ಮಡಿಕೇರಿ ಜ.14 NEWS DESK : ಸಮಾಜದ ಕನ್ನಡಿಯಾಗಿ, ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾಗಿ ಅಹೋರಾತ್ರಿ ದುಡಿಯುವ ಪತ್ರಕರ್ತರ ಬದುಕು ಸದಾ ಸುದ್ದಿಗಳ ಒತ್ತಡ, ಗಡುವುಗಳ ಸವಾಲುಗಳ ನಡುವೆ ಸಾಗುತ್ತದೆ. ಕೊಡಗಿನಂತಹ ಬೆಟ್ಟ-ಗುಡ್ಡಗಳ ನಾಡಿನಲ್ಲಿ ಮಳೆ, ಚಳಿ ಎನ್ನದೆ ಜನಸಾಮಾನ್ಯರ ಧ್ವನಿಯಾಗಿ ಕೆಲಸ ಮಾಡುವ ಪತ್ರಕರ್ತರ ಕ್ಷೇಮ ಮತ್ತು ಅವರ ಕುಟುಂಬದ ಭವಿಷ್ಯದ ದೃಷ್ಟಿಯಿಂದ ಕೊಡಗು ಪತ್ರಕರ್ತರ ಸಂಘ(ರಿ) ಇದರ ಕೊಡಗು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಮಿತಿಯು ಒಂದು ಐತಿಹಾಸಿಕ ಹೆಜ್ಜೆ ಇಟ್ಟಿದೆ. ಅದುವೇ ಪತ್ರಕರ್ತರ ಕ್ಷೇಮನಿಧಿಗಾಗಿ ಹಮ್ಮಿಕೊಳ್ಳಲಿರುವ “ಸಂಕ್ರಾಂತಿ ಸಂಭ್ರಮ” ಕ್ರಿಕೆಟ್ ಕ್ರೀಡಾಕೂಟ. ಇದು ಕೇವಲ ಒಂದು ಕ್ರೀಡಾಕೂಟವಲ್ಲ, ಬದಲಾಗಿ ಕೊಡಗಿನ ಮಾಧ್ಯಮ ರಂಗದ ಇತಿಹಾಸದಲ್ಲಿ ಒಂದು ಹೊಸ ಮನ್ವಂತರಕ್ಕೆ ನಾಂದಿ ಹಾಡಲಿರುವ ಮಹಾನ್ ಮಾನವೀಯ ಅಭಿಯಾನ. :: ಸಂಕ್ರಾಂತಿ ಸಂಭ್ರಮ : ಸುಗ್ಗಿ ಹಬ್ಬದ ಸೌಹಾರ್ದತೆ ಮತ್ತು ಸಾಮಾಜಿಕ ಬದ್ಧತೆ :: ಸಂಕ್ರಾಂತಿ ಎಂದರೆ ಸುಗ್ಗಿ, ಸಮೃದ್ಧಿಯ ಸಂಕೇತ. ರೈತರು ತಾವು ಬೆಳೆದ ಬೆಳೆಯನ್ನು ಮನೆಗೆ ತರುವ ಸಡಗರದ ಸಂದರ್ಭದಲ್ಲಿ, ಪತ್ರಕರ್ತರ…
ಲೇಖಕ: admin
ಕುಶಾಲನಗರ ಜ.14 NEWS DESK : ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಮತ್ತು ಅವರ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಂತಹ ಕಾರ್ಯಕ್ರಮಗಳು ಸಹಕಾರಿಯಾಗಿದೆ ಎಂದು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಚೇತನ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಕೊಡಗು ಜಿಲ್ಲೆ ಸಂಯುಕ್ತಾಶ್ರಯದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ಮಕ್ಕಳ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಇಂತಹ ಕಾರ್ಯಕ್ರಮಗಳು ನೆರವಾಗುತ್ತದೆ ಎಂದರು. ಎಲ್ಲ ಮಕ್ಕಳು ಸಮರ್ಥರು, ಎಲ್ಲರಲ್ಲೂ ಒಂದೊಂದು ಪ್ರತಿಭೆ ಅಡಗಿರುತ್ತದೆ. ಅವುಗಳನ್ನು ಗುರುತಿಸಿ ಸೂಕ್ತ ವೇದಿಕೆ ಕಲ್ಪಿಸಿ ಅವರನ್ನು ಪ್ರೋತ್ಸಾಹಿಸುವ ಕೆಲಸ ನಮ್ಮ ಶಿಕ್ಷಕರು ಹಾಗೂ ಪೋಷಕರು ಮಾಡಬೇಕು.…
ಮಡಿಕೇರಿ ಜ.14 NEWS DESK : ಕುಶಾಲನಗರ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಯಲ್ಲಿ ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ಪಿ.ಎಂ.ವರುಣಿಕ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಹತ್ತನೇ ತರಗತಿಯ ವಿದ್ಯಾರ್ಥಿನಿ ಎ.ಎಸ್.ತೃಶಾ ಅಶುಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾಳೆ. ವಿಜೇತ ವಿದ್ಯಾರ್ಥಿಗಳೊಂದಿಗೆ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕರಾದ ಕುದುಪಜೆ ಕವನ್, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಬಬ್ಬಿರ ಸ್ವರೂಪ್, ಪ್ರೌಢಶಾಲಾ ಶಿಕ್ಷಕರಾದ ಜೆ.ಆರ್.ಮನೋಜ್ ಕುಮಾರ್, ಬಿ.ಎಸ್. ಸಂಧ್ಯಾ ಹಾಜರಿದ್ದರು.
ಕುಶಾಲನಗರ ಜ.14 NEWS DESK : ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಸುಂದರನಗರದರುವ ಗಣಪತಿ ದೇವಾಲಯ ಜಾಗದ ಬೇಲಿಯನ್ನು ಅರಣ್ಯ ಇಲಾಖೆಯಿಂದ ತೆರವುಗೊಳಿಸಲಾಗಿತ್ತು. ಈ ಹಿನ್ನನೆ ಶಾಸಕರ ಸೂಚನೆ ಮೇರೆಗೆ ವಲಯ ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸದರು. ಸುಂದರನಗರದ ಸಾರ್ವಜನಿಕರು ಗಣಪತಿ ಪ್ರತಿಷ್ಟಾಪನೆಗೆಂದು ಬಿಡಲ್ಪಟ್ಟಿದ್ದ ಜಾಗದ ಬೇಲಿಯನ್ನು ಅರಣ್ಯ ಇಲಾಖೆಯಿಂದ ತೆರವುಗೊಳಿಸಲಾಗಿತ್ತು. ಈ ಹಿನ್ನಲೆ ಸ್ಥಳೀಯ ಗ್ರಾಮಸ್ಥರು ಶಾಸಕರ ಗಮನಕ್ಕೆ ತಂದ ಹಿನ್ನಲೆ ಶಾಸಕರು ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ.ಪಿ.ಶಶಿಧರ್ ಅವರು ಶಾಸಕರಿಗೆ ದೂರವಾಣಿ ಮೂಲಕ ಘಟನೆಯ ಬಗ್ಗೆ ಮಾಹಿತಿ ನೀಡಿದರು. ನಂತರ ಬೇಲಿ ತೆರವುಗೊಳಿಸಲು ಸರ್ಕಾರದಿಂದ ನಿರ್ದಿಷ್ಟವಾದ ಸುತ್ತೋಲೆ ಇಲ್ಲದೇ ದೇವಾಲಯದ ಬೇಲಿ ತೆರವುಗೊಳಿಸಿದ್ದೇಕೆ. ಆದಷ್ಟು ಬೇಗೆನೇ ಈ ಬಗ್ಗೆ ಒಂದು ಸಭೆ ನಡೆಸಲಿದ್ದು, ಸಭೆಯಲ್ಲಿ ಪೂರ್ಣವಾಗಿ ಮಾಹಿತಿ ನೀಡುವಂತೆ ಅರಣ್ಯಾಧಿಕಾರಿಗಳಿಗೆ ದೂರುವಾಣಿ ಮೂಲಕ ಸೂಚಿಸಿದ ಶಾಸಕರು, ವಿನಾಕಾರಣ ಸಾರ್ವಜನಿಕರಿಗೆ ತೊಂದರೆ ನೀಡುವ ಕೆಲಸಕ್ಕೆ ಮುಂದಾಗಬೇಡಿ ಎಂದರು. ಈ ಸಂದರ್ಭ ಮಾತನಾಡಿದ…
ನಾಪೋಕ್ಲು ಜ.14 NEWS DESK : ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ 17ನೇ ವರ್ಷದ ಸರ್ ಸಿ.ವಿ.ರಾಮನ್ ಆನ್ಲೈನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಗೆ ಆಸಕ್ತ ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳಲು ಕೋರಲಾಗಿದೆ. ವಿದ್ಯಾರ್ಥಿಗಳಲ್ಲಿ ವಿಜ್ಞಾನ ಕಲಿಕೆಯ ಬಗ್ಗೆ ಆಸಕ್ತಿ ಹೆಚ್ಚಿಸುವ ಉದ್ದೇಶ ಹೊಂದಿರುವ ಸಮಿತಿ 8, 9 ಮತ್ತು 10ನೇ ತರಗತಿಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿದೆ. ನೋಂದಾಯಿಸಿಕೊಳ್ಳಲು ಜ.30 ಕೊನೆಯ ದಿನವಾದೆ. ಮೊದಲ ಹಂತದ ಪರೀಕ್ಷೆ ಫೆ.1 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಅಂತಿಮ ಹಂತದ ಪರೀಕ್ಷೆ ಫೆ.8 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಫಲಿತಾಂಶ ಅಂದೇ ಸಂಜೆ ಪ್ರಕಟವಾಗಲಿದೆ. ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದವರಿಗೆ 10,000 ರೂ.ದ್ವಿತೀಯ ಸ್ಥಾನ ಪಡೆದವರಿಗೆ 8000ರೂ, ತೃತೀಯ ಸ್ಥಾನ ಪಡೆದವರಿಗೆ 6000 ರೂ. ಹಾಗೂ 10 ಸಮಾಧಾನಕರ ಬಹುಮಾನಗಳನ್ನು ವಿತರಿಸಲಾಗುವುದು. ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಅಭಿನಂದನಾ ಪತ್ರ ವಿತರಿಸಲಾಗುವುದು. ಆಸಕ್ತ ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳಲು ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಸಿ.ಎಸ್.ಸುರೇಶ್,…
ನಾಪೋಕ್ಲು ಜ.14 NEWS DESK : ಬೇತು ಗ್ರಾಮದ ಸೇಕ್ರೆಡ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅಜ್ಜೇಟ್ಟಿರ ಯಮುನಾ ಅವರನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು. ಸೇಕ್ರೆಡ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 23 ವರ್ಷಗಳ ಕಾಲ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಹೊಂದಿ ಯಮುನಾ ಅವರನ್ನು ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಸನ್ಮಾನ ಮಾಡಿ ಬೀಳ್ಕೊಟ್ಟರು. ಈ ಸಂದರ್ಭ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ
ಮಡಿಕೇರಿ ಜ.14 NEWS DESK : ಕಳೆದ ಶೈಕ್ಷಣಿಕ ವರ್ಷದ 10ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿ ಆಶ್ರಯ್ ಅಕ್ಕಮ್ಮ ಅತ್ಯುತ್ತಮ ಅಂಕಗಳನ್ನು ಗಳಿಸುವುದರ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ವಿರಾಜಪೇಟೆ ತಾಲ್ಲೂಕಿನಲ್ಲಿ ಗುಣಮಟ್ಟದ ಫಲಿತಾಂಶವನ್ನು ತಂದು ಕೊಟ್ಟ ಎಲ್ಲಾ ವಿದ್ಯಾರ್ಥಿಗಳ ಸಾಧನೆಯನ್ನ ಪ್ರಶಂಸಿಸುವ ಸಲುವಾಗಿ “ಸಾಧಕ ಸಂಭ್ರಮ್” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ 625 ಅಂಕಗಳಿಗೆ 623 ಅಂಕಗಳನ್ನು ಗಳಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಆಶ್ರಯ ಅಕ್ಕಮ್ಮ ಕನ್ನಡ 123-125, ಇಂಗ್ಲಿಷ್ 99-100, ಹಿಂದಿ 100-100, ವಿಜ್ಞಾನ 100-100, ಸಮಾಜ 100-100 ಗಣಿತ 100-100 ಅಂಕದೊಂದಿಗೆ ಪ್ರತಿ ವಿಷಯಕ್ಕೆ ಸಂಬಂಧಿಸಿದಂತೆ ಅತ್ಯುತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಗೆ ಸನ್ಮಾನ ಮಾಡಲಾಯಿತು. ಕನ್ನಡ ವಿಷಯದಲ್ಲಿ ಮಾನವಿ ಮುತ್ತಮ್ಮ 123-125, ಇಂಗ್ಲೀಷ್ ಭುವನ ಪೂವಯ್ಯ 99-100, ಸಮೃದ್ಧಿ ಕೆ.ಟಿ 99-100, ದೇವಯ್ಯ ಪಿ.ಎಸ್ 99-100, ಅನಲ್ ಪಿ. ಎಸ್ 99-100, ವರ್ಷಿತ 99-100 ಅಂಕಗಳನ್ನು ಪಡೆದುಕೊಂಡಿದ್ದಾರೆ.…
ಗೋಣಿಕೊಪ್ಪ ಜ.14 NEWS DESK : ಗೋಣಿಕೊಪ್ಪ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಸಂಭ್ರಮದಿಂದ ನಡೆಯಿತು. ಎಂಟು ಶಾಲೆಯ ವಿದ್ಯಾರ್ಥಿಗಳು ಭಾಗವಹಿಸುವ ಮೂಲಕ ತಮ್ಮ ಕಲಿಕೆಗಳನ್ನು ಪ್ರದರ್ಶಸಿ, ಬಹುಮಾನ ಪಡೆದುಕೊಂಡರು. ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಮುಕ್ತ ಕಲಿಕೆಯ ವಾತಾವರಣಕ್ಕೆ ಅನುಕೂಲಕರವಾಗಿ ಕಲಿಕಾ ಹಬ್ಬವನ್ನು ಸರಕಾರ ಜಾರಿಗೆ ತಂದಿದೆ. ಅದನ್ನು ಸಮರ್ಪಕವಾಗಿ ಮಕ್ಕಳೆಡೆಗೆ ತಲುಪಿಸುವ ವ್ಯವಸ್ಥೆಯನ್ನು ಸಂಭ್ರಮವಾಗಿಸುವ ಮೂಲಕ ಮಕ್ಕಳಲ್ಲಿ ಕಲಿಕೆಯ ಆಸಕ್ತಿಯನ್ನು ದ್ವಿಗುಣಗೊಳಿಸುವಲ್ಲಿ ಕಾರ್ಯಕ್ರಮ ಆಯೋಜನೆಯಾಗಿರುವುದು ಶ್ಲಾಘನೀಯ ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಆನಂದ್ ಮಾತನಾಡಿ, ಮಕ್ಕಳಲ್ಲಿ ಸೃಜನಶೀಲತೆಯನ್ನು ಹುಟ್ಟು ಹಾಕುವ ಸಲುವಾಗಿ ಕಲಿಕಾ ಹಬ್ಬ ಆಚರಣೆ ಮಾಡಲಾಗುತ್ತಿದೆ. ಮಕ್ಕಳಲ್ಲಿ ಅಡಗಿರುವ ಅಗಾಧ ಪ್ರತಿಭೆಗಳು ಹೊರಬಂದು ಗುರುತಿಸಿಕೊಳ್ಳುವ ವೇದಿಕೆಯಾಗುತ್ತಿದೆ ಎಂದು ಹೇಳಿದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಂಜುಳಾ ಮಾತನಾಡಿ ಮಕ್ಕಳಲ್ಲಿ ಕಲಿಯುವ ಗುಣಗಳನ್ನು ಹೆಚ್ಚಿಸುವ ಪ್ರಯೋಗಾತ್ಮಕ ಕಾರ್ಯಕ್ರಮಗಳು ಸರ್ಕಾರದ ಚಿಂತನೆಯ ಯೋಜನೆಗಳಾಗಿವೆ. ಈ ಕಾರ್ಯಕ್ರಮಗಳನ್ನು ಶಿಕ್ಷಕರು ಮಕ್ಕಳಕಡೆ ತಲುಪಿಸುವ…
ಮಡಿಕೇರಿ ಜ.14 NEWS DESK : ಇದೇ ಜ.28 ರಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆ ಹಾಗೂ ಜ.30 ರಂದು ಹುತಾತ್ಮರ ದಿನ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ರಾಷ್ಟ್ರದ ಪ್ರಥಮ ಸೇನಾ ಮಹಾ ದಂಡನಾಯಕ, ವೀರ ಸೇನಾನಿ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆಯನ್ನು ಅಚ್ಚುಕಟ್ಟಾಗಿ ಆಯೋಜಿಸುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜೀವನ ಚರಿತ್ರೆ ಕುರಿತು ಪ್ರಬಂಧ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆಯನ್ನು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸುವಂತಾಗಬೇಕು ಎಂದು ಸಲಹೆ ಮಾಡಿದರು. ಸೈನಿಕ ಶಾಲೆ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಎನ್ಸಿಸಿ ವಿದ್ಯಾರ್ಥಿಗಳನ್ನು ಆಹ್ವಾನಿಸುವುದು, ನಗರದಲ್ಲಿರುವ ಮಹನೀಯರ ಪ್ರತಿಮೆಗಳಿಗೆ ಹೂವಿನ ಅಲಂಕಾರ ಮಾಡುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು. ಫೀಲ್ಡ್…
ಮಡಿಕೇರಿ ಜ.12 NEWS DESK : ಯಲಹಂಕ ಗೌಡ ಸಮಾಜದ 2025–26ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಸಂತೋಷಕೂಟವು ಸಂಭ್ರಮದಿಂದ ನಡೆಯಿತು. ಸಮಾಜದ ಅಧ್ಯಕ್ಷರಾದ ಕುಂಞಳಿಯನ ಅಜೀತ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ, ಸಮಾಜದ ನೂರಾರು ಸದಸ್ಯರು, ಮಹಿಳೆಯರು, ಯುವಕರು ಹಾಗೂ ಗಣ್ಯ ಅತಿಥಿಗಳು ಸಮ್ಮುಖದಲ್ಲಿ ಭವ್ಯವಾಗಿ ನಡೆಯಿತು. ಯಲಹಂಕದ ರೈಲ್ ವೀಲ್ ಫ್ಯಾಕ್ಟರಿ ಎಂಪ್ಲಾಯಿಸ್ ಇನ್ಸ್ಟಿಟ್ಯೂಟ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ ಅವರು ಸಮಾಜದ ಅಭಿವೃದ್ಧಿಗೆ ಅಗತ್ಯವಾದ ಒಗ್ಗಟ್ಟು, ಶಿಕ್ಷಣ, ಉದ್ಯೋಗಾವಕಾಶಗಳು ಹಾಗೂ ಯುವಕರ ಪಾತ್ರ ಕುರಿತು ಮಾರ್ಗದರ್ಶನ ನೀಡಿದರು. ಸಮಾಜದ ಅಧ್ಯಕ್ಷರಾದ ಕುಂಞಳಿಯನ ಅಜೀತ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಂಗಾರು ನಿಂಗರಾಜು, ಕೋಟೇರ ವೇಣುಗೋಪಾಲ್, ಅಚ್ಚಲ್ಪಾಡಿ ಲಕ್ಷಕುಮಾರ್, ಕಲ್ಲುಮುಟ್ಟು ನಿತ್ಯಾನಂದ, ಕನ್ನಡ್ಕ ವಿಜಯಲಕ್ಷ್ಮಿ ಜಯರಾಮ್, ಕಲ್ಲುಮುಟ್ಲು ಪವನ್, ಅಯ್ಯಣರ ಶಾಲಿನಿ ನಿತ್ಯ, ಕೋಳುಮುಡಿಯನ ಮಿಲನ್ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು. ಸಭೆಯಲ್ಲಿ 2024–25ನೇ…






