ಮಡಿಕೇರಿ ಮೇ 12 : ವಿರಾಜಪೇಟೆ ತಾಲೂಕಿನ ಸಿದ್ದಾಪುರ ವ್ಯಾಪ್ತಿಯಲ್ಲಿ ಕಾಡಾನೆಯೊಂದು ಪ್ರತ್ಯಕ್ಷಗೊಂಡು ಆತಂಕ ಮೂಡಿಸಿದೆ. ಪಕ್ಕದ ಕುರುಬರಮೊಟ್ಟೆ ತೋಟದಿಂದ ಸಿದ್ಧಾಪುರ ನಗರಕ್ಕೆ ಬಂದ ಕಾಡಾನೆ ಪಟ್ಟಣದಲ್ಲಿ ಇದ್ದ ಸಾರ್ವಜನಿಕರ ಮೇಲೆ ದಾಳಿಗೆ ಮುಂದಾಗಿದ್ದು ಜನ ಚದುರಿ ಓಡಿದ್ದರಿಂದ ಯಾವುದೇ ಅನಾಹುತ ಸಂಭವಿಸಿರುವುದಿಲ್ಲ. ನಂತರ ಅದೇ ಮಾರ್ಗದಲ್ಲಿ ಮರಳಿ ಪಕ್ಕದ ಕುರುಬರಮೊಟ್ಟೆ ತೋಟದಲ್ಲಿ ಬೀಡುಬಿಟ್ಟಿರುವುದಾಗಿ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.
ಲೇಖಕ: admin
ಮಡಿಕೇರಿ ಮೇ 12 : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಮತ ಎಣಿಕೆ ನಡೆಯುವ ದಿನದಂದು ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮೇ 12 ರ ಮಧ್ಯರಾತ್ರಿ 12 ಗಂಟೆಯಿಂದ ಮೇ, 13 ರ ಮಧ್ಯರಾತ್ರಿ 12 ಗಂಟೆ ವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ಕೊಡಗು ಜಿಲ್ಲೆಯಾದ್ಯಂತ ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ರಾಜಕೀಯ ಸಭೆ-ಸಮಾರಂಭ, ವಾಹನ ಜಾಥ, ರ್ಯಾಲಿ ಮುಂತಾದ ಯಾವುದೇ ಚಟುವಟಿಕೆ ನಡೆಸುವುದು, ಸ್ಪೋಟಕ, ದಹನ ವಸ್ತುಗಳು, ಮಾರಕ ಆಯುಧಗಳನ್ನು ಹೊಂದಿರುವುದು ಅಥವಾ ಹಿಡಿದು ಓಡಾಡುವುದು ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಮತ ಎಣಿಕಾ ಕೇಂದ್ರವಾದ ಮಡಿಕೇರಿಯ ಸೆಂಟ್ ಜೋಸೆಫ್ ಕಾನ್ವೆಂಟ್ನ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವು ಸಂಪೂರ್ಣ ನಿರ್ಬಂಧಿತ ಪ್ರದೇಶವಾಗಿರುತ್ತದೆ. ಈ ಪ್ರದೇಶದಲ್ಲಿ ಖಾಸಗಿ ವಾಹನಗಳ ತಂಗುವಿಕೆ ಮತ್ತು ಧ್ವನಿವರ್ಧಕ ಬಳಕೆಯನ್ನು ಸಹ ನಿಷೇಧಿಸಿದೆ. ಈ ಆದೇಶವು ಸರ್ಕಾರಿ ಕರ್ತವ್ಯದ ನಿಮಿತ್ತ, ಬ್ಯಾಂಕ್.…
ಮಡಿಕೇರಿ ಮೇ 12 : ಗೋಣಿಕೊಪ್ಪಲಿನ ಕೋಟೂರು ಗ್ರಾಮದ ಮನೆಯಂಗಳದಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೂರು ವರ್ಷದ ಬಾಲಕಿ ಸಾವಿಗೀಡಾಗಿದೆ. ಪೆಮ್ಮಂಡ ರೋಶನ್, ಇಸು ದಂಪತಿ ಪುತ್ರಿ ಸಿಯಾನ್ (3) ಮೃತ ಕಂದಮ್ಮ. ಬುಧವಾರ ಸಂಜೆ ಬಲೂನ್ನಲ್ಲಿ ಆಟವಾಡುತ್ತಿದ್ದಾಗ ಮನೆಯ ಸಮೀಪವಿದ್ದ ಬಾವಿಗೆ ಬಲೂನ್ ಬಿದ್ದಿದೆ. ಇದನ್ನು ತೆಗೆಯಲು ಪ್ರಯತ್ನಿಸುತ್ತಿದ್ದ ಸಂದರ್ಭ ಬಾಲಕಿ ಬಾವಿಗೆ ಜಾರಿ ಬಿದ್ದಿದೆ ಎನ್ನಲಾಗಿದೆ. ಮನೆಯ ಒಳಗೆ ಇದ್ದ ಪಾಲಕರು ಮಗುವನ್ನು ಹುಡುಕಿಕೊಂಡು ಬಂದಾಗ ಬಾವಿಯಲ್ಲಿ ಮೃತದೇಹ ಪತ್ತೆಯಾಯಿತು. ಬೀರ್ಯ ಕೊಡವ ಸಿನಿಮಾದಲ್ಲಿ ಸಿಯಾನ್ ಪಾತ್ರ ಮಾಡಿದ್ದು, ಸಾರ್ವಜನಿಕವಾಗಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಮೇ 12 : ಕೊಡಗು ಮೂಲದ ಚರಿಷ್ಮಾ ಮಾದಪ್ಪ ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದು, ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಕೊಡವ ಸಾಂಪ್ರದಾಯಿಕ ಧಿರಿಸಿನಲ್ಲಿ ಅಧಿಕಾರ ಸ್ವೀಕರಿಸಿದ್ದು ವಿಶೇಷವಾಗಿತ್ತು. ಚರಿಷ್ಮಾ ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಕೊಡಗಿನ ಹಿರಿಮೆಯನ್ನು ವಿದೇಶಿಗರ ಮನ ಮುಟ್ಟುವಂತೆ ಮಾಡಿದರು. ಮೂಲತಃ ನಾಪೋಕ್ಲು ವಿಭಾಗದ ಕಲಿಯಂಡ ಚರಿಷ್ಮಾ ಆಸ್ಟ್ರೇಲಿಯಾದ ಲಿವರ್ ಪೂಲ್ ಕ್ಷೇತ್ರದಿಂದ ಸ್ಪರ್ಧಿಸಿ ಸಂಸತ್ ಸದಸ್ಯೆಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದ ರಾಜಕೀಯದಲ್ಲಿ ಚರಿಷ್ಮಾ ಮಾದಪ್ಪ ಗುರುತಿಸಿಕೊಂಡಿದ್ದಾರೆ.
ಮಡಿಕೇರಿ ಮೇ 11 : ಕಾರ್ಮಿಕನೊಬ್ಬ ಪತ್ನಿಯ ಕುತ್ತಿಗೆಗೆ ಕತ್ತಿಯಿಂದ ಕಡಿದು ಗಾಯಗೊಳಿಸಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ನೇಗಳ್ಳೆ ಗ್ರಾಮದಲ್ಲಿ ಗುರುವಾರ ನಡೆದಿದೆ. ಗಿರಿಜನರ ಕಮಲ(50) ಗಾಯಾಳುವಾಗಿದ್ದು, ಪತಿ ಆರೋಪಿ ಗಣೇಶ ತಲೆ ಮರೆಸಿಕೊಂಡಿದ್ದಾನೆ. ತೋಟದ ಲೈನ್ಮನೆಯಲ್ಲಿ ಗಣೇಶ ಹಾಗೂ ಕಮಲ ವಾಸವಾಗಿದ್ದರು. ಗುರುವಾರ ಸಂಜೆ ದಂಪತಿ ನಡುವೆ ಕಲಹ ಏರ್ಪಟ್ಟಿದ್ದು, ಮದ್ಯದ ಅಮಲಿನಲ್ಲಿದ್ದ ಪತಿ, ಪತ್ನಿಯನ್ನು ಕತ್ತಿಯಿಂದ ಕಡಿದಿರುವುದಾಗಿ ಆರೋಪಿಸಲಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಕಮಲಾಗೆ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸೋಮವಾರಪೇಟೆ ಠಾಣಾಧಿಕಾರಿಗಲಾದ ರಾಮಚಂದ್ರ ನಾಯಕ್ ಹಾಗೂ ರಮೇಶ್ ಕುಮಾರ್ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.
ಮಡಿಕೇರಿ ಮೇ 11 : ಕೆಲಸ ಮಾಡುತ್ತಿದ್ದ ಸಂದರ್ಭ ಮರಬಿದ್ದು ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ಚೆಟ್ಟಳ್ಳಿ ಗ್ರಾ.ಪಂ ವ್ಯಾಪ್ತಿಯ ಕೂಡ್ಲು ಚೆಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ. ಅಭ್ಯತ್ ಮಂಗಲ ಪೈಸಾರಿ ನಿವಾಸಿ ನಾಗಪ್ಪ ಚಾಮುಣು (55) ಮೃತ ದುರ್ದೈವಿ. ಕೂಡ್ಲೂರು ಚೆಟ್ಟಳ್ಳಿ ಗ್ರಾ.ಪಂ ವ್ಯಾಪ್ತಿಯ ಕಾನನ್ ಕಾಡು ಖಾಸಗಿ ಕಾಫಿ ತೋಟದಲ್ಲಿ ಸಿಲ್ವರ್ ಮರ ಕತ್ತರಿಸುತ್ತಿರುವ ಸಂದರ್ಭದಲ್ಲಿ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಆರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಡಿಕೇರಿ ಮೇ.11 : ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023 ರ ಮತದಾನ ಮೇ, 10 ರಂದು ನಡೆದಿದ್ದು, ಕರ್ನಾಟಕದಲ್ಲಿ ಚುನಾವಣೆಯನ್ನು ‘ಪ್ರಜಾಪ್ರಭುತ್ವದ ಹಬ್ಬದಂತೆ ಆಚರಿಸಲಾಗಿದೆ. ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಹಮ್ಮಿಕೊಳ್ಳಲಾದ ಮಾದರಿಯಲ್ಲಿ ಈ ಬಾರಿಯು ಸಹ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023ರ ಅಂಗವಾಗಿ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಾಹಕರಿಗಾಗಿ ಮತದಾನದ ವಿಷಯದ ಬಗ್ಗೆ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆ ನಡೆಯಲಿದೆ. ಲೋಕಸಭಾ ಚುನಾವಣೆ-2019 ರಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯ ಮೂಲಕ ಚುನಾವಣಾ ಸಂಬಂಧಿತ ಅತ್ಯುತ್ತಮ ಹಾಗೂ ಸಂಗ್ರಹಯೋಗ್ಯ ಛಾಯಾಚಿತ್ರಗಳನ್ನು ಕೇಂದ್ರ ಚುನಾವಣಾ ಆಯೋಗ ಪ್ರಶಂಸಿಸುವುದರ ಜೊತೆಗೆ ತನ್ನ ವರದಿ ಹಾಗೂ ಪುಸ್ತಕಗಳ ಮುಖಪುಟಗಳಲ್ಲಿ ಬಳಸಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ನಡೆದ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023 ನಿಮಿತ್ತ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಿ, ಅತ್ಯುತ್ತಮ ಛಾಯಾಚಿತ್ರ ತೆಗೆದ ಛಾಯಾಗ್ರಾಹಕರಿಗೆ ಪ್ರಮಾಣ ಪತ್ರ ಹಾಗೂ ನಗದು ಬಹುಮಾನ ನೀಡಲಾಗುತ್ತಿದೆ. ಸ್ಪರ್ಧೆಯಲ್ಲಿ…
ಮಡಿಕೇರಿ ಮೇ.11 : ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದೊಂದಿಗೆ (1 ರಿಂದ 10ನೇ ತರಗತಿ) 5 ರಿಂದ 16 ವರ್ಷದ ಮಕ್ಕಳಿಗಾಗಿ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ಸ್ ಅಂಡ್ ಗೈಡ್ಸ್ ಭವನ, ಮ್ಯಾನ್ಸ್ ಕಾಂಪೌಂಡ್, ಮಡಿಕೇರಿ. ಇಲ್ಲಿ ಮೇ, 15 ರಿಂದ 29 ರವರೆಗೆ ಉಚಿತ ಬೇಸಿಗೆ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಶಿಬಿರದಲ್ಲಿ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳನ್ನು ಸಂಪನ್ಮೂಲ ವ್ಯಕ್ತಿಗಳಿಂದ ಮಕ್ಕಳಿಗೆ ತರಬೇತಿ ನೀಡಲಾಗುವುದು. ಆದ್ದರಿಂದ ಈ ಶಿಬಿರದಲ್ಲಿ ಭಾಗವಹಿಸಲು ಆಸಕ್ತಿ ಇರುವ ಮಕ್ಕಳು ಮೇ, 12 ರೊಳಗೆ ದೂರವಾಣಿ ಸಂಖ್ಯೆ 8618861505, 6363285685 ಕಚೇರಿ ಸಮಯದಲ್ಲಿ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳುವಂತೆ ತಿಳಿಸಿದೆ. ಕಚೇರಿಯಲ್ಲಿ ಹೆಸರು ನೋಂದಾಯಿಸಿದ ಮಕ್ಕಳಿಗೆ ಮಾತ್ರ ಶಿಬಿರದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಎನ್.ಮಂಜುನಾಥ್ ಅವರು ತಿಳಿಸಿದ್ದಾರೆ.
ಮಡಿಕೇರಿ ಮೇ 11 : ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಹಾಗೂ ಪ.ಪೂ.ಕಾಲೇಜು ಕೋರಂಗಾಲ (ಭಾಗಮಂಡಲ) ಮಡಿಕೇರಿ ತಾಲೂಕು, ಕೊಡಗು ಜಿಲ್ಲೆ,ಇಲ್ಲಿನ ಪ್ರಥಮ ಪಿಯುಸಿ ತರಗತಿಗೆ ಅರ್ಜಿ ಕರೆಯಲಾಗಿದೆ. ಆಸಕ್ತ ವಿದ್ಯಾರ್ಥಿಗಳು ದಿನಾಂಕ:08/05/2023 ರಿಂದ ದಿ: /05/2023ರವರೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ SC/ST/C1 ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ವರಮಾನ ರೂಪಾಯಿ 250000/- ಮತ್ತು 2ಂ, 2ಃ, 3ಂ ಮತ್ತು 3ಃ ಇವರ ಪೋಷಕರ ವಾರ್ಷಿಕ ವರಮಾನ ರೂಪಾಯಿ 100000/- ಆಗಿರಬೇಕು. ಉಚಿತ ಊಟ, ವಸತಿ ಸೌಲಭ್ಯ ಹಾಗೂ ನೋಟ್ ಬುಕ್ ಪುಸ್ತಕ ಇತ್ಯಾದಿ ಸೌಲಭ್ಯಗಳು ಇರುತ್ತದೆ. ಅರ್ಜಿಗಳನ್ನು ತಮ್ಮ ಹತ್ತಿರದ ಮೊರಾರ್ಜಿ ದೇಸಾಯಿ,ಅಟಲ್ ಬಿಹಾರಿ ವಾಜಪೇಯಿ ಕಿತ್ತೂರು ರಾಣಿ ಚೆನ್ನಮ್ಮ ಡಾ. ಬಿ.ಆರ್. ಅಂಬೇಡ್ಕರ್/ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಿಂದ ಪಡೆದು ಅಥವಾ https://kreis.karnataka.gov.in/ ಇಲ್ಲಿಂದ download ಮಾಡಿಕೊಂಡು ಅದೇ ಶಾಲೆಯಲ್ಲಿ ಅಥವಾ ನಮ್ಮ ಕಾಲೇಜಿಗೆ ಬಂದು ಸಲ್ಲಿಸಬಹುದು. ಕಳೆದ ಶೈಕ್ಷಣಿಕ ವರ್ಷದಲ್ಲಿ ನಮ್ಮ ಕಾಲೇಜಿನಲ್ಲಿ ಶೇಕಡ 100…
ಮಡಿಕೇರಿ ಮೇ 11 : ‘ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಗರದ ಸಂತ ಜೋಸೆಫರ ಶಾಲೆಯಲ್ಲಿ ಪ್ರತ್ಯೇಕವಾಗಿ ಮತ ಎಣಿಕೆ ಕಾರ್ಯ ನಡೆಯಲಿದೆ. ಒಂದು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 14 ಟೇಬಲ್ಗಳಲ್ಲಿ ಮತ ಎಣಿಕೆ ನಡೆಯಲಿದ್ದು, 20 ಸುತ್ತಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಜೊತೆಗೆ ಅಂಚೆ ಮತ್ತು ಸೇವಾ ಮತದಾರರ ಪತ್ರ ಮತ ಎಣಿಕೆ ಕಾರ್ಯವೂ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದರು.’






