ಮಡಿಕೇರಿ ಜೂ.22 : ವಿಶ್ವ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಕೊಪ್ಪದ ಭಾರತ್ಮಾತ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಯೋಗಾಭ್ಯಾಸ ಪ್ರದರ್ಶಿಸಿದರು. ನಂತರ ಯೋಗ ದಿನದ ಮಹತ್ವ ಹಾಗೂ ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯ ರಕ್ಷಣೆಗೆ ಆಗುವ ಅನುಕೂಲಗಳ ಬಗ್ಗೆ ಮಾಹಿತಿ ನೀಡಲಾಯಿತು.
ಲೇಖಕ: admin
ಮಡಿಕೇರಿ ಜೂ.22 : ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನಲ್ಲಿ 9ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಉತ್ತಮ ಶಿಕ್ಷಕ ರಾಷ್ಟ್ರ ಪ್ರಶಸ್ತಿ ಪುರಸ್ಕತ ಹಾಗೂ ಕಾಲೇಜಿನ ಸಂಚಾಲಕ ಕೆ. ಆರ್. ಗಂಗಾಧರ್ ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಜಗತ್ತಿಗೆ ಭಾರತದ ಪ್ರಮುಖ ಕೊಡುಗೆಗಳಲ್ಲಿ ಯೋಗ ಪ್ರಮುಖವಾಗಿದೆ. ಪ್ರಧಾನಿ ನರೇಂದ್ರ ಮೋದಿ ಭಾರತೀಯ ಯೋಗ ಪರಂಪರೆಗೆ ಅಂತಾರಾಷ್ಟ್ರೀಯ ಮಾನ್ಯತೆಯನ್ನು ತಂದು ಕೊಟ್ಟಿದ್ದಾರೆಂದು ಉಲ್ಲೇಖಿಸಿದರು. ಬಾಲ್ಯದಿಂದ ನಿರಂತರವಾಗಿ ಯೋಗವನ್ನು ಅಭ್ಯಾಸ ಮಾಡಿದಾಗ ಆರೋಗ್ಯಯುತ ಜೀವನ ಸಾಗಿಸಲು ಸಾಧ್ಯ ಎಂದರು. ಭೌತಶಾಸ್ತ್ರ ಉಪನ್ಯಾಸಕ ಹಾಗೂ ಪತಂಜಲಿ ಯೋಗ ಸಂಸ್ಥೆಯ ಸದಸ್ಯ ಸುರೇಶ್ ವಾಗ್ಲೆ ವಿದ್ಯಾರ್ಥಿಗಳಿಗೆ ಸೂಕ್ಷ್ಮ ವ್ಯಾಯಾಮ, ಆಸನಗಳು ಪ್ರಾಣಾಯಾಮಗಳ ಮಹತ್ವವನ್ನು ತಿಳಿಸಿ ಅಭ್ಯಾಸಮಾಡಿಸಿದರು. ಯೋಗ ಪರಿಣಿತ ದ ರಾಜ್ಯಶಾಸ್ತ್ರ ಉಪನ್ಯಾಸಕ ಪದ್ಮಕುಮಾರ್ ಸಹಕರಿಸಿದರು. ಕಾಲೇಜಿನ ಪ್ರಾಂಶುಪಾಲ ಎಸ್.ರಮೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಸಾಯನಶಾಸ್ತ್ರ ಉಪನ್ಯಾಸಕ ಲಿಂಗಪ್ಪ, ದೈಹಿಕ ಶಿಕ್ಷಣ ಉಪನ್ಯಾಸಕಿ ಶಾಂತಿ, ಗಣಿತಶಾಸ್ತ್ರ ಭಾಗ್ಯಶ್ರೀ, ಸಮಾಜಶಾಸ್ತ್ರ ಉಪನ್ಯಾಸಕಿ ನಂದಿನಿ…
ಸೋಮವಾರಪೇಟೆ ಜೂ.22 : ಎಲ್ಐಸಿ ಯಲ್ಲಿ 34 ವರ್ಷ ಸೇವೆ ಸಲ್ಲಿಸಿ ನಿವೃತ್ತಿಯಾದ ವಾಕರ್ಸ್ ವಿಂಗ್ ಸಂಸ್ಥೆಯ ಮಾಜಿ ಅಧ್ಯಕ್ಷ ಪಿ.ನಾಗೇಶ್ ಅವರನ್ನು ಸೋಮವಾರಪೇಟೆ ವಾಕರ್ಸ್ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಪಟ್ಟಣದ ಸುವಿದ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ಸನ್ಮಾನಿಸಲಾಯಿತು. ವಾಕರ್ಸ್ ಅಧ್ಯಕ್ಷ ಮೋಹನ್ ನಿಶಾಂತ್, ಖಜಾಂಚಿ ನವೀನ್, ಪದಾಧಿಕಾರಿಗಳಾದ ಎಸ್.ಡಿ.ವಿಜೇತ್, ಶ್ರೀಹರ್ಷ, ಉದಯರವಿ, ಕುಮಾರ್, ಬಿ.ಟಿ. ತಿಮ್ಮಶೆಟ್ಟಿ, ಆಶಾ ಮೋಹನ್, ಇಂದಿರಾ ರವಿ, ವಿದ್ಯಾ ಸುಂದರ್, ಲತಾ ನಾಗೇಶ್, ಪ್ರೇಮಾ ಹೃಶಿಕೇಶ್, ರಾಣಿ ದಿನೇಶ್, ಲತಾ ನವೀನ್, ಶರ್ಮಿಳಾ ರಮೇಶ್, ಅಶ್ವಿನಿ ಉದಯ್ ಕುಮಾರ್ ಇದ್ದರು.
ಸೋಮವಾರಪೇಟೆ ಜೂ.22 : ಪುಷ್ಪಗಿರಿ ಜೇಸಿ ಸಂಸ್ಥೆಗೆ ಅನುಬಂಧ ಸ್ನೇಹ ಸಂಬಂಧಗಳ ದರ್ಶನ ಶೀರ್ಷಿಕೆಯಡಿಯಲ್ಲಿ ಗೋಲ್ಡನ್ ಕಾಲರ್ ಪ್ರಸಿಡೆಂಟ್ ಅವಾರ್ಡ್ ದೊರಕಿದೆ. ಬೀರೂರಿನಲ್ಲಿ ನಡೆದ ಜೆಸಿಐ ವಲಯ 14 ರ ಅರ್ಧವಾರ್ಷಿಕ ಸಮ್ಮೇಳನ-2023 ಕಾರ್ಯಕ್ರಮದಲ್ಲಿ ಕಳೆದ ಆರು ತಿಂಗಳಲ್ಲಿ ವಲಯ ಮತ್ತು ಜೆಸಿಐ ನೀಡುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಿದ ಘಟಕವನ್ನು ಗುರುತಿಸಿ ಅರ್ಧವಾರ್ಷಿಕ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪುಷ್ಪಗಿರಿ ಜೇಸಿ ಸೋಮವಾರಪೇಟೆ ಅಧ್ಯಕ್ಷೆ ಎಂ.ಎ.ರುಬೀನಾ ಅವರಿಗೆ ವಲಯ ಅಧ್ಯಕ್ಷರಾದ ಯಶಸ್ವಿನಿ, ವಲಯ ಉಪಾಧ್ಯಕ್ಷ ಎಚ್.ಆರ್. ಪ್ರಶಾಂತ್ ಗೋಲ್ಡನ್ ಕಾಲರ್ ಹಾಕುವ ಮೂಲಕ ಗೋಲ್ಡನ್ ಕಾಲರ್ ಪ್ರಸಿಡೆಂಟ್ ಅವಾರ್ಡ್ ನೀಡಿ ಗೌರವಿಸಿದರು. ಇದರೊಂದಿಗೆ ಔಟ್ ಸ್ಟ್ಯಾಂಡಿಂಗ್ ಲಾಮ್ ವಿನ್ನರ್, ಔಟ್ ಸ್ಟ್ಯಾಂಡಿಂಗ್ ಫರ್ ಮಾರ್ಮರ್ ಪಿ.ಆರ್ ಅಂಡ್ ಮಾರ್ಕೆಟಿಂಗ್, ನೀಡ್ ಬ್ಲಡ್ ಕಾಲ್ ಜೆಸಿಐ ನಲ್ಲಿ ವಿನ್ನರ್, ಗೋ ಗ್ರೀನ್, ಮ್ಯಾನೇಜ್ಮೆಂಟ್ ಏರಿಯ ಕಾರ್ಯಕ್ರಮ ಮತ್ತು ಗೋ ಗ್ರೀನ್ ನಲ್ಲಿ ಸೆಕೆಂಡ್ ರನ್ನರ್ ಅಫ್ ಪ್ರಶಸ್ತಿಗಳನ್ನು ಘಟಕ ಪಡೆದುಕೊಂಡಿತು. ಈ ಸಂದರ್ಭ…
ಸೋಮವಾರಪೇಟೆ ಜೂ.22 : ಅಪ್ಪು ಅಭಿಮಾನಿಗಳ ಬಳಗದ ವತಿಯಿಂದ ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿ ಹರೀಶ್ ಮತ್ತು ಖಾಸಗಿ ಕ್ಲಿನಿಕ್ ವೈದ್ಯರಾದ ಶರ್ಮಿಳಾ ಫರ್ನಾಂಡೀಸ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಅಭಿಮಾನಿ ಬಳಗದ ಅಧ್ಯಕ್ಷ ಅಬ್ಬೂರುಕಟ್ಟೆ ರವಿಕುಮಾರ್, ಗ್ರಾ.ಪಂ ಸದಸ್ಯರುಗಳಾದ ಅಜಿತ್ಕುಮಾರ್ ಪ್ರಕಾಶ್ ಹಾಜರಿದ್ದರು.
ಸೋಮವಾರಪೇಟೆ ಜೂ.22 : ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ವಾರ್ಷಿಕ ಸಭೆಯು ಸಂಘದ ಅಧ್ಯಕ್ಷ ಸಿ.ಕೆ.ಮಲ್ಲಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪಟ್ಟಣದ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಘಕ್ಕೆ 25 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಮುಂದಿನ ಸಾಲಿನಲ್ಲಿ ಅದ್ಧರೂರಿಯಾಗಿ ರಜತಮಹೋತ್ಸವ ನಡೆಸಲು ಸಭೆ ತೀರ್ಮಾನಿಸಿತು. ಈ ಸಂದರ್ಭ ಸಂಘದ ಸಾಧನೆಯ ಸ್ಮರಣ ಸಂಚಿಕೆ ಹೊರತರಬೇಕೆಂದು ಸದಸ್ಯರು ಸೂಚಿಸಿದರು. ಸಂಘದ ಅಧ್ಯಕ್ಷ ಸಿ.ಕೆ.ಮಲ್ಲಪ್ಪ ಮಾತನಾಡಿ, ಇಂದಿಗೂ ಸಾಕಷ್ಟು ನಿವೃತ್ತ ಸರ್ಕಾರಿ ನೌಕರರು ಸಂಕಷ್ಟದ ಜೀವನ ನಡೆಸುತ್ತಿದ್ದು, ತಮ್ಮ ಆರೋಗ್ಯವನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಲು ಪರದಾಡುತ್ತಿದ್ದಾರೆ. ನಮ್ಮ ನೆರವಿಗಾಗಿ ಸರ್ಕಾರ ಆರೋಗ್ಯ ಸಂಜೀವಿನಿಯಲ್ಲಿ ನಿವೃತ್ತ ಸರ್ಕಾರಿ ನೌಕರರನ್ನು ಸೇರ್ಪಡೆಗೊಳಿಸಬೇಕೆಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರೂ, ಇಂದಿಗೂ ಈಡೇರಿಲ್ಲ. ಸಂಘದ ಕಚೇರಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಿಕೊಳ್ಳಲು ಪ್ರಯತ್ನಿಸಲಾಗುತ್ತಿದೆ ಎಂದರು. ಸಂಘದಲ್ಲಿ ಸದಸ್ಯರ ಸಂಖ್ಯೆ ಹೆಚ್ಚಳವಾಗಬೇಕಿದೆ. ಎಲ್ಲ ನಿವೃತ್ತ ನೌಕರರನ್ನು ಸದಸ್ಯರನ್ನಾಗಿ ಮಾಡಬೇಕಾಗಿದೆ. ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸದಸ್ಯರ ಅನುಕೂಲಕ್ಕಾಗಿ ಇನ್ನೂ ಹೆಚ್ಚಿನ ಕೆಲಸ…
ಸುಂಟಿಕೊಪ್ಪ ಜೂ.22 : ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಯೋಗ ದಿನಾಚರಣೆಯ ಅಂಗವಾಗಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಯೋಗಭ್ಯಾಸ ನಡೆಸಿದರು. ಸುಂಟಿಕೊಪ್ಪ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಕರಾದ ಸುನೀತ ಹಾಗೂ ಈಶ ವಿದ್ಯಾರ್ಥಿಗಳೊಂದಿಗೆ ಯೋಗಭ್ಯಾಸ ಮಾಡಿದರು. ಈ ಸಂದರ್ಭ ಕಾಲೇಜಿನ ಪ್ರಾಚಾರ್ಯ ಪಿ.ಎಸ್.ಜಾನ್, ಉಪನ್ಯಾಸಕರಾದ ಪದ್ಮಾವತಿ, ಕವಿತಭಕ್ತ್, ಮಂಜುಳಾ, ಸರಳಾ, ಅನುಷಾ, ಸಂಧ್ಯಾ, ಅಭಿಷೇಕ್ ಹಾಗೂ ಕನಕ ಹಾಜರಿದ್ದರು.
ಸುಂಟಿಕೊಪ್ಪ ಜೂ.22 : ವಿದ್ಯಾರ್ಥಿ ಜೀವನದಲ್ಲಿ ಮತದಾನದ ಹಕ್ಕಿನ ಮಹತ್ವತೆಯನ್ನು ಅರಿತುಕೊಳ್ಳಲು ಕಾಲೇಜು ಸಂಸತ್ ರಚನೆ ಚುನಾವಣೆ ಸಹಕಾರಿ ಎಂದು ಕಾಲೇಜು ಪ್ರಾಚಾರ್ಯ ಪಿ.ಎಸ್.ಜಾನ್ ತಿಳಿಸಿದರು. ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಮತದಾನ ಹಾಗೂ ಸಂಸತ್ ರಚನೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮತದಾನದ ಬಗ್ಗೆ ಅರಿವನ್ನು ಹೊಂದಿ ಚುನಾವಣಾ ಪ್ರಕ್ರಿಯೆಗಳ ಬಗ್ಗೆ ತಿಳಿದುಕೊಳ್ಳಲಿ ಎಂಬ ಸದುದ್ದೇಶ ಇರಿಸಿಕೊಂಡು ಕಾಲೇಜಿನಲ್ಲಿ ಸಂಸತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗಳು ತಪ್ಪದೆ ಮತದಾನದಲ್ಲಿ ಪಾಲ್ಗೊಳ್ಳುವುದು ಮುಖ್ಯ ಎಂದರು. ಮತದಾನ ಸಂಚಾಲಕರಾದ ಉಪನ್ಯಾಸಕಿ ಸರಳಾ ಮಾದರಿ ವiತಗಟ್ಟೆಯನ್ನು ರಚಿಸಿ ಮತದಾನ ಮಾಡುವ ರೀತಿಯನ್ನು ವಿವರಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಮತ ಪತ್ರಗಳನ್ನು ಸಿದ್ಧಪಡಿಸಿದರು. ಉಪನ್ಯಾಸಕಿಯರಾದ ಸುನೀತ, ಕವಿತಾ ಮತ ಎಣಿಕೆ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದರು. ಕಾಲೇಜು ನಾಯಕನಾಗಿ ಹಸೈನಾರ್, ಉಪನಾಯಕ ಕೃತಿಕ್, ಆರೋಗ್ಯ ಮತ್ತು ಸ್ವಚ್ಚತಾ ಮಂತ್ರಿಯಾಗಿ ಭೂಮಿಕ, ಸಾಂಸ್ಕøತಿಕ ಚಟುವಟಿಕೆ ನಿರ್ವಹಣಾ ಮಂತ್ರಿಯಾಗಿ ರಾಜಿಲಾ ಮತದಾನದಲ್ಲಿ ಜಯಗಳಿಸುವ ಮೂಲಕ ಅಧಿಕಾರದ ಗದ್ದುಗೇರಿದರು. ಈ…
ಮಡಿಕೇರಿ ಜೂ.22 : ಮಡಿಕೇರಿ- ಸಂಪಾಜೆ ರಸ್ತೆಯ ದೇವರಕೊಲ್ಲಿಯಲ್ಲಿ ಲಾರಿ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಲಾರಿ ಮಗುಚಿಕೊಂಡಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಸಂಪೂರ್ಣವಾಗಿ ಜಖಂಗೊoಡಿದ್ದು, ಅದೃಷ್ಟವಶಾತ್ ಇದರಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಲಾರಿ ಮಂಗಳೂರಿಗೆ ತೆರಳುತ್ತಿದ್ದರೆ, ಕಾರು ಬೆಂಗಳೂರಿನತ್ತ ಪ್ರಯಾಣ ಬೆಳೆಸಿತ್ತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಜೂ.22 : ಬಿದ್ದಂಡ ಇಂದಿರಾ ಪೊನಪ್ಪ ಅವರು ಜೂ.21 ರಂದು ಸಂಜೆ ಕರಡ ಗ್ರಾಮದ ತಮ್ಮ ಎಸ್ಟೇಟ್ ನಿವಾಸದಲ್ಲಿ ನಿಧನರಾದರು. ಮೃತರ ಅಂತ್ಯಕ್ರಿಯೆ ಜೂ.22 ರಂದು ಮಧ್ಯಾಹ್ನ ಮಡಿಕೇರಿ ಕೊಡವ ಸಮಾಜದ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬ ವರ್ಗ ತಿಳಿಸಿದೆ.






