ಲೇಖಕ: admin

ಮಡಿಕೇರಿ NEWS DESK  ಫೆ.5 : ಕೊಪ್ಪಳದ ಕರಟಗಿಯಲ್ಲಿ ಫೆ.7 ಮತ್ತು 8ರಂದು ನಡೆಯುವ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಗೆ ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಪಟ್ಟಮಾಡ ವರುಣಿಕಾ ಮುತ್ತಣ್ಣ ಆಯ್ಕೆಯಾಗಿದ್ದಾಳೆ. ಈಕೆ ಭಾವಗೀತೆಯಲ್ಲಿ ಸಾಧನೆ ಮಾಡಿದ್ದು, ಇದೀಗ ರಾಜ್ಯ ಮಟ್ಟದ ಸ್ಪರ್ಧೆಯನ್ನು ಎದುರಿಸಲಿದ್ದಾಳೆ. ಪಟ್ಟಮಾಡ ವರುಣಿಕಾ ಮುತ್ತಣ್ಣ ಚೇರಂಬಾಣೆ ಬೇಂಗೂರು ಗ್ರಾಮದ ಪಟ್ಟಮಾಡ ರವಿನ್ ಮುತ್ತಣ್ಣ ಹಾಗೂ ಮಿಲನ್ ಮುತ್ತಣ್ಣ ದಂಪತಿಯ ಪುತ್ರಿ.

Read More

ಮಡಿಕೇರಿ NEWS DESK ಫೆ.5 : ಇತ್ತೀಚೆಗೆ ಸಿದ್ದಾಪುರ ಸಮೀಪದ ಗೌರಿಬೆಟ್ಟ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಸಾವನ್ನಪ್ಪಿದ ಕಾರ್ಮಿಕ, ಹುಂಡಿ ನಿವಾಸಿ ಲತೀಫ್ ಅವರ ಕುಟುಂಬಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನ ಕೊಡಗು ಜಿಲ್ಲಾ ಘಟಕ ಸಾಂತ್ವನ ಹೇಳಿತು. ಪಾಲಿಬೆಟ್ಟದ ಹುಂಡಿಯಲ್ಲಿರುವ ಲತೀಫ್ ಅವರ ನಿವಾಸಕ್ಕೆ ಭೇಟಿ ನೀಡಿದ ಎಸ್‌ಡಿಟಿಯು ಪ್ರಮುಖರು ಅಗತ್ಯ ಸಹಕಾರ ನೀಡುವ ಭರವಸೆ ನೀಡಿದರು. ಅತ್ಯಂತ ಬಡತನದಲ್ಲಿರುವ ಕುಟುಂಬಕ್ಕೆ ಸರಕಾರ ಹೆಚ್ಚಿನ ಮೊತ್ತದ ಪರಿಹಾರವನ್ನು ನೀಡಬೇಕು ಎಂದು ಒತ್ತಾಯಿಸಿದರು. ಸಂಬಂಧಿಸಿದ ಇಲಾಖೆಗಳಿಂದ ಸರಕಾರದ ಸೌಲಭ್ಯಗಳನ್ನು ದೊರಕಿಸಿಕೊಡಲು ಸಹಕರಿಸುವುದಾಗಿ ಭರವಸೆ ನೀಡಿದರು. ಎಸ್‌ಡಿಟಿಯುನ ಜಿಲ್ಲಾಧ್ಯಕ್ಷ ಕೆ.ಹೆಚ್.ಅಣ್ಣ ಷರೀಫ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಜಾಕ್ ಎಂ.ಎ, ಸದಸ್ಯರುಗಳಾದ ಇಲಿಯಾಸ್ ಕುಶಾಲನಗರ, ಅಜೀಜ್ ಕುಶಾಲನಗರ ಹಾಗೂ ಸಾಜಿದ್ ಮಡಿಕೇರಿ ನಿಯೋಗದಲ್ಲಿದ್ದರು.

Read More

ಮಡಿಕೇರಿ NEWS DESK  ಫೆ.5 : ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನ ಕೊಡಗು ಜಿಲ್ಲಾಧ್ಯಕ್ಷರಾಗಿ ಕೆ.ಹೆಚ್.ಅಣ್ಣ ಷರೀಫ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ರಜಾಕ್ ಎಂ.ಎ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಇಬ್ರಾಹಿಂ ಹೊಸ ತೋಟ, ಕಾರ್ಯದರ್ಶಿಯಾಗಿ ಆಲಿ ಕೂಡಿಗೆ, ಸದಸ್ಯರಾಗಿ ಅಲ್ತಾಫ್ ಕೊಂಡಂಗೇರಿ, ಮೊಹಿದ್ದೀನ್ ಮಡಿಕೇರಿ, ಇಲ್ಯಾಸ್ ಕುಶಾಲನಗರ, ಹಸೀನಾ ಮಡಿಕೇರಿ ಹಾಗೂ ಅಜೀಜ್ ಕುಶಾಲನಗರ ಆಯ್ಕೆಯಾದರು.

Read More

ಮಡಿಕೇರಿ NEWS DESK ಫೆ.5 : ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನ ಕೊಡಗು ಜಿಲ್ಲಾಧ್ಯಕ್ಷರಾಗಿ ಕೆ.ಹೆಚ್.ಅಣ್ಣ ಷರೀಫ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ರಜಾಕ್ ಎಂ.ಎ ಆಯ್ಕೆಯಾಗಿದ್ದಾರೆ. ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಮಿಕ ಮಾಹಿತಿ ಶಿಬಿರ ಕುಶಾಲನಗರದ ಇಂದಿರಾ ಬಡಾವಣೆಯ ಮಲಯಾಳಿ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯಿತು. ಉಪಾಧ್ಯಕ್ಷರಾಗಿ ಇಬ್ರಾಹಿಂ ಹೊಸ ತೋಟ, ಕಾರ್ಯದರ್ಶಿಯಾಗಿ ಆಲಿ ಕೂಡಿಗೆ, ಸದಸ್ಯರಾಗಿ ಅಲ್ತಾಫ್ ಕೊಂಡಂಗೇರಿ, ಮೊಹಿದ್ದೀನ್ ಮಡಿಕೇರಿ, ಇಲ್ಯಾಸ್ ಕುಶಾಲನಗರ, ಹಸೀನಾ ಮಡಿಕೇರಿ ಹಾಗೂ ಅಜೀಜ್ ಕುಶಾಲನಗರ ಆಯ್ಕೆಯಾದರು. ನೂತನ ಜಿಲ್ಲಾ ಸಮಿತಿಯ ಆಯ್ಕೆ ಪ್ರಕ್ರಿಯೆ ನಡೆಸಿ ಮಾತನಾಡಿದ ಎಸ್‌ಡಿಟಿಯು ರಾಜ್ಯ ಸಂಚಾಲಕ ಅಥಾವುಲ್ಲ ಜೋಕಟ್ಟೆ ಕಾರ್ಮಿಕರ ಹೋರಾಟ ಮತ್ತು ತ್ಯಾಗದ ಫಲವಾಗಿ ಶ್ರಮಿಕ ವರ್ಗದ ಶ್ರೇಯೋಭಿವೃದ್ಧಿಗಾಗಿ ಹಲವು ಯೋಜನೆ ಹಾಗೂ ಕಾನೂನು ವಿವಿಧ ದೇಶಗಳಲ್ಲಿ ಅಸ್ತಿತ್ವಕ್ಕೆ ಬಂತು. ಭಾರತದಲ್ಲಿ ಸ್ವಾತಂತ್ರ್ಯ ನಂತರ ಹಲವು ರಾಜಕೀಯ ಪಕ್ಷಗಳು ವಿವಿಧ ಕಾರ್ಮಿಕ ಯೂನಿಯನ್ ಗಳನ್ನು ಹುಟ್ಟು…

Read More

ಮಡಿಕೇರಿ NEWS DESK ಫೆ.5 : ಮಾಯಮುಡಿ ಗ್ರಾಮ ಪಂಚಾಯಿತಿಯ ಗಾಂಧಿ ಗ್ರಾಮ ಪುರಸ್ಕಾರದ ಸಭಾಂಗಣ ಉದ್ಘಾಟನಾ ಸಮಾರಂಭ ಫೆ.7 ರಂದು ನಡೆಯಲಿದೆ. ಕೊಡಗು ಜಿ.ಪಂ, ಪೊನ್ನಂಪೇಟೆ ತಾ.ಪಂ ಮತ್ತು ಮಾಯಮುಡಿ ಗ್ರಾ.ಪಂ ಸಹಯೋಗದಲ್ಲಿ ಬೆಳಿಗ್ಗೆ 10.30 ಗಂಟೆಗೆ ಮಾಯಮುಡಿ ಗ್ರಾ.ಪಂ ಕಚೇರಿ ಕಟ್ಟಡದಲ್ಲಿ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಭಾಂಗಣವನ್ನು ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮಾಯಮುಡಿ ಗ್ರಾ.ಪಂ ಅಧ್ಯಕ್ಷ ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಮಂಡೇಪAಡ ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ ಹಾಗೂ…

Read More

ಮಡಿಕೇರಿ NEWS DESK ಫೆ.5 : ಮಡಿಕೇರಿ ಕ್ಷೇತ್ರದ ಜನಸ್ನೇಹಿ ಶಾಸಕ ಡಾ.ಮಂತರ್ ಗೌಡ ಅವರು ಇತ್ತೀಚೆಗೆ ಹಿಂದೂ ಶೋಭಾಯಾತ್ರೆಯಲ್ಲಿ ಪಾಲ್ಗೊಂಡ ವಿಚಾರವನ್ನು ಕೆಲವರು ದೊಡ್ಡದು ಮಾಡಿ ಕ್ಷುಲ್ಲಕ ರಾಜಕಾರಣ ಮಾಡುತ್ತಿರುವುದು ಸರಿಯಲ್ಲವೆಂದು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಎ.ಉಸ್ಮಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿವಿಧತೆಯಲ್ಲಿ ಏಕತೆ ಮತ್ತು ಸಮಾನತೆಯ ಆಶಯಕ್ಕೆ ಬದ್ಧರಾಗಿ ಕಾರ್ಯನಿರ್ವಹಿಸುತ್ತಿರುವ ಶಾಸಕ ಡಾ.ಮಂತರ್ ಗೌಡ ಅವರು ಸರ್ವಧರ್ಮೀಯರ ನೆಚ್ಚಿನ ಜನಪ್ರತಿನಿಧಿಯಾಗಿದ್ದಾರೆ. ಶಾಸಕರಾದವರು ಒಂದು ಧರ್ಮ ಅಥವಾ ಒಂದು ಸಮುದಾಯಕ್ಕೆ ಸೀಮಿತವಾಗಿರುವುದಿಲ್ಲ. ಅವರು ಪ್ರತಿಯೊಬ್ಬರನ್ನೂ ಪ್ರತಿನಿಧಿಸಬೇಕಾಗುತ್ತದೆ, ಆ ಕೆಲಸವನ್ನು ಮಡಿಕೇರಿ ಶಾಸಕರು ಉತ್ತಮ ರೀತಿಯಲ್ಲಿ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಓಲೈಕೆ ರಾಜಕಾರಣಕ್ಕಾಗಿ ತಮ್ಮತನವನ್ನು ಬಿಟ್ಟು ಮುಖವಾಡದ ರಾಜಕಾರಣವನ್ನು ಡಾ.ಮಂತರ್ ಗೌಡ ಅವರು ಎಂದಿಗೂ ಮಾಡಿಲ್ಲ. ಅಭಿವೃದ್ಧಿ ಕಾರ್ಯಗಳಲ್ಲಿ ಕೂಡ ತಾರತಮ್ಯ ಮಾಡದೆ ಪ್ರತಿಯೊಂದು ಜನಾಂಗಕ್ಕೂ ಮತ್ತು ಪ್ರತಿಯೊಂದು ಕ್ಷೇತ್ರಕ್ಕೂ ಸಮಾನ ಆದ್ಯತೆ ನೀಡುತ್ತಿದ್ದಾರೆ. ಮಡಿಕೇರಿ ಶಾಸಕರ ಸರಳತೆ ಮತ್ತು ಘನತೆಯ ಕುರಿತು ಮಕ್ಕಳಿಂದ…

Read More

ಮಡಿಕೇರಿ ಫೆ.4 NEWS DESK : 66/11 ಕೆ.ವಿ ವಿರಾಜಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಸದರಿ ಕೇಂದ್ರದಿಂದ ಹೊರಹೊಮ್ಮುವ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗುವುದರಿಂದ, ಅರಪಟ್ಟು-ಪಾಲಂಗಾಲ, ಕ್ಲಬ್ ಮಹೀಂದ್ರ, ಕದನೂರು ಭಗವತಿ ದೇವಸ್ಥಾನ ವ್ಯಾಪ್ತಿ, ಚರ್ಚ್ ಕೆದಮುಳ್ಳೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಫೆಬ್ರವರಿ, 07 ರಂದು ಬೆಳಗ್ಗೆ 09 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ NEWS DESK ಫೆ.4 : ಕೊಡಗು ಜಿಲ್ಲೆಯ ಕುಶಾಲನಗರದ ಗುಮ್ಮನಕೊಲ್ಲಿ, ಗ್ರಾಮದ ನಿವಾಸಿ ವಿಶಾಲಾಕ್ಷಮ್ಮ ಅವರ ಪುತ್ರಿ ಹೇಮಲತ ಜಿ. ಎಂ. ಅವರಿಗೆ ದಾವಣಗೆರೆ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ನೀಡಿ ಗೌರವಿಸಿದೆ. ಹೇಮಲತ ಅವರು ದಾವಣಗೆರೆ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ. ವಿಶ್ವನಾಥ್ ಹೆಚ್. ಅವರ ಮಾರ್ಗದರ್ಶನದಲ್ಲಿ “ವೀಣಾ ಶಾಂತೇಶ್ವರ ಮತ್ತು ದು. ಸರಸ್ವತಿಯವರ ಸಾಹಿತ್ಯದಲ್ಲಿ ಪ್ರತಿಭಟನಾತ್ಮಕ ನೆಲೆಗಳು” ಎಂಬ ವಿಷಯದ ಕುರಿತು ಮಹಾಪ್ರಬಂಧವನ್ನು ಮಂಡಿಸಿದ್ದರು. ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ರಾಜ್ಯಪಾಲರ ಉಪಸ್ಥಿತಿಯಲ್ಲಿ ಹೇಮಲತ ಅವರಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಯಿತು.

Read More

ಸೋಮವಾರಪೇಟೆ NEWS DESK ಫೆ.4 : ಬಿಜೆಪಿ ಶಾಸಕರು 25 ವರ್ಷಗಳಲ್ಲಿ ಮಾಡದ ಅಭಿವೃದ್ಧಿ ಕಾಮಗಾರಿಗಳನ್ನು ಹಾಲಿ ಶಾಸಕರಾದ ಡಾ.ಮಂತರ್‌ಗೌಡ ಅವರು ಎರಡೂವರೆ ವರ್ಷಗಳಲ್ಲಿ ಮಾಡಿದ್ದಾರೆ ಎಂದು ಬ್ಲಾಕ್ ಅಧ್ಯಕ್ಷ ಬಿ.ಬಿ.ಸತೀಶ್ ಹೇಳಿದರು. ಡಾ.ಮಂತರ್‌ಗೌಡ ಅವರ ಅಭಿವೃದ್ಧಿ ಕೆಲಸವನ್ನು ಕಂಡು ಬಿಜೆಪಿ ಭ್ರಮನಿರಸನಗೊಂಡು, ಪ್ರತಿಭಟನೆ ನೆಪದಲ್ಲಿ ಶಾಸಕರ ವಿರುದ್ಧ ಧಿಕ್ಕಾರ ಕೂಗಿ ಸಂತೋಷ ಪಡುತ್ತಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಬಿಜೆಪಿ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಿಬೇಕು, ಚುನಾವಣೆ ಸಂದರ್ಭದಲ್ಲಿ ಮಾತ್ರ ಅವಶ್ಯಕತೆ ಇದ್ದಷ್ಟು ರಾಜಕೀಯ ಮಾಡಿದರೆ, ವ್ಯವಸ್ಥೆಗೂ ಒಳ್ಳೆಯದು ಎಂದು ಹೇಳಿದ ಅವರು, ಕ್ಷೇತ್ರದ ಜನರು ಬಿಜೆಪಿಯನ್ನು ಮರೆಯುತ್ತಿದ್ದಾರೆ ಎಂಬ ಆತಂಕದಿAದ ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ ಎಂದು ದೂರಿದರು. ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿಯ ಹೆಚ್ಚಿನ ಬೂತ್‌ಗಳಲ್ಲಿ ಬಿಜೆಪಿಗೆ ಹೆಚ್ಚಿನ ಮತಗಳು ಬೀಳುತ್ತಿವೆ ಎಂಬುದು ಎಲ್ಲರಿಗೂ ತಿಳಿದಿರುವ ಸತ್ಯವಾಗಿದೆ. ಆದರೂ ಕಳೆದ 25 ವರ್ಷಗಳಿಂದ ತೋಳೂರುಶೆಟ್ಟಳ್ಳಿ, ಕೂತಿ ಮಾರ್ಗದ ರಸ್ತೆ ಅಭಿವೃದ್ಧಿಗೆ ಅಂದಿನ ಬಿಜೆಪಿ ಶಾಸಕರು ಅನುದಾನ ಕೊಡಲಿಲ್ಲ. ರಸ್ತೆ ಮಾಡಲು ಕಾಂಗ್ರೆಸ್…

Read More

ಸೋಮವಾರಪೇಟೆ NEWS DESK ಫೆ.4 : ಸನಾತನ ಹಿಂದೂ ಧರ್ಮ-ಪರಂಪರೆ, ಸಂಸ್ಕೃತಿಯ ರಕ್ಷಣೆಗೆ ಒಗ್ಗಟ್ಟು ಅವಶ್ಯ. ಈ ನಿಟ್ಟಿನಲ್ಲಿ ಹಿಂದೂಗಳು ಸಂಘಟಿತರಾಗಬೇಕು. ಹಾಗಾದಾಗ ಹಲವಷ್ಟು ಸಮಸ್ಯೆಗಳು ತನ್ನಿಂತಾನೇ ಬಗೆಹರಿಯುತ್ತವೆ. ಮನೆ ಹಾಗೂ ಮನಗಳಲ್ಲಿ ಧರ್ಮ ಇರಬೇಕು. ಎಲ್ಲರೂ ಸಂಸ್ಕಾರವಂತರಾಗಿ ಬಾಳಬೇಕು ಎಂದು ಯಸಳೂರು ತೆಂಕಲಗೋಡು ಮಠಾಧೀಶರಾದ ಶ್ರೀ ಚನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಕರೆ ನೀಡಿದರು. ಹಿಂದೂ ಸಂಗಮ ಆಯೋಜನಾ ಸಮಿತಿಯ ವತಿಯಿಂದ ಶಾಂತಳ್ಳಿಯ ಶ್ರೀ ಕುಮಾರಲಿಂಗೇಶ್ವರ ದೇವಾಲಯದ ಮುಂಭಾಗ ಆಯೋಜಿಸಿದ್ದ ಹಿಂದೂ ಸಂಗಮ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ವಿಶ್ವದಲ್ಲಿಯೇ ಭಾರತಕ್ಕೆ ವಿಶೇಷ ಸ್ಥಾನಮಾನವಿದೆ. ಪವಿತ್ರವಾದ ನಾಡಿನಲ್ಲಿ ನಾವೆಲ್ಲರೂ ಬದುಕುತ್ತಿದ್ದೇವೆ. ಕಣಕಣದಲ್ಲೂ ಶಕ್ತಿ, ಭಕ್ತಿ, ಧರ್ಮವನ್ನು ಈ ಮಣ್ಣು ಒಳಗೊಂಡಿದೆ. ಇತರ ಎಲ್ಲಾ ಧರ್ಮದವರಿಗೆ ಜೀವಿಸಲು ಸಾಕಷ್ಟು ರಾಷ್ಟ್ರಗಳಿವೆ. ಆದರೆ ಹಿಂದೂಗಳಿಗೆ ತಮ್ಮ ಧರ್ಮದ ಅನುಸಾರ ಜೀವನ ನಡೆಸಲು ಇರುವುದೊಂದೇ ಹಿಂದೂಸ್ಥಾನ. ಇದನ್ನು ಸಂರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು. ಮನೆ, ಆಸ್ತಿಗಳನ್ನು ಭದ್ರಗೊಳಿಸುವ ನಾವುಗಳು ತಾಯಿ ಭಾರತಾಂಭೆಯನ್ನೂ ರಕ್ಷಿಸಬೇಕು. ದೇಶ, ಧರ್ಮ ರಕ್ಷಣೆಯಾದರೆ…

Read More