3373 ಡಾ.ಮಂತರ್ ಗೌಡ (ಕಾಂಗ್ರೆಸ್) 2794 ಅಪ್ಪಚ್ಚು ರಂಜನ್ (ಬಿಜೆಪಿ)
ಲೇಖಕ: admin
ಮಡಿಕೇರಿ ಮೇ 12 : ಕಳೆದ ರಾತ್ರಿ ಸುರಿದ ಧಾರಾಕಾರ ಗಾಳಿ ಮಳೆಯಿಂದಾಗಿ ಕಡಂಗ – ವಿರಾಜಪೇಟೆ ಮುಖ್ಯ ರಸ್ತೆಯಲ್ಲಿ ಭಾರೀ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಕೆಲ ಹೊತ್ತು ಸಂಚಾರ ಸ್ಥಗಿತಗೊಂಡಿತ್ತು. ಕಡಂಗ- ಕೆದುಮುಳ್ಳೋರು ಮುಖ್ಯ ರಸ್ತೆಯಲ್ಲೂ ವಿದ್ಯುತ್ ಕಂಬಗಳು ಮತ್ತು ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದು ಸಂಚಾರ ಸ್ಥಗಿತಗೊಂಡಿತ್ತು. ಕಡಂಗ ದೇವಸ್ಥಾನ ಸಮೀಪದಲ್ಲಿ ಮರದ ಕೊಂಬೆ ಬಿದ್ದು ಸಂಚಾರಕ್ಕೆ ಅಡಚಣೆಗೊಂಡಿತ್ತು. ಕಡಂಗ ಸುತ್ತುಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡು ಕತ್ತಲು ಅವರಿಸಿಕೊಂಡಿವೆ. (ವರದಿ : ನೌಫಲ್)
ಮಡಿಕೇರಿ ಮೇ 12 : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಚುನಾವಣಾ ಕರ್ತವ್ಯಕ್ಕೆ ಹಾಜರಾಗಿ ಚುನಾವಣಾ ಪೂರ್ವಭಾವಿ ಸಿದ್ಧತೆ ಹಾಗೂ ಮಸ್ಟರಿಂಗ್ ಮತ್ತು ಡೀ ಮಸ್ಟರಿಂಗ್ ಕಾರ್ಯಗಳಿಗಾಗಿ ಅಧಿಗ್ರಹಣಗೊಳಿಸಲಾದ ಎಲ್ಲಾ ವರ್ಗದ ವಾಹನಗಳನ್ನು ಸಕಾಲದಲ್ಲಿ ಒದಗಿಸಿ ಸೇವೆ ನೀಡಿ ಸಹಕರಿಸಿದ ಜಿಲ್ಲೆಯ ಎಲ್ಲಾ ಸರಕು-ಸಾಗಾಣೆ, ಮ್ಯಾಕ್ಸಿಕ್ಯಾಬ್, ಬಸ್ಸು, ಟ್ಯಾಕ್ಸಿ, ಶಾಲಾ-ಕಾಲೇಜು ವಾಹನಗಳ ಚಾಲಕರು, ಮಾಲೀಕರು ಹಾಗೂ ಸಂಘದ ಪದಾಧಿಕಾರಿಗಳಿಗೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಧುರ ಎಸ್.ಎನ್. ಅವರು ಕೃತಜ್ಞತೆ ತಿಳಿಸಿದ್ದಾರೆ.
ಮಡಿಕೇರಿ ಮೇ 12 : ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2023-24 ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೊದಲು ಬಂದವರಿಗೆ ಮೊದಲ ಆದ್ಯತೆ ಮೇರೆಗೆ ನೇರವಾಗಿ ಪ್ರಥಮ ಡಿಪ್ಲೋಮಾ ಪ್ರವೇಶ ನೀಡಲಾಗುವುದು. ಮೇ 15 ರಿಂದ ನೇರ ಪ್ರವೇಶ ಪಡೆಯಲು ಅವಕಾಶವಿದ್ದು, ಸಂಸ್ಥೆಯಲ್ಲಿ 5 ಎಂಜಿನಿಯರಿಂಗ್ ಕೋರ್ಸ್ಗಳಿದ್ದು ಆಟೊಮೊಬೈಲ್, ಸಿವಿಲ್, ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್ ಹಾಗೂ ಮೆಕ್ಯಾನಿಕಲ್ ವಿಭಾಗಗಳಿಗೆ ಪ್ರವೇಶ ಪಡೆಯಬಹುದಾಗಿದೆ. ಪ್ರವೇಶ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಕಾಲೇಜಿನಲ್ಲಿ ನೇರವಾಗಿ ಪ್ರವೇಶ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಮೊ.ಸಂ. 9611470407, 9591137340 ನ್ನು ಸಂಪರ್ಕಿಸಬಹುದು ಎಂದು ಕುಶಾಲನಗರ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.
ಮಡಿಕೇರಿ ಮೇ 12 : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಕೊಡಗು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶದಿಂದ ಮೇ 10 ರ ಮತದಾನದ ದಿನದಂದು ‘ಸೆಲ್ಫಿ ಕಂಟೆಸ್ಟ್’ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಜಿಲ್ಲೆಯ 2 ವಿಧಾನಸಭಾ ಕ್ಷೇತ್ರದಿಂದ ಸುಮಾರು 620 ಸ್ಪರ್ಧಿಗಳು ಭಾಗವಹಿಸಿದ್ದರು. ಸ್ಪರ್ಧಿಗಳು ಕಳುಹಿಸಿದ ಸೆಲ್ಫಿಗಳಲ್ಲಿ ಅತ್ಯುತ್ತಮವಾದ ಸೆಲ್ಫಿಗಳನ್ನು ಗುರುತಿಸಿ ವಿಜೇತರನ್ನು ಆಯ್ಕೆ ಮಾಡಲಾಗಿದೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚೆನ್ನಯ್ಯನ ಕೋಟೆಯ ಮತಗಟ್ಟೆ ಸಂಖ್ಯೆ 115 ಕಾರ್ಯಪ್ಪ(ಪ್ರಥಮ), ಮಾಯಮುಡಿಯ ಮತಗಟ್ಟೆ ಸಂಖ್ಯೆ 208 ಬಾನಂಡ ಆಶಾ ಸೂದನ(ದ್ವಿತೀಯ), ಕೊಟ್ಟೋಳಿ ಮತಗಟ್ಟೆ ಸಂಖ್ಯೆ 168 ರ ಗಿರೀಶ್ ಕುಮಾರ್(ತೃತೀಯ) ಬಹುಮಾನ ಪಡೆದಿದ್ದಾರೆ. ಸಮಾಧಾನಕರ ಬಹುಮಾನವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 51 ದೊಡ್ಡಮಳ್ತೆಯ ಜಯಶ್ರೀ, ಮದಲಾಪುರ ಮತಗಟ್ಟೆ ಸಂಖ್ಯೆ 147 ರ ಶ್ವೇತಾ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ನರಿಯಂದಡ ಎಡಪಾಲ ಮತಗಟ್ಟೆ ಸಂಖ್ಯೆ 83 ಸುಮಯ್ಯ ಇವರು ಭಾಜನರಾಗಿದ್ದು, ವಿಜೇತರಿಗೆ…
ಮಡಿಕೇರಿ ಮೇ 12 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ವೀಕ್ಷಕರಾಗಿ ನೇಮಕಗೊಂಡಿರುವ ಜಿ.ಪ್ರಸನ್ನ ರಾಮಸ್ವಾಮಿ (ಭಾ.ಆ.ಸೇ) ಅವರು ನಗರದ ಸಂತ ಜೋಸೆಫರ ಶಾಲೆಗೆ ಭೇಟಿ ನೀಡಿ ಮತ ಎಣಿಕೆ ಸಿದ್ಧತೆ ಬಗ್ಗೆ ಪರಿಶೀಲಿಸಿದರು. ಈ ಸಂಬಂಧ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಜೊತೆ ಸಮಾಲೋಚನೆ ನಡೆಸಿದರು. ಹಾಗೆಯೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಶಬನಾ ಎಂ.ಶೇಕ್ ಅವರಿಂದ ಮತ ಎಣಿಕೆಗೆ ಕೈಗೊಳ್ಳಲಾಗಿರುವ ಸಿದ್ಧತೆ ಬಗ್ಗೆ ಮಾಹಿತಿ ಪಡೆದರು. ಈಗಾಗಲೇ ಚುನಾವಣಾ ಸಾಮಾನ್ಯ ವೀಕ್ಷಕರಾಗಿ ನೇಮಕವಾಗಿರುವ ವಿಕ್ರಮ ಸಿಂಗ್ ಮಲ್ಲಿಕ್(ಭಾ.ಆ.ಸೇ) ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಮತ ಎಣಿಕೆ ವೀಕ್ಷಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮತ ಎಣಿಕೆ ಸಂಬಂಧಿಸಿದಂತೆ ಅಂತಿಮ ಸಿದ್ಧತೆಯನ್ನು ಪರಿಶೀಲಿಸಿದರು. ಹಾಗೆಯೇ ಅಂಚೆ ಮತಪತ್ರ ಎಣಿಕೆ ಹಾಗೂ ವಿದ್ಯುನ್ಮಾನ ಮತಯಂತ್ರದ ಮತ ಎಣಿಕೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಸಮಾಲೋಚಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಯತೀಶ್ ಉಳ್ಳಾಲ್, ಸಹಾಯಕ ಚುನಾವಣಾಧಿಕಾರಿಗಳಾದ ಎಸ್.ಎನ್.ನರಗುಂದ,…
ಮಡಿಕೇರಿ ಮೇ 12 : ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಥಮ ಬಿಬಿಎ ವಿದ್ಯಾರ್ಥಿನಿ ಲಾವಣ್ಯ ಬೋರ್ಕರ್ ನೃತ್ಯದಲ್ಲಿ ಸಾಧನೆ ಮಾಡಿದ್ದಾಳೆ. ತಮಿಳುನಾಡಿನ ತಿರುಚಿಯ ವೃಕ್ಷ ವರ್ಲ್ಡ್ ರೆಕಾರ್ಡ್ ನಿಂದ ಆಯೋಜಿಸಲಾಗಿದ್ದ ನೃತ್ಯ ಕಾರ್ಯಕ್ರಮದಲ್ಲಿ ಉತ್ತಮ ಪ್ರದರ್ಶನವನ್ನು ನೀಡಿ ಸಾಧನೆ ಮಾಡುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾಳೆ. ಈ ಹಿಂದೆಯು ಈಕೆ ಕಲಾ ಮಾಣಿಕ್ಯ, ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಮುಂತಾದ ಪುರಸ್ಕಾರವನ್ನು ಪಡೆದಿದ್ದು, ಹಾವೇರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿಯೂ ನೃತ್ಯ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾಳೆ. ಲಾವಣ್ಯ ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆ ವಿದ್ಯಾರ್ಥಿನಿಯಾಗಿದ್ದು, ಬೇಟೋಳಿ ಗ್ರಾಮದ ನಟರಾಜ್ ಬೋರ್ಕರ್ ಹಾಗೂ ಸುನಂದ ದಂಪತಿಗಳ ಪುತ್ರಿ. ವಿದ್ಯಾರ್ಥಿನಿಯ ಈ ಸಾಧನೆಗೆ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾದ ರೆ. ಫಾ. ಐಸಾಕ್ ರತ್ನಕರ್ ಅಭಿನಂದಿಸಿ ಶ್ಲಾಘಿಸಿದ್ದಾರೆ.
ಮಡಿಕೇರಿ ಮೇ 12 : 2023ನೇ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಚುನಾವಣಾಧಿಕಾರಿಗಳು ಶ್ಲಾಘನೀಯ ಕಾರ್ಯ ಮಾಡಿದ್ದಾರೆ ಎಂದು ಶ್ರೀ ಕೃಷ್ಣ ಗೋಶಾಲೆಯ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹರೀಶ್ ಜಿ.ಆಚಾರ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತಾಗಬೇಕು ಎಂಬ ನಿಟ್ಟಿನಲ್ಲಿ ಮತದಾರರನ್ನು ಆಕರ್ಷಿಸುವ ಸಲುವಾಗಿ ಸ್ವೀಪ್ ಸಮಿತಿ ಸೇರಿದಂತೆ ಜಿಲ್ಲಾಧಿಕಾರಿಗಳು, ಎಡಿಸಿ, ಎಸಿ, ಪೊಲೀಸ್ ಇಲಾಖಾ ಅಧಿಕಾರಿ, ಸಿಬ್ಬಂದಿಗಳು, ಸರಕಾರಿ ನೌಕರರು ನಿರಂತರ ಪ್ರಯತ್ನಗಳನ್ನು ಮಾಡಿದ್ದಾರೆ. ಬಂದೋಬಸ್ತ್ ಕಾರ್ಯದಲ್ಲಿ ಐಟಿಬಿಪಿ, ಸಿಐಎಸ್ಎಫ್, ಅರೆ ಸೇನಾಪಡೆಯ ಸಿಬ್ಬಂದಿಗಳು ಹಗಲು ರಾತ್ರಿಗಳ ಪರಿವೆ ಇಲ್ಲದೆ ಕಾರ್ಯನಿರ್ವಹಿಸಿದ್ದಾರೆ. ರಜೆಯ ದಿನಗಳಲ್ಲೂ ಕೂಡ ಚುನಾವಣಾ ಅಧಿಕಾರಿಗಳು, ಸಿಬ್ಬಂದಿಗಳು ಮನೆಗೆ ತೆರಳದೆ ಕೆಲಸ ಮಾಡಿರುವುದು ಕಂಡು ಬಂದಿದೆ. ಜನರಲ್ಲಿ ಮತದಾನದ ಜಾಗೃತಿ ಮೂಡಿಸುವ ಹಲವಾರು ಸಂಘ ಸಂಸ್ಥೆಗಳ ಕಾರ್ಯ ಶ್ಲಾಘನೀಯವೆಂದು ತಿಳಿಸಿದ್ದಾರೆ. ಮತ ಪ್ರಚಾರದ ಚುನಾವಣಾ ರ್ಯಾಲಿಗಳು, ನಾಮಪತ್ರ…
ಮಡಿಕೇರಿ ಮೇ 12 : ಮುಖ್ಯ ರಸ್ತೆಯ ಬದಿಯಲ್ಲಿನ ವಿದ್ಯುತ್ ಕಂಬಕ್ಕೆ ಕಾರೊಂದು ಡಿಕ್ಕಿಯಾಗಿ, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪೊನ್ನಂಪೇಟೆಯಲ್ಲಿ ನಡೆದಿದೆ. ಕುಟ್ಟ ರಸ್ತೆಯಿಂದ ಪೊನ್ನಂಪೇಟೆ ಕಡೆಗೆ ಬರುತ್ತಿದ್ದ ಕಾರೊಂದು ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ್ದು, ನಂತರ ಎಪಿಸಿಎಂಎಸ್ ಕಟ್ಟಡದಲ್ಲಿದ್ದ ಎಳನೀರು ಅಂಗಡಿಗೆ ಕೂಡ ನುಗ್ಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಸಮೀಪದ ರಾಮಕೃಷ್ಣ ಸೇವಾ ಆಶ್ರಮದಲ್ಲಿ ಪ್ರಥಮ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ನಾಪೋಕ್ಲು ಮೇ 12 : ನಾಪೋಕ್ಲು ಗ್ರಾ.ಪಂ ಗೆ ಒಳಪಟ್ಟ ಕಲ್ಲುಮೊಟ್ಟೆ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ತಕ್ಷಣವೇ ಗ್ರಾ.ಪಂ ನೀರಿನ ವ್ಯವಸ್ಥೆಯನ್ನು ಒದಗಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕೂಲಿ ಕಾರ್ಮಿಕರೇ ಹೆಚ್ಚಾಗಿರುವ ಕಲ್ಲುಮೊಟ್ಟೆ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ ಇದ್ದರೂ ಸರಿಯಾದ ರೀತಿಯಲ್ಲಿ ನೀರು ಸರಬರಾಜು ಆಗುತ್ತಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರತಿನಿತ್ಯ ದುಡಿದು ಜೀವನ ಸಾಗಿಸುತ್ತಿರುವ ನಮಗೆ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಕುಡಿಯುವ ನೀರನ್ನು ಒದಗಿಸಲು ಗ್ರಾ.ಪಂ ವಿಫಲವಾಗಿದೆ. ಹಲವು ಬಾರಿ ಇದರ ಬಗ್ಗೆ ಪಂಚಾಯಿತಿ ಅಧಿಕಾರಿಗಳ, ಜನ ಪ್ರತಿನಿಧಿಗಳ ಗಮನಕ್ಕೆ ತಂದಾಗ ಮೋಟಾರ್ ರಿಪೇರಿಯಾಗಿದೆ ಎಂಬ ನೆಪ ಒಡ್ಡಿ ಇದುವರೆಗೂ ಅದನ್ನು ದುರಸ್ತಿಪಡಿಸುವ ಕಾರ್ಯಕ್ಕೆ ಮುಂದಾಗದೆ ಇಂದು ಗ್ರಾಮಸ್ಥರು ಕುಡಿಯುವ ನೀರಿಗಾಗಿ ದೂರದ ಕಾವೇರಿ ಹೊಳೆಗೆ ತೆರಳುವ ಪರಿಸ್ಥಿತಿ ಎದುರಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮದಲ್ಲಿ ಕಳೆದ ಅಲವು…






