ಮಡಿಕೇರಿ ಜೂ.22 : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಹೊದ್ದೂರು ಗ್ರಾ.ಪಂ ಮತ್ತು ವಾಟೆಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಾಟೆಕಾಡು ಸಹಯೋಗದಲ್ಲಿ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಾಟೆಕಾಡು ಹೊದ್ದೂರು ಗ್ರಾ.ಪಂ ಕಟ್ಟಡದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ವಿವಿಧ ಭಂಗಿಯ ಯೋಗಗಳನ್ನು ಅಭ್ಯಾಸಿಸಲಾಯಿತು. ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅಬ್ದುಲ್ಲಾ ಮಾತನಾಡಿ, ಯೋಗವು ಮನಸ್ಯನ ಆರೋಗ್ಯ ಮತ್ತು ಮನಸ್ಸನ್ನು ಹತೋಟಿಯಲ್ಲಿ ಇಡುಲು ಉತ್ತಮ ಸಾಧನವಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಚಿಕ್ಕ ವಯಸ್ಸಿನಲ್ಲಿಯೇ ಯೋಗ ಅಭ್ಯಾಸ ಮಾಡಿದರೆ ಉತ್ತಮ ಜೀವನಶೈಲಿ ರೂಪಿಸಿಕೊಳ್ಳಲು ಸಹಕಾರಿಯಾಗಿದೆ ಎಂದರು. ಯೋಗ ತರಬೇತುದಾರೆ ಅರ್ಜುನ ಪ್ರಶಸ್ತಿ ವಿಜೇತ ಪಿ. ಹೆಚ್. ಅಲೀಮಾ ಮಾತನಾಡಿ, ಯೋಗದಲ್ಲಿ ಹದಿನೆಂಟು ಸಾವಿರ ಆಸನಗಳಿದ್ದು, ಅದರಲ್ಲಿ ಸುಮಾರು ನೂರು ಆಸನಗಳನ್ನು ಕಲಿತಿರುವ ನನಗೆ ಅರ್ಜುನ ಪ್ರಶಸ್ತಿ ಲಭಿಸಿದೆ. ಹಾಗಾಗಿ ಮಕ್ಕಳು ಚಿಕ್ಕಂದಿನಿಂದಲೇ ಯೋಗಾಭ್ಯಾಸ ಮಾಡಿದರೆ ಉತ್ತಮ ಸಾಧನೆ ಮಾಡಬಹುದು ಎಂದು ಮಕ್ಕಳನ್ನು ಹುರಿದುಂಬಿಸಿದರು. ನಂತರ ಮಕ್ಕಳಿಗೆ ಕೆಲವು ಆಸನಗಳನ್ನು ಅಭ್ಯಾಸಿಸುವ ಮೂಲಕ ವಿಶ್ವ…
ಲೇಖಕ: admin
ಮಡಿಕೇರಿ ಜೂ.22 : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆ, ಕರ್ನಾಟಕ ಸರಕಾರ ಕಾರಾಗೃಹ ಮತ್ತು ಸುಧಾರಣಾ ಸೇವೆ ಜಿಲ್ಲಾ ಕಾರಾಗೃಹ ಮಡಿಕೇರಿ ಹಾಗೂ ಮಡಿಕೇರಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯದ ಸಹಯೋಗದೊಂದಿಗೆ “ವಸುಧೈವ ಕುಟುಂಬಕ್ಕಾಗಿ ಯೋಗ” ಎಂಬ ಧ್ಯೇಯ ವಾಕ್ಯದೊಂದಿಗೆ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಡಿಕೇರಿಯ ಕಾರಾಗೃಹ ಬಂದಿ ನಿವಾಸಿಗಳೊಂದಿಗೆ ಯೋಗ ದಿನವನ್ನು ಆಚರಿಸಲಾಯಿತು. ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ ಮಾನಾಡಿ, ಯೋಗ ಎಲ್ಲರ ಮನಸ್ಸನ್ನು ಕೇಂದ್ರೀಕರಿಸುತ್ತದೆ ಮತ್ತು ನಮ್ಮ ಮನಸ್ಸನ್ನು ಪರಿವರ್ತಿಸುತ್ತದೆ ಇದನ್ನು ತಮ್ಮ ದಿನ ನಿತ್ಯದ ಬದುಕಿನಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬದಲಾಗಬಹುದು ಎಂದು ಸಲಹೆ ನೀಡಿದರು. ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾನಾಡಿದ ಜಿಲ್ಲಾ ಕಾರಾಗೃಹದ ಅಧೀಕ್ಷಕ ಸಂಜಯ್ ಜಿತ್ತಿ, ಯಾವುದೋ ಕಾರಣಕ್ಕಾಗಿ ಅಪರಾಧ ಮಾಡಿ ಕೈದಿಗಳಾಗಿ ಬಂಧಿಯಾಗಿದ್ದು, ನಮ್ಮ ಮನಸ್ಸು, ಬುದ್ದಿಯನ್ನು ಹತೋಟಿಯಲ್ಲಿಡಲು ಯೋಗ ಮತ್ತು ಧ್ಯಾನ ಅತ್ಯಂತ ಸಹಕಾರಿ.…
ವಿರಾಜಪೇಟೆ ಜೂ.22 : ವಿರಾಜಪೇಟೆ ತಾಲ್ಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ 2022ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ಐವರು ಪತ್ರಕರ್ತರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಅವರು ತಮ್ಮ ತಂದೆ ದಿವಂಗತ ಎ.ಕೆ ಸುಬ್ಬಯ್ಯ ಹಾಗೂ ತಾಯಿ ದಿವಂಗತ ಎ.ಎಸ್ ಪೊನ್ನಮ್ಮ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಕ್ರೀಡಾ ವರದಿಗೆ ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ “ಮಾಲ್ದಾರೆ ಶಾಲಾ ಮಕ್ಕಳಿಗಿಲ್ಲ ಆಟದ ಮೈದಾನ” ವರದಿಗೆ ಎ.ಎನ್ ವಾಸು ಪಡೆದುಕೊಂಡಿದ್ದಾರೆ. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಆರ್ ಸವಿತಾ ರೈ ಅವರು ತಮ್ಮ ತಂದೆ ಕೃಷಿಕರಾಗಿದ್ದ ದಿವಂಗತ ಬಿ.ಎಸ್ ರಂಗನಾಥ ರೈ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಕೃಷಿ ವರದಿಗೆ ವಿಜಯಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ “ಪ್ರಯೋಗಶೀಲ ಕೃಷಿಕ ಬಿ.ಎಸ್ ನಾರಾಯಣ್ ರಾವ್” ವರದಿಗೆ ರಜಿತಾ ಕಾರ್ಯಪ್ಪ ಪಡೆದುಕೊಂಡಿದ್ದಾರೆ. ಸಿದ್ದಾಪುರದ ಸಮಾಜ ಸೇವಕ ಕೆ.ಯು ಅಬ್ದುಲ್ ಮಜೀದ್ ಅವರು ತಮ್ಮ ತಂದೆ ದಿವಂಗತ ಉಸ್ಮಾನ್ ಹಾಜಿ ಅವರ ಹೆಸರಿನಲ್ಲಿ…
ಮಡಿಕೇರಿ ಜೂ.22 : ಚೆಟ್ಟಳ್ಳಿ ಸಮೀಪದ ಕಂಡಕರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಹೆಚ್.ದಿನಕರ್ ಶೆಟ್ಟಿ ಅವರು, ಮಡಿಕೇರಿ ತಾಲ್ಲೂಕಿನ ಚೆಂಬು ಶಾಲೆಗೆ ವರ್ಗಾವಣೆಗೊಂಡಿದ್ದು, ಅವರನ್ನು ಕಂಡಕರೆಯ ಗಾಂಧಿ ಯುವಕ ಸಂಘದಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಮಾತನಾಡಿದ ಗಾಂಧಿ ಯುವಕ ಸಂಘದ ಅಧ್ಯಕ್ಷ, ಪತ್ರಕರ್ತ ಇಸ್ಮಾಯಿಲ್ ಕಂಡಕರೆ, ದಿನಕರ್ ಶೆಟ್ಟಿ ಅವರು ಕಳೆದ ನಾಲ್ಕು ವರ್ಷಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಕಂಡಕರೆ ಶಾಲೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ದಿದ್ದಾರೆ. ಸಹ ಶಿಕ್ಷಕರ ಸಹಕಾರದೊಂದಿಗೆ ಶಾಲೆಯ ಆವರಣದಲ್ಲಿ ಉತ್ತಮವಾದ ಪರಿಸರವನ್ನು ನಿರ್ಮಾಣ ಮಾಡಿದ್ದಾರೆ. ಇವರ ಮುಂದಿನ ಭವಿಷ್ಯ ಉಜ್ವಲವಾಗಲೆಂದು ಶುಭಹಾರೈಸಿದರು. ಶಿಕ್ಷಣ ಇಲಾಖೆ ಕಂಡಕರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕೂಡಲೇ ದೈಹಿಕ ಶಿಕ್ಷಕರನ್ನು ನೇಮಕ ಮಾಡಬೇಕೆಂದು ಇಸ್ಮಾಯಿಲ್ ಒತ್ತಾಯಿಸಿದರು. ಬೀಳ್ಕೊಡುಗೆ ಸನ್ಮಾನ ಸ್ವೀಕರಿಸಿ ಮಾತನಾಡಿದ ದೈಹಿಕ ಶಿಕ್ಷಕ ದಿನಕರ್ ಶೆಟ್ಟಿ , ಕಳೆದ ನಾಲ್ಕು ವರ್ಷಗಳ ಕಾಲ ಕಂಡಕರೆ ಶಾಲೆಯಲ್ಲಿ ಕೆಲಸ ಮಾಡಿರುವುದಕ್ಕೆ ಆತ್ಮತೃಪ್ತಿ…
ಮಡಿಕೇರಿ ಜೂ.22 : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಡಗು, ಜಿಲ್ಲಾ ಆಸ್ಪತ್ರೆ ಐಸಿಟಿಸಿ ವಿಭಾಗ, ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರ, ಉದ್ಭವ್ ಸಂಸ್ಥೆ ಬೆಂಗಳೂರು, ಆಶೋದಯ ಸಮಿತಿ ಕೊಡಗು ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಕೊಯನಾಡುವಿನಲ್ಲಿ ವಲಸೆ ಕಾರ್ಮಿಕರು ಮತ್ತು ಎಸ್ಟೇಟ್ಗಳ ಕಾರ್ಮಿಕರಿಗೆ ಆರೋಗ್ಯ ತಪಾಸಣ ಶಿಬಿರ ನಡೆಯಿತು. ಕಾರ್ಯಕ್ರಮಕ್ಕೆ ಸಂಪಾಜೆ ಗ್ರಾ.ಪಂ ಸದಸ್ಯ ನವೀನ್ , ಜಿಲ್ಲಾ ಐಸಿಟಿಸಿ ವಿಭಾಗದ ಆಪ್ತ ಸಮಾಲೋಚಕರಾದ ಅಶ್ವಿತಾ, ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಪಿ.ಮಲ್ಲಿಕಾರ್ಜುನ, ಕೊಯನಾಡು ಥಾಮಸನ್ ಪ್ಲಾಂಟೇಶನ್ ನಿರ್ದೇಶಕರಾದ ಸುಜಾತ ಚಾಲನೆ ನೀಡಿದರು. ಈ ಸಂದರ್ಭ ಅಸ್ಸಾಂ, ಕೇರಳ ಹಾಗೂ ಸ್ಥಳೀಯ ಕಾರ್ಮಿಕರು ಭಾಗವಹಿಸಿ ಆರೋಗ್ಯ ತಪಾಸಣೆ ಹಾಗೂ ಆರೋಗ್ಯ ಮಾಹಿತಿ ಪಡೆದುಕೊಂಡರು. ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಸಿಎಚ್ಓ, ಆಶಾ ಕಾರ್ಯಕರ್ತೆಯರು, ಜಿಲ್ಲಾ ಐಸಿಟಿಸಿ ಪ್ರಯೋಗ ಶಾಲಾ ತಂತ್ರಜ್ಞಾ ಸುರೇಶ್, ಆಶೋದಯ ಸಮಿತಿ ಆಪ್ತ ಸಮಾಲೋಚಕ ಸಂತೋಷ್ ಕುಮಾರ್ ಸಂಪಾಜೆ, ಸಿಬ್ಬಂದಿಗಳಾದ ಮಂಜುಳಾ, ಧನ್ಯ ಹಾಜರಿದ್ದರು.…
ಕಡಂಗ ಜೂ.22 : ಎಡಪಾಲ ಸ.ಹಿ.ಪ್ರಾ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಶಿಕ್ಷಕರಾದ ದೇಚಮ್ಮ ಮತ್ತು ಸಹ ಶಿಕ್ಷಕರ ನೇತೃತ್ವದಲ್ಲಿ ಯೋಗಾಭ್ಯಾಸ ನಡೆಯಿತು. ವಿದ್ಯಾರ್ಥಿಗಳು ಯೋಗಾಸನದಲ್ಲಿ ಪಾಲ್ಗೊಂಡು ಯೋಗದ ವಿವಿಧ ಭಂಗಿಗಳನ್ನು ಪ್ರದರ್ಶಿಸಿದರು.
ಕಡಂಗ ಜೂ.22 : ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಜಯ ವಿದ್ಯಾ ಸಂಸ್ಥೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಬಿದ್ದಪ್ಪ, ಯೋಗದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಡಂಗ ಆಯುರ್ವೇದ ವೈದ್ಯಾಧಿಕಾರಿ ಡಾ. ಶೈಲಜಾ ಮುರಳಿ, ವಿದ್ಯಾರ್ಥಿಗಳಿಗೆ ಯೋಗ ಎಂದರೆ ದೇಹ ಮತ್ತು ಮನಸ್ಸಿನ ಒಂದಾಗುವಿಕೆ ಎಂಬುದನ್ನು ತಿಳಿಸಿ ಏಕಾಗ್ರತೆಯನ್ನು ಸುಲಭವಾಗಿ ಸಾಧಿಸಬಹುದು ಎಂದು ನುಡಿದರು. ಯೋಗ ತರಬೇತುದಾರರಾಗಿ ಸಿಂಧೂ ಆಗಮಿಸಿ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ ಮಾಡಿಸಿದರು. ಸಂಸ್ಥೆ ಮುಖ್ಯ ಉಪಾಧ್ಯಾಯರಾದ ಸುಮಲತಾ ಹಾಗೂ ಸಹ ಶಿಕ್ಷಕರು ಹಾಜರಿದ್ದರು. ವರದಿ : ನೌಫಲ್ ಕಡಂಗ
ನಾಪೋಕ್ಲು ಜೂ.22 : ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಪ್ರೌಢಶಾಲಾ ವಿಭಾಗದ ಪೊಲೀಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ, ರೋಟರಿ ಇಂಟರಾಕ್ಟ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ನಾಪೋಕ್ಲು ಗ್ರಾ.ಪಂ, ಆರೋಗ್ಯ ಇಲಾಖೆ, ಪೋಲಿಸ್ ಇಲಾಖೆ, ಶೌರ್ಯ ವಿಪತ್ತು ತಂಡ, ಶ್ರೀ ಮಕ್ಕಿ ಶಾಸ್ತಾವು ಸೇವಾ ಕಾರ್ಯಪಡೆ ಇದರ ಸಯೋಗದೊಂದಿಗೆ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಆವರಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ “ವಸುದೈವ ಕುಟುಂಬಕ್ಕಾಗಿ ಯೋಗ ಅರ್ ಆಂಗನ್ ಯೋಗ ” ಎಂಬ ಘೋಷ ವಾಕ್ಯದ ಪೋಸ್ಟರ್ ಬಿಡುಗಡೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಾಲೆಯ ಆಡಳಿ ಮಂಡಳಿ ಉಪಾಧ್ಯಕ್ಷ ಕೆ.ಎ. ಹ್ಯಾರಿಸ್ ಮನುಷ್ಯನ ದೈಹಿಕ ಮತ್ತು ಮಾನಸಿಕ ಸದೃಢ ಬೆಳವಣಿಗೆಗೆ ಯೋಗ ಬಹಳ ಮುಖ್ಯ. ಹಿಂದಿನ ಕಾಲದಲ್ಲಿಯೇ ಯೋಗವನ್ನು ಸಂತರು, ಋಷಿಮುನಿಗಳು ಮಾಡುತ್ತಿದ್ದರು. ಆದರೆ ಇದರ ಬಗ್ಗೆ ಯಾವುದೇ ಪ್ರಚಾರವಾಗುತ್ತಿರಲಿಲ್ಲ, ಯೋಗವನ್ನು ಭಾರತ ಇಂದು ಅಂತಾರಾಷ್ಟ್ರೀಯ ಮಟ್ಟಕ್ಕೆ ತಲುಪಿಸಿ ಕೀರ್ತಿಯನ್ನುಪಡೆದುಕೊಂಡಿದೆ. ಯೋಗ ಒಂದು ದಿನಕ್ಕೆ…
ಸೋಮವಾರಪೇಟೆ ಜೂ.22 : ವೀರಶೈವ ಸಮಾಜದ ಅಕ್ಕನ ಬಳಗದ ನೂತನ 2023-28ನೇ ಸಾಲಿನ ಆಡಳಿತ ಮಂಡಳಿ ರಚಿಸಲಾಗಿದೆ. ಪಟ್ಟಣದ ಕರ್ಕಳ್ಳಿಯಲ್ಲಿರುವ ಅಕ್ಕನ ಬಳಗದ ಸಭಾಂಗಣದಲ್ಲಿ ಹಿಂದಿನ ಸಾಲಿನ ಅಧ್ಯಕ್ಷೆ ಜಲಜಾಶೇಕರ್ ಅಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಮುಂದಿನ ಐದು ವರ್ಷಗಳ ಅವಧಿಗೆ ಅದ್ಯಕ್ಷರಾಗಿ ಚಂದ್ರಕಲಾಗಿರಿಶ್, ಉಪಾಧ್ಯಕ್ಷರಾಗಿ ಗೀತರಾಜು, ಕಾರ್ಯದರ್ಶಿಯಾಗಿ ಮಾಯಾಗಿರೀಶ್, ಸಹ ಕಾರ್ಯದರ್ಶಿಯಾಗಿ ದಿವ್ಯ ದಯಾಕರ್, ಖಜಾಂಚಿಯಾಗಿ ಸರಿತಾ ಮಲ್ಲಿಕಾರ್ಜುನ್ ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾಗಿ ಆಶಾ ಹೂವಯ್ಯ, ನಂದಿನಿಮಾಂತೇಶ್, ಸವಿತಾ ನೀಲಕಂಠ, ಜಗದಾಂಬ ಗುರುಪ್ರಸಾದ್, ಸವಿತಾ ಶಿವಕುಮಾರ್, ರಜಿನಿ ಯತೀಶ್, ಮಂಜುಳ ಬಸವರಾಜು,ಅನುರಾಜು ಅವಿರೋಧವಾಗಿ ಆಯ್ಕೆಯಾಗಿ ಅಧಿಕಾರ ಸ್ವೀಕರಿಸಿದರು.
ಮಡಿಕೇರಿ ಜೂ.22 : ವಿಶ್ವ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಕೊಪ್ಪದ ಭಾರತ್ಮಾತ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಯೋಗಾಭ್ಯಾಸ ಪ್ರದರ್ಶಿಸಿದರು. ನಂತರ ಯೋಗ ದಿನದ ಮಹತ್ವ ಹಾಗೂ ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯ ರಕ್ಷಣೆಗೆ ಆಗುವ ಅನುಕೂಲಗಳ ಬಗ್ಗೆ ಮಾಹಿತಿ ನೀಡಲಾಯಿತು.






