ವಾರಗಳು ಕಳೆದ ನಂತರ ಕಾವೇರಿನಾಡು ಕೊಡಗು ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಗುರುವಾರ ಸಾಧಾರಣ ಮಳೆಯಾಗಿದೆ. ಮಳೆಯ ಕೊರತೆಯಿಂದ ಹತಾಶರಾಗಿದ್ದ ಜಿಲ್ಲೆಯ ಜನರಲ್ಲಿ ಕೊಂಚ ನೆಮ್ಮದಿ ಮೂಡಿದೆ. ಜಿಲ್ಲೆಯಲ್ಲಿ ಜೂನ್ ಆರಂಭದೊಂದಿಗೆ ಮುಂಗಾರು ಪ್ರವೇಶ ಸಾಮಾನ್ಯವಾಗಿದ್ದರು, ಇತ್ತೀಚಿನ ವರ್ಷಗಳಲ್ಲಿ ಮುಂಗಾರು ಮಳೆಯ ಚಿತ್ರಣ ನಿಧಾನವಾಗಿ ಬದಲಾಗುತ್ತಿದೆ. ಮಳೆಯ ಪ್ರಮಾಣ ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಜೂನ್ ತಿಂಗಳ ನಾಲ್ಕನೇ ವಾರವಾದರು ಕಾಣಿಸದಿದ್ದ ಮಳೆ, ಗುರುವಾರ ಕಾಣಿಸಿಕೊಂಡಿದೆ. ದಟ್ಟವಾಗಿ ಕವಿದ ಮೋಡಗಳು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಮಳೆಯನ್ನು ಸುರಿಸುತ್ತಿದ್ದು, ಹಠಾತ್ತನೆ ಆರಂಭಗೊಂಡ ಮಳೆಯಿಂದ ನಗರದ ಜನ ಸಂಚಾರಕ್ಕೆ ಕೊಂಚ ಅಡಚಣೆ ಉಂಟಾಯಿತು. ಬೆಟ್ಟಗುಡ್ಡಗಳಲ್ಲಿ ಮಂಜು ಮುಸುಕ್ಕಿದ್ದು, ಚಳಿಯ ವಾತಾವರಣವಿದೆ. ಬೆಳಗ್ಗಿನ ಅವಧಿಯಲ್ಲಿ ಕಾಣಿಸಿಕೊಂಡ ನೀಲ ಆಕಾಶ, ಬಿಸಿಲ ವಾತಾವರಣ ಮಧ್ಯಾಹ್ನದ ಬಳಿಕ ಬದಲಾಗಿ, ಕಾರ್ಮೋಡಗಳು ಕವಿದು ಸಾಧಾರಣ ಮಳೆ ಮುಂದುವರೆದಿದೆ. ಜಿಲ್ಲೆಯ ಸಿದ್ದಾಪುರ, ಸುಂಟಿಕೊಪ್ಪ, ಕುಶಾಲನಗರ ಹೀಗೆ ಬಹುತೇಕ ಭಾಗಗಳಲ್ಲಿ ಮಳೆಯಾಗಿರುವ ಬಗ್ಗೆ…
ಮಡಿಕೇರಿ ಜೂ.22 : ನಗರದ ಸಂತ ಮೈಕಲರ ಶಾಲೆಯಲ್ಲಿ ಯೋಗ ಗುರು ಸಂಕೇತ ಅವರ ಮಾರ್ಗದರ್ಶನದಲ್ಲಿ ಯೋಗ ದಿನಾಚರಣೆ ನಡೆಯಿತು. ಸಂಸ್ಥೆಯ ವ್ಯವಸ್ಥಾಪಕ ವಂದನೀಯ ಗುರು ನವೀನ್ ಕುಮಾರ್ ಮಾತನಾಡಿ, ಯೋಗ ಅಭ್ಯಾಸವನ್ನು ಪ್ರತಿ ನಿತ್ಯ ಮಾಡುವುದರಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಸಹಕಾರಿಯಾಗಲಿದೆ ಎಂದರು. ಸಂಸ್ಥೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಇತರರು ಇದ್ದರು.
ಮಡಿಕೇರಿ ಜೂ.22 : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಪೂರ್ಣಗೊಂಡ ಅಮೃತ್ ಸರೋವರ ಕೆರೆಗಳ ದಡದಲ್ಲಿ “ವಿಶ್ವ ಯೋಗ ದಿನಾಚರಣೆ’ಯ ಮಹತ್ವ ತಿಳಿಸಲಾಯಿತು. ಈಗಾಗಲೇ ಮನರೇಗಾ ಯೋಜನೆ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗಿರುವ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿನ ಅಮೃತ ಸರೋವರ ದಡದಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಕೂಲಿಕಾರರು ಹಾಗೂ ಶಾಲಾ ಮಕ್ಕಳನ್ನು ಒಗ್ಗೂಡಿಸಿ ವಿಶ್ವ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲೆಯ ಪೊನ್ನಂಪೇಟೆ, ಮೂರ್ನಾಡು, ನಾಪೋಕ್ಲು, ಬಲ್ಯಮಂಡೂರು, ಕಿರುಗೂರು, ಕಡಗದಾಳು ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಅಮೃತ್ ಸರೋವರ ದಡದಲ್ಲಿ ಆಚರಿಸಲಾಯಿತು. ಅಮೃತ ಸರೋವರ ತಾಣವು ಪ್ರಶಾಂತ ವಾತಾವರಣದಿಂದ ಕೂಡಿರುವ ಕಾರಣ ಈ ಬಾರಿಯ ವಿಶ್ವ ಯೋಗ ದಿನಾಚರಣೆಯನ್ನು ಅಮೃತ್ ಸರೋವರ ದಡದಲ್ಲಿ ಆಚರಿಸಿ, ಜಲಸಂರಕ್ಷಣೆಯ ಮಹತ್ವ ಹಾಗೂ ಪರಿಸರದ ಕುರಿತು ಜಾಗೃತಿ ಮೂಡಿಸಲಾಯಿತು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರು,…
ಮಡಿಕೇರಿ ಜೂ.22 : ಮಡಿಕೇರಿ ತಾಲೂಕಿನ ಸಂಪಾಜೆ ಹೋಬಳಿ ವ್ಯಾಪ್ತಿಯಲ್ಲಿ ಚೆಂಬು, ಪೆರಾಜೆ ಹಾಗೂ ಸಂಪಾಜೆ ಗ್ರಾಮಗಳಿಗೆ ಸಂಬಂದಿಸಿದ ಪೌತಿ/ ವಾರಸುದಾರಿಕೆ ಖಾತೆ ಆಂದೋಲನ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಜೂ.27 ರಂದು ಬೆಳಗ್ಗೆ 11 ಗಂಟೆಗೆ ಸಂಪಾಜೆ ನಾಡ ಕಚೇರಿಯಲ್ಲಿ ನಡೆಯಲಿದೆ. ಪೌತಿ /ವಾರಿಸುದಾರಿಕೆ ಖಾತೆ ಸಂಬಂಧ ಖಾತೆದಾರರ ಮರಣ ದೃಢೀಕರಣ ಪತ್ರ, ಆರ್ಡಿ ಸಂಖ್ಯೆಯ ವಂಶವೃಕ್ಷ ದೃಢೀಕರಣ ಪತ್ರ, ಚಾಲ್ತಿ ಸಾಲಿನ ಪಹಣಿ ಜೊತೆಗೆ ಕಲಂ 10 ರಲ್ಲಿ ದಾಖಲಾಗಿರುವ ಮ್ಯೂಟೇಷನ್ ಪ್ರತಿ/ ಜಮಾಬಂಧಿ ಹಾಗೂ ಆಧಾರ್ ಪ್ರತಿ ಮತ್ತು ದೂರವಾಣಿ ಸಂಖ್ಯೆ ಹಾಜರು ಪಡಿಸಲು ಕಿರಣ್ ಗೌರಯ್ಯ ಅವರು ತಿಳಿಸಿದ್ದಾರೆ. ಚೆಂಬು ಪೆರಾಜೆ ಹಾಗೂ ಸಂಪಾಜೆ ವ್ಯಾಪ್ತಿಯ ಎಲ್ಲ ರೈತಭಾಂದವರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕಂದಾಯ ಪರಿವೀಕ್ಷಕ ವೆಂಕಟೇಶ್ ಕೋರಿದ್ದಾರೆ.
ಮಡಿಕೇರಿ ಜೂ.22 : ಹಿರಿಯ ನಾಗರಿಕರ ವೇದಿಕೆ, ಲಯನ್ಸ್ ಸಂಸ್ಥೆಯ ಸಹಯೋಗದೊಂದಿಗೆ ಹಿರಿಯ ನಾಗರಿಕರು, ಸದಸ್ಯರು ಮತ್ತು ಸಾರ್ವಜನಿಕರಿಗೆ ಕಿವಿ, ಮೂಗು, ಗಂಟಲು ತಜ್ಞರಿಂದ ಉಚಿತ ತಪಾಸಣಾ ಶಿಬಿರವು ಜೂ.30 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಗರದ ಲಯನ್ಸ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ತಿಮ್ಮಯ್ಯ ತಿಳಿಸಿದ್ದಾರೆ.
ಮಡಿಕೇರಿ ಜೂ.22 : ತಾಲ್ಲೂಕಿನ ಗಾಳಿಬೀಡು ಬಳಿ ಇರುವ ಜವಾಹರ್ ನವೋದಯ ವಿದ್ಯಾಲಯಕ್ಕೆ 2024-25 ನೇ ಸಾಲಿಗೆ 6 ನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳಲ್ಲಿ 5ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆ.10 ಕೊನೆಯ ದಿನವಾಗಿದೆ. ಅರ್ಜಿಯನ್ನು https://navodaya.gov.in ಮತ್ತು https://cbseitms.rcil.gov.in/nvs ವೆಬ್ಸೈಟ್ನಲ್ಲಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯ ಇರುವ ಜಿಲ್ಲೆಯ ನಿವಾಸಿಯಾಗಿರಬೇಕು. 2023-24 ರ ಶೈಕ್ಷಣಿಕ ಅವಧಿಯಲ್ಲಿ 5 ನೇ ತರಗತಿಯಲ್ಲಿ ಓದುತ್ತಿರಬೇಕು. ಅಭ್ಯರ್ಥಿಯು 01-05-2012 ರಿಂದ 31-07-2014 ರ ನಡುವೆ ಜನಿಸಿರಬೇಕು. ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಜವಾಹರ್ ನವೋದಯ ವಿದ್ಯಾಲಯ, ಗಾಳಿಬೀಡು ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಾಂಶುಪಾಲರಾದ ಪಂಕಜಾಕ್ಷನ್ ತಿಳಿಸಿದ್ದಾರೆ.
ಮಡಿಕೇರಿ ಜೂ.22 : ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ರಾಜಾಸೀಟು, ರಾಜರ ಗದ್ದುಗೆ, ನೆಹರು ಮಂಟಪ ಅಭಿವೃದ್ಧಿ ಸಂಬಂಧಿಸಿದಂತೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಚ್.ಆರ್.ನಾಯಕ್ ಮಾಹಿತಿ ನೀಡಿದರು. ರಾಜಾಸೀಟು ಅಭಿವೃದ್ಧಿ ಸಂಬಂಧ ಇದುವರೆಗೆ ಕೈಗೊಳ್ಳಲಾಗಿರುವ ಕಾರ್ಯಕ್ರಮಗಳ ಬಗ್ಗೆ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಪ್ರಮೋದ್ ಮಾಹಿತಿ ನೀಡಿದರು. ರಾಜಾಸೀಟು ಅಭಿವೃದ್ಧಿ ಸಂಬಂಧಿಸಿದಂತೆ ಮಾಹಿತಿ ಪಡೆದು ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ರಾಜಸೀಟು, ರಾಜರ ಗದ್ದುಗೆ, ನೆಹರು ಮಂಟಪಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಹೊಸ ಕ್ರಿಯಾಯೋಜನೆ ಅನುಮೋದಿಸಲಾಗುವುದು ಎಂದು ತಿಳಿಸಿದರು. ಯಾವ ಉದ್ದೇಶಕ್ಕೆ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗುತ್ತದೆ ಎಂಬ ಬಗ್ಗೆ ಸಮಗ್ರ ವರದಿ ನೀಡುವಂತೆ ಜಿಲ್ಲಾಧಿಕಾರಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು. ರಾಜಸೀಟಿನ ಪುಟಾಣಿ ರೈಲು ಭಾಗದಲ್ಲಿ ಬೀದಿ ವ್ಯಾಪಾರಿಗಳಿಗೆ ನಿರ್ಮಾಣ ಮಾಡಲು ಉದ್ದೇಶಿಸಿರುವ ಅಂಗಡಿ ಮಳಿಗೆ ಯೋಜನೆ ಬಗ್ಗೆ…
ಮಡಿಕೇರಿ ಜೂ.22 : ಕೊಡಗು ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಆ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರ ವಹಿಸುವಂತೆ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾದಲ್ಲಿ ಸಂಭವಿಸಬಹುದಾದ ಅನಾಹುತ ತಡೆಯುವ ಸಂಬಂಧ ಅಗತ್ಯ ಮುನ್ನೆಚ್ಚರ ವಹಿಸುವ ಬಗ್ಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. `ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ 300 ಮಿ.ಮೀ. ಮಳೆ ಕಡಿಮೆ ಇದೆ. ಆದರೂ ಮುಂದಿನ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ವ್ಯಾಪಕ ಮಳೆಯಾದಲ್ಲಿ, ಮಳೆಯಿಂದ ಉಂಟಾಗಬಹುದಾದ ಅವಘಡವನ್ನು ತಪ್ಪಿಸಲು ಅಗತ್ಯ ಕಟ್ಟೆಚ್ಚರ ವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.’ ಹೆಚ್ಚಿನ ಮಳೆಯಿಂದ ಉಂಟಾಗಬಹುದಾದ ಪ್ರಾಣ ಹಾನಿ, ಜಾನುವಾರು ಹಾನಿ, ಆಸ್ತಿ-ಪಾಸ್ತಿ ಹಾನಿ ಹೀಗೆ ಪ್ರತಿಯೊಂದರ ಬಗ್ಗೆ ಎಚ್ಚರ ವಹಿಸಬೇಕಿದೆ. ಆ ನಿಟ್ಟಿನಲ್ಲಿ ತಮ್ಮ ಹಂತದಲ್ಲಿ ತಂಡೋಪಾದಿಯಾಗಿ ಕಾರ್ಯನಿರ್ವಹಿಸಬೇಕು. ಜೊತೆಗೆ ಸ್ಥಳೀಯರಿಗೆ ಮಾಹಿತಿ ನೀಡುವಂತಾಗಬೇಕು ಎಂದು ವೆಂಕಟ್ ರಾಜಾ…
ಮಡಿಕೇರಿ ಜೂ.22 : ಕುಶಾಲನಗರ ಸಮೀಪದ ಕೊಪ್ಪ ಹಳೆಯ ಸೇತುವೆ ಕೆಳಭಾಗದಲ್ಲಿ ವೃದ್ಧರೊಬ್ಬರ ಮೃತದೇಹ ಪತ್ತೆಯಾಗಿದೆ. ಪಟ್ಟಣದ ಚಿಕ್ಕಣ್ಣ ಬಡಾವಣೆಯ ನಿವಾಸಿ, ಲಾರಿ ಚಾಲಕ ಗಂಗಾಧರ (72) ಎಂಬುವವರೇ ಮೃತ ವ್ಯಕ್ತಿಯಾಗಿದ್ದು, ಇದು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದೆ. ಕಾವೇರಿ ನದಿ ಸೇತುವೆ ಮೇಲ್ಭಾಗದಿಂದ ಇಂದು ಮುಂಜಾನೆ ಗಂಗಾಧರ ಬಿದ್ದಿದ್ದಾರೆ ಎಂದು ಹೇಳಲಾಗಿದೆ. ನದಿ ಬಂಡೆ ಮೇಲೆ ರಕ್ತ ಸಿಕ್ತ ಮೃತ ದೇಹವನ್ನು ಕಂಡ ಸ್ಥಳೀಯರು ಕುಶಾಲನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಪಟ್ಟಣದ ಠಾಣಾಧಿಕಾರಿ ರವೀಂದ್ರ ಹಾಗೂ ಸಿಬ್ಬಂದಿಗಳು ಭೇಟಿ ಸ್ಥಳಕ್ಕೆ ನೀಡಿ ಮಹಜರು ನಡೆಸಿ ಪ್ರಕರಣ ದಾಖಲಿಸಿಕೊಂಡರು. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.






